Headlines

ಬಲೂಚಿಸ್ತಾನದ ಗಣಿಯಲ್ಲಿ ಉಗ್ರರ ದಾಳಿ; ಟರ್ಕಿಶ್ ಪ್ರಜೆ ಸೇರಿದಂತೆ 10 ಜನ ಸಾವು – Kannada News | 10 workers killed in deadly terror attack at Balochistan mining site

ಬಲೂಚಿಸ್ತಾನ್, ಏಪ್ರಿಲ್ 23: ಪಾಕಿಸ್ತಾನದ ಬಲೂಚಿಸ್ತಾನ್ (Balochistan) ಪ್ರಾಂತ್ಯದಲ್ಲಿ ತಾಮ್ರ ಮತ್ತು ಚಿನ್ನದ ಗಣಿಗಾರಿಕೆ ಸ್ಥಳದಲ್ಲಿ ಭಯೋತ್ಪಾದಕರು ಗುರಿಯಿಟ್ಟು ದಾಳಿ ನಡೆಸಿದ ನಂತರ 10 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಘಟನೆಯು ಈ ಪ್ರದೇಶದ ದುರ್ಬಲ ಭದ್ರತಾ ಪರಿಸ್ಥಿತಿಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ನ್ಯಾಷನಲ್ ರಿಸೋರ್ಸಸ್ ಲಿಮಿಟೆಡ್ ಗಣಿಗಾರಿಕೆ ಕಾರ್ಯಾಚರಣೆಗಳನ್ನು ನಡೆಸುವ ಚಾಗೈ ಜಿಲ್ಲೆಯ ದರಿಗ್ವಾನ್ ಸ್ಥಳದಲ್ಲಿ ಈ ದಾಳಿ ನಡೆದಿದೆ. “ಘಟನೆಯಲ್ಲಿ ಟರ್ಕಿಶ್ ಪ್ರಜೆ, 6 ಕಾರ್ಮಿಕರು ಮತ್ತು ಮೂವರು ಕಾವಲುಗಾರರು…

Read More

Breaking: ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ, ಆಗಿದ್ದೇನು? – Kannada News | Chitradurga incharge minister D Sudhakar health condition critical for Lung Infection

ಬೆಂಗಳೂರು,/ಚಿತ್ರದುರ್ಗ (ಏಪ್ರಿಲ್ 23): ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ (minister D sudhakar) ಅವರ ಸ್ಥಿತಿ ಗಂಭೀರವಾಗಿ ಎಂದು ತಿಳಿದುಬಂದಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದು ಕಡಿಮೆಯಾಗದಿದ್ದರಿಂದ ಅವರನ್ನು ಕಳೆದ ಎರಡು ದಿನದ ಹಿಂದೆ ಬೆಂಗಳೂರಿನ ಕಿಮ್ಸ್​ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಇದೀಗ ಅವರ ಆರೋಗ್ಯ…

Read More

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು – Kannada News | Elephant visited West Bengal poll booth in Jhargram

  ಕೊಲ್ಕತ್ತಾ, ಏಪ್ರಿಲ್ 23: ಇಂದು ಪಶ್ಚಿಮ ಬಂಗಾಳ (West Bengal) ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಜಾರ್ಗ್ರಾಮ್‌ನ ಮತಗಟ್ಟೆಯ ಬಳಿ ಇದ್ದಕ್ಕಿದ್ದಂತೆ ಆನೆಯೊಂದು ಮತಗಟ್ಟೆಗೆ ಬಂದಿತು. ಇದನ್ನು ನೋಡಿದ ಮತದಾರರು ಸ್ವಲ್ಪ ಆಘಾತಕ್ಕೊಳಗಾದರು. ಜಾರ್ಗ್ರಾಮ್‌ನ ಜಿಡುಸೋಲ್ ಪ್ರಾಥಮಿಕ ಶಾಲೆಯ ಬಳಿ ಈ ಘಟನೆ ನಡೆದಿದೆ. ಅಧಿಕಾರಿಗಳು ಈ ಪ್ರದೇಶದಲ್ಲಿ ಆನೆಗಳು ಇರುತ್ತವೆ ಎಂದು ಮೊದಲೇ ಎಚ್ಚರಿಸಿದ್ದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಮತ ಚಲಾಯಿಸಲು ಬಂದಿದ್ದ ಮತದಾರರಲ್ಲಿ ಒಬ್ಬರು ತಮ್ಮ ಮೊಬೈಲ್‌ನಲ್ಲಿ ಆನೆ ಮತಗಟ್ಟೆಯ ಬಳಿ…

Read More

MI vs CSK: ತಾಯಿಯ ಅಗಲಿಕೆಯ ನೋವಿನಲ್ಲೂ ಕಣಕ್ಕಿಳಿದು ವಿಕೆಟ್ ಉರುಳಿಸಿದ ಮುಖೇಶ್ ಚೌದರಿ – Kannada News | Mukesh Choudhary’s Emotional IPL 2026 Wicket: Dedicates to Mother After Demise

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಿತು. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಯುವ ವೇಗದ ಮುಖೇಶ್ ಚೌಧರಿ ಅವರ ತಾಯಿ ಸಾವನ್ನಪ್ಪಿದರು. ಇದರಿಂದಾಗಿ ಈ ಪಂದ್ಯದಲ್ಲಿ ಮುಖೇಶ್ ಚೌಧರಿ ಆಡುವುದಿಲ್ಲ ಎಂಬ ಮಾತು ಕೇಳಿಬಂದಿತ್ತು. ಆದರೆ ತಾಯಿಯ ಅಗಲಿಕೆಯ ನೋವಿನಲ್ಲೂ ಸಿಎಸ್​​ಕೆ ಪರ ಕಣಕ್ಕಿದ ಮುಖೇಶ್ ತಾವು ಬೌಲ್ ಮಾಡಿದ ಮೊದಲ ಓವರ್​ನಲ್ಲೇ ವಿಕೆಟ್…

Read More

ಹೇಗಿದ್ದೀರಾ, ಏನ್ಮಾಡ್ತಿದ್ದೀರಾ? IAS ಅಧಿಕಾರಿಗಳ ಹೆಸರಲ್ಲಿ ಮಹಿಳಾ ಆಫೀಸರ್ಸ್ ಜತೆ ವಾಟ್ಸಪ್ ಚಾಟ್ – Kannada News | WhatsApp Scam: Miscreants Pose as IAS Officers to Message Female Officers

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 23: ಹಿರಿಯ ಐಎಎಸ್ ಅಧಿಕಾರಿಗಳ (IAS Officers) ಫೋಟೋ ಹಾಗೂ ಹೆಸರನ್ನು ಬಳಸಿಕೊಂಡು ಕಿಡಿಗೇಡಿಗಳು ನಕಲಿ ವಾಟ್ಸಾಪ್ ಖಾತೆಗಳನ್ನು ಸೃಷ್ಟಿಸಿ, ಸಹೋದ್ಯೋಗಿಗಳಿಗೆ ಹಾಗೂ ಇತರೆ ಅಧಿಕಾರಿಗಳಿಗೆ ಮೆಸೇಜ್ (message) ಕಳುಹಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಅಧಿಕಾರಿಗಳಿಗೂ ಕಿಡಿಗೇಡಿಗಳು ಮೆಸೇಜ್ ಮಾಡಿದ್ದು, ಸದ್ಯ ಅಮೃತಹಳ್ಳಿ ಹಾಗೂ ವೈಟ್​ಫೀಲ್ಡ್ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಯುಕ್ತ ಮಹೇಶ್ವರ ರಾವ್ ಸೇರಿದಂತೆ…

Read More

IPL 2026: ಐಪಿಎಲ್​ಗೆ ಎಂಟ್ರಿಕೊಟ್ಟ ಪಾಕಿಸ್ತಾನ ಮೂಲದ ಆಟಗಾರ

ಐಪಿಎಲ್ 2026 ರಲ್ಲಿ ಆಡಿರುವ 6 ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು ಮೂರರಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದೀಗ ಹೊಸ ಆಟಗಾರನ ಆಗಮನವಾಗಿದೆ. ಆಸ್ಟ್ರೇಲಿಯಾದ ಅನುಭವಿ ವೇಗಿ ಮಿಚೆಲ್ ಸ್ಟಾರ್ಕ್​ ತಂಡವನ್ನು ಕೂಡಿಕೊಳ್ಳುತ್ತಿರುವ ಬೆನ್ನಲ್ಲೆ, ಇಂಗ್ಲೆಂಡ್ ಆರಂಭಿಕ ಆಟಗಾರ ಬೆನ್ ಡಕೆಟ್ ಅವರ ಬದಲಿಯಾಗಿ ಅದೇ ಇಂಗ್ಲೆಂಡ್‌ ತಂಡದ ಲೆಗ್-ಸ್ಪಿನ್ನರ್ ರೆಹಾನ್ ಅಹ್ಮದ್ ಅವರನ್ನು ಡೆಲ್ಲಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಬೆನ್ ಡಕೆಟ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ 2 ಕೋಟಿಗೆ…

Read More

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್ – Kannada News | Actor Diganth Manchale talks about Kannada and Telugu film industry during Rudra Kala press meet

ನಟ ದಿಗಂತ್ ಅವರು ‘ರುದ್ರ ಕಾಲ’ (Rudra Kala) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಈ ವೇಳೆ ಸುದ್ದಿಗೋಷ್ಠಿ ನಡೆಸಲಾಯಿತು. ದಿಗಂತ್ ಅವರು ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಚಿತ್ರರಂಗದ (Kannada Film Industry) ಸದ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದರು. ದಿಗಂತ್ ಅವರು ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿಗೂ ನಟಿಸುತ್ತಿದ್ದಾರೆ. ‘ಕನ್ನಡ ಸಿನಿಮಾ ಗೆಲ್ಲಲಿ. ಈಗ ನಾನು ಒಂದು ತೆಲುಗು ಸಿನಿಮಾದ ಶೂಟಿಂಗ್ ಮುಗಿಸಿ ಬಂದೆ. ಅಲ್ಲಿನವರಿಗೆ ಒಟಿಟಿಯಿಂದ ಎಫೆಕ್ಟ್…

Read More

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ, ಆಗಿದ್ದೇನು? – Kannada News | Handicapped vehicles burnt after fire break out In godown at ramanagara

ಪ್ರಶಾಂತ್​ ಬಿ. | Edited By: ರಮೇಶ್ ಬಿ. ಜವಳಗೇರಾ| Updated on:Apr 23, 2026 | 10:29 PM ಇನ್ನೇನು ಸರ್ಕಾರದ ವತಿಯಿಂದ ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರು ದಕ್ಷಿಣ ‌ಜಿಲ್ಲೆ ರಾಮನಗರದ ವಡೇರಹಳ್ಳಿ ಬಳಿ ನಡೆದಿದೆ. ವಿಶೇಷ ಚೇತನರಿಗೆ ನೀಡಲು ಸರ್ಕಾರದ CSR ಅನುದಾನದಡಿಯಲ್ಲಿ ಟೊಯೋಟಾ ಕಂಪನಿಯ 4 ಚಕ್ರದ 32 ವಾಹನಗಳನ್ನು ಖರೀದಿಸಿ ಭೋಜರಾಜ್ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಇಡಲಾಗಿತ್ತು. ಆದ್ರೆ, ಇಂದು (ಏಪ್ರಿಲ್ 23) ಏಕಾಏಕಿ…

Read More

ಡಾ. ರಾಜ್​ಕುಮಾರ್ ಮೇಲಿನ ಅಭಿಮಾನಕ್ಕೆ ಅಮೆರಿಕದಲ್ಲಿ ಕನ್ನಡ ಗೀತೆ ಹಾಡಿದ ಮೋಹನ್​ಲಾಲ್ – Kannada News | Mohanlal singing Dr Rajkumar movie song on US goes viral on Social Media

ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್​ಲಾಲ್ (Mohanlal) ಅವರಿಗೆ ಕನ್ನಡ ಸಿನಿಮಾಗಳ ಬಗ್ಗೆ ಒಲವು ಇದೆ. ಅದರಲ್ಲೂ ಡಾ. ರಾಜ್​ಕುಮಾರ್ (Dr Rajkumar) ಸಿನಿಮಾಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಕನ್ನಡದ ಹಾಡುಗಳನ್ನು ಕೇಳಿ ಅವರು ಎಂಜಾಯ್ ಮಾಡುತ್ತಾರೆ. ಈ ಮೊದಲು ಅವರು ‘ಎಂದೆಂದೂ ನಿನ್ನನು ಮರೆತು ಬದುಕಿರಲಾರೆ..’ (Endendu Ninnanu Maretu) ಹಾಡನ್ನು ನೋಡುತ್ತಾ ಆನಂದಿಸಿದ ವಿಡಿಯೋ ವೈರಲ್ ಆಗಿತ್ತು. ಈಗ ಅವರು ಅದೇ ಹಾಡನ್ನು ವೇದಿಕೆಯಲ್ಲಿ ಹಾಡಿರುವುದು ಗಮನ ಸೆಳೆದಿದೆ. ಈ ವಿಡಿಯೋ ಕೂಡ…

Read More

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ ಪ್ರತಿಕ್ರಿಯೆ – Kannada News | Press the button with the lotus symbol to liberate Bengal from infiltrators amit shah says

ಕೊಲ್ಕತ್ತಾ, ಏಪ್ರಿಲ್ 23: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಟಿಎಂಸಿಯ ಭ್ರಷ್ಟಾಚಾರ ಮತ್ತು ಗೂಂಡಾಗಿರಿಯ ಸೂರ್ಯ ಮುಳುಗಿದ್ದಾನೆ. ಇಂದು ಮೊದಲ ಹಂತದ ಮತದಾನ ಬಹುತೇಕ ಪೂರ್ಣಗೊಂಡಿದೆ. ಮೇ 5ರಂದು ದೀದಿ ಸಂಪೂರ್ಣ ಸೋಲನ್ನು ಎದುರಿಸಲಿದ್ದಾರೆ. ಬಂಗಾಳದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸಲು ಬಂಗಾಳ ಚುನಾವಣೆಯಲ್ಲಿ ಏಪ್ರಿಲ್ 29ರಂದು ನೀವೆಲ್ಲರೂ ಕಮಲದ ಚಿಹ್ನೆಯಿರುವ ಗುಂಡಿಯನ್ನು ಒತ್ತಬೇಕು” ಎಂದು…

Read More