Headlines

Video: ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ, ಓಡಿಹೋಗಲು ಗಾಡಿಯಲ್ಲಿ ಪೆಟ್ರೋಲ್ ಇಲ್ಲದೆ ಸಿಕ್ಕಾಕ್ಕೊಂಡ

ವೆನ್ನಪ್ಪುವಾ, ಮಾರ್ಚ್​ 11: ಬೈಕ್​​ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಕಳ್ಳನೊಬ್ಬ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ದೋಚಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ವೆನ್ನಪ್ಪುವಾದ ಥಂಬರವಿಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಘಟನೆಯನ್ನು ಸೆರೆಹಿಡಿದಿದೆ.ಆರೋಪಿಯು ಬೈಕ್​ನಲ್ಲಿ ಬಂದು ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಆಕೆಯನ್ನು ಬೀಳಿಸಿ ಸರ ಕದ್ದು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಬೈಕ್​​ನಲ್ಲಿ ಪೆಟ್ರೋಲ್ ಇಲ್ಲದ ಕಾರಣ ಸಾರ್ವಜನಿಕರ ಕೈಗೆ ಸಿಕ್ಕಿ ಒದೆ ತಿಂದಿದ್ದಾನೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ – Kannada News | Ranveer Singh starrer Dhurandhar movie action scene BTS video

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾಗೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಚಿತ್ರದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಕೂಡ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ರಣವೀರ್ ಸಿಂಗ್ (Ranveer Singh), ಅಕ್ಷಯ್ ಖನ್ನಾ, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​​ಪಾಲ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಸಿನಿಮಾದಲ್ಲಿನ ಕೌರ್ಯದ ದೃಶ್ಯಗಳ ಬಗ್ಗೆ ಜನರು ಮಾತನಾಡುತ್ತಿದ್ದಾರೆ. ಆ ಪೈಕಿ ಒಂದು ದೃಶ್ಯದ ಶೂಟಿಂಗ್ ಯಾವ ರೀತಿ ನಡೆದಿತ್ತು…

Read More

ಎಸಿಯಲ್ಲಿ ಹೆಚ್ಚು ಸಮಯ ಕಳೆಯುವುದರಿಂದ ಎಲುಬುಗಳು ಬೇಗ ದುರ್ಬಲವಾಗುತ್ತವೆಯೇ? ತಜ್ಞರು ಹೇಳುವುದೇನು? – Kannada News | Does AC Cause Joint Pain? What Orthopedic Doctors Want You to Know

ಇತ್ತೀಚಿನ ದಿನಗಳಲ್ಲಿ ಜನ ಬಿಸಿಲಾಗಲಿ, ಮಳೆಯಾಗಲಿ ಮನೆ, ಆಫೀಸ್ ಹಾಗೆಯೇ ಸಂಚರಿಸುವ ವಾಹನಗಳಲ್ಲಿಯೂ ಏರ್ ಕಂಡೀಷನರ್ (AC) ಬಳಕೆ ಮಾಡಲು ಆರಂಭ ಮಾಡಿದ್ದಾರೆ. ಹಾಗಾಗಿ ಇದೊಂದು ಸಾಮಾನ್ಯ ಅಭ್ಯಾಸವಾಗಿಬಿಟ್ಟಿದೆ. ಆದರೆ, ಎಸಿಯಲ್ಲಿ ಹೆಚ್ಚು ಸಮಯ ಇರುವವರಲ್ಲಿ ಎಲುಬುಗಳು ಬೇಗ ದುರ್ಬಲವಾಗುತ್ತವೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಎಸಿಯ ತಂಪು ಗಾಳಿ ನೇರವಾಗಿ ಎಲುಬುಗಳಿಗೆ ಹಾನಿ ಮಾಡುವುದಿಲ್ಲ. ಆದರೆ ಕೆಲವು ಪರೋಕ್ಷ ಪರಿಣಾಮಗಳು ಎಲುಬಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾದರೆ…

Read More

ಕೊನೆಗೂ ಎಚ್ಚೆತ್ತ ಪುರಾತತ್ವ ಇಲಾಖೆ: ಸೋರುತ್ತಿದ್ದ ಬನವಾಸಿ ದೇಗುಲದ ದುರಸ್ತಿ ಕಾರ್ಯ ಆರಂಭ – Kannada News | ASI Begins Repair Works at Historic 1,500 Year Old Banavasi Madhukeshwara Temple Following Public Outcry

ಬನವಾಸಿ ದೇಗುಲ ದುರಸ್ತಿ ಕಾರ್ಯ ನಡೆಯುತ್ತಿರುವುದುImage Credit source: Tv9 Kannada ಶಿರಸಿ, ಜೂನ್​​ 17: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯ ವರದಾ ನದಿ ದಡದಲ್ಲಿರುವ 1500 ವರ್ಷಗಳ ಇತಿಹಾಸಿರುವ ಮಧುಕೇಶ್ವರ ದೇವಸ್ಥಾನ ಕನ್ನಡಿಗರ ಅಸ್ಮಿತೆ ಹಾಗೂ ಸಾಂಸ್ಕೃತಿಕ ಪ್ರತೀಕ. ಹೀಗಾಗಿಯೇ ಇಲ್ಲಿಗೆ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಭೇಟಿ ನೀಡುತ್ತಾರೆ. ಹೀಗಿದ್ದರೂ ಕಳೆದ ಕೆಲ ವರ್ಷಗಳಿಂದ ದೇವಸ್ಥಾನ ಸೋರುತ್ತಿತ್ತು. ಎಲ್ಲವನ್ನೂ ಕಂಡು ಕಾಣದಂತಿದ್ದ ಪುರಾತತ್ವ ಇಲಾಖೆಯ ವಿರುದ್ಧ ಸಿಡಿದೆದ್ದ ಸಾರ್ವಜನಿಕರು ಅರೆ…

Read More

ಮಗುವಿಗೆ ಜನ್ಮ ನೀಡಿದ 8ನೇ ಕ್ಲಾಸ್ ಬಾಲಕಿ; ಹಾಸ್ಟೆಲ್​ನಲ್ಲಿದ್ದ ಬಾಲಕಿ ಗರ್ಭಿಣಿಯಾಗಿದ್ದು ಹೇಗೆ? – Kannada News | Class 8 student gets pregnant in Government Hostel Gave Birth to Child

ನವದೆಹಲಿ, ಫೆಬ್ರವರಿ 2: ಆಕೆಗೆ ಕೇವಲ 13 ವರ್ಷ. ಓದುವ ಸಲುವಾಗಿ ಮನೆಯಲ್ಲಿ ಹಠ ಮಾಡಿ ಹಾಸ್ಟೆಲ್ ಸೇರಿದ್ದ ಆಕೆ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತಮ್ಮ ಮಗಳು ಸರ್ಕಾರಿ ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದರೆ, ಆಕೆ ಗರ್ಭಿಣಿಯಾಗಿದ್ದಾಳೆ ಎಂಬ ವಿಷಯ ತಿಳಿದು ಅವರ ಎದೆ ಒಡೆದುಹೋಗಿತ್ತು. ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೆರಲು ಸಾಧ್ಯವಿಲ್ಲವೆಂದು ಆ ಮಗುವನ್ನು ಅಬಾರ್ಷನ್ ಮಾಡಿಸೋಣ ಎಂದು ಅವರು ನಿರ್ಧಾರ ಮಾಡುವಷ್ಟರಲ್ಲಿ ಸಮಯ ಮೀರಿ ಹೋಗಿತ್ತು….

Read More

ವಿಜಯ್ ಕೊನೆಯ ಸಿನಿಮಾ ಸೌದಿ ಅರೆಬಿಯಾನಲ್ಲಿ ಬ್ಯಾನ್: ಕಾರಣವೇನು? – Kannada News | Vijay starrer Jana Nayagan movie facing ban in Saudi Arabia

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಬೆಂಗಳೂರು ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಓಪನ್ ಆಗಿದೆ. ರಾಜಕೀಯಕ್ಕೆ ಎಂಟ್ರಿ ನೀಡಿರುವ ದಳಪತಿ ವಿಜಯ್, ‘ಜನ ನಾಯಗನ್’ ಬಳಿಕ ತಾವು ಇನ್ಯಾವುದೇ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಹೀಗಾಗಿ ಸಿನಿಮಾ ವೀಕ್ಷಿಸಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ವಿಜಯ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕ, ಮಲೇಷ್ಯಾ, ಸಿಂಗಪುರ, ಗಲ್ಫ್ ರಾಷ್ಟ್ರಗಳಲ್ಲೂ ಅಭಿಮಾನಿಗಳನ್ನು ವಿಜಯ್…

Read More

ತಡರಾತ್ರಿ ಬೆಂಗಳೂರಿನ 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ರೈಡ್ – Kannada News | DCP Saidulla Leads Massive Whitefield Operation Against Rowdies in Bengaluru

ಬೆಂಗಳೂರು, ಜು.18: ರಾಜಧಾನಿಯಲ್ಲಿ ರೌಡಿ ಚಟುವಟಿಕೆಗಳು ಹಾಗೂ ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕಲು ವೈಟ್‌ಫೀಲ್ಡ್ ವಿಭಾಗದ ಪೊಲೀಸರು ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವೈಟ್‌ಫೀಲ್ಡ್ ವಿಭಾಗದ ಡಿಸಿಪಿ (DCP) ಸೈದುಲ್ಲಾ ಅಡಾವತ್ ಅವರ ನೇತೃತ್ವದಲ್ಲಿ ಏಕಕಾಲಕ್ಕೆ 150ಕ್ಕೂ ಹೆಚ್ಚು ಹಳೆಯ ಹಾಗೂ ಸಕ್ರಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಲಾಗಿದೆ. ನಗರದ ವೈಟ್‌ಫೀಲ್ಡ್, ವರ್ತೂರು, ಮಹದೇವಪುರ, ಕೆ.ಆರ್. ಪುರಂ ಹಾಗೂ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆದಿದೆ. ತಡರಾತ್ರಿ 12…

Read More

ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು? ಇಲ್ಲಿದೆ ವಿವರ – Kannada News | Ballari Clash: Congress Worker Killed in Violent Banner Dispute Between Bharat Reddy and Janardhana Reddy Supporters

ಬಳ್ಳಾರಿಯ ಅವಂಬಾವಿಯಲ್ಲಿ ಬಿಗಿ ಬಂದೋಬಸ್ತ್ ಬಳ್ಳಾರಿ, ಜನವರಿ 2: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ (Congress) ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ (Janardhana Reddy) ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ…

Read More

Daily Devotional: ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ದರೆ ಅದೃಷ್ಟ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Unlocking Fortune: Planetary Positions and Womens Character Traits

ಸ್ತ್ರೀ ಜಾತಕದಲ್ಲಿನ ಗ್ರಹಗಳ ಪ್ರಭಾವ, ಮಹಿಳೆಯರ ವ್ಯಕ್ತಿತ್ವ ಹಾಗೂ ಅದೃಷ್ಟದ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗೃಹಿಣಿಯು ಒಂದು ಕುಟುಂಬದ ಕಣ್ಣಾಗಿರುತ್ತಾಳೆ. ಆಕೆಯ ಬಲವು ಇಡೀ ಕುಟುಂಬದ ಭವಿಷ್ಯವನ್ನು ರೂಪಿಸುತ್ತದೆ. ನಮ್ಮ ಪೂರ್ವಿಕರು ಮಹಿಳೆಯರು ಹೊಂದಿರಬೇಕಾದ ಆರು ಪ್ರಮುಖ ಗುಣಗಳನ್ನು ಈ ಶ್ಲೋಕದ ಮೂಲಕ ವಿವರಿಸಿದ್ದಾರೆ: “ಕಾರ್ಯೇಶು ದಾಸಿ ಕರುಣೇಶು ಮಂತ್ರಿ ಪೂಜ್ಯೇಶು ಮಾತ ರೂಪೇಶು ಲಕ್ಷ್ಮಿ ಕ್ಷಮಯ ದರಿತ್ರಿ ಶಯನೇಶು…

Read More

ಇನ್ನೊಮ್ಮೆ ಇಂಥಹಾ ತಪ್ಪು ಮಾಡಲ್ಲ ಕ್ಷಮಿಸಿಬಿಡಿ: ರಾಜೇಂದ್ರ ಪ್ರಸಾದ್ ಮನವಿ

ತೆಲುಗು ಚಿತ್ರರಂಗದ (Tollywood) ಹಿರಿಯ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾಜೇಂದ್ರ ಪ್ರಸಾದ್ ಅವರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ತಾವು ಆಡಿದ ಮಾತಿನಿಂದ ಆಗಿರುವ ವಿವಾದದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವುದು ಮಾತ್ರವೇ ಅಲ್ಲದೆ. ‘ತಾವು ಜೀವನದಲ್ಲಿ ಇನ್ನೊಮ್ಮೆ ಇಂಥಹಾ ಘೋರ ತಪ್ಪು ಮಾಡುವುದಿಲ್ಲ, ಇದೊಂದು ಬಾರಿ ನನ್ನನ್ನು ಕ್ಷಮಿಸಿಬಿಡಿ’ ಎಂದು ತಮಿಳು ಜನರ ಬಳಿ ಕೈಮುಗಿದು ಕ್ಷಮೆ ಕೇಳಿದ್ದಾರೆ. ಕೆಲ ದಿನಗಳ ಹಿಂದೆ ರಾಜೇಂದ್ರ ಪ್ರಸಾದ್ ಅವರಿಗೆ ಕಾಂತಾರಾವ್ ಪ್ರಶಸ್ತಿ ನೀಡಲಾಯ್ತು. ಕಾರ್ಯಕ್ರಮದಲ್ಲಿ ಭಾವಾವೇಶದಿಂದ…

Read More