ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ: ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಡಿಕೆಶಿ ಹೇಳಿಕೆ – Kannada News | DK Shivakumar Reacts after Mets Congress high command In Delhi about Karnataka Politics

ನವದೆಹಲಿ, (ಏಪ್ರಿಲ್ 23): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ನಡೆಯುತ್ತಿರುವ ಕೆಲ ರಾಜಕೀಯ ವಿದ್ಯಮಾನಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್  (DK Shivakumar) ದೆಹಲಿಗೆ ತೆರಳಿದ್ದು, ಅಲ್ಲಿ ಗೌಪ್ಯವಾಗಿ ವರಿಷ್ಠರನ್ನ ಭೇಟಿಯಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ದೆಹಲಿಗೆ ನಾನೇನು ಗಾಳಿ ಕುಡಿಯುವುದಕ್ಕೆ ಬಂದಿಲ್ಲ. ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ. ಯಾರನ್ನ ಭೇಟಿಯಾಗಿದ್ದೇನೆ ಎಂದು ಹಾಗೆ ಹೇಳಬಾರದು. ವರಿಷ್ಠರನ್ನ ಭೇಟಿಯಾಗಿ ಚರ್ಚೆ ಮಾಡಿದ್ದು, ನನ್ನ ಕೆಲಸ ನಾನು ಮಾಡುತ್ತಿರುತ್ತೇನೆ. ಪಕ್ಷದ ವಿಚಾರವಾಗಿಯೂ ವರಿಷ್ಠರ ಬಳಿ ಚರ್ಚಿಸಿದ್ದೇನೆ. ನನ್ನಂಥವನು ಬಹಿರಂಗವಾಗಿ ಮಾತನಾಡಲು ಆಗುತ್ತಾ? ಎಂದು ಹೇಳಿದ್ದಾರೆ.

ಇದರೊಂದಿಗೆ ಡಿಕೆ ಶಿವಕುಮಾರ್ ಯಾರನ್ನ ಭೇಟಿ ಮಾಡಿದ್ದು? ಯಾಕಾಗಿ-ಯಾವ ವಿಚಾರವಾಗಿ ಭೇಟಿಯಾಗಿ ಏನೆಲ್ಲಾ ಚರ್ಚೆ ನಡೆಯಿತು ಎನ್ನುವ ಗುಟ್ಟು ಬಿಟ್ಟುಕೊಟ್ಟಿಲ್ಲ. ಬದಲಾಗಿ ಪಕ್ಷದ ವಿಚಾರವಾಗಿಯೂ ವರಿಷ್ಠರ ಬಳಿ ಚರ್ಚಿಸಿದ್ದೇನೆ . ಆದ್ರೆ, ಯಾರನ್ನ ಭೇಟಿಯಾಗಿದ್ದೇನೆಂದು ಹಾಗೆ ಹೇಳಬಾರದು ಎಂದು ಹೇಳಿಕೆ ನೀಡಿರುವುದು ಭಾರೀ ಸಂಚಲನ ಮೂಡಿಸಿದೆ.

ಕಾಂಗ್ರೆಸ್ ಮುಸ್ಲಿಂ ನಾಯಕ ನಡುವಿನ ಅಸಮಾಧಾನ, ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ  ಡಿಕೆ ಶಿವಕುಮಾರ್  ರಹಸ್ಯವಾಗಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿದ್ದು, ನಾನಾ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಾಗಲಕೋಟೆ ಕಾರ್ಮಿಕರ ಖಾತೆಗೆ ಕೋಟಿ ಕೋಟಿ ಹಣ: ಮುಂದಾಗಿದ್ದೇನು ಗೊತ್ತಾ? – Kannada News | Online Trading Fraud: Workers’ Accounts Misused, Rs 2 Cr Scam Uncovered

ಬಾಗಲಕೋಟೆ, ಏಪ್ರಿಲ್​ 23: ಜಿಲ್ಲೆಯಲ್ಲಿ ಆನ್​​ಲೈನ್​ ಟ್ರೇಡಿಂಗ್ (Online Trading) ಹೆಸರಲ್ಲಿ ಮೇಲಿಂದ ಮೇಲೆ ವಂಚನೆಗಳು (Fraud) ನಡೆಯುತ್ತಿವೆ. ಸಾಮಾಜಿ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವಂಚನೆ ಮಾಡುತ್ತಿರುವುದು ಈಗಾಗಲೇ ಅನೇಕ ಬಾರಿ ನಡೆದಿದೆ. ಈಗ ಮತ್ತೊಬ್ಬರ ಖಾತೆಗಳನ್ನು ಬಳಸಿಕೊಂಡು ಕೋಟ್ಯಂತರ ರೂ ವಂಚನೆ ಬೆಳಕಿಗೆ ಬಂದಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಆನ್​​​ಲೈನ್​ ವಂಚನೆ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಇದೀಗ ಸುಣ್ಣದ ಬಟ್ಟಿ ಕಾರ್ಮಿಕರ ಖಾತೆಗಳನ್ನು ಬಳಸಿಕೊಂಡು ರಾಜಸ್ಥಾನದ ಮೂಲದ ವಂಚಕರು ಮೋಸ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮುಧೋಳ ಭಾಗದ ಸುಣ್ಣದ ಬಟ್ಟಿಯ ಹತ್ತಕ್ಕೂ ಅಧಿಕ ಕಾರ್ಮಿಕರ ಬ್ಯಾಂಕ್ ಖಾತೆಗಳನ್ನು ರಾಜಸ್ಥಾನದ ಮೂಲದ ಮನೋಜ್ ಪೋತದಾರ ಬಳಸಿಕೊಂಡು ವಂಚನೆ ಮಾಡಿದ್ದಾನೆ.

ಬರೋಬ್ಬರಿ 2 ಕೋಟಿಗೂ ಅಧಿಕ ಹಣ ವರ್ಗಾವಣೆ

ಮನೋಜ್ ಪೋತದಾರ ಅಲ್ಪಸ್ವಲ್ಪ ಹಣ ನೀಡಿ ಮಾರುತಿ ಎಂಬ ವ್ಯಕ್ತಿಯ ಕಡೆಯಿಂದ ಹತ್ತಕ್ಕೂ ಅಧಿಕ ಕಾರ್ಮಿಕರ ಖಾತೆಗಳನ್ನು ಪಡೆದಿದ್ದ. ಅದರ ಜೊತೆಗೆ ಫೋನ್ ನಂಬರ್​ ಕೂಡ ಪಡೆದು ತಾನೇ ಆ ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದ. ಆ ಮೂಲಕ ಬೇರೆಯವರಿಗೆ ಟ್ರೇಡಿಂಗ್ ಹೆಸರಲ್ಲಿ ಮೋಸ ಮಾಡಿ ಅದರಿಂದ ಬಂದ ಹಣವನ್ನು ಈ ಖಾತೆಗಳಿಗೆ ವರ್ಗಾಯಿಸಿ ಆ ಹಣವನ್ನು ಲೂಟಿ ಮಾಡಿದ್ದಾನೆ. ಬರೋಬ್ಬರಿ 2 ಕೋಟಿಗೂ ಅಧಿಕ ಹಣವನ್ನು ಹತ್ತಕ್ಕೂ ಅಧಿಕ ಜನ ಕಾರ್ಮಿಕರ ಖಾತೆಗೆ ವರ್ಗಾವಣೆಯಾಗಿತ್ತು. ಇತ್ತ ತಮ್ಮ ಖಾತೆಗೆ ಅಧಿಕ ಹಣ ಬಂದ ತಕ್ಷಣ ಕಾರ್ಮಿಕರು ಬಾಗಲಕೋಟೆ ಸಿಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಬಾಗಲಕೋಟೆ ಸಿಇಎನ್‌ ಪೊಲೀಸರು ಮನೋಜ್ ಪೋತದಾರ ಹಾಗೂ ಮಾರುತಿಯನ್ನ ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 410 ಕೋಟಿ ರೂಪಾಯಿ ಜಿಎಸ್‌ಟಿ ಹಗರಣ: ಜನರ ಆಧಾರ್, ಪಾನ್ ಕಾರ್ಡ್ ಬಳಸಿ 102 ಕೋಟಿ ತೆರಿಗೆ ಲೂಟಿ ಮಾಡಿದ ಕಿಲಾಡಿಗಳು!

ಟ್ರೇಡಿಂಗ್ ವಂಚನೆಯಲ್ಲಿ ಈ ಹಿಂದೆ ವೈದ್ಯರು, ಇಂಜಿನಿಯರ್​ಗಳು, ಶಿಕ್ಷಕರು ಸೇರಿದಂತೆ ಕೆಲ ಜನರು ಕೂಡ ಮೋಸ ಹೋದ ಪ್ರಕರಣಗಳಿವೆ. ಇದೀಗ ಕಾರ್ಮಿಕರ ಖಾತೆಗಳನ್ನು ಬಳಸಿಕೊಂಡು ವಂಚಿಸಲಾಗಿದೆ. ಸದ್ಯ ಈ ಕೃತ್ಯ ಸಾರ್ವಜನಿಕರಿಲ್ಲಿ ಆತಂಕ ಮೂಡಿಸಿದೆ.

ಕಠಿಣ ಶಿಕ್ಷೆಗೆ ಸಾರ್ವಜನಿಕರು ಆಗ್ರಹ

ಯಾವುದೇ ವ್ಯಕ್ತಿಗಳು ತಮ್ಮ ಖಾತೆಗಳನ್ನು ಬೇರೆಯವರಿಗೆ ನೀಡಬಾರದು. ಜೊತೆಗೆ ಅವುಗಳನ್ನು ನಿರ್ವಹಣೆ ಮಾಡುವುದಕ್ಕೆ ಅವಕಾಶ ಕೊಡಬಾರದು. ಮುಗ್ಧ ಜನರನ್ನು ತಮ್ಮ ವಂಚನೆಗೆ ಬಳಸಿಕೊಂಡು ಮೋಸ ಮಾಡುವ ಇಂತಹ ಕೃತ್ಯಕ್ಕೆ ಜನರು ಆಸ್ಪದ ನೀಡಬಾರದು, ಜೊತೆಗೆ ಪೊಲೀಸರು ಇಂತಹ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ: ದೇಣಿಗೆ ಕೊಡಿಸುವ ನೆಪದಲ್ಲಿ ವಂಚನೆ: ಎರಡು ದಿನದಲ್ಲೇ 2 ಕೋಟಿ ರೂ ಪಂಗನಾಮ

ಒಟ್ಟಿನಲ್ಲಿ ಟ್ರೇಡಿಂಗ್ ಹೆಸರಲ್ಲಿ ಮೇಲಿಂದ ಮೇಲೆ ಇಂತಹ ಕೃತ್ಯಗಳು ನಡೆಯುತ್ತಿದ್ದು, ಪೊಲೀಸರು ಇಂತಹ ಜಾಲವನ್ನು ಬೇರು ಸಮೇತ ಕಿತ್ತೆಸೆಯಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

MI vs CSK: ಐಪಿಎಲ್‌ನಲ್ಲಿ ದಾಖಲೆಯ ಐದನೇ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ – Kannada News | Sanju Samson’s Record 5th IPL Century Fuels CSK to 207 vs MI in IPL 2026 Match 33

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​​ಕೆ ತಂಡ 20 ಓವರ್​ಗಳಲ್ಲಿ 207 ರನ್ ಕಲೆಹಾಕಿತು. ತಂಡ ಇಷ್ಟು ಮೊತ್ತವನ್ನು ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ಈ ಆವೃತ್ತಿಯ ಎರಡನೇ ಶತಕವನ್ನು ಬಾರಿಸಿದರು. ಹಾಗೆಯೇ ಸಂಜು ಅವರ ಐಪಿಎಲ್ ವೃತ್ತಿಜೀವನದ ಐದನೇ ಶತಕವೂ ಆಗಿದ್ದು, ಈ ಮೂಲಕ ಸಂಜು ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಜಂಟಿಯಾಗಿ ಎರಡನೇ ಸ್ಥಾನಕ್ಕೇರಿದ್ದಾರೆ.

Source link

‘ಧುರಂಧರ್’ ಗೆದ್ದಿದ್ದಕ್ಕೆ ನಟ ರಾಕೇಶ್ ಬೇಡಿಗೆ 1 ಕೋಟಿ ರೂಪಾಯಿ ಬೋನಸ್ ಕೊಟ್ಟ ನಿರ್ಮಾಪಕರು – Kannada News | Rakesh Bedi gets massive bonus for Dhurandhar franchise success by Aditya Dhar

ಹಿಂದಿ ಚಿತ್ರರಂಗದ ಇತ್ತೀಚಿನ ಬ್ಲಾಕ್‌ಬಸ್ಟರ್ ಚಿತ್ರಗಳಾದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ (Dhurandhar 2) ಯಶಸ್ಸು ಇಡೀ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಲಾಭ ತಂದುಕೊಟ್ಟಿದೆ. ಈ ಪೈಕಿ ಹಿರಿಯ ನಟ ರಾಕೇಶ್ ಬೇಡಿ ಅವರ ನಟನೆಗೆ ಫಿದಾ ಆಗಿರುವ ನಿರ್ಮಾಪಕರು, ಅವರಿಗೆ ನಿಗದಿ ಆಗಿದ್ದ ಸಂಭಾವನೆಗಿಂತಲೂ ಹೆಚ್ಚಿನ ಮೊತ್ತವನ್ನು ಉಡುಗೊರೆಯಾಗಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಇದರಿಂದಾಗಿ ರಾಕೇಶ್ ಬೇಡಿ (Rakesh Bedi) ಅವರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ಬೋನಸ್ ಸಿಕ್ಕಂತೆ ಆಗಿದೆ.

ರಣವೀರ್ ಸಿಂಗ್ ನಾಯಕರಾಗಿ ನಟಿಸಿರುವ ಈ ಸ್ಪೈ ಥ್ರಿಲ್ಲರ್ ಸರಣಿಯಲ್ಲಿ ರಾಕೇಶ್ ಬೇಡಿ ಅವರು ಪಾಕಿಸ್ತಾನದ ಚಾಣಾಕ್ಷ ರಾಜಕಾರಣಿ ಜಮೀಲ್ ಜಮಾಲಿ ಎಂಬ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರ ಕಾಮಿಡಿ ಟೈಮಿಂಗ್ ಮತ್ತು ಗಂಭೀರ ನಟನೆಯ ಮಿಶ್ರಣ ಪ್ರೇಕ್ಷಕರಿಗೆ ಇಷ್ಟವಾಗಿದೆ. ವಿಶೇಷವೆಂದರೆ, ಅವರ ಸಂಭಾಷಣೆಗಳು ಸೋಶಿಯಲ್ ಮೀಡಿಯಾದಲ್ಲಿ ಮೀಮ್ಸ್‌ ಮೂಲಕ ಭಾರಿ ವೈರಲ್ ಆಗಿವೆ. ಇದು ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿತು.

‘ಬಾಲಿವುಡ್ ಹಂಗಾಮಾ’ ವರದಿಯ ಪ್ರಕಾರ, ರಾಕೇಶ್ ಬೇಡಿ ಅವರಿಗೆ ‘ಧುರಂಧರ್’ ಮತ್ತು ಅದರ ಸೀಕ್ವೆಲ್‌ಗಾಗಿ ಒಟ್ಟು 50 ಲಕ್ಷ ರೂಪಾಯಿ ಸಂಭಾವನೆಯನ್ನು ನಿಗದಿಪಡಿಸಲಾಗಿತ್ತು. ಆದರೆ, ಚಿತ್ರದ ಯಶಸ್ಸಿನ ನಂತರ, ನಿರ್ದೇಶಕ ಆದಿತ್ಯ ಧರ್ ಮತ್ತು ನಿರ್ಮಾಪಕ ಲೋಕೇಶ್ ಧರ್ ಅವರು ರಾಕೇಶ್ ಬೇಡಿ ಅವರಿಗೆ 1 ಕೋಟಿ ರೂಪಾಯಿಗಳ ಹೆಚ್ಚುವರಿ ಚೆಕ್ ಹಸ್ತಾಂತರಿಸಿದ್ದಾರೆ. ಅಂದರೆ, ಅವರು ಪಡೆದ ಸಂಭಾವನೆಗಿಂತ ಎರಡು ಪಟ್ಟು ಹೆಚ್ಚು ಮೊತ್ತವನ್ನು ಬೋನಸ್ ರೂಪದಲ್ಲಿ ನೀಡಲಾಗಿದೆ.

‘ಜಮೀಲ್ ಜಮಾಲಿ ಪಾತ್ರವನ್ನು ರಾಕೇಶ್ ಬೇಡಿ ಅವರು ಜೀವಿಸಿದ್ದಾರೆ. ಅವರ ಪರಿಶ್ರಮ ಮತ್ತು ಪಾತ್ರಕ್ಕೆ ಸಿಕ್ಕ ಪ್ರತಿಕ್ರಿಯೆಯನ್ನು ಕಂಡು ನಿರ್ಮಾಪಕರು ಈ ನಿರ್ಧಾರ ಕೈಗೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ ಎಂದು ವರದಿ ಆಗಿದೆ. ಆದಿತ್ಯ ಧರ್ ಅವರು ಕೇವಲ ಯಶಸ್ವಿ ನಿರ್ದೇಶಕ ಮಾತ್ರವಲ್ಲದೆ, ಉದಾರ ಮನಸ್ಸಿನ ನಿರ್ಮಾಪಕರೂ ಹೌದು ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ‘ಧುರಂಧರ್’ ಗೆದ್ದರೂ ರಣವೀರ್ ಸಿಂಗ್ ‘ಶಕ್ತಿಮಾನ್’ ಆಗಲು ಸಾಧ್ಯವಿಲ್ಲ: ಕಾರಣ ಏನು?

‘ಜಿಯೋ ಸ್ಟುಡಿಯೋಸ್’ ಮತ್ತು ‘B62 ಸ್ಟುಡಿಯೋಸ್’ ಜಂಟಿಯಾಗಿ ನಿರ್ಮಾಣ ಮಾಡಿದ ‘ಧುರಂಧರ್’ ಚಿತ್ರದಲ್ಲಿ ಅಕ್ಷಯ್ ಖನ್ನಾ, ಸಂಜಯ್ ದತ್, ಆರ್. ಮಾಧವನ್, ಅರ್ಜುನ್ ರಾಮ್​ಪಾಲ್ ಮುಂತಾದ ಘಟಾನುಘಟಿ ನಟರು ಕಾಣಿಸಿಕೊಂಡಿದ್ದರು. ಇದರ ಸೀಕ್ವೆಲ್ ಕೂಡ ಭರ್ಜರಿ ಕಲೆಕ್ಷನ್ ಮಾಡಿದೆ. ಎರಡೂ ಸಿನಿಮಾಗಳಿಂದ ವಿಶ್ವಾದ್ಯಂತ 3 ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಊಟವಾದ ತಕ್ಷಣ ಮಾಡುವ ಈ ತಪ್ಪುಗಳು ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು – Kannada News | Never make this mistake after eating

ಆರೋಗ್ಯಕರವಾಗಿರಬೇಕು, ಸದೃಢರಾಗಿರಬೇಕು ಎಂಬ ಕಾರಣಕ್ಕೆ ಪ್ರತಿಯೊಬ್ಬರೂ ಆರೋಗ್ಯಕ್ಕೆ ಆಹಾರವನ್ನು ಸೇವನೆ ಮಾಡುತ್ತಾರೆ, ಸಮಯಕ್ಕೆ ಸರಿಯಾಗಿ ಊಟ ಮಾಡುತ್ತಾರೆ. ಆರೋಗ್ಯಕ ಆಹಾರ ಸೇವನೆ ಮಾಡಿದರೂ, ಸಮಯಕ್ಕೆ ಸರಿಯಾಗಿ ಊಟ ಮಾಡಿದರೂ, ಊಟ ಮಾಡಿದ ತಕ್ಷಣ ಮಾಡುವ ಈ ಕೆಲವೊಂದು ತಪ್ಪುಗಳಿಂದಾಗಿ (after meals mistakes) ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಹೌದು ಊಟದ ಬಳಿಕ ಮಾಡುವ ಸಣ್ಣ ತಪ್ಪು ಕೆಲಸಗಳು ನಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಅಭ್ಯಾಸಗಳನ್ನು ಸಮಯಕ್ಕೆ ಸರಿಯಾಗಿ ಸರಿಪಡಿಸದಿದ್ದರೆ, ಜೀರ್ಣಾಂಗ ವ್ಯವಸ್ಥೆಯು ಕ್ರಮೇಣ ದುರ್ಬಲಗೊಳ್ಳಬಹುದು. ಹಾಗಿದ್ದರೆ ಊಟವಾದ ತಕ್ಷಣ ಯಾವ ತಪ್ಪುಗಳನ್ನು ಮಾಡಬಾರದು ಎಂಬುದನ್ನು ನೋಡೋಣ ಬನ್ನಿ.

ಊಟದ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡಬೇಡಿ:

ಊಟ ಮಾಡಿದ ತಕ್ಷಣ ಮಲಗುವುದು: ನೀವು ಮಾಡುವ ದೊಡ್ಡ ತಪ್ಪುಗಳಲ್ಲಿ ಇದು ಸಹ ಒಂದು.  ಊಟ ಮಾಡಿದ ತಕ್ಷಣ ಮಲಗಿದಾಗ, ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ, ಮತ್ತು ಇದರಿಂದಾಗಿ ನೀವು ಆಮ್ಲೀಯತೆ, ಗ್ಯಾಸ್ ಮತ್ತು ಹೊಟ್ಟೆ ಉಬ್ಬರದಂತಹ ಸಮಸ್ಯೆಗಳನ್ನು ಎದುರಿಸಬಹುದು. ಅಲ್ಲದೆ ಎದೆಯುರಿ ಸಮಸ್ಯೆ ಕೂಡ ಉಂಟಾಗಬಹುದು. ಆದ್ದರಿಂದ ಊಟವಾದ ಕನಿಷ್ಠ 30 ನಿಮಿಷಗಳ ಬಳಿಕವೇ ಮಲಗಿ.

ಚಹಾ ಅಥವಾ ಕಾಫಿ ಕುಡಿಯುವುದು: ಊಟವಾದ ತಕ್ಷಣ ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸ ಅನೇಕ ಜನರಿಗೆ ಇರುತ್ತದೆ. ಈ ತಪ್ಪು ಜೀರ್ಣಾಂಗ ವ್ಯವಸ್ಥೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಊಟವಾದ ನಂತರ ನೀವು ಚಹಾ ಅಥವಾ ಕಾಫಿ ಕುಡಿಯುವಾಗ, ಅವುಗಳಲ್ಲಿರುವ ಅಂಶಗಳು ದೇಹವು ಕಬ್ಬಿಣದ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ಇದು ರಕ್ತಹೀನತೆಗೆ ಕಾರಣವಾಗಬಹುದು. ನೀವು ಚಹಾ ಅಥವಾ ಕಾಫಿ ಕುಡಿಯಲೇಬೇಕಾದರೆ, ಊಟವಾದ ಬಳಿಕ ಕನಿಷ್ಠ 45 ನಿಮಿಷಗಳ ಕಾಲ ಕಾಯಿರಿ.

ಹೆಚ್ಚು ನೀರು ಕುಡಿಯುವುದು: ಊಟವಾದ ತಕ್ಷಣ ನೀವು ಹೆಚ್ಚು ನೀರು ಕುಡಿಯಬಾರದು. ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಹಾನಿಕಾರಕ. ಹೆಚ್ಚು ನೀರು ಕುಡಿಯುವುದರಿಂದ ನಿಮ್ಮ ಹೊಟ್ಟೆಯಲ್ಲಿರುವ ಜೀರ್ಣಕಾರಿ ರಸಗಳು ದುರ್ಬಲಗೊಳ್ಳುತ್ತವೆ, ಜೀರ್ಣಕ್ರಿಯೆಯ ಪ್ರಕ್ರಿಯೆಯು ನಿಧಾನಗೊಳ್ಳುತ್ತದೆ. ಇದನ್ನು ಪದೇ ಪದೇ ಮಾಡುವುದರಿಂದ ನಿಮ್ಮ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಊಟ ಮಾಡುವಾಗ ಸ್ವಲ್ಪ ನೀರು ಕುಡಿಯುವುದು ಒಳ್ಳೆಯದು, ಆದರೆ ಊಟವಾದ ತಕ್ಷಣ ಹೆಚ್ಚು ನೀರು ಕುಡಿಯುವುದನ್ನು ತಪ್ಪಿಸಬೇಕು.

ಇದನ್ನೂ ಓದಿ: ಮನುಷ್ಯನ ದೇಹದ ಯಾವ ಭಾಗ ಅತೀ ಕೊಳಕಾಗಿರುವುದು ಗೊತ್ತಾ?

ತಕ್ಷಣ ಸ್ನಾನ ಮಾಡುವುದು ಕೂಡ ತಪ್ಪು: ಊಟ ಮಾಡಿದ ತಕ್ಷಣ ಸ್ನಾನ ಮಾಡಬಾರದು. ಊಟ ಮಾಡಿದ ತಕ್ಷಣ ಸ್ನಾನ ಮಾಡುವುದರಿಂದ ಹೊಟ್ಟೆಯಿಂದ ರಕ್ತ ಪರಿಚಲನೆ ಚರ್ಮದ ಕಡೆಗೆ ಚಲಿಸುತ್ತದೆ. ಇದು ನಿಮ್ಮ ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ, ಜೀರ್ಣಕ್ರಿಯೆಗೆ ಅಡ್ಡಿಯಾಗುತ್ತದೆ. ವಿಶೇಷವಾಗಿ, ನೀವು ತಣ್ಣೀರಿನಲ್ಲಿ ಸ್ನಾನ ಮಾಡುವುದನ್ನು ತಪ್ಪಿಸಬೇಕು. ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ಊಟ ಮಾಡಿದ ಕನಿಷ್ಠ ಒಂದು ಗಂಟೆಯ ನಂತರವೇ ಸ್ನಾನ ಮಾಡಬೇಕು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ – Kannada News | West Bengal Assembly Elections PM Narendra Modi holds massive roadshow in Howrah

ಹೌರಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಚುನಾವಣಾ ಪ್ರಚಾರದ ಸಲುವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಂಗಾಳದ ಹೌರಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಬಿಜೆಪಿ ಅಭ್ಯರ್ಥಿಗಳ ಜೊತೆ ರೋಡ್ ಶೋ ನಡೆಸಿದ ಮೋದಿಯವರನ್ನು ನೋಡಲು ಜನಸಾಗರವೇ ನೆರೆದಿತ್ತು. ಈ ವೇಳೆ ಪ್ರಧಾನಿ ಮೋದಿಯವರ ಮುಖವಿರುವ ಮಾಸ್ಕ್ ಧರಿಸಿದ್ದ ಜನರು ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಇದಕ್ಕೂ ಮುನ್ನ ಮಥುರಾಪುರದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಟಿಎಂಸಿ ಬಂಗಾಳದ ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡಿದೆ ಎಂದು ಆರೋಪಿಸಿದರು.

‘ಭಾರತ್ ಮಾತಾ ಕಿ ಜೈ’, ‘ಜೈ ಶ್ರೀರಾಮ್’ ಮತ್ತು ಬಿಜೆಪಿಯ ಪಶ್ಚಿಮ ಬಂಗಾಳ ಚುನಾವಣಾ ಘೋಷಣೆಯಾದ ‘ಪಲ್ಟಾನೋ ದರ್ಕಾರ್, ತೈ ಬಿಜೆಪಿ ಸರ್ಕಾರ್’ (ಬದಲಾವಣೆ ತರಲು ಬಿಜೆಪಿ ಸರ್ಕಾರ ಬೇಕು) ಘೋಷಣೆಗಳ ನಡುವೆ ಕೇಸರಿ ಬಣ್ಣದ ಟ್ರಕ್‌ನ ಮೇಲಿನಿಂದ ಪ್ರಧಾನಿ ಮೋದಿ ಜನಸಮೂಹದತ್ತ ಕೈ ಬೀಸಿದರು. ಸಾವಿರಾರು ಜನರು ಬೀದಿಗಳಲ್ಲಿ ಸಾಲುಗಟ್ಟಿ ನಿಂತಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಲಬುರಗಿ ಮಕ್ಕಳ ಅಪಹಾಸ್ಯವೇಕೆ? ವಿಪಕ್ಷಗಳಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು! – Kannada News | Priyank Kharge Hits back at JDS And BJP for Mocks kalaburagi Last place In SSLC Results 2026

ಬೆಂಗಳೂರು, (ಏಪ್ರಿಲ್ 23): ಎಸ್‌ಎಸ್‌ಎಲ್‌ಸಿ ಫಲಿತಾಂಶ (SSLC Results 2026) ಪ್ರಕಟವಾಗಿದ್ದು, ಕಳೆದ ವರ್ಷ 80.04ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ ಈ ವರ್ಷ ಶೇ‌.94.01ರಷ್ಟು ಫಲಿತಾಂಶದೊಂದಿಗೆ ಶೇ.14ರಷ್ಟು ಫಲಿತಾಂಶ ಪ್ರಮಾಣ ಹೆಚ್ಚಳವಾಗಿದೆ. ಇನ್ನು ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಅಂದರೆ 35ನೇ ಸ್ಥಾನದಲ್ಲಿದೆ. ಆದರೂ ಕಳೆದ ವರ್ಷಕ್ಕಿಂತ ಶೇ.28.17ರಷ್ಟು ಫಲಿತಾಂಶದಲ್ಲಿ ಏರಿಕೆ ಕಂಡಿದೆ. ಇನ್ನು ಕಲಬುರಗಿ (Kalaburagi) ಕೊನೆ ಸ್ಥಾನದಲ್ಲಿರುವುದನ್ನೇ ಅಸ್ತ್ರ ಮಾಡಿಕೊಂಡ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ (Priyank Kharge) ವಿರುದ್ಧ ಮುಗಿಬಿದ್ದಿವೆ. ಇನ್ನು ಇದಕ್ಕೆ ಖರ್ಗೆ ಸಹ ತಿರುಗೇಟು ನೀಡಿದ್ದಾರೆ. ಬಿಜೆಪಿ ಕಲಬುರಗಿಯ ವಿದ್ಯಾರ್ಥಿಗಳನ್ನು ಅವಮಾನಿಸುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ನಿಮಗೆ ಸಮಸ್ಯೆ ಇದ್ರೆ ನನ್ನ ನಿಂದಿಸಿ, ಮಕ್ಕಳ ಅಪಹಾಸ್ಯವೇಕೆ? ಎಂದು ಪ್ರಶ್ನಿಸಿದ್ದಾರೆ.

ಎಸ್​​ಎಸ್​​ಎಲ್​ಸಿ ಪರೀಕ್ಷೆ ಫಲಿತಾಂಶದಲ್ಲಿ ಕಲಬುರಗಿ ಕೊನೆಯ ಅಂದರೆ 35 ಸ್ಥಾನ ಪಡೆದುೊಂಡಿದ್ದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ವ್ಯಂಗ್ಯ ಮಾಡಿದ್ದು, ಇದಕ್ಕೆ ಪ್ರಿಯಾಂಕ್ ಖರ್ಗೆ ಸಹ ಸಾಮಾಜಿಕ ತಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಕಲಬುರಗಿಯ ವಿದ್ಯಾರ್ಥಿಗಳನ್ನು ಅವಮಾನಿಸ್ತಿದೆ. ಅವರ ಆತ್ಮಸ್ಥೈರ್ಯ, ಆತ್ಮವಿಶ್ವಾಸ ಅಡಗಿಸುವ ಪ್ರಯತ್ನ. ನಿಮಗೆ ಸಮಸ್ಯೆ ಇದ್ರೆ ನನ್ನ ನಿಂದಿಸಿ, ಮಕ್ಕಳ ಅಪಹಾಸ್ಯವೇಕೆ? ಕಲಬುರಗಿಯ ಮಕ್ಕಳನ್ನು ಅಪಹಾಸ್ಯ ಮಾಡ್ತಿರುವುದೇಕೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಕಲಬುರಗಿಗೆ ಕೊನೇ ಸ್ಥಾನ: ಪ್ರಿಯಾಂಕ್​​ ಖರ್ಗೆ ಗುರಿಯಾಗಿಸಿ ಬಿಜೆಪಿ, ಜೆಡಿಎಸ್​​ ವ್ಯಂಗ್ಯ

ಕಲಬುರಗಿ ಜಿಲ್ಲೆಯ ಶೇಕಡಾವಾರು ಫಲಿತಾಂಶ 85%ರಷ್ಟಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಶೈಕ್ಷಣಿಕ ಗುಣಮಟ್ಟದ ಸುಧಾರಿಸಿಕೊಳ್ಳುವ ಶಕ್ತಿ ಮಕ್ಕಳಲ್ಲಿದೆ. ಆದರೆ ಪ್ರತಿ ಬಾರಿಯೂ ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸ್ತಿರುವ ಬಿಜೆಪಿ ರಾಜಕೀಯ ದಿವಾಳಿತನದಿಂದ ಕೂಡಿದೆ. ಕಲಬುರಗಿ ಬಿಜೆಪಿಗರ ಮಕ್ಕಳಿಗೂ ‘ದಡ್ಡರು ಎಂಬ ಹಣೆಪಟ್ಟಿಯನ್ನು ಬಿಜೆಪಿ ಕಟ್ಟುತ್ತಿದೆಯೇ? ಎಂದು ತಿರುಗೇಟು ನೀಡಿದ್ದಾರೆ.

ಕಲಬುರಗಿ ಕೊನೆ ಸ್ಥಾನದಲ್ಲಿದ್ರೂ ಸುಧಾರಣೆ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆ ಕೊನೆ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ ಮೊದಲ, ಎರಡನೇ ಸ್ಥಾನದಲ್ಲಿವೆ. ಇನ್ನು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿಯೂ ಕಲಬುರಗಿ 29ನೇ ಸ್ಥಾನದಲ್ಲಿತ್ತು. ಆದ್ರೆ, ಎಸ್​​ಎಸ್​​ಎಲ್​​ಸಿ ಫಲಿತಾಂಶದಲ್ಲಿ ಸುಧಾರಣೆ ಕಂಡಿದೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದರೂ ಕಳೆದ ವರ್ಷಕ್ಕಿಂತ ಈ ಬಾರಿ ಶೇ.28.17ರಷ್ಟು ಫಲಿತಾಂಶದಲ್ಲಿ ಏರಿಕೆ ಕಂಡಿದೆ.

ಇನ್ನು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಶಿಕ್ಷಣ ಸಚಿವ ಮಧುಬಂಗಾರಪ್ಪ, ಉತ್ತರ ಕರ್ನಾಟಕ ಭಾಗದಲ್ಲಿ ನಾವು ಹೆಚ್ಚು ಶ್ರಮ ಹಾಕಿದ ಪರಿಣಾಮ ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಸುಧಾರಣೆಯಾಗಿದೆ. ಜಿಲ್ಲೆಯ ಅಧಿಕಾರಿಗಳು ವಿಶೇಷ ಕ್ಲಾಸ್, ಕೆಲವು ನಿಯಮಗಳನ್ನು ರೂಪಿಸುವ ಮೂಲಕ ಫಲಿತಾಂಶ ಸುಧಾರಣೆಗೆ ಕಾರಣವಾಗಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 8:29 pm, Thu, 23 April 26

Source link

IPL 2026: ಬೆಂಗಳೂರಿನಲ್ಲಿ ಆರ್​​ಸಿಬಿಗೆ ಕೊನೆಯ ಲೀಗ್ ಪಂದ್ಯ; ಎದುರಾಳಿ ಯಾರು ಗೊತ್ತಾ? – Kannada News | IPL 2026: RCB vs GT Match 34 Preview – Last Bengaluru League Game at Chinnaswamy

ಐಪಿಎಲ್ 2026 ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಇದಾಗಿದೆ. ಹಾಗೆಯೇ ಆರ್​ಸಿಬಿ ತನ್ನ ಮೊದಲ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಹೀಗಾಗಿ ಈ ಪಂದ್ಯ ಆರ್​​ಸಿಬಿ ಅಭಿಮಾನಿಗಳಿಗೆ ಬಹಳಷ್ಟು ವಿಶೇಷವಾಗಿದೆ. ವಾಸ್ತವವಾಗಿ ಆರ್​ಸಿಬಿ ಈ ಆವೃತ್ತಿಯಲ್ಲಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲ ತವರು ಮೈದಾನವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 5 ಪಂದ್ಯಗಳನ್ನು ಆಡಲಿದ್ದು, ಎರಡನೇ ತವರು ಮೈದಾನದ ರಾಯ್​ಪುರದಲ್ಲಿ ಉಳಿದ ಎರಡು ಪಂದ್ಯಗಳನ್ನು ಆಡಲಿದೆ. ಹಾಗಾಗಿ ಬೆಂಗಳೂರಿನಲ್ಲಿ ಆರ್​ಸಿಬಿಗೆ ನಾಳಿನ ಪಂದ್ಯ ಕೊನೆಯ ಲೀಗ್ ಪಂದ್ಯವಾಗಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಏಪ್ರಿಲ್ 24 ರಂದು ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಸಂಜೆ 7:30 ಕ್ಕೆ ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಹಾಟ್ ಸ್ಟಾರ್​​ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಉಭಯ ತಂಡಗಳು

ಆರ್​ಸಿಬಿ ಪೂರ್ಣ ತಂಡ: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಾಟಿದಾರ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್, ಜೋಶ್ ಹೇಜಲ್​ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜಾಕೋಬ್ ಡಫಿ,

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತ ಅಮೆರಿಕದ ಉತ್ತಮ ಸ್ನೇಹಿತ; ವಿವಾದದ ಬಳಿಕ ತೇಪೆ ಹಚ್ಚಿದ ಟ್ರಂಪ್ – Kannada News | India is a Great Country; Donald Trump’s Damage Control After Hell Hole Row

ವಾಷಿಂಗ್ಟನ್, ಏಪ್ರಿಲ್ 23: ಭಾರತ ಮತ್ತು ಚೀನಾದಂತಹ ದೇಶಗಳಿಗೆ 9 ತಿಂಗಳಾದ ಬಳಿಕ ಅಮೆರಿಕಕ್ಕೆ ಬರುವ ಮಹಿಳೆಯರು ಇಲ್ಲೇ ಬಂದು ಮಗುವನ್ನು ಹೆರುತ್ತಾರೆ. ಆಗ ಆ ಮಗುವಿಗೆ ಇಲ್ಲಿನ ಪೌರತ್ವ ಸಿಗುತ್ತದೆ. ನಂತರ ಭಾರತ ಮತ್ತು ಚೀನಾದಂತಹ ನರಕಗಳಿಂದ ತಮ್ಮ ಸಂಬಂಧಿಕರನ್ನು ಇಲ್ಲಿಗೆ ಕರೆದುಕೊಂಡು ಬರುತ್ತಾರೆ. ಅಮೆರಿಕದ ಜನ್ಮಸಿದ್ಧ ಪೌರತ್ವಕ್ಕಾಗಿ ಇಲ್ಲಿಗೆ ವಲಸೆ ಬರುತ್ತಾರೆ ಎಂದು ಅಮೆರಿಕದ ಪಾಡ್​ಕಾಸ್ಟ್​ನಲ್ಲಿ ರಾಜಕೀಯ ವಿಶ್ಲೇಷಕ ಹಾಗೂ ರೇಡಿಯೋ ಜಾಕಿ ಮೈಕಲ್ ಸ್ಯಾವೇಜ್ ವಿವಾದಾತ್ಮಕವಾಗಿ ಮಾತನಾಡಿದ್ದರು. ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಆ ಹೇಳಿಕೆಗೆ ತನ್ನ ಸಹಮತ ಸೂಚಿಸಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಡೊನಾಲ್ಡ್ ಟ್ರಂಪ್ ಭಾರತ ಅತ್ಯುತ್ತಮ ದೇಶ ಎಂದಿದ್ದಾರೆ.

ತನ್ನ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿರುವ ಡೊನಾಲ್ಡ್ ಟ್ರಂಪ್ ಭಾರತವನ್ನು ಹೊಗಳಿದ್ದಾರೆ. ಭಾರತ ದೇಶವನ್ನು ಮುನ್ನಡೆಸುವ ನನ್ನ ಬಹಳ ಉತ್ತಮ ಸ್ನೇಹಿತ ಅಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂಘರ್ಷದ ಹಾದಿಯಲ್ಲಿ ಬಲಿಷ್ಠ ರಾಷ್ಟ್ರಗಳು: ಇರಾನ್ ಹಠಕ್ಕೆ ಅಮೆರಿಕ ಕೆಂಡಾಮಂಡಲ, ಟ್ರಂಪ್‌ನಿಂದ ಖಡಕ್ ವಾರ್ನಿಂಗ್

ನವದೆಹಲಿಯಲ್ಲಿರುವ ಯುಎಸ್ ರಾಯಭಾರ ಕಚೇರಿಯ ವಕ್ತಾರ ಕ್ರಿಸ್ಟೋಫರ್ ಎಲ್ಮ್ಸ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಮೆರಿಕದ ನಾಯಕ ಟ್ರಂಪ್ ಭಾರತದ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ, ಭಾರತವನ್ನು ಒಂದು ಉತ್ತಮ ರಾಷ್ಟ್ರ ಎಂದು ಕರೆದಿದ್ದಾರೆ. ಅವರು ಭಾರತದ ಪ್ರಧಾನಿಯೊಂದಿಗೆ ವೈಯಕ್ತಿಕ ಸ್ನೇಹವನ್ನು ಹಂಚಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್ ವಿರುದ್ಧದ ದಾಳಿಗೆ ಸದ್ಯಕ್ಕೆ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಟ್ರಂಪ್

ಯುನೈಟೆಡ್ ಸ್ಟೇಟ್ಸ್‌ನ ಜನ್ಮಸಿದ್ಧ ಪೌರತ್ವ ಕಾನೂನಿನಲ್ಲಿ ಬದಲಾವಣೆಗಳಿಗೆ ಕರೆ ನೀಡುವ ಜನಾಂಗೀಯ ವಾಗ್ದಾಳಿಯಲ್ಲಿ ರೇಡಿಯೋ ಜಾಕಿ ಸ್ಯಾವೇಜ್ ಏಷ್ಯಾದ 2 ರಾಷ್ಟ್ರಗಳ ಜನರು 9ನೇ ತಿಂಗಳಲ್ಲಿ ಮಗುವನ್ನು ಹೆರುವ ಸಲುವಾಗಿಯೇ ಯುಎಸ್‌ಗೆ ಬರುತ್ತಾರೆ. ಇಲ್ಲಿನ ಕಾನೂನು ಅವರನ್ನು ಕೂಡಲೇ ಅಮೆರಿಕದ ನಾಗರಿಕರನ್ನಾಗಿ ಮಾಡುತ್ತದೆ ಎಂದು ಆರೋಪಿಸಿದ್ದರು. ಅಲ್ಲದೆ, ಭಾರತೀಯ ಮತ್ತು ಚೀನೀ ವಲಸಿಗರನ್ನು “ಲ್ಯಾಪ್‌ಟಾಪ್‌ಗಳನ್ನು ಹೊಂದಿರುವ ದರೋಡೆಕೋರರು” ಎಂದು ಟೀಕಿಸಿದ್ದರು. ಈ ವಿಡಿಯೋವನ್ನು ಡೊನಾಲ್ಡ್ ಟ್ರಂಪ್ ಮರು-ಪೋಸ್ಟ್ ಮಾಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 8:44 pm, Thu, 23 April 26

Source link

ಲಂಗ್ಸ್ ಡಿಟಾಕ್ಸ್ ನಿಜವಾಗಿಯೂ ಶ್ವಾಸಕೋಶವನ್ನು ಕ್ಲೀನ್ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | How to Cleanse Lungs Naturally at Home: Foods and Exercises

ಇಂದಿನ ಕಾಲದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಮತ್ತು ಧೂಮಪಾನದಿಂದ ಲಂಗ್ಸ್ (Lungs) ಅಂದರೆ ಶ್ವಾಸಕೋಶದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಲಂಗ್ಸ್ ಆರೋಗ್ಯ ಕಾಪಾಡಿಕೊಳ್ಳಲು ಹಲವಾರು ರೀತಿಯ ಸಲಹೆಗಳನ್ನು ಅನುಸರಿಸುವುದು ಅನಿವಾರ್ಯವಾದರೂ ಕೂಡ ಅದರ ಬಗ್ಗೆ ತಿಳಿಯದೆಯೇ ಮಾಡುವುದು ತಪ್ಪು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ಲಂಗ್ಸ್ ಡಿಟಾಕ್ಸ್” ಎಂಬ ಹೆಸರಿನಲ್ಲಿ ಹಲವು ಪಾನೀಯಗಳು ಮತ್ತು ಉತ್ಪನ್ನಗಳು ಪ್ರಚಾರವಾಗುತ್ತಿವೆ. ಆದರೆ ಇದು ನಿಜವಾಗಿಯೂ ಶ್ವಾಸಕೋಶವನ್ನು ಡಿಟಾಕ್ಸ್ ಮಾಡುತ್ತದೆಯೇ, ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ತಜ್ಞರ ಪ್ರಕಾರ, ಯಾವುದೇ ವಿಶೇಷ ಡಿಟಾಕ್ಸ್ ಡ್ರಿಂಕ್ ಮೂಲಕ ಶ್ವಾಸಕೋಶಗಳನ್ನು ಸ್ವಚ್ಛಗೊಳಿಸಲು ಸಾಧ್ಯವಿಲ್ಲ. ಇವು ಸ್ವಾಭಾವಿಕವಾಗಿ ತಮ್ಮನ್ನು ತಾವು ಶುದ್ಧಗೊಳಿಸಿಕೊಳ್ಳುವ ಸಾಮರ್ಥ್ಯ ಹೊಂದಿವೆ. ಆದರೆ ಲಂಗ್ಸ್ ಆರೋಗ್ಯ ಕಾಪಾಡಲು ಧೂಮಪಾನವನ್ನು ಸಂಪೂರ್ಣವಾಗಿ ನಿಲ್ಲಿಸುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದಲ್ಲಿ ಧೂಮಪಾನದಿಂದ ಉರಿಯೂತ ಉಂಟಾಗುತ್ತದೆ ಮತ್ತು ದೀರ್ಘಕಾಲದಲ್ಲಿ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: Lung Health: ನಿಮ್ಮ ಶ್ವಾಸಕೋಶ ಆರೋಗ್ಯವಾಗಿರಲು ನಿಯಮಿತವಾಗಿ ಈ ಹಣ್ಣುಗಳ ಸೇವನೆ ಮಾಡಿ

ವಾಯುಮಾಲಿನ್ಯದಿಂದ ರಕ್ಷಣೆ ಹೇಗೆ?

ಇಂದಿನ ದಿನಗಳಲ್ಲಿ ಕೆಟ್ಟ ಗಾಳಿಯ ಗುಣಮಟ್ಟವೂ ಲಂಗ್ಸ್ ಆರೋಗ್ಯಕ್ಕೆ ಅಪಾಯಕಾರಿಯಾಗಿದೆ. ಧೂಳು ಮತ್ತು ಮಾಲಿನ್ಯದ ಸೂಕ್ಷ್ಮ ಕಣಗಳು ಉಸಿರಾಟದ ಮೂಲಕ ಒಳನುಗ್ಗಿ ಹಾನಿ ಮಾಡುತ್ತವೆ. ಇದರಿಂದ ತಪ್ಪಿಸಿಕೊಳ್ಳಲು ಧೂಳು ಇರುವ ಸ್ಥಳಗಳಿಗೆ ಹೋಗುವುದನ್ನು ಕಡಿಮೆ ಮಾಡಿ, ಅಗತ್ಯವಿದ್ದರೆ N-95 ಮಾಸ್ಕ್ ಬಳಸುವುದು ಉತ್ತಮ. AQI ಹೆಚ್ಚಿರುವ ದಿನಗಳಲ್ಲಿ ಹೊರಗೆ ವಾಕಿಂಗ್ ಮತ್ತು ವ್ಯಾಯಾಮ ಮಾಡುವುದನ್ನು ತಪ್ಪಿಸಿ, ಅದರ ಬದಲು ಮನೆಯಲ್ಲೇ ವ್ಯಾಯಾಮ ಮಾಡುವುದು ಸೂಕ್ತ. ಅದರ ಜೊತೆಗೆ ಪ್ರತಿದಿನ ಕನಿಷ್ಠ 30 ನಿಮಿಷಗಳಷ್ಟು ವಾಕಿಂಗ್, ಜಾಗಿಂಗ್ ಅಥವಾ ಯೋಗ ಮಾಡುವುದರಿಂದ ಲಂಗ್ಸ್ ಆರೋಗ್ಯ ಚೆನ್ನಾಗಿರುತ್ತದೆ. ಜೊತೆಗೆ ಹಣ್ಣು ಮತ್ತು ಹಸಿರು ತರಕಾರಿಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದು ಆರೋಗ್ಯಕ್ಕೆ ಸಹಾಯಕ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version