ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಮೇ 10) ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ಈ ಐತಿಹಾಸಿಕ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯ ‘ದಿವ್ಯ ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದ ಅವರು, ಬೆಂಗಳೂರಿನ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಿರಿಮೆಯನ್ನು ಕೊಂಡಾಡಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಕಳೆದ ನಾಲ್ಕು ದಶಕಗಳಲ್ಲಿ ವಿಶಾಲ ವಟವೃಕ್ಷದಂತೆ ಬೆಳೆದು ಜಾಗತಿಕವಾಗಿ ಲಕ್ಷಾಂತರ ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತಂದಿದೆ ಎಂದು ಬಣ್ಣಿಸಿದ ಪ್ರಧಾನಿಯವರು, ಯೋಗ ಮತ್ತು ಧ್ಯಾನದ ಭಾರತೀಯ ಪರಂಪರೆಯನ್ನು ಸ್ಮರಿಸುತ್ತಾ ಗುರೂಜಿಯವರ 100ನೇ ಜನ್ಮದಿನದ ಶತಮಾನೋತ್ಸವ ಕಾರ್ಯಕ್ರಮಕ್ಕೂ ಮತ್ತೆ ಬರುವುದಾಗಿ ಆತ್ಮವಿಶ್ವಾಸದಿಂದ ಘೋಷಿಸಿದರು.
ಇದನ್ನೂ ಓದಿ: ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್
ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ:
