ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!

ಜೈಪುರ, ಏಪ್ರಿಲ್ 4: ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಯುವಕನೊಬ್ಬ ಅಪಾಯಕಾರಿ ಸಾಹಸ ಮಾಡಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಲು ಯುವಕನೊಬ್ಬ ಪೆಟ್ರೋಲ್ ಪಂಪ್‌ನಲ್ಲಿ ತನ್ನ ಸ್ಕಾರ್ಪಿಯೋಗೆ ಡೀಸೆಲ್ ತುಂಬಿಸಿದ ನಂತರ ಡೀಸೆಲ್​ನಿಂದಲೇ ತನ್ನ ಗಾಡಿಯನ್ನು ತೊಳೆದಿರುವ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದ್ದು, ಈ ಕೃತ್ಯ ಎಸಗಿದ ಆತನನ್ನು ಬಂಧಿಸಲು ಒತ್ತಾಯಿಸಲಾಗಿತ್ತು. ಆತನನ್ನು ಪೊಲೀಸರು ಬಂಧಿಸಿದ್ದು, ವಿಡಿಯೋ ಮಾಡಿದವನನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

48 ಗಂಟೆಗಳಲ್ಲಿ ಒಪ್ಪಂದವಾಗದಿದ್ದರೆ ನರಕ ನೋಡುತ್ತೀರಿ; ಇರಾನ್‌ಗೆ ಟ್ರಂಪ್ ಹೊಸ ಎಚ್ಚರಿಕೆ

ವಾಷಿಂಗ್ಟನ್, ಏಪ್ರಿಲ್ 4: ನಾನು ನೀಡಿದ್ದ ಸಮಯ ಮೀರುತ್ತಿದೆ. ಇರಾನ್ ಮೇಲೆ ಭೀಕರ ದಾಳಿ ನಡೆಸಲು ಕೇವಲ 48 ಗಂಟೆಗಳು ಮಾತ್ರ ಉಳಿದಿವೆ. ಅಷ್ಟರೊಳಗೆ ಒಪ್ಪಂದ ಮಾಡಿಕೊಳ್ಳದಿದ್ದರೆ ನರಕ ತೋರಿಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಹೊಸ ಎಚ್ಚರಿಕೆ ನೀಡಿದ್ದಾರೆ. “ನಾನು ಇರಾನ್‌ಗೆ ಒಪ್ಪಂದ ಮಾಡಿಕೊಳ್ಳಲು ಅಥವಾ ಹಾರ್ಮುಜ್ ಜಲಸಂಧಿಯನ್ನು ತೆರೆಯಲು 10 ದಿನಗಳನ್ನು ನೀಡಿದ್ದನ್ನು ಮತ್ತೊಮ್ಮೆ ನೆನಪಿಸುತ್ತಿದ್ದೇನೆ. ಗಡುವು ಮುಗಿಯುತ್ತಿದೆ. ಮುಂದಿನ 48 ಗಂಟೆಗಳ ಮೊದಲು ಒಪ್ಪಂದಕ್ಕೆ ಒಪ್ಪದಿದ್ದರೆ ನರಕವನ್ನೇ…

Read More

ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ; ವಿಡಿಯೋ ವೈರಲ್

ಹುಬ್ಬಳ್ಳಿ, ಏಪ್ರಿಲ್​ 04: ಹುಬ್ಬಳ್ಳಿಯ ಜಿಮ್​ ಟ್ರೈನರ್ ಸಮೀರ್​ ವಿರುದ್ಧ ಅತ್ಯಾಚಾರ ಆರೋಪ​ ಕೇಸ್​ ದಾಖಲಾಗಿದೆ. ಈ ಮಧ್ಯೆ ಸಮೀರ್​ಗೆ ಐವತ್ತಕ್ಕೂ ಹೆಚ್ಚು ಜನರ ಗುಂಪಿನಿಂದ ಮನಸೋ ಇಚ್ಛೆ ಥಳಿಸಿರುವ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಹುಬ್ಬಳ್ಳಿ ನಗರದ ದೇವಾಂಗಪೇಟ್​ನಲ್ಲಿರುವ ಸಮೀರ್ ಅಪಾರ್ಟ್‌ಮೆಂಟ್​ಗೆ ನಿನ್ನೆ ಮುಂಜಾನೆ ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ಮತ್ತು ಕೆಲ ಎಸ್​ಎಸ್​ಕೆ ಸಮಾಜದ ಯುವಕರು ತೆರಳಿದ್ದಾರೆ. ಸಮೀರ್ ಬರುತ್ತಿದ್ದಂತೆ ಆತನ ಮೊಬೈಲ್ ಕಸಿದುಕೊಂಡಿದ್ದಾರೆ. ನಂತರ ಹಿಗ್ಗಾಮುಗ್ಗಾ ಥಳಿಸಿ, ಹಳೆ ಹುಬ್ಬಳ್ಳಿ ಠಾಣೆ ಪೊಲೀಸರಿಗೆ…

Read More

ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ

ನಟ ದಳಪತಿ ವಿಜಯ್ (Thalapathy Vijay), ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ತಮಿಳುನಾಡು ರಾಜ್ಯದಾದ್ಯಂತ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಅವರ ಟಿವಿಕೆ ಪಕ್ಷಕ್ಕೆ ಅವರೇ ಸ್ಟಾರ್ ಪ್ರಚಾರಕ ಆಗಿದ್ದು ರಾಜ್ಯದೆಲ್ಲೆಡೆ ರೋಡ್ ಶೋ ಮಾಡುತ್ತಿದ್ದಾರೆ. ವಿಶೇಷವಾಗಿ ವಿನ್ಯಾಸ ಮಾಡಿದ ತೆರೆದ ವಾಹನದಲ್ಲಿ ಓಡಾಡುತ್ತಿದ್ದಾರೆ. ವಿಜಯ್ ಹೋದಲ್ಲೆಲ್ಲ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಸೇರುತ್ತಿದ್ದಾರೆ. ಇದೀಗ ಪುದುಚೆರಿಯ ರೋಡ್ ಶೋ ವೇಳೆ ವಿಜಯ್, ತೆರೆದ ವಾಹನದಲ್ಲಿ ಹೋಗುತ್ತಿದ್ದಾಗ ಅದರ ಹತ್ತಿರ ಬಂದ ವೃದ್ಧನೋರ್ವರನ್ನು ಭದ್ರತೆಯವನು ತಳ್ಳಿದ್ದಾನೆ, ಇದರಿಂದ…

Read More

ಐಶ್ವರ್ಯಾ ರೈ ಯಶಸ್ಸಿನ ಬಗ್ಗೆ ಅಸೂಯೆ ಪಟ್ಟಿದ್ದರೇ ಅಭಿಷೇಕ್ ಬಚ್ಚನ್?

ಅಭಿಷೇಕ್ ಬಚ್ಚನ್ (Abhishek Bachchan), ಬಾಲಿವುಡ್​​ನ ಆರಕ್ಕೇರದ ಮೂರಕ್ಕಿಳಿಯದ ನಟ. ಒಳ್ಳೆಯ ನಟರಾಗಿದ್ದರೂ ಸಹ ತಂದೆ ಹಾಗೂ ಪತ್ನಿಯ ಯಶಸ್ಸು ಮತ್ತು ಜನಪ್ರಿಯತೆಯ ಎದುರು ಮಂಕಾಗಿಬಿಟ್ಟರು. ಈಗಲೂ ಸಹ ಅಭಿಷೇಕ್ ಬಚ್ಚನ್ ಅವರು ಎಷ್ಟೇ ಒಳ್ಳೆಯ ನಟನೆ ಮಾಡಿದರೂ ತಂದೆಯೊಟ್ಟಿಗೆ ಹೋಲಿಸಿ ನೋಡಿ, ಅಭಿಷೇಕ್ ಅನ್ನು ಕಡೆಗಣಿಸುತ್ತಾರೆ ಪ್ರೇಕ್ಷಕರು. ಅಮಿತಾಬ್ ಬಚ್ಚನ್ ಮಗನಾಗಿದ್ದೇ ಅಭಿಷೇಕ್​​ಗೆ ಒಂದು ರೀತಿ ಶಾಪವೂ ಆಗಿಬಿಟ್ಟಿದೆ. ಇನ್ನು ಅವರ ಪತ್ನಿ ಐಶ್ವರ್ಯಾ ರೈಗೂ ಸಹ ದೊಡ್ಡ ಯಶಸ್ಸು, ಜನಪ್ರಿಯತೆ ಇದೆ. ಪತ್ನಿಯ ಜನಪ್ರಿಯತೆ…

Read More

ಮಾಗಡಿ ಶಾಸಕ ಹೆಚ್​​.ಸಿ.ಬಾಲಕೃಷ್ಣಗೆ ಬಿಗ್​​ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು, ಏಪ್ರಿಲ್​​ 04: ಮಾಗಡಿ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಹೆಚ್​​.ಸಿ.ಬಾಲಕೃಷ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​​ ಬಿಗ್​​ ಶಾಕ್​​ ನೀಡಿದೆ. 2018ರ ಎಲೆಕ್ಷನ್​​ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಚುನಾವಣೆ ವೇಳೆ ಮತದಾರರಿಗೆ ಆಮಿಷ ಕೇಸ್ ಸಂಬಂಧ ಕಾಂಗ್ರೆಸ್​​ ನಾಯಕನ ವಿರುದ್ಧ ಅಬಕಾರಿ ಕಾಯ್ದೆ, ಐಪಿಸಿ ಅಡಿ ಕೇಸ್ ದಾಖಲಾಗಿತ್ತು. ಆದರೆ ಪ್ರಕರಣ ಸಂಬಂಧ ಕೋರ್ಟ್ ವಿಚಾರಣೆಗೆ ಹಾಜರಾಗದೇ ಶಾಸಕರು ಗೈರಾಗಿರುವ ಹಿನ್ನಲೆ ಕೋರ್ಟ್ ಜಾಮೀನು…

Read More

ಅನ್ನ, ನೀರು ಸಿಗದೇ ವಾನರ ಸೇನೆ ಪರದಾಟ: ಕಂಡಕಂಡವರ ಮೇಲೆ ದಾಳಿ; 15ಕ್ಕೂ ಹೆಚ್ಚು ಜನ್ರರಿಗೆ ಗಾಯ

ಕೋಲಾರ, ಏಪ್ರಿಲ್​ 04: ಬಿರು ಬೇಸಿಗೆ ಆರಂಭವಾಗುತ್ತಿದ್ದಂತೆ ಆಹಾರ ಮತ್ತು ನೀರಿನ ಅಭಾವದಿಂದ ಆಕ್ರೋಶಗೊಂಡ ಕೋತಿಗಳು (monkeys) ಪ್ರವಾಸಿಗರು ಮತ್ತು ಭಕ್ತರ ಮೇಲೆ ದಾಳಿ ನಡೆಸಿ 15ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸುವಂತಹ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರವಲಯದಲ್ಲಿರುವ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಅಂತರಗಂಗೆ ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ. ಕೋತಿಗಳ ದಾಳಿಗೆ ಒಳಗಾದ ಭಕ್ತರು ಮತ್ತು ಪ್ರವಾಸಿಗರು ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬರದ ನಾಡು ಕೋಲಾರಕ್ಕೆ ಈ ಬಾರಿ ಉತ್ತಮ…

Read More

ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

ತಿರುವಲ್ಲಾ, ಏಪ್ರಿಲ್ 4: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಪುದುಚೆರಿಗೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು ಇಂದು ಕೇರಳಕ್ಕೆ (ಕೇರಳಂ) ತೆರಳಿದ್ದಾರೆ. ಕೇರಳದ ತಿರುವಲ್ಲಾದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನಡೆಸಿದ್ದಾರೆ. ಎಡ ಮತ್ತು ಕಾಂಗ್ರೆಸ್ ವಿರುದ್ಧ ನಡೆದ ವಾಗ್ದಾಳಿಯ ನಂತರ ಪ್ರಧಾನಿ ಮೋದಿ ಕೇರಳದಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ. “ತಿರುವಲ್ಲಾದಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿದ ಜನರು…

Read More

ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ

ಮಾಲ್ಡಾ, ಏಪ್ರಿಲ್ 4: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೆಲಿಕಾಪ್ಟರ್ ಹತ್ತುವ ಕೆಲವೇ ಕ್ಷಣಗಳ ಮೊದಲು ಆಗಸದಲ್ಲಿ ಅನುಮಾನಾಸ್ಪದ ಡ್ರೋನ್ ಕಾಣಿಸಿಕೊಂಡಿದೆ. ಇದರಿಂದ ಭದ್ರತಾ ಭೀತಿ ಆವರಿಸಿತು. ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ ನಂತರ ಮಾಲ್ಡಾದ ಮಾಲತಿಪುರದಿಂದ ಗಜೋಲ್‌ಗೆ ತೆರಳುತ್ತಿದ್ದಾಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಡ್ರೋನ್ ಕಾಣಿಸಿಕೊಂಡಿತು. ಈ ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈಗಾಗಲೇ ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಇನ್ನಷ್ಟು…

Read More

ಗರ್ಭಿಣಿಯರು ಡಿಲಿವರಿ ಮೊದಲು ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು! ಇಲ್ಲಿದೆ ತಜ್ಞರ ಸಲಹೆ

ಗರ್ಭಧಾರಣೆಯ ಕೊನೆಯ ಹಂತ ತಾಯಿ ಮತ್ತು ಮಗುವಿಗೆ ಅತ್ಯಂತ ಮುಖ್ಯವಾದ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ದೇಹದಲ್ಲಿ ವೇಗವಾಗಿ ಹಾರ್ಮೋನಲ್ ಬದಲಾವಣೆಗಳು ನಡೆಯುತ್ತವೆ. ಇದರಿಂದ ದಣಿವು, ದುರ್ಬಲತೆ ಮತ್ತು ಭಾವನಾತ್ಮಕ ಏರಿಳಿತಗಳು ಕಾಣಿಸಬಹುದು. ಆದ್ದರಿಂದ ಡಿಲಿವರಿ ಮೊದಲು ಗರ್ಭಿಣಿಯರು (Pregnant Women) ತಮ್ಮ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಅತ್ಯಗತ್ಯ. ತಜ್ಞರ ಪ್ರಕಾರ, ಈ ಸಮಯದಲ್ಲಿ ತಾಯಿಯ ಆರೋಗ್ಯ ಮಗುವಿನ ಬೆಳವಣಿಗೆ ಮತ್ತು ಜನನದ ಮೇಲೆ ನೇರ ಪರಿಣಾಮ ಬೀರುತ್ತದೆ. ಸಣ್ಣ ನಿರ್ಲಕ್ಷ್ಯವೂ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು….

Read More