Headlines

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಮಹತ್ವದ ಆದೇಶ – Kannada News | Karnataka Government doctors cannot treat inpatients in private hospitals

ಪ್ರಾತಿನಿಧಿಕ ಚಿತ್ರImage Credit source: ehealth.com ಬೆಂಗಳೂರು, ಜನವರಿ 28: ಸರ್ಕಾರಿ ವೈದ್ಯರು (government doctors) ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದಕ್ಕೆ ಸರ್ಕಾರ ನಿರ್ಬಂಧ ವಿಧಿಸಿದೆ. ಆ ಮೂಲಕ ಸರ್ಕಾರಿ ವೈದ್ಯರಿಗೆ ರಾಜ್ಯ ಸರ್ಕಾರ ಶಾಕ್​ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಸರ್ಕಾರಿ ಕರ್ತವ್ಯಗಳ ನಿರ್ವಹಣೆಗೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ…

Read More

‘100 ರೂ. ಡಿಸ್ಕೌಂಟ್​​ಗಾಗಿ ಫ್ರೀ ಎಂಟರ್ಟೈನ್ಮೆಂಟ್’: ಛೀ.. ಈ ಯುವತಿಯರು ಮಾಡಿದ ಕೆಲಸ ನೋಡಿ – Kannada News | Viral Video Sparks Debate: The Dark Side of Social Media Fame and Disrespect

ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಬೇಕು ಎಂಬ ಹುಚ್ಚುತನದಿಂದ, ಮುಗ್ದ ಜನರ ಮನಸ್ಸಿಗೆ ನೋವು ಮಾಡುವ ಕೆಲಸಗಳು ನಡೆಯುತ್ತಿದೆ. ಇದರಿಂದ ವೈಯಕ್ತಿಕ ವಿಚಾರಗಳಿಗೆ ಧಕ್ಕೆಯಾಗುತ್ತಿದೆ. ಇದೀಗ ಇಲ್ಲೊಂದು ವಿಡಿಯೋ ಭಾರೀ ವೈರಲ್​ ಆಗಿದೆ. ಯುವತಿ ವರ್ತನೆಗೆ ಭಾರೀ ಅಕ್ರೋಶಗಳು ವ್ಯಕ್ತವಾಗಿದೆ, ಇದೀಗ  ಈ ಬಗ್ಗೆ ಸರ್ಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅನೇಕ ನೆಟ್ಟಿಗರು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕುಂದನ್ ಪಟೇಲ್ ಎಂಬುವವರು (cab driver video) ಹಂಚಿಕೊಂಡಿರುವ ಈ ವಿಡಿಯೋ ಸದ್ಯ ದೊಡ್ಡ ಮಟ್ಟದ ಚರ್ಚೆ ಮತ್ತು…

Read More

‘ಧುರಂಧರ್ 2’ ಚಿತ್ರಕ್ಕಾಗಿ ಮತ್ತೆ ಶೂಟಿಂಗ್ ಮಾಡಲ್ಲ ಅರ್ಜುನ್ ರಾಮ್​ಪಾಲ್ – Kannada News | Dhurandhar 2 Shooting Update: No extra shoot with Arjun Rampal and other actors

2025ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆದ ‘ಧುರಂಧರ್’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಬ್ಲಾಕ್ ಬಸ್ಟರ್ ಹಿಟ್ ಆಗಿರುವ ಈ ಸಿನಿಮಾದ ಸೀಕ್ವೆಲ್ ಮೇಲೆ ಸಾಕಷ್ಟು ನಿರೀಕ್ಷೆ ಮನೆ ಮಾಡಿದೆ. ‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ರಿಲೀಸ್ ದಿನಾಂಕ ಹತ್ತಿರ ಆಗುತ್ತಿದ್ದಂತೆಯೇ ಸಿನಿಮಾ ಬಗ್ಗೆ ಒಂದಷ್ಟು ಗಾಸಿಪ್ ಕೇಳಿಬರುತ್ತಿದೆ. ಈ ಸಿನಿಮಾದ ಹೆಚ್ಚುವರಿ ದೃಶ್ಯಗಳ ಶೂಟಿಂಗ್​​ನಲ್ಲಿ ನಟ ಅರ್ಜುನ್ ರಾಮ್​ಪಾಲ್ (Arjun Rampal) ಅವರು ಪಾಲ್ಗೊಳ್ಳಲಿದ್ದಾರೆ ಎಂಬ…

Read More

EXIM Bank Recruitment 2026: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್ – Kannada News | EXIM Bank MT Recruitment 2026: Apply Online for 40 Management Trainee Posts Now!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ನಿರ್ಮಿಸಲು ಬಯಸುವ ಯುವಜನರಿಗೆ ಒಳ್ಳೆಯ ಸುದ್ದಿ ಇದೆ. ಎಕ್ಸ್ಪೋರ್ಟ್–ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM Bank) 2026ನೇ ಸಾಲಿನ ನೇಮಕಾತಿಗಾಗಿ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 40 ಹುದ್ದೆಗಳು ಭರ್ತಿಯಾಗಲಿವೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಜನವರಿ 17 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 1ರ ವರೆಗೆ ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಎಕ್ಸಿಮ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ eximbankindia.in ಗೆ ಭೇಟಿ…

Read More

ICC Rankings: ಐವರನ್ನು ಹಿಂದಿಕ್ಕಿ ಭರ್ಜರಿ ಮುಂಬಡ್ತಿ ಪಡೆದ ಸೂರ್ಯಕುಮಾರ್ – Kannada News | Suryakumar Yadav Soars to 7th in ICC T20 Rankings After Sensational NZ Series Performance

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್​ಗೆ ಐಸಿಸಿಯಿಂದ ಭರ್ಜರಿ ಬಹುಮಾನ ಸಿಕ್ಕಿದೆ. ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕದಲ್ಲಿ ಐವರು ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿ ಏಳನೇ ಸ್ಥಾನಕ್ಕೇರಿದ್ದಾರೆ. ಕಳೆದ ಒಂದು ವರ್ಷದಿಂದ ಒಂದೇ ಒಂದು ಅರ್ಧಶತಕವನ್ನು ಬಾರಿಸಲಾಗದೆ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಸೂರ್ಯ, ಇದರ ಪರಿಣಾಮವಾಗಿ ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದರು. ಆದರೆ ಈಗ ಮತ್ತೆ ಟಾಪ್ 10 ರೊಳಗೆ ಪ್ರವೇಶಿಸಿದ್ದು, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಟಿಮ್…

Read More

ಜಯನಗರ ವಿಧಾನಸಭಾ ಕ್ಷೇತ್ರದ ರಿಸಲ್ಟ್ ವಿವಾದ: ಸುಪ್ರೀಂನಲ್ಲಿ ಬಿಜೆಪಿ ಶಾಸಕ ರಾಮಮೂರ್ತಿಗೆ ಹಿನ್ನಡೆ – Kannada News | Jayanagar Assembly Result case: Supreme Court Rejects BJP MLA CK Ramamurthy Plea

ನವದೆಹಲಿ/ಬೆಂಗಳೂರು, (ಜನವರಿ 28): 2023ರಲ್ಲಿ ನಡೆದ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶದ (Jayanagar Assembly Result 2023) ಗೊಂದಲ ಇನ್ನೂ ಬಗೆಹರಿದಿಲ್ಲ. ಮತ ಎಣಿಕೆ ಸರಿಯಾದ ಕ್ರಮದಲ್ಲಿ ಆಗಿಲ್ಲ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೌಮ್ಯ ರೆಡ್ಡಿ (Sowmya Reddy) ಅವರು ಕೋರ್ಟ್ ಮೆಟ್ಟಿಲೇರಿದ್ದು, ಇದಕ್ಕೆ ತಡೆ ನೀಡುವಂತೆ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (BJP MLA CK Ramamurthy) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ. ಪ್ರಕರಣದ ಟ್ರಯಲ್ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​…

Read More

ತಮಾಷೆಗಾಗಿ ಸೂಪರ್ ಮಾರ್ಕೆಟ್​​ನಲ್ಲಿ ಕೂಲ್​ ಡ್ರಿಂಕ್ಸ್​​ಗೆ ಮೂತ್ರ ಹಾಕಿ ಮಾರಾಟ! – Kannada News | 63 year old spikes soft drinks at supermarket with urine for over year viral news

ನವದೆಹಲಿ, ಜನವರಿ 28: ತಾನು ಕೆಲಸ ಮಾಡುವ ಸೂಪರ್ ಮಾರ್ಕೆಟ್​​ನಲ್ಲಿ ತಂಪು ಪಾನೀಯಗಳಿಗೆ ಮೂತ್ರ ಹಾಕಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಹಾಂಗ್​ಕಾಂಗ್​ನಲ್ಲಿ (Hong Kong) ನಡೆದಿದೆ. 63 ವರ್ಷದ ಮಾಜಿ ಆಸ್ತಿ ಏಜೆಂಟ್ ಹಾಂಗ್ ಕಾಂಗ್ ನ್ಯಾಯಾಲಯದಲ್ಲಿ ಕಲುಷಿತ ತಂಪು ಪಾನೀಯಗಳನ್ನು ಮಾರಾಟ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಆ ವ್ಯಕ್ತಿ ಸೂಪರ್ ಮಾರ್ಕೆಟ್ ಗಳಲ್ಲಿ ಮೂತ್ರ ಹಾಕಿದ ತಂಪು ಪಾನೀಯಗಳ ಬಾಟಲಿಗಳನ್ನು ಇಟ್ಟಿದ್ದ ಎಂದು ವರದಿ ತಿಳಿಸಿದೆ….

Read More

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ – Kannada News | Bengaluru Drug Bust: 4 Cr Drugs Seized, 10 Arrested by Amrutha Halli Police

ಬೆಂಗಳೂರು, ಜನವರಿ 28: ಡ್ರಗ್ಸ್​ ಸಾಗಾಟ (drug bust) ಮಾಡುತ್ತಿದ್ದ ಕೇರಳ ಮೂಲದ 7 ಜನರು ಸೇರಿ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ಆ ಮೂಲಕ ಅಮೃತಹಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 50 ಗ್ರಾಂ MDMA ಮತ್ತು ಚರಸ್, 500 LSD ಸ್ಟ್ರಿಪ್ಸ್​, 10 ಕೆಜಿ ಗಾಂಜಾ, 2 ಕಾರು, 14 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು ನಗರ…

Read More

ಕೇವಲ 20 ದಿನಗಳ ಹಿಂದಷ್ಟೇ ಶಿಷ್ಟಾಚಾರವನ್ನು ಮುರಿದು ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಿದ್ದ ಅಜಿತ್ ಪವಾರ್ – Kannada News | Ajit Pawar’s Human Side: How He Broke Protocol to Help an Injured Man 20 Days Ago

ಪುಣೆ, ಜನವರಿ 28: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇಂದು ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಐದು ಜನರು ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಅಜಿತ್ ಪವಾರ್ ಗುಣವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಕೇವಲ 20 ದಿನಗಳ ಹಿಂದೆ, ಜನವರಿ 8 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಅಜಿತ್ ಪವಾರ್ ಸಹಾಯ ಮಾಡಿದ್ದರು. ಅಪಘಾತದ ಸ್ಥಳದಲ್ಲಿ ಹೋಗುತ್ತಿದ್ದ ಅಜಿತ್ ಪವಾರ್, ಶಿಷ್ಟಾಚಾರವನ್ನು ಮುರಿದು, ಅಜಿತ್ ಪವಾರ್ ತಮ್ಮ ಬೆಂಗಾವಲು…

Read More

ಕೊಳೆಯಾದ ದಿಂಬುಗಳನ್ನು ತೊಳೆಯದೆ ಕ್ಷಣಾರ್ಧದಲ್ಲಿ ಸ್ವಚ್ಛಗೊಳಿಸಲು ಈ ಸರಳ ಸಲಹೆ ಪಾಲಿಸಿ – Kannada News | You can clean a dirty pillow by following these simple tips

ಬಹುತೇಕ ಹೆಚ್ಚಿನವರು ದಿಂಬು ಕವರ್‌ ಹಾಗೂ ಬೆಟ್‌ಶೀಟ್‌ಗಳನ್ನು ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಸ್ವಚ್ಛಗೊಳಿಸುತ್ತಿರುತ್ತಾರೆ. ಆದ್ರೆ ದಿಂಬಿನ (pillow) ಸ್ವಚ್ಛತೆಯ ಕಡೆಗೆ ಗಮನವೇ ಕೊಡುವುದಿಲ್ಲ. ದಿಂಬಿನ ಕವರ್‌ ಕ್ಲೀನ್‌ ಮಾಡುವುದು ಎಷ್ಟು ಮುಖ್ಯವೋ ಅದೇ ರೀತಿ ದಿಂಬನ್ನು ಸಹ ಸ್ವಚ್ಛಗೊಳಿಸಬೇಕಾಗುತ್ತದೆ. ಇಲ್ಲದಿದ್ದರೆ ದಿಂಬಲ್ಲಿ ಸಂಗ್ರಹವಾಗುವ ಧೂಳು ಹಾಗೂ ಕೊಳೆಗಳ  ಕಾರಣದಿಂದ ಅಲರ್ಜಿ, ಉಸಿರಾಟದ ತೊಂದರೆಗಳಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಮತ್ತು ಮೊಡವೆಯ ಸಮಸ್ಯೆಗಳು ಸಹ ಹೆಚ್ಚಾಗಬಹುದು. ಹಾಗಾಗಿ ದಿಂಬನ್ನು ಸ್ವಚ್ಚಗೊಳಿಸುವುದು ಅತ್ಯಗತ್ಯ. ಇವೆಲ್ಲಾ ಸರಿ ಆದ್ರೆ ದಿಂಬನ್ನು ನೀರಿನಿಂದ ತೊಳೆಯದೆ…

Read More