Headlines

ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ – Kannada News | Union Minister HD Kumaraswamy Talks about Kannadigas Who stuck In dubai for Israel And Iran War

ಮೈಸೂರು, (ಮಾರ್ಚ್ 02): ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್ ಆಗಿದ್ದರಿಂದ ಕುವೈತ್, ದುಬೈ, ಅಬುದಾಬಿ ಸೇರಿದಂತೆ ಇತರೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಕನ್ನಡಿಗರು ಸಿಲುಕಿದ್ದು, ಇವರ ರಕ್ಷಣೆಗೆ ರಾಜ್ಯ ಸರ್ಕಾರದವೂ ಸಹ ಇನ್ನಿಲ್ಲದ ಕಸರತ್ತು ನಡೆಸಿದೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತನಾಡಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ ಎಂದಿದ್ದಾರೆ. ಇಂದು…

Read More

ಪ್ರಭಾಕರ್ ಕೋರೆ ಸೇರಿ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ – Kannada News | Prabhakar kore, shubha venkatesha iyengar And others Total Five Karnataka achievers Gets padma Shre award 2026 from droupadi murmu

ನವದೆಹಲಿ, (ಜೂನ್ 23): ನವದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು (droupadi murmu) ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ ‘ಪದ್ಮ ಪ್ರಶಸ್ತಿ 2026’  (padma award 2026 ) ಪ್ರದಾನ ಮಾಡಿದರು. ಇನ್ನು ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕೆಎಲ್‌ಇ ಸಂಸ್ಥೆಯ ಮೂಲಕ ಲಕ್ಷಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶಿಕ್ಷಣ ಮತ್ತು ಆಸ್ಪತ್ರೆಗಳ ಮೂಲಕ ಬಡವರಿಗೆ ಅತ್ಯಾಧುನಿಕ ಉಚಿತ, ಕಡಿಮೆ ವೆಚ್ಚದ…

Read More

ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಿದ್ರೆ ಒಳ್ಳೆಯದು: ವಿಜಯೇಂದ್ರಗೆ ಹರಿಪ್ರಸಾದ್ ತಿರುಗೇಟು – Kannada News | It Would Be Better If He Spoke About the Cases Against His Leaders: BK Hariprasad sparks Vijayendra

ಬೆಂಗಳೂರು, ಜುಲೈ 10: ಸೋನಿಯಾ ಗಾಂಧಿ ಮೇಲೆ ಯಾವುದೇ ಪ್ರಕರಣಗಳಿಲ್ಲವೇ ಎಂದು ಪ್ರಶ್ನಿಸುವ ಮೊದಲು, ಚೆಕ್ ಮೂಲಕ ಲಂಚ ಪಡೆದು ಜೈಲಿಗೆ ಹೋಗಿದ್ದ ಬಿಎಸ್​ ಯಡಿಯೂರಪ್ಪ ಇತಿಹಾಸವನ್ನು ನೆನಪಿಸಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​​ ತಿರುಗೇಟು ನೀಡಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿವೈ ವಿಜಯೇಂದ್ರ ಮಾಡಿರುವ ಟೀಕೆಗಳಿ ಬಗ್ಗೆ ಮಾತನಾಡಿದ ಅವರು, ವಿಜಯೇಂದ್ರರನ್ನ ಬೇಬಿ ಯಡಿಯೂರಪ್ಪ ಎಂದು ಕರೆದಿದ್ದಾರೆ. ತಮ್ಮ ನಾಯಕರ ಮೇಲಿನ ಆರೋಪಗಳಿಗೆ ಬೇಬಿ ಯಡಿಯೂರಪ್ಪ…

Read More

ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ ಕಿಡ್ನಾಪ್: 4.25 ಲಕ್ಷ ಸುಲಿಗೆ ಮಾಡಿದ ಗ್ಯಾಂಗ್ ಪೊಲೀಸರ ವಶಕ್ಕೆ! – Kannada News | Muslim Baba Kidnapped and Extorted of Rs 4.25 Lakh in Bengaluru; Four Arrested

ಆರೋಪಿಗಳಾದ ಆರಿಫ್, ಆದಿಲ್, ಖಾದಿರ್, ಇಮ್ರಾನ್ ಬೆಂಗಳೂರು, ಜುಲೈ 10: ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ​ ಒಬ್ಬರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರೋಬ್ಬರಿ 4.25 ಲಕ್ಷ ರೂಪಾಯಿ ದೋಚಿದ್ದ ನಾಲ್ವರು ಕಿಡ್ನಾಪರ್ಸ್‌ಗಳನ್ನು (Kidnap) ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.ತುಮಕೂರು ಮೂಲದ ಆರಿಫ್ ಮತ್ತು ಆದಿಲ್, ಚಿಕ್ಕಬಾಣಾವರದ ಇಮ್ರಾನ್ ಹಾಗೂ ಆರ್.ಟಿ. ನಗರದ ಕಾದೀರ್ ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಯಲಹಂಕದಲ್ಲಿ ವಾಸವಾಗಿರುವ ಬಾಬಾ​ ಮೊಹಮ್ಮದ್ ತಾರಿಕ್ ಹುಸೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ…

Read More

ಮಳೆಗೆ ಬೆಂಗಳೂರಲ್ಲಿ ಸಾಲು ಸಾಲು ಅನಾಹುತ: ವಾಹನ ಸವಾರರೇ ಈ ರಸ್ತೆಗಳಲ್ಲಿ ಸಂಚರಿಸುವ ಮುನ್ನ ಗಮನಿಸಿ – Kannada News | Bengaluru Rain Chaos:Flooded Underpasses and Fallen Trees Disrupt Traffic

ಮಳೆಯಿಂದಾದ ಅನಾಹುತಗಳುImage Credit source: Tv9 Kannada ಬೆಂಗಳೂರು, ಏಪ್ರಿಲ್​​ 30: ತೀವ್ರ ಸೆಕೆಯಿಂದ ಬೆಂದು ಹೋಗಿದ್ದ ನಗರಕ್ಕೆ ನಿನ್ನೆ ವರುಣ ತಂಪೆರೆದಿದ್ದಾನೆ ಎಂದು ಖುಷಿ ಪಡಬೇಕೋ ಅಥವಾ ಮಳೆಯ ಅಬ್ಬರಕ್ಕೆ ಉಂಟಾಗಿರುವ ಸಾಲು ಸಾಲು ಅನಾಹುತಗಳಿಗೆ ದುಃಖ ಪಡಬೇಕೋ ಎನ್ನುವ ಸ್ಥಿತಿಯಲ್ಲಿ ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನ ನಿವಾಸಿಗಳಿದ್ದಾರೆ. ಗಾಳಿ ಮತ್ತು ಗುಡುಗಿನ ಸಹಿತ ಸುರಿದ ಭಾರಿ ಆಲಿಕಲ್ಲು ಮಳೆಗೆ ಸಾಲು ಸಾಲು ಅನಾಹುತಗಳೇ ನಡೆದಿದ್ದು, ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ….

Read More

2027ಕ್ಕೆ ಮುಂದೂಡಿಕೆ ಆಯ್ತಾ ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರದ ರಿಲೀಸ್? – Kannada News | Salman Khan movie Maatrubhumi release delayed due to this reasons

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ನಟನೆಯ, ಬಹುನಿರೀಕ್ಷಿತ ‘ಮಾತೃಭೂಮಿ’ (Maatrubhumi) ಸಿನಿಮಾದ ಬಿಡುಗಡೆ ದಿನಾಂಕವು ಮತ್ತಷ್ಟು ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಆರಂಭದಲ್ಲಿ ‘ಬ್ಯಾಟಲ್ ಆಫ್ ಗಲ್ವಾನ್’ (Battle Of Galwan) ಎಂದು ಹೆಸರಿಡಲಾಗಿದ್ದ ಈ ಸಿನಿಮಾಗೆ ಜಾಗತಿಕ ಮಟ್ಟದ ರಾಜತಾಂತ್ರಿಕ ವಿಘ್ನಗಳು ಎದುರಾಗಿವೆ. ಆದ್ದರಿಂದ ಸಿನಿಮಾದ ರಿಲೀಸ್ ದಿನಾಂಕವು 2027ಕ್ಕೆ ಶಿಫ್ಟ್ ಆಗಬಹುದು ಎನ್ನಲಾಗುತ್ತಿದೆ. ರಕ್ಷಣಾ ಸಚಿವಾಲಯದ ಆಕ್ಷೇಪ? ಈ ಚಿತ್ರವು 2020ರಲ್ಲಿ ಭಾರತ ಮತ್ತು ಚೀನಾ ನಡುವೆ ನಡೆದ ಗಲ್ವಾನ್ ಕಣಿವೆ ಸಂಘರ್ಷದ…

Read More

ಬೆಂಗಳೂರಿನಲ್ಲಿ ತಲೆಯೆತ್ತಲಿದೆ ದೇಶದ ಮೊದಲ ‘ಮೆದುಳು ಮತ್ತು ಮನಸ್ಸಿನ ಮ್ಯೂಸಿಯಂ’! – Kannada News | India’s First Immersive Neuroscience Museum: NIMHANS to Launch Rs 35 Cr ‘Museum of Brain and Mind’ in Bengaluru

ಬೆಂಗಳೂರು, ಮೇ 04: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅದ್ಭುತ ಲೋಕ ತೆರೆದುಕೊಳ್ಳಲಿದೆ. ನಗರದ ಪ್ರತಿಷ್ಠಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS), ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ದೇಶದ ಮೊದಲ ನರವಿಜ್ಞಾನ ಆಧಾರಿತ ಇಮ್ಮರ್ಸಿವ್ (Immersive) ಮ್ಯೂಸಿಯಂ ಅನ್ನು ಅಭಿವೃದ್ಧಿಪಡಿಸುತ್ತಿದೆ. ‘ಮ್ಯೂಸಿಯಂ ಆಫ್ ಬ್ರೈನ್ ಅಂಡ್ ಮೈಂಡ್’ (Museum of Brain and Mind) ಎಂಬ ಹೆಸರಿನ ಈ ವಸ್ತುಸಂಗ್ರಹಾಲಯವು “ನೀವು ಹೇಗಿದ್ದೀರೋ, ಹಾಗೆ ಇರಲು ಕಾರಣವೇನು ತಿಳಿಯಿರಿ” ಎಂಬ ಸರಳ ಉದ್ದೇಶದೊಂದಿಗೆ…

Read More

‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು – Kannada News | H.D. Deve Gowda’s Wife Chennamma Passes Away: Brother Recalls Her Humble Life and Support

ಹಾಸನ, ಜುಲೈ 18: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಕುಟುಂಬದ ಸದಸ್ಯರಿಗೆ ಆಘಾತ ಉಂಟಾಗಿದೆ. ಚೆನ್ನಮ್ಮ ಅವರ ಸಹೋದರ ವಿಶ್ವನಾಥ್, ಅಕ್ಕನ ನಿಧನಕ್ಕೆ ಅತೀವ ದುಃಖ ವ್ಯಕ್ತಪಡಿಸಿದ್ದು, ‘‘ಅವರು ನಮ್ಮ ಕುಟುಂಬಕ್ಕೆ ದೇವರಾಗಿದ್ದರು. ನಮ್ಮನ್ನು ಸಾಕಿ, ಬೆಳೆಸಿದ್ದು ಅವರೇ. ಕುಟುಂಬದ ಎಲ್ಲಾ ಜವಾಬ್ದಾರಿಗಳನ್ನು ಚೆನ್ನಮ್ಮ ವಹಿಸಿಕೊಂಡಿದ್ದರು. ನಾವು ಅವರ ಹಾಕಿದ ಗೆರೆ ದಾಟುತ್ತಿರಲಿಲ್ಲ. ಅವರು ನಮಗೆ ದೇವರು. ಅವರ ನೆರವಿನಿಂದಲೇ ನಾವು ಉತ್ತಮ ಉದ್ಯೋಗ ಪಡೆದು ಗೌರವಯುತ ಜೀವನ ನಡೆಸಲು ಸಾಧ್ಯವಾಯಿತು. ಪತಿ…

Read More

ಮೋದಿ ಜತೆಗಿನ ಒಂದೇ ಒಂದು ಮಾತು: ಪಾಕ್​​ನ ಮಹತ್ವ ಯೋಜನೆ ಭಾರತಕ್ಕೆ ತಂದ ಯುಎಇ – Kannada News | India UAE Strategic Alliance Deepens: Pakistan’s Isolation Amidst Economic Crisis and New Deals

ದೆಹಲಿ, ಜ.26: 77ನೇ ಗಣರಾಜ್ಯೋತ್ಸವದ (2026) ಹೊತ್ತಿನಲ್ಲೇ ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯದಲ್ಲಿ ಒಂದು ಮಹತ್ವದ ಬೆಳವಣಿಗೆ ನಡೆದಿದೆ. ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಬೆನ್ನಲ್ಲೇ, ಪಾಕಿಸ್ತಾನದ ವಿಮಾನ ನಿಲ್ದಾಣದ ಒಪ್ಪಂದದಿಂದ ಯುಎಇ ಹಿಂದೆ ಸರಿದಿದೆ . ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಯುಎಇಗೆ ಹಸ್ತಾಂತರಿಸಲು ಮಾತುಕತೆ ನಡೆದಿತ್ತು. ಈ ಒಪ್ಪಂದವು ಸುಮಾರು ಆಗಸ್ಟ್…

Read More

ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು – Kannada News | Car plunged into deep gorge near Chintpuri Himachal Pradesh 2 people dead

ಚಿಂತ್​ಪುರಿ, ಏಪ್ರಿಲ್ 30: ಹಿಮಾಚಲ ಪ್ರದೇಶದ ಉನಾದಲ್ಲಿ ಕಾರು ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಮಾತಾ ಚಿಂತ್‌ಪೂರ್ಣಿ ದೇವಸ್ಥಾನಕ್ಕೆ ತೀರ್ಥಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಇಬ್ಬರು ಅಪಘಾತದಲ್ಲಿ (Road Accident) ಸಾವನ್ನಪ್ಪಿದ್ದಾರೆ. ಕಾರು ಕಣಿವೆಗೆ ಬಿದ್ದ ನಂತರ ಬೆಂಕಿ ಹೊತ್ತಿಕೊಂಡಿದೆ. ಕಾರನ್ನು ಅತಿ ವೇಗದಲ್ಲಿ ಚಲಾಯಿಸುತ್ತಿದ್ದಾಗ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಪೊಲೀಸ್ ತಿಳಿಸಿದ್ದಾರೆ. ಭರ್ವೈನ್-ಹೋಶಿಯಾರ್‌ಪುರ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮಾತಾ ಚಿಂತ್‌ಪೂರ್ಣಿ ದೇವಸ್ಥಾನಕ್ಕೆ ತೀರ್ಥಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಕಾರಿನೊಳಗೆ ಇಬ್ಬರು ಇದ್ದರು. ಆ ಕಾರು ಲುಧಿಯಾನದ…

Read More