ಚಿಕ್ಕಮಗಳೂರು: ರೋಗಿ ಸ್ಟ್ರೆಚರ್ನಲ್ಲಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ! ಆಮೇಲಾಗಿದ್ದು ದುರಂತ – Kannada News | Doctor Busy on Mobile While Patient Suffers on Stretcher at Chikkamagaluru Government Hospital, Patient Dies
ಚಿಕ್ಕಮಗಳೂರು, ಜನವರಿ 5: ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ಭಾರೀ ನಿರ್ಲಕ್ಷ್ಯದ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 60 ವರ್ಷದ ಮಂಜುನಾಥ್ ಎಂಬ ರೋಗಿಗೆ ತುರ್ತು ಚಿಕಿತ್ಸಾ ಘಟಕದಲ್ಲೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅವರು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಲಕ್ಷ್ಮಿಪುರ ಗ್ರಾಮದ ನಿವಾಸಿ ಮಂಜುನಾಥ್ ಅವರನ್ನು ಶನಿವಾರ ಸಂಜೆಯೇ ಉಸಿರಾಟದ ತೊಂದರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟ್ರೆಚರ್ ಮೇಲೆ ಮಲಗಿದ್ದರೂ ಬೆಳಗ್ಗೆಯವರೆಗೆ ಸೂಕ್ತ…