ಮಂಗಳೂರಿನ ಜನರೇ ಸಂಜೆ 6ರೊಳಗೆ ಮನೆಗೆ ತಲುಪಿ!: ಇಂದು ಕರಾವಳಿ ಹಾಗೂ ಬೆಂಗಳೂರಿನಲ್ಲಿ ಭಾರೀ ಮಳೆ
ಬೆಂಗಳೂರು, ಮೇ.29: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಮುನ್ಸೂಚನೆ ಹೆಚ್ಚಾಗಿದೆ. ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಭಾರಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಜಂಟಿ ಮುನ್ನೆಚ್ಚರಿಕೆ ನೀಡಿದೆ. ವಿಶೇಷವಾಗಿ ಇಂದಿನಿಂದ (ಮೇ 29) ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert)…