Headlines

ದೇವರನ್ನು ನಂಬದ ಜಾವೇದ್ ಅಖ್ತರ್ ಈಗ ನಮಾಜ್ ಶುರು ಮಾಡಿದ್ರಾ? ಕೇಸ್ ಹಾಕುವುದಾಗಿ ಎಚ್ಚರಿಕೆ – Kannada News | Javed Akhtar reaction on AI video claiming he turned to God

ಹಿರಿಯ ಚಿತ್ರಕಥೆಗಾರ, ಸಾಹಿತಿ ಜಾವೇದ್ ಅಖ್ತರ್ ಅವರು ಓರ್ವ ನಾಸ್ತಿಕ (Atheist) ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಅಂದರೆ, ಜಾವೇದ್ ಅಖ್ತರ್ ಅವರು ದೇವರ ಮೇಲೆ ನಂಬಿಕೆ ಹೊಂದಿಲ್ಲ. ದೇವರ ಅಸ್ತಿತ್ವವನ್ನು ಅವರು ಒಪ್ಪುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಅವರು ಈಗಾಗಲೇ ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಆದರೆ ಈಗ ಅವರು ತಮ್ಮ ಅಭಿಪ್ರಾಯ ಬದಲಾಯಿಸಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿದೆ. ಟೋಪಿ ಧರಿಸಿ ನಮಾಜ್ ಕೂಡ ಮಾಡಲು ಆರಂಭಿಸಿದ್ದಾರೆ ಎಂದು ಅಂತೆ-ಕಂತೆ ಹಬ್ಬಿಸಲಾಗಿದೆ. ಅದರ ವಿರುದ್ಧ ಜಾವೇದ್ ಅಖ್ತರ್…

Read More

ಐಪಿಎಲ್ ಸಂಭ್ರಮದ ನಡುವೆ ಕಳ್ಳರ ಕೈಚಳಕ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 50ಕ್ಕೂ ಹೆಚ್ಚು ಮೊಬೈಲ್ ಫೋನ್ ಕಳವು

ಬೆಂಗಳೂರು, ಮಾ,30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಗಳಿಗೆ ಭಾರಿ ಶಾಕ್ ಎದುರಾಗಿದೆ. ಪಂದ್ಯದ ಸಂಭ್ರಮದಲ್ಲಿದ್ದ ಪ್ರೇಕ್ಷಕರ ಮೊಬೈಲ್ ಫೋನ್‌ಗಳನ್ನು ಗುರಿಯಾಗಿಸಿಕೊಂಡು ಸಂಘಟಿತ ಕಳ್ಳರ ತಂಡವೊಂದು ದೊಡ್ಡ ಮಟ್ಟದ ಕಳ್ಳತನ ಎಸಗಿದೆ. ಈ ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ಅಂದರೆ ಎಕ್ಸ್​​​ನಲ್ಲಿ ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕ್ರೀಡಾಂಗಣದ P3 ಸ್ಟ್ಯಾಂಡ್ ಒಂದರಲ್ಲೇ ಸುಮಾರು 50 ರಿಂದ 60 ಮೊಬೈಲ್ ಫೋನ್‌ಗಳು ಕಳ್ಳತನವಾಗಿವೆ ಎಂದು…

Read More

ಗಿಲ್ಲಿ ನಟನ ಬಿಗ್ ಬಾಸ್ ವಿನ್ನಿಂಗ್ ಮೂಮೆಂಟ್ ಹೇಗಿತ್ತು ನೋಡಿ – Kannada News | Gilli Nata Winning Moment video Goes viral After his hilarious victory In Bigg Boss Kannada

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಹೆಸರನ್ನು ಸುದೀಪ್ ಅವರು ಜನವರಿ 18ರಂದು ಅದ್ದೂರಿ ವೇದಿಕೆ ಮೇಲೆ ಘೋಷಣೆ ಮಾಡಿದರು ಮತ್ತು ಆ ಹೆಸರು ಗಿಲ್ಲಿ ಅವರದ್ದಾಗಿತ್ತು. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ ಎಂದೇ ಹೇಳಬಹುದು. ಗಿಲ್ಲಿಯ ವಿನ್ನಿಂಗ್ ಮೂಮೆಂಟ್ ತುಂಬಾನೇ ಸುಂದರಮಯವಾಗಿತ್ತು. ಕಿಚ್ಚ ಸುದೀಪ್ ವಿನ್ನರ್ ಘೋಷಣೆ ಮಾಡುತ್ತಿದ್ದಂತೆ ಗಿಲ್ಲಿ ಹಾಗೂ ಅವರ ಅಭಿಮಾನಿಗಳು ಖುಷಿಯಾದರು. ಗಿಲ್ಲಿಗೆ ಏನು ಹೇಳಬೇಕು ಎಂಬುದೇ ಗೊತ್ತಾಗಿಲ್ಲ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ…

Read More

ಜಾತ್ರೆಗೆ ಹಣ ಕೊಡದಿದ್ದಕ್ಕೆ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ: ಬಾಗಲಕೋಟೆಯಲ್ಲೊಂದು ಅಮಾನವೀಯ ಘಟನೆ – Kannada News | Bagalkote Social Boycott: 7 Families Ostracized Over Festival Fund Dispute

7 ಕುಟುಂಬಗಳಿಗೆ ಊರಿಂದ ಬಹಿಷ್ಕಾರImage Credit source: Tv9 Kannada ಬಾಗಲಕೋಟೆ, ಮೇ 01: ರಾಜ್ಯ ಸರ್ಕಾರ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಕೆಲ ಅನಿಷ್ಟ ಪದ್ಧತಿಗಳಿಗೆ ಮಾತ್ರ ಬ್ರೇಕ್​​ ಬೀಳುತ್ತಿಲ್ಲ. ಇದಕ್ಕೆ ತಾಜಾ ಉದಾಹರಣೆಯೆಂದರೆ ಬಾಗಲಕೋಟೆ ಜಿಲ್ಲೆಯಲ್ಲಿ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ ಹಾಕಿರೋದು. ಹೌದು, ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂಪಾಯಿ ಹಣ ನೀಡಿಲ್ಲ ಎಂಬ ಕಾರಣಕ್ಕೆ ಕುಟುಂಬಗಳಿಗೆ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಯಲಪ್ಪ…

Read More

ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೂ ತಲುಪಿದ ರಾಜೀವ್ ಗೌಡ ಪ್ರಕರಣ: ‘ಕೈ’ ಮುಖಂಡನ ವಿರುದ್ಧ ಇದೆ 9 ಕ್ರಿಮಿನಲ್ ಕೇಸ್ – Kannada News | Police Launch 3 Search Teams to Arrest Rajeev Gowda as Sidlaghatta Abuse Case Reaches Congress High Command

ಚಿಕ್ಕಬಳ್ಳಾಪುರ, ಜನವರಿ 16: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ಅಶ್ಲೀಲವಾಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡ ವಿರುದ್ಧ ಈಗಾಗಲೇ ಎಫ್​ಐಆರ್ ದಾಖಲಾಗಿದೆ. ಎರಡು ದಿನಗಳಿಂದ ರಾಜೀವ್‌ ಗೌಡ (Rajeev Gowda) ತಲೆಮರೆಸಿಕೊಂಡಿದ್ದು, ಫೋನ್‌ ಸ್ವಿಚ್‌ಆಫ್ ಮಾಡಿಕೊಂಡಿದ್ದಾರೆ. ರಾಜೀವ್ ಗೌಡ ಬಂಧನಕ್ಕೆ ಪೊಲೀಸರು 3 ತಂಡ ರಚನೆ ಮಾಡಿದ್ದಾರೆ. ಗುರುವಾರ ರಾಜೀವ್ ಗೌಡ ಮನೆ, ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ಶೋಧ ನಡೆಸಲಾಯಿತು. ರಾಜೀವ್ ಗೌಡ ಪತ್ನಿ ಪೊಲೀಸರ ಜೊತೆ ರಂಪಾಟ…

Read More

Video: ಅಗಲಿದ ಪತ್ನಿಯ ಫೋಟೋ ಆಟೋದಲ್ಲಿಟ್ಟು ದಿನನಿತ್ಯ ಪೂಜಿಸುವ ಬೆಂಗಳೂರಿನ ಆಟೋ ಚಾಲಕ – Kannada News | Bengaluru auto driver worships a photo of his late wife kept in his auto.

ಬೆಂಗಳೂರು, ಜುಲೈ 13: ಪ್ರೀತಿಯೇ ಹಾಗೆ, ಸುಂದರವಾದ ಭಾವನೆ. ಒಬ್ಬೊಬ್ಬರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವ ರೀತಿ ವಿಭಿನ್ನವಾಗಿರುತ್ತದೆ. ಕೆಲವರು ತಮ್ಮ ಸಂಗಾತಿಗೆ ಕಾರು, ಒಡವೆ ಹೀಗೆ ದುಬಾರಿ ಬೆಲೆಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ಬೆಂಗಳೂರಿನ (Bengaluru) ಆಟೋಚಾಲಕನು ಅಗಲಿದ ಮಡದಿಯನ್ನು ಮನಸ್ಸಿನಲ್ಲಿಟ್ಟು ಆರಾಧಿಸುತ್ತಿದ್ದೇನೆ. ಮಡದಿಯ ಫೋಟೋವನ್ನು ತನ್ನ ಆಟೋದಲ್ಲಿಟ್ಟು ಪೂಜಿಸುತ್ತಿದ್ದಾನೆ. ಈ ಹೃದಯಸ್ಪರ್ಶಿ ಕ್ಷಣದ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ಆಶೀಶ್ (asishmatthew) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಆಟೋ ಚಾಲಕನೊಬ್ಬ ತನ್ನ…

Read More

ಮೊಳಕೆಯೊಡೆದ ಈರುಳ್ಳಿಯನ್ನು ಎಸೆಯುತ್ತಿದ್ದೀರಾ? ಈ ತಪ್ಪನ್ನು ಎಂದಿಗೂ ಮಾಡಬೇಡಿ – Kannada News | Sprouted Onions: When to Discard & Health Tips

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿಯೂ ಈರುಳ್ಳಿ (Onions) ಪ್ರಮುಖ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಸಸ್ಯಾಹಾರಿಗಳಿಂದ ಮಾಂಸಾಹಾರಿಗಳ ವರೆಗೆ ಎಲ್ಲರೂ ಸಹ ಈರುಳ್ಳಿಯನ್ನು ಸೇವನೆ ಮಾಡಿಯೇ ಮಾಡುತ್ತಾರೆ. ಏಕೆಂದರೆ ಈರುಳ್ಳಿ ಇಲ್ಲದೆ, ಭಕ್ಷ್ಯಗಳ ಪರಿಮಳ ಹೆಚ್ಚಾಗಲು ಸಾಧ್ಯವಿಲ್ಲ. ಅದಕ್ಕಾಗಿಯೇ ಮನೆಗಳಲ್ಲಿ ಅವುಗಳನ್ನು ಖಾಲಿಯಾಗದಂತೆ ನೋಡಿಕೊಳ್ಳುತ್ತಾರೆ. ಆದರೆ ಅವು ಮೊಳಕೆಯೊಡೆದಾಗ ಅವುಗಳನ್ನು ತಿನ್ನುವುದು ಸುರಕ್ಷಿತವೇ ಎಂಬ ಅನುಮಾನ ಮೂಡುತ್ತದೆ. ಕೆಲವರು ಈ ರೀತಿ ಮೊಳಕೆಯೊಡೆದ ಈರುಳ್ಳಿಯನ್ನು ಸೇವನೆ ಮಾಡಬಾರದು ಎಂದು ಹೇಳುತ್ತಾರೆ. ಆದರೆ ಇನ್ನು ಕೆಲವರು ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು ಇದನ್ನು…

Read More

ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಿಷ್ಟು – Kannada News | Sriramulu Welcomes Ananth Kumar Hegdes Return to Active Politics

ಶಿವಮೊಗ್ಗ, ಫೆಬ್ರವರಿ 27: ಮಾರ್ಚ್ 8ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆಯಲಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಹೀಗಾಗಿ ತಮ್ಮ ಹಳೆಯ ರಣಕಣವೆಂದೇ ಗುರುತಿಸಿಕೊಂಡಿರುವ ಭಟ್ಕಳದಿಂದಲೇ ಅವರು ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್​​ ಆರಂಭಿಸಲಿದ್ದಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ. ಶ್ರೀರಾಮುಲು, ಅನಂತ್ ಕುಮಾರ್ ಹೆಗಡೆ ಅವರ ರಾಜಕೀಯ ಮರುಪ್ರವೇಶವನ್ನು ಸ್ವಾಗತಿಸಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಅಜ್ಞಾತವಾಸದಲ್ಲಿರುವ ಅನಂತ್ ಕುಮಾರ್ ಹೆಗಡೆ…

Read More

ದುಬೈನಲ್ಲಿ ಸಿಲುಕಿದ್ದ ಮತ್ತಷ್ಟು ಕನ್ನಡಿಗರು ತಾಯ್ನಾಡಿಗೆ ವಾಪಸ್: ಬೆಂಗಳೂರಿಗೆ ಬಂದಿಳಿದ 288 ಪ್ರಯಾಣಿಕರು

ಬೆಂಗಳೂರು, ಮಾರ್ಚ್ 9: ಮಧ್ಯಪ್ರಾಚ್ಯದಲ್ಲಿ ದಿನೇ ದಿನೇ ಇಸ್ರೇಲ್-ಇರಾನ್ ಯುದ್ಧದ (Israel Iran War) ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಹಂತಹಂತವಾಗಿ ತಾಯ್ನಾಡಿಗೆ ಮರಳುತ್ತಿದ್ದಾರೆ. ಮಾರ್ಚ್ 8 ರ ಭಾನುವಾರ ರಾತ್ರಿ ದುಬೈನಿಂದ ಹೊರಟ ಎಮಿರೇಟ್ಸ್ ವಿಮಾನದಲ್ಲಿ 288 ಮಂದಿ ಪ್ರಯಾಣಿಕರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದರು. ಯುದ್ಧದ ಆತಂಕದಿಂದಾಗಿ ಹಲವು ದಿನಗಳಿಂದ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಇದೀಗ ವಿಮಾನ ಸೇವೆಗಳು ತಾತ್ಕಾಲಿಕ ಪುನರಾರಂಭವಾದ ಬೆನ್ನಲ್ಲೇ ತಾಯ್ನಾಡಿಗೆ ಮರಳುತ್ತಿದ್ದಾರೆ. ಈಗಾಗಲೇ…

Read More

ಸಿರುಗುಪ್ಪ ಬಳಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ತಮಿಳುನಾಡಿನ ದೇಗುಲಕ್ಕೆ ಹೋಗಿ ಬರುತ್ತಿದ್ದ ಒಂದೇ ಕುಟುಂಬದ ಮೂವರು ಸಾವು – Kannada News | Fatal Car Crash Near Siruguppa: Three Family Members Killed While Returning From Tamil Nadu Temple Visit

ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿರುವುದು ಬಳ್ಳಾರಿ, ಡಿಸೆಂಬರ್ 24: ಬಳ್ಳಾರಿ (Ballari) ಜಿಲ್ಲೆ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಸೇರಿದಂತೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ತಕ್ಷಣ ಬಳ್ಳಾರಿಯ ವಿಮ್ಸ್…

Read More