Daily Devotional: ದೇವರಿಗೆ ನಿಜವಾಗಿಯೂ ಕಣ್ಣಿಲ್ಲವೇ? ಲೋಕರೂಢಿ ಮಾತಿನ ಅರ್ಥವೇನು? – Kannada News | Divine Intervention: The Profound Meaning of “Is God Blind?” A Devotional Insight

ದೇವರಿಗೆ ಕಣ್ಣಿಲ್ಲವಾImage Credit source: Pinterest

ಹಳ್ಳಿಗಳಲ್ಲಿ ಬಳಕೆಯಲ್ಲಿರುವ ಅನೇಕ ಗಾದೆಗಳು, ನಾಣ್ಣುಡಿಗಳು ಮತ್ತು ಮಾತುಗಳ ಹಿಂದೆ ಆಳವಾದ ತತ್ವಗಳು ಹಾಗೂ ಅರ್ಥಗಳಿವೆ. ಅಂತಹ ಒಂದು ಮಹತ್ವದ ಮಾತಾಗಿದೆ, “ದೇವರಿಗೆ ಕಣ್ಣಿಲ್ಲವಾ”. ಈ ಮಾತು ಯಾವಾಗ ಮತ್ತು ಏಕೆ ನಮ್ಮಿಂದ ಹೊರಹೊಮ್ಮುತ್ತದೆ, ಮತ್ತು ಅದರ ಫಲಿತಾಂಶವೇನು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ, ಈ ಮಾತನ್ನು ಅತೀವ ನೋವು, ಅಸಹಾಯಕತೆ ಅಥವಾ ಘೋರ ಅನ್ಯಾಯಕ್ಕೆ ಒಳಗಾದಾಗ ಮನದಾಳದಿಂದ ಉಚ್ಚರಿಸುತ್ತೇವೆ. ನಮ್ಮ ಕಡೆ ನ್ಯಾಯವಿದ್ದರೂ ಮೋಸ ಹೋದಾಗ, ಅಥವಾ ಬಲಿಷ್ಠರ ವಿರುದ್ಧ ಹೋರಾಡಿ ಹೋರಾಡಿ ಸಾಕಾಗಿ ಹೋದಾಗ ಈ ಭಾವನಾತ್ಮಕ ಉದ್ಗಾರ ಹೊರಬರುತ್ತದೆ. ಇದು ಕೇವಲ ಮೌಖಿಕ ಅಭಿವ್ಯಕ್ತಿಯಲ್ಲ, ಬದಲಿಗೆ ನಮ್ಮ ಭಾವನೆಗಳ ತೀವ್ರತೆಯ ಪ್ರತೀಕವಾಗಿದೆ. ಯಾವುದೇ ಜಪ, ತಪ ಅಥವಾ ಪೂಜೆಯ ಅಗತ್ಯವಿಲ್ಲದೆ, ಕೇವಲ ಹೃದಯದ ಆಳದಿಂದ ಹೊರಹೊಮ್ಮುವ ಈ ಕರೆಯು ಶಕ್ತಿಯುತವಾಗಿದೆ.

ಸಂಕಷ್ಟದ ಸಂದರ್ಭಗಳಲ್ಲಿ, ನಾವು ಧರ್ಮಬದ್ಧವಾಗಿ ಮತ್ತು ನ್ಯಾಯಸಮ್ಮತವಾಗಿ ನಡೆದುಕೊಂಡಿದ್ದರೂ ಮಾನಸಿಕವಾಗಿ, ದೈಹಿಕವಾಗಿ, ಆರ್ಥಿಕವಾಗಿ ಅಥವಾ ರಾಜಕೀಯವಾಗಿ ಸಂಪೂರ್ಣವಾಗಿ ಕುಗ್ಗಿ ಹೋದಾಗ ಈ ಮಾತು ಸ್ವಾಭಾವಿಕವಾಗಿ ಬರುತ್ತದೆ. ಇದು ಕೇವಲ ಬಡವರ ಅಥವಾ ಶ್ರೀಮಂತರ ಮಾತುಗಳಲ್ಲ, ಸಾಮಾನ್ಯ ಮನುಷ್ಯನ ಅಳಲು. ಈ ಮಾತಿಗೆ ಯಾವುದೇ ವಿಶೇಷ ಮಹನೀಯತೆ ಅಥವಾ ತಪಸ್ವಿಗಳ ಪದವಿ ಬೇಕಾಗಿಲ್ಲ, ಸಾಮಾನ್ಯರೂ ಕೂಡ ಈ ವಾಕ್ಯಶಕ್ತಿಯನ್ನು ಹೊಂದಬಹುದು.

ಕರ್ಮ ಸಿದ್ಧಾಂತದ “ಮಾಡಿದ್ದುಣ್ಣೋ ಮಹಾರಾಯ” ಎಂಬ ಮಾತಿನ ಆಚೆಗೆ, ಈ “ದೇವರಿಗೆ ಕಣ್ಣಿಲ್ಲವಾ” ಎಂಬ ಮಾತು ಮಹತ್ವ ಪಡೆಯುತ್ತದೆ. ನಮ್ಮ ಬಾಯಿಂದ ಈ ಮಾತು ಹೊರಬಂದಾಗ, ತಕ್ಷಣವೇ ಭಗವಂತನ ಅನುಗ್ರಹವು ನಮಗೆ ಸಿಗುತ್ತದೆ ಎಂದು ಹೇಳಲಾಗುತ್ತದೆ. ಇದು ಶುಭ ನುಡಿಯೇ ಶಕುನ ಎಂಬ ನಂಬಿಕೆಗೆ ಪೂರಕವಾಗಿದೆ, ಅಂದರೆ ಶುಭ ನುಡಿಗಳಿಂದ ಶುಭ ಫಲಿತಾಂಶಗಳು ಪ್ರಾಪ್ತವಾಗುತ್ತವೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಮಹಾಭಾರತದ ದ್ರೌಪದಿ ವಸ್ತ್ರಾಪಹರಣದ ಸಂದರ್ಭದಲ್ಲಿ ಇದಕ್ಕೆ ಸ್ಪಷ್ಟ ಉದಾಹರಣೆಯಿದೆ. ಭೀಷ್ಮ, ಪಂಚಪಾಂಡವರು, ಮತ್ತು ಇಡೀ ಕುಟುಂಬದ ಸದಸ್ಯರು ಉಪಸ್ಥಿತರಿದ್ದರೂ, ಯಾರೊಬ್ಬರೂ ಅಸಹಾಯಕರಾಗಿದ್ದ ದ್ರೌಪದಿಯನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅಂತಹ ಸಂದರ್ಭದಲ್ಲಿ, ದ್ರೌಪದಿ “ಅನೇತಾ ಶರಣಂ ನಾಸ್ತಿ” ಎಂದು ತಿಳಿದು, ಕೃಷ್ಣ ಭಗವಾನನನ್ನು “ಅಪ್ಪ, ನಿನಗೆ ಕಣ್ಣಿಲ್ವಾ?” ಎಂದು ಮನದಾಳದಿಂದ ಕರೆದಳು. ಆಕೆಯ ಆ ತೀವ್ರವಾದ ಕರೆಯಿಂದಾಗಿ ಕೃಷ್ಣನು ತಕ್ಷಣವೇ ಪ್ರತ್ಯಕ್ಷನಾಗಿ ಆಕೆಯನ್ನು ರಕ್ಷಿಸಿದನು.

ಅದೇ ರೀತಿ ಕಲಿಯುಗದಲ್ಲಿಯೂ ಸಹ, ನಾವು ನ್ಯಾಯವಂತರಾಗಿ, ಸತ್ಯವಂತರಾಗಿ ಮತ್ತು ಧರ್ಮವಂತರಾಗಿ ನಡೆದುಕೊಂಡಾಗ, ಆದರೆ ಕಷ್ಟಗಳು ನಮ್ಮನ್ನು ಸುತ್ತುವರಿದಾಗ, ನಮ್ಮ ಕೊನೆಯ ಭರವಸೆಯಾಗಿ “ದೇವರಿಗೆ ಕಣ್ಣಿಲ್ಲವಾ” ಎಂಬ ಮಾತು ಹೊರಬರುತ್ತದೆ. ಇದು ಕೇವಲ ಒಂದು ಮಾತು ಎಂದರ್ಥವಲ್ಲ, ಬದಲಿಗೆ ಹೃದಯದಿಂದ ಅತ್ತಾಗ, ಭಗವಂತನು ಬಂದೇ ಬರುತ್ತಾನೆ ಎಂಬ ಅಚಲ ನಂಬಿಕೆಯನ್ನು ಇದು ಸೂಚಿಸುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತ್ನಿಯ ತಲೆ ಕಡಿದು ಕೈಯಲ್ಲಿ ರುಂಡ ಹಿಡಿದು ಊರಿನ ತುಂಬಾ ಮೆರವಣಿಗೆ ಮಾಡಿದ ಪತಿ – Kannada News | Chhattisgarh Shocker: Husband Decapitates Wife, Walks With Head in Korba

ಕೊರ್ಬಾ, ಏಪ್ರಿಲ್ 24: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ಜರುಗಿದೆ. ಕ್ಷುಲ್ಲಕ ಕೌಟುಂಬಿಕ ಕಲಹ ಮತ್ತು ಮದ್ಯದ ಅಮಲು ಒಬ್ಬ ವ್ಯಕ್ತಿಯನ್ನು ಎಷ್ಟು ಕ್ರೂರನನ್ನಾಗಿ ಮಾಡಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಜಿಲ್ಲೆಯ ರಾಜ್‌ಗಮರ್ ಪೊಲೀಸ್ ಔಟ್‌ಪೋಸ್ಟ್ ವ್ಯಾಪ್ತಿಯ ಬುಂದೇಲಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 58 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಹರಿತವಾದ ಆಯುಧದಿಂದ ಶಿರಚ್ಛೇದ(Behead) ಮಾಡಿ, ಬಳಿಕ ಕತ್ತರಿಸಿದ ತಲೆಯನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ ಓಡಾಡಿದ್ದಾನೆ.

ಆರೋಪಿ ಸಲಿಕ್ ರಾಮ್ ಯಾದವ್ ಸ್ಥಳೀಯ ಕೋಳಿ ಸಾಕಣೆ ಕೇಂದ್ರದಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಬುಧವಾರ ಸಂಜೆ ಪತ್ನಿ ಸುಮತಿ (50) ಅವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ್ದ ಸಲಿಕ್, ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಜಗಳ ವಿಕೋಪಕ್ಕೆ ಹೋದಾಗ, ಕೋಳಿ ಕತ್ತರಿಸಲು ಬಳಸುವ ಹರಿತವಾದ ಮಾಂಸ ಕತ್ತರಿಸುವ ಆಯುಧದಿಂದ ಪತ್ನಿಯ ಕುತ್ತಿಗೆಗೆ ಬಲವಾಗಿ ಏಟು ಹಾಕಿ ಶಿರಚ್ಛೇದ ಮಾಡಿದ್ದಾನೆ.

ಹತ್ಯೆಯ ನಂತರದ ದೃಶ್ಯಗಳು ಗ್ರಾಮಸ್ಥರನ್ನು ಸ್ತಬ್ಧಗೊಳಿಸಿದ್ದವು. ಸಲಿಕ್ ಒಂದು ಕೈಯಲ್ಲಿ ಪತ್ನಿಯ ಕತ್ತರಿಸಿದ ತಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ರಕ್ತಸಿಕ್ತ ಆಯುಧವನ್ನು ಹಿಡಿದುಕೊಂಡು ಗ್ರಾಮದ ಬೀದಿಗಳಲ್ಲಿ ಓಡಾಡಿದ್ದಾನೆ. ಬಳಿಕ ತಲೆ ಮತ್ತು ಆಯುಧವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಮತ್ತಷ್ಟು ಓದಿ: ನನ್ನಿಂದ ತಪ್ಪಾಗಿದೆ, ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಹೇಳಿದ್ದೇನು?

ಪೊಲೀಸ್ ವಿಚಾರಣೆಯ ವೇಳೆ ಸಲಿಕ್ ನೀಡಿದ ಹೇಳಿಕೆಗಳು ಆಘಾತಕಾರಿಯಾಗಿವೆ. ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಮೂಲತಃ ಅಜ್ಗರ್‌ಬಹಾರ್ ಹಲ್ದಿಮಾಡ ಗ್ರಾಮದ ಈ ದಂಪತಿ ಕಳೆದ ಮೂರು ವರ್ಷಗಳಿಂದ ಈ ಕೋಳಿ ಸಾಕಣೆ ಕೇಂದ್ರದಲ್ಲಿ ನೆಲೆಸಿದ್ದರು. ಅವರಿಗೆ ನಾಲ್ಕು ಮಕ್ಕಳಿದ್ದು, ತಂದೆ ಜೈಲು ಪಾಲಾಗಿ ತಾಯಿ ಹೆಣವಾಗಿ ಬಿದ್ದಿರುವುದನ್ನು ಕಂಡು ಮಕ್ಕಳು ದಿಕ್ಕೆಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ? ಅಯ್ಯೋ ದೇವ

ಮುಂಬೈ, ಏ.24: ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಬ್ಯಾಟಿಂಗ್‌ಗೆ ಇಳಿಯುವ ಮುನ್ನ ಮೈದಾನದ ಹೊರಗೆ ಭರ್ಜರಿ ವಾರ್ಮ್-ಅಪ್ ನಡೆಸಿ ಅಬ್ಬರಿಸಿದ ಹಾರ್ದಿಕ್, ಕ್ರೀಸ್‌ನಲ್ಲಿ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಪಂದ್ಯದ ಸಂಕಷ್ಟದ ಸಮಯದಲ್ಲಿ ಮುಂಬೈ ತಂಡಕ್ಕೆ ಹಾರ್ದಿಕ್ ಆಸರೆಯಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಡಗೌಟ್ ಬಳಿಕ ಹಾರ್ದಿಕ್ ಪಾಂಡ್ಯ ನೆಟ್ಸ್‌ನಲ್ಲಿ ಹಾಗೂ ಮೈದಾನದ ಬದಿಯಲ್ಲಿ ವಾರ್ಮ್-ಅಪ್ ಮಾಡುತ್ತಿದ್ದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಇದನ್ನು ಕಂಡ ಅಭಿಮಾನಿಗಳು “ಇಂದು ಹಾರ್ದಿಕ್ ಅಬ್ಬರ ಖಚಿತ” ಎಂದು ಭಾವಿಸಿದ್ದರು. ಆದರೆ, ಕ್ರೀಸ್‌ಗೆ ಬಂದ ಹಾರ್ದಿಕ್ ಎದುರಿಸಿದ ಮೊದಲ ಕೆಲವು ಎಸೆತಗಳಲ್ಲೇ ಪರದಾಡಿದರು. ಅಂತಿಮವಾಗಿ ಕೇವಲ 1 ರನ್ ಗಳಿಸಿ ಬೇಜವಾಬ್ದಾರಿಯುತ ಶಾಟ್ ಬಾರಿಸಲು ಹೋಗಿ ಕ್ಯಾಚ್ ನೀಡಿ ಔಟಾದರು. ಸಾಮಾಜಿಕ ಜಾಲತಾಣಗಳಲ್ಲಿ ಹಾರ್ದಿಕ್ ಪಾಂಡ್ಯ ಅವರ ವಾರ್ಮ್-ಅಪ್ ವಿಡಿಯೋ ಮತ್ತು ಅವರ ಸ್ಕೋರ್ ಕಾರ್ಡ್ ಅನ್ನು ಹೋಲಿಸಿ ನೆಟ್ಟಿಗರು ವ್ಯಂಗ್ಯವಾಡುತ್ತಿದ್ದಾರೆ. “ವಾರ್ಮ್-ಅಪ್‌ನಲ್ಲಿ ತೋರಿದ ಆಟ ಪಂದ್ಯದಲ್ಲಿ ಕಾಣಿಸಲಿಲ್ಲ” ಎಂದು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂಬೈ ಇಂಡಿಯನ್ಸ್ ಸತತ ಸೋಲುಗಳಿಂದ ಕಂಗಾಲಾಗಿರುವ ಈ ಸಮಯದಲ್ಲಿ ನಾಯಕನ ಈ ಪ್ರದರ್ಶನ ತಂಡದ ಮೇಲೆ ಮತ್ತಷ್ಟು ಒತ್ತಡ ಹೇರಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

TTD Online Booking: ತಿರುಪತಿ ಭಕ್ತರಿಗೆ ಸಿಹಿ ಸುದ್ದಿ; ಜುಲೈ ತಿಂಗಳ 300ರೂ. ದರ್ಶನ ಟಿಕೆಟ್ ಕೋಟಾ ಬಿಡುಗಡೆ; ಕೂಡಲೇ ಬುಕ್ ಮಾಡಿ – Kannada News | TTD July 2026 Darshan Quota Released: Book Tirupati Special Entry Tickets Now!

ತಿರುಪತಿ: ವಿಶ್ವಪ್ರಸಿದ್ಧ ಪುಣ್ಯಕ್ಷೇತ್ರ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತರಿಗೆ ಪ್ರಮುಖ ಅಪ್‌ಡೇಟ್ ಇಲ್ಲಿದೆ. 2026ರ ಜುಲೈ ತಿಂಗಳ ದರ್ಶನ ಕೋಟಾವನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಇಂದು (ಏಪ್ರಿಲ್ 24) ಅಧಿಕೃತವಾಗಿ ಬಿಡುಗಡೆ ಮಾಡುತ್ತಿದೆ. ಆದ್ದರಿಂದ ತಡಮಾಡದೇ ಟಿಕೆಟ್​ ಬುಕ್​ ಮಾಡುವುದು ಹೇಗೆ ಎಂಬುದರ ಸಂಪೂರ್ಣ ವಿವರವನ್ನು ಹಂತ ಹಂತವಾಗಿ ಇಲ್ಲಿ ತಿಳಿದುಕೊಳ್ಳಿ.

ಟಿಕೆಟ್ ಬುಕ್ಕಿಂಗ್ ಸಮಯದ ವಿವರ:

ನೀವು ಜುಲೈ ತಿಂಗಳಲ್ಲಿ ದರ್ಶನ ಪಡೆಯಲು ಯೋಜಿಸುತ್ತಿದ್ದರೆ, ಸಮಯದ ಬಗ್ಗೆ ವಿಶೇಷ ಗಮನವಿರಲಿ. 300 ರೂ.ವಿಶೇಷ ಪ್ರವೇಶ ದರ್ಶನ ಇಂದು ಬೆಳಿಗ್ಗೆ 10:00 ಗಂಟೆಗೆ ಆನ್‌ಲೈನ್ ಕೋಟಾ ಬಿಡುಗಡೆಯಾಗಿದೆ. ಇದಲ್ಲದೇ ತಿರುಮಲ ಮತ್ತು ತಿರುಪತಿಯಲ್ಲಿನ ಕೊಠಡಿಗಳ ಬುಕ್ಕಿಂಗ್ ಇಂದು ಮಧ್ಯಾಹ್ನ 3:00 ಗಂಟೆಗೆ ಲಭ್ಯವಾಗಲಿದೆ.

ಮಧ್ಯವರ್ತಿಗಳ ಬಗ್ಗೆ ಎಚ್ಚರವಿರಲಿ:

ದರ್ಶನ ಟಿಕೆಟ್, ಅರ್ಜಿತ ಸೇವೆಗಳು ಅಥವಾ ವಸತಿ ಸೌಕರ್ಯದ ಹೆಸರಿನಲ್ಲಿ ಭಕ್ತರನ್ನು ವಂಚಿಸುವ ಜಾಲದ ಬಗ್ಗೆ ಟಿಟಿಡಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಯಾವುದೇ ಕಾರಣಕ್ಕೂ ಬ್ರೋಕರ್ ಅಥವಾ ಮಧ್ಯವರ್ತಿಗಳ ಮೂಲಕ ಟಿಕೆಟ್ ಪಡೆಯಲು ಪ್ರಯತ್ನಿಸಬೇಡಿ. ಕೇವಲ ಟಿಟಿಡಿಯ ಅಧಿಕೃತ ವೆಬ್‌ಸೈಟ್ ಮೂಲಕವೇ ಬುಕ್ಕಿಂಗ್ ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಬುಕ್ಕಿಂಗ್ ಮಾಡುವುದು ಹೇಗೆ?

  • ಟಿಟಿಡಿಯ ಅಧಿಕೃತ ವೆಬ್‌ಸೈಟ್ ttdevasthanams.ap.gov.in ಗೆ ಭೇಟಿ ನೀಡಿ.
  • ನಿಮ್ಮ ಮೊಬೈಲ್ ಸಂಖ್ಯೆ ಮತ್ತು OTP ಬಳಸಿ ಲಾಗ್ ಇನ್ ಆಗಿ.
  • ಲಭ್ಯವಿರುವ ದಿನಾಂಕಗಳಲ್ಲಿ ಹಸಿರು ಬಣ್ಣದ ಸ್ಲಾಟ್ ಅನ್ನು ಆಯ್ಕೆ ಮಾಡಿ.
  • ಭಕ್ತರ ಆಧಾರ್ ಕಾರ್ಡ್ ವಿವರಗಳನ್ನು ಸರಿಯಾಗಿ ನಮೂದಿಸಿ.
  • ಆನ್‌ಲೈನ್ ಮೂಲಕ ಹಣ ಪಾವತಿಸಿ, ನಿಮ್ಮ ಟಿಕೆಟ್ ಅನ್ನು ಪ್ರಿಂಟ್ ಪಡೆದುಕೊಳ್ಳಿ.

ನೆನಪಿರಲಿ: ಜುಲೈ ತಿಂಗಳಲ್ಲಿ ರಜೆಗಳು ಹೆಚ್ಚಿರುವುದರಿಂದ ಭಕ್ತರ ಸಂಖ್ಯೆ ಅಧಿಕವಾಗಿರುತ್ತದೆ. ಆದ್ದರಿಂದ ಟಿಕೆಟ್‌ಗಳು ಅತಿ ವೇಗವಾಗಿ ಖಾಲಿಯಾಗುವ ಸಾಧ್ಯತೆ ಇರುವುದರಿಂದ ಮುಂಚಿತವಾಗಿಯೇ ಲಾಗ್ ಇನ್ ಆಗಿ ಸಿದ್ಧರಿರುವುದು ಉತ್ತಮ. ಇದಲ್ಲದೇ ಹೊರಡುವ ಮುನ್ನ ಟಿಟಿಡಿಯ ಅಧಿಕೃತ ಪ್ರಕಟಣೆಗಳನ್ನು ಗಮನಿಸುವುದು ಸೂಕ್ತ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:20 am, Fri, 24 April 26

Source link

National Panchayati Raj Day 2026: ಏಪ್ರಿಲ್ 24 ರಂದೇ ರಾಷ್ಟ್ರೀಯ ಪಂಚಾಯತ್‌ ರಾಜ್‌ ದಿನ ಆಚರಿಸುವುದು ಏಕೆ? – Kannada News | National Panchayati Raj Day 2026: What are the history, significance of this day

ದೇಶದ ಅಭಿವೃದ್ಧಿ ಹಳ್ಳಿಗಳಿಂದಲೇ ಆರಂಭವಾಗಬೇಕು. ಗ್ರಾಮಕ್ಕೆ ಧಕ್ಕೆ ಬಂದರೆ ಇಡೀ ಭಾರತಕ್ಕೆ ಧಕ್ಕೆ ಬರಬಹುದು ಎನ್ನುವ ಗಾಂಧೀಜಿಯವರ ಮಾತಿದೆ. ಹೀಗಾಗಿ ಒಂದು ದೇಶವು ಅಭಿವೃದ್ಧಿಯತ್ತ ಸಾಗಬೇಕಾದರೆ ಹಳ್ಳಿಗಳ ಅಭಿವೃದ್ಧಿಯು ಮುಖ್ಯ. ಈ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತ್‌ ರಾಜ್‌ ವ್ಯವಸ್ಥೆ ಬಹಳ ಮುಖ್ಯವಾದದ್ದಾಗಿದೆ. ಗ್ರಾಮ ಪಂಚಾಯತ್ ಪಾತ್ರವನ್ನು ಗುರುತಿಸುವುದು ಹಾಗೂ ಹಳ್ಳಿಗಳ ಅಭಿವೃದ್ಧಿ ಹೆಚ್ಚು ಒತ್ತು ನೀಡುವುದಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದ ಸವಿ ನೆನಪಿಗಾಗಿ ಪ್ರತಿ ವರ್ಷ ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು (National Panchayati Raj Day) ಆಚರಿಸಲಾಗುತ್ತದೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಇತಿಹಾಸವೇನು?

ಗ್ರಾಮೀಣ ಮಟ್ಟದಲ್ಲಿ ಅಧಿಕಾರ ವಿಕೇಂದ್ರೀಕರಣ, ಪಂಚಾಯತ್ ರಾಜ್‌ನ 1992ರ ಸಂವಿಧಾನ ತಿದ್ದುಪಡಿಯು (73ನೇ ತಿದ್ದುಪಡಿ) 1993ರ ಏಪ್ರಿಲ್ 24ರಂದು ಜಾರಿಗೆ ಬಂದವು. ಹೀಗಾಗಿ ಪಂಚಾಯತ್ ರಾಜ್ ಸಚಿವಾಲಯವು ಪ್ರತಿವರ್ಷ ಏಪ್ರಿಲ್ 24ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನಾಗಿ ಆಚರಿಸಲಾಗುತ್ತಿದೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಮಹತ್ವ, ಆಚರಣೆ ಹೇಗೆ?

ಪಂಚಾಯತ್‌ ರಾಜ್‌ ವ್ಯವಸ್ಥೆಯು ಗ್ರಾಮಗಳ ಅಭಿವೃದ್ಧಿಯತ್ತ ಹೆಚ್ಚು ಗಮನ ಹರಿಸುತ್ತದೆ. ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮೀಣ ಪ್ರಜೆಗಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಜಾರಿಗೆ ತಂದ ವ್ಯವಸ್ಥೆಯಾಗಿದೆ. ಗ್ರಾಮೀಣ ಭಾರತದಲ್ಲಿ ಪ್ರಜಾಪ್ರಭುತ್ವದ ತಳಹದಿಯನ್ನು ಬಲಪಡಿಸುವುದು, ಗ್ರಾಮ ಪಂಚಾಯತ್‌ಗಳ ಪಾತ್ರವನ್ನು ಗುರುತಿಸುವುದು, ಪಂಚಾಯತ್‌ ರಾಜ್‌ ಸಂಸ್ಥೆಗಳು ಹಳ್ಳಿಗಳ ಅಭಿವೃದ್ಧಿಗೆ ಇನ್ನಷ್ಟು ಕೆಲಸ ಮಾಡುವಂತೆ ಪ್ರೋತ್ಸಾಹಿಸುವುದು ಈ ದಿನದ ಉದ್ದೇಶವಾಗಿದೆ.

ಇದನ್ನೂ ಓದಿ: ನಮ್ಮ ಬದುಕಿಗೆ ಇರುವುದೊಂದೇ ಪೃಥ್ವಿ; ಭೂಮಿ ತಾಯಿಯ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಈ ವಿಶೇಷ ದಿನದಂದು ಕೇಂದ್ರ ಸರಕಾರವು ಪ್ರಮುಖವಾಗಿ ನ್ಯಾನ್‌ಜಿ ದೇಶಮುಖ್‌ ರಾಷ್ಟ್ರೀಯ ಗೌರವ ಗ್ರಾಮ ಸಭಾ ಪುರಸ್ಕಾರ್‌, ದೀನ್‌ ದಯಾಳ್‌ ಉಪಾಧ್ಯಾಯ್‌ ಪಂಚಾಯತ್‌ ಸಶಕ್ತೀಕರಣ ಪುರಸ್ಕಾರ, ಮಕ್ಕಳ ಸ್ನೇಹಿ ಗ್ರಾಮ ಸಭಾ ಪುರಸ್ಕಾರ, ಗ್ರಾ. ಪಂ. ಅಭಿವೃದ್ಧಿ ಯೋಜನಾ ಪುರಸ್ಕಾರವನ್ನು ನೀಡಿ ಉತ್ತಮವಾಗಿ ಕೆಲಸ ಮಾಡುವ ಗ್ರಾಮ ಪಂಚಾಯತ್ ನ್ನು ಗುರುತಿಸಿ ಗೌರವಿಸುತ್ತವೆ. ಈ ದಿನದಂದು ವಿವಿಧ ಜಾಗೃತಿ ಕಾರ್ಯಕ್ರಮಗಳು ಚಟುವಟಿಕೆಗಳು, ವಿಚಾರ ಸಂಕಿರಣಗಳು, ಕಾರ್ಯಗಾರಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಇನ್ನಷ್ಟು ಜೀವನ ಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ – Kannada News | A Calm Start: PM Modi Seen by Hooghly River During Kolkata Visit

ಕೋಲ್ಕತ್ತಾ,ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದು ಕೆಲವೇ ಗಂಟೆಗಳ ಬಳಿಕ ಪ್ರಧಾನಿ ಮೋದಿ ಕೋಲ್ಕತ್ತಾದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಸೂರ್ಯ ಉದಯಿಸುವ ಸಮಯದಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ಪ್ರಧಾನಿ ಮೋದಿ ವಿಹಾರಕ್ಕೆ ಹೊರಟಿರುವ ಚಿತ್ರಗಳನ್ನು ಅವರೇ ಹಂಚಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 92.88ರಷ್ಟು ಮತದಾನ ದಾಖಲಾಗಿತ್ತು. ಪ್ರಧಾನಿ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಮರದ ದೋಣಿಯ ಮೇಲೆ ಕ್ಯಾಮರಾ ಹಿಡಿದು ಕುಳಿತಿರುವುದನ್ನು ಕಾಣಬಹುದು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 10:21 am, Fri, 24 April 26

Source link

ತುಮಕೂರಿನಲ್ಲಿ ಸುಡುವ ಬಿಸಿಲಿಗೆ 35 ನವಿಲುಗಳು ಬಲಿ! ಹಕ್ಕಿ ಜ್ವರದ ಸೋಂಕು ಹರಡಿರುವ ಶಂಕೆ – Kannada News | Tumakuru Peacock Deaths: 35 Peacocks Die Amid Heatwave and Bird Flu Fears

ಸುಡುವ ಬಿಸಿಲಿಗೆ 35 ನವಿಲುಗಳು ಬಲಿ!Image Credit source: MediaForge AI

ತುಮಕೂರು, ಏಪ್ರಿಲ್ 24: ಜಿಲ್ಲೆಯಲ್ಲಿ ಬಿಸಿಲಿನ (Heat wave) ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ ಈ ವಾರ ಬರೋಬ್ಬರಿ 35 ನವಿಲುಗಳು ಸಾವನ್ನಪ್ಪಿರುವ ಆತಂಕಕಾರಿ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಸಾವುಗಳು ಸಂಭವಿಸಿದ್ದು, ರಾಜ್ಯದಲ್ಲಿ ಹಕ್ಕಿ ಜ್ವರದ ಸೋಂಕು ಹರಡುತ್ತಿರುವುದೂ ಈ ಸಾವುಗಳಿಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ.

ಸಾವಿಗೆ ನಿಖರ ಕಾರಣವೇನು?

ಅರಣ್ಯ ಇಲಾಖೆ ಹಾಗೂ ಪಶುವೈದ್ಯಕೀಯ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ಮಯೂರಗಳ ಶವಪರೀಕ್ಷೆ ನಡೆಸಿ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿವೆ. ವರದಿಗಳು ಇನ್ನೂ 48 ಗಂಟೆಗಳೊಳಗೆ ಲಭ್ಯವಾಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪ್ರಾಥಮಿಕ ವರದಿ ಹೇಳುವಂತೆ ನವಿಲುಗಳ ಶ್ವಾಸಕೋಶದ ಮೇಲೆ ತೀವ್ರ ಪರಿಣಾಮ ಬೀರಿದೆ. ಅತಿಯಾದ ಶಾಖ ಮತ್ತು ನಿರ್ಜಲೀಕರಣವೇ ಸಾವಿಗೆ ಪ್ರಮುಖ ಕಾರಣ ಎಂದು ಕಂಡುಬಂದಿದ್ದರೂ, ಹಕ್ಕಿ ಜ್ವರದಂತಹ ಸಾಂಕ್ರಾಮಿಕ ರೋಗಗಳ ಸಾಧ್ಯತೆಯನ್ನು ನಾವು ತಳ್ಳಿಹಾಕುವಂತಿಲ್ಲ ಎಂದು ಅರಣ್ಯ ಅಧಿಕಾರಿ ತಿಳಿಸಿದ್ದಾರೆ.

ಕಳೆದ ವರ್ಷವೂ ಇಂತದ್ದೇ ಘಟನೆ!

ಮುಂಜಾಗ್ರತಾ ಕ್ರಮವಾಗಿ ಮೃತದೇಹಗಳು ಪತ್ತೆಯಾದ ಪ್ರದೇಶಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಸ್ಥಳೀಯ ಜಲಮೂಲಗಳ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಕೀಟನಾಶಕ ಮಿಶ್ರಿತ ಬೀಜಗಳನ್ನು ಸೇವಿಸಿ 20 ನವಿಲುಗಳು ಸಾವನ್ನಪ್ಪಿದ್ದವು. ಇದೀಗ ಅರಣ್ಯ ಇಲಾಖೆಯ ಆರು ಸದಸ್ಯರ ತಂಡವು ಈ ಸಾಮೂಹಿಕ ಸಾವಿನ ಹಿಂದಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದೆ. ಮುಂದಿನ 48 ಗಂಟೆಗಳಲ್ಲಿ ಪ್ರಯೋಗಾಲಯದ ವರದಿ ಲಭ್ಯವಾಗಲಿದ್ದು, ಸಾವಿನ ರಹಸ್ಯ ಹೊರಬೀಳಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕತ್ತು ಸೀಳಿ ಫ್ಲಶ್ ಮಾಡಲು ಯತ್ನಿಸಿದ 19 ವರ್ಷದ ಯುವತಿಯ ಬಂಧನ – Kannada News | Bengaluru: Foxconn Worker Held After Newborn Found in Toilet; Shocking Details Emerge

ಬೆಂಗಳೂರು, ಏ.24 : ಸಿಲಿಕಾನ್ ಸಿಟಿಯ ಹೊಸೂರು ರಸ್ತೆಯಲ್ಲಿರುವ ಪ್ರಸಿದ್ಧ ಆಪಲ್ ಫೋನ್ ಉತ್ಪಾದನಾ ಘಟಕದ (ಫಾಕ್ಸ್‌ಕಾನ್) ಆವರಣದಲ್ಲಿ ಭ್ರೂಣವೊಂದು ಪತ್ತೆಯಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಘಟಕದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಖಾನೆಯ ಶೌಚಾಲಯದ ಬ್ಲಾಕ್‌ನಲ್ಲಿ ಶುಚಿಗೊಳಿಸುವ ಸಿಬ್ಬಂದಿಗೆ ಭ್ರೂಣವೊಂದು ಪತ್ತೆಯಾಗಿತ್ತು. ಕೂಡಲೇ ಅವರು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರಿಗೆ ದೂರು ನೀಡಲಾಯಿತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳನ್ನು ಬಂಧನ ಮಾಡಲಾಗಿದೆ. ಘಟನೆ ನಡೆದ ಸಮಯದಲ್ಲಿ ಶೌಚಾಲಯದ ಕಡೆಗೆ ಹೋದವರ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ, ಅಲ್ಲಿನ ಸಿಬ್ಬಂದಿಯೊಬ್ಬರ ಮೇಲೆ ಅನುಮಾನ ವ್ಯಕ್ತಪಡಿಸಿದರು. ಈ ಬಗ್ಗೆ ತನಿಖೆ ನಡೆಸಿದಾಗ ಪೊಲೀಸರಿಗೆ ಅಚ್ಚರಿಯ ವಿಚಾರವೊಂದು ತಿಳಿಯಿತು. 19 ವರ್ಷದ ಯುವತಿಯು ಈ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆಕೆಯನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭ್ರೂಣವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಯುವತಿಯು ಗರ್ಭಪಾತ ಮಾಡಿಕೊಂಡಿದ್ದಾಳೆಯೇ ಅಥವಾ ಅಕ್ರಮ ಗರ್ಭಧಾರಣೆಯನ್ನು ಮುಚ್ಚಿಡಲು ಈ ಕೃತ್ಯ ಎಸಗಿದ್ದಾಳೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಎಂಜಿನಿಯರ್ ದಾರುಣ ಅಂತ್ಯ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ?

ಅಷ್ಟಕ್ಕೂ ಶೌಚಾಲಯದ ನಡೆದದ್ದೇನು?

ಸಿಲಿಕಾನ್ ಸಿಟಿಯಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. 19 ವರ್ಷದ ಯುವತಿಯೊಬ್ಬಳು ಶೌಚಾಲಯದಲ್ಲಿ ನವಜಾತ ಶಿಶುವಿಗೆ ಜನ್ಮ ನೀಡಿ, ಅತ್ಯಂತ ಕ್ರೂರವಾಗಿ ಮಗುವಿನ ಕತ್ತು ಸೀಳಿ, ದೇಹವನ್ನು ಶೌಚಾಲಯದ ಗುಂಡಿಯಲ್ಲಿ ಫ್ಲಶ್ (Flush) ಮಾಡಲು ಯತ್ನಿಸಿದ್ದಳು. ಶೌಚಾಲಯಕ್ಕೆ ಹೋದ ಯುವತಿ ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಮಗುವನ್ನು ಕೊಂದು ಸಾಕ್ಷ್ಯ ನಾಶಪಡಿಸಲು ಮಗುವಿನ ದೇಹವನ್ನು ಶೌಚಾಲಯದ ಪೈಪ್‌ ಒಳಗೆ ತಳ್ಳಲು ಪ್ರಯತ್ನಿಸಿದ್ದಾಳೆ.

ಈ ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ?

ಶೌಚಾಲಯದ ಪೈಪ್ ಬ್ಲಾಕ್ ಆಗಿದ್ದರಿಂದ ಶುಚಿಗೊಳಿಸುವ ಸಿಬ್ಬಂದಿ ಪರೀಕ್ಷಿಸಿದಾಗ ಮಗುವಿನ ದೇಹ ಪತ್ತೆಯಾಗಿದೆ. ಇದನ್ನು ಕಂಡು ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಆಡಳಿತ ಮಂಡಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಾಗೂ ಅಲ್ಲಿನ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ 19 ವರ್ಷದ ಯುವತಿಯ ಮೇಲೆ ಅನುಮಾನ ವ್ಯಕ್ತವಾಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:08 am, Fri, 24 April 26

Source link

ಪ್ರಶಾಂತ್-ಕೃತಿ ನಿಶ್ಚಿತಾರ್ಥದಲ್ಲಿ ಸೆಲೆಬ್ರಿಟಿ ದಂಡು; ಇಲ್ಲಿವೆ ಸುಂದರ ಫೋಟೋಗಳು

Source link

ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ, ಆರೋಪಿಯ ಕ್ರೌರ್ಯ, ಉಸಿರಿರುವವರೆಗೂ ಹೋರಾಡಿದ್ದ ಯುವತಿ – Kannada News | IRS Officer’s Daughter Brutally Murdered in Delhi: Civil Services Aspirant Fought Till End

ನವದೆಹಲಿ, ಏಪ್ರಿಲ್ 24:  ತನ್ನ ಮನೆಯ ಕೊಠಡಿಯಲ್ಲಿ ಕುಳಿತು ದೇಶ ಸೇವೆ ಮಾಡುವ ಕನಸಿನೊಂದಿಗೆ ಸಿವಿಲ್ ಸರ್ವೀಸಸ್ ಪರೀಕ್ಷೆಗೆಂದು ಓದುತ್ತಿದ್ದ 22 ವರ್ಷದ ಯುವತಿಯ ಕೊಲೆ(Murder) ಪ್ರಕರಣದಲ್ಲಿ ಆಘಾತಕಾರಿ ಸತ್ಯಗಳು ಹೊರಬರುತ್ತಿವೆ. ಮರಣೋತ್ತರ ಪರೀಕ್ಷೆಯ ವರದಿಯು ಆಕೆ ಸಾವನ್ನಪ್ಪುವ ಮೊದಲು ಎದುರಿಸಿದ ನರಕಯಾತನೆಯನ್ನು ಎತ್ತಿ ತೋರಿಸಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ.

ಸಾವಿನವರೆಗೂ ಹೋರಾಡಿದ್ದ ಯುವತಿ
ವೈದ್ಯಕೀಯ ವರದಿಗಳ ಪ್ರಕಾರ, ಯುವತಿಯ ತೋಳುಗಳು ಮತ್ತು ಕೈಗಳ ಮೇಲೆ ಅನೇಕ ಮೂಗೇಟುಗಳಿವೆ. ಇದು ಆಕೆ ಸುಲಭವಾಗಿ ಶರಣಾಗಲಿಲ್ಲ, ಬದಲಾಗಿ ತನ್ನ ಪ್ರಾಣ ಉಳಿಸಿಕೊಳ್ಳಲು ದಾಳಿಕೋರನೊಂದಿಗೆ ಕೊನೆಯ ಕ್ಷಣದವರೆಗೂ ಸೆಣಸಾಡಿದ್ದಾಳೆ ಎಂಬುದನ್ನು ಸಾಬೀತುಪಡಿಸಿದೆ. ಆದರೆ, ಆರೋಪಿ ಮೊಂಡಾದ ವಸ್ತುವಿನಿಂದ ಆಕೆಯ ಮುಖಕ್ಕೆ ಬಲವಾಗಿ ಹೊಡೆದ ಪರಿಣಾಮ ಆಕೆಯ ಮೂಗಿನ ಮೂಳೆ ಮುರಿದುಹೋಗಿತ್ತು.

ಚಾರ್ಜಿಂಗ್ ಕೇಬಲ್‌ನಿಂದ ಉಸಿರುಗಟ್ಟಿಸಿ ಹತ್ಯೆ
ಯುವತಿಯ ಕುತ್ತಿಗೆಯ ಸ್ನಾಯುಗಳಲ್ಲಿ ರಕ್ತಸ್ರಾವ ಮತ್ತು ಥೈರಾಯ್ಡ್ ಕಾರ್ಟಿಲೆಜ್ ಮುರಿತಗೊಂಡಿರುವುದು ಕಂಡುಬಂದಿದೆ. ಮೊಬೈಲ್ ಚಾರ್ಜಿಂಗ್ ಕೇಬಲ್ ಬಳಸಿ ಕತ್ತು ಹಿಸುಕಿದ ಪರಿಣಾಮ ಉಸಿರುಕಟ್ಟುವಿಕೆಯಿಂದ ಸಾವು ಸಂಭವಿಸಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಆಕೆ ಪ್ರಜ್ಞಾಹೀನಳಾದ ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆಗಾಗಿ ಮಾದರಿಗಳನ್ನು ಸಂರಕ್ಷಿಸಲಾಗಿದೆ.

ಮತ್ತಷ್ಟು ಓದಿ: ನನ್ನಿಂದ ತಪ್ಪಾಗಿದೆ, ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಹೇಳಿದ್ದೇನು?

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಆರೋಪಿ ರಾಹುಲ್ ಮೀನಾ ಬೆಳಗ್ಗೆ 6.30ಕ್ಕೆ ಬಿಡಿ ಕೀಲಿ ಬಳಸಿ ಮನೆ ಪ್ರವೇಶಿಸಿದ್ದಾನೆ. ಪೋಷಕರು ಜಿಮ್‌ಗೆ ತೆರಳಿದ ಸಮಯವನ್ನೇ ಹೊಂಚು ಹಾಕಿ ಈತ ಒಳನುಗ್ಗಿದ್ದ. ಹತ್ಯೆಯ ನಂತರ ಯುವತಿಯ ಬೆರಳಚ್ಚು ಬಳಸಿ ಲಾಕರ್ ತೆರೆಯಲು ಪ್ರಯತ್ನಿಸಿದ್ದಾನೆ. ಅದು ವಿಫಲವಾದಾಗ ಸ್ಕ್ರೂಡ್ರೈವರ್‌ನಿಂದ ಲಾಕರ್ ಒಡೆದು ನಗದು ಮತ್ತು ಆಭರಣ ದೋಚಿದ್ದಾನೆ.

ಪರಾರಿಯಾಗುವ ಮೊದಲು ತನ್ನ ರಕ್ತದ ಕಲೆಗಳಿರುವ ಬಟ್ಟೆಗಳನ್ನು ಬದಲಿಸಿಕೊಂಡು, ಬೆಳಗ್ಗೆ 7.20ಕ್ಕೆ ಅಂದರೆ ಪೋಷಕರು ಬರುವ ಕೆಲವೇ ನಿಮಿಷಗಳ ಮೊದಲು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ಘಟನೆಗೂ ಕೆಲವೇ ಗಂಟೆಗಳ ಮೊದಲು ರಾಜಸ್ಥಾನದ ಅಲ್ವಾರ್‌ನಲ್ಲಿ ತನ್ನದೇ ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದ ರಾಹುಲ್ ಮೀನಾ, ಅಲ್ಲಿಂದ ದೆಹಲಿಗೆ ಬಂದು ಈ ಕೃತ್ಯವೆಸಗಿದ್ದಾನೆ. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಇಡೀ ಕುಟುಂಬವನ್ನೇ ನಾಶಮಾಡಲು ಈತ ಮುಂದಾಗಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ಸ್ಪಷ್ಟವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version