ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣ ಕರ್ಕಾಟಕ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಚಂದ್ರಗ್ರಹಣವು ಕರ್ಕಾಟಕ ರಾಶಿಯವರಿಗೆ ಎರಡನೇ ಮನೆಯಲ್ಲಿ, ಅಂದರೆ ಧನ, ವಾಕ್ ಮತ್ತು ಕುಟುಂಬ ಸ್ಥಾನದಲ್ಲಿ ಪ್ರಭಾವ ಬೀರಲಿದೆ. ಪುನರ್ವಸು, ಪುಷ್ಯ ಮತ್ತು ಆಶ್ಲೇಷ ನಕ್ಷತ್ರದಡಿಯಲ್ಲಿ ಬರುವ ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ನಿರ್ಲಕ್ಷ್ಯದಿಂದ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಎಚ್ಚರ ವಹಿಸುವುದು ಅಗತ್ಯ ಎಂದು ತಿಳಿಸಿದ್ದಾರೆ.
ಈ ಗ್ರಹಣದ ಸಮಯದಲ್ಲಿ ಕರ್ಕಾಟಕ ರಾಶಿಯವರಿಗೆ ಅತಿಯಾದ ಆಲೋಚನೆ, ಕೋಪ, ಆತಂಕ ಹೆಚ್ಚಾಗಬಹುದು. ಸಣ್ಣ ವಿಷಯಗಳಿಗೂ ಸಿಡುಕುವ ಸ್ವಭಾವ ಕಂಡುಬರಬಹುದು. ಮಹಿಳೆಯರಿಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡಬಹುದು. ಆರ್ಥಿಕವಾಗಿ ಅಧಿಕ ಖರ್ಚು ಆಗುವ ಸಂಭವವಿದೆ. ರೈತರಿಗೆ ಶುಭವಾಗಿದ್ದು, ಪೂರ್ವಿಕರ ಆಸ್ತಿ ವಿಚಾರದಲ್ಲಿ ಮಧ್ಯಸ್ಥಿಕೆ ಉತ್ತಮ. ವಾಹನ ಖರೀದಿ ಅಷ್ಟು ಶುಭವಲ್ಲ. ವಿವಾಹ ಮತ್ತು ಉದ್ಯೋಗದಲ್ಲಿ ಸ್ನೇಹಿತರ ಬೆಂಬಲದಿಂದ ಶುಭವಾಗಲಿದೆ. ನಂಬಿಕೆ ದ್ರೋಹವಾಗುವ ಸಾಧ್ಯತೆಯಿದ್ದು, ಅನಗತ್ಯ ಹೂಡಿಕೆಗಳಿಂದ ದೂರವಿರಿ. ಗಂಡ-ಹೆಂಡತಿಯರ ಮಧ್ಯೆ ಭಿನ್ನಾಭಿಪ್ರಾಯಗಳು ಮೂಡಬಹುದು. ರಾಜಕೀಯ ವ್ಯಕ್ತಿಗಳು ಮತ್ತು ಉದ್ದಿಮೆದಾರರು ಜಾಗ್ರತೆ ವಹಿಸಬೇಕು. ಗ್ರಹಣದ ಪ್ರಭಾವವನ್ನು ಕಡಿಮೆ ಮಾಡಲು ಶಿವನಿಗೆ ಅರ್ಚನೆ, ಅಭಿಷೇಕ, ಅಲಂಕಾರ, ಪಂಚಾಮೃತ ಸಮರ್ಪಣೆ ಮಾಡಬಹುದು. ದುರ್ಗಾ ಸ್ತೋತ್ರ ಪಠಣ, ನೀರಿನ ದಾನ, ಅಕ್ಕಿಯ ಜೊತೆ ಬೆಲ್ಲವನ್ನು ಹಸುವಿಗೆ ನೀಡುವುದು ಮತ್ತು ದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡುವುದು ಶುಭಕರವಾಗಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ?
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ