Headlines

ಕಾಂಗ್ರೆಸಿಗರ ಮನವೊಲಿಕೆಗೆ ಮಣಿದ ಬಸವರಾಜ ಹೊರಟ್ಟಿ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ – Kannada News | Basavaraj Horatti Resigns as Karnataka Legislative Council Chairman

ಬೆಂಗಳೂರು, ಆಗಸ್ಟ್​​ 07: ಸಾಕಷ್ಟು ರಾಜಕೀಯ ಬೆಳವಣಿಗಳ ಬಳಿಕ ಕೊನೆಗೂ ಕರ್ನಾಟಕ ವಿಧಾನ ಪರಿಷತ್​​ನ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ. ಸಿಎಂ ಡಿಕೆಶಿ, ಕೆಪಿಸಿಸಿ ಅಧ್ಯಕ್ಷರ ಸುದೀರ್ಘ ಮನವೊಲಿಕೆ ಬಳಿಕ ಅವರು ಹುದ್ದೆ ತೊರೆದಿದ್ದು, ಸ್ವಇಚ್ಛೆಯಿಂದ ರಾಜೀನಾಮೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಹೊರಟ್ಟಿ ಅವರನ್ನು ಹಂಗಾಮಿ ಸಭಾಪತಿಯಾಗಿ ಸರ್ಕಾರ ಮುಂದುವರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಕಾರ್ಯಕ್ರಮದ ಬಳಿಕವೂ ವಿಧಾನಸೌಧದ ಸಭಾಪತಿಗಳ ಕಚೇರಿಯಲ್ಲಿ ಹೊರಟ್ಟಿ ಜೊತೆ ಸಿಎಂ…

Read More

ಆರ್ಥಿಕ ಸಂಕಷ್ಟದಲ್ಲೂ ವಿದೇಶಿಗರ ನೆರವಿನ ಹಸ್ತಕ್ಕೆ ಕೈಚಾಚದ ಬೆಂಗಳೂರು ಸ್ಟಾರ್ಟಪ್; ಭಾರತದ ಮೊದಲ ಎಂಆರ್​ಐ ನಿರ್ಮಿಸಿದವನ ಕಥೆ – Kannada News | India’s first indigenous MRI stayed in the country, as its founder rejected MNC offer

ಎಂಆರ್​ಐ ಸ್ಕ್ಯಾನರ್Image Credit source: Getty Images ಹಣಕಾಸು ಸಂಕಷ್ಟ ಬಂದಾಗ ದೇಶದ ಹಿತದ ಬಗ್ಗೆ ಯೋಚನೆ ಮಾಡುವ ಉದ್ಯಮಿಗಳು ಬಹಳ ವಿರಳ. ಇಂಥ ಅಪರೂಪದ ಆಂಟ್ರಪ್ರನ್ಯೂರ್​ಗಳಲ್ಲಿ ಒಬ್ಬರು ಅರ್ಜುನ್ ಅರುಣಾಚಲಂ. ಬೆಂಗಳೂರು ಮೂಲದ ‘ವೊಕ್ಸೆಲ್‌ಗ್ರಿಡ್ಸ್’ (Voxelgrids) ಸ್ಟಾರ್ಟಪ್​ನ ಸ್ಥಾಪಕರು. ಭಾರತದ ಮೊದಲ ಸಂಪೂರ್ಣ ದೇಶೀಯವಾಗಿ ಎಂಆರ್​ಐ ಸ್ಕ್ಯಾನರ್ ಯಂತ್ರವನ್ನು ಅಭಿವೃದ್ಧಿಪಡಿಸಿದ ಕೀರ್ತಿ ಈ ಸ್ಟಾರ್ಟಪ್​ನದ್ದು. ಬಹಳ ಸಂಕಷ್ಟ, ಹೋರಾಟಗಳಲ್ಲಿ ಎಂಆರ್​ಐ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಇವರ ಸ್ಟಾರ್ಟಪ್ ಫಂಡಿಂಗ್ ಇಲ್ಲದೇ ಹತಾಶೆಯ ಸ್ಥಿತಿಯಲ್ಲಿದ್ದಾಗ ವಿದೇಶಿಗರ ಪಾಲಾಗುವ ಅವಕಾಶ…

Read More

‘ಅವತಾರ್ 2’, ‘ಆರ್‌ಆರ್‌ಆರ್’ ರೆಕಾರ್ಡ್ ಬ್ರೇಕ್: 59,000 ಸ್ಕ್ರೀನ್‌ಗಳಲ್ಲಿ ‘ರಾಮಾಯಣ’ ತೆರೆಗೆ – Kannada News | Ramayana World Record Release: Ranbir Kapoor Starrer Eyes 59,000 Screens Worldwide

ನಿತೇಶ್​ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. 2026ರ ದೀಪಾವಳಿಗೆ ರಿಲೀಸ್ ಆಗಲಿರುವ ಈ ಬಹುನಿರೀಕ್ಷಿತ ಚಿತ್ರ ಪ್ರಪಂಚದಾದ್ಯಂತ ಭಾರಿ ಸಂಚಲನ ಸೃಷ್ಟಿಸುತ್ತಿದೆ. ಈ ಸಿನಿಮಾ ವಿಶ್ವದಾದ್ಯಂತ 59,000ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಸೋನಿ ಪಿಕ್ಚರ್ಸ್ ಸಂಸ್ಥೆಯು ಈ ಚಿತ್ರದ ವಿದೇಶಿ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ವಿದೇಶಗಳಲ್ಲೇ ಬರೋಬ್ಬರಿ 50,000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರವನ್ನು ಪ್ರದರ್ಶಿಸಲು ಯೋಜನೆ ರೂಪಿಸಲಾಗಿದೆ. ಭಾರತದಲ್ಲಿ ಸುಮಾರು 9,000 ಚಿತ್ರಮಂದಿರಗಳಲ್ಲಿ…

Read More

ಶಸ್ತ್ರಚಿಕಿತ್ಸೆ ವೇಳೆ ಜಪಾನ್​​ನಲ್ಲಿ 7.1 ತೀವ್ರತೆಯ ಭೂಕಂಪ, ವೈದ್ಯರು ರೋಗಿಯ ಜೀವ ಉಳಿಸಿದ್ಹೇಗೆ ನೋಡಿ – Kannada News | Doctors Stay Focused as Powerful Earthquake Strikes During Critical Surgery in Japan

ಟೋಕಿಯೊ, ಆಗಸ್ಟ್​ 07: ಜಪಾನ್‌ನ ಕುಮಾಮೊಟೊ ನಗರದ ಆಸ್ಪತ್ರೆಯೊಂದರಲ್ಲಿ ವೈದ್ಯರ ತಂಡವೊಂದು ರೋಗಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆ(Surgery) ನಡೆಸುತ್ತಿದ್ದಾಗ ಬೃಹತ್ ಭೂಕಂಪ ಸಂಭವಿಸಿದೆ. ಇಡೀ ಶಸ್ತ್ರಚಿಕಿತ್ಸಾ ಕೊಠಡಿ ಹಾಗೂ ಉಪಕರಣಗಳು ತೀವ್ರವಾಗಿ ನಲುಗುತ್ತಿದ್ದರೂ, ಧೈರ್ಯಗೆಡದ ವೈದ್ಯರು ತಮ್ಮ ಜೀವವನ್ನೇ ಪಣಕ್ಕಿಟ್ಟು ಶಸ್ತ್ರಚಿಕಿತ್ಸಾ ಟೇಬಲ್ ಹಿಡಿದುಕೊಂಡು ರೋಗಿಯ ಜೀವ ಉಳಿಸಿದ್ದಾರೆ. ಈ ರೋಚಕ ದೃಶ್ಯಗಳು ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಶಸ್ತ್ರಚಿಕಿತ್ಸೆ ನಡೆಯುತ್ತಿದ್ದಾಗ ಏಕಾಏಕಿ ಭೂಮಿ ಕಂಪಿಸಿದ್ದು, ಕೊಠಡಿಯ ದೀಪಗಳು ಮಿನುಗುತ್ತಿದ್ದವು ಹಾಗೂ ಉಪಕರಣಗಳು ಅಕ್ಕಪಕ್ಕಕ್ಕೆ…

Read More

ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ ಹೀಗದಿಂದ್ಯಾಕೆ? – Kannada News | Priyank Kharge on Cabinet Reshuffle: Minister Ready to Resign if High Command Directs Party Work

ಬೆಂಗಳೂರು, ಆಗಸ್ಟ್​​ 07: ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಮತ್ತು ಖಾತೆ ಹಂಚಿಕೆ ಕುರಿತ ಚರ್ಚೆಗಳ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಯಾವುದೇ ಸಚಿವರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಸೇರಿದ್ದು, ಅವರು ಹೈಕಮಾಂಡ್ ಜೊತೆ ಸಮಾಲೋಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ. ಪಕ್ಷದಲ್ಲಿ ಸುಮಾರು 140 ಶಾಸಕರಿದ್ದು, 30-33 ಸಚಿವ ಸ್ಥಾನಗಳಿವೆ. ಎಲ್ಲರಿಗೂ ತೃಪ್ತಿಪಡಿಸುವುದು ಕಷ್ಟದ ಕೆಲಸ. ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯ…

Read More

ತಲೆನೋವು ಕಡಿಮೆ ಮಾಡಲು ಕಾಫಿ ಸಹಾಯ ಮಾಡುತ್ತದೆಯೇ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು? – Kannada News | Best Ways to Relieve a Headache Naturally

ತಲೆನೋವು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಒತ್ತಡ, ನಿದ್ರೆಯ ಕೊರತೆ, ದೇಹದಲ್ಲಿ ನೀರಿನ ಕೊರತೆ, ದೀರ್ಘಕಾಲ ಮೊಬೈಲ್ ಅಥವಾ ಕಂಪ್ಯೂಟರ್ ಪರದೆ ನೋಡುವುದು, ಅಸಮಯದ ಆಹಾರ ಸೇವನೆ ಸೇರಿದಂತೆ ಹಲವು ಕಾರಣಗಳಿಂದ ತಲೆನೋವು ಕಾಣಿಸಿಕೊಳ್ಳಬಹುದು. ಇಂತಹ ಸಂದರ್ಭಗಳಲ್ಲಿ ಅನೇಕರು ತಕ್ಷಣ ಒಂದು ಕಪ್ ಟೀ ಅಥವಾ ಕಾಫಿ ಕುಡಿಯುತ್ತಾರೆ. ಆದರೆ ಇದು ಎಲ್ಲರಿಗೂ ಪ್ರಯೋಜನಕಾರಿಯೇ? ಅಥವಾ ಕೆಲವರಲ್ಲಿ ತಲೆನೋವನ್ನು ಇನ್ನಷ್ಟು ಹೆಚ್ಚಿಸಬಹುದೇ? ಈ ಕುರಿತು ಆರೋಗ್ಯ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ. ತಲೆನೋವಿನ ಸಮಯದಲ್ಲಿ…

Read More

ವಾಹನ ಸವಾರರೇ ಗಮನಿಸಿ: ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆ ಕಡೆ ಹೋಗುವ ಲೂಪ್ ರಸ್ತೆ ಬಂದ್ – Kannada News | Bengaluru Traffic Alert: KR Market Flyover Loop Road to Chamarajpet Closed for 3 Months

ಬೆಂಗಳೂರು, ಆಗಸ್ಟ್ 7: ಬೆಂಗಳೂರು ನಗರದ ಪ್ರಮುಖ ಸಂಚಾರ ಮಾರ್ಗವಾದ ಕೆಆರ್ ಮಾರ್ಕೆಟ್ ಫ್ಲೈ ಓವರ್ (ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ) ಯ ಒಂದು ಭಾಗವನ್ನು ವೈಟ್ ಟಾಪಿಂಗ್ ಕಾಮಗಾರಿಗಾಗಿ ಮುಚ್ಚಲಾಗಿದೆ. ಚಾಮರಾಜಪೇಟೆಗೆ ಸಂಪರ್ಕ ಕಲ್ಪಿಸುವ ಲೂಪ್ ರಸ್ತೆಯು ಸುಮಾರು ಮೂರು ತಿಂಗಳ ಕಾಲ ಬಂದ್ ಆಗಿರಲಿದೆ ಎಂದು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಬಿ ಸ್ಮೈಲ್ ಸಂಸ್ಥೆಯು ಕೈಗೆತ್ತಿಕೊಂಡಿರುವ ಈ ಕಾಮಗಾರಿಯು ಟೌನ್ ಹಾಲ್‌ನಿಂದ ಬಿಜಿಎಸ್ ಫ್ಲೈ ಓವರ್ ಹತ್ತಿ ಚಾಮರಾಜಪೇಟೆ ಕಡೆಗೆ ಹೋಗುವ ವಾಹನಗಳಿಗೆ ಸಂಚಾರ…

Read More

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಯುವತಿ ಕುಟುಂಬಸ್ಥರಿಂದ ಹಲ್ಲೆ ಆರೋಪ: ದೂರು-ಪ್ರತಿದೂರು ದಾಖಲು – Kannada News | Kundapura Shocked: Youth Tied to Tree and Assaulted Over 50,000 Loan Dispute; Complaints Filed

ಸನತ್, ನಂದೀಶ್ ಕುಮಾರ್, ರಾಮ ಕುಮಾರ್Image Credit source: Tv9 Kannada ಉಡುಪಿ, ಆಗಸ್ಟ್​​ 07: ಜಿಲ್ಲೆಯ ಕುಂದಾಪುರದ ಬೆಳ್ಳಾಲದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಯುವಕನೋರ್ವನನ್ನು ಮನೆಗೆ ಕರೆಸಿದ ಯುವತಿಯ ಕುಟುಂಬಸ್ಥರು ಆತನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಸನತ್ ಎನ್ನುವ ಯುವಕನ ಮೇಲೆ ಪೈಶಾಚಿಕ ಕೃತ್ಯ ನಡೆಸಲಾಗಿದ್ದು, ಯುವತಿ ಮತ್ತು ಈತ ಒಂದೇ ಸಂಸ್ಥೆಯಲ್ಲಿ ಕೆಲಸಕ್ಕಿದ್ದರು. ಬಳಿಕ ಇಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು. ಇದೇ ಸಮಯದಲ್ಲಿ ಸನತ್ ನಿಂದ 50 ಸಾವಿರ ಹಣವನ್ನು ಯವತಿ ಸಾಲ…

Read More

ISRO Recruitment 2026: ಇಸ್ರೋದಿಂದ 242 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ! – Kannada News | ISRO Recruitment 2026: Apply for 242 Assistant, UDC, JPA and Stenographer Jobs Now!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದೆ. ಸಂಸ್ಥೆಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಕೃತ ನೇಮಕಾತಿ ಅಧಿಸೂಚನೆ (ಪ್ರಕಟಣೆ ಸಂಖ್ಯೆ: ISRO:ICRB:01(A-JPA):2026) ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಭಾರತೀಯ ನಾಗರಿಕರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಮತ್ತು ಲಭ್ಯವಿರುವ ಸ್ಥಳಗಳು: ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 242 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅದರಲ್ಲಿ ಅಸಿಸ್ಟೆಂಟ್ (Assistant) ವಿಭಾಗದಲ್ಲಿ 120…

Read More

ಬಿಎಸ್ಸೆನ್ನೆಲ್ ವೈಫೈ ಯೋಜನೆ ನೀರಲ್ಲಿ ಹೋಮ; ಸಾವಿರಾರು ಕೋಟಿ ರೂ ವೆಚ್ಚಕ್ಕೆ ಬದಲಾಗಿ ಸಿಕ್ಕ ಆದಾಯ ಸೊನ್ನೆ? – Kannada News | BSNL’s 25,000 Wi Fi Hotspots generate just Rs 3 lakh revenue in 4 years, reveals Parliamentary panel report

ನವದೆಹಲಿ, ಆಗಸ್ಟ್ 7: ಬಿಎಸ್ಸೆನ್ನೆಲ್ (BSNL- ಭಾರತೀಯ ಸಂಚಾರ ನಿಗಮ ನಿಯಮಿತ) ಗ್ರಾಮೀಣ ಪ್ರದೇಶಗಳಲ್ಲಿ ಸ್ಥಾಪಿಸಿದ 25,000 ವೈ-ಫೈ ಹಾಟ್‌ಸ್ಪಾಟ್‌ಗಳ ಯೋಜನೆಯಲ್ಲಿ ತೀವ್ರ ಆರ್ಥಿಕ ನಷ್ಟ ಮತ್ತು ಯೋಜನಾ ಲೋಪಗಳು ಕಂಡುಬಂದಿವೆ ಎಂದು ಸಂಸದೀಯ ಸಮಿತಿಯು ಲೋಕಸಭೆಯಲ್ಲಿ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ. ನೂರಾರು ಕೋಟಿ ರೂ ವೆಚ್ಚ ಮಾಡಿ ಜಾರಿಗೊಳಿಸಿದ ಈ ಯೋಜನೆ ಬಹುತೇಕ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ವರ್ಷಕ್ಕೆ ₹75 ಕೋಟಿ ಆದಾಯ ಬರುವ ಗುರಿ ಇಟ್ಟಿದ್ದರೂ, ಸಿಕ್ಕಿದ್ದು ಕೇವಲ ₹3 ಲಕ್ಷ ಮಾತ್ರವೇ ಎಂದು…

Read More