Headlines

ಕುಂತ್ರೂ ನಿಂತ್ರೂ ಯಾರೋ ಎದುರುಗಡೆ ಬಂದ ಅನುಭವ: ವಿಚಿತ್ರವಾಗಿ ವರ್ತಿಸಿ ಮಹಿಳೆ ಸಾವು

ಚಿಕ್ಕಬಳ್ಳಾಪುರ, ಮಾರ್ಚ್​ 26: ಗಂಡು ದೆವ್ವವೊಂದು ಕೊಡಬಾರದ ಕಾಟ ಕೊಡುತ್ತಿದೆ ಅಂತ ಭಯಗೊಂಡಿದ್ದ ಓರ್ವ ಮಹಿಳೆ ಕೊನೆಗೂ ವಿಚಿತ್ರವಾಗಿ ವರ್ತಿಸಿ ಮೃತಪಟ್ಟಿರುವಂತಹ (death) ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುಳಾ(36) ಮೃತ ಮಹಿಳೆ. ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಮಂಜುಳಾರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ಮಂಜುಳಾ ಅವರು ದೊಡ್ಡಬಳ್ಳಾಪುರ ತಾಲೂಕಿನ ಸೋತೇನಹಳ್ಳಿ ಗ್ರಾಮದವರು. ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದ ರಮೇಶ್​…

Read More

Vaibhav Sooryavanshi: 440 ಎಸೆತಗಳಲ್ಲಿ ಸಾರ್ವಕಾಲಿಕ ದಾಖಲೆ ಧೂಳೀಪಟ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 1000 ರನ್​ ಪೂರೈಸಿದ ಬ್ಯಾಟರ್ ಯಾರು? ಈ ಪ್ರಶ್ನೆಗೆ ಇನ್ಮುಂದೆ ಒಂದೇ ಉತ್ತರ ವೈಭವ್ ಸೂರ್ಯವಂಶಿ. ಮುಲ್ಲನ್​ಪುರ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ವೈಭವ್ 96 ರನ್ ಸಿಡಿಸಿದ್ದರು. ಈ 97 ರನ್​ಗಳೊಂದಿಗೆ ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ 1000 ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ  ಸಾವಿರ ರನ್ ಪೂರೈಸಿದ ಅತ್ಯಂತ ಕಿರಿಯ ಬ್ಯಾಟರ್…

Read More

Video: ಪುಟಾಣಿ ತೊದಲು ನುಡಿಯಲ್ಲಿ ಬೈಯುತ್ತಿದ್ದರೆ ಮುಗುಳುನಗೆ ಬೀರಿದ ತಂದೆ – Kannada News | The father burst into laughter at his daughter’s scolding.

ಮಗಳು ಎಲ್ಲರಿಗೂ ಹುಟ್ಟೋದಿಲ್ಲ, ಪುಣ್ಯವಂತರಿಗೆ ಮಾತ್ರ ಮಗಳು ಹುಟ್ಟೋದು ಎನ್ನುವ ಮಾತಿದೆ. ಮಗಳು ಹುಟ್ಟಿದರೆ ಸಂಭ್ರಮಿಸುವ ಅಪ್ಪಂದಿರು (father) ಇದ್ದಾರೆ. ಹೌದು, ಪ್ರತಿಯೊಬ್ಬ ಅಪ್ಪನಿಗೆ ಮುದ್ದಿನ ಮಗಳು ಪುಟ್ಟ ರಾಜಕುಮಾರಿಯಾಗಿರುತ್ತಾಳೆ. ಇತ್ತ ತಂದೆ ಮಗಳ ತೊದಲ ನುಡಿ ಕೇಳುತ್ತ  ಎಲ್ಲಾ ನೋವನ್ನು ಮರೆಯುತ್ತಾನೆ. ಈ ದೃಶ್ಯ ನೋಡಿದ್ರೆ ನಿಮಗೂ ಕೂಡ ಹಾಗೆ ಅನಿಸುತ್ತದೆ. ಆದರೆ ಇಲ್ಲೊಂದು ಪುಟಾಣಿ ತನ್ನ ತಂದೆಗೆ ತನ್ನದೇ ಭಾಷೆಯಲ್ಲಿ ಬೈಯುತ್ತಿದೆ. ಮಗಳ ಮುದ್ದು ಮುದ್ದಾದ ಬೈಗುಳದ ಮಾತು ಕೇಳಿ ತಂದೆ ಮುಗುಳುನಗೆ ಬೀರಿರುವ…

Read More

ಟ್ರಾಫಿಕ್ ಕಿರಿಕಿರಿ, ದುಬಾರಿ ಬಾಡಿಗೆ ಇದ್ರೂ ಬೆಂಗಳೂರು ಬಿಡಲ್ಲ ಜನ! ಬಿಹಾರಿ ಯುವಕನ ವಿಡಿಯೋ ವೈರಲ್

ಬೆಂಗಳೂರು, ಮೇ 30: ಟ್ರಾಫಿಕ್ ಕಿರಿಕಿರಿ, ದುಬಾರಿ ಮನೆ ಬಾಡಿಗೆ ಹಾಗೂ ಒಂಟಿತನ ಕಾಡುತ್ತಿದ್ದರೂ ಸಹ ಜನ ಯಾಕೆ ಬೆಂಗಳೂರು (Bengaluru) ಬಿಟ್ಟು ಹೋಗಲು ಇಷ್ಟಪಡುವುದಿಲ್ಲ ಎಂಬುದನ್ನು ಬಿಹಾರ ಮೂಲದ ಯುವಕನೊಬ್ಬ ವಿವರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಮುಖ್ಯಾಂಶಗಳು ಟ್ರಾಫಿಕ್ ಹಾಗೂ ದುಬಾರಿ ಬಾಡಿಗೆ ಇದ್ದರೂ ಬೆಂಗಳೂರು ಬಿಡಲು ಜನ ಒಪ್ಪುತ್ತಿಲ್ಲ. ಸಿಲಿಕಾನ್ ಸಿಟಿಯ ಅದ್ಭುತ ಹವಾಮಾನವೇ ವಲಸಿಗರನ್ನು ಸೆಳೆಯಲು ಮುಖ್ಯ ಕಾರಣವಾಗಿದೆ. ವರ್ಕ್ ಫ್ರಮ್ ಹೋಮ್ ನೀಡಿದರೆ…

Read More

‘ಅಯೋಗ್ಯ 2’ ಚಿತ್ರದ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಹಾಡು ರಿಲೀಸ್; ಡ್ಯಾನ್ಸ್ ನೋಡಿ ಕಂಗಾಲಾದ ಪ್ರೇಕ್ಷಕ – Kannada News | Ayogya 2’s ‘Muddu Muddu Puttalakshmi’ Song: Dance Steps Spark Audience Disappointment

ಸ್ಯಾಂಡಲ್‌ವುಡ್‌ನಲ್ಲಿ ‘ಅಯೋಗ್ಯ’ ಸಿನಿಮಾ (Ayogya 2) ಭರ್ಜರಿ ಯಶಸ್ಸು ಕಂಡಿತ್ತು. ಇದರ ಸೀಕ್ವೆಲ್ ‘ಅಯೋಗ್ಯ 2’ ಆಗಸ್ಟ್ 7ರಂದು ತೆರೆಗೆ ಬರಲು ಸಜ್ಜಾಗಿದೆ. ಮೊದಲ ಭಾಗದ ಯಶಸ್ಸಿನ ಬೆನ್ನಲ್ಲೇ ಎರಡನೇ ಭಾಗದ ಮೇಲೂ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಇದೆ. ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರದ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ವಿಡಿಯೋ ಸಾಂಗ್ ನೋಡಿದ ಪ್ರೇಕ್ಷಕರು ಮಾತ್ರ ಸದ್ಯಕ್ಕೆ ತಲೆ ಕೆಡಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ನಟಿಸಿದ್ದಾರೆ. ಮಹೇಶ್ ಇದನ್ನು ನಿರ್ದೇಶನ ಮಾಡಿದ್ದಾರೆ. ‘ಮುದ್ದು…

Read More

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು

ತುಮಕೂರು, ಮಾರ್ಚ್​​ 30:  ಕೌಟುಂಬಿಕ ಕಲಹಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ. ಅಣ್ಣನಿಂದಲೇ ತಮ್ಮ ಭೀಕರವಾಗಿ ಕೊಲೆಯಾಗಿದ್ದರೆ, ತಂದೆಯೂ ಕೃತ್ಯಕ್ಕೆ ಸಾಥ್​​ ಕೊಟ್ಟಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಸ್ಟಾಲಿನ್​​ (29) ಮೃತ ಯುವಕನಾಗಿದ್ದು, ಆತನ ಸಹೋದರ ನವೀನ್​​ ಮತ್ತು ತಂದೆ ಜಾನ್​​ ಪಾಲ್​​ ಎಂಬುವವರೇ ಆರೋಪಿಗಳಾಗಿದ್ದಾರೆ. ಮೃತ ನವೀನ್​​ಗೆ ವಿವಾಹ ಕೂಡ ನಿಶ್ಚಯವಾಗಿತ್ತು. ಆತ ಜೊತೆಯಾಗಿ ಬಾಳಬೇಕಿದ್ದ ಯುವತಿ ಆಡಿದ್ದ ಒಂದು ಮಾತೇ ಸ್ಟಾಲಿನ್​​ ಕುಟುಂಬದಲ್ಲಿ ಬೆಂಕಿಯ ಕಿಡಿ…

Read More

TV9-Sensodyne Campaign | ಹಲ್ಲುಗಳ ವಯಸ್ಸು ಹೆಚ್ಚಾಗುವ ಮೊದಲು ಎಚ್ಚರ, ಇಂದೇ ನಿಮ್ಮ ಡೆಂಟಲ್ ಏಜ್ ಪರಿಶೀಲಿಸಿ

ಟಿವಿ9 ನೆಟ್‌ವರ್ಕ್ ಮತ್ತು ಸೆನ್ಸೋಡೈನ್ ಸಹಯೋಗದಲ್ಲಿ ಹಲ್ಲಿನ ಆರೋಗ್ಯದ (Oral Health) ಕುರಿತು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಿಂದ ಭಾರತೀಯರಲ್ಲಿ ಓರಲ್ ಹೆಲ್ತ್ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಈ ಅಭಿಯಾನವು, ಈ ಬಾರಿ ‘ವಿಶ್ವ ಓರಲ್ ಹೆಲ್ತ್ ದಿನ’ದ ಅಂಗವಾಗಿ ನಿಮ್ಮ ದಂತದ ಆಯುಷ್ಯವನ್ನು ತಿಳಿಯಲು ಉತ್ತೇಜಿಸುತ್ತಿದೆ. ನಿಮ್ಮ ನಿಜವಾದ ವಯಸ್ಸಿಗಿಂತ ನಿಮ್ಮ ಹಲ್ಲುಗಳ ಆಯುಷ್ಯ ಹೆಚ್ಚಾಗಿರುವ ಸಾಧ್ಯತೆ ಇರುತ್ತದೆ. ಇದನ್ನು ಪರೀಕ್ಷಿಸಲು ಒಂದು ಸರಳ ಮಾರ್ಗವನ್ನು ಸೂಚಿಸಲಾಗಿದೆ. ವೀಡಿಯೊದಲ್ಲಿ ನೀಡಲಾದ ಕ್ಯೂಆರ್ ಕೋಡ್…

Read More

Karnataka Air Quality: ಬೆಂಗಳೂರು, ಮಂಗಳೂರು, ಮೈಸೂರು ಜನರೇ ಎಚ್ಚರ, ಗಾಳಿಯ ಗುಣಮಟ್ಟದಲ್ಲಿ ಭಾರೀ ಇಳಿಕೆ – Kannada News | Bengaluru AQI Update: Pollution High in Hebbal, Peenya; Know Karnataka City Levels

ಬೆಂಗಳೂರು, ಜ.8: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದು (ಜನವರಿ 8, 2026) ವಾಯು ಗುಣಮಟ್ಟದ ಸೂಚ್ಯಂಕವು (AQI) ವಿವಿಧ ನಗರಗಳಲ್ಲಿ ವಿಭಿನ್ನವಾಗಿ ದಾಖಲಾಗಿದೆ. ಒಟ್ಟಾರೆಯಾಗಿ ಹೇಳುವುದಾದರೆ, ಚಳಿಗಾಲದ ಪ್ರಭಾವ ಮತ್ತು ವಾಹನ ಸಂಚಾರದ ಒತ್ತಡದಿಂದಾಗಿ ಕೆಲವು ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟ ಸ್ವಲ್ಪ ಏರಿಕೆಯಾಗಿದೆ. ಸಿಲಿಕಾನ್ ಸಿಟಿಯ ಕೆಲವು ಪ್ರದೇಶಗಳಾದ ಹೆಬ್ಬಾಳ, ಬಿಟಿಎಂ ಲೇಔಟ್ ಮತ್ತು ಪೀಣ್ಯದಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಿದೆ. ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ವಾಹನಗಳ ದಟ್ಟಣೆಯಿಂದಾಗಿ ಮಾಲಿನ್ಯದ ಮಟ್ಟ 170…

Read More

ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್: ಹಳೇ ಸಂದೇಶ ಮುಂದಿಟ್ಟು ಖರ್ಗೆಗೆ ಖಡಕ್ ಉತ್ತರ ಕೊಟ್ಟ RSS – Kannada News | RSS Responds to Priyank Kharge Row: Gurudakshina Is Devotion, Not Donation, Mohan Bhagwat old video circulating again

ಮೋಹನ್ ಭಾಗವತ್ ಹಾಗೂ ಪ್ರಿಯಾಂಕ್ ಖರ್ಗೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 16: ‘ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್’ ಎಂಬ ಮೋಹನ್ ಭಾಗವತ್ (Mohan Bhagwat) ಅವರ ಹೇಳಿಕೆಯನ್ನು ಮತ್ತೆ ಮುನ್ನೆಲೆಗೆ ತರುವ ಮೂಲಕವೇ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ಟೀಕಾಕಾರರಿಗೆ ಆರ್​ಎಸ್​ಎಸ್ (RSS) ಖಡಕ್ ಉತ್ತರ ನೀಡಿದೆ. ಆರ್​ಎಸ್​ಎಸ್​ನ ಆರ್ಥಿಕ ಮೂಲ ಯಾವುದು ಮತ್ತು ಅದು ತೆರಿಗೆ ಪಾವತಿಸುತ್ತಿದೆಯೇ ಎಂಬ ಪ್ರಶ್ನೆಗಳಿಗೆ ಈವರೆಗೆ ಉತ್ತರ ಸಿಕ್ಕಿಲ್ಲ ಎಂದು…

Read More

ICC Rankings: ಟಿ20 ವಿಶ್ವಕಪ್​ನಲ್ಲಿ ಸಿಡಿಲಬ್ಬರ; ಬರೋಬ್ಬರಿ 17 ಸ್ಥಾನ ಮೇಲೇರಿದ ಇಶಾನ್ ಕಿಶನ್ – Kannada News | ICC T20 Rankings: Abhishek Sharma #1, Ishan Kishan enters Top 10 amidst 2026 World Cup

ಪಾಕಿಸ್ತಾನದ ಸಾಹಿಬ್‌ಜಾದಾ ಫರ್ಹಾದನ್ ಎರಡು ಸ್ಥಾನ ಕುಸಿದು ಐದನೇ ಸ್ಥಾನಕ್ಕೆ ಇಳಿದಿದ್ದಾರೆ. ಸೂರ್ಯಕುಮಾರ್ ಯಾದವ್ ಆರನೇ ಸ್ಥಾನದಲ್ಲಿದ್ದರೆ, ಜೋಸ್ ಬಟ್ಲರ್ ಮೂರು ಸ್ಥಾನ ಕುಸಿದು 7ನೇ ಸ್ಥಾನಕ್ಕೆ ಇಳಿದಿದ್ದಾರೆ. ಇಶಾನ್ ಕಿಶನ್ 8ನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಟಿಮ್ ಸೀಫರ್ಟ್ 9ನೇ ಸ್ಥಾನ ಮತ್ತು ಟ್ರಾವಿಸ್ ಹೆಡ್ 10ನೇ ಸ್ಥಾನದಲ್ಲಿದ್ದಾರೆ. Source link

Read More