ಇದೇ ಮಾದರಿಯ ಕ್ಯಾಚ್ ಅಂದು ನಾಟ್​​ ಔಟ್, ಇಂದು ಔಟ್; ಇದೆಂತಹ ನ್ಯಾಯ? – Kannada News | Rajat Patidar’s Controversial Catch Sparks Debate – Starc’s Not Out vs Today’s Out

ಗುಜರಾತ್ ಟೈಟನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಆರ್​​​ಸಿಬಿ ಕ್ಯಾಪ್ಟನ್ ರಜತ್ ಪಟಿದಾರ್ ಅವರ ಕ್ಯಾಚ್ ಈಗ ಚರ್ಚೆಯ ಕೇಂದ್ರ ಬಿಂದು ಆಗಿದೆ. ಕೆಲವರು ಇದನ್ನು ನಾಟೌಟ್​ ಎಂದರೆ ಇನ್ನೂ ಕೆಲವರು ಔಟ್ ಎನ್ನುತ್ತಿದ್ದಾರೆ. ಹೀಗಿರುವಾಗಲೇ ಈ ಮೊದಲು ಮಿಚೆಲ್ ಸ್ಟಾರ್ಕ್​ ಅವರು ಅಂತಾರಾಷ್ಟ್ರೀಯ ಪಂದ್ಯದಲ್ಲಿ ಇದೇ ಮಾದರಿಯ ಕ್ಯಾಚ್ ಹಿಡಿದಿದ್ದರು. ಇದನ್ನು ನಾಟೌಟ್ ಎಂದು ಕೊಡಲಾಗಿತ್ತು. ಆದರೆ, ಇದೇ ಮಾದರಿಯ ಕ್ಯಾಚ್​​ ಅನ್ನು ಔಟ್ ಎಂದು ಕೊಡಲಾಗಿದೆ.

ರಜತ್ ಪಟಿದಾರ್ ಅವರು ಸಿಕ್ಸ್ ಹೊಡೆಯುವ ಪ್ರಯತ್ನ ಮಾಡಿದರು. ಆದರೆ, ಬಾಲ್ ಬೌಂಡರಿ ಗಡಿ ದಾಟಲು ವಿಫಲವಾಯಿತು. ಈ ವೇಳೆ ಓಡೋಡಿ ಬಂದ ಹೋಲ್ಡರ್ ಅವರು, ಕ್ಯಾಚ್​​​ಅನ್ನು ಹಿಡಿದೇ ಬಿಟ್ಟರು. ಬಾಲ್ ಅವರ ಕೈಯಲ್ಲಿ ಕುಳಿತಿತ್ತು ನಿಜ, ಆದರೆ, ನಂತರ ಬಾಲ್ ನೆಲಕ್ಕೆ ತಿಕ್ಕಿತ್ತು. ಆದಾಗ್ಯೂ ಥರ್ಡ್​ ಅಂಪೈರ್ ಔಟ್ ಎಂದರು ಕೊಟ್ಟರು.

ಮಿಚೆಲ್ ಸ್ಟಾರ್ಕ್ 2023ರ ಆಶಸ್ ಸರಣಿಯಲ್ಲಿ ಬೆನ್ ಡಕೆಟ್ ಅವರ ಕ್ಯಾಚ್ ಹಿಡಿದಿದ್ದರು. ಅಲ್ಲಿ ಸ್ಟಾರ್ಕ್ ಚೆಂಡನ್ನು ಹಿಡಿದ ನಂತರ ನೆಲಕ್ಕೆ ಉಜ್ಜುತ್ತಾ ಹೋದರು. ಆದರೆ ಅವರು ಚೆಂಡಿನ ಮೇಲೆ ‘ಸಂಪೂರ್ಣ ನಿಯಂತ್ರಣ’ (Complete Control) ಹೊಂದಿಲ್ಲ ಎಂದು ನಿರ್ಧರಿಸಿ ಅಂಪೈರ್ ಅದನ್ನು ‘ನಾಟ್ ಔಟ್’ ನೀಡಿದ್ದರು. ಈಗ ಅದನ್ನು ಔಟ್ ಎಂದು ಕೊಡಲಾಗಿದೆ. ಈ ಬಗ್ಗೆ ಒಬ್ಬರು ಒಂದೊಂದು ಅಭಿಪ್ರಾಯ ಹೊರಹಾಕುತ್ತಿದ್ದಾರೆ.

ಕ್ರಿಕೆಟ್‌ನಲ್ಲಿ ಇದು ಸದಾ ವಿವಾದಕ್ಕೆ ಗುರಿಯಾಗುವ ವಿಷಯ. ಅಂಪೈರ್ ದೃಷ್ಟಿಯಲ್ಲಿ ಫೀಲ್ಡರ್ ಚೆಂಡನ್ನು ಹಿಡಿದು ‘ನಿಯಂತ್ರಣ’ ಸಾಧಿಸಿದ್ದಾರೆಯೇ ಅಥವಾ ಇಲ್ಲವೇ ಎಂಬ ಜಡ್ಜ್‌ಮೆಂಟ್ ಮೇಲೆ ಇದು ನಿರ್ಧಾರವಾಗುತ್ತದೆ. ಸ್ಟಾರ್ಕ್ ಪ್ರಕರಣದಲ್ಲಿ ಅವರು ಚೆಂಡಿನ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವ ಮೊದಲೇ ನೆಲಕ್ಕೆ ತಗುಲಿತ್ತು ಎಂಬುದು ಅಂಪೈರ್ ವಾದವಾಗಿತ್ತು.

ನಿಯಮ ಏನು ಹೇಳುತ್ತದೆ?

ಎಂಸಿಸಿ (ಮೆರಿಲಿಬೋನ್ ಕ್ರಿಕೆಟ್ ಕ್ಲಬ್) ನಿಯಮ 33.2.1 ರ ಪ್ರಕಾರ, ಒಬ್ಬ ಫೀಲ್ಡರ್ ಕ್ಯಾಚ್ ಹಿಡಿದಾಗ ಆತ ತನ್ನ ಶರೀರದ ಚಲನೆ ಮತ್ತು ಚೆಂಡಿನ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದ್ದರೆ, ಆನಂತರ ಚೆಂಡು ನೆಲಕ್ಕೆ ತಗುಲಿದರೂ ಅದನ್ನು ‘ಔಟ್’ ಎಂದೇ ಪರಿಗಣಿಸಲಾಗುತ್ತದೆ ಎಂದಿದೆ. ಈ ನಿಯಮದ ಅಡಿ ಔಟ್ ಕೊಟ್ಟಿರಬಹುದು ಎನ್ನಲಾಗಿದೆ.

ಮತ್ತಷ್ಟು ಕ್ರಿಕೆಟ್ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ..

Published On – 7:47 am, Fri, 1 May 26

Source link

ತುಮಕೂರಿನಲ್ಲಿ ಹಕ್ಕಿ ಜ್ವರದ ಆತಂಕ: ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ! – Kannada News | Bird Flu Alert in Tumakuru: H5N1 Virus Confirmed in Peacock Deaths; RRT Formed

ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ ಎಂಬುದು ದೃಢ!

ತುಮಕೂರು, ಮೇ 01: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸರಣಿಯಾಗಿ ಸಂಭವಿಸುತ್ತಿದ್ದ ನವಿಲುಗಳ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟ ನವಿಲುಗಳ ರಕ್ತ ಹಾಗೂ ಅಂಗಾಂಗಗಳ ಮಾದರಿಯನ್ನು FSL (ವಿಧಿ ವಿಜ್ಞಾನ ಪ್ರಯೋಗಾಲಯ) ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಯಲ್ಲಿ H5N1 (ಹಕ್ಕಿ ಜ್ವರ) ಸೋಂಕು ಇರುವುದು ದೃಢಪಟ್ಟಿದೆ.

ಬಿಸಿಲಿನ ತಾಪ ಎಂಬ ಶಂಕೆ

ಕಳೆದ ಏಪ್ರಿಲ್ 16ರಿಂದ ತುಮಕೂರು ತಾಲೂಕಿನಾದ್ಯಂತ ನವಿಲುಗಳ ಸರಣಿ ಸಾವು ಆರಂಭವಾಗಿತ್ತು. ಕೇವಲ 11 ದಿನಗಳಲ್ಲಿ ಬರೋಬ್ಬರಿ 44 ನವಿಲುಗಳು ಮೃತಪಟ್ಟಿದ್ದವು. ಆರಂಭದಲ್ಲಿ ಜಿಲ್ಲೆಯಲ್ಲಿ ತಾಪಮಾನ ಏರುತ್ತಿದ್ದ ಕಾರಣ, ಅತಿಯಾದ ಶಾಖ ಮತ್ತು ನಿರ್ಜಲೀಕರಣದಿಂದ ಈ ಸಾವುಗಳು ಸಂಭವಿಸಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದರು. ಪ್ರಮುಖವಾಗಿ ತುಮಕೂರು ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಾವುಗಳು ವರದಿಯಾಗಿದ್ದವು.

ಸಾವುಗಳ ಅಸಲಿ ಕಾರಣ ಬಯಲು

ಪ್ರಾಥಮಿಕ ತನಿಖೆಯಲ್ಲಿ ಹಕ್ಕಿ ಜ್ವರದ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು. ಅದರಂತೆ ಮೃತ ನವಿಲುಗಳ ಮಾದರಿಯನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಈಗ ಲಭ್ಯವಾಗಿರುವ ವರದಿಯು ನವಿಲುಗಳಲ್ಲಿ H5N1 ವೈರಸ್ ಇರುವುದನ್ನು ದೃಢಪಡಿಸಿದ್ದು, ಇದು ಸಾರ್ವಜನಿಕರಲ್ಲಿ ಮತ್ತು ರೈತರಲ್ಲಿ ಆತಂಕ ಮೂಡಿಸಿದೆ. ಹಕ್ಕಿ ಜ್ವರ ದೃಢಪಟ್ಟ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆ ಮತ್ತು ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ ತುಮಕೂರಿನಲ್ಲಿ 35 ನವಿಲುಗಳು ಸಾವು! ಸುಡುವ ಬಿಸಿಲಿನ ಪರಿಣಾಮವೋ? ಹಕ್ಕಿ ಜ್ವರವೋ?

ಜಿಲ್ಲಾಡಳಿತದಿಂದ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳು

ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ರ್ಯಾಪಿಡ್ ರೆಸ್ಪಾನ್ಸ್ ಟೀಮ್ (RRP) ತಂಡಗಳನ್ನು ರಚಿಸಲಾಗಿದೆ. ಐದು ಹಳ್ಳಿಗಳಿಗೆ ಪ್ರತ್ಯೇಕವಾಗಿ 5 ತಂಡಗಳನ್ನು ನಿಯೋಜಿಸಲಾಗಿದ್ದು, ಪ್ರತಿಯೊಂದು ತಂಡದಲ್ಲಿ ಒಬ್ಬ ಪಿಡಿಒ, ಇಬ್ಬರು ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಮತ್ತು ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು ಇರಲಿದ್ದಾರೆ. ನವಿಲುಗಳು ಮೃತಪಟ್ಟ ಊರ್ಡಿಗೆರೆ, ಗೂಳೂರು, ಬೊಮ್ಮನಹಳ್ಳಿ, ಟಿ.ಜಿ.ಪಾಳ್ಯ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಬರುವ 33 ಹಳ್ಳಿಗಳ ಮೇಲೆ ನಿಗಾ ಇರಿಸಲಾಗಿದ್ದು, ಸೋಂಕು ಹರಡದಂತೆ ಡಿಸ್‌ಇನ್‌ಫೆಕ್ಟ್ ಸ್ಪ್ರೇ ಮಾಡಲು ಸೂಚಿಸಲಾಗಿದೆ.

ಸುತ್ತಮುತ್ತಲಿನ ಕೋಳಿ ಫಾರ್ಮ್‌ಗಳಲ್ಲಿನ ನಾಟಿ ಕೋಳಿಗಳ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲು ನಿರ್ಧರಿಸಲಾಗಿದೆ. ಕೋಳಿಗಳಲ್ಲೂ ಸೋಂಕು ಕಾಣಿಸಿಕೊಂಡರೆ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದೆ. ಕೋಳಿ ಫಾರ್ಮ್‌ಗಳಿಗೆ ಅಪರಿಚಿತರ ಪ್ರವೇಶ ನಿಷೇಧಿಸಲಾಗಿದೆ. ಯಾವುದೇ ಕೋಳಿಗಳು ಮೃತಪಟ್ಟರೆ ತಕ್ಷಣ ಮಾಹಿತಿ ನೀಡುವಂತೆ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರೆಗ್ನೆನ್ಸಿ ಸುದ್ದಿ ಘೋಷಿಸಿದ ‘ರತ್ನನ್ ಪ್ರಪಂಚ’ ನಟಿ ರೆಬಾ – Kannada News | Reba Monica John Announces Pregnancy! Ratnan Prapancha Actress Shares Viral Baby Bump Photos

ಕನ್ನಡದಲ್ಲಿ ರತ್ನನ್ ಪ್ರಪಂಚ ಸಿನಿಮಾದಲ್ಲಿ ನಟಿಸಿದ್ದ ರೇಬಾ ಮೋನಿಕಾ ಜಾನ್, ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರು ಶೀಘ್ರದಲ್ಲೇ ತಾಯಿಯಾಗಲಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ, ಅವರು ತಮ್ಮ ಪತಿ ಜೋಮನ್ ಜೋಸೆಫ್ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ಬೇಬಿ ಬಂಪ್ ಫೋಟೋಗಳು ಗಮನ ಸೆಳೆದಿವೆ. ರೇಬಾ ಮೋನಿಕಾ ಜಾನ್ ಹಂಚಿಕೊಂಡ ಈ ಫೋಟೋ ಶೂಟ್ ಪ್ರಸ್ತುತ ವೈರಲ್ ಆಗುತ್ತಿದೆ.

Source link

Viral Video: ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್ ಸೂಪರ್‌ಸ್ಟಾರ್ – Kannada News | Views Over Hygiene Puneet Superstar Sparks Outrage After Dipping Food in Sewage Water

ನವದೆಹಲಿ, ಮೇ 01: ಫೇಮಸ್ ಆಗಲು ಜನ ಏನೇನೆಲ್ಲಾ ಸಾಹಸಗಳನ್ನು ಮಾಡುವುದನ್ನು ನೋಡಿದ್ದೇವೆ ಆದರೆ ಈ ವ್ಯಕ್ತಿ ಚರಂಡಿ ನೀರೊಳಗೆ ಸ್ನಾನ ಮಾಡುವ ವಿಡಿಯೋ ವೈರಲ್ ಆಗಿದೆ. ಅಷ್ಟೇ ಅಲ್ಲದೆ ಅದೇ ನೀರಿನಲ್ಲಿ ಆಹಾರವನ್ನು ಅದ್ದಿ ತಿನ್ನುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಜನಪ್ರಿಯ ಇನ್ಫ್ಲುಯೆನ್ಸರ್ ಪುನೀತ್ ಸೂಪರ್‌ಸ್ಟಾರ್ ಈ ವಿಡಿಯೋದಲ್ಲಿದ್ದು, ವ್ಯೂಸ್‌ಗಳಿಗಾಗಿ ಅವರು ಮಾಡಿರುವ ಕೆಲಸ ಎಲ್ಲರನ್ನು ಬೆಚ್ಚಿಬೀಳಿಸಿದೆ.

ಈ ವೈರಲ್ ಕ್ಲಿಪ್‌ನಲ್ಲಿ ಪುನೀತ್ ಅವರು ತಾವು ಇರುವ ಜಾಗವನ್ನು ನಾಲಾ ಕೆಫೆ ಎಂದು ಕರೆದಿದ್ದಾರೆ, ಇಂದು ನಾನು ನಾಲಾ ಕೆಫೆಗೆ ಬಂದಿದ್ದೇನೆ ಮತ್ತು ಚೋಲೆ ಕುಲ್ಚೆ ತಿನ್ನುತ್ತಿದ್ದೇನೆ ಎಂದು ಹೇಳುತ್ತಾ, ಚರಂಡಿ ನೀರಿನಲ್ಲಿ ಮುಳುಗೆದ್ದು, ಅದೇ ನೀರಿನಲ್ಲಿ ಆಹಾರವನ್ನು ಅದ್ದಿ ತಿಂದಿರುವ ವಿಡಿಯೋವನ್ನು ಕಂಡು ಜನರು ಹೌಹಾರಿದ್ದಾರೆ.

ವಿಡಿಯೋ ಹರಡುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳ ಸುರಿಮಳೆಯೇ ಹರಿದುಬಂದಿದೆ. ಈ ವ್ಯಕ್ತಿ ಕೇವಲ ಹಣ ಮತ್ತು ಪ್ರಚಾರಕ್ಕಾಗಿ ದೇಶದ ವರ್ಚಸ್ಸನ್ನು ಜಗತ್ತಿನ ಮುಂದೆ ವಿರೂಪಗೊಳಿಸುತ್ತಿದ್ದಾರೆ ಎಂದು ಹಲವರು ಕಿಡಿಕಾರಿದ್ದಾರೆ. ಈ ಚರ್ಚೆಯು ಕೆಲವು ಹಂತಗಳಲ್ಲಿ ರಾಜಕೀಯ ಮತ್ತು ಧಾರ್ಮಿಕ ದೃಷ್ಟಿಕೋನಗಳಿಗೂ ತಿರುಗಿ ಮತ್ತಷ್ಟು ವಿವಾದವನ್ನು ಹುಟ್ಟುಹಾಕಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಜತ್ ಕ್ಯಾಚ್ ಔಟೋ-ನಾಟೌಟೋ? ನಿಯಮ ಏನು ಹೇಳುತ್ತೆ? – Kannada News | Jason Holder’s Controversial Catch: MCC Law 33.2.1 Explains Patidar’s GT vs RCB Dismissal

ಜಿಟಿ vs ಆರ್​​ಸಿಬಿ ಪಂದ್ಯದಲ್ಲಿ ಜೇಸನ್ ಹೋಲ್ಡರ್ ಹಿಡಿದ ರಜತ್ ಪಟಿದಾರ್ ಅವರ ಕ್ಯಾಚ್ ಈಗ ಚರ್ಚೆಗೆ ಕಾರಣ ಆಗಿದೆ. ರಜತ್ ಅವರು ಸಿಕ್ಸ್ ಬಾರಿಸುವ ಪ್ರಯತ್ನದಲ್ಲಿ ಇದ್ದರು. ಈ ವೇಳೆ ಚೆಂಡು ಹೋಲ್ಡರ್ ಕೈ ಸೇರಿತು. ಆ ಬಳಿಕ ಅವರು ಬಾಲ್​ ಅನ್ನು ನೆಲಕ್ಕೆ ಉಜ್ಜಿಕೊಂಡು ಹೋದರು. ಈ ಕ್ಯಾಚ್ ಬಗ್ಗೆ ಚರ್ಚೆ ಶರುವಾಗಿದೆ. ಹಾಗಾದರೆ ನಿಯಮದ ಪ್ರಕಾರ ನೋಡೋದಾದರೆ ಈ ಕ್ಯಾಚ್ ಔಟೋ ಅಥವಾ ಇಲ್ಲವೋ? ಆ ಬಗ್ಗೆ ಇಲ್ಲಿದೆ ವಿವರ.
ಜೇಸನ್ ಹೋಲ್ಡರ್ ಹಿಡಿದ ಕ್ಯಾಚ್​​ ಬಗ್ಗೆ ವಿವಾದ ಆಗಿದೆ. ಜೇಸನ್ ಹೋಲ್ಡರ್ ಅವರು ಬಾಲ್​ ಅನ್ನೇ ನೋಡುತ್ತಾ ಬಂದು, ಅದನ್ನು ಕೈಗೆ ತೆಗೆದುಕೊಂಡರು. ನಂತರ ನೆಲಕ್ಕೆ ಬಿದ್ದರು. ಬಾಲ್ ಅವರ ಕೈಯಲ್ಲೇ ಇದ್ದರೂ ಅದು ನೆಲಕ್ಕೆ ಉಜ್ಜುತ್ತಾ ಹೋಯಿತು. ನಂತರ ಅವರು ಬಾಲ್ ಹಿಡಿದ ಕೈಯನ್ನೇ ಊರಿ ಮೇಲಕ್ಕೆ ಎದ್ದರು. ಎಲ್ಲರೂ ಇದನ್ನು ನಾಟೌಟ್ ಕೊಡುತ್ತಾರೆ ಎಂದು ಭಾವಿಸಿದ್ದರು. ಆದರೆ, ಔಟ್ ಕೊಡಲಾಯಿತು. ಇದು ನಾಟೌಟ್ ಎಂದು ಭಾರತ ತಂಡ ಮಾಜಿ ಬೌಲರ್ ಹಾಗೂ ಕಮೆಂಟೇಟರ್ ಇರ್ಫಾನ್ ಪಠಾಣ್ ಟ್ವೀಟ್ ಮಾಡಿದ್ದಾರೆ.

ನಿಯಮ ಏನು ಹೇಳುತ್ತದೆ?

ಅಂಪೈರ್​​​ಗಳು ಔಟ್ ಕೊಟ್ಟಿದ್ದು ನಿಯಮಗಳನ್ನು ಆಧರಿಸಿಯೇ. ಮೆರಿಲಿಬೋನ್ ಕ್ರಿಕೆಟ್ ಕ್ಲಬ್ ರಚಸಿದ ನಿಯಮ 33.2.1ರ ಪ್ರಕಾರ ಅಂಪೈರ್ ಔಟ್ ಕೊಟ್ಟಿದ್ದಾರೆ. ಓರ್ವ ಫೀಲ್ಡರ್ ಕ್ಯಾಚ್ ಹಿಡಿದ ನಂತರ ಆತ ತನ್ನ ಶರೀರದ ಚಲನೆ ಮತ್ತು ಚೆಂಡಿನ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿರಬೇಕು. ಆನಂತರ ಚೆಂಡು ನೆಲಕ್ಕೆ ತಗುಲಿದರೂ ಅದನ್ನು ‘ಔಟ್’ ಎಂದೇ ಪರಿಗಣಿಸಲಾಗುತ್ತದೆ.

ಜೇಸನ್ ಕ್ಯಾಚ್ ಹಿಡಿದಾಗ ದೇಹದ ಚಲನೆ ಹಾಗೂ ಬೌಲ್ ಮೇಲೆ ಅವರಿಗೆ ಸಂಪೂರ್ಣ ನಿಯಂತ್ರ ಇದೆ ಎಂದೇ ಥರ್ಡ್​ ಅಂಪೈರ್ ಪರಿಗಣಿಸಿರಬಹುದು. ಹೀಗಾಗಿ, ಇದನ್ನು ಔಟ್ ಎಂದು ಕೊಟ್ಟಿದ್ದಾರೆ. ಫೀಲ್ಡರ್ ಚೆಂಡನ್ನು ಸುರಕ್ಷಿತವಾಗಿ ಕೈಯಲ್ಲಿ ಹಿಡಿದು, ತಾವು ಸಮತೋಲನ ಕಳೆದುಕೊಳ್ಳದೆ ನಿಯಂತ್ರಣದಲ್ಲಿದ್ದಾರೆ ಎಂದು ಖಚಿತವಾದ ಮೇಲೆ ಚೆಂಡು ನೆಲಕ್ಕೆ ತಗುಲಿದೆ ಎಂಬುದು ಥರ್ಡ್​ ಅಂಪೈರ್ ವಾದ. ಆದರೆ, ಹೋಲ್ಡರ್ ನಿಯಂತ್ರಣದಲ್ಲಿ ಇರಲಿಲ್ಲ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿತ್ತು.

ಇದನ್ನೂ ಓದಿ: ಇದೇ ಮಾದರಿಯ ಕ್ಯಾಚ್ ಅಂದು ನಾಟ್​​ ಔಟ್, ಇಂದು ಔಟ್; ಇದೆಂತಹ ನ್ಯಾಯ?

1787ರಲ್ಲಿ ಸ್ಥಾಪನೆಯಾದ ಮೇರಿಲ್‌ಬೋನ್ ಕ್ರಿಕೆಟ್ ಕ್ಲಬ್ (MCC), ವಿಶ್ವದ ಅತ್ಯಂತ ಸಕ್ರಿಯ ಕ್ರಿಕೆಟ್ ಕ್ಲಬ್. ಇದು ಲಂಡನ್‌ನಲ್ಲಿರುವ ಲಾರ್ಡ್ಸ್ ಕ್ರಿಕೆಟ್ ಮೈದಾನದ ಮಾಲೀಕರು ಆಗಿದ್ದಾರೆ. ಪ್ರಪಂಚದಾದ್ಯಂತ ಬಳಸಲಾಗುವ ಎಲ್ಲಾ ಕ್ರಿಕೆಟ್ ನಿಯಮಗಳನ್ನು ಇವರು ರಚಿಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:18 am, Fri, 1 May 26

Source link

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಬಿಗ್ ರಿಲೀಫ್: ಆಸ್ತಿ ತೆರಿಗೆ ಪಾವತಿಯ ಶೇ 5ರ ರಿಯಾಯಿತಿ ಮೇ 31ರವರೆಗೆ ವಿಸ್ತರಣೆ – Kannada News | Bengaluru Property Tax: Government Extends 5 percent Rebate Deadline Until 31 May 2026

ಬೆಂಗಳೂರು, ಮೇ 1: ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆ (Property Tax) ಪಾವತಿಯ ಮೇಲೆ ನೀಡಲಾಗುತ್ತಿದ್ದ ಶೇ 5ರಷ್ಟು ರಿಯಾಯಿತಿ (Rebate) ಅವಧಿಯನ್ನು 2026ರ ಮೇ 31ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರದಿಂದ ಗ್ರೇಟರ್ ಬೆಂಗಳೂರು ಪ್ರದೇಶದ (GBA) ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಸುಮಾರು 25 ಲಕ್ಷ ಆಸ್ತಿ ಮಾಲೀಕರಿಗೆ ನೇರ ಪ್ರಯೋಜನವಾಗಲಿದೆ.

ಆಸ್ತಿ ತೆರಿಗೆ ರಿಯಾಯಿತಿ ವಿಸ್ತರಣೆಗೆ ಕಾರಣವೇನು?

ಸಾಮಾನ್ಯವಾಗಿ ಏಪ್ರಿಲ್ ಅಂತ್ಯಕ್ಕೆ ಈ ರಿಯಾಯಿತಿ ಅವಧಿ ಮುಕ್ತಾಯವಾಗುತ್ತಿತ್ತು. ಆದರೆ, ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಉಂಟಾಗಿದ್ದ ಗೊಂದಲಗಳ ಕುರಿತು ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ (BAF) ಸೇರಿದಂತೆ ಹಲವು ಸಂಘಟನೆಗಳು ಕಳವಳ ವ್ಯಕ್ತಪಡಿಸಿದ್ದವು. ವಿಶೇಷವಾಗಿ ಬಲ್ಕ್ ವೇಸ್ಟ್ ಜನರೇಟರ್‌ಗಳ ವರ್ಗೀಕರಣದಲ್ಲಿನ ಅಸ್ಪಷ್ಟತೆಯಿಂದಾಗಿ ತೆರಿಗೆ ಪಾವತಿಸಲು ಮಾಲೀಕರು ವಿಳಂಬ ಮಾಡಿದ್ದರು. ಇದಲ್ಲದೆ, ಮೇ ತಿಂಗಳಲ್ಲಿ ಶಾಲಾ ಶುಲ್ಕದಂತಹ ಪ್ರಮುಖ ಗೃಹ ವೆಚ್ಚಗಳು ಬರುವುದರಿಂದ, ಈ ರಿಯಾಯಿತಿ ಅವಧಿಯನ್ನು ವಿಸ್ತರಿಸಬೇಕೆಂದು ಸಾರ್ವಜನಿಕರಿಂದ ಬೇಡಿಕೆ ವ್ಯಕ್ತವಾಗಿತ್ತು. ಇದಕ್ಕೆ ಸರ್ಕಾರ ಸ್ಪಂದಿಸಿದೆ.

ಆದಾಯ ಸಂಗ್ರಹದಲ್ಲಿ ಕುಸಿತ

ಜಿಬಿಎ (GBA) ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ತೆರಿಗೆ ಸಂಗ್ರಹದಲ್ಲಿ ಸುಮಾರು 500 ಕೋಟಿ ರೂಪಾಯಿಗಳ ಕೊರತೆ ಕಂಡುಬಂದಿದೆ. ಕಳೆದ ವರ್ಷ ಸುಮಾರು 1,500 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿತ್ತು. ಏಪ್ರಿಲ್ 16 ರಂದು ತೆರಿಗೆ ಪಾವತಿಯಲ್ಲಿದ್ದ ತಾಂತ್ರಿಕ ಗೊಂದಲಗಳನ್ನು ಸರಿಪಡಿಸಲಾಗಿದ್ದರೂ, ನಿರೀಕ್ಷಿತ ಮಟ್ಟದಲ್ಲಿ ತೆರಿಗೆ ಪಾವತಿಯಾಗಿಲ್ಲ. ಹೀಗಾಗಿ, ಹೆಚ್ಚಿನ ಸಮಯ ನೀಡುವುದರಿಂದ ಮಾಲೀಕರು ತೆರಿಗೆ ಪಾವತಿಸಲು ಆಸಕ್ತಿ ತೋರಿಸುತ್ತಾರೆ ಮತ್ತು ಪಾಲಿಕೆಯ ಆದಾಯದ ಕೊರತೆಯನ್ನು ನೀಗಿಸಬಹುದು ಎಂದು ಅಧಿಕಾರಿಗಳು ಆಶಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮನೇಲಿದ್ದಾಗ್ಲೇ ಕಂಪೌಂಡ್ ಮೇಲೆ ಬಿದ್ದ ಮರದ ಕೊಂಬೆಗಳು, ಕಬ್ಬಿಣದ ವಾಲ್‌ಗಳು! ತಪ್ಪಿದ ಅನಾಹುತ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

GT vs RCB, IPL 2026: ಮುಲಾಜಿಲ್ಲದೆ ಸೋಲಿಗೆ ಯಾರು ಕಾರಣ ಎಂದು ಖಡಕ್ ಆಗಿ ಹೇಳಿದ ರಜತ್ ಪಾಟಿದಾರ್ – Kannada News | Rajat Patidar Post Match Statement He said who was responsible for the defeat vs Gujarat

ಬೆಂಗಳೂರು (ಮೇ. 01): ಐಪಿಎಲ್ 2026 ರಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗುಜರಾತ್ ಟೈಟಾನ್ಸ್ ತಮ್ಮ ಹಿಂದಿನ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು. ಸೋಲಿನ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar) ತಮ್ಮ ತಂಡದ ಬ್ಯಾಟಿಂಗ್ ಮತ್ತು ಮಧ್ಯಮ ಓವರ್‌ಗಳಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿರುವುದು ಸೋಲಿಗೆ ಪ್ರಮುಖ ಕಾರಣ ಎಂದು ಹೇಳಿದರು. ಗುಜರಾತ್ ವಿರುದ್ಧ 155 ರನ್‌ಗಳಿಗೆ ಸೀಮಿತವಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಋತುವಿನ ಮತ್ತೊಂದು ಸೋಲನ್ನು ಎದುರಿಸಿತು. ಪೋಸ್ಟ್ ಮ್ಯಾಚ್​​ನಲ್ಲಿ ರಜತ್ ತಮ್ಮ ತಂಡದ ತಪ್ಪುಗಳನ್ನು ಒಪ್ಪಿಕೊಂಡರು, ಜೊತೆಗೆ ಬೌಲರ್‌ಗಳ ಹೋರಾಟದ ಮನೋಭಾವ ಮತ್ತು ಭುವನೇಶ್ವರ್ ಕುಮಾರ್ ಅವರ ಬೌಲಿಂಗ್ ಅನ್ನೂ ಹೊಗಳಿದರು.

ಸ್ಕೋರ್‌ಬೋರ್ಡ್‌ನಲ್ಲಿ ಕಡಿಮೆ ರನ್‌- ಮಧ್ಯಮ ಕ್ರಮಾಂಕ ವಿಫಲ

ಪಂದ್ಯದ ನಂತರ ರಜತ್ ಪಾಟಿದಾರ್ ಅವರು ಗೆಲುವಿಗೆ ಒಟ್ಟು 155 ರನ್‌ಗಳು ಸಾಕಾಗಲಿಲ್ಲ ಎಂದು ಹೇಳಿದರು. ಮಧ್ಯಮ ಓವರ್‌ಗಳಲ್ಲಿ ತಂಡವು ನಿಯಮಿತ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿತು, ಇದು ಹಿನ್ನಡೆಯನ್ನುಂಟುಮಾಡಿತು ಎಂದು ಒಪ್ಪಿಕೊಂಡರು. ಪಾಟಿದಾರ್ ಪ್ರಕಾರ, ಪಿಚ್ ಉತ್ತಮ ಹುಲ್ಲಿನ ಪದರವನ್ನು ಹೊಂದಿತ್ತು, ಇದು ವೇಗದ ಬೌಲರ್‌ಗಳಿಗೆ ಸಹಾಯ ಮಾಡಿತು, ಆದರೆ ಬ್ಯಾಟ್ಸ್‌ಮನ್‌ಗಳು ಅದನ್ನು ಬಳಸಿಕೊಳ್ಳಲು ವಿಫಲರಾದರು.

ಪವರ್‌ಪ್ಲೇನಲ್ಲಿಯೇ ಶುಭ್​​ಮನ್ ಗಿಲ್ ಪಂದ್ಯವನ್ನು ಗೆಲ್ಲಿಸಿದರು

ಗುಜರಾತ್ ತಂಡದ ನಾಯಕ ಶುಭ್​ಮನ್ ಗಿಲ್ ಅವರನ್ನು ಆರ್‌ಸಿಬಿ ನಾಯಕ ಶ್ಲಾಘಿಸಿದ್ದಾರೆ. ಪವರ್‌ಪ್ಲೇನಲ್ಲಿ ಗಿಲ್ ಅವರ ಅದ್ಭುತ ಬ್ಯಾಟಿಂಗ್ ಬೆಂಗಳೂರು ತಂಡದ ಮೇಲೆ ಅಗಾಧ ಒತ್ತಡವನ್ನುಂಟುಮಾಡಿದೆ ಎಂದು ಅವರು ಹೇಳಿದರು. ಆದಾಗ್ಯೂ, ತಮ್ಮ ತಂಡವು ಬಿಟ್ಟುಕೊಡಲಿಲ್ಲ ಮತ್ತು ಇಷ್ಟು ಸಣ್ಣ ಗುರಿಯ ಹೊರತಾಗಿಯೂ ಪಂದ್ಯವನ್ನು 16 ನೇ ಓವರ್‌ಗೆ ಎಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಪಾಟಿದಾರ್ ಸಂತೋಷಪಟ್ಟರು. ಇದು ತಂಡಕ್ಕೆ ಸಕಾರಾತ್ಮಕ ಸಂಕೇತ ಎಂದು ಅವರು ಹೇಳಿದರು.

GT vs RCB: ಗಿಲ್ ಔಟಾದಾಗ ವಿರಾಟ್ ವಿಚಿತ್ರ ಸೆಲೆಬ್ರೇಷನ್: ಕೊಹ್ಲಿ ನಡೆಗೆ ಭಾರೀ ವಿರೋಧ

ಭುವನೇಶ್ವರ್ ಕುಮಾರ್ ಪರ್ಪಲ್ ಕ್ಯಾಪ್ ಮ್ಯಾಜಿಕ್

ಈ ಪಂದ್ಯದ ಪ್ರಮುಖ ಸಕಾರಾತ್ಮಕ ಅಂಶವೆಂದರೆ ಭುವನೇಶ್ವರ್ ಕುಮಾರ್ ಅವರ ಅತ್ಯುತ್ತಮ ಬೌಲಿಂಗ್‌ಗಾಗಿ ಪರ್ಪಲ್ ಕ್ಯಾಪ್ ಗಳಿಸಿದ ಪ್ರದರ್ಶನ. “ಟಿ 20 ಸ್ವರೂಪದಲ್ಲಿ ಭುವಿ ಎಷ್ಟು ಅನುಭವಿ ಎಂದು ನಮಗೆಲ್ಲರಿಗೂ ತಿಳಿದಿದೆ. ಅವರು ತಮ್ಮ ಆರಂಭಿಕ ಸ್ಪೆಲ್‌ನಲ್ಲಿ ಬೌಲಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು.” ಲೀಗ್ ದೀರ್ಘವಾಗಿದೆ, ನಾವು ಒಂದೊಂದೇ ಪಂದ್ಯದ ಮೇಲೆ ಕೇಂದ್ರೀಕರಿಸುತ್ತಿದ್ದೇವೆ ಎಂದು ಪಾಟಿದಾರ್ ಹೇಳಿದರು.

ಟೇಬಲ್‌ನಲ್ಲಿನ ಸ್ಥಾನದ ಬಗ್ಗೆ ರಜತ್ ಏನು ಹೇಳಿದರು?

ಸೋಲಿನ ಹೊರತಾಗಿಯೂ, ಆರ್‌ಸಿಬಿ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಪಾಟಿದಾರ್ ಅವರು, ಪ್ರಸ್ತುತ ನಾವು ಅಂಕಗಳ ಮೇಲೆ ಕೇಂದ್ರೀಕರಿಸಿಲ್ಲ ಎಂದು ಹೇಳಿದರು. ನಮ್ಮ ಗಮನ ಮೈದಾನದಲ್ಲಿ ಉತ್ತಮ ಕ್ರಿಕೆಟ್ ಆಡುವುದಾಗಿದೆ. ಮುಂಬರುವ ಪಂದ್ಯಗಳಲ್ಲಿ ತಂಡವು ಭರ್ಜರಿ ಆಗಿ ಕಮ್​ಬ್ಯಾಕ್ ಮಾಡಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಬೆಳಗಾವಿ ಸೇರಿದಂತೆ ವಿಜಯಪುರದ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! – Kannada News | Bangalore Air Pollution Crisis: Belagavi and Vijayapura Air Quality is better than most cities

ಬೆಳಗಾವಿ ಸೇರಿದಂತೆ ವಿಜಯಪುರದ ಏರ್ ಕ್ವಾಲಿಟಿಯಲ್ಲೂ ಸುಧಾರಣೆ!

ಬೆಂಗಳೂರು, ಮೇ 01: ರಾಜ್ಯದಲ್ಲಿ ಬೆಳಗಾವಿ, ವಿಜಯಪುರ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಬೆಳಗಾವಿಯ ಏರ್ ಕ್ವಾಲಿಟಿ ಇಂದು ಕೇವಲ 64ರಷ್ಟಿದ್ದು, ಅತ್ಯಂತ ಒಳ್ಳೆಯ ಗುಣಮಟ್ಟದಲ್ಲಿದೆ. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ವಾಯು ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿತ್ತು. ಹಲವು ಬಾರಿ 200ರ ಗಡಿ ತಲುಪಿತ್ತು. ಆದರೆ ಇತ್ತೀಚೆಗೆ AQI ಸುಧಾರಣೆ ಕಂಡುಬಂದಿತ್ತು. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 102ಕ್ಕೆ ತಲುಪಿದೆ. ಮಂಗಳೂರು ಮತ್ತು ಉಡುಪಿಯ AQI 100ಕ್ಕಿಂತ ಹೆಚ್ಚಿದ್ದು, ಅನಾರೋಗ್ಯಕರ ಮಟ್ಟದಲ್ಲಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 102
  • ಮಂಗಳೂರು-110
  • ಮೈಸೂರು – 92
  • ಬೆಳಗಾವಿ – 64
  • ಕಲಬುರ್ಗಿ-86
  • ಶಿವಮೊಗ್ಗ –107
  • ಬಳ್ಳಾರಿ – 96
  • ಹುಬ್ಬಳ್ಳಿ- 81
  • ಉಡುಪಿ –109
  • ವಿಜಯಪುರ – 88

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೇಕ್ ಕಿರಿಕ್: ಜಿಮ್‌ನಲ್ಲಿ ಮೂವರನ್ನು ಹತ್ಯೆಗೈದಿದ್ದ ವ್ಯಕ್ತಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು – Kannada News | Uttar Pradesh: Jeetu Saini, Gym Triple Murder Suspect Over Birthday Cake, Killed in Police Encounter

ಬುಲಂದ್‌ಶಹರ್, ಮೇ 01: ಕೇಕ್ ವಿಚಾರಕ್ಕೆ ಜಗಳವಾಡಿ ಜಿಮ್​​ನಲ್ಲಿ ಮೂವರನ್ನು ಹತ್ಯೆ(Murder)ಗೈದಿದ್ದ ವ್ಯಕ್ತಿ ಪೊಲೀಸ್ ಎನ್​ಕೌಂಟರ್​ನಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಏಪ್ರಿಲ್ 25ರಂದು ಆತ ಮೂರು ಕೊಲೆಗಳನ್ನು ಮಾಡಿ ಬಳಿಕ ಪರಾರಿಯಾಗಿದ್ದ, ಆತನನ್ನು ಹಿಡಿದುಕೊಟ್ಟವರಿಗೆ 50 ಸಾವಿರ ರೂ. ಕೊಡುವುದಾಗಿ ಪೊಲೀಸರು ಘೋಷಿಸಿದ್ದರು. ಜೀತು ಸೈನಿ, ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ. ಧಾರೌ ಪೊಲೀಸ್ ಹೊರಠಾಣೆ ಬಳಿ ನಡೆದ ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ.

ಗುರುವಾರ ಮುಂಜಾನೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳನ್ನು ತಪಾಸಣೆಗಾಗಿ ನಿಲ್ಲಿಸಲು ಪೊಲೀಸರು ಹೇಳಿದಾಗ, ಅವರು ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಪೊಲೀಸರು ಬೆನ್ನಟ್ಟಿ ಜಝಾರ್ ರಸ್ತೆಯಲ್ಲಿ ಅವರನ್ನು ಸುತ್ತುವರೆದಾಗ ಆರೋಪಿಗಳು ಮತ್ತೆ ದಾಳಿ ನಡೆಸಿದರು. ಆತ್ಮರಕ್ಷಣೆಗಾಗಿ ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಜೀತು ಸೈನಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಸ್ಥಳದಿಂದ ಅಕ್ರಮ ಪಿಸ್ತೂಲ್ ಮತ್ತು ಸ್ಕೂಟರ್ ವಶಪಡಿಸಿಕೊಳ್ಳಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಏಪ್ರಿಲ್ 25 ರಂದು ಜೀತು ಸೈನಿ ತನ್ನ ಹುಟ್ಟುಹಬ್ಬದ ಸಂಭ್ರಮಕ್ಕಾಗಿ ಜಿಮ್‌ನಲ್ಲಿ ಗೆಳೆಯರನ್ನು ಆಹ್ವಾನಿಸಿದ್ದ ಸಂಭ್ರಮಾಚರಣೆಯ ವೇಳೆ ಸ್ನೇಹಿತ ಜೀತು ಸೈನಿಯ ಮುಖಕ್ಕೆ ಕೇಕ್ ಹಚ್ಚಿದ್ದ. ಈ ಕ್ಷುಲ್ಲಕ ಕಾರಣಕ್ಕಾಗಿ ಉಂಟಾದ ಬಿಸಿ ವಾದವು ಅನಿರೀಕ್ಷಿತ ಹಗೆತನಕ್ಕೆ ತಿರುಗಿತು. ಆರೋಪಿ ನಂತರ ಮಾರಕಾಸ್ತ್ರಗಳೊಂದಿಗೆ ಹಿಂತಿರುಗಿ ಅಮರದೀಪ್ (30), ಮನೀಶ್ (28) ಮತ್ತು ಆಕಾಶ್ (18) ಎಂಬ ಒಂದೇ ಕುಟುಂಬದ ಮೂವರನ್ನು ಗುಂಡಿಕ್ಕಿ ಕೊಂದಿದ್ದ.

ಮತ್ತಷ್ಟು ಓದಿ: ‘ಸೋಫಾ ಅಳತೆ ಮಾಡಿಕೊಡು ಬಾ’ ಎಂದು ಕರೆದು ಬರ್ಬರವಾಗಿ ಹತ್ಯೆ; ಬಾರ್ ಎದುರೇ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿದ ಆಟೋ ಚಾಲಕ!

ಜೀತು ಸೈನಿ ಸಾವಿನೊಂದಿಗೆ ಈ ಪ್ರಕರಣದಲ್ಲಿ ಇದುವರೆಗೆ ಆರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರ ಈ ಕ್ರಮದಿಂದ ತೃಪ್ತರಾಗಿರುವ ಸಂತ್ರಸ್ತರ ಕುಟುಂಬದ ಸದಸ್ಯರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ, ಆರೋಪಿಗಳ ಆಸ್ತಿಗಳನ್ನು ಕೆಡವಬೇಕೆಂದು ಅವರು ಒತ್ತಾಯಿಸಿದ್ದಾರೆ. ಸದ್ಯ ಮುನ್ನೆಚ್ಚರಿಕೆ ಕ್ರಮವಾಗಿ ಆರೋಪಿಯ ನಿವಾಸದ ಬಳಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

GT vs RCB: ಗಿಲ್ ಔಟಾದಾಗ ವಿರಾಟ್ ವಿಚಿತ್ರ ಸೆಲೆಬ್ರೇಷನ್: ಕೊಹ್ಲಿ ನಡೆಗೆ ಭಾರೀ ವಿರೋಧ – Kannada News | Virat Kohli strange celebration when Shubman Gill is out Kohli’s move draws criticism on SM

ಬೆಂಗಳೂರು (ಮೇ. 01): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 42ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು ಕಂಡಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ದೊಡ್ಡ ಟಾರ್ಗೆಟ್ ನೀಡಲು ವಿಫಲವಾಯಿತು. ಪರಿಣಾಮ ನಾಲ್ಕು ವಿಕೆಟ್‌ಗಳಿಂದ ಜಿಟಿ ಗೆದ್ದು ಬೀಗಿತು. ಈ ಪಂದ್ಯದಲ್ಲಿ ಕೆಲ ವಿಚಿತ್ರ ಘಟನೆ ಕೂಡ ನಡೆಯಿತು. ಜೇಸನ್ ಹೋಲ್ಡರ್ ಹಿಡಿದ ಕ್ಯಾಚ್ ವಿವಾದಕ್ಕೆ ಕಾರಣವಾದರೆ, ಅತ್ತ ವಿರಾಟ್ ಕೊಹ್ಲಿ (Virat Kohli) ಸೆಲೆಬ್ರೇಷನ್​ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಗುಜರಾತ್ ಟೈಟಾನ್ಸ್ ಗುರಿ ಬೆನ್ನಟ್ಟುವ ಸಂದರ್ಭ ಶುಭ್​ಮನ್ ಗಿಲ್ ಔಟಾದಾಗ ವಿರಾಟ್ ಕೊಹ್ಲಿ ಸೆಲೆಬ್ರೇಷನ್ ಮಾಡಿದ ರೀತಿ ಸಾಮಾಜಿಕ ತಾಣಗಳಲ್ಲಿ ಟೀಕೆಗೆ ಗುರಿಯಾಗಿದೆ. ಕ್ರಿಕೆಟ್ ಮೈದಾನದಲ್ಲಿ ವಿರಾಟ್ ಕೊಹ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಶಾಂತ ಸ್ವಭಾವ ಹೊಂದಿದ್ದರು. ಒಂದು ಕಾಲದಲ್ಲಿ ಆಕ್ರಮಣಶೀಲತೆಗೆ ಹೆಸರುವಾಸಿಯಾಗಿದ್ದ ಕೊಹ್ಲಿ ಅವರ ಸ್ವಭಾವ ಕಳೆದ ಕೆಲವು ವರ್ಷಗಳಿಂದ ಗಮನಾರ್ಹವಾಗಿ ಬದಲಾಗಿದೆ. ಆದಾಗ್ಯೂ, ನಿನ್ನೆಯ ಪಂದ್ಯದಲ್ಲಿ ಕೊಹ್ಲಿ ಅವರ ಹಳೆಯ ಆಕ್ರಮಣಶೀಲತೆ ಮೈದಾನದಲ್ಲಿ ಎದ್ದುಕಂಡಿತು.

ಗಿಲ್ ಅವರ ಕ್ಯಾಚ್ ಹಿಡಿದ ನಂತರ ವಿರಾಟ್ ಕೋಪ

ಟಾರ್ಗೆಟ್ ಬೆನ್ನಟ್ಟಲು ಬಂದ ಜಿಟಿ ಪರ ಶುಭ್​ಮನ್ ಗಿಲ್ ತಂಡಕ್ಕೆ ಸ್ಫೋಟಕ ಆರಂಭ ನೀಡಿದ್ದರು. ಆದರೆ, ಐದನೇ ಓವರ್‌ನ ಕೊನೆಯ ಎಸೆತದಲ್ಲಿ ಗಿಲ್ ವಿಕೆಟ್ ಪತನವಾಯಿತು. ಭುವನೇಶ್ವರ್ ಕುಮಾರ್ ಎಸೆತದಲ್ಲಿ ಗಿಲ್ ಬಿರುಸಿನ ಶಾಟ್ ಹೊಡೆದರು, ಆದರೆ ವಿರಾಟ್ ಕೊಹ್ಲಿ ಕವರ್‌ನಲ್ಲಿ ಕ್ಯಾಚ್ ಪಡೆದರು. ಕ್ಯಾಚ್ ಹಿಡಿದಾಗ ಕೊಹ್ಲಿ ಸಾಕಷ್ಟು ಆಕ್ರಮಣಕಾರಿಯಾದರು. ಮೊದಲು, ಗಿಲ್ ಅವರನ್ನು ಕೊಹ್ಲಿ ಕೆಲವು ಸೆಕೆಂಡುಗಳ ಕಾಲ ದಿಟ್ಟಿಸಿ ನೋಡಿದರು, ನಂತರ ಚೆಂಡನ್ನು ಬಲವಾಗಿ ನೆಲಕ್ಕೆ ಹೊಡೆದು ಬೊಬ್ಬೆ ಹೊಡೆಯಲು ಪ್ರಾರಂಭಿಸಿದರು.

ಗಿಲ್ ಔಟಾದಾಗ ವಿರಾಟ್ ಕೊಹ್ಲಿ ಮಾಡಿದ ಸೆಲೆಬ್ರೇಷನ್​ನ ವಿಡಿಯೋ

ವಿರಾಟ್ ಕೊಹ್ಲಿ ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ದೇಶೀಯ ಪಂದ್ಯದಲ್ಲಿ, ಅದರಲ್ಲೂ ಓರ್ವ ಶ್ರೇಷ್ಠ ಭಾರತೀಯ ಬ್ಯಾಟರ್ ಔಟಾದಾಗ ಈರೀತಿ ಸೆಲೆಬ್ರೇಷನ್ ಮಾಡಿದ್ದು ತಪ್ಪು ಎಂದು ಅನೇಕರು ಸಾಮಾಜಿಕ ತಾಣಗಳಲ್ಲಿ ಬರೆದುಕೊಳ್ಳುತ್ತಿದ್ದಾರೆ. ಒಟ್ಟಾರೆ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

GT vs RCB: ಕಳಪೆ ಬ್ಯಾಟಿಂಗ್‌, ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಆರ್​ಸಿಬಿ

ಸೋತರೂ ಎರಡನೇ ಸ್ಥಾನದಲ್ಲಿ ಆರ್​ಸಿಬಿ ಭದ್ರ

ಈ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಹಿನ್ನಡೆ ಏನೂ ಆಗಿಲ್ಲ, ಇನ್ನೂ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಆರ್‌ಸಿಬಿ ತಮ್ಮ ಒಂಬತ್ತು ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಗೆದ್ದಿದೆ ಮತ್ತು ಮೂರರಲ್ಲಿ ಸೋತಿದೆ. +1.420 ರ ನಿವ್ವಳ ರನ್ ದರದೊಂದಿಗೆ, ಆರ್‌ಸಿಬಿ ಇನ್ನೂ ಸುರಕ್ಷಿತ ಸ್ಥಾನದಲ್ಲಿದೆ, ಆದರೆ ಪಂಜಾಬ್ ಕಿಂಗ್ಸ್ ತಮ್ಮ ಸತತ ಗೆಲುವುಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ.

ಅತ್ತ, ಗುಜರಾತ್ ಟೈಟಾನ್ಸ್ ಈ ಗೆಲುವಿನೊಂದಿಗೆ 10 ಅಂಕಗಳನ್ನು ತಲುಪಿದೆ. ಗುಜರಾತ್ ಇದುವರೆಗೆ ಒಂಬತ್ತು ಪಂದ್ಯಗಳನ್ನು ಆಡಿದ್ದು, ಐದು ಪಂದ್ಯಗಳನ್ನು ಗೆದ್ದು ನಾಲ್ಕರಲ್ಲಿ ಸೋತಿದೆ. ಅವರು ಐದನೇ ಸ್ಥಾನದಲ್ಲಿದ್ದರೂ, ಅಗ್ರ ನಾಲ್ಕು ತಂಡಗಳೊಂದಿಗೆ ಅವರ ಅಂತರವು ಗಮನಾರ್ಹವಾಗಿ ಕಡಿಮೆಯಾಗಿದೆ. ಗುಜರಾತ್‌ನ ನಿವ್ವಳ ರನ್ ದರ ಪ್ರಸ್ತುತ -0.192 ಆಗಿದ್ದು, ಮುಂಬರುವ ಪಂದ್ಯಗಳಲ್ಲಿ ಗೆಲುವಿನ ಜೊತೆಗೆ ರನ್​ರೇಟ್ ಮುಖ್ಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version