ಬಜೆಟ್ ಅಧಿವೇಶನಕ್ಕೂ ಮುನ್ನ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ – Kannada News | Budget Session 2026 Defence Minister Rajnath Singh chairs all party meeting

ನವದೆಹಲಿ, ಜನವರಿ 27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ (Budget 2026) ಮಂಡಿಸುತ್ತಾರೆ. ಈ ವರ್ಷ, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಭಾನುವಾರದಂದು ಮಂಡಿಸಲಾಗುವುದು. ಕಳೆದ ಕೆಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಸಂಪ್ರದಾಯದಂತೆ ಫೆಬ್ರವರಿ 1ರಂದು ಸಂಸತ್ತು ಹೇಗೆ ಸುಗಮವಾಗಿ ಕಾರ್ಯನಿರ್ವಹಿಸಬಹುದು ಎಂಬುದರ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಹಿರಿಯ ಬಿಜೆಪಿ ನಾಯಕರು ಮತ್ತು ಹಲವಾರು ವಿರೋಧ ಪಕ್ಷದ ಪ್ರತಿನಿಧಿಗಳು ಸರ್ವ ಪಕ್ಷ ಸಭೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ವಿರೋಧ ಪಕ್ಷದ ನಾಯಕರಲ್ಲಿ ಸೇರಿದ್ದರು. ಬಜೆಟ್ ಅಧಿವೇಶನವು ನಾಳೆ (ಬುಧವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡುವ ಭಾಷಣದೊಂದಿಗೆ ಪ್ರಾರಂಭವಾಗಲಿದೆ. ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮಂಡಿಸಲಾಗುವುದು. ಆದರೆ, ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡಿಸಲಾಗುವುದು. ಇದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸತತ ಒಂಬತ್ತನೇ ಬಜೆಟ್ ಮಂಡನೆಯಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್​ನಲ್ಲಿ ಈಡೇರುತ್ತಾ?

ಅಧಿವೇಶನದ ಮೊದಲ ಹಂತವು ಫೆಬ್ರವರಿ 13ರವರೆಗೆ ಮುಂದುವರಿಯಲಿದ್ದು, ಈ ಸಮಯದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಮೇಲೆ ಚರ್ಚೆ ಮತ್ತು ಅಂಗೀಕಾರ ನಡೆಯಲಿದೆ. ವಿರಾಮದ ನಂತರ ಮಾರ್ಚ್ 9ರಂದು ಸಂಸತ್ತು ಮತ್ತೆ ಸಭೆ ಸೇರಲಿದ್ದು, ಅಧಿವೇಶನ ಏಪ್ರಿಲ್ 2ರಂದು ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ: Union Budget 2026: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು?

ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಅಧಿವೇಶನದ ಮೊದಲು ತನ್ನ ಪ್ರಸ್ತಾವಿತ ಶಾಸಕಾಂಗ ಕಾರ್ಯಸೂಚಿಯನ್ನು ಹಂಚಿಕೊಳ್ಳದಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಟೀಕಿಸಿತು. ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ಕೆ. ಸುರೇಶ್, ಪರಿಚಯಿಸಬೇಕಾದ ಯಾವುದೇ ಮಸೂದೆಗಳ ಪಟ್ಟಿಯನ್ನು ಹಂಚಿಕೊಳ್ಳದಿದ್ದಕ್ಕಾಗಿ ವಿರೋಧ ಪಕ್ಷಗಳು ಅತೃಪ್ತಿಗೊಂಡಿವೆ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಈ ಬಾರಿ ಏನೆಲ್ಲ ಇರಲಿದೆ? – Kannada News | 17th Bengaluru International Film Festival 2026 Highlights

ದೇಶಾದ್ಯಂತ ಇರುವ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ (Bengaluru Film Festival)  17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದೆ. ಗುರುವಾರ (ಜನವರಿ 29) ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‍ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‍ ಉಪಸ್ಥಿತರಿರಲಿದ್ದಾರೆ. ಚಿತ್ರೋತ್ಸವದ ರಾಯಭಾರಿಯಾಗಿ ಬಹುಭಾಷಾ ನಟ ಪ್ರಕಾಶ್‍ ರಾಜ್‍ ಹಾಗೂ ನಟಿ ರುಕ್ಮಿಣಿ ವಸಂತ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ ಕೂಡ ಉಪಸ್ಥಿತರಿರಲಿದ್ದಾರೆ. ಸಂಜೆ 5.30ರಿಂದ ಡಾ. ಜ್ಯೋತ್ಸ್ನಾ ಶ್ರೀಕಾಂತ್‍ ಅವರ ನೇತೃತ್ವದಲ್ಲಿ 35 ಕಲಾವಿದರಿಂದ ‘ವಿಶ್ವ ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ಆರಂಭ ಆಗಲಿದೆ. ರಾತ್ರಿ 8 ಗಂಟೆಗೆ ಈ ವೇದಿಕೆಯಲ್ಲಿ ಉದ್ಘಾಟನಾ ಚಿತ್ರವಾಗಿ ನೆದರ್‍ಲ್ಯಾಂಡ್‍ ದೇಶದ ‘ಪೋರ್ಟ್ ಬ್ಯಾಗೇಜ್‍’ ಸಿನಿಮಾದ ಪ್ರದರ್ಶನ ಆಗಲಿದೆ.

ಜ.30ರಿಂದ ಫೆಬ್ರವರಿ 6ರವರೆಗೂ, ಈ ಚಿತ್ರೋತ್ಸವದಲ್ಲಿ 65 ದೇಶಗಳ ಸುಮಾರು 225 ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು ಆಯಾ ದೇಶದ ಸ್ಥಿತಿ-ಗತಿ, ಜನ ಜೀವನ ಮತ್ತು ಸಂಸ್ಕೃತಿಯನ್ನು ಬಿಂಬಿಸಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಈ ಚಿತ್ರೋತ್ಸವದಲ್ಲಿ ‘ಬೆಂಗಳೂರಿನಲ್ಲಿ ಜಗತ್ತು’ ಎನ್ನುವ ಶೀರ್ಷಿಕೆಯಡಿ ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಈ ಚಿತ್ರೋತ್ಸವವನ್ನು ಪ್ರತೀ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಸಾಲಿನೊಂದಿಗೆ ʼಸ್ತ್ರೀ ಸಂವೇದನೆ, ಸಮಾನತೆಯ ದನಿʼ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.

ಇದನ್ನೂ ಓದಿ: ‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ; ದುನಿಯಾ ವಿಜಿ ಚಿತ್ರಕ್ಕೆ ಸಿಎಂ ಬೆಂಬಲ

ಈ ಚಿತ್ರೋತ್ಸವದಲ್ಲಿ ಏಷಿಯನ್‌ ಸಿನಿಮಾ ಸ್ಪರ್ಧಾ ವಿಭಾಗ, ಚಿತ್ರ ಭಾರತಿ (ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗ), ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ, ಸಮಕಾಲೀನ ವಿಶ್ವ ಸಿನಿಮಾ, ಕನ್ನಡ ಜನಪ್ರಿಯ ಸಿನಿಮಾ, ಫಿಪ್ರೆಸ್ಕಿ – ವಿಮರ್ಶಕರ ವಾರ, ಜೀವನ ಕಥನ ಆಧಾರಿತ ಚಿತ್ರಗಳು, ದೇಶ ಕೇಂದ್ರಿತ ವಿಶೇಷ: ಪೋಲೆಂಡ್‌, ಭಾರತೀಯ ಉಪಭಾಷಾ ಚಲನಚಿತ್ರಗಳು, ಪುನರಾವಲೋಕನ‌ ಮುಂತಾದ ವಿಭಾಗಗಳಡಿ ಹಲವು ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಕನ್ನಡದ ಮೇರು ನಟ ಪದ್ಮಭೂಷಣ ಡಾ. ರಾಜಕುಮಾರ್‌ ಅಭಿನಯದ ಐದು ಮಹತ್ವದ ಕನ್ನಡ ಚಲನಚಿತ್ರಗಳ ಪ್ರದರ್ಶನ, ಪೋಲೆಂಡಿನ ಪ್ರಖ್ಯಾತ ನಿರ್ದೇಶಕ ಆಂದ್ರೆ ವಾಜ್ದಾ ಅವರ ನಿರ್ದೇಶನದ ಏಳು ಪೋಲಿಷ್‌ ಚಲನಚಿತ್ರಗಳ ಪ್ರದರ್ಶನ, ಖ್ಯಾತ ಅಭಿನೇತ್ರಿ ಸ್ಮಿತಾ ಪಾಟೀಲ್‌ ಅವರ ಹೆಸರಾಂತ ಚಲನಚಿತ್ರಗಳ ಪ್ರದರ್ಶನ, ಥಾಯ್ಲೆಂಡಿನ ಖ್ಯಾತ ನಿರ್ದೇಶಕ ಅಚಿತಪಾಂಗ್‌ ವೀರಸೆಥಕುಲ್ ಅವರ ನಾಲ್ಕು ಪ್ರಮುಖ ಚಲನಚಿತ್ರಗಳ ಪ್ರದರ್ಶನ, ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಜನಮನ್ನಣೆ ಪಡೆದ ಸಮಕಾಲೀನ ಭಾರತೀಯ ಚಲನಚಿತ್ರಗಳ ಪ್ರದರ್ಶನ, ಸಂರಕ್ಷಿಸಲ್ಪಟ್ಟ ಮಹತ್ವದ ಭಾರತೀಯ ಚಲನಚಿತ್ರಗಳ ಪ್ರದರ್ಶನ ಕೂಡಾ ನಡೆಯಲಿದೆ.

ಚಿತ್ರೋತ್ಸವ ನಡೆಯುವ ಎಂಟು ದಿನಗಳ ಕಾಲ ಪ್ರತೀ ದಿನ ಚಿತ್ರ ನಿರ್ಮಾಣ, ನಿರ್ದೇಶನ, ಚಿತ್ರಕತೆ, ತಂತ್ರಜ್ಞಾನ ಮತ್ತು ಉದ್ಯಮಕ್ಕೆ ಸಂಬಂಧಪಟ್ಟಂತೆ ತಜ್ಞರೊಂದಿಗೆ ಸಂವಾದ, ಉಪನ್ಯಾಸ, ಮಾಸ್ಟರ್‌ ಕ್ಲಾಸ್‌, ವಿಚಾರ ಸಂಕಿರಣ ಮೊದಲಾದ ಕಾರ್ಯಕ್ರಮಗಳಿರುತ್ತವೆ. ಚಿತ್ರೋತ್ಸವದ ರಾಯಭರಿ ಪ್ರಕಾಶ್‍ ರಾಜ್‍ ಅವರಿಂದ ‘ನಾವು ಮತ್ತು ನಮ್ಮ ಸಿನಿಮಾ’ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಲಿದೆ.

ಇದನ್ನೂ ಓದಿ: ಜನವರಿ 29ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮೂರು ಕಡೆಗಳಲ್ಲಿ ಚಿತ್ರ ಪ್ರದರ್ಶನ

ಸಂಕಲನಕಾರ ಶ್ರೀಕರ್ ಪ್ರಸಾದ್ ಅವರಿಂದ ‘ಚಲನಚಿತ್ರದ ಸಂಕಲನದ ಮಹತ್ವ’, ನಿರ್ದೇಶಕ ಮತ್ತು ಸಂಕಲನಕಾರ ಮಹೇಶ್ ನಾರಾಯಣನ್ ಅವರಿಂದ ‘ಸಮಕಾಲೀನ ಚಲನಚಿತ್ರ ಕಥನ ನಿರೂಪಣೆ ಮತ್ತು ಶೈಲಿ’, ಹೆಸರಾಂತ ಧ್ವನಿ ವಿನ್ಯಾಸಕ ಬಿಶ್ವದೀಪ್‌ ಚಟರ್ಜಿ ಅವರಿಂದ ‘ದೃಶ್ಯಾತೀತ ಧ್ವನಿ – ಆಡಿಯೋಗ್ರಫಿಯ ಕಲೆ’, ಅನುರಾಗ್‌ ಕಶ್ಯಪ್‌ರವರಿಂದ‌ ‘ಸಾಂಪ್ರದಾಯಿಕ ಕಲ್ಪನೆಗಳಾಚೆಗಿನ ಚಲನಚಿತ್ರ ಕಥನಗಾರಿಕೆ’ ಕುರಿತ ಉಪನ್ಯಾಸ ನಡೆಯಲಿದೆ.

ಖ್ಯಾತ ಛಾಯಾಗ್ರಾಹಕ ವಿ.ಕೆ. ಮೂರ್ತಿ ಕುರಿತು ವಾರ್ಷಿಕ ಸ್ಮಾರಕ ಉಪನ್ಯಾಸ ನಡೆಯಲಿದ್ದು, ‘ಲೆನ್ಸ್‌ಗಳ ಆಯ್ಕೆ, ಬೆಳಕಿನ ವಿನ್ಯಾಸ ಮತ್ತು ಛಾಯಾಗ್ರಹಣ ಕಲೆ’ ಕುರಿತು ಮಾತುಕತೆ ನಡೆಯಲಿದ್ದು, ಹಿರಿಯ ಛಾಯಾಗ್ರಾಹಕ ಜಿ.ಎಸ್‌. ಭಾಸ್ಕರ್‌ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ. ಡಾ. ಗಿರೀಶ್ ಕಾಸರವಳ್ಳಿ, ಡಾ. ಸಾಧು ಕೋಕಿಲ, ಡಾ. ಜಯಮಾಲ ಹಾಗೂ ಇತರರೊಂದಿಗೆ ಕಳೆದ ನಾಲ್ಕು ದಶಕಗಳ ಕನ್ನಡ ಸಿನಿಮಾ ಬಗ್ಗೆ ಸಂವಾದ, ಗಿರೀಶ್ ಕಾಸರವಳ್ಳಿ ಅವರಿಂದ ʼಚಲನಚಿತ್ರ ಕಥನಗಳಲ್ಲಿ ನಮ್ಮತನ ಮತ್ತು ನೈಜತೆʼ ಕುರಿತ ಉಪನ್ಯಾಸ ನಡೆಯಲಿದೆ. ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಚಿತ್ರೋತ್ಸವದ ಧ್ಯೇಯವಾಕ್ಯ ಕೇಂದ್ರಿತ ಸಂವಾದ ಕಾರ್ಯಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳು ಇರಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Union Budget 2026: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು? – Kannada News | Union budget 2026 halwa ceremony held on jan 27th know its significance

ನವದೆಹಲಿ, ಜನವರಿ 27: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಜ. 27) ಮಂಗಳವಾರ ಹಲ್ವಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೆಹಲಿಯ ನಾರ್ತ್ ಬ್ಲಾಕ್​ನಲ್ಲಿರುವ ಬಜೆಟ್ ಪ್ರೆಸ್ ಕಟ್ಟಡದಲ್ಲಿ ಈ ಕಾರ್ಯಕ್ರಮ ನಡೆಯಿತು. ಬಜೆಟ್ (Union Budget 2026) ಸಿದ್ಧತೆಯ ಅಂತಿಮ ಹಂತದ ಕ್ರಿಯೆ ಈ ಹಲ್ವಾ ಕಾರ್ಯಕ್ರಮದ ಮೂಲಕ ಆಗುತ್ತದೆ. ಬಜೆಟ್ ತಯಾರಿಕೆಯಲ್ಲಿ ತೊಡಗಿರುವ ಹಣಕಾಸು ಸಚಿವಾಲಯದ ಅಡಿಯ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಹಾಗು ಹಿರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಫೆಬ್ರುವರಿ 1ರಂದು ಬಜೆಟ್ ಮಂಡನೆಯಾಗಲಿದೆ.

ಯಾಕಿದು ಹಲ್ವಾ ಕಾರ್ಯಕ್ರಮ?

ಹಲ್ವಾ ಕಾರ್ಯಕ್ರಮ ಬಜೆಟ್ ಸಿದ್ಧತೆಯ ಒಂದು ಸಣ್ಣ ಭಾಗ. ಪ್ರತೀ ಬಾರಿಯ ಬಜೆಟ್​ಗೆ ಮುಂಚೆ ಇದು ನಡೆಯುತ್ತದೆ. ಬಜೆಟ್ ತಯಾರಿಕೆಯಲ್ಲಿ ತೊಡಗಿರುವವರೆಲ್ಲರೂ ಖುಷಿಯಲ್ಲಿ ಸಿಹಿ ತಿನ್ನುವ ಸಂದರ್ಭವಿದು.

ಇದನ್ನೂ ಓದಿ: ಬಜೆಟ್​ನಲ್ಲಿ ಜಿಎಸ್​ಟಿ ದರ ಇಳಿಕೆಗೆ ಕ್ರಮ: ಎಂಎಸ್​ಎಂಇಗಳಿಂದ ನಿರೀಕ್ಷೆ

ದೊಡ್ಡ ಬಾಣಲೆಯಲ್ಲಿ ಹಲ್ವಾ ಸಿದ್ಧಪಡಿಸಲಾಗುತ್ತದೆ. ಹಣಕಾಸು ಸಚಿವರು ಅಥವಾ ಬಜೆಟ್ ಮಂಡಿಸುವವರು ಬಾಣಲೆಯಲ್ಲಿರುವ ಹಲ್ವಾವನ್ನು ತಿರುಗಿಸುವುದು ಸಂಪ್ರದಾಯ. ಆ ಬಳಿಕ ಎಲ್ಲರೂ ಹಲ್ವಾ ತಿಂದು ಸಂತೋಷ ಪಡುತ್ತಾರೆ. ಬಜೆಟ್ ಸಿದ್ಧತೆಯಲ್ಲಿ ಶ್ರಮ ಪಟ್ಟ ಎಲ್ಲರಿಗೂ ಸಿಹಿ ತಿನಿಸುವ ಮೂಲಕ ಸಚಿವರು ತೋರುವ ಕೃತಜ್ಞತೆಯ ಸಂದರ್ಭ ಅದಾಗಿರುತ್ತದೆ. ಭಾರತೀಯ ಸಂಪ್ರದಾಯದಲ್ಲಿ ಒಳ್ಳೆಯ ಕೆಲಸ ಆರಂಭವಾದಾಗ ಮತ್ತು ಯಶಸ್ವಿಯಾದಾಗ ಸಿಹಿ ತಿನಿಸುತ್ತಾರೆ. ಹಲ್ವಾ ಕಾರ್ಯಕ್ರಮ ಅದೇ ಸಂಪ್ರದಾಯದಲ್ಲಿ ರೂಪುಗೊಂಡಿದೆ.

ಹಲ್ವಾ ಕಾರ್ಯಕ್ರಮದ ಬಳಿಕ ಅಧಿಕಾರಿಗಳು ಲಾಕ್

ಹಲ್ವಾ ಕಾರ್ಯಕ್ರಮವು ಬಜೆಟ್ ಸಿದ್ಧತೆಯ ಅಂತಿಮ ಹಂತವಾಗಿರುತ್ತದೆ. ಇದಾದ ಬಳಿಕ ಬಜೆಟ್ ಸಿದ್ಧಪಡಿಸುವವರೆಲ್ಲರೂ ನಾರ್ತ್ ಬ್ಲಾಕ್ ಕಟ್ಟಡದಲ್ಲಿ ಸೇರುತ್ತಾರೆ. ಅಕ್ಷರಶಃ ಅವರು ಲಾಕ್ ಆಗಿರುತ್ತಾರೆ. ಹೊರಗಿನ ಸಂಪರ್ಕ ಇರುವುದಿಲ್ಲ. ಮೊಬೈಲ್ ಬಳಸುವಂತಿಲ್ಲ. ಬಜೆಟ್ ಮಂಡನೆ ಆರಂಭವಾಗುವವರೆಗೂ ಅವರಿಗೆ ಇದು ಲಾಕಿನ್ ಅವಧಿ. ಬಜೆಟ್ ಅಂಶಗಳು ಹೊರಗೆ ಸೋರಿಕೆಯಾಗಬಾರದೆಂದು ಮುಂಜಾಗ್ರತೆಯಾಗಿ ಈ ಬಿಗಿಕ್ರಮ ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು

ನಾರ್ತ್ ಬ್ಲಾಕ್​ನಲ್ಲಿ ಬಜೆಟ್ ಪ್ರೆಸ್ ಇರುವುದು. ಹಣಕಾಸು ಸಚಿವಾಲವು ಇದೇ ನಾರ್ತ್ ಬ್ಲಾಕ್​ನಲ್ಲಿ ಇತ್ತು. ಈಗ ಕರ್ತವ್ಯ ಭವನಕ್ಕೆ ಅದರ ಕಚೇರಿ ವರ್ಗವಾಗಿದೆ. ಆದರೂ 2026-27ರ ಬಜೆಟ್ ಅನ್ನು ನಾರ್ತ್ ಬ್ಲಾಕ್​ನಲ್ಲಿರುವ ಪ್ರೆಸ್​ನಲ್ಲೇ ಮುದ್ರಿಸಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಯಾದಗಿರಿ: ಗಣರಾಜ್ಯೋತ್ಸವ ಅಂಗವಾಗಿ ಲುಂಬಿಣಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ; ಇಲ್ಲಿವೆ ಫೋಟೋಸ್​

Source link

ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC – Kannada News | Employees Don’t participate In Bengaluru Chalo protest on january 29 Ordered By KSRTC MD

ಬೆಂಗಳೂರು, (ಜನವರಿ 27): ಕೆಎಸ್‌ಆರ್‌ಟಿಸಿ  (KSRTC) ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು (employees) ಸಮರ ಸಾರಿದ್ದಾರೆ. ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಾಡಿದ್ದು ಅಂದರೆ ಜನವರಿ 29ರಂದು ಬೆಂಗಳೂರು ಚಲೋಗೆ (Bengaluru Chalo) ಕರೆ ನೀಡಿದ್ದಾರೆ. ಆದ್ರೆ, ಇದಕ್ಕೆ ಕೆಎಸ್​​ಆರ್​​​ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎಂದು ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ.

‘ನೋ ವರ್ಕ್ ನೋ ಪೇ’ ಆದೇಶ

ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಜನವರಿ 29ರಂದು ಬೆಂಗಳೂರು ಚಲೋ ಕೈಗೊಂಡಿದ್ದಾರೆ. ಆದ್ರೆ, ಇದಕ್ಕೆ ಒಂದು ದಿನ ಮೊದಲೇ ಕೆಎಸ್​​​ಆರ್​​ಟಿಸಿ ಮಹತ್ವದ ಆದೇಶ ಹೊರಡಿಸಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ಒಂದು ವೇಳೆ ಗುರುವಾರ ಡ್ಯೂಟಿಗೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎನ್ನುವ ಆದೇಶವನ್ನು ಜಾರಿ ಮಾಡಿದೆ.

ಇದನ್ನೂ ಓದಿ: ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಬಿಗ್​​ ಶಾಕ್​ ನೀಡಿದ ಕರ್ನಾಟಕ-ಕೇರಳ ಸರ್ಕಾರ!

ಅಧಿಕಾರಿಗಳಿಗೆ ಖಡಕ್ ಸೂಚನೆ

01-01-2020ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಾಗೂ
01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದಕ್ಕೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿಯು ಜನವರಿ 29ರ ಗುರುವಾರ ಬೆಂಗಳೂರು ಚಲೋಗೆ ಕರೆ ನೀಡಿದೆ. ಈ ಹಿನ್ನೆಲೆ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕೈಗೊಳ್ಳುವಂತೆ ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದಿನಾಂಕ.29.01.2026 ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದು. ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ ‘ನೋ ವರ್ಕ್ ನೋ ಪೇ’ ಜಾರಿ ಮಾಡಬೇಕು.
ಅನಿವಾರ್ಯ ಸಂದರ್ಭದಲ್ಲಿ ಅವಶ್ಯವಿದ್ದಲ್ಲಿ ನೌಕರರ ವಾರದ ರಜೆಯನ್ನು ರದ್ದುಗೊಳಿಸಿ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜ.29ರಂದು ಬಸ್ ಸಂಚಾರ ಇರುತ್ತಾ ಇಲ್ಲಾ?

ಇದರೊಂದಿಗೆ ಕೆಎಸ್​​​ಆರ್​​ಟಿಸಿ ತನ್ನ ನೌಕರರ ಪ್ರತಿಭಟನೆಗೆ ಬ್ರೇಕ್ ಹಾಕಲು ಮುಂದಾಗಿದೆ. ಹೀಗಾಗಿ ಬೆಂಗಳೂರು ಚಲೋ, ಸಾರಿಗೆ ನೌಕರರ ಮುಂದಿನ ನಡೆ ಮೇಲೆ ನಿಂತಿದೆ.  ಒಂದು ವೇಳೆ ಈ ಆದೇಶಕ್ಕೆ ಹೆದರಿ ಪ್ರತಿಭಟನೆಯಿಂದ ಹಿಂದೆ ಸರಿದರೆ ಎಂದಿನಂತೆ ಬಸ್ ಸಂಚಾರ ಇರಲಿದೆ. ಇನ್ನು ಆದೇಶಕ್ಕೆ ಡೋಟ್​ ಕೇರ್ ಎಂದು ಬೆಂಗಳೂರು ಚಲೋಗೆ ತೆರಳಿದರೆ ಕೆಎಸ್​​ಆರ್​​​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದು ಗ್ಯಾರಂಟಿ. ಹೀಗಾಗಿ ಪ್ರಯಾಣಿಕರು ಜನವರಿ 29ರಂದು ಬಸ್ ಪ್ರಯಾಣ ಕೈಬಿಡುವುದು ಒಳಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 4:42 pm, Tue, 27 January 26

Source link

ಬೀದಿ ನಾಯಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ: ಒಂದೇ ದಿನ 36ಕ್ಕೂ ಅಧಿಕ ಮಂದಿ ಮೇಲೆ ದಾಳಿ – Kannada News | Karnataka Stray Dog Attacks: More Than 36 People Injured in Single Day

ಬೀದಿ ನಾಯಿಗಳ ಹಾವಳಿ (ಸಾಂದರ್ಭಿಕ ಚಿತ್ರ)

ಶಿವಮೊಗ್ಗ/ ಧಾರವಾಡ, ಜನವರಿ 27: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು ಶಿವಮೊಗ್ಗದ ಭದ್ರವಾತಿ, ಧಾರವಾಡ ಮತ್ತು ಬಾಗಲಕೋಟೆ ಸೇರಿ ವಿವಿಧೆಡೆ ನಿನ್ನೆ ಒಂದೇ ದಿನ 36ಕ್ಕೂ ಹೆಚ್ಚು ಮಂದಿಯ ಮೇಲೆ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಭದ್ರಾವತಿಯಲ್ಲಿ 11 ಜನರಿಗೆ ಹುಚ್ಚು ನಾಯಿ ಕಡಿದಿದ್ದರೆ, ಧಾರವಾಡದಲ್ಲಿ 15ಕ್ಕೂ ಅಧಿಕ ಮಂದಿ ಇಂತಹುದ್ದೇ ಪ್ರಕರಣದಲ್ಲಿ ಗಾಯಗೊಂಡಿದ್ದಾರೆ. ಅತ್ತ ಬಾಗಲಕೋಟೆಯಲ್ಲಿಯೂ 10ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿ ಅಟ್ಯಾಕ್​​ ಮಾಡಿದೆ.

ಹೊಳೆಹೊನ್ನೂರಲ್ಲಿ ಹುಚ್ಚುನಾಯಿ ಅಟ್ಟಹಾಸ

ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ನಿನ್ನೆ ಒಂದೇ ದಿನ ಮಕ್ಕಳೂ ಸೇರಿದಂತೆ ಒಟ್ಟು 11 ಮಂದಿಗೆ ಹುಚ್ಚು ನಾಯಿ ಕಡಿದಿದೆ. ಗಾಯಗೊಂಡಿರುವ ಎಲ್ಲರಿಗೂ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಕುರಿತಂತೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು ಪಟ್ಟಣ ಪಂಚಾಯತ್​ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದ್ದು, ತಕ್ಷಣವೇ ಬೀದಿ ನಾಯಿಗಳನ್ನು ಸೆರೆ ಹಿಡಿಯುವಂತೆ ಆಗ್ರಹಿಸಲಾಗಿದೆ. ಹೊಳೆಹೊನ್ನೂರು ಪಟ್ಟಣ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರೂ ದೂರಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಶ್ವಾನಗಳ ಅಟ್ಟಹಾಸ; ಒಂದೇ ವರ್ಷದಲ್ಲಿ 10 ಜನರನ್ನು ಬಲಿ ಪಡೆದ ಬೀದಿನಾಯಿಗಳು

ರಸ್ತೆಯಲ್ಲಿ ತಿರುಗಾಡುತ್ತಿದ್ದವರ ಮೇಲೆ ಅಟ್ಯಾಕ್​​

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಮಿಶ್ರಿಕೋಟಿಯಲ್ಲಿಯೂ ರಾತ್ರಿ ವೇಳೆ ರಸ್ತೆಯಲ್ಲಿ ತಿರುಗಾಡುತ್ತಿದ್ದವರ ಮೇಲೆ ಹುಚ್ಚುನಾಯಿ ದಾಳಿ ನಡೆಸಿದೆ. ಘಟನೆಯಲ್ಲಿ 15ಕ್ಕೂ ಅಧಿಕ ಜನರಿಗೆ ಗಾಯವಾಗಿದ್ದು, ಗಾಯಾಳುಗಳಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕೆಲವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೂ ದಾಖಲಿಸಲಾಗಿದೆ. ಇನ್ನು ಘಟನೆ ಬಳಿಕ ರೊಚ್ಚಿಗೆದ್ದ ಗ್ರಾಮಸ್ಥರು ದಾಳಿ ಮಾಡಿದ ಹುಚ್ಚುನಾಯಿ ಹಿಡಿದು ಕೊಂದಿದ್ದು, ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರವಚನ ಮುಗಿಸಿ ತೆರಳುತ್ತಿದ್ದವರ ಮೇಲೆ ದಾಳಿ

ಪ್ರವಚನ ಮುಗಿಸಿ ರಾತ್ರಿ ವೇಳೆ ಮನೆಗೆ ತೆರಳುತ್ತಿದ್ದ 10ಕ್ಕೂ ಅಧಿಕ ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಹಳೆ ಬಾಗಲಕೋಟೆಯ ತೆಂಗಿನಮಠ ಓಣಿಯಲ್ಲಿ ನಡೆದಿದೆ. ಗಾಯಾಳುಗಳು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆ ಪೈಕಿ ಪುಟ್ಟ ಮಕ್ಕಳೂ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಪದೇ ಪದೇ ಅವುಗಳು ದಾಳಿ ನಡೆಸುತ್ತಿದ್ದರೂ ಸ್ಥಳೀಯ ಅಧಿಕಾರಿಗಳು ಕೈ ಕಟ್ಟಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ – Kannada News | Masked Man snatches chain from woman employee inside Bhopal AIIMS Hospital lift Video goes viral

ಭೋಪಾಲ್‌, ಜನವರಿ 27: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಇತ್ತೀಚೆಗೆ ನಡೆದ ಘಟನೆಯು ಭದ್ರತಾ ಲೋಪವನ್ನು ಎತ್ತಿ ತೋರಿಸಿದೆ. ಭೋಪಾಲ್‌ನ (Bhopal) ಏಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ಲಿಫ್ಟ್‌ನಿಂದ ಇಳಿಯುತ್ತಿದ್ದಾಗ, ಮಾಸ್ಕ್ ಧರಿಸಿದ್ದ ಕಳ್ಳನೊಬ್ಬ ಆಕೆಯ ಕುತ್ತಿಗೆಯಿಂದ ಮಂಗಳಸೂತ್ರವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಆಸ್ಪತ್ರೆಯೊಳಗಿನ ಲಿಫ್ಟ್‌ನ ಒಳಗೆ ನಡೆದಿರುವುದು ಆತಂಕಕಾರಿ ಸಂಗತಿ. ಸಿಸಿಟಿವಿ ದೃಶ್ಯಗಳ ಪ್ರಕಾರ, ಆರೋಪಿ ಆ ಮಹಿಳೆಯೊಂದಿಗೆ ಲಿಫ್ಟ್‌ನಲ್ಲಿಯೇ ಬಂದಿದ್ದಾನೆ. ಆಕೆ ಹೊರಗೆ ಹೋಗಲು ಲಿಫ್ಟ್ ಬಾಗಿಲು ತೆರೆದ ತಕ್ಷಣ ಅವನು ಆಕೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಕಸಿದುಕೊಂಡು ಓಡಿಹೋದನು. ಆಕೆ ಕಿರುಚುತ್ತಾ ಓಡಿದರೂ ಆತ ಪರಾರಿಯಾಗಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ ತೋರಿಸಿದ ಪೊಲೀಸ್ರು – Kannada News | Sidlaghatta Civic Official Threat Case: lathi charge On Rajeev Gowda Fans for Tries To Stop Police vehicle

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಶಿಡ್ಲಘಟ್ಟ ಜೆಎಂಎಫ್​ಸಿ ಕೋರ್ಟ್​ ಆದೇಶ ಹೊರಡಿಸಿದೆ. ಇನ್ನು ಆರೋಪಿ ರಾಜೀವ್ ಗೌಡನನ್ನು ಕೋರ್ಟ್ ನಿಂದ ಜೈಲಿಗೆ ಕರೆದೊಯ್ಯುವ ಸಂದರ್ಭದಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಹೌದು…ರಾಜೀವ್ ಗೌಡನನ್ನ ಜೈಲಿಗೆ ಕರೆದೊಯ್ಯುತ್ತಿದ್ದ ವಾಹನವನ್ನು ಕೋರ್ಟ್​​ ಬಳಿ ಅಡ್ಡಹಾಕಿ ಜೈಕಾರಕ್ಕೆ ಯತ್ನಿಸಿದ್ದಾರೆ. ಬಳಿಕ ಪೊಲೀಸರು ರಾಜೀವ್ ಗೌಡನ ಲಾಠಿ ರುಚಿ ತೋರಿಸಿ ಗುಂಪು ಚದುರಿಸಿದರು. ಬಳಿಕ ಜೈಲಿಗೆ ಕರೆದೊಯ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪದೇ ಪದೇ ಶೀತವಾಗುವುದು ಈ ಕಾಯಿಲೆಯ ಆರಂಭಿಕ ಲಕ್ಷಣವಾಗಿರಬಹುದು ಎಚ್ಚರ! – Kannada News | Sore Throat & Cough Keep Coming Back: What To Do

ಎಲ್ಲರಿಗೂ ಒಂದಲ್ಲ ಒಂದು ಹಂತದಲ್ಲಿ ಶೀತವಾಗುವುದು (Cold) ಬಹಳ ಸಾಮಾನ್ಯ. ಅದರಲ್ಲಿಯೂ ಹವಾಮಾನ ಬದಲಾವಣೆಯ ಸಮಯದಲ್ಲಿ ಈ ಅಪಾಯ ಹೆಚ್ಚಾಗಿರುತ್ತದೆ, ಆದರೆ ಈ ಸಮಸ್ಯೆ ಪ್ರತಿ ತಿಂಗಳು ಕಾಣಿಸಿಕೊಂಡರೆ, ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ. ಏಕೆಂದರೆ ಇದು ಗಂಭೀರ ಅನಾರೋಗ್ಯದ ಆರಂಭಿಕ ಲಕ್ಷಣವಾಗಿರಬಹುದು. ಹೌದು, ಪುನರಾವರ್ತಿತವಾಗಿ ನೆಗಡಿಯಾಗುವುದು ಕೆಲವು ರೋಗ ಬರುವ ಮುನ್ಸೂಚನೆಯಾಗಿರುತ್ತದೆ. ಹಾಗಾದರೆ ಈ ರೀತಿ ಆಗುತ್ತಿದ್ದರೆ ಏನು ಮಾಡಬೇಕು, ಯಾವ ಸಮಯದಲ್ಲಿ ವೈದ್ಯರನ್ನು ಭೇಟಿ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಗಳ ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ. ರವಿ ಮೆಹ್ರಾ ಹೇಳುವ ಪ್ರಕಾರ, ಆಗಾಗ ಶೀತವಾಗುವುದು ಸಾಮಾನ್ಯವಲ್ಲ. ಈ ರೀತಿಯಾಗುವುದಕ್ಕೆ ಹಲವಾರು ಕಾರಣಗಳಿರಬಹುದು, ಅವುಗಳಲ್ಲಿ ಅಲರ್ಜಿಕ್ ರಿನಿಟಿಸ್ ಕೂಡ ಒಂದು. ಈ ಸ್ಥಿತಿಯು ನಿರಂತರ ಸೀನುವಿಕೆ, ಮೂಗು ಸೋರುವಿಕೆ ಮತ್ತು ಮೂಗಿನಲ್ಲಿ ತುರಿಕೆಗೆ ಕಾರಣವಾಗುತ್ತದೆ. ಹವಾಮಾನ ಬದಲಾವಣೆಗಳಿಂದಾಗಿ ವಿವಿಧ ವೈರಸ್‌ಗಳು ಸಕ್ರಿಯವಾಗಿ ದೇಹದ ಮೇಲೆ ದಾಳಿ ಮಾಡಿದಾಗ ಈ ರೀತಿಯಾಗುತ್ತದೆ. ಹವಾಮಾನ ಸಂಬಂಧಿತ ಅಲರ್ಜಿಗಳಿಂದ ಉಂಟಾಗುವ ಶೀತಗಳು ಆಗಾಗ ಕಂಡುಬರುತ್ತವೆ. ಈ ಸಮಸ್ಯೆ ಮುಂದುವರಿದರೆ, ವೈದ್ಯರನ್ನು ಭೇಟಿ ಮಾಡುವುದು ಬಹಳ ಮುಖ್ಯ.

ಸೈನಸ್ ಸಮಸ್ಯೆಗಳು ಸಹ ಇದಕ್ಕೆ ಪ್ರಮುಖ ಕಾರಣ. ಸೈನಸ್ ಇದ್ದಾಗಲೂ ಆಗಾಗ ನೆಗಡಿಯಾಗುತ್ತದೆ. ಈ ರೀತಿಯಾದಾಗಲೂ ಕೂಡ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ. ಆ ಮೂಲಕ ಈ ರೀತಿಯ ಸಮಸ್ಯೆಗಳನ್ನು ಔಷಧಿ ಅಥವಾ ಶಸ್ತ್ರಚಿಕಿತ್ಸೆಯ ಮೂಲಕ ಸರಿಪಡಿಸಿಕೊಳ್ಳಬಹುದು. ಇದರ ಜೊತೆಗೆ ದುರ್ಬಲ ರೋಗನಿರೋಧಕ ಶಕ್ತಿ ಕೂಡ ಆಗಾಗ ಶೀತವಾಗುವುದಕ್ಕೆ ಕಾರಣವಾಗುತ್ತದೆ. ನಿಮಗೂ ಪದೇ ಪದೇ ನೆಗಡಿಯಾಗುತ್ತಿದ್ದರೆ ನಿಮ್ಮ ರೋಗನಿರೋಧಕ ಶಕ್ತಿ ದುರ್ಬಲಗೊಂಡಿದೆ ಎಂದರ್ಥ. ಅದರಿಂದಾಗಿ ವೈರಸ್‌ ದೇಹವನ್ನು ಸುಲಭವಾಗಿ ಆಕ್ರಮಿಸಿಕೊಳ್ಳುತ್ತದೆ, ಜೊತೆಗೆ ಮತ್ತೆ ಮತ್ತೆ ಶೀತಕ್ಕೆ ಕಾರಣವಾಗುತ್ತದೆ. ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ನಿಮ್ಮ ಆಹಾರಕ್ರಮದ ಬಗ್ಗೆ ಗಮನ ಹರಿಸಬೇಕು. ಸಮತೋಲಿತ ಆಹಾರ ಸೇವನೆ ಮಾಡಬೇಕು.

ಇದನ್ನೂ ಓದಿ: ಚಳಿಗಾಲದಲ್ಲಿ ಸೈನಸ್ ಸಮಸ್ಯೆಗಳು ಹೆಚ್ಚಾಗುವುದಕ್ಕೆ ಕಾರಣವೇನು? ತಡೆಯಲು ಈ ರೀತಿ ಮಾಡಿ

ಈ ಸಮಸ್ಯೆ ಯಾವಾಗ ಗಂಭೀರವಾಗುತ್ತದೆ?

  • 23 ವಾರಗಳಿಗಿಂತ ಹೆಚ್ಚು ಕಾಲ ಶೀತ ಇದ್ದಲ್ಲಿ.
  • ಶೀತದ ಜೊತೆಗೆ ಉಸಿರಾಟದ ತೊಂದರೆ.
  • ನಿರಂತರ ಬದಲಾವಣೆಗಳು ಅಥವಾ ಧ್ವನಿ ಚೇಂಜ್ ಆಗುವುದು.
  • ಆಗಾಗ ಜ್ವರ ಬರುವುದು

ಪದೇ ಪದೇ ಶೀತವಾಗುವುನ್ನು ತಡೆಯಲು ಸಲಹೆಗಳು:

  • ಧೂಳು ಮತ್ತು ಹೊಗೆಯಿಂದ ಆದಷ್ಟು ದೂರವಿರಿ.
  • ತಣ್ಣೀರು ಕುಡಿಯಬೇಡಿ.
  • ಹವಾಮಾನ ಬದಲಾವಣೆಯ ಸಮಯದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
  • ಧೂಮಪಾನದಿಂದ ದೂರವಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

12 ಕೋಟಿ ರೂ. ಕಾರು ಖರೀದಿಸಿ, 10 ನಿಮಿಷದಲ್ಲಿ ಬೋರ್ ಆಯ್ತು ಎಂದ ಗಾಯಕ ಬಾದ್​ಷಾ – Kannada News | Singer Badshah talks about Rolls Royce Cullinan Series 2

ಗಾಯಕ ಬಾದ್​ಷಾ (Singer Badshah) ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಆ ಬೇಡಿಕೆಗೆ ತಕ್ಕಂತೆ ಅವರಿಗೆ ಸಂಭಾವನೆ ಸಿಗುತ್ತದೆ. ಪ್ರತಿ ಹಾಡಿಗೆ ಅಂದಾಜು 20 ಲಕ್ಷ ರೂಪಾಯಿ ಸಂಭಾವನೆ ಪಡೆಯುವ ಅವರ ಲೈಫ್ ಸ್ಟೈಲ್ ಕೂಡ ಐಷಾರಾಮಿ ಆಗಿದೆ. ದುಬಾರಿ ವಸ್ತುಗಳ ಬಗ್ಗೆ ಅವರು ಸಖತ್ ಕ್ರೇಜ್ ಇದೆ. ಜಗತ್ತಿನ ಅತಿ ದುಬಾರಿ ಜಾಕೆಟ್, ಶೂ, ಕಾರುಗಳು ಬಾದ್​ಚಾ ಅವರ ಬಳಿ ಇವೆ. ಅಚ್ಚರಿ ಏನೆಂದರೆ, 12 ಕೋಟಿ ರೂಪಾಯಿ ಬೆಲೆ ಬಾಳುವ ರೋಲ್ಸ್ ರಾಯ್ಸ್ (Rolls Royce Cullinan Series II) ಕಾರನ್ನು ಖರೀದಿಸಿದ ನಂತರ 10 ನಿಮಿಷದಲ್ಲೇ ಬೋರ್ ಆಯ್ತು ಎಂದು ಅವರು ಹೇಳಿದ್ದಾರೆ!

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಾದ್​ಷಾ ಅವರು ಈ ಬಗ್ಗೆ ಮಾತನಾಡಿದ್ದಾರೆ. ಜಗತ್ತಿನ ಅತಿ ದುಬಾರಿ ಕಾರುಗಳ ಪೈಕಿ ರೋಲ್ಸ್ ರಾಯ್ಸ್ ಮುಂಚೂಣಿಯಲ್ಲಿದೆ. ಆಯ್ದ ಕೆಲವು ಮಂದಿ ಮಾತ್ರ ಇದನ್ನು ಖರೀದಿಸುತ್ತಾರೆ. 2024ರಲ್ಲಿ ಇದರ ಹೊಸ ಆವೃತ್ತಿ ‘ರೋಲ್ಸ್ ರಾಯ್ಸ್ ಕಲಿನನ್ ಸೀರಿಸ್ 2’ ಲಾಂಚ್ ಆಯಿತು. ಅದನ್ನು ಬಾದ್​ಚಾ ಅವರು ಖರೀದಿಸಿದರು.

ಅಚ್ಚರಿ ಎಂದರೆ, ಬಾದ್​ಷಾ ಅವರು ‘ರೋಲ್ಸ್ ರಾಯ್ಸ್ ಕಲಿನನ್ ಸೀರಿಸ್ 2’ ಕಾರನ್ನು ಖರೀದಿಸುವಾಗಿ ಹೆಚ್ಚೇನೂ ಯೋಚಿಸಲಿಲ್ಲ. ‘ಖರೀದಿಸಬೇಕು ಎನಿಸಿತು ಅಷ್ಟೇ. ಇವತ್ತು ಆ ಕಾರು ಬೇಕು ಅಂತ ತಕ್ಷಣಕ್ಕೆ ನಿರ್ಧಾರ ಮಾಡಿದೆ. ಇದು ನನ್ನ ರೀತಿಯ ಫೀಲಿಂಗ್ಸ್. ಅದು ಒಳ್ಳೆಯ ಕಾರ್ ಹೌದು. ಆದರೆ, 10-15 ನಿಮಿಷ ಮಾತ್ರ ಅದರ ಮಜಾ ಇತ್ತು. ನಂತರ ಮತ್ತೆ ಹೊಸದು ಏನು ಖರೀದಿಸೋದು ಎನಿಸಿತು’ ಎಂದು ಬಾದ್​ಷಾ ಅವರು ಹೇಳಿದ್ದಾರೆ.

ಬಾದ್​ಷಾ ಖರೀದಿಸಿದ ‘ರೋಲ್ಸ್ ರಾಯ್ಸ್ ಕಲಿನನ್ ಸೀರಿಸ್ 2’ ಕಾರಿನ ಬೆಲೆ ಬರೋಬ್ಬರಿ 12 ಕೋಟಿ ರೂಪಾಯಿ. ಭಾರತದಲ್ಲಿ ಶಾರುಖ್ ಖಾನ್, ಮುಕೇಶ್ ಅಂಬಾನಿ ಮುಂತಾದವರ ಬಳಿ ಮಾತ್ರ ಈ ಕಾರು ಇದೆ. ಬಾದ್​ಷಾ ಅವರಿಗೆ ಈ ರೀತಿಯ ಐಷಾರಾಮಿ ವಸ್ತುಗಳ ಬಗ್ಗೆ ಕ್ರೇಜ್ ಇದೆ. ಆ ಕಾರಣದಿಂದಲೇ ಅವರು ಇದನ್ನೆಲ್ಲ ಖರೀದಿ ಮಾಡುತ್ತಾರೆ.

ಇದನ್ನೂ ಓದಿ: ಯುವ ದಸರಾದಲ್ಲಿ ಕನ್ನಡ ಮಾತಾಡಿ ಜನರ ಮನಗೆದ್ದ ಬಾಲಿವುಡ್ ಗಾಯಕ ಬಾದ್​ಷಾ

ಈಗ ಬಾದ್​ಷಾ ಅವರಿಗೆ 41 ವರ್ಷ ವಯಸ್ಸು. ಬಾಲಿವುಡ್​​ನಲ್ಲಿ ಅವರು ಅನೇಕ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಅವರ ಒಟ್ಟು ಆಸ್ತಿ 124 ಕೋಟಿ ರೂಪಾಯಿ ಎನ್ನಲಾಗಿದೆ. ಒಂದು ಲೈವ್ ಸಂಗೀತ ಕಾರ್ಯಕ್ರಮ ನೀಡಲು ಬಾದ್​ಷಾ ಅವರು ಅಂದಾಜು 1 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಾರೆ. ಅಷ್ಟರಮಟ್ಟಿಗೆ ಅವರಿಗೆ ಬೇಡಿಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version