Headlines

‘ಮಂಜ್ಞುಮೆಲ್ ಬಾಯ್ಸ್’ ನಿರ್ದೇಶಕನ ಜೊತೆ ಕೈಜೋಡಿಸಲಿರುವ ಮೋಹನ್​ಲಾಲ್ – Kannada News | Mohan lal to act in Manjummel Boys movie director’s next movie

‘ಮಂಜ್ಞುಮೆಲ್ ಬಾಯ್ಸ್’ (manjummel boys) ಮಲಯಾಳಂ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಒಂದು. 2024 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ, ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಹಿಟ್ ಆಗುವ ಜೊತೆಗೆ ವಿಮರ್ಶಕರಿಂದಲೂ ಮೆಚ್ಚುಗೆ ಗಳಿಸಿಕೊಂಡಿತ್ತು. ಆ ಸಿನಿಮಾವನ್ನು ಚಿದಂಬರಂ ನಿರ್ದೇಶನ ಮಾಡಿದ್ದರು. ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ಬಳಿಕ ಮತ್ತೊಂದು ಸಿನಿಮಾವನ್ನು ಚಿದಂಬರಂ ನಿರ್ದೇಶಿಸಿದರಾದರೂ ಅದು ಯಶಸ್ವಿ ಆಗಲಿಲ್ಲ. ಇದೀಗ ಈ ನಿರ್ದೇಶನ, ಮಲಯಾಳಂನ ಸ್ಟಾರ್ ನಟ ಮೋಹನ್​​ಲಾಲ್ ಜೊತೆಗೆ ಕೈ ಜೋಡಿಸಿದ್ದಾರೆ ಎನ್ನಲಾಗುತ್ತಿದೆ. ಮೋಹನ್​​ಲಾನ್ ನಟಿಸಿರುವ ‘ದೃಶ್ಯಂ…

Read More

ಓಮನ್ ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಲ್ಲಿದ್ದ 14 ಭಾರತೀಯರನ್ನು ರಕ್ಷಿಸಿದ ಅಮೆರಿಕ ನೌಕಾಪಡೆ – Kannada News | US Navy, Indian Navy Rescue 14 Indians from Sinking Ship off Oman Coast

ಓಮನ್, ಜೂನ್ 14: ಮಧ್ಯಪ್ರಾಚ್ಯದಲ್ಲಿ ಪ್ರಾದೇಶಿಕ ಮತ್ತು ರಾಜತಾಂತ್ರಿಕ ಉದ್ವಿಗ್ನತೆಗಳಿದ್ದಾಗ್ಯೂ, ಓಮನ್ ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಲ್ಲಿದ್ದ 14 ಭಾರತೀಯರನ್ನು ಅಮೆರಿಕ ಹಾಗೂ ಭಾರತೀಯ ನೌಕಾಪಡೆ ರಕ್ಷಿಸಿದೆ. ಸಂಕಷ್ಟಕ್ಕೆ ಸಿಲುಕಿದ ಜೀವಗಳನ್ನು ರಕ್ಷಿಸುವ ವಿಷಯದಲ್ಲಿ ನೌಕಾಪಡೆಗಳು ತೋರಿರುವ ಅದ್ಭುತ ಮಾನವೀಯತೆ ಹಾಗೂ ಸಮನ್ವಯತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.  ಓಮನ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಮುಳುಗುವ ಹಂತ ತಲುಪಿದ್ದ ವಾಣಿಜ್ಯ ‘ಧೋ’ (Dhow) ಹಡಗಿನಲ್ಲಿದ್ದ 14 ಭಾರತೀಯ ಪ್ರಜೆಗಳನ್ನು ಅಮೆರಿಕ ಮತ್ತು ಭಾರತೀಯ ನೌಕಾಪಡೆಗಳು ಜಂಟಿ ಕಾರ್ಯಾಚರಣೆಯ…

Read More

ಕಲಬುರಗಿಯಲ್ಲಿ ಮತ್ತೊಂದು ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ: ಭಾನುವಾರ ಹಿನ್ನೆಲೆ ತಪ್ಪಿದ ಅನಾಹುತ – Kannada News | Another Government School Roof Collapse: Sunday Prevented a Major Disaster

ಶಾಲೆಯ ಮೇಲ್ಛಾವಣಿ ಕುಸಿತImage Credit source: tv9 kannada ಕಲಬುರಗಿ, ಜೂನ್​​ 14: ಎರಡು ದಿನದ ಹಿಂದಷ್ಟೇ ನಗರದ ಪಿಯು ಕಾಲೇಜು ಮೇಲ್ಛಾವಣಿ ಕುಸಿದು (roof collapse) ನಾಲ್ವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಆ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಆಳಂದ ತಾಲೂಕಿನ ಸಂಗೋಳಗಿ(ಸಿ) ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದೆ. ಆದರೆ ಭಾನುವಾರ ಹಿನ್ನೆಲೆ ಭಾರೀ ಅನಾಹುತವೊಂದು ತಪ್ಪಿದೆ. ಮುಖ್ಯಾಂಶಗಳು ಮತ್ತೊಂದು ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ ಒಂದು ಘಟನೆ…

Read More

Hackathon 3.0: ಇಸ್ರೋ ವಿಜ್ಞಾನಿಗಳ ಜೊತೆ ಕೆಲಸ ಮಾಡಲು ವಿದ್ಯಾರ್ಥಿಗಳಿಗೆ ಸುವರ್ಣವಕಾಶ; ಉಚಿತ ಇಂಟರ್ನ್‌ಶಿಪ್! – Kannada News | ISRO’s Indian Space Hackathon 3.0: Solve Challenges, Get Mentorship and Internships

ಇಸ್ರೋ ಜಂಟಿ ಬಾಹ್ಯಾಕಾಶ ಹ್ಯಾಕಥಾನ್Image Credit source: Pinterest ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಸಂಶೋಧನೆಯಲ್ಲಿ ಆಸಕ್ತಿಯುಳ್ಳ ದೇಶದ ಯುವ ಪ್ರತಿಭೆಗಳಿಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಅತ್ಯಾಕರ್ಷಕ ಪ್ರಕಟಣೆಯೊಂದನ್ನು ಹೊರಡಿಸಿದೆ. ಇಸ್ರೋ ಸಂಸ್ಥೆಯು ‘ಭಾರತೀಯ ಬಾಹ್ಯಾಕಾಶ ಹ್ಯಾಕಥಾನ್’ (Indian Space Hackathon) ನ 3ನೇ ಆವೃತ್ತಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, ರಾಷ್ಟ್ರೀಯ ಮಟ್ಟದ ಈ ನಾವೀನ್ಯತಾ ಸ್ಪರ್ಧೆಗೆ ದೇಶಾದ್ಯಂತದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತದ ಬಾಹ್ಯಾಕಾಶ ಮಹತ್ವಾಕಾಂಕ್ಷೆಗಳಿಗೆ ಸಂಬಂಧಿಸಿದ ನೈಜ ಜಗತ್ತಿನ ಕಠಿಣ ಸವಾಲುಗಳ ಮೇಲೆ ಕೆಲಸ…

Read More

ಆಂತ್ರೋಪಿಕ್​ನ ಬಲಿಷ್ಠ ಎಐ ಮಾಡಲ್​ಗಳು ಅಮೆರಿಕನ್ನೇತರರಿಗೆ ಅಲಭ್ಯ; ಭಾರತಕ್ಕೆ ಇದು ಎಚ್ಚರಿಕೆಯ ಕರೆಗಂಟೆಯಾ? – Kannada News | Sovereign AI for India: Sridhar Vembu on US Anthropic Restrictions & Tech Nationalism Warning

ನವದೆಹಲಿ, ಜೂನ್ 14: ಅಮೆರಿಕದ ಪ್ರಮುಖ AI ಸಂಸ್ಥೆಯಾದ ‘ಆಂತ್ರೊಪಿಕ್’, ಭದ್ರತಾ ಕಾರಣಗಳನ್ನು ನೀಡಿ ತನ್ನ ಅತ್ಯಾಧುನಿಕ ‘ಫೇಬಲ್ 5’ (Fable 5) ಮತ್ತು ‘ಮೈಥೋಸ್ 5’ (Mythos 5) ಮಾಡೆಲ್‌ಗಳನ್ನು ಅಮೆರಿಕದ ಹೊರಗಿನವರು ಹಾಗೂ ಅಮೆರಿಕದಲ್ಲಿರುವ ವಿದೇಶಿ ಪ್ರಜೆಗಳು ಬಳಸದಂತೆ ನಿರ್ಬಂಧ ಹೇರಿದೆ. ಅಮೆರಿಕ ಸರ್ಕಾರದ ಆದೇಶದ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆಂತ್ರೊಪಿಕ್ ಹೇಳಿಕೊಂಡಿದೆ. ಈ ಬೆಳವಣಿಗೆ ಬಗ್ಗೆ ಕೆಲ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ತಂತ್ರಜ್ಞಾನ ವಿಚಾರದಲ್ಲಿ ಜಾಗತೀಕರಣ ಸತ್ತಿದೆ ಎಂಬರ್ಥದಲ್ಲಿ ಭಾರತೀಯ…

Read More

ಚಿತ್ರರಂಗದಲ್ಲಿ ರಂಗಾಯಣ ರಘು ‘ಹೊಸ ಜೀವನ’; 400ನೇ ಸಿನಿಮಾ ಒಪ್ಪಿಕೊಂಡ ನಟ – Kannada News | Rangayana Raghu 400th Movie Hosa Jeevana title launched by Daali Dhananjay

ಕನ್ನಡ ಚಿತ್ರರಂಗದಲ್ಲಿ ನಟ ರಂಗಾಯಣ ರಘು (Rangayana Raghu) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ನಟನೆ, ಡೈಲಾಗ್ ಡೆಲಿವರಿಗೆ ಅಭಿಮಾನಿಗಳು ಫುಲ್ ಮಾರ್ಕ್ಸ್ ನೀಡುತ್ತಾರೆ. ಸ್ಯಾಂಡಲ್​ವುಡ್​ನ ಬಹುಬೇಡಿಕೆಯ ನಟ ಅವರು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಸಲೀಸಾಗಿ ನಿಭಾಯಿಸುವಂತಹ ಪ್ರತಿಭಾವಂತ ಕಲಾವಿದ ರಂಗಾಯಣ ರಘು. ಈಗ ಅವರು ತಮ್ಮ ವೃತ್ತಿಬದುಕಿನಲ್ಲಿ ‘ಹೊಸ ಜೀವನ’ (Hosa Jeevana) ಆರಂಭಿಸುತ್ತಿದ್ದಾರೆ. ಏನಿದು ಹೊಸ ಜೀವನ? ಮುಂದೆ ಓದಿ.. ಈವರೆಗೂ ರಂಗಾಯಣ ರಘು ಅವರು ನೂರಾರು ಪಾತ್ರಗಳನ್ನು ಮಾಡಿ ಸೈ…

Read More

ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ? – Kannada News | Congress MLA HC Balakrishna Releases HD Kumaraswamy video about Bidadi Township

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

IND vs AFG: ಟೀಮ್ ಇಂಡಿಯಾದ 2ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ – Kannada News | India vs Afghanistan 2nd ODI Match Date and Details

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ (102) ಭರ್ಜರಿ ಶತಕ ಸಿಡಿಸಿದರು. ಗುರ್ಬಾಝ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ…

Read More

ಕಿರುಕುಳ ತಾಳಲಾರದೇ ಮೇಲಧಿಕಾರಿಯ ಮುಖಕ್ಕೆ ರಾಜೀನಾಮೆ ಪತ್ರ ಬಿಸಾಕಿದ ಮಹಿಳಾ ಸಿಬ್ಬಂದಿ – Kannada News | Belthangady Taluk Hospital Lady Staff resigns for Officer Harassment, FIR Booked

ಪೃಥ್ವಿರಾಜ್​ ಬಿ.ಯು. ಮಂಗಳೂರು ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್…

Read More

ಗೌತಮ್ ಗಂಭೀರ್ ಸಲಹೆಯಿಂದ ಭಾರತದ ವಿರುದ್ಧ ಅಬ್ಬರಿಸಿದ ಗುರ್ಬಾಝ್! – Kannada News | Gurbaz Smashes Historic ODI Ton Against India After Gambhir’s Tips

ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡದ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ ಸ್ಫೋಟಕ ಶತಕ ಸಿಡಿಸಿದ್ದರು. ಈ ಶತಕದ ಬೆನ್ನಲ್ಲೇ, ಈ ಸಾಧನೆಯ ಹಿಂದೆ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಅಮೂಲ್ಯ ಸಲಹೆಗಳಿರುವ ವಿಚಾರ ಬಹಿರಂಗವಾಗಿದೆ. ಈ ವಿಚಾರವನ್ನು ಬಹಿರಂಗಪಡಿಸಿದ್ದು ಮತ್ಯಾರೂ ಅಲ್ಲ, ರಹಮಾನುಲ್ಲಾ ಗುರ್ಬಾಝ್. ಇದಕ್ಕೂ ಮುನ್ನ ನಡೆದ ಏಕೈಕ ಟೆಸ್ಟ್ ಪಂದ್ಯದ ಮುಕ್ತಾಯದ ನಂತರ, ತಮ್ಮ ಬ್ಯಾಟಿಂಗ್ ಶೈಲಿ ಹಾಗೂ ಶಾಟ್ ಆಯ್ಕೆಯನ್ನು ಸುಧಾರಿಸಿಕೊಳ್ಳಲು ಗುರ್ಬಾಝ್ ಅವರು…

Read More