ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಪೊಲೀಸರ ವಶಕ್ಕೆ – Kannada News | BJP MLA Byrathi Basavaraj police custody in Biklu Shiva Murder Case After Bail Denial

ಶಾಸಕ ಭೈರತಿ ಬಸವರಾಜ್​​​, ಬಿಕ್ಲು ಶಿವ

ಬೆಂಗಳೂರು, ಫೆಬ್ರವರಿ 12: ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ  ಶಾಸಕ ಭೈರತಿ ಬಸವರಾಜ್​ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ವೇಳೆ ಆರೋಪಿ ಜಗ್ಗ ಯಾರೆಂಬುದೇ ಗೊತ್ತಿಲ್ಲವೆಂದು ಭೈರತಿ ಬಸವರಾಜ್​ ಹೇಳಿದ ಸುಳ್ಳುಗಳೇ ಅವರಿಗೆ ಇದೀಗ ಮುಳುವಾಗಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಂಡಿಗೋ – 6E683 ವಿಮಾನದಲ್ಲಿ ಅಹಮದಾಬಾದ್​​ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Published On – 7:05 pm, Thu, 12 February 26

Source link

ಜನ ನಾಯಗನ್ ಬಳಿಕ ಮತ್ತೊಂದು ಚಿತ್ರದ ರಿಲೀಸ್​​​ಗೆ ತಡೆ; ದೊಡ್ಡ ಪ್ಲ್ಯಾನ್ ಮಾಡಿದ ತಂಡ – Kannada News | Ghuskor Pandat Title Row: Netflix Changes Name for Release Amidst Brahmin Protest

‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಿ ಈಗಾಗಲೇ ತಿಂಗಳು ಕಳೆದಿರಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ಸಿಗದೆ ಇರುವುದೇ ಸಿನಿಮಾ ರಿಲೀಸ್ ವಿಳಂಬ ಆಗಲು ಕಾರಣ. ಹೀಗಾಗಿ, ಈವರೆಗೆ ಸಿನಿಮಾ ರಿಲೀಸ್ ಆಗಿಲ್ಲ. ಈ ಬೆನ್ನಲ್ಲೇ ಮತ್ತೊಂದು ಸಿನಿಮಾಗೆ ರಿಲೀಸ್​ಗೆ ಬ್ರೇಕ್ ಬೀಳುವ ಲಕ್ಷಣ ಇತ್ತು. ಆದರೆ, ತಕ್ಷಣ ತೆಗೆದುಕೊಂಡ ನಿರ್ಧಾರದಿಂದ ಸಿನಿಮಾ ರಿಲೀಸ್​​ಗೆ ಅನುವು ಮಾಡಿಕೊಡಲಾಗುತ್ತಿದೆ. ಅದು ಬಾಲಿವುಡ್​​ನ ‘ಘುಸ್ಕೋರ್ ಪಂಡತ್’.

ಮನೋಜ್ ಬಾಜ್​​ಪಾಯಿ ನಟನೆಯ ‘ಘುಸ್ಕೋರ್ ಪಂಡತ್’ ಸುತ್ತ ವಿವಾದದ ಹುತ್ತ ಬೆಳೆದಿದೆ. ಈ ಸಿನಿಮಾದ ಟೈಟಲ್ ವಿವಾದಕ್ಕೆ ಕಾರಣ ಆಗಿತ್ತು. ಈ ಸಿನಿಮಾದ ಟೈಟಲ್​ನ ಕನ್ನಡಕ್ಕೆ ತರ್ಜಮ್ಯ ಮಾಡಿದರೆ, ‘ಭ್ರಷ್ಟ ಅರ್ಚಕರು’ ಎಂಬ ಅರ್ಥ ಕೊಡುತ್ತದೆ. ಹೀಗಾಗಿ, ಇದಕ್ಕೆ ಅರ್ಚಕರ ವರ್ಗ ಧ್ವನಿ ಎತ್ತಿತ್ತು.

ಜೈಪುರದಲ್ಲಿರುವ ಸರ್ವ ಬ್ರಾಹ್ಮಿಣ್ ಮಹಸಭಾ ಅವರು ಈ ಟೈಟಲ್ ವಿರುದ್ಧ ಧ್ವನಿ ಎತ್ತಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲು ಕೂಡ ಹತ್ತಿತು. ಟೈಟಲ್ ಬದಲಾವಣೆ ಮಾಡೋವರೆಗೆ ಸಿನಿಮಾ ರಿಲೀಸ್​ಗೆ ಅವಕಾಶ ನೀಡುವುದಿಲ್ಲ ಎನ್ನುವ ಮಾತು ಕೇಳಿ ಬಂದವು. ಈಗ ಪ್ರಕರಣದಲ್ಲಿ ನೆಟ್​​ಫ್ಲಿಕ್ಸ್ ಕೋರ್ಟ್​​ಗೆ ತನ್ನ ನಿರ್ಧಾರ ತಿಳಿಸಿದೆ.

‘ಘುಸ್ಕೋರ್ ಪಂಡತ್ ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲು ತಂಡ ನಿರ್ಧರಿಸಿದೆ. ಸಧ್ಯ ಉದ್ಭವಿಸಿರುವ ಕಳವಳದ ಹಿನ್ನೆಲೆಯಲ್ಲಿ ನಿರ್ಮಾಪಕರು ಪ್ರಜ್ಞಾಪೂರ್ವಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ’ ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

ಇದನ್ನೂ ಓದಿ: ನೆಟ್‌ಫ್ಲಿಕ್ಸ್‌ನ ‘ಘೂಸ್‌ಖೋರ್ ಪಂಡತ್’ ವಿವಾದ: ಟೀಸರ್ ಡಿಲೀಟ್ ಮಾಡಿದ ಚಿತ್ರತಂಡ

ಸದ್ಯ ನೆಟ್​ಫ್ಲಿಕ್ಸ್​ಗೆ ಸಿನಿಮಾ ರಿಲೀಸ್ ಮಾಡಲು ಒಪ್ಪಿಗೆ ಸೂಚಿಸಿದೆ. ಒಂದೊಮ್ಮೆ ಸಿನಿಮಾ ರಿಲೀಸ್ ಬಳಿಕ ಮತ್ತಷ್ಟು ವಿವಾದಗಳು ಎದ್ದರೆ ಆಗ ಸಿನಿಮಾಗೆ ಬ್ಯಾನ್ ಬೀತಿ ಎದುರಾಗಬಹುದು ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಕಾರು ಆಟೋಗೆ ಡಿಕ್ಕಿ ಹೊಡೆದು 25 ವರ್ಷದ ಯುವತಿ ಸಾವು – Kannada News | Haryana 25 year old woman killed after hit by drunk cops Car in Ambala

ಅಂಬಾಲ, ಫೆಬ್ರವರಿ 12: ಹರಿಯಾಣದ ಅಂಬಾಲದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ಹರಿಯಾಣದ ಪೊಲೀಸ್ ಅಧಿಕಾರಿಯೊಬ್ಬರು 25 ವರ್ಷದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಇ-ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸ್ ಅಧಿಕಾರಿ ಚಲಾಯಿಸುತ್ತಿದ್ದ ಕಾರು ಡಿಕ್ಕಿ (Car Accident) ಹೊಡೆದ ಪರಿಣಾಮದಿಂದಾಗಿ ಈ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ರಸ್ತೆಗೆ ಬಿದ್ದಿದ್ದು, ನಂತರ ಕಾರು ಆಕೆಯ ಮೇಲೆ ಹರಿದಿದೆ. ಮೃತಳನ್ನು ನಿಕಿತಾ ಎಂದು ಗುರುತಿಸಲಾಗಿದೆ.

ಅಂಬಾಲದ ಕಾಳಿ ಪಲ್ಟನ್ ಸೇತುವೆ ಬಳಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, 9 ಗಂಟೆ ಸುಮಾರಿಗೆ ಆ ಮಹಿಳೆ ಇ-ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಆಕೆಯ ಮೇಲೆ ಕಾರು ಹಾದುಹೋಯಿತು. ಇದರಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವನ್ನಪ್ಪಿದರು.

ಇದನ್ನೂ ಓದಿ: ಹೈವೇ ಪಕ್ಕದಲ್ಲಿ ಎಸೆದಿದ್ದ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆ

ಈ ಘಟನೆಯ ಸಮಯದಲ್ಲಿ ಪೊಲೀಸ್ ಅಧಿಕಾರಿ ಕುಡಿದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಪಘಾತದ ನಂತರ, ಅಲ್ಲಿ ಜಮಾಯಿಸಿದ್ದ ಸ್ಥಳೀಯರು ಅವರನ್ನು ಹಿಡಿದಿದ್ದಾರೆ. ನಂತರ, ಅವರನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು. ಪೊಲೀಸ್ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ.

“ನಾನು ಅಂಬಾಲಾ ಕಂಟೋನ್ಮೆಂಟ್‌ನಿಂದ ಇ-ರಿಕ್ಷಾದಲ್ಲಿ ನಾಲ್ವರು ಪ್ರಯಾಣಿಕರೊಂದಿಗೆ ಬರುತ್ತಿದ್ದೆ. ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ನಮ್ಮ ಇ-ರಿಕ್ಷಾಗೆ ಡಿಕ್ಕಿ ಹೊಡೆಯಿತು. ಆಗ ನಮ್ಮ ಆಟೋದಲ್ಲಿದ್ದ ಒಬ್ಬಳು ಹುಡುಗಿ ಅದರಿಂದ ಬಿದ್ದಳು. ನಂತರ, ಪೊಲೀಸ್ ಅಧಿಕಾರಿ ಆ ಹುಡುಗಿಯ ಮೇಲೆ ಕಾರು ಹತ್ತಿಸಿಕೊಂಡು ಹೋದರು. ಆಕೆಯನ್ನು ಆಸ್ಪತ್ರೆಗೆ ಕರೆತರುವಾಗ ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಪೊಲೀಸ್ ಅಧಿಕಾರಿ ಕುಡಿದಿದ್ದರು,” ಎಂದು ಇ-ರಿಕ್ಷಾ ಚಾಲಕ ರವೀಂದರ್ ಸಿಂಗ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NAM Playing XI: ಟಾಸ್ ಗೆದ್ದ ನಮೀಬಿಯಾ; ಭಾರತ ತಂಡದಲ್ಲಿ 2 ಬದಲಾವಣೆ – Kannada News | IND vs NAM Playing XI India vs Namibia Today 18th T20 World Cup 2026 match playing 11 details with name in Kannada

2026 ರ ಟಿ20 ವಿಶ್ವಕಪ್​ನ 18 ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಟೀಂ ಇಂಡಿಯಾ ಗ್ರೂಪ್ ಎ ನಲ್ಲಿ ನಮೀಬಿಯಾ ತಂಡವವನ್ನು ಎದುರಿಸುತ್ತಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಇದಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಟೀಂ ಇಂಡಿಯಾ ಯುಎಸ್ಎ ತಂಡವನ್ನು ಸೋಲಿಸುವ ಮೂಲಕ ತನ್ನ ಅಭಿಯಾನವನ್ನು ಪ್ರಾರಂಭಿಸಿದರೆ, ತನ್ನ ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಸೋತಿರುವ ನಮೀಬಿಯಾ ಬಲಿಷ್ಠ ಟೀಂ ಇಂಡಿಯಾಗೆ ಸವಾಲು ನೀಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಭಾರತ, ನಮೀಬಿಯಾವನ್ನು ಸೋಲಿಸಿದರೆ, ಸೂಪರ್ 8 ಸುತ್ತಿನಲ್ಲಿ ಅದರ ಸ್ಥಾನ ಖಚಿತವಾಗಲಿದೆ. ಹೀಗಾಗಿ ಸೂರ್ಯಕುಮಾರ್ ಪಡೆ ಯಾವುದೇ ಒತ್ತಡವಿಲ್ಲದೆ ಮುಂದಿನ ಸುತ್ತಿಗೆ ಅರ್ಹತೆ ಪಡೆಯಲು ನೋಡುತ್ತಿದೆ.

ಟಾಸ್ ಗೆದ್ದ ನಮೀಬಿಯಾ

ಟಾಸ್ ಗೆದ್ದ ನಮೀಬಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಎರಡೂ ತಂಡಗಳಲ್ಲಿ ತಲಾ ಎರಡೆರಡು ಬದಲಾವಣೆಗಳನ್ನು ಮಾಡಲಾಗಿದೆ. ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ಇನ್ನು ಗುಣಮುಖರಾಗಿಲ್ಲ ಆದ್ದರಿಂದ ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೆಯೇ ಮೊಹಮ್ಮದ್ ಸಿರಾಜ್ ಬದಲಿಗೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ ಎಂದು ಸೂರ್ಯಕುಮಾರ್ ಮಾಹಿತಿ ನೀಡಿದರು.

ಮುಖಾಮುಖಿ ದಾಖಲೆ

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಮತ್ತು ನಮೀಬಿಯಾ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, 2021 ರ ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದಾಗ ಟೀಂ ಇಂಡಿಯಾ, ನಮೀಬಿಯಾವನ್ನು ಸೋಲಿಸಿತ್ತು. ದುಬೈನಲ್ಲಿ ನಡೆದ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ 9 ವಿಕೆಟ್​ಗಳ ಏಕಪಕ್ಷೀಯ ಗೆಲುವು ಸಾಧಿಸಿತ್ತು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಸರ್ ಪಟೇಲ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ.

ನಮೀಬಿಯಾ ತಂಡ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಲಾರೆಂಟ್ ಸ್ಟೀನ್‌ಲ್ಯಾಂಪ್, ಜಾನ್ ಫ್ರಿಲಿಂಕ್, ಜಾನ್ ನಿಕೋಲ್ ಲಾಫ್ಟಿ-ಈಥನ್, ಜೆಜೆ ಸ್ಮಿಟ್, ಜೇನ್ ಗ್ರೀನ್ (ವಿಕೆಟ್ ಕೀಪರ್), ರೂಬೆನ್ ಟ್ರಂಪೆಲ್‌ಮನ್, ಮಲನ್ ಕ್ರುಗರ್, ಬರ್ನಾರ್ಡ್ ಸ್ಕೋಲ್ಟ್ಜ್, ಬೆನ್ ಶಿಕೊಂಗೊ ಮತ್ತು ಮ್ಯಾಕ್ಸ್ ಹಿಂಗೋ.

Published On – 6:44 pm, Thu, 12 February 26

Source link

ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ನೀವು ಶಾಕ್​​ ಆಗೋದು ಗ್ಯಾರಂಟಿ – Kannada News | Koppal Horticultural Fair Showcases Rs 15 Lakh Yarsagumba Mushroom

ಕೊಪ್ಪಳ, ಫೆಬ್ರವರಿ 12: ಮಹಾ ಶಿವರಾತ್ರಿ ಅಂಗವಾಗಿ ತೋಟಗಾರಿಕೆ ಇಲಾಖೆ ಆಯೋಜಿಸಿದ್ದ ಐದು ದಿನಗಳ ಹಣ್ಣು, ಜೇನು ಮತ್ತು ಅಣಬೆ ಮೇಳದಲ್ಲಿ ಜಗತ್ತಿನ ಅತ್ಯಂತ ದುಬಾರಿ ಅಣಬೆಯಾದ ಯಾರ್ಸಗುಂಬಾವನ್ನು (ಕಾರ್ಡಿಯೋಶೆಪ್ಸ್) ಪ್ರದರ್ಶನಕ್ಕೆ ಇಡಲಾಗಿದೆ. ಹಿಮಾಲಯದ ತಪ್ಪಲಿನಲ್ಲಿ ಬೆಳೆಯುವ ಈ ಅಣಬೆ ಪ್ರತಿ ಕೆ.ಜಿ.ಗೆ 15 ಲಕ್ಷ ರೂಪಾಯಿ ಬೆಲೆ ಬಾಳುತ್ತದೆ. ಈ ಅಣಬೆಯು ಹೆಚ್ಚಿನ ಔಷಧೀಯ ಗುಣಗಳನ್ನು ಹೊಂದಿದ್ದು, ಮಧುಮೇಹ, ಕ್ಯಾನ್ಸರ್, ಬಿಪಿ, ಅಸ್ತಮಾ ಸೇರಿದಂತೆ ಹಲವು ಕಾಯಿಲೆಗಳಿಗೆ ಮದ್ದಾಗಿ ಬಳಕೆಯಾಗುತ್ತದೆ ಎಂದು ಹೇಳಲಾಗುತ್ತದೆ. ಕೊಪ್ಪಳ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣ ಉಕ್ಕುಂದ ಅವರು, ಈ ಅಣಬೆಯನ್ನು ನೇಪಾಳದಿಂದ ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ 10 ಗ್ರಾಂ ಅಣಬೆಯನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದ್ದು, ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸುವುದು ಮತ್ತು ವೀಕ್ಷಣೆಗೆ ಅವಕಾಶ ಕಲ್ಪಿಸುವುದು ಉದ್ದೇಶ ನಮ್ಮದು ಎಂದುವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

IND vs NAM T20 WC Live Score: ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ಕೆ – Kannada News | India vs Namibia T20 World Cup 2026 Live Cricket Score IND vs NAM Group a Today Match, highlights latest news in Kannada

LIVE NEWS & UPDATES

  • 12 Feb 2026 06:35 PM (IST)

    India vs Namibia Live: ಟಾಸ್ ಗೆದ್ದ ನಮೀಬಿಯಾ

    ಟಾಸ್ ಗೆದ್ದ ನಮೀಬಿಯಾ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದೆ.

2026 ರ ಟಿ20 ವಿಶ್ವಕಪ್‌ನ 18 ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯಾ ಇಂದು ಮುಖಾಮುಖಿಯಾಗಿವೆ. ಗ್ರೂಪ್ ಎ ಯಲ್ಲಿರುವ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾ ಸತತ ಎರಡನೇ ಗೆಲುವನ್ನು ಗುರಿಯಾಗಿರಿಸಿಕೊಂಡರೆ ನಮೀಬಿಯಾ ತನ್ನ ಮೊದಲ ಪಂದ್ಯದಲ್ಲಿ ಸೋತ ನಂತರ ತನ್ನ ಖಾತೆಯನ್ನು ತೆರೆಯಲು ನೋಡುತ್ತಿದೆ.

Published On – Feb 12,2026 6:34 PM

Source link

ಪ್ರಯಾಣಿಕರೇ ಗಮನಿಸಿ: ಫೆಬ್ರವರಿ 16ರಂದು ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ; ಇಲ್ಲಿದೆ ಮಾಹಿತಿ – Kannada News | Karnataka Train Alert: Mysuru–Arsikere Services Cancelled; Several Trains Delayed and Rescheduled on February 16

ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ

ಮೈಸೂರು, ಫೆಬ್ರವರಿ 12: ಹಬ್ಬನಘಟ್ಟ- ಅರಸೀಕೆರೆ ನಿಲ್ದಾಣಗಳ ಮಧ್ಯೆ ವಿಶ್ವೇಶ್ವರಯ್ಯ ಜಲ ನಿಗಮ್ ಲಿಮಿಟೆಡ್ (VJNL) ವತಿಯಿಂದ ಕಾಲುವೆ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 16ರ ಸೋಮವಾರದಂದು ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಹಲವು ರೈಲುಗಳು ರದ್ದಾಗಲಿದ್ದರೆ, ಕೆಲವು ಭಾಗಶಃ ಕ್ಯಾನ್ಸಲ್​​ ಆಗಲಿವೆ. ಇನ್ನು ಕೆಲ ರೈಲುಗಳ ಸಂಚಾರ ಸಮಯ ಮರು ನಿಗದಿಗೊಳ್ಳಲಿದ್ದರೆ, ಮತ್ತೆ ಕೆಲವು ಟ್ರೇನ್​​ಗಳನ್ನು ನಿಯಂತ್ರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಸಂಚಾರ ರದ್ದುಗೊಂಡ ರೈಲುಗಳು

  • ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್
  • ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್
  • ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್

ಇದನ್ನೂ ಓದಿ: ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ನೀಡಿದ ಸಚಿವ ಅಶ್ವಿನಿ ವೈಷ್ಣವ್

ಇನ್ನು ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಮೈಸೂರು–ಅರಸೀಕೆರೆನಡುವಿನ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದ್ದು, ಅರಸೀಕೆರೆಯಿಂದ ತನ್ನ ನಿಗದಿತ ವೇಳೆಗೆ ಪ್ರಯಾಣ ಆರಂಭಿಸಲಿದೆ. ರೈಲು ಸಂಖ್ಯೆ 56266 ಮೈಸೂರು–ಅರಸೀಕೆರೆ ಪ್ಯಾಸೆಂಜರ್ ರೈಲು 110 ನಿಮಿಷಗಳ ಕಾಲ ಮತ್ತು ರೈಲು ಸಂಖ್ಯೆ 16221 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ರೈಲನ್ನು 100 ನಿಮಿಷಗಳ ಕಾಲ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ.

ಈ ರೈಲುಗಳ ಸಂಚಾರದಲ್ಲಿ ವಿಳಂಬ

ರೈಲು ಸಂಖ್ಯೆ 56265 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲು ಅರಸೀಕೆರೆಯಿಂದ 100 ನಿಮಿಷಗಳ ವಿಳಂಬದೊಂದಿಗೆ ಮತ್ತು ರೈಲು ಸಂಖ್ಯೆ 06269 ಮೈಸೂರು–ಎಸ್‌ಎಂವಿಟಿ ಬೆಂಗಳೂರು ಪ್ಯಾಸೆಂಜರ್ ವಿಶೇಷ ರೈಲು ಮೈಸೂರಿನಿಂದ 100 ನಿಮಿಷಗಳ ವಿಳಂಬದೊಂದಿಗೆ ಸಂಚಾರ ನಡೆಸಲಿದೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:14 pm, Thu, 12 February 26

Source link

Kiss Day 2026: ಚುಂಬನದಲ್ಲಿ ಎಷ್ಟು ಪ್ರಕಾರಗಳಿವೆ, ಅವುಗಳ ಅರ್ಥವೇನು ಗೊತ್ತಾ? – Kannada News | Kiss Day 2026: Every kiss has a meaning; here’s what it means

ಸಂಬಂಧವನ್ನು ಬಲಪಡಿಸಲು, ಪರಸ್ಪರ ಪ್ರೀತಿ, ವಿಶ್ವಾಸವನ್ನು ವ್ಯಕ್ತಪಡಿಸಲು ವ್ಯಾಲೆಂಟೈನ್‌ ವೀಕ್‌ನ ಏಳನೇ ದಿನ ಅಂದ್ರೆ ಪ್ರೇಮಿಗಳ ದಿನದ ಮುನ್ನಾ ದಿನ ಕಿಸ್ ಡೇಯನ್ನು (Kiss Day) ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಜನರು ತಮ್ಮ ಸಂಗಾತಿಯನ್ನು ಚುಂಬಿಸುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಕೆಲವರು ತಮ್ಮ ಸಂಗಾತಿಯ ಕೈಗೆ ಸಿಹಿ ಮುತ್ತನ್ನು ನೀಡಿದರೆ, ಇನ್ನೂ ಕೆಲವು ಹಣೆಗೆ ಮುತ್ತನಿಟ್ಟು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಈ ರೀತಿ ನೀಡುವ ಪ್ರತಿಯೊಂದು ಚುಂಬನಕ್ಕೂ ಅದರದ್ದೇ ಆದ ಅರ್ಥವಿದ್ದು, ಯಾವ ಚುಂಬನವನ್ನು ಯಾವ ರೀತಿಯ ಭಾವನೆಯನ್ನು ವ್ಯಕ್ತಪಡಿಸಲು ನೀಡಲಾಗುತ್ತದೆ ಎಂಬುದನ್ನು ತಿಳಿಯಿರಿ.

ಚುಂಬನದ ವಿಧಗಳು ಮತ್ತು ಅವುಗಳ ಅರ್ಥ:

ಹಣೆಯ ಮೇಲೆ ನೀಡುವ ಚುಂಬನ: ಇದು ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲಿರುವ ತುಂಬಾ ಪ್ರಾಮಾಣಿಕವಾದ ಮಾರ್ಗವಾಗಿದೆ.  ಮೆಚ್ಚುಗೆಯ ಭಾವನೆ ಮತ್ತು ಸದಾ ನಿನ್ನೊಂದಿಗೆ ಇರುತ್ತೇನೆ ಎಂದು ಭರವಸೆ ನೀಡುವ ಚುಂಬನವೇ ಹಣೆಯ ಮೇಲಿನ ಚುಂಬನ. ಅಲ್ಲದೆ ಈ ಚುಂಬನ ಆ ವ್ಯಕ್ತಿಯು ನಿಮ್ಮೊಂದಿಗೆ ಸುರಕ್ಷಿತವಾಗಿದ್ದಾರೆ ಎಂದು ಹೇಳುವ ಒಂದು ಮಾರ್ಗವಾಗಿದೆ.

ಕೆನ್ನೆಯ ಮುತ್ತು: ಇದು ಸಂಗಾತಿಗಳಿಬ್ಬರ ನಡುವಿನ ಪ್ರೀತಿಯ ಅತ್ಯಂತ ಸಾಮಾನ್ಯ ಅಭಿವ್ಯಕ್ತಿಯಾಗಿದೆ. ಒಟ್ಟಾರೆಯಾಗಿ ಪರಿಚಯ ಮತ್ತು ಪ್ರೀತಿಯನ್ನು ಈ ಚುಂಬನ ತಿಳಿಸುತ್ತದೆ. ಕೆನ್ನೆಯ ಚುಂಬನವನ್ನು ಸಂಗಾತಿಗಳಿಗೆ ಮಾತ್ರವಲ್ಲದೆ ಇತರ ಆಪ್ತರಿಗೂ ನೀಡಬಹುದು.

ಕೈಗೆ ಮುತ್ತು: ಕೈಗಳಿಗೆ ಮುತ್ತಿಡುವುದನ್ನು ಗೌರವದ ಸಂಕೇತವೆಂದು ಪರಿಗಣಿಸಲಾಗುತ್ತದೆ. ನೀವು ಯಾರನ್ನಾದರೂ ಕಾಳಜಿ ವಹಿಸುತ್ತಿದ್ದರೆ ಅಥವಾ ಸಂಬಂಧವನ್ನು ಪ್ರಾರಂಭಿಸಲು ಬಯಸಿದರೆ, ಅವರ ಕೈಗಳಿಗೆ ಮುತ್ತಿಡುವ ಮೂಲಕ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಬಹುದು. ಈ ರೀತಿಯ ಮುತ್ತು ಸಂಬಂಧದಲ್ಲಿ ಭದ್ರತೆ ಮತ್ತು ಮೆಚ್ಚುಗೆಯನ್ನು ಪ್ರತಿಬಿಂಬಿಸುತ್ತದೆ.

ಫ್ರೆಂಚ್‌ ಕಿಸ್:‌ ಇದು ತುಂಬಾ ಆತ್ಮೀಯವಾದ ಚುಂಬನವಾಗಿದ್ದು, ಸಾಮಾನ್ಯವಾಗಿ ಉತ್ಸಾಹ ಮತ್ತು ಆಳವಾದ ಪ್ರೀತಿಯನ್ನು ಸಂಕೇತಿಸುತ್ತದೆ. ಸಂಗಾತಿಯೊಂದಿಗೆ ಹೆಚ್ಚು ಆರಾಮದಾಯಕವಾದಾಗ ಮತ್ತು ಸಂಬಂಧದಲ್ಲಿ ಅಂತರವು ಕಡಿಮೆಯಾಗಲು ಪ್ರಾರಂಭಿಸಿದಾಗ ಫ್ರೆಂಚ್‌ ಕಿಸ್‌ ನೀಡಿ ಭಾವನೆಗಳನ್ನು ವ್ಯಕ್ತಪಡಿಸಬಹುದು.

ಮೂಗಿನ ಮೇಲೆ ಚುಂಬನ: ಮೂಗಿನ ಮೇಲೆ ಚುಂಬಿಸುವುದು ಶುದ್ಧ ಭಾವನೆಗಳನ್ನು ವ್ಯಕ್ತಪಡಿಸುವ ಒಂದು ಮಾರ್ಗವಾಗಿದೆ. ಇದು ಸಂಗಾತಿಯನ್ನು ಆಳವಾಗಿ ಪ್ರೀತಿಸುವುದನ್ನು ತೋರ್ಪಡಿಸುತ್ತದೆ ಮತ್ತು ಈ ಸಿಹಿ ಚುಂಬನ ಪ್ರೀತಿ, ಕಾಳಜಿಯನ್ನು ತೋರಿಸುತ್ತದೆ.

ಕುತ್ತಿಗೆ  ಚುಂಬನ: ಕುತ್ತಿಗೆಗೆ ಚುಂಬನ ನೀಡುವುದರಿಂದ ನಿಮ್ಮಲ್ಲಿರುವ ಉತ್ಸಾಹಭರಿತ ಭಾವನೆಗಳು ಬಹಿರಂಗಗೊಳ್ಳುತ್ತವೆ. ಈ ರೀತಿಯ ಚುಂಬನವು ತುಂಬಾ ರೊಮ್ಯಾಂಟಿಕ್‌ ಆಗಿದ್ದು, ಇದು ಆಳವಾದ ಭಾವನೆಗಳನ್ನು ವ್ಯಕ್ತಪಡಿಸುತ್ತದೆ. ರೊಮ್ಯಾಂಟಿಕ್‌ ಫೀಲ್‌ ಹುಟ್ಟುಹಾಕುವ ಈ ಚುಂಬನವು ಸಂಗಾತಿಗಳನ್ನು ಇನ್ನಷ್ಟು ಹತ್ತಿರ ಮಾಡುತ್ತದೆ.

ಇದನ್ನೂ ಓದಿ: ವ್ಯಾಲೆಂಟೈನ್‌ ವೀಕ್‌ನಲ್ಲಿ ಕಿಸ್‌ ಡೇ ಆಚರಿಸುವುದೇಕೆ? ದಿನದ ಹಿನ್ನೆಲೆಯನ್ನು ತಿಳಿಯಿರಿ

ಬಟರ್‌ಫ್ಲೈ ಕಿಸ್:‌ ಬಟರ್‌ ಫ್ಲೈ ಕಿಸ್‌  ಅತ್ಯಂತ ಸಿಹಿ ಮುತ್ತು. ಅದು ಸಂಗಾತಿಗಳಿಬ್ಬರ ನಡುವಿನ ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸುತ್ತದೆ.

ಕಿವಿಗೆ ನೀಡುವ ಚುಂಬನ: ಇಯರ್‌ಲೋಬ್ ಕಿಸ್ ಪ್ರೀತಿಯ ಆಳವಾದ ಭಾವನೆಯನ್ನು ಸಂಕೇತಿಸುತ್ತದೆ. ಕಿವಿಗಳನ್ನು ಚುಂಬಿಸುವುದು ಸಂಗಾತಿಗಳಿಬ್ಬರ ನಡುವಿನ ಕಾಮ ಭಾವನೆಯನ್ನು ಪ್ರಚೋದಿಸುವ ಕ್ರಿಯೆಯಾಗಿದೆ. ಪ್ರೇಮಿಗಳು ತಮ್ಮ ಸಂಗಾತಿಗೆ ರೋಮ್ಯಾಂಟಿಕ್ ಭಾವನೆ ಮೂಡಿಸಲು ಈ ರೀತಿ ಕಿಸ್‌ ಮಾಡುತ್ತಾರೆ.

ಫ್ಲೈಯಿಂಗ್ ಕಿಸ್: ಯಾರಾದರೂ ನಿಮ್ಮನ್ನು ಮುಟ್ಟದೆ ದೂರದಿಂದ ಚುಂಬಿಸಿದರೆ, ಅದನ್ನು ಫ್ಲೈಯಿಂಗ್ ಕಿಸ್ ಎಂದು ಕರೆಯಲಾಗುತ್ತದೆ. ಅದರರ್ಥ ಅವರು ನಿಮ್ಮನ್ನು ಅಪಾರವಾಗಿ ಪ್ರೀತಿಸುತ್ತಾರೆ ಮತ್ತು ನಿಮ್ಮಿಂದ ದೂರವಿರಲು ಬಯಸುವುದಿಲ್ಲ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆ ಸ್ಟಾರ್ ನಟ ನನ್ನ ಜೀವನ ಹಾಳು ಮಾಡಿದ: ‘ಅಣ್ಣಯ್ಯ’ ನಟಿ ಆರೋಪ – Kannada News | Actress Aruna Irani talks about her relation with legendry actor Mehmood

ರವಿಚಂದ್ರನ್ (Ravichandran) ನಟಿಸಿರುವ ‘ಅಣ್ಣಯ್ಯ’ ಸಿನಿಮಾ ಯಾರಿಗೆ ನೆನಪಿಲ್ಲ. ಆ ಬ್ಲಾಕ್ ಬಸ್ಟರ್ ಸಿನಿಮಾನಲ್ಲಿ ನಾಯಕನಷ್ಟೆ ಪ್ರಮುಖವಾದ ಪಾತ್ರ ನಾಯಕನ ತಾಯಿಯದ್ದು. ಆ ಪಾತ್ರದಲ್ಲಿ ನಟಿಸಿದ್ದಿದ್ದು ಆಗಿನ ಸ್ಟಾರ್ ಬಾಲಿವುಡ್ ನಟಿ ಅರುಣಾ ಇರಾನಿ. ಬಾಲ ನಟಿಯಾಗಿ ಚಿತ್ರರಂಗ ಪ್ರವೇಶಿಸಿದ ಅರುಣಾ ಇರಾನಿ ಈ ವರೆಗೆ ಹಲವಾರು ಸಿನಿಮಾಗಳು ಮತ್ತು ಟಿವಿ ಶೋಗಳಲ್ಲಿ ನಟಿಸಿದ್ದಾರೆ. ಅರುಣಾ ಇರಾನಿ ಅವರ ಖಾಸಗಿ ಜೀವನ ಸಿನಿಮಾ ರೀತಿಯಲ್ಲಿಯೇ ಹಲವು ಏರಿಳಿತಗಳನ್ನು ಕಂಡಿದೆ. ಇದೀಗ ಅರುಣಾ ಇರಾನಿ ತಮ್ಮ ಖಾಸಗಿ ಜೀವನದ ಬಗ್ಗೆ ಮಾತನಾಡಿದ್ದು, ಬಾಲಿವುಡ್​​ನ ದಂತಕತೆಗಳಲ್ಲಿ ಒಬ್ಬರು ಎನ್ನಲಾಗುವ ಸ್ಟಾರ್ ನಟರೊಬ್ಬರು ತಮ್ಮ ಜೀವನ ರೂಪಿಸಿದ ಜೊತೆಗೆ ಜೀವನ ಹಾಳು ಮಾಡಿದರು ಎಂದಿದ್ದಾರೆ. ತಮ್ಮ ಜೀವನದ ಬಗ್ಗೆ ಹಲವು ವಿಷಯಗಳನ್ನು ಅರುಣಾ ಇರಾನಿ ಹಂಚಿಕೊಂಡಿದ್ದಾರೆ.

ಮೆಹಮೂದ್ ಅಲಿ, ಬಾಲಿವುಡ್​ನ ಹೆಸರಾಂತ ಹಾಸ್ಯನಟ. ಅದರ ಜೊತೆಗೆ ಸಿನಿಮಾ ನಿರ್ದೇಶನ, ನಿರ್ಮಾಣ ಮತ್ತು ಗಾಯನವನ್ನೂ ಮಾಡಿದ್ದಾರೆ. ಅರುಣಾ ಇರಾನಿ ಅವರು ಮೆಹಮೂದ್ ಅವರೊಟ್ಟಿಗೆ ಸಂಬಂಧ ಹೊಂದಿದ್ದರು. ಅರುಣಾ ಇರಾನಿ ಹೇಳಿಕೊಂಡಿರುವಂತೆ, ಅವರಿಗೆ ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳಲು ಮೆಹಮೂದ್ ಬಹಳ ಸಹಾಯ ಮಾಡಿದ್ದರು. ‘ನನಗೆ ಕೆಲಸವಿಲ್ಲದ ಸಮಯದಲ್ಲಿ ಮೆಹಮೂದ್ ಅವರು ತಮ್ಮ ಸಿನಿಮಾಗಳಲ್ಲಿ ಅವಕಾಶ ನೀಡಿದರು. ‘ಔಲಾದ್’, ‘ಹಮ್ಜೋಲಿ’ ಮತ್ತು ‘ನಯಾ ಜಮಾನಾ’ ಚಿತ್ರಗಳ ಮೂಲಕ ನನಗೆ ದೊಡ್ಡ ಬ್ರೇಕ್ ಸಿಕ್ಕಿತು. ಅವರು ನನ್ನ ಮೇಲೆ ನಂಬಿಕೆ ಇಟ್ಟಿದ್ದರು ಮತ್ತು ನನಗೊಬ್ಬ ಮಾರ್ಗದರ್ಶಕನಂತಿದ್ದರು’ ಎಂದು ಅರುಣಾ ನೆನಪಿಸಿಕೊಂಡಿದ್ದಾರೆ.

ಆದರೆ, ಈ ಯಶಸ್ಸಿನ ನಡುವೆಯೇ ಇವರಿಬ್ಬರ ಸಂಬಂಧದ ಬಗ್ಗೆ ಹಬ್ಬಿದ ಒಂದು ವದಂತಿ ಅರುಣಾ ಅವರ ಕೆರಿಯರ್‌ಗೆ ಕೊಡಲಿ ಪೆಟ್ಟು ನೀಡಿತು. ‘ನಾನು ಮತ್ತು ಮೆಹಮೂದ್ ಮದುವೆಯಾಗಿದ್ದೇವೆ ಎಂಬ ಸುದ್ದಿಯು ಚಿತ್ರರಂಗದಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿತು. ಆಗ ನಾನು ಯಾವುದೇ ಪತ್ರಿಕಾಗೋಷ್ಠಿ ನಡೆಸಿ ಇದನ್ನು ನಿರಾಕರಿಸುವಷ್ಟು ಧೈರ್ಯವಂತೆಯಾಗಿರಲಿಲ್ಲ. ಅಚ್ಚರಿಯೆಂದರೆ, ಮೆಹಮೂದ್ ಕೂಡ ಈ ಸುದ್ದಿಯನ್ನು ಎಲ್ಲೂ ನಿರಾಕರಿಸಲಿಲ್ಲ. ಇದರಿಂದಾಗಿ ಇತರ ನಿರ್ಮಾಪಕರು ನಾನು ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅಥವಾ ಮೆಹಮೂದ್ ಅಪ್ಪಣೆ ಇಲ್ಲದೆ ಕೆಲಸ ಮಾಡುವುದಿಲ್ಲ ಎಂದು ಭಾವಿಸಿದರು. ಹೀಗಾಗಿ ನನಗೆ ಬರುತ್ತಿದ್ದ ಹಲವು ಅವಕಾಶಗಳು ಕೈತಪ್ಪಿದವು’ ಎಂದು ಅವರು ನೋವಿನಿಂದ ಹೇಳಿದ್ದಾರೆ.

ಇದನ್ನೂ ಓದಿ:ಬಾಲಿವುಡ್​ನ ಸ್ಟಾರ್ ನಿರ್ದೇಶಕನ ಜೊತೆ ಅಲ್ಲು ಅರ್ಜುನ್ ಸಿನಿಮಾ?

ಒಂದು ಹಂತದಲ್ಲಿ ಅರುಣಾ ಇರಾನಿ ಅವರಿಗೆ ಕೆಲಸವೇ ಇಲ್ಲದಂತಾಯಿತು. ಮೆಹಮೂದ್ ಅವರೇ ನನ್ನನ್ನು ಕೆಲಸ ಕೊಡಿಸಿ ಬೆಳೆಸಿದರು ಮತ್ತು ಅವರಿಂದಲೇ ನಾನು ಕೆಲಸ ಕಳೆದುಕೊಳ್ಳುವಂತಾಯಿತು ಎಂಬುದು ಅರುಣಾ ಹೇಳಿದ್ದಾರೆ. ‘ಅವರು ನನ್ನನ್ನು ಬಹಿರಂಗವಾಗಿ ಶೋಷಿಸಿದರು, ಇದರಲ್ಲಿ ಅವರದ್ದು ಮಾತ್ರವೇ ತಪ್ಪು ಎಂದು ನಾನು ಹೇಳಲಾರೆ, ಆದರೆ ನನ್ನ ಹೆಸರನ್ನು ಬಳಸಿ ಅವರು ಪಡೆದ ಲಾಭ ಅಥವಾ ಹಬ್ಬಿದ ಸುಳ್ಳು ಸುದ್ದಿಯಿಂದ ನನ್ನ ಜೀವನದ ಹಲವು ವರ್ಷಗಳು ವ್ಯರ್ಥವಾದವು’ ಎಂದು ಅವರು ತಿಳಿಸಿದ್ದಾರೆ.

ನಾನು ಮೆಹಮೂದ್ ಅವರೊಟ್ಟಿಗೆ ಮದುವೆ ಆಗುವ ಇಚ್ಛೆ ವ್ಯಕ್ತಪಡಿಸಿದ್ದೆ. ಅವರೂ ಸಹ ನನ್ನನ್ನು ಮದುವೆ ಆಗುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಮದುವೆ ಆಗಲಿಲ್ಲ. ಅದು ನಂತರದ ದಿನಗಳಲ್ಲಿ ಒಳ್ಳೆಯದೇ ಆಯ್ತು. ಅದಾಗಲೇ ಎರಡು ಮದುವೆ ಆಗಿದ್ದ ಮೆಹಮೂದ್ ಅವರು ಮೂರನೇ ಮದುವೆ ಆಗಲು ಹಿಂಜರಿಯುತ್ತಿರಲಿಲ್ಲ. ಆದರೆ ಅದು ನನ್ನನ್ನು ಇನ್ನಷ್ಟು ಸಮಸ್ಯೆಗೆ, ಇಕ್ಕಟ್ಟಿಗೆ ಸಿಲುಕಿಸಬಹುದಾಗಿತ್ತು. ಆ ದಿನಗಳಲ್ಲಿ ನಾನು ಮೆಹಮೂದ್ ಅವರನ್ನು ಸೆಳೆಯಲು, ಖುಷಿ ಪಡಿಸಲು ಏನು ಬೇಕಾದರೂ ಮಾಡಲು ನಾನು ತಯಾರಿದ್ದೆ. ಬಡತನದಿಂದ ಬಂದಿದ್ದ ನಾನು ಹಣ, ಜನಪ್ರಿಯತೆ ನೋಡಿದ್ದೇ ಆ ಸಂದರ್ಭದಲ್ಲಿ ಅದು ನನ್ನ ಸ್ಥಿಮಿತಕಳೆದುಕೊಳ್ಳುವಂತೆ ಮಾಡಿತ್ತು’ ಎಂದಿದ್ದಾ ನಟಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನದಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೇರಿ ಇತಿಹಾಸ ಸೃಷ್ಟಿಸಿದ ಸಿಖ್ ಅಧಿಕಾರಿ ಹರ್ಚರಣ್ ಸಿಂಗ್ – Kannada News | Pakistan first Sikh officer Harcharan Singh promoted to Lieutenant Colonel rank

ಇಸ್ಲಮಾಬಾದ್, ಫೆಬ್ರವರಿ 12: ಪಾಕಿಸ್ತಾನಿ ಸೇನೆಯಲ್ಲಿ ಉನ್ನತ ಸ್ಥಾನ ಪಡೆಯುವ ಮೂಲಕ ಸಿಖ್ ಅಧಿಕಾರಿಯೊಬ್ಬರು ಇತಿಹಾಸ ನಿರ್ಮಿಸಿದ್ದಾರೆ. ಪಾಕಿಸ್ತಾನದ (Pakistan) ಸಿಖ್ ಸಮುದಾಯದ ಮೇಜರ್ ಹರ್ಚರಣ್ ಸಿಂಗ್ ಈಗ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಈ ಮೂಲಕ ಈ ಹುದ್ದೆಗೇರಿದ ಮೊದಲ ಸಿಖ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುರುನಾನಕ್ ಅವರ ಜನ್ಮಸ್ಥಳವಾದ ನಂಕಾನಾ ಸಾಹಿಬ್‌ನಲ್ಲಿ 1987ರಲ್ಲಿ ಜನಿಸಿದ ಹರ್ಚರಣ್ ಸಿಂಗ್ ಅವರಿಗೆ 2025ರಲ್ಲಿ ನಡೆದ ಬಡ್ತಿ ಮಂಡಳಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಲೆಫ್ಟಿನೆಂಟ್ ಕರ್ನಲ್ ಆಗಿ ಬಡ್ತಿ ನೀಡಲಾಯಿತು.

ಅಲ್ಪಸಂಖ್ಯಾತರು ಹಅನೇಕ ಸವಾಲುಗಳನ್ನು ಎದುರಿಸುವ ದೇಶವಾದ ಪಾಕಿಸ್ತಾನದಲ್ಲಿ ಹರ್ಚರಣ್ ಸಿಂಗ್ ಅವರ ಈ ಬಡ್ತಿಯು ಅರ್ಹತೆ ಆಧಾರಿತ ಒಂದು ದೊಡ್ಡ ಪ್ರಬಲ ಉದಾಹರಣೆಯಾಗಿದೆ. ಪಂಜಾಬ್‌ನ ಅಲ್ಪಸಂಖ್ಯಾತ ವ್ಯವಹಾರಗಳ ಪ್ರಾಂತೀಯ ಸಚಿವ ರಮೇಶ್ ಸಿಂಗ್ ಅರೋರಾ ಈ ಬಗ್ಗೆ ಮಾಹಿತಿ ನೀಡಿದ್ದು, “ಅನೇಕ ಕ್ರಿಶ್ಚಿಯನ್ನರು ಪಾಕಿಸ್ತಾನ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರೂ, ಯಾವುದೇ ಹಿಂದೂ ಅಥವಾ ಸಿಖ್ ಈ ಹಿಂದೆ ಈ ಉನ್ನತ ಹುದ್ದೆಗೆ ಅರ್ಹತೆ ಪಡೆದಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಿಂದ ವಲಸೆ ಬಂದ ದಲಿತ ಹಿಂದೂಗಳಿಗೆ ವಸತಿ ಕಲ್ಪಿಸಿ; ಸುಪ್ರೀಂ ಕೋರ್ಟ್ ಆದೇಶ

ಹರ್ಚರಣ್ ಸಿಂಗ್ 2007ರಲ್ಲಿ ತಮ್ಮ 20ನೇ ವಯಸ್ಸಿನಲ್ಲಿ ಕ್ಯಾಪ್ಟನ್ ಆಗಿ ಪಾಕಿಸ್ತಾನದ ಸಶಸ್ತ್ರ ಪಡೆಗಳನ್ನು ಸೇರಿದರು. ಅವರು ಆರ್ಡನೆನ್ಸ್ ಕಾರ್ಪ್ಸ್‌ನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇದು ಬಲೂಚ್ ರೆಜಿಮೆಂಟ್‌ನ 12ನೇ ಬೆಟಾಲಿಯನ್‌ಗೆ ವರ್ಗಾವಣೆಗೆ ಕಾರಣವಾಯಿತು. ಮೇಜರ್ ಹುದ್ದೆಯನ್ನು ಅಲಂಕರಿಸುವಾಗ ಅವರು ಅನೇಕ ಕಾರ್ಯಾಚರಣೆಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 6:02 pm, Thu, 12 February 26

Source link

Exit mobile version