ದಾವಣಗೆರೆ, ಜುಲೈ 26: ‘ಮುಲ್ಲಾ ಹೇಳಿಕೆಯನ್ನು ಯಾವುದೇ ಭಯವಿಲ್ಲದೆ, ನೂರಕ್ಕೆ ಸಾವಿರ ಸಾರಿ ಕೋರ್ಟ್ ಮುಂದೆ ಸಹ ಹೇಳುತ್ತೇನೆ. ಜೀವನದಲ್ಲಿ ಹಿಂದಿಟ್ಟ ಹೆಜ್ಜೆ ಇಲ್ಲ’ ಎಂದು ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ಈ ಹೇಳಿಕೆಯು ಒಬ್ಬ ನಿರ್ದಿಷ್ಟ ವ್ಯಕ್ತಿಯ ಬಗ್ಗೆ ಹೇಳಿರುವುದು. ದೆಹಲಿಯಲ್ಲಿ ನೀಟ್ ಚಳುವಳಿಯ ಸಂದರ್ಭದಲ್ಲಿ ಪೆಟ್ರೋಲ್ ಟ್ಯಾಂಕ್ಗೆ ಬೆಂಕಿ ಹಚ್ಚಿದ ಮುಲ್ಲಾನನ್ನು ಉದ್ದೇಶಿಸಿ ನಾನು ಮಾತನಾಡಿದ್ದು, ಅವನನ್ನು ಸಮರ್ಥಿಸುವವರೆಲ್ಲರೂ ಪಾಪಿಗಳು ಮತ್ತು ಅಧರ್ಮಿಗಳು’ ಎಂದು ಅವರು ಆರೋಪಿಸಿದರು. ‘ನೀಟ್ ಪರೀಕ್ಷೆಗೆ ಸಂಬಂಧಿಸಿದ ಚಳುವಳಿಯಲ್ಲೇ ಈ ಘಟನೆ ನಡೆದಿರುವ ಮಾಹಿತಿ ಇದೆ. ಇದಲ್ಲದೆ, ಸೈನಿಕರು ಮತ್ತು ಪ್ರಧಾನಮಂತ್ರಿಗಳಿಗೆ ಅವಮಾನ ಮಾಡಿದ ಬಗ್ಗೆಯೂ ವಿಡಿಯೋ ಸಾಕ್ಷ್ಯಗಳಿವೆ’ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
