Headlines

KITS Recruitment 2026: KITSನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | KITS Recruitment 2026: Assistant Manager Jobs in Bangalore, Apply by Jan 22!

ಕರ್ನಾಟಕ ಇನ್ನೋವೇಶನ್ ಆ್ಯಂಡ್​ ಟೆಕ್ನಾಲಜಿ ಸೊಸೈಟಿ (KITS) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 22 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. KITS ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ ( KITS ) ಹುದ್ದೆಗಳ ಸಂಖ್ಯೆ: 3…

Read More

ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ – Kannada News | Rishab Shetty Revives Stalled Big Budget Film? Directing and Acting in Randamoozham

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಗೆಲುವಿನ ಬಳಿಕ ಬ್ರೇಕ್ ಪಡೆದಿದ್ದಾರೆ. ಕುಟುಂಬದ ಜೊತೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಈಗ ರಿಷಬ್ ಶೆಟ್ಟಿ ಅವರು ನಟನೆಯ ಕಡೆ ಗಮನ ಹರಿಸುತ್ತಿದ್ದಾರೆ. ಒಪ್ಪಿಕೊಂಡ ಸಿನಿಮಾಗಳ ಶೂಟ್​​ನ ಅವರು ಪೂರ್ಣಗೊಳಿಸಬೇಕಿದೆ. ಈ ಮಧ್ಯೆ ಅವರು ಹೊಸ ಸಿನಿಮಾ ಕೈಗೆತ್ತಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಅದು ಕೂಡ ನಿಂತು ಹೋದ ಬಿಗ್ ಬಜೆಟ್ ಚಿತ್ರ ಎಂಬ ವದಂತಿ ಹರಿದಾಡಿದೆ. ಮಲಯಾಳಂ ಚಿತ್ರರಂಗದಲ್ಲಿ ‘ರಂಡಮೂಳಂ’ ಎಂಬ ಸಿನಿಮಾ…

Read More

700 ಕೋಟಿ ಆಫರ್ ರಿಜೆಕ್ಟ್ ಮಾಡಿದ ‘ರಾಮಾಯಣ’ ನಿರ್ಮಾಪಕ, 1000 ಕೋಟಿ ಗುರಿ

ರಣ್​​ಬೀರ್ ಕಪೂರ್ (Ranbir Kapoor), ಯಶ್ (Yash) ಮತ್ತು ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಆಗಿದೆ. ಈ ಸಿನಿಮಾಕ್ಕೆ ಸುಮಾರು ನಾಲ್ಕು ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎನ್ನಲಾಗುತ್ತಿದೆ. ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದ್ದು, ಎರಡೂ ಭಾಗಗಳ ಒಟ್ಟು ವೆಚ್ಚ ಸುಮಾರು 4000 ಕೋಟಿ ರೂಪಾಯಿಗಳಾಗಿರಲಿವೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಇದೀಗ ಸಿನಿಮಾದ ಪ್ರೀ ರಿಲೀಸ್ ಬ್ಯುಸಿನೆಸ್ ಅನ್ನು ಸಿನಿಮಾದ…

Read More

ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ರಾಘವ್ ಚಡ್ಡಾ ವಿಡಿಯೋ ರಿಲೀಸ್

ನವದೆಹಲಿ, ಏಪ್ರಿಲ್ 2: ಆಮ್ ಆದ್ಮಿ ಪಕ್ಷ (ಎಎಪಿ) ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಹುದ್ದೆಯಿಂದ ವಜಾಗೊಳಿಸಿದೆ. ಅವರನ್ನು ತೆಗೆದುಹಾಕುವಂತೆ ಕೋರಿ ಎಎಪಿ ರಾಜ್ಯಸಭಾ ಸಚಿವಾಲಯಕ್ಕೆ ಪತ್ರ ಬರೆದಿದೆ. ಎಎಪಿಯ ವತಿಯಿಂದ ಅವರಿಗೆ ರಾಜ್ಯಸಭೆಯಲ್ಲಿ ಮಾತನಾಡುವ ಸಮಯವನ್ನು ನೀಡಬಾರದು ಎಂದು ಮನವಿ ಮಾಡಿದೆ. ಆದರೆ, ಈ ನಿರ್ಧಾರಕ್ಕೆ ಕಾರಣವೇನೆಂಬುದರ ಬಗ್ಗೆ ಪಕ್ಷ ಯಾವುದೇ ಮಾಹಿತಿ ನೀಡದಿರುವುದು ಕುತೂಹಲ ಮೂಡಿಸಿದೆ. ಇನ್ನೊಂದೆಡೆ ರಾಘವ್ ಚಡ್ಡಾ ಕೂಡ ಈ ಸುದ್ದಿಯ ಬಗ್ಗೆ…

Read More

IND-W vs SL-W: 6,6,4,6.. ಒಂದೇ ಓವರ್​ನಲ್ಲಿ ಲಂಕಾ ಸ್ಪಿನ್ನರ್ ಬೆವರಿಳಿಸಿದ ರಿಚಾ ಘೋಷ್

ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20ಪಂದ್ಯದಲ್ಲಿ ಭಾರತ 221 ರನ್ ಗಳಿಸಿತು. ಇದು ಅಂತರರಾಷ್ಟ್ರೀಯ ಮಹಿಳಾ ಟಿ20ಐ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಅತ್ಯಧಿಕ ಸ್ಕೋರ್ ಆಗಿದೆ. ತಂಡ ಇಷ್ಟು ಬೃಹತ್ ಮೊತ್ತ ಕಲೆಹಾಕುವಲ್ಲಿ ಸ್ಮೃತಿ, ಶಫಾಲಿ ಹಾಗೂ ರಿಚಾ ಘೋಷ್ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್‌ ಮಾಡಿದ ರಿಚಾ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಪಂದ್ಯದ 19ನೇ ಓವರ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದ ರಿಚಾ, ಈ ಓವರ್​ನ ಕೊನೆಯ 4 ಎಸೆತಗಳನ್ನು…

Read More

ಇದು ದ್ವಿಚಕ್ರ ವಾಹನ ಸವಾರರು ಓದಲೇ ಬೇಕಾದ ಸ್ಟೋರಿ: ಬೆಚ್ಚಿ ಬೀಳಿಸುವಂತಿದೆ ನಿಮ್ಹಾನ್ಸ್​​ ವರದಿ! – Kannada News | Road Safety: NIMHANS Reveals Fatal Brain Injuries in Bike Accidents

ಬೆಂಗಳೂರು, ಜನವರಿ 26: ನಗರಗಳಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಲ್ಲಿ ಅಪಘಾತಗಳು ಮಾಮೂಲು ಎಂಬಂತಾಗಿದೆ. ಈ ಪೈಕಿ ಬೈಕ್​​ ಅಪಘಾತಗಳ ಸಂದರ್ಭ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರುವವರ ಬಗ್ಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಅಧ್ಯಯನವೊಂದು ನಡೆಸಿದ್ದು, ಈ ಅಂಕಿ ಅಂಶಗಳು ಬೆಚ್ಚಿಬೀಳಿಸುವಂತಿವೆ. ಸರಿಯಾಗಿ ಹೆಲ್ಮೆಟ್​​ ಧರಿಸದೇ ಇರುವುದು, ಅಥವಾ ಹೆಲ್ಮೆಟ್​​ ಇಲ್ಲದೆ ದ್ವಿಚಕ್ರ ಚಾಲನೆ ವೇಳೆ ನಡೆಯುವ ಅಪಘಾತಗಳು ಮೆದುಳಿನ ಗಾಯಕ್ಕೆ ಕಾರಣವಾಗುತ್ತಿವೆ. 2025ರಲ್ಲಿ ಚಿಕಿತ್ಸೆ ಪಡೆದ 1,500 ಮೆದುಳಿನ ಗಾಯ…

Read More

ಮಕ್ಕಳ 1ನೇ ತರಗತಿ ದಾಖಲಾತಿ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು, ಏಪ್ರಿಲ್​ 10: ಒಂದನೇ ತರಗತಿ ದಾಖಲಾತಿಗೆ (Class 1st admission) ಕಡ್ಡಾಯ 6 ವರ್ಷ ತುಂಬಿರಬೇಕು ಎಂಬ ಆದೇಶ ಸಂಘರ್ಷಕ್ಕೆ ಕಾರಣವಾಗಿತ್ತು. ಬಳಿಕ ಶಿಕ್ಷಣ ಇಲಾಖೆ ವಿನಾಯಿತಿ ನೀಡಿತ್ತು. ಆ ಬಳಿಕವೂ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು, ಪ್ರತಿಭಟನೆ ಕೂಡ ಮಾಡಿದ್ದರು. ಇದೀಗ 1ನೇ ತರಗತಿಗೆ ಮಕ್ಕಳ ದಾಖಲಾತಿಯಲ್ಲಿ 60 ದಿನ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ, ಶೈಕ್ಷಣಿಕ ವರ್ಷದ…

Read More

BCCI Awards: ಇಬ್ಬರು ಕನ್ನಡಿಗರು ಸೇರಿದಂತೆ ಮೂವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಭಾರತ ಕ್ರಿಕೆಟ್​ನ ಮೂವರು ದಿಗ್ಗಜ ಆಟಗಾರರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ (BCCI Lifetime Achievement Award) ಘೋಷಿಸಿದೆ. ಈ ಪ್ರಶಸ್ತಿಗೆ ಭಾಜನರಾದವರಲ್ಲಿ ಇಬ್ಬರು ಕನ್ನಡಿಗರು ಸೇರಿದ್ದರೆ, ಮತ್ತೊಬ್ಬರು ಭಾರತ ಮಹಿಳಾ ತಂಡದ ಮಾಜಿ ನಾಯಕಿಯಾಗಿದ್ದಾರೆ. ವಾಸ್ತವವಾಗಿ ಬಿಸಿಸಿಐ ಮಾರ್ಚ್ 15 ರಂದು ನವದೆಹಲಿಯಲ್ಲಿ ನಮನ್ ವಾರ್ಷಿಕ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲಿದ್ದು, ಈ ಸಮಾರಂಭದಲ್ಲಿ 2024-25 ರ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಗೌರವಿಸಲಿದೆ. ಹೆಚ್ಚುವರಿಯಾಗಿ, ಬಿಸಿಸಿಐ ಮೂವರು ಭಾರತೀಯ ಕ್ರಿಕೆಟ್ ದಂತಕಥೆಗಳಿಗೆ ಬಿಸಿಸಿಐನ ಅತ್ಯುನ್ನತ…

Read More

ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಜನರ ಕ್ರೇಜ್ ಕಡಿಮೆ ಆಗಿಲ್ಲ. ಖಾಸಗಿ ಮಳಿಗೆ ಉದ್ಘಾಟನೆಗಾಗಿ ಗಿಲ್ಲಿ ನಟ (Gilli Nata) ಅವರು ಯಾದಗಿರಿಗೆ ಬಂದಿದ್ದಾರೆ. ಈ ವೇಳೆ ಮದುವೆ ಬಗ್ಗೆ ಪ್ರಶ್ನೆ ಎದುರಾಯಿತು….

Read More

ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಬಿಹಾರದ ವ್ಯಕ್ತಿ ಬಲೆಗೆ ಬಿದ್ದಿದ್ದು ಹೇಗೆ?

ನವದೆಹಲಿ, ಏಪ್ರಿಲ್ 10: ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪದ ಮೇಲೆ ಬಿಹಾರದಲ್ಲಿ ಮೂವರನ್ನು ಬಂಧಿಸಲಾಗಿದೆ. ಅಮೆರಿಕದ ಸಿಐಎ (US Central Intelligence Agency) ನೀಡಿದ ಮಾಹಿತಿಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ವ್ಯಕ್ತಿಯನ್ನು ಭಾರತದ ಅಧಿಕಾರಿಗಳು ಬಂಧಿಸಿದ್ದಾರೆ. ಅಮನ್ ತಿವಾರಿ ಸೇರಿದಂತೆ ಬಕ್ಸಾರ್ ಜಿಲ್ಲೆಯ ಮೂವರನ್ನು ಬಿಹಾರದ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಅಮನ್ ತಿವಾರಿ ಯುಎಸ್ ಕೇಂದ್ರ ಗುಪ್ತಚರ ಸಂಸ್ಥೆಗೆ…

Read More