ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ವಿಧಿವಶ – Kannada News | Kalaburagi Tragedy: Brother Dies of Grief After Elder Sibling’s Death
ಕಲಬುರಗಿ, ಜನವರಿ 28: ಅಣ್ಣ ಸತ್ತ ಮರು ದಿನವೇ ಆತನ ಸಾವಿನ ದುಃಖವನ್ನು ತಡೆಯಲಾರದೆ ತಮ್ಮನೂ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ನಡೆದಿದೆ. ಅಣ್ಣನ ಅಗಲಿಕೆಯಿಂದ ಮಾನಸಿಕವಾಗಿ ಕುಸಿದಿದ್ದ ಶಿವರಾಯ ಅವರು ಆಘಾತದಿಂದ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಅಣ್ಣನ ಸಾವಿನ ದುಃಖದಲ್ಲೇ ತಮ್ಮ ಸಾವು ಗ್ರಾಮದ ಹಿರಿಯ ನಿವಾಸಿ ಬಸವಂತರಾಯ ಸಣ್ಣಕ್ (81) ಜನವರಿ 26ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರವು ಜನವರಿ 27ರಂದು ನೆರವೇರಿತು. ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಅವರ…