ಉದ್ಯಮಿಗೆ ಬೆದರಿಸಿ ಹಣ ಸುಲಿಗೆ: ಚಿತ್ರದುರ್ಗ ನಗರಸಭೆ ಮಾಜಿ ಸದಸ್ಯ ಅಂದರ್, ಮತ್ತೋರ್ವ ವಶಕ್ಕೆ
ಚಿತ್ರದುರ್ಗ, ಏಪ್ರಿಲ್ 08: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯಿಂದ ಹಣ ಸುಲಿಗೆ ಮಾಡಿದ ಪ್ರಕರಣ ಸಂಬಂಧ ಚಿತ್ರದುರ್ಗ ಪೊಲೀಸರು ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಅಲಿಯಾಸ್ ಖೋಟಾ ನೋಟು ಚಂದ್ರನನ್ನು ಬಂಧಿಸಿದ್ದಾರೆ. ಈತನಿಗ ಸಾಥ್ ನೀಡಿದ್ದ ಮಂಗಳೂರು ಮೂಲದ ಕುಖ್ಯಾತ ವಂಚಕ ರೋಷನ್ ಸಾಲ್ಡಾನ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದ್ದು, ಆರೋಪಿ ಚಂದ್ರನಿಗೆ ಸಂಬಂಧಿತ ಬ್ಯಾಂಕ್ ಅಕೌಂಟ್ನಲ್ಲಿದ್ದ 50 ಲಕ್ಷ ರೂಪಾಯಿ ಹಣವನ್ನು ಫ್ರೀಜ್ ಮಾಡಿಸಲಾಗಿದೆ. ಆ ಮೂಲಕ ರಾಜ್ಯ, ಹೊರರಾಜ್ಯದ ಉದ್ಯಮಿಗಳಿಗೆ ವಂಚಿಸುತ್ತಿದ್ದ ಜಾಲ ಬೇಧಿಸಿರುವ ಪೊಲೀಸರು,…