ಜಗತ್ತು ವಿನಾಶದ ಅಂಚಿನಲ್ಲಿದ್ಯಾ? ಆಂಥ್ರೋಪಿಕ್ನ ಮೃಣಾಂಕ್ ಶರ್ಮಾ ರಾಜೀನಾಮೆ ಪತ್ರದಲ್ಲಿ ಹೇಳಿದ್ದರ ಅರ್ಥವೇನು? – Kannada News | World in Peril, says Anthropic AI safety team chief Mrinank Sharma in his resignation letter

ಸ್ಯಾನ್ ಫ್ರಾನ್ಸಿಸ್ಕೋ, ಫೆಬ್ರುವರಿ 10: ಆಂಥ್ರೋಪಿಕ್​ನ ಸೇಫ್​ಗಾರ್ಡ್ಸ್ ರಿಸರ್ಚ್ ತಂಡದ ಮುಖ್ಯಸ್ಥರಾಗಿದ್ದ ಮೃಣಾಂಕ್ ಶರ್ಮಾ (Mrinank Sharma) ರಾಜೀನಾಮೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಈ ಜಗತ್ತು ವಿನಾಶದ ಅಂಚಿನಲ್ಲಿದೆ (The World in peril) ಎಂದು ಹೇಳಿಕೊಂಡು ಟ್ವೀಟ್ ಮಾಡಿದ್ದಾರೆ. ಆದರೆ ರಾಜೀನಾಮೆಗೆ ನಿರ್ದಿಷ್ಟ ಕಾರಣ ನೀಡದೇ ನಿಗೂಢವಾಗಿರುವ ಅವರ ಟ್ವೀಟ್ ಸಾಕಷ್ಟು ಕುತೂಹಲ ಕೆರಳಿಸುವಂತಿದೆ. ತಮ್ಮ ಟ್ವೀಟ್​ನಲ್ಲಿ ಅವರು ತಾವು ರಾಜೀನಾಮೆ ನೀಡಲು ಕಾರಣವೇನೆಂದು ವಿವರಿಸಿ ಬರೆದಿರುವ ಪತ್ರವೊಂದನ್ನು ಲಗತ್ತಿಸಿದ್ದಾರೆ.

ಮೃಣಾಂಕ್ ಶರ್ಮಾ ಅವರು ಅಂಥ್ರೋಪಿಕ್​ನಲ್ಲಿ ಸೇಫ್​ಗಾರ್ಡ್ಸ್ ರಿಸರ್ಚ್ ತಂಡದ ಮುಖ್ಯಸ್ಥರಾಗಿದ್ದರು. ‘ಜಗತ್ತು ವಿನಾಶದ ಅಂಚಿನಲ್ಲಿದೆ’ ಎಂದಿರುವ ಅವರ ಮಾತಿನ ಇಂಗಿತ ನಿಜಕ್ಕೂ ನಿಗೂಢತೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಬೆಂಗಳೂರು ಮೂಲದ ಸರ್ವಮ್​ನಿಂದ ಎಐ ಸಂಚಲನ; ಈ ಕಂಪನಿ ಹಿಂದಿನ ಇಬ್ಬರು ವ್ಯಕ್ತಿಗಳು ಯಾರು?

‘ಜಗತ್ತು ವಿನಾಶದಂಚಿನಲ್ಲಿದೆ. ಎಐ, ಅಥವಾ ಬಯೋವೆಪನ್​ಗಗಳಿಂದಷ್ಟೇ ಅಲ್ಲ, ಪರಸ್ಪರ ಜೋಡಿತವಾದ ವಿವಿಧ ಬಿಕ್ಕಟ್ಟುಗಳಿಂದ ಈ ಜಗತ್ತು ಅಪಾಯದಲ್ಲಿದೆ. ಈ ಜಗತ್ತಿನ ಮೇಲೆ ಪರಿಣಾಮ ಬೀರಬಲ್ಲ ನಮ್ಮ ಸಾಮರ್ಥ್ಯಕ್ಕೆ ತಕ್ಕುದಾದಷ್ಟು ವಿವೇಕ ನಮ್ಮಲ್ಲಿ ಬೆಳೆಯುವ ಅವಶ್ಯಕತೆ ಇದೆ..’ ಎಂದು ಮೃಣಾಂಕ್ ಶರ್ಮಾ ಹೇಳಿದ್ದಾರೆ.

ಅಂದರೆ, ಮನುಷ್ಯನ ಶಕ್ತಿಯು ಆತನ ಜವಾಬ್ದಾರಿಗಳನ್ನು ಮೀರಿ ಬೆಳೆಯುತ್ತಿದೆ. ಕೋತಿ ಕೈಯಲ್ಲಿ ಮಾಣಿಕ್ಯ ಸಿಕ್ಕಂತಾಗಿದೆ ಎಂಬರ್ಥದಲ್ಲಿ ಆಂಥ್ರೋಪಿಕ್​ನ ಈ ಉನ್ನತ ಅಧಿಕಾರಿ ಹೇಳಿರುವುದು ನಿಜಕ್ಕೂ ಎಐನ ಮುಂದಿನ ದಾರಿಯ ಬಗ್ಗೆ ಯಾರಿಗಾದರೂ ಕಳವಳ ಮೂಡಬಹುದು.

ಎಐ ಸುರಕ್ಷತೆ ವಿಚಾರದ ಬಗ್ಗೆ ತಮ್ಮ ಕಂಪನಿ ಹೆಚ್ಚಿನ ಆದ್ಯತೆ ಕೊಡುತ್ತಿಲ್ಲ ಎಂಬುದು ಮೃಣಾಂಕ್ ಬೇಸರ. ‘ಮೌಲ್ಯಗಳ ಆಧಾರದ ಮೇಲೆ ಕ್ರಿಯೆಗಳು ನಡೆಯುವುದು ಈಗ ಬಹಳ ಕಷ್ಟವೆಂಬುದು ಬಾರಿ ಬಾರಿ ತೋರುತ್ತಿದೆ. ಯಾವುದು ಬಹಳ ಮುಖ್ಯವಾಗಿದೆಯೋ ಅದನ್ನು ನಿರ್ಲಕ್ಷಿಸಲು ಈ ಸಂಸ್ಥೆಯಲ್ಲಿ ಮತ್ತು ನನ್ನಲ್ಲಿ ನಿರಂತರ ಒತ್ತಡ ಬರುವುದನ್ನು ಕಂಡಿದ್ದೇನೆ’ ಎಂದು ಆಂಥ್ರೋಪಿಕ್​ನ ಸೇಫ್​ಗಾರ್ಡ್ಸ್ ರಿಸರ್ಚ್ ಟೀಮ್​ನ ಮುಖ್ಯಸ್ಥ ಹೇಳಿದ್ಧಾರೆ.

ಇದನ್ನೂ ಓದಿ: ಐಟಿ ಸೆಕ್ಟರ್​ಗೆ ಆಂಥ್ರೋಪಿಕ್ ಶಾಕ್; ಇದರ ಹಿಂದಿರುವ ಬ್ರೇನ್ ಬೆಂಗಳೂರು ಮೂಲದ ವ್ಯಕ್ತಿಯದ್ದು

ಮೃಣಾಂಕ್ ಶರ್ಮಾ ಅವರ ಆಂಥ್ರೋಪಿಕ್ ಅವಧಿ ನಿನ್ನೆಯೇ (ಫೆ. 9) ಮುಗಿದಿದೆ. ಇದೀಗ ಅವರು ಬ್ರಿಟನ್ ದೇಶಕ್ಕೆ ಮರಳಿ ಹೋಗಲಿದ್ದಾರಂತೆ. ಒಂದಷ್ಟು ದಿನ ಕಾಣದ ಕಣ್ಮರೆಯಲ್ಲಿ ಇದ್ದುಬಿಡುವುದಾಗಿ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ. – Kannada News | Siddapura Vasanth Naik Murder Case: Suchitra gets Rs 35 Thousand From astrologer kamalakara bhat In First Meet

ಕಾರವಾರ, (ಫೆಬ್ರವರಿ 10): ರಾಜ್ಯವನ್ನೇ ಬೆಚ್ಚಿಬೀಳಿಸಿದ ಸಿದ್ದಾಪುರದ ವಸಂತ ನಾಯ್ಕ್ ಹತ್ಯೆ ಪ್ರಕರಣದ (siddapura Vasanth Naik Murder Case) ತನಿಖೆ ಆಳಕ್ಕಿಳಿಯುತ್ತಿದ್ದಂತೆ, ಆರೋಪಿಗಳಾದ ಕಮಲಾಕರ ಭಟ್ (astrologer kamalakara bhat) ಮತ್ತು ಪ್ರೇಯಸಿ ಸುಚಿತ್ರಾಳ (Suchitra) ಅಕ್ರಮ ಸಂಬಂಧದ ಬಗ್ಗೆ ರೋಚಕ ಹಾಗೂ ಅಷ್ಟೇ ಆಘಾತಕಾರಿ ಸಂಗತಿಗಳು ಒಂದೊಂದೇ ಹೊರಬರುತ್ತಿವೆ. ಈ ಜೋಡಿಯ ಸಂಬಂಧ ಕೇವಲ ಪ್ರೀತಿಗೆ ಸೀಮಿತವಾಗಿರದೆ, ಅದರ ಹಿಂದೆ ದೊಡ್ಡದೊಂದು ‘ಬ್ಲ್ಯಾಕ್‌ಮೇಲ್’ (Blackmail) ಮತ್ತು ‘ಹನಿಟ್ರ್ಯಾಪ್’ (Honeytrap) ಜಾಲವಿತ್ತು ಎಂಬ ಸ್ಫೋಟಕ ಮಾಹಿತಿ ಬಟಾಬಯಲಾಗಿದೆ. ಇನ್ನು ಮೊದಲ ಭೇಟಿಯಲ್ಲೇ ಸುಚಿತ್ರಾ, ಕಮಲಾಕರನನ್ನ ತನ್ನ ಖೆಡ್ಡಾಗೆ ಬೀಳಿಸಿಕೊಂಡಿದ್ದು,  ಫಸ್ಟ್​ ಭೇಟಿಯಲ್ಲೇ ನಿರೀಕ್ಷೆಗೂ ಮೀರಿ ಹಣ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಳು.

ಮೊದಲ ಭೇಟಿಯಲ್ಲೇ 35 ಸಾವಿರ ರೂ. ಕಮಾಯಿ

ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ. ಇದರಿಂದ ಫುಲ್ ಖುಷ್ ಆದ ಸುಚಿತ್ರಾ, ಅಂದಿನಿಂದ ಕಮಲಕರ್ ಭಟ್​​ನ ಹಿಂದೆಯೇ ಬಿದ್ದಿದ್ದಳು. ಹೌದು.. ಮೊದಲ ಭೇಟಿಯಲ್ಲೇ ಕಮಲಾಕರನನ್ನ ತನ್ನ ಖೆಡ್ಡಾಗೆ ಬೀಳಿಸಿಕೊಂಡಿದ್ದ ಸುಚಿತ್ರಾ, ಮೊದಲ ಸಲ ಕಮಲಾಕರ ಜೊತೆಗೆ ಹೋದಾಗ 10 ಸಾವಿರ ಸಿಗುವ ನಿರೀಕ್ಷೆಯಲ್ಲಿದ್ದಳು. ಆದ್ರೆ ಸುಚಿತ್ರಾಳ ಸೌಂದರ್ಯಕ್ಕೆ ಮನಸೋತ ಕಮಲಾಕರ, 35 ಸಾವಿರ ರೂಪಾಯಿ ಕೊಟ್ಟಿದ್ದ. ಮೊದಲ ಭೇಟಿಯಲ್ಲಿ ಕಲಮಕರ್ ಭಟ್, 25 ಸಾವಿರ ರೂ. ಸುಚಿತ್ರಾಳ ಸಂಭಾವನೆ ಮತ್ತು ಶಾಪಿಂಗ್ ಅಂತ 10 ಸಾವಿರ ರೂ. ನೀಡಿದ್ದ. ಇದರಿಂದ ಫುಲ್ ಖುಷ್ ಆಗಿದ್ದ ಸುಚಿತ್ರಾ, ಮೊದಲ ಭೇಟಿಯಲ್ಲಿ ಭಟ್ ನ ಬಗ್ಗೆ ತಿಳಿದುಕೊಂಡಿದ್ದು, ಕೇವಲ ಮೂರೇ ತಿಂಗಳಲ್ಲಿ ಕಮಲಕರ್ ಭಟ್ಟನನ್ನು ಸಂಪೂರ್ಣ ತನ್ನ ತೆಕ್ಕೆಗೆ ಹಾಕಿಕೊಂಡಿದ್ದಳು. ಸುಚಿತ್ರಾಳ ಗಂಡನ ಹೇಳಿಕೆಯಂತೆ ಆರು ತಿಂಗಳ ಹಿಂದೆ ಭಟ್ ನ ಜೊತೆಗೆ ಉಳಿದಿದ್ದಳು.

ಇದನ್ನೂ ಓದಿ: ಕಮಲಾಕರ ಭಟ್​​​ಗೆ ಮತ್ತೋರ್ವ ಮಹಿಳೆ, ಪಡ್ಡೆ ಹುಡುಗರ ಜತೆ ಸುಚಿತ್ರಾ: ಇಬ್ಬರ ಕಾಮದಾಟ, ಕಳ್ಳಾಟ ಬಯಲಿಗೆ

ಮಹೇಶ್ ನಾಯ್ಕ್ ನೀಡಿರುವ ಮಾಹಿತಿಯ ಪ್ರಕಾರ, ಆರೋಪಿ ಸುಚಿತ್ರಾ ಹಾಗೂ ಕಮಲಾಕರ ಭಟ್ ನಡುವಿನ ಸಂಬಂಧ ಆಕಸ್ಮಿಕವಾಗಿ ನಡೆದಿದ್ದಲ್ಲ. ಕಮಲಾಕರ ಭಟ್ ಸಂಪರ್ಕಕ್ಕೆ ಬಂದ ನಂತರ, ಆತನ ಹಿನ್ನೆಲೆ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸುಚಿತ್ರಾ ಸುಮಾರು ಒಂದು ವಾರಗಳ ಕಾಲ ಕೂಲಂಕಷವಾಗಿ ‘ಸ್ಟಡಿ’ ಮಾಡಿದ್ದಳು. ಆರಂಭದಲ್ಲಿ ಕೇವಲ 1 ರಿಂದ 2 ಲಕ್ಷ ರೂಪಾಯಿ ಹಣದ ಆಸೆಗಾಗಿ ಆಕೆ ಕಮಲಾಕರ ಭಟ್ ಜೊತೆ ದೈಹಿಕ ಸಂಬಂಧ ಬೆಳೆಸಲು ಮುಂದಾಗಿದ್ದಳು. ಆದರೆ, ಅಸಲಿ ಆಟ ಶುರುವಾಗಿದ್ದೇ ಅಲ್ಲಿಂದ. ಕಮಲಾಕರ ಭಟ್ ಜೊತೆ ಏಕಾಂತದಲ್ಲಿದ್ದಾಗ, ಆತನಿಗೆ ತಿಳಿಯದಂತೆ ಸುಚಿತ್ರಾ ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಗುಪ್ತವಾಗಿ ವಿಡಿಯೋ ಮಾಡಿಕೊಂಡಿದ್ದಳು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಸುಚಿತ್ರಾಳ ಬ್ಲ್ಯಾಕ್‌ಮೇಲ್‌ಗೆ ಹೆದರಿದ್ದ ಭಟ್

ಕಮಲಾಕರ ಭಟ್ ಟಿವಿ ಚಾನೆಲ್‌ಗಳ ಮೂಲಕ ರಾಜ್ಯದ ಜನತೆಗೆ ಜ್ಯೋತಿಷ್ಯ ಹೇಳುತ್ತಾ ಸಾಕಷ್ಟು ಹೆಸರು ಮತ್ತು ಖ್ಯಾತಿ ಗಳಿಸಿದ್ದ ವ್ಯಕ್ತಿ. ಆತ ನಡೆಸುತ್ತಿದ್ದ ಐಷಾರಾಮಿ ಜೀವನವನ್ನು ಕಂಡ ಸುಚಿತ್ರಾ, ತನ್ನ ಬಳಿ ಇದ್ದ ಅಶ್ಲೀಲ ವಿಡಿಯೋವನ್ನೇ ಅಸ್ತ್ರವನ್ನಾಗಿ ಬಳಸಿಕೊಂಡಿದ್ದಳು. ‘ನನ್ನನ್ನು ಮತ್ತು ನನ್ನ ಮಕ್ಕಳನ್ನು ನೀನೇ ಸಾಕಬೇಕು. ನನ್ನನ್ನು ಚೆನ್ನಾಗಿ ನೋಡಿಕೊಳ್ಳದಿದ್ದರೆ ನಿನ್ನ ಮಾನ ಮರ್ಯಾದೆ ಹರಾಜು ಹಾಕುತ್ತೇನೆ, ವಿಡಿಯೋ ಲೀಕ್ ಮಾಡುತ್ತೇನೆ’ ಎಂದು ಆಕೆ ಕಮಲಾಕರನಿಗೆ ಬೆದರಿಕೆ ಹಾಕಿದ್ದಳು ಎನ್ನಲಾಗಿದೆ. ಇದರಿಂದ ಸಮಾಜದಲ್ಲಿ ತಾನು ಗಳಿಸಿದ್ದ ಹೆಸರಿಗೆ ಎಲ್ಲಿ ಕುತ್ತು ಬರುತ್ತದೆಯೋ ಎಂಬ ಭಯಕ್ಕೆ ಬಿದ್ದ ಕಮಲಾಕರ ಭಟ್, ಸುಚಿತ್ರಾಳ ಬ್ಲ್ಯಾಕ್‌ಮೇಲ್‌ಗೆ ಮಣಿದಿದ್ದ. ಪರಿಣಾಮವಾಗಿ, ಆಕೆಯನ್ನು ಮತ್ತು ಆಕೆಯ ಮಕ್ಕಳನ್ನು ಕರೆದುಕೊಂಡು ಬಂದು ಶಿವಮೊಗ್ಗ ಸೇರಿದಂತೆ ಬೇರೆಡೆ ಪ್ರತ್ಯೇಕ ಮನೆ ಮಾಡಿಟ್ಟುಕೊಂಡು ವಾಸವಾಗಿದ್ದ.

ಅಲ್ಲದೇ ಆಕೆ ಕೇಳಿದ್ದನ್ನು ಇಲ್ಲ ಎಂದಿಲ್ಲ. ಆಕೆ ಕೇಳಿದ್ದಕ್ಕೆ ಎರಡು ಕಾರು, ಬುಲೆಟ್ ಬೈಕ್ ಸಹ ಕೊಡಿಸಿದ್ದ.
ಹೀಗೆ ಹಣ ಮತ್ತು ವಿಡಿಯೋ ಬ್ಲ್ಯಾಕ್‌ಮೇಲ್‌ನಿಂದ ಆರಂಭವಾದ ಸಂಬಂಧ, ಅಂತಿಮವಾಗಿ ಅಮಾಯಕ ವಸಂತ ನಾಯ್ಕ್ ಅವರ ಬರ್ಬರ ಹತ್ಯೆಯಲ್ಲಿ ಅಂತ್ಯ ಕಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

12 ವರ್ಷದ ಹಿಂದೆ ಬಿಡುಗಡೆ ರಜನಿಕಾಂತ್ ಸಿನಿಮಾದ ನಿರ್ಮಾಪಕರಿಗೆ ಈಗ ಸಂಕಷ್ಟ – Kannada News | Madras High Court orders Kochadaiiyaan movie producer to pay 2.52 crore rs to advertainment company

ರಜನೀಕಾಂತ್ (Rajinikanth) ವೃತ್ತಿ ಜೀವನದಲ್ಲಿ ಬಹಳ ಕಡಿಮೆ ಸಿನಿಮಾಗಳು ಫ್ಲಾಪ್ ಎನಿಸಿಕೊಂಡಿವೆ. ರಜನೀಕಾಂತ್ ಅವರ ಸಿನಿಮಾ ಫ್ಲಾಪ್ ಆದರೂ ಹಾಕಿರುವ ಬಂಡವಾಳಕ್ಕಿಂತಲೂ ತುಸು ಹೆಚ್ಚೇ ವಾಪಸ್ ಬಂದಿರುತ್ತದೆ. ಆದರೆ ರಜನೀಕಾಂತ್ ಅವರ ಕೆಲ ಸಿನಿಮಾಗಳಿವೆ, ಅವು ಇನ್ನಿಲ್ಲದಂತೆ ಬಾಕ್ಸ್ ಆಫೀಸ್​​ನಲ್ಲಿ ಸೋತಿವೆ. ಅವುಗಳಲ್ಲಿ ‘ಕೊಚಡಿಯನ್’ ಸಹ ಒಂದು. ರಜನೀಕಾಂತ್ ಅವರ ಪುತ್ರಿ ಸೌಂದರ್ಯ ರಜನೀಕಾಂತ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೀನಾಯ ಸೋಲು ಕಂಡಿತ್ತು. ಸಿನಿಮಾ ಬಿಡುಗಡೆ ಆಗಿ 12 ವರ್ಷಗಳ ಬಳಿಕ ಇದೀಗ ಈ ಸಿನಿಮಾದ ನಿರ್ಮಾಪಕರಿಗೆ ದೊಡ್ಡ ಸಂಕಷ್ಟವೊಂದು ಎದುರಾಗಿದೆ.

‘ಕೊಚಡಿಯನ್’ ಸಿನಿಮಾನಲ್ಲಿ ರಜನೀಕಾಂತ್ ನಾಯಕರಾದರೂ ಇದು ಕಾರ್ಟೂನ್ ಮಾದರಿಯ ಸಿನಿಮಾ. ಹಾಲಿವುಡ್​​ನಲ್ಲಿ ಆಗಷ್ಟೆ ಬಳಕೆಗೆ ಬಂದಿದ್ದ ಲೈವ್ ಆಕ್ಷನ್ ಅಥವಾ ಫರ್ಪಾಮೆನ್ಸ್ ಕ್ಯಾಪ್ಚರ್ ತಂತ್ರಜ್ಞಾನ ಬಳಸಿ ನಿರ್ಮಿಸಲಾಗಿದ್ದ ಅನಿಮೇಷನ್ ಸಿನಿಮಾ ಇದಾಗಿತ್ತು. ಸಿನಿಮಾನಲ್ಲಿ ರಜನೀಕಾಂತ್ ನಾಯಕ, ದೀಪಿಕಾ ಪಡುಕೋಣೆ ನಾಯಕಿ. ‘ಅವತಾರ್’, ‘ಅಡ್ವೇಂಚರ್ ಆಫ್ ಟಿನ್​​ಟಿನ್’ ಅಂಥಹಾ ಕೆಲವು ಸಿನಿಮಾಗಳು ಅದಾಗಲೇ ಈ ತಂತ್ರಜ್ಞಾನ ಬಳಸಿದ್ದವು. ‘ಕೊಚಡಿಯನ್’ ಸಿನಿಮಾನಲ್ಲಿ ಇದೇ ತಂತ್ರಜ್ಞಾನ ಬಳಸಲಾಗಿತ್ತಾದರೂ ಸಿನಿಮಾದ ಗುಣಮಟ್ಟ ಬಹಳ ಕಳಪೆಯಾಗಿತ್ತು. ಹಾಗಾಗಿ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಫ್ಲಾಪ್ ಆಯ್ತು.

ಸಿನಿಮಾದ ನಿರ್ಮಾಪಕರಾದ ಸುನಿಲ್ ಲುಲ್ಲ, ಸುನಂದ ಮುರಳಿ ಮನೋಹರ್, ಪ್ರಶಿತಾ ಚೌಧರಿ ಅವರುಗಳು ಭಾರಿ ನಷ್ಟ ಅನುಭವಿಸಿದ್ದರು. ಹಲವು ಬಾಕಿಗಳನ್ನು ಉಳಿಸಿಕೊಂಡಿದ್ದರು. ಕೆಲವರು ನಿರ್ಮಾಪಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಇದೇ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಆದೇಶ ಹೊರಡಿಸಿದ್ದು, ‘ಕೊಚಡಿಯನ್’ ನಿರ್ಮಾಪಕರು ಇನ್ನು ನಾಲ್ಕು ವಾರಗಳಲ್ಲಿ 2.50 ಕೋಟಿ ರೂಪಾಯಿ ಹಣವನ್ನು ನಿಗದಿತ ಸಂಸ್ಥೆಗೆ ನೀಡಬೇಕು ಎಂದಿದೆ.

ಇದನ್ನೂ ಓದಿ:ಸ್ವಚ್ಛತಾ ಕಾರ್ಮಿಕ ಮಹಿಳೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ?

ಅಭಿರ್ಚಂದ್ರ ನಹರ್ ಎಂಬುವರು ‘ಕೊಚಡಿಯನ್’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಮೀಡಿಯಾ ಒನ್ ಗ್ಲೋಬಲ್​ ಸಂಸ್ಥೆಯ ಜೊತೆಗೆ ಒಪ್ಪಂದ ಮಾಡಿಕೊಂಡು 20 ಕೋಟಿ ರೂಪಾಯಿ ಸಾಲವನ್ನು ನೀಡಿದ್ದರು. ಆದರೆ ಒಪ್ಪಂದಂತೆ ಸಿನಿಮಾದ ನಿರ್ಮಾಪಕರು ನಡೆದುಕೊಂಡಿಲ್ಲವಾದ್ದರಿಂದ ಅಭಿರ್ಚಂದ್ರ ನಹರ್ ದಾವೆ ಹೂಡಿದ್ದರು. 2021ರಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆದೇಶ ನೀಡಿ ಅಭಿರ್ಚಂದ್ರ ನಹರ್ ಅವರಿಗೆ 7.20 ಕೋಟಿ ಹಣ ನೀಡುವಂತೆ ಆದೇಶಿಸಿತ್ತು. ಆದರೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಮದ್ರಾಸ್ ಹೈಕೋರ್ಟ್​​ನಲ್ಲಿ ಪ್ರಶ್ನೆ ಮಾಡಲಾಗಿತ್ತು.

ಇದೀಗ ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದ್ದು ನಿರ್ಮಾಣ ಸಂಸ್ಥೆಯು ಈಗಾಗಲೇ 8.74 ಕೋಟಿ ಬಾಕಿ ತೀರಿಸಿದ್ದು, ಉಳಿದ 1.26 ಕೋಟಿಯ ದುಪ್ಪಟ್ಟು ಅಂದರೆ 2.52 ಕೋಟಿ ರೂಪಾಯಿಯನ್ನು ನಾಲ್ಕು ವಾರದ ಒಳಗೆ ನೀಡಬೇಕು ಅಥವಾ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ಹೇಳಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು: ಉಲ್ಲಂಘಿಸಿದರೆ ದಂಡ – Kannada News | GBA Cracks Down on Street Dog Feeding in Bengaluru: New Rules, Designated Centers

ಬೆಂಗಳೂರು, ಫೆ.10: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈಗ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ನೀಡುವುದಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಶ್ವಾನಪ್ರಿಯರು ಮತ್ತು ಸಾರ್ವಜನಿಕರ ನಡುವಿನ ಸಂಘರ್ಷವನ್ನು ತಪ್ಪಿಸಲು ಹಾಗೂ ಸ್ವಚ್ಛತೆಯನ್ನು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ. GBA ಅಡಿಯಲ್ಲಿ ಬರುವ ಐದೂ ನಗರ ಪಾಲಿಕೆಗಳಲ್ಲಿ ಪಶುಪಾಲನಾ ಇಲಾಖೆಯು ಒಟ್ಟು 450 ಅಧಿಕೃತ ಆಹಾರ ಕೇಂದ್ರಗಳನ್ನು ಗುರುತಿಸಿದೆ.

ಶೀಘ್ರದಲ್ಲೇ ಈ ಗುರುತಿಸಲಾದ ಸ್ಥಳಗಳಲ್ಲಿ ಶ್ವಾನಗಳಿಗೆ ಆಹಾರ ನೀಡುವ ಸ್ಥಳ ಎಂಬ ಫಲಕಗಳನ್ನು ಅಳವಡಿಸಲಾಗುವುದು ಎಂದು ಹೇಳಿದ್ದಾರೆ. ಅಧಿಕೃತ ಸ್ಥಳಗಳನ್ನು ಬಿಟ್ಟು ರಸ್ತೆಗಳಲ್ಲಿ, ಪಾದಚಾರಿ ಮಾರ್ಗಗಳಲ್ಲಿ ಅಥವಾ ಸಾರ್ವಜನಿಕರಿಗೆ ತೊಂದರೆಯಾಗುವ ಕಡೆಗಳಲ್ಲಿ ಆಹಾರ ನೀಡಿದರೆ ದಂಡ ವಿಧಿಸಲು GBA ನಿರ್ಧರಿಸಿದೆ ಎಂದು ಹೇಳಿದ್ದಾರೆ. ಆಹಾರ ನೀಡುವವರು ಆ ಜಾಗವನ್ನು ಸ್ವಚ್ಛವಾಗಿಡಬೇಕು ಮತ್ತು ಜನದಟ್ಟಣೆ ಕಡಿಮೆ ಇರುವ ಸಮಯದಲ್ಲಿ ಆಹಾರ ನೀಡಬೇಕು ಎಂಬ ಸೂಚನೆಯೂ ಇದೆ.

ಇದನ್ನೂ ಓದಿ: ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಕುಟುಂಬದ ಪ್ರಾಣ

ಪಾಲಿಕೆವಾರು ಗುರುತಿಸಲಾದ ಆಹಾರ ಕೇಂದ್ರಗಳು:

ಪಾಲಿಕೆ ವ್ಯಾಪ್ತಿ ಆಹಾರ ಕೇಂದ್ರಗಳ ಸಂಖ್ಯೆ
ಬೆಂಗಳೂರು ಪೂರ್ವ (East) 150
ಬೆಂಗಳೂರು ಕೇಂದ್ರ (Central) 90
ಬೆಂಗಳೂರು ಪಶ್ಚಿಮ (West) 85
ಬೆಂಗಳೂರು ಉತ್ತರ (North) 70
ಬೆಂಗಳೂರು ದಕ್ಷಿಣ (South) 68

ಈ ನಿರ್ಧಾರಕ್ಕೆ ಶ್ವಾನಪ್ರಿಯರು ಮತ್ತು ಪ್ರಾಣಿ ಹಕ್ಕು ಹೋರಾಟಗಾರರಿಂದ ಅಸಮಾಧಾನ ವ್ಯಕ್ತವಾಗಿದೆ. ನಾಯಿಗಳು ‘ಟೆರಿಟೋರಿಯಲ್’ ಪ್ರವೃತ್ತಿ ಹೊಂದಿದ್ದು, ಒಂದು ಏರಿಯಾದ ನಾಯಿಗಳು ಮತ್ತೊಂದು ಏರಿಯಾಕ್ಕೆ ಹೋಗಿ ಆಹಾರ ಸೇವಿಸುವುದಿಲ್ಲ. ಹೀಗಾಗಿ, ಎಲ್ಲೋ ಒಂದು ಕಡೆ ಪಾಯಿಂಟ್ ಗುರುತಿಸುವುದು ನಾಯಿಗಳ ನಡುವೆ ಕಾದಾಟಕ್ಕೆ ಮತ್ತು ಹಸಿವಿನಿಂದ ಅವುಗಳ ಆಕ್ರೋಶಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ವರದಿ: ಲಕ್ಷ್ಮೀ ನರಸಿಂಹ 

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾದ ಸರ್ಕಾರ – Kannada News | India’s First AI University in Amaravati by Andhra Pradesh and NVIDIA: A Global Leap

ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ಭಾರತವನ್ನು ಜಾಗತಿಕ ಮಟ್ಟಕ್ಕೆ ತರುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದಾಗಿದೆ. ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆಯು ಇತ್ತೀಚೆಗೆ ಕೃತಕ ಬುದ್ಧಿಮತ್ತೆ ಪರಿಸರ ವ್ಯವಸ್ಥೆ, ಮೂಲಸೌಕರ್ಯ ಮತ್ತು ತರಬೇತಿ ಕೇಂದ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕೃತ ಆದೇಶ (GO) ಹೊರಡಿಸಿದ್ದು, ಈ ವಿಶ್ವವಿದ್ಯಾಲಯವನ್ನು ಜಾಗತಿಕ ತಂತ್ರಜ್ಞಾನ ದೈತ್ಯ NVIDIA ಸಹಯೋಗದೊಂದಿಗೆ “AI ಲಿವಿಂಗ್ ಲ್ಯಾಬ್ಸ್” ಎಂಬ ಹೆಸರಿನಲ್ಲಿ ಸ್ಥಾಪಿಸಲಾಗುತ್ತಿದೆ. ವರದಿಗಳ ಪ್ರಕಾರ, ಇದರ ಕಾರ್ಯಾಚರಣೆಗಳು ಇದೇ ತಿಂಗಳ 19ರಿಂದ ಪ್ರಾರಂಭವಾಗಲಿವೆ.

ರಾಜ್ಯ ಸರ್ಕಾರವು ಈ ಯೋಜನೆಯನ್ನು 2013ರ ಕಂಪನಿ ಕಾಯ್ದೆಯ ಸೆಕ್ಷನ್ 8ರ ಅಡಿಯಲ್ಲಿ ಲಾಭರಹಿತ ಸಂಸ್ಥೆಯಾಗಿ ಸ್ಥಾಪಿಸಲು ಅನುಮೋದನೆ ನೀಡಿದೆ. ಇದರ ಮೂಲಕ ಶಿಕ್ಷಣ, ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಸ್ಟಾರ್ಟ್‌ಅಪ್ ಸಂಸ್ಥೆಗಳಿಗೆ ವಿಶ್ವಮಟ್ಟದ ಸೌಲಭ್ಯಗಳನ್ನು ಒದಗಿಸುವ ಉದ್ದೇಶವಿದೆ. ಐಟಿ ಇಲಾಖೆ ಮತ್ತು NVIDIA ಕಾರ್ಪೊರೇಷನ್ ನಡುವೆ ಸಹಿ ಹಾಕಿರುವ ಒಪ್ಪಂದದ ಮೂಲಕ ಅತ್ಯಾಧುನಿಕ AI ತಂತ್ರಜ್ಞಾನ, ಹಾರ್ಡ್‌ವೇರ್ ಮತ್ತು ತರಬೇತಿ ವ್ಯವಸ್ಥೆಗಳು ನೇರವಾಗಿ ಲಭ್ಯವಾಗಲಿವೆ.

ಈ ವಿಶ್ವವಿದ್ಯಾಲಯದ ಪ್ರಧಾನ ಕಚೇರಿ ಅಮರಾವತಿಯಲ್ಲಿ ಇರಲಿದ್ದು, ಅಲ್ಲಿಂದ ರಾಜ್ಯಾದ್ಯಂತ ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗಿದೆ. ಇದು ಕೇವಲ ಶೈಕ್ಷಣಿಕ ಸಂಸ್ಥೆಯಾಗಿರದೆ, ಸಂಶೋಧನೆ ಮತ್ತು ನವೋದ್ಯಮಗಳಿಗೆ ಕೇಂದ್ರಬಿಂದುವಾಗಿ ಕೆಲಸ ಮಾಡಲಿದೆ. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ, ಲೈವ್ ಪ್ರಾಜೆಕ್ಟ್‌ಗಳು, ಇಂಡಸ್ಟ್ರಿ ಇಂಟರ್ನ್‌ಶಿಪ್‌ಗಳು ಮತ್ತು ಜಾಗತಿಕ ತಜ್ಞರ ಮಾರ್ಗದರ್ಶನದೊಂದಿಗೆ ಕೈಗಾರಿಕಾ ಅಗತ್ಯಗಳಿಗೆ ತಕ್ಕ ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ: ಹುಶಾರ್​…. ಮಕ್ಕಳಿಗೆ ಕಂಡ ಕಂಡ ಹಾಗೆ ಚಾಟ್​ ಜಿಪಿಟಿ ಬಳಸಲು ಬಿಡಬೇಡಿ; ಪ್ರಾಣಕ್ಕೆ ಕುತ್ತು ತರಬಹುದು!

ಈ ಯೋಜನೆ ಶಿಕ್ಷಣಕ್ಕೆ ಮಾತ್ರ ಸೀಮಿತವಾಗಿಲ್ಲ. ಕೃಷಿ, ಆರೋಗ್ಯ ರಕ್ಷಣೆ, ಉತ್ಪಾದನಾ ಕ್ಷೇತ್ರ, ಫಿನ್‌ಟೆಕ್, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಸರ್ಕಾರಿ ಆಡಳಿತದಲ್ಲಿ AI ಬಳಕೆಯನ್ನು ಉತ್ತೇಜಿಸುವುದು ಇದರ ಪ್ರಮುಖ ಗುರಿಯಾಗಿದೆ. ರೈತರಿಗೆ ಮುಂಗಡ ಬೆಳೆ ಅಂದಾಜು, ಆಸ್ಪತ್ರೆಗಳಲ್ಲಿ ತ್ವರಿತ ರೋಗನಿರ್ಣಯ, ಕೈಗಾರಿಕೆಯಲ್ಲಿ ಸ್ಮಾರ್ಟ್ ಉತ್ಪಾದನೆ ಮತ್ತು ಸರ್ಕಾರಿ ಸೇವೆಗಳ ಸುಧಾರಣೆಗೆ AI ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಇದು ಸಹಾಯ ಮಾಡಲಿದೆ.

ಈ ವಿಶ್ವವಿದ್ಯಾಲಯ ಸಮಯಕ್ಕೆ ಸರಿಯಾಗಿ ಕಾರ್ಯಾರಂಭ ಮಾಡಿದರೆ, ಅಮರಾವತಿ ದೇಶದ ಮೊದಲ AI ವಿಶ್ವವಿದ್ಯಾಲಯದ ಹೆಗ್ಗಳಿಕೆಯನ್ನು ಪಡೆದು ಇತಿಹಾಸ ಸೃಷ್ಟಿಸಲಿದೆ. ಇದರಿಂದ ಆಂಧ್ರಪ್ರದೇಶ ರಾಜ್ಯವು ತಂತ್ರಜ್ಞಾನ ಮತ್ತು ನವೋದ್ಯಮ ಕ್ಷೇತ್ರದಲ್ಲಿ ಮುಂಚೂಣಿಗೆ ಬರಲಿದ್ದು, ಯುವಕರಿಗೆ ಹೊಸ ಉದ್ಯೋಗಾವಕಾಶಗಳು ಹಾಗೂ ಜಾಗತಿಕ ಮಟ್ಟದ ಕಲಿಕೆ ಅವಕಾಶಗಳು ದೊರೆಯಲಿವೆ. ಭಾರತದ ಡಿಜಿಟಲ್ ಭವಿಷ್ಯ ನಿರ್ಮಾಣದಲ್ಲಿ ಈ ಯೋಜನೆ ಮಹತ್ವದ ಮೈಲಿಗಲ್ಲಾಗಲಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On – 3:00 pm, Tue, 10 February 26

Source link

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ನೋಟಿಸ್, ಸಹಿ ಹಾಕಲ್ಲ ಎಂದ ಟಿಎಂಸಿ ಶಾಸಕರು – Kannada News | Congress Moves No Confidence Motion Against Speaker Om Birla

ನವದೆಹಲಿ, ಫೆಬ್ರವರಿ 10: ಕಾಂಗ್ರೆಸ್(Congress) ಪಕ್ಷವು ಇತರೆ ವಿರೋಧ ಪಕ್ಷಗಳೊಂದಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿಯ ನೋಟಿಸ್​ ಅನ್ನು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಅವರಿಗೆ ಸಲ್ಲಿಸಿದೆ. ಈ ಗೊತ್ತುವಳಿಗಳಿಗೆ ಯಾವುದೇ ಟಿಎಂಸಿ ನಾಯಕರು ಸಹಿ ಹಾಕಿಲ್ಲ. ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷವು ನಿಯಮ 94ಸಿ ಅಡಿಯಲ್ಲಿ ಅವಿಶ್ವಾಸ ಗೊತ್ತುವಳಿ ನೋಟಿಸ್ ಸಲ್ಲಿಸಿದೆ.

ನೋಟಿಸ್ ಅನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ ಎಂದು ಲೋಕಸಭಾ ಸಚಿವಾಲಯದ ಮುಳಗಳು ತಿಳಿಸಿವೆ. ಮೂಲಗಳ ಪ್ರಕಾರ, ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಮಂಡಿಸಿದ ಅವಿಶ್ವಾಸ ನಿರ್ಣಯದಲ್ಲಿ ಭಾರತೀಯ ಸಂವಿಧಾನದ 94(ಸಿ) ವಿಧಿಯ ನಿಬಂಧನೆಗಳ ಅಡಿಯಲ್ಲಿ ಓಂ ಬಿರ್ಲಾ ಅವರನ್ನು ಲೋಕಸಭಾ ಸ್ಪೀಕರ್ ಹುದ್ದೆಯಿಂದ ತೆಗೆದುಹಾಕುವ ಪ್ರಸ್ತಾವನೆಯ ಸೂಚನೆ ನೀಡಲಾಗಿದೆ.

ಏಕೆಂದರೆ ಅವರು ಲೋಕಸಭೆಯ ವ್ಯವಹಾರವನ್ನು ಏಕಪಕ್ಷೀಯವಾಗಿ ನಡೆಸುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬಂದಿವೆ.
ಹಲವು ಸಂದರ್ಭಗಳಲ್ಲಿ ವಿರೋಧ ಪಕ್ಷಗಳ ನಾಯಕರಿಗೆ ಮಾತನಾಡಲು ಅನುಮತಿ ನಿರಾಕರಿಸಲಾಗಿದೆ, ಇದು ಸಂಸತ್ತಿನಲ್ಲಿ ಅವರ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕು ಎಂದು ಹೇಳಲಾಗಿದೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಇಂದು ಇಂಡಿ ನಾಯಕರೊಂದಿಗೆ ಸಭೆ ನಡೆಸಿದರು. ಸಭೆಯ ನಂತರ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮಾತನಾಡಿ, ಕಾಂಗ್ರೆಸ್ ಪಕ್ಷವು ಮೊದಲು ತನ್ನ ನಾಲ್ಕು ಬೇಡಿಕೆಗಳನ್ನು ಲಿಖಿತವಾಗಿ ಸ್ಪೀಕರ್​ಗೆ ಸಲ್ಲಿಸಿ, ಅವುಗಳನ್ನು ಚರ್ಚಿಸಲು ಮೂರು ದಿನಗಳ ಕಾಲಾವಕಾಶ ನೀಡಿ, ನಂತರ ಅವರ ಬೇಡಿಕೆಗಳು ಇನ್ನೂ ಈಡೇರದಿದ್ದರೆ ಅವಿಶ್ವಾಸ ನಿರ್ಣಯ ಮಂಡಿಸುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಈ ಕಾರಣಕ್ಕಾಗಿ ಟಿಎಂಸಿ ಸಹಿ ಹಾಕಿಲ್ಲ.

ಮತ್ತಷ್ಟು ಓದಿ: ಮೋದಿ ಕುರ್ಚಿ ಸುತ್ತುವರೆದಿದ್ದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿಯ ಮಹಿಳಾ ಸಂಸದರು

ಈ ಹಿಂದೆ 1954 1966 ಹಾಗೂ 1987ರಲ್ಲಿ ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಗಳನ್ನು ಮಂಡಿಸಲಾಗಿತ್ತು. ಡಿಸೆಂಬರ್ 1954ರಲ್ಲಿ ಗಣೇಶ್ ವಾಸುದೇವ್ ಮಾವಲಂಕರ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಲಾಯಿತು. ನಂತರದ ದಿನಗಳಲ್ಲಿ 1966ರ ನವೆಂಬರ್​ನಲ್ಲಿ ಹುಕಮ್​​ ಸಿಂಗ್ ವಿರುದ್ಧ ಮತ್ತು 1987ರ ಏಪ್ರಿಲ್​ನಲ್ಲಿ ಬಲರಾಮ್ ಜಾಖರ್ ವಿರುದ್ಧ ಅವಿಶ್ವಾಸ ನಿರ್ಣಯಗಳನ್ನು ಮಂಡಿಸಲಾಯಿತು. ಆದರೆ ಅವರಲ್ಲಿ ಯಾರೂ ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

IPL 2026: ಐಪಿಎಲ್​ಗೆ ‘ಯುಪಿ ವಾರಿಯರ್ಸ್’ ತಂಡ ಎಂಟ್ರಿ? – Kannada News | Capri Global a frontrunner to buy Rajasthan Royals

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಆರಂಭಕ್ಕೂ ಮುನ್ನ ಎರಡು ಫ್ರಾಂಚೈಸಿಗಳ ಮಾಲೀಕರು ಬದಲಾಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಡಿಯಾಜಿಯೋ ಕಂಪೆನಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾರಾಟಕ್ಕೆ ಬಿಡ್ಡಿಂಗ್ ಆಹ್ವಾನಿಸಿದೆ.

ಇದರ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಸಹ ಮಾರಾಟ ಮಾಡಲು ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಮುಂದಾಗಿದೆ. ಅದರಂತೆ ಇದೀಗ ಆರ್​ಆರ್ ತಂಡದ ಖರೀದಿಗೂ ಬಿಡ್ಡಿಂಗ್​ಗಳನ್ನು ಆಹ್ವಾನಿಸಲಾಗಿದೆ. ಹೀಗಾಗಿ ಐಪಿಎಲ್​ ಆರಂಭಕ್ಕೂ ಮುನ್ನ ಆರ್​ಸಿಬಿ ಮತ್ತು ಆರ್​ಆರ್ ತಂಡಗಳ ಮಾಲೀಕರು ಬದಲಾಗುವ ಸಾಧ್ಯತೆ ಹೆಚ್ಚಿದೆ.

ಇಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಖರೀದಿಗೆ ಕ್ಯಾಪ್ರಿ ಗ್ಲೋಬಲ್ ಆಸಕ್ತಿ ತೋರಿರುವುದು ವಿಶೇಷ. ಐಪಿಎಲ್​ನಲ್ಲಿ 18 ವರ್ಷಗಳನ್ನು ಪೂರೈಸಿರುವ ಹಳೆಯ ಫ್ರಾಂಚೈಸಿಯನ್ನು ಬಹುಪಾಲನ್ನು ಖರೀದಿಸಲು ಕ್ಯಾಪ್ರಿ ಗ್ಲೋಬಲ್ ಮಾತುಕತೆ ನಡೆಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಕ್ಯಾಪ್ರಿ ಗ್ಲೋಬಲ್ ಪಾಲಾಗುವ ಸಾಧ್ಯತೆ ಹೆಚ್ಚಿದೆ.

ಕುತೂಹಲಕಾರಿ ವಿಷಯ ಎಂದರೆ, ಕ್ಯಾಪ್ರಿ ಗ್ಲೋಬಲ್ ಕಂಪೆನಿಯು ಈಗಾಗಲೇ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಯುಪಿ ವಾರಿಯರ್ಸ್ ಹೆಸರಿನ ತಂಡವೊಂದನ್ನು ಕಣಕ್ಕಿಳಿಸುತ್ತಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಕ್ಯಾಪ್ರಿ ಗ್ಲೋಬಲ್ ಖರೀದಿಸಿದರೆ ಆರ್​ಆರ್ ತಂಡದ ಹೆಸರು ಬದಲಾವಣೆಯಾಗುವುದು ಖಚಿತ. ಅದರಂತೆ ರಾಜಸ್ಥಾನ್ ರಾಯಲ್ಸ್ ಬದಲಿಗೆ ಐಪಿಎಲ್​ನಲ್ಲಿ ಯುಪಿ ವಾರಿಯರ್ಸ್ ಹೆಸರಿನ ತಂಡ ಕಣಕ್ಕಿಳಿಯಲಿದೆ.

ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಅವ್ರಾಮ್ ಗ್ಲೇಝರ್ ಬಿಡ್ ಸಲ್ಲಿಸಿದ್ದಾರೆ. ಇವರೊಂದಿಗೆ ಅದಾನಿ ಗ್ರೂಪ್, ಆದಾರ್ ಪೂನವಾಲ ಸೇರಿದಂತೆ ಕೆಲ ಉದ್ಯಮಿಗಳು ಆರ್​ಸಿಬಿ ಫ್ರಾಂಚೈಸಿಯ ಖರೀದಿಗೆ ಆಸಕ್ತಿ ತೋರಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಕೂಡ ಬದಲಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

Published On – 3:09 pm, Tue, 10 February 26

Source link

AI University: ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯ ಮುಂದಾದ ಸರ್ಕಾರ – Kannada News | India’s First AI University in Amaravati by Andhra Pradesh and NVIDIA: A Global Leap

ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ಭಾರತವನ್ನು ಜಾಗತಿಕ ಮಟ್ಟಕ್ಕೆ ತರುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಮರಾವತಿಯಲ್ಲಿ ದೇಶದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದಾಗಿದೆ. ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆಯು ಇತ್ತೀಚೆಗೆ ಕೃತಕ ಬುದ್ಧಿಮತ್ತೆ ಪರಿಸರ ವ್ಯವಸ್ಥೆ, ಮೂಲಸೌಕರ್ಯ ಮತ್ತು ತರಬೇತಿ ಕೇಂದ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕೃತ ಆದೇಶ (GO) ಹೊರಡಿಸಿದ್ದು, ಈ ವಿಶ್ವವಿದ್ಯಾಲಯವನ್ನು ಜಾಗತಿಕ ತಂತ್ರಜ್ಞಾನ ದೈತ್ಯ NVIDIA ಸಹಯೋಗದೊಂದಿಗೆ “AI ಲಿವಿಂಗ್ ಲ್ಯಾಬ್ಸ್” ಎಂಬ ಹೆಸರಿನಲ್ಲಿ ಸ್ಥಾಪಿಸಲಾಗುತ್ತಿದೆ. ವರದಿಗಳ ಪ್ರಕಾರ, ಇದರ ಕಾರ್ಯಾಚರಣೆಗಳು ಇದೇ ತಿಂಗಳ 19ರಿಂದ ಪ್ರಾರಂಭವಾಗಲಿವೆ.

ರಾಜ್ಯ ಸರ್ಕಾರವು ಈ ಯೋಜನೆಯನ್ನು 2013ರ ಕಂಪನಿ ಕಾಯ್ದೆಯ ಸೆಕ್ಷನ್ 8ರ ಅಡಿಯಲ್ಲಿ ಲಾಭರಹಿತ ಸಂಸ್ಥೆಯಾಗಿ ಸ್ಥಾಪಿಸಲು ಅನುಮೋದನೆ ನೀಡಿದೆ. ಇದರ ಮೂಲಕ ಶಿಕ್ಷಣ, ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಸ್ಟಾರ್ಟ್‌ಅಪ್ ಸಂಸ್ಥೆಗಳಿಗೆ ವಿಶ್ವಮಟ್ಟದ ಸೌಲಭ್ಯಗಳನ್ನು ಒದಗಿಸುವ ಉದ್ದೇಶವಿದೆ. ಐಟಿ ಇಲಾಖೆ ಮತ್ತು NVIDIA ಕಾರ್ಪೊರೇಷನ್ ನಡುವೆ ಸಹಿ ಹಾಕಿರುವ ಒಪ್ಪಂದದ ಮೂಲಕ ಅತ್ಯಾಧುನಿಕ AI ತಂತ್ರಜ್ಞಾನ, ಹಾರ್ಡ್‌ವೇರ್ ಮತ್ತು ತರಬೇತಿ ವ್ಯವಸ್ಥೆಗಳು ನೇರವಾಗಿ ಲಭ್ಯವಾಗಲಿವೆ.

ಈ ವಿಶ್ವವಿದ್ಯಾಲಯದ ಪ್ರಧಾನ ಕಚೇರಿ ಅಮರಾವತಿಯಲ್ಲಿ ಇರಲಿದ್ದು, ಅಲ್ಲಿಂದ ರಾಜ್ಯಾದ್ಯಂತ ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗಿದೆ. ಇದು ಕೇವಲ ಶೈಕ್ಷಣಿಕ ಸಂಸ್ಥೆಯಾಗಿರದೆ, ಸಂಶೋಧನೆ ಮತ್ತು ನವೋದ್ಯಮಗಳಿಗೆ ಕೇಂದ್ರಬಿಂದುವಾಗಿ ಕೆಲಸ ಮಾಡಲಿದೆ. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ, ಲೈವ್ ಪ್ರಾಜೆಕ್ಟ್‌ಗಳು, ಇಂಡಸ್ಟ್ರಿ ಇಂಟರ್ನ್‌ಶಿಪ್‌ಗಳು ಮತ್ತು ಜಾಗತಿಕ ತಜ್ಞರ ಮಾರ್ಗದರ್ಶನದೊಂದಿಗೆ ಕೈಗಾರಿಕಾ ಅಗತ್ಯಗಳಿಗೆ ತಕ್ಕ ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ: ಹುಶಾರ್​…. ಮಕ್ಕಳಿಗೆ ಕಂಡ ಕಂಡ ಹಾಗೆ ಚಾಟ್​ ಜಿಪಿಟಿ ಬಳಸಲು ಬಿಡಬೇಡಿ; ಪ್ರಾಣಕ್ಕೆ ಕುತ್ತು ತರಬಹುದು!

ಈ ಯೋಜನೆ ಶಿಕ್ಷಣಕ್ಕೆ ಮಾತ್ರ ಸೀಮಿತವಾಗಿಲ್ಲ. ಕೃಷಿ, ಆರೋಗ್ಯ ರಕ್ಷಣೆ, ಉತ್ಪಾದನಾ ಕ್ಷೇತ್ರ, ಫಿನ್‌ಟೆಕ್, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಸರ್ಕಾರಿ ಆಡಳಿತದಲ್ಲಿ AI ಬಳಕೆಯನ್ನು ಉತ್ತೇಜಿಸುವುದು ಇದರ ಪ್ರಮುಖ ಗುರಿಯಾಗಿದೆ. ರೈತರಿಗೆ ಮುಂಗಡ ಬೆಳೆ ಅಂದಾಜು, ಆಸ್ಪತ್ರೆಗಳಲ್ಲಿ ತ್ವರಿತ ರೋಗನಿರ್ಣಯ, ಕೈಗಾರಿಕೆಯಲ್ಲಿ ಸ್ಮಾರ್ಟ್ ಉತ್ಪಾದನೆ ಮತ್ತು ಸರ್ಕಾರಿ ಸೇವೆಗಳ ಸುಧಾರಣೆಗೆ AI ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಇದು ಸಹಾಯ ಮಾಡಲಿದೆ.

ಈ ವಿಶ್ವವಿದ್ಯಾಲಯ ಸಮಯಕ್ಕೆ ಸರಿಯಾಗಿ ಕಾರ್ಯಾರಂಭ ಮಾಡಿದರೆ, ಅಮರಾವತಿ ದೇಶದ ಮೊದಲ AI ವಿಶ್ವವಿದ್ಯಾಲಯದ ಹೆಗ್ಗಳಿಕೆಯನ್ನು ಪಡೆದು ಇತಿಹಾಸ ಸೃಷ್ಟಿಸಲಿದೆ. ಇದರಿಂದ ಆಂಧ್ರಪ್ರದೇಶ ರಾಜ್ಯವು ತಂತ್ರಜ್ಞಾನ ಮತ್ತು ನವೋದ್ಯಮ ಕ್ಷೇತ್ರದಲ್ಲಿ ಮುಂಚೂಣಿಗೆ ಬರಲಿದ್ದು, ಯುವಕರಿಗೆ ಹೊಸ ಉದ್ಯೋಗಾವಕಾಶಗಳು ಹಾಗೂ ಜಾಗತಿಕ ಮಟ್ಟದ ಕಲಿಕೆ ಅವಕಾಶಗಳು ದೊರೆಯಲಿವೆ. ಭಾರತದ ಡಿಜಿಟಲ್ ಭವಿಷ್ಯ ನಿರ್ಮಾಣದಲ್ಲಿ ಈ ಯೋಜನೆ ಮಹತ್ವದ ಮೈಲಿಗಲ್ಲಾಗಲಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Source link

ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಕುಟುಂಬದ ಪ್ರಾಣ – Kannada News | Kapu Shirva Vehicle Blaze: Quick Thinking Driver Averts Tragedy, Five Escape

ಉಡುಪಿ, ಫೆ.10: ಕಾಪು ತಾಲೂಕಿನ ಶಿರ್ವ ಎಂಬಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಚಾಲಕ ಸೇರಿದಂತೆ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಶಿರ್ವ ಕಡೆ ಬರುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರು ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದೆ. ಬೆಂಕಿಯೂ ಎಂಜಿನ್ ಭಾಗದಲ್ಲಿ ಮೊದಲು ಕಾಣಿಸಿಕೊಂಡ ಹೊಗೆ ಬಂದಿದೆ. ಇದನ್ನು ನೋಡಿ ಚಾಲಕ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾನೆ. ಕಾರಿನಿಂದ ಎಲ್ಲರೂ ಇಳಿಯುತ್ತಿದ್ದಂತೆ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪೈಪ್ ಮೂಲಕ ಬೆಂಕಿ ನಂದಿಸಲು ಸ್ಥಳೀಯರ ಪ್ರಯತ್ನ ಮಾಡಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಕುಟುಂಬದ ಜೀವ ಉಳಿದಿದೆ. ಇನ್ನು ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದು ಇನ್ನು ತಿಳಿದು ಬಂದಿಲ್ಲ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ – Kannada News | Karnataka Power Tussle Reaches Delhi: CM Siddaramaiah Angry On DCM DK Shivakumar

ಬೆಂಗಳೂರು, (ಫೆಬ್ರವರಿ 10): ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್​​​ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆಶಿ, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರ ಈ ಕದ್ದುಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಹೀಗಾಗಿ ಮತ್ತೆ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಕಿತ್ತಾಟ ಮುನ್ನೆಲೆಗೆ ಬಂದಿದ್ದು, ಇದು ಯಾವ ಸ್ವರೂಪ ಪಡೆದುಕೊಳ್ಳುತ್ತೋ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version