Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 27ರ ದಿನಭವಿಷ್ಯ – Kannada News | Numerology Jan 27: Birth Numbers 4, 5, 6 Daily Horoscope and Luck

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಈ ದಿನ ಖರ್ಚಿನ ವಿಚಾರವೇ ಹೆಚ್ಚು ಯೋಚನೆಗೆ ಕಾರಣ ಆಗುತ್ತದೆ. ಕೆಲವು ಅನಿವಾರ್ಯ ವೆಚ್ಚಗಳನ್ನು ತಪ್ಪಿಸಲು ಸಾಧ್ಯವೇ ಆಗುವುದಿಲ್ಲ. ಉದ್ಯೋಗ ಅಥವಾ ವ್ಯವಹಾರದಲ್ಲಿ ನಿಮ್ಮ ಸಲಹೆಗೆ ಮೌಲ್ಯ ಸಿಗುತ್ತದೆ, ಆದರೆ ತಕ್ಷಣ ಫಲವನ್ನು ನಿರೀಕ್ಷಿಸಬೇಡಿ. ಹಳೆಯ ಸಂಪರ್ಕಗಳು ನಿಮಗೆ ಸಹಾಯ ಮಾಡಬಹುದು. ಈ ಹಿಂದೆ ನಿಮ್ಮ ಜೊತೆಗೆ ಕೆಲಸ ಮಾಡಿದ್ದಂಥ ವ್ಯಕ್ತಿಗಳೇ ಕೆಲವು ಆಕರ್ಷಕ ಆಫರ್ ಗಳನ್ನು ತರಲಿದ್ದಾರೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಈ ದಿನ ನಿಮ್ಮ ಮನಸ್ಥಿತಿ ಹೇಗಿರುತ್ತದೋ ಅದು ನೀವು ಮಾಡುವ ಕೆಲಸದ ಮೇಲೆ ಪ್ರಭಾವ ಬೀರುತ್ತದೆ. ಒಂದು ವೇಳೆ ಬೇಡ ಎನಿಸಿ, ನಿಮ್ಮ ಮನಸ್ಸು ಒಪ್ಪದ ಕೆಲಸಗಳನ್ನೂ ಮಾಡಬೇಕಾದ ಅನಿವಾರ್ಯ ಎದುರಾಗಲಿದೆ. ವ್ಯಾಪಾರ- ವ್ಯವಹಾರಕ್ಕೆ ಸಂಬಂಧಿಸಿದಂತೆ ಬರಬೇಕಾದ ಹಣಕಾಸಿನ ವಿಷಯದಲ್ಲಿ ದೊಡ್ಡ ಬದಲಾವಣೆ ನಿರೀಕ್ಷೆ ಮಾಡಬಹುದು. ಒಂದು ವೇಳೆ ಬಾಕಿ ಹಣ ವಸೂಲಿಗೆ ಪ್ರಯತ್ನವನ್ನು ಪಟ್ಟರೆ ಫಲ ಸಿಗಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಲಹೆ ಹಾಗೂ ಅನುಭವದ ಮಾತುಗಳನ್ನು ಕೇಳಿಸಿಕೊಳ್ಳುವುದರಿಂದ ಉಪಯುಕ್ತವಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈ ದಿನ ಕೆಲಸದ ವಿಚಾರದಲ್ಲಿ ನೀವು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲೇ ಬೇಕು ಎಂಬ ಬೇಸಂದರ್ಭ ಬರುತ್ತದೆ. ಮುಂದೂಡುತ್ತಾ ಬಂದಿದ್ದ ಕೆಲವು ಜವಾಬ್ದಾರಿಗಳನ್ನು ಇಂದೇ ಮುಗಿಸಬೇಕಾಗುತ್ತದೆ. ಗಡುವಿನೊಳಗೆ ಉತ್ತರ ಹೇಳಬೇಕಾದ ಸಂಗತಿಗಳನ್ನು ಆದ್ಯತೆ ಮೇಲೆ ಮಾಡುತ್ತಾ ಬನ್ನಿ. ಇನ್ನು ವ್ಯವಹಾರದ ವಿಷಯಕ್ಕೆ ಬಂದಲ್ಲಿ ಲಾಭಕ್ಕಿಂತ ಸ್ಥಿರತೆ ಮುಖ್ಯವಾಗುತ್ತದೆ. ಹೊಸ ಸಾಲ ಅಥವಾ ಹೂಡಿಕೆ ನಿರ್ಧಾರವನ್ನು ಈ ದಿನದ ಮಟ್ಟಿಗೆ ಕೈ ಬಿಡುವುದು ಒಳಿತು.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 27ರ ದಿನಭವಿಷ್ಯ – Kannada News | Numerology Forecast Jan 27: Birth Numbers 1, 2, 3 What Your Day Holds

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಈ ದಿನ ಮನೆ ಮತ್ತು ಕುಟುಂಬಕ್ಕೆ ಸಂಬಂಧಿಸಿದ ವಿಚಾರಗಳು ಮುಖ್ಯ ಸ್ಥಾನ ಪಡೆದುಕೊಳ್ಳುತ್ತವೆ. ಮನೆ ಖರ್ಚು, ಅಲಂಕಾರ ಅಥವಾ ದುರಸ್ತಿ ಬಗ್ಗೆ ಚರ್ಚೆ ನಡೆಯಬಹುದು. ದಿನಸಿ ಪದಾರ್ಥಗಳ ಖರೀದಿಯಲ್ಲಿ ಖರ್ಚು ಹೆಚ್ಚಾಗಲಿದೆ. ಸಾವಯವ ಉತ್ಪನ್ನಗಳ ಖರೀದಿಗಾಗಿಯೋ ಅಥವಾ ಒಣಹಣ್ಣುಗಳ ಖರೀದಿಗೋ ಹೆಚ್ಚು ಖರ್ಚು ಬರಲಿದೆ. ಇನ್ನು ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುತ್ತದೆ. ಭಾವುಕತೆಗೆ ಒಳಗಾಗಿ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ಸಂಬಂಧಗಳಲ್ಲಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಯುತ್ತದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಇಡೀ ದಿನ ಒಂದಲ್ಲಾ ಒಂದು ಚಟುವಟಿಕೆಯಲ್ಲಿ ಬಿಡುವಿಲ್ಲದಷ್ಟು ಕೆಲಸಗಳಲ್ಲಿ ತೊಡಗಿರುತ್ತೀರಿ. ಫೋನ್ ಕರೆಗಳು, ಸಂದೇಶಗಳು, ಭೇಟಿಗಳು ಜಾಸ್ತಿ ಆಗುತ್ತವೆ. ಉದ್ಯೋಗ ಅಥವಾ ವ್ಯವಹಾರದಲ್ಲಿ ಹೊಸ ಅವಕಾಶದ ಮಾತು ಬರಬಹುದು, ಆದರೆ ತಕ್ಷಣ ಒಪ್ಪಿಕೊಳ್ಳಬೇಡಿ. ಪ್ರಭಾವಿಗಳ ಸಂಪರ್ಕದಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇನ್ನು ಒಂದು ಕಡೆ ಹಣ ಬರುತ್ತದೆ, ಆದರೆ ಖರ್ಚು ಸಹ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಯಾಣ ಮಾಡುವಾಗ ಸಮಯ ಮತ್ತು ಹಣ ಎರಡಕ್ಕೂ ಲೆಕ್ಕವಿರಲಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಪ್ರಯಾಣದಲ್ಲಿ, ಉದ್ಯೋಗಕ್ಕೆ ಸಂಬಂಧಿಸಿದ ವಿಚಾರದಲ್ಲಿ ಏಕಾಏಕಿ ಸಿಟ್ಟು ಹೊರ ಹಾಕುವುದಕ್ಕೆ ಹೋಗಬೇಡಿ. ಈ ದಿನ ತಾಳ್ಮೆ ಬಹಳ ಅಗತ್ಯ. ಸರ್ಕಾರಿ ಕೆಲಸ, ದಾಖಲೆ ಅಥವಾ ಬ್ಯಾಂಕ್ ಸಂಬಂಧಿಸಿದ ವಿಚಾರಗಳಲ್ಲಿ ವಿಳಂಬ ಆಗಬಹುದು. ಹಣಕಾಸಿನ ವಿಷಯದಲ್ಲಿ ಸಣ್ಣ ಲಾಭದ ಸೂಚನೆ ಇದ್ದರೂ ಅದನ್ನು ಎಲ್ಲರಿಗೂ ಹೇಳಿಕೊಳ್ಳಬೇಡಿ. ನಿಮ್ಮಲ್ಲಿ ಕೆಲವರು ಚಿನ್ನ- ಬೆಳ್ಳಿ ಇತರ ಬೆಲೆ ಬಾಳುವ ಲೋಹದಲ್ಲಿ ಹೂಡಿಕೆ ಮಾಡುವುದಕ್ಕೆ ಆಲೋಚನೆ ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 27 January : ಇಂದು ಈ ರಾಶಿಯವರಿಗೆ ಹೇಳಿಕೊಳ್ಳಲಾಗದ ಒತ್ತಡ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ನವಮೀ ತಿಥಿ ಮಂಗಳವಾರ ಪಶ್ಚಾತ್ತಾಪ, ಆಲಸ್ಯ, ದೂರಪ್ರಯಾಣ, ಸ್ವಾರ್ಥ, ಸ್ವಾತ್ಮಾವಲೋಕನ, ನಾಸ್ತಿಕತೆ, ಅನಾರೋಗ್ಯ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ಶುಭ, ಕರಣ : ಕೌಲವ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 29 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:29 – 16:55, ಯಮಗಂಡ ಕಾಲ 09:46 – 11:11, ಗುಳಿಕ ಕಾಲ 12:37 – 14:03

ಮೇಷ ರಾಶಿ :

ಇಂದು ಭಾವನಾತ್ಮಕ ಸಂಪರ್ಕಗಳು ಬಲವಾಗಿರುತ್ತವೆ. ನಿಮ್ಮ ಹಣಕಾಸುಗಳನ್ನು ಬುದ್ಧಿವಂತಿಕೆಯಿಂದ ನಿರ್ವಹಿಸಿ ಮತ್ತು ಸೃಜನಶೀಲತೆಯನ್ನು ಹುಡುಕಿಕೊಳ್ಳಲು ತೊಡಗಿಸಿಕೊಳ್ಳಿ. ಕೆಲಸಕ್ಕಾಗಿ ನೀವು ಹಾಕಿಕೊಂಡ ಸಮಯವು ವ್ಯತ್ಯಸವಾಗುವುದು. ಕುಂದುಕೊರೆತಗಳ ಜೊತೆ ಜೀವಿಸುವುದನ್ನು ಕಲಿಯುವ ಆವಶ್ಯಕತೆ ಇದೆ ಎಂದು ಇಂದು ಗೊತ್ತಾಗುವುದು. ಇಂದು ನಿಮ್ಮ ಮನಸ್ಸು ಬಹಳ ಡೋಲಾಯಮಾನವಾಗಿ ಇರಲಿದೆ. ಒಂದೇ ವಿಚಾರವನ್ನು ನಿಮಗೆ ಮತ್ತೆ ಮತ್ತೆ ನೆನಪಿಸಬೇಕಾದೀತು.

ವೃಷಭ ರಾಶಿ :

ನಿಮ್ಮ ದಾರಿಯಲ್ಲಿ ಬರುವ ಹೊಸ ಆರ್ಥಿಕ ಅವಕಾಶಗಳಿಗೆ ತೆರೆದುಕೊಳ್ಳಿ. ನಿಮಗೆ ನೀವೇ ಸಾಂತ್ವನ ತಂದುಕೊಳ್ಳಬೇಕು. ಮನಸ್ಸಿಗೆ ನೆಮ್ಮದಿ ಸಿಗುವ ಸ್ಥಳಗಳಿಗೆ ಹೋಗಿ ಸ್ವಲ್ಪ ಕಾಲ ಇದ್ದು ಬರುವಿರಿ. ಹೊಸ ಚೈತನ್ಯ ನಿಮ್ಮದಾಗವುದು. ಸಮಾರಂಭಗಳಿಗೆ ಮುಖ್ಯ ಅತಿಥಿಯಾಗಿ ಆಹ್ವಾನ ಬರಬಹುದು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಗಂಭೀರವಾದ ಚರ್ಚೆಯನ್ನು ನೀವು ಹಾಸ್ಯ ಮಾಡಿ ಮುಗಿಸುವಿರಿ. ಒಳ್ಳೆಯ ಕಾರ್ಯಕ್ಕೆ ಅವಕಾಶ ಸಿಕ್ಕಾಗ ಅದನ್ನು ಮಾಡಿ.

ಮಿಥುನ ರಾಶಿ :

ನಿಮ್ಮ ಸಂಬಂಧಗಳಲ್ಲಿ ಸ್ಥಿರತೆಯನ್ನು ಹುಡುಕುವುದು ಮತ್ತು ಭವಿಷ್ಯಕ್ಕಾಗಿ ಉಳಿತಾಯದತ್ತ ಗಮನ ಹರಿಸಿ. ಕೆಲವು ವಿಚಾರದಲ್ಲಿ ಮೋಸವಾಗುವ ಸಂಭವವಿದೆ. ಬೇಸರ ಪಡದೇ ಮುನ್ನಡೆಯುವುದು ಸುಖ. ಮನಸ್ಸನ್ನು ಸಡಿಲಮಾಡಿಕೊಳ್ಳುವುದು ಬೇಡ. ಕೆಲವು ಔದ್ಯೋಗಿಕ ಸಮಸ್ಯೆಯನ್ನು ಮೇಲಧಿಕಾರಿಗಳ ಮೂಲಕ ಬಗೆ ಹರಿಸಿಕೊಳ್ಳಿ. ನಿಮ್ಮ ನೋವಿಗೆ ಸ್ಪಂದನೆ ಸಿಗುವುದು. ಅನಾರೋಗ್ಯದ ಭೀತಿಯು ಇರಲಿದೆ. ಮನಸ್ಸು ನಕಾರಾತ್ಮಕವಾಗಿ ಹರಡಬಹುದು. ನಿಮ್ಮ ಕ್ರಿಯಾಶೀಲ ಕಾರ್ಯಕ್ಕೆ ಪ್ರಶಂಸೆ ಸಿಗಲಿದೆ.

ಕರ್ಕಾಟಕ ರಾಶಿ :

ಅನಿರೀಕ್ಷಿತ ಯಶಸ್ಸು ನಿಮ್ಮನ್ನು ದಾರಿತಪ್ಪುಸಬಹುದು. ನಿಮ್ಮ ಆದಾಯದಲ್ಲಿ ವೈವಿಧ್ಯಗೊಳಿಸಲು ಅವಕಾಶಗಳನ್ನು ಅನ್ವೇಷಿಸಿ. ರಾಜಕೀಯ ವ್ಯಕ್ತಿಗಳು ಜನಮನ್ನಣೆಯನ್ನು ಅಧಿಕ ಗಳಿಸುವರು. ಅಲ್ಪ ಪ್ರಯಾಣದಿಂದಲೂ ನಿಮಗೆ ಆಯಾಸವಾಗಬಹುದು. ಪ್ರಯಾಣ ಮಾಡುವವನಿಗೆ ದಾರಿ ಹೇಗಿದೆಯೋ ಹಾಗೆ ಹೋಗುವುದು ಮುಖ್ಯ. ಹಿರಿಯರಿಂದ ಸಮಾಧಾನ ಸಿಗಲಿದೆ. ಬೇಡದ ವ್ಯಕ್ತಿಗಳ ಮಾತುಗಳನ್ನು ಕೇಳಲು ನಿಮಗೆ ಇಷ್ಟವಾಗದು. ಸಾವಧಾನದ ಚಿಂತನೆಗಳು ಪ್ರಯೋಜನಕ್ಕೆ ಬಾರದು.

ಸಿಂಹ ರಾಶಿ :

ಆತ್ಮಾವಲೋಕನದಲ್ಲಿ ತೊಡಗಿಸಿಕೊಳ್ಳುವುದರಿಂದ ಸ್ಪಷ್ಟತೆಯನ್ನು ನೀಡಬಹುದು. ನಿರಂತರ ಕಾರ್ಯದಿಂದ ದೇಹಕ್ಕೆ ಆಯಾಸವಾಗಬಹುದು. ಹೇಗಾದರೂ ಮಾಡಿ ಜೀವನದಲ್ಲಿ ಸುಖವಾಗಿ ಇರಬೇಕು ಎನ್ನುವ ಆಸೆ ಬರುವುದು. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ಯಾರದೋ ಮಾತನ್ನು ಕೇಳಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ಕಾಲಹರಣಕ್ಕೆ ಇನ್ನೊಬ್ಬರ ವಿಚಾರವನ್ನು ಚರ್ಚಿಸುವಿರಿ. ಮನೋಹರವಾದ ತಾಣಗಳಿಗೆ ಹೋಗುವ ಬಯಕೆಯಾಗುವುದು.

ಕನ್ಯಾ ರಾಶಿ :

ಸ್ಪಷ್ಟ ಮತ್ತು ಸಹಾನುಭೂತಿಯ ಸಂವಹನದ ಮೂಲಕ ನಿಮ್ಮ ಸಂಬಂಧಗಳಲ್ಲಿ ಬಲವಿರುವುದು. ಹಣಕಾಸಿನ ಹೊಂದಾಣಿಕೆಗೆ ಬಹಳ ಯೋಚನೆ ಮಾಡುವಿರಿ. ಕಹಿ ಘಟನೆಯನ್ನು ಮರೆಯಲು ಬಹಳ ಶ್ರಮ ಪಡುವಿರಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಸ್ವಂತ ಉದ್ಯೋಗವು ಸಣ್ಣ ಪ್ರಮಾಣದ ಹಿನ್ನಡೆಯನ್ನು ಕಾಣಬಹುದು. ಔಷಧ ವ್ಯಾಪಾರಿಗಳು ಹೆಚ್ಚಿನ ಲಾಭ ಗಳಿಸುವರು. ನಿಮಗೆ ಭೂಮಿಯನ್ನು ಕೊಡುವುದು ಅನಿವಾರ್ಯವಾಗಿದ್ದು, ಅದಕ್ಕೆ ಹೆಚ್ಚಿನ ಮೌಲ್ಯವು ಸಿಗದು.

ತುಲಾ ರಾಶಿ :

ನಿಮ್ಮ ವಿಶ್ಲೇಷಣಾತ್ಮಕ ಕೌಶಲ್ಯಗಳ ಜೊತೆ ಬಾಕಿ ಉಳಿದಿರುವ ಕಾರ್ಯಗಳನ್ನು ನಿಭಾಯಿಸಿ ಮತ್ತು ಒತ್ತಡವನ್ನು ನಿವಾರಿಸಲು ಸಾವಧಾನತೆ ಅಭ್ಯಾಸಗಳಲ್ಲಿ ತೊಡಗಿಸಿಕೊಳ್ಳಿ. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ. ಹಣದ ಹೂಡಿಕೆಯನ್ನು ಮಾಡುವ ಯೋಚನೆ ಇರಲಿದೆ. ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ. ನಿಮಗಿಂತ ಬಲವುಳ್ಳವರ ಮೇಲೆ ದ್ವೇಷವನ್ನು ಸಾಧಿಸುವಿರಿ. ಸಂಕಷ್ಟಕ್ಕೆ ಈಡಾಗುವಿರಿ. ಆರ್ಥಿಕ ವೆಚ್ಚಕ್ಕೆ ನೀವು ಕಡಿವಾಣ ಹಾಕಿಕೊಳ್ಳಬೇಕಾದೀತು.

ವೃಶ್ಚಿಕ ರಾಶಿ :

ನಿಮ್ಮ ವರ್ಚಸ್ಸು ಇಂದು ಉತ್ತುಂಗಕ್ಕೇರಿದೆ, ಇದು ಸಾಮಾಜಿಕ ಸಂವಹನಗಳಿಗೆ ಉತ್ತಮ ಸಹಕಾರಿಯಾಗುವುದು. ನಿಮ್ಮ ಶಕ್ತಿಯನ್ನು ಸೃಜನಾತ್ಮಕ ಅನ್ವೇಷಣೆಗಳಲ್ಲಿ ತೊಡಗಿಸಿ ಮತ್ತು ಪ್ರೀತಿಪಾತ್ರರ ಜೊತೆ ವಿಶೇಷ ಚಟುವಟಿಕೆಯಿಂದ ದಿನವನ್ನು ಕಳೆಯುವಿರಿ. ವ್ಯಾವಹಾರಿಕ ಮನಃಸ್ಥಿತಿಯಿಂದ ಎಲ್ಲವನ್ನೂ ಅಳೆಯುವುದು ಬೇಡ. ನಿಮ್ಮ ಅಸಹಜ ನಡೆಯನ್ನು ನಿಮ್ಮವರು ಒಪ್ಪಿಕೊಳ್ಳಲಾರರು. ಗುಂಪುಗಾರಿಕೆಯಿಂದ ವೈಯಕ್ತಿಕ ಕಾರ್ಯ ಅಸಾಧ್ಯ.

ಧನು ರಾಶಿ :

ನಿಮ್ಮ ವೈಯಕ್ತಿಕ ಮತ್ತು ಆರ್ಥಿಕ ಜೀವನದಲ್ಲಿ ಸಮತೋಲನವನ್ನು ಸಾಧಿಸುವ ಬಗ್ಗೆ ಹುಡುಕಾಟ ಇರುವುದು. ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ನಿಮ್ಮ ಭಾವನೆಗಳಿಗೆ ಒಂದು ಚೌಕಟ್ಟನ್ನು ಒದಗಿಸುತ್ತದೆ. ಮನೆಯಿಂದ ಹೊರ ಹೋಗುವುದು ನಿಮಗೆ ಇಷ್ಟವಾಗದು. ನಿಮ್ಮವರಿಗೆ ನಿಮ್ಮ ನಡತೆಯಲ್ಲಿ ಬದಲಾವಣೆ ಕಂಡೀತು. ಪಾಲುದಾರಿಕೆಯಲ್ಲಿ ನಿಮ್ಮ ಶ್ರಮವೇ ಹೆಚ್ಚಿರಲಿದ್ದು ಲಾಭವನ್ನು ಹೆಚ್ಚುಪಡೆಯುವಿರಿ.

ಮಕರ ರಾಶಿ :

ಇಂದು ನಿಮ್ಮ ಆರೋಗ್ಯಕ್ಕೆ ಗಮನ ಕೊಡಿ. ವಿಶ್ರಾಂತಿ ಮತ್ತು ನವ ಉತ್ಸಾಹ ಪಡೆಯುವುದು ಅವಶ್ಯಕ. ತಮ್ಮನ್ನು ತಾವು ಪ್ರಸ್ತುತಪಡಿಸಬಹುದಾದ ಹೊಸ ಹಣಕಾಸಿನ ಅವಕಾಶಗಳಿಗಾಗಿ ಎಚ್ಚರವಾಗಿರಿ. ನಿಮ್ಮವರ ಅನಾರೋಗ್ಯದ ಕಾರಣ ಓಡಾಟ ಮಾಡಬೇಕಾದೀತು. ಒಂಟಿಯಾಗಿ ಎಲ್ಲಿಗಾದರೂ ದೂರ ಹೋಗುವಿರಿ. ಅಶಿಸ್ತಿನಿಂದ ವರ್ತಿನೆಯ ಕಾರಣ ನಿಮಗೆ ಎಲ್ಲರಿಂದ ಅಪಮಾನವಾಗಬಹುದು. ಕೆಲವು ಕೆಲಸಗಳನ್ನು ಕೈಬಿಡುವಿರಿ.

ಕುಂಭ ರಾಶಿ :

ಇಂದು ಸಂಬಂಧಗಳು ನಿಮ್ಮ ಸಹಾಯಕ್ಕೆ ಬರಲಿವೆ. ಯಾವುದೇ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸಲು ಮುಕ್ತ ಸಂವಹನವನ್ನು ಅಳವಡಿಸಿಕೊಳ್ಳುವಿರಿ. ಆರೋಗ್ಯಕರ ಅಭ್ಯಾಸಗಳನ್ನು ಇಟ್ಟುಕೊಳ್ಳುವುದು ನಿಮ್ಮ ಒಟ್ಟಾರೆ ಯೋಗಕ್ಷೇಮಕ್ಕೆ ಪ್ರಯೋಜನವನ್ನು ನೀಡುತ್ತದೆ. ಆರ್ಥಿಕವಾಗಿ, ವಿವೇಕಯುತ ಯೋಜನೆ ಭವಿಷ್ಯದ ಭದ್ರತೆಗೆ ಕಾರಣವಾಗುತ್ತದೆ. ಮನೆ ಹುಡುಕಾಟಕ್ಕೆ ತಿರುಗಾಟ ಮಾಡಲಿದ್ದೀರಿ. ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನದ ಕಡೆ ಗಮನಕೊಡಬೇಕಾದೀತು.

ಮೀನ ರಾಶಿ :

ಇಂದು ನಿಮ್ಮ ಸಂಬಂಧಗಳಲ್ಲಿ ಪ್ರಾಮಾಣಿಕತೆ ಅತ್ಯಗತ್ಯ. ಮುಕ್ತ ಸಂವಹನವು ಪ್ರೀತಿಪಾತ್ರರೊಂದಿಗಿನ ಬಂಧಗಳನ್ನು ಬಲಪಡಿಸುತ್ತದೆ. ಆರ್ಥಿಕವಾಗಿ, ಅನಗತ್ಯ ಖರ್ಚುಗಳನ್ನು ತಪ್ಪಿಸುವುದು ಮತ್ತು ಉಳಿತಾಯದತ್ತ ಗಮನ ಹರಿಸುವುದು ಜಾಣತನ. ನಿಮ್ಮ ದಿನಚರಿಯನ್ನು ವ್ಯವಸ್ಥಿತವಾಗಿಸಿಕೊಳ್ಳಿ. ಆಪ್ತರ ಜೊತೆ ಮಾತನಾಡಿ ನಿಮ್ಮ ಮನಸ್ಸಿನ ಭಾರವನ್ನೆಲ್ಲ ದೂರ ಮಾಡಿಕೊಳ್ಳುವಿರಿ. ನಿಮ್ಮ ನಿಯಮಗಳು ನಿಮಗೆ ತೊಂದರೆಯಾಗಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಗುರುವಿನ ವಕ್ರಗತಿಯಿಂದ ಈ ನಾಲ್ಕು ರಾಶಿಯವರ ಗತಿಯೂ ಬದಲು – Kannada News | Guru Vakri Effects: Jupiter Retrograde Impact on Your Zodiac Sign Astrology Predictions

ಗುರುವು ಮಿಥುನ ರಾಶಿಯ ಪುನರ್ವಸು ನಕ್ಷತ್ರದಲ್ಲಿ ವಕ್ರನಾಗಿ ಸಂಚರಿಸುತ್ತಿದ್ದಾನೆ. ಇನ್ನು ಸುಮಾರು ಎರಡು ತಿಂಗಳ ಕಾಲ ಮಿಥುನ ರಾಶಿ ಪುನರ್ವಸು ನಕ್ಷತ್ರದಲ್ಲಿ ಸಂಚರಿಸಕಿದ್ದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬಹಳ ಮಹತ್ವದ ಬದಲಾವಣೆ. ಪುನರ್ವಸು ನಕ್ಷತ್ರವು ಗುರು ಗ್ರಹದ ನಕ್ಷತ್ರವಾಗಿದ್ದು, ಇಲ್ಲಿ ಗುರುವು ಬಲಿಷ್ಠನಾಗಿರುತ್ತಾನೆ. ​ಗುರುವು ವಕ್ರನಾದಾಗ ಅದರ ಪ್ರಭಾವವು ಸಾಮಾನ್ಯ ಸಂಚಾರಕ್ಕಿಂತ ಹೆಚ್ಚಾಗಿರುತ್ತದೆ. ಈ ಸಂಚಾರದಿಂದ ದ್ವಾದಶ ರಾಶಿಗಳ ಮೇಲಾಗುವ ಶುಭ ಮತ್ತು ಅಶುಭ ಫಲಗಳು ಇಲ್ಲಿವೆ.

​ಶುಭ ಫಲ

​ಮಿಥುನ :

ಗುರುವು ನಿಮ್ಮ ರಾಶಿಯಲ್ಲೇ ಇರುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆದರೆ ವಕ್ರನಾಗಿರುವುದರಿಂದ ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ಇರಲಿ.

​ಸಿಂಹ

ಲಾಭ ಸ್ಥಾನದಲ್ಲಿ ಗುರುವಿರುವುದರಿಂದ ಆರ್ಥಿಕ ಪ್ರಗತಿ ಕಂಡುಬರುತ್ತದೆ. ಬಾಕಿ ಉಳಿದಿದ್ದ ಹಣ ಕೈ ಸೇರಲಿದೆ. ದೀರ್ಘಕಾಲದ ಕನಸುಗಳು ನನಸಾಗುವ ಸಾಧ್ಯತೆ ಇದೆ.

​ತುಲಾ :

ಭಾಗ್ಯ ಸ್ಥಾನದಲ್ಲಿ ಗುರುವಿನ ಸಂಚಾರವು ಆಧ್ಯಾತ್ಮಿಕ ಚಿಂತನೆ ಹೆಚ್ಚಿಸುತ್ತದೆ. ವಿದೇಶ ಪ್ರಯಾಣ ಅಥವಾ ಉನ್ನತ ಶಿಕ್ಷಣಕ್ಕೆ ಪ್ರಯತ್ನಿಸುತ್ತಿರುವವರಿಗೆ ಯಶಸ್ಸು ಸಿಗಲಿದೆ. ತಂದೆಯ ಕಡೆಯಿಂದ ಆಸ್ತಿ ಲಾಭವಾಗಬಹುದು.

​ಕುಂಭ :

ಪಂಚಮ ಸ್ಥಾನದಲ್ಲಿ ಗುರುವು ವಕ್ರನಾಗಿರುವುದರಿಂದ ಸಂತಾನ ಭಾಗ್ಯ ಅಥವಾ ಮಕ್ಕಳ ಪ್ರಗತಿಯಿಂದ ಸಂತೋಷವಾಗಲಿದೆ. ಬುದ್ಧಿವಂತಿಕೆಯಿಂದ ಮಾಡುವ ಹೂಡಿಕೆಯಲ್ಲಿ ಲಾಭ ದೊರೆಯಲಿದೆ.

ಮಿಶ್ರ ಫಲ

​ಮೇಷ ಮತ್ತು ಧನು:

ಧೈರ್ಯ ಹೆಚ್ಚಲಿದ್ದರೂ, ಕೆಲಸಗಳಲ್ಲಿ ಸ್ವಲ್ಪ ವಿಳಂಬ ಉಂಟಾಗಬಹುದು. ಪರಿಶ್ರಮಕ್ಕೆ ತಕ್ಕ ಪ್ರತಿಫಲ ತಡವಾಗಿ ಸಿಗುತ್ತದೆ.

​ವೃಷಭ ಮತ್ತು ವೃಶ್ಚಿಕ:

ಆರ್ಥಿಕ ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ. ಮಾತು ಒರಟಾಗದಂತೆ ನೋಡಿಕೊಳ್ಳಿ.

​ಅಶುಭ ಫಲ

​ಕರ್ಕಾಟಕ :

ವ್ಯಯ ಸ್ಥಾನದಲ್ಲಿ ಗುರುವಿರುವುದರಿಂದ ಅನಗತ್ಯ ಖರ್ಚುಗಳು ಹೆಚ್ಚಾಗಬಹುದು. ದೂರದ ಪ್ರಯಾಣಗಳು ಆಯಾಸ ತರಬಹುದು. ಆರೋಗ್ಯದ ಬಗ್ಗೆ ಹೂಡಿಕೆ ಮಾಡುವುದು ಉತ್ತಮ.

​ಕನ್ಯಾ :

ಕರ್ಮದ ರಾಶಿಯಲ್ಲಿ ಗುರು ವಕ್ರನಾಗಿರುವುದರಿಂದ ವೃತ್ತಿ ಕ್ಷೇತ್ರದಲ್ಲಿ ಗೊಂದಲ ಉಂಟಾಗಬಹುದು. ಮೇಲಧಿಕಾರಿಗಳೊಂದಿಗೆ ವಾಗ್ವಾದ ಬೇಡ. ವರ್ಗಾವಣೆ ಸಾಧ್ಯತೆ ಇದೆ.

​ಮಕರ :

ಆರನೇ ಮನೆಯಲ್ಲಿ ಗುರು ಇರುವುದರಿಂದ ಗುಪ್ತ ಶತ್ರುಗಳ ಕಾಟ ಅಥವಾ ಹಳೆಯ ಸಾಲದ ಬಾಧೆ ಕಾಡಬಹುದು. ಕಾನೂನು ವಿಚಾರಗಳಲ್ಲಿ ಎಚ್ಚರಿಕೆ ಇರಲಿ.

​ಮೀನ :

ನಾಲ್ಕನೇ ಮನೆಯಲ್ಲಿ ಗುರು ಇರುವುದರಿಂದ ಸುಖ-ಸಂತೋಷಕ್ಕೆ ಸ್ವಲ್ಪ ಧಕ್ಕೆ ಬರಬಹುದು. ಮನೆ ಅಥವಾ ವಾಹನ ದುರಸ್ತಿಗೆ ಹಣ ವ್ಯಯವಾಗಬಹುದು. ತಾಯಿಯ ಆರೋಗ್ಯದ ಕಡೆ ಗಮನವಿರಲಿ.

​ಪುನರ್ವಸು ಅಂದರೆ ‘ಮರಳಿ ಬರುವುದು’ ಎಂದರ್ಥ. ಈ ಅವಧಿಯಲ್ಲಿ ಕಳೆದುಹೋದ ವಸ್ತುಗಳು, ಸಂಪತ್ತು, ಸಂಬಂಧಗಳು ಅಥವಾ ಉದ್ಯೋಗದ ಅವಕಾಶಗಳು ಮತ್ತೆ ಸಿಗುವ ಸಾಧ್ಯತೆ ಇರುತ್ತದೆ.

​ಶುಭ ಫಲಕ್ಕಾಗಿ ಪ್ರತಿ ​ಗುರುವಾರ ಶ್ರೀ ರಾಘವೇಂದ್ರ ಸ್ವಾಮಿಗಳ ಅಥವಾ ದತ್ತಾತ್ರೇಯರ ದರ್ಶನ ಮಾಡಿ. ಗ
ಕಡಲೆ ಧಾನ್ಯವನ್ನು ಬಟ್ಟೆಯಲ್ಲಿ ಇಟ್ಟು ದಾನ ಮಾಡಿ.​

– ಲೋಹಿತ ಹೆಬ್ಬಾರ್

Source link

WPL 2026: ಆರ್​ಸಿಬಿ ಪಂದ್ಯ ಸೋತರೂ ಎಲ್ಲರ ಹೃದಯ ಗೆದ್ದ ರಿಚಾ ಘೋಷ್ – Kannada News | WPL 2026: Nat Sciver’s Century Powers MI to Victory Over RCB Despite Richa Ghosh’s 90

ಮಹಿಳಾ ಪ್ರೀಮಿಯರ್ ಲೀಗ್ ( Women’s Premier League) 2026 ರ 16 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವೆ ನಡೆಯಿತು. ವಡೋದರಾದಲ್ಲಿ ನಡೆದ ಈ ಪಂದ್ಯ ಅಭಿಮಾನಿಗಳಿಗೆ ಮನರಂಜನೆ ರಸದೌತಣ ನೀಡುವುದರಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಈ ಪಂದ್ಯವನ್ನು ಆರ್​ಸಿಬಿ ಸೋತಿತ್ತಾದರೂ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್​ಗೆ ಒಂದು ಕ್ಷಣ ಸೋಲಿನ ಭಯ ಹುಟ್ಟಿಸಿತು ಎಂಬುದರಲ್ಲಿ ಸುಳಿಲ್ಲ. 35 ರನ್​ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡಿದ್ದ ಆರ್​ಸಿಬಿ ಪರ ಏಕಾಂಗಿ ಹೋರಾಟ ನೀಡಿದ ರಿಚಾ ಘೋಷ್ (Richa Ghosh) 90 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ರಿಚಾಗೆ ಮತ್ತೊಬ್ಬ ಬ್ಯಾಟರ್​ನಿಂದ ಉತ್ತಮ ಸಾಥ್​ ಸಿಕ್ಕಿದ್ದರೆ, ಪಂದ್ಯದ ಫಲಿತಾಂಶವೇ ಬೇರೆಯದ್ದಾಗಿರುತ್ತಿತ್ತು. ಆದರೆ ಅಗ್ರಕ್ರಮಾಂಕದ ವೈಫಲ್ಯದಿಂದಾಗಿ ಆರ್​ಸಿಬಿ ಟೂರ್ನಿಯಲ್ಲಿ ಸತತ ಎರಡನೇ ಸೋಲನ್ನು ಎದುರಿಸಬೇಕಾಯಿತು.

131 ರನ್‌ಗಳ ಜೊತೆಯಾಟ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಆಟಗಾರ್ತಿ ಸಜೀವನ ಸಜ್ನಾ ಮೂರನೇ ಓವರ್‌ನಲ್ಲಿಯೇ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಆ ಬಳಿಕ ಜೊತೆಯಾದ ನ್ಯಾಟ್ ಸಿವರ್ ಹಾಗೂ ಹೇಲಿ ಮ್ಯಾಥ್ಯೂಸ್ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ 131 ರನ್‌ಗಳ ಜೊತೆಯಾಟ ನಡೆಸಿದರು. ಈ ವೇಳೆ ಬ್ರಂಟ್ ಕೇವಲ 32 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

ನ್ಯಾಟ್ ಸಿವರ್ ಬ್ರಂಟ್ ಶತಕ

ಹೇಲಿ ಮ್ಯಾಥ್ಯೂಸ್ ಕೂಡ ಅರ್ಧಶತಕ ಬಾರಿಸಿದರಾದರೂ ಆ ಬಳಿಕ ವಿಕೆಟ್ ಒಪ್ಪಿಸಿದರು. ಆದರೆ ನ್ಯಾಟ್ ಸಿವರ್ ತಮ್ಮ ಅಬ್ಬರ ಮುಂದುವರೆಸಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದರು. ಇದರ ಫಲವಾಗಿ ಬ್ರಂಟ್ 20 ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಸಿಂಗಲ್ ತೆಗೆದುಕೊಳ್ಳುವ ಮೂಲಕ ಶತಕ ಪೂರೈಸಿದರು. 57 ಎಸೆತಗಳಲ್ಲಿ 100 ರನ್ ಗಳಿಸಿ ಅಜೇಯರಾಗಿ ಉಳಿದರು. ಅವರ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿತ್ತು. ಬ್ರಂಟ್ ಅವರ ಈ ಸ್ಫೋಟಕ ಇನ್ನಿಂಗ್ಸ್‌ನಿಂದಾಗಿ, ಮುಂಬೈ 20 ಓವರ್‌ಗಳಲ್ಲಿ 200 ರನ್‌ಗಳ ಕಠಿಣ ಗುರಿ ನೀಡಿತು.

ಆರ್​ಸಿಬಿ ಬ್ಯಾಟಿಂಗ್ ವೈಫಲ್ಯ

ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಮೊದಲ ಎರಡು ಓವರ್ಗಳಲ್ಲಿ ಉತ್ತಮ ರನ್ ಕಲೆಹಾಕಿತು. ಆದರೆ ಸತತ 4ನೇ ಪಂದ್ಯದಲ್ಲೂ ರನ್ ಬಾರಿಸಲು ವಿಫಲರಾದ ಗ್ರೇಸ್ ಹ್ಯಾರಿಸ್ 15 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ನಾಯಕಿ ಸ್ಮೃತಿ ಆಟ ಕೂಡ 6 ರನ್​ಗಳಿಗೆ ಅಂತ್ಯವಾಯಿತು. ವಾಲ್ ಕೂಡ 9 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಗೌತಮಿ ನಾಯಕ್ 1 ರನ್​ಗಳಿಗೆ ಸುಸ್ತಾದರೆ, ರಾಧಾ ಯಾದವ್ ಖಾತೆಯನ್ನು ತೆರೆಯಲಿಲ್ಲ. ಹೀಗಾಗಿ ಆರ್​ಸಿಬಿ 35 ರನ್​ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡು 100 ರನ್​ಗಳ ಒಳಗೆ ಆಲೌಟ್ ಆಗುವ ಸೂಚನೆ ನೀಡಿತ್ತು.

RCB: ಆರ್​ಸಿಬಿ ಖರೀದಿಗೆ ಖಜಾನೆ ತೆರೆದ 2 ಲಕ್ಷ ಕೋಟಿ ರೂ. ಒಡೆಯ

ರಿಚಾ ಘೋಷ್ ಏಕಾಂಗಿ ಹೋರಾಟ

ಆದರೆ ಆ ಬಳಿಕ ಜೊತೆಯಾದ ನಡಿನ್ ಡಿ ಕ್ಲರ್ಕ್​ ಹಾಗೂ ರಿಚಾ ಘೋಷ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಆದಾಗ್ಯೂ ಕ್ಲರ್ಕ್​ 28 ರನ್​ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ಆರ್​ಸಿಬಿಯ ಸೋಲನ್ನು ಖಚಿತಪಡಿಸಿದರು. ಇತ್ತ ಬಾಲಂಗೋಚಿಗಳ ಜೊತೆ ಏಕಾಂಗಿ ಹೋರಾಟ ನಡೆಸಿದ ರಿಚಾ ಈ ಆವೃತ್ತಿಯ ಮೊದಲ ಅರ್ಧಶತಕ ಬಾರಿಸಿದರು. ಅರ್ಧಶತಕ ಬಳಿಕ ತಮ್ಮ ಬ್ಯಾಟಿಂಗ್‌ ಗೇರ್ ಬದಲಿಸಿದ ರಿಚಾ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ದರಾದರೂ, ಗೆಲ್ಲಿಸಲು ಸಾಧ್ಯವಾಗಲಿಲ್ಲ. ರಿಚಾಗೆ ಇತರ ಬ್ಯಾಟರ್​ಗಳಿಂದ ಬೆಂಬಲ ಸಿಗಲಿಲ್ಲ. ಅಂತಿಮವಾಗಿ ಆರ್​ಸಿಬಿ 15 ರನ್​ಗಳಿಂದ ಸೋಲೊಪ್ಪಿಕೊಂಡರೆ, ರಿಚಾ ಘೋಷ್ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 90 ರನ್ ಬಾರಿಸಿ ಕೊನೆಯ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

Published On – 11:24 pm, Mon, 26 January 26

Source link

ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ; ಕೂದಲೆಳೆ ಅಂತರದಿಂದ ತೆಲಂಗಾಣ ಸಚಿವ ಪಾರು – Kannada News | Telangana minister V Srihari narrowly escapes injury after flagpole collapses during Republic Day

ಹೈದರಾಬಾದ್, ಜನವರಿ 26: ಇಂದು ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವ (Republic Day) ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುತ್ತಿದ್ದಾಗ ಧ್ವಜಸ್ತಂಭ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಿಂದ ಭಾರಿ ಅನಾಹುತವೊಂದು ತಪ್ಪಿದೆ. ತೆಲಂಗಾಣದ ಪಶುಸಂಗೋಪನಾ ಸಚಿವ ವಿ. ಶ್ರೀಹರಿ ಧ್ವಜಾರೋಹಣ ಮಾಡುತ್ತಿದ್ದಾಗ ಧ್ವಜಸ್ತಂಭ ಮುರಿದು ಬಿದ್ದಿದೆ. ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು? – Kannada News | Kamareddy District Gurukul Students Jumped from Auto one Student Died

ಕಾಮರೆಡ್ಡಿ, ಜನವರಿ 26: ತೆಲಂಗಾಣದಲ್ಲಿ ವಿಚಿತ್ರವಾದ ರೀತಿಯಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಗುರುಕುಲದ ಹಾಸ್ಟೆಲ್‌ನಲ್ಲಿ ಇರಬೇಕಾದ ನಾಲ್ವರು ವಿದ್ಯಾರ್ಥಿನಿಯರು ಆಟೋ ಹತ್ತಿದರು. ಆದರೆ, ಆಟೋದಲ್ಲಿ ಪ್ರಯಾಣ ಮಾಡುವಾಗ ಒಬ್ಬೊಬ್ಬರಾಗಿ ಕೆಳಗೆ ಬಿದ್ದರು. ಅವರಲ್ಲಿ ಮೂವರು ಬದುಕುಳಿದರು. ತಲೆಗೆ ತೀವ್ರ ಪೆಟ್ಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ಎಂಬ ಒಬ್ಬಳು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಕಾಮರೆಡ್ಡಿ ಜಿಲ್ಲೆಯ ಬೋರ್ಲಂ ಗುರುಕುಲ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಗುರುಕುಲ ಶಾಲೆಯಲ್ಲಿ ನಿಜಕ್ಕೂ ಏನಾಯಿತು? ಆ ವಿದ್ಯಾರ್ಥಿನಿಯರು ಆಟೋ ಹತ್ತಿದ್ದು ಏಕೆ? ಅವರು ಹೇಗೆ ಕೆಳಗೆ ಬಿದ್ದರು? ಅವರಾಗಿಯೇ ಹಾರಿದರಾ? ಅಥವಾ ಯಾರಾದರೂ ತಳ್ಳಿದರಾ? ಎಂಬಿತ್ಯಾದಿ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಆ ವಿದ್ಯಾರ್ಥಿನಿಯರು ಆಟೋದಿಂದ ಕೆಳಗೆ ಹಾರುವುದು, ಅವರು ಬಿದ್ದರೂ ಆಟೋ ನಿಲ್ಲದೆ ಮುಂದೆ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾನಸ, ಅಂಜಲಿ, ವೈಶಾಲಿ ಮತ್ತು ಸಂಗೀತ ಚಲಿಸುತ್ತಿದ್ದ ಆಟೋದಿಂದ ಹಾರಿದರು. ಸಂಗೀತಾಳ ತಲೆಗೆ ಗಂಭೀರ ಗಾಯಗಳಾಗಿದ್ದವು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ ಸಾವನ್ನಪ್ಪಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್ – Kannada News | Satish Cadaboms talks about Kichcha Sudeep party after Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋ ಫಿನಾಲೆ ಬಳಿಕ ಸ್ಪರ್ಧಿಗಳೆಲ್ಲರೂ ಕಿಚ್ಚ ಸುದೀಪ್ ಜೊತೆ ಪಾರ್ಟಿ ಮಾಡಿದ್ದರು. ಅಲ್ಲಿ ನಡೆದ ಮಾತುಕಥೆ ಬಗ್ಗೆ ಸತೀಶ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಸತೀಶ್ ಧರಿಸುವ ಬಟ್ಟೆ, ಕೂಲಿಂಗ್ ಗ್ಲಾಸ್ ಇತ್ಯಾದಿ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ಆಗುತ್ತದೆ. ಅವುಗಳ ಬೆಲೆ ದುಬಾರಿ ಎಂದು ಅವರೇ ಹೇಳಿಕೊಳ್ಳುತ್ತಾರೆ. ‘18 ಸಲ ನನ್ನ ಗ್ಲಾಸ್ ಬಗ್ಗೆ ಚರ್ಚೆ ಆಯಿತು. ಈ ಕೂಲಿಂಗ್ ಗ್ಲಾಸ್ ಅನ್ನು ತುಕಾಲಿ ಸಂತುಗೆ ಗಿಫ್ಟ್ ಕೊಡು ಅಂತ ಸುದೀಪ್ ಸರ್ (Kichcha Sudeep) ಹೇಳಿದರು. ಆದರೆ ನಾನು ಕೊಡಲ್ಲ ಅಂದೆ. ಇದು ಹೊಸ ಗ್ಲಾಸ್, ಹಾಗಾಗಿ ಕೊಡಲ್ಲ ಅಂತ ಹೇಳಿದೆ’ ಎಂದಿದ್ದಾರೆ ಸತೀಶ್. ತಮ್ಮಿಂದಾಗಿ ಎಲ್ಲರೂ ಫೇಮಸ್ ಆಗುತ್ತಿದ್ದಾರೆ ಎಂಬುದು ಸತೀಶ್ (Satish Cadaboms) ಅಭಿಪ್ರಾಯ. ಆ ಬಗ್ಗೆ ಕೂಡ ಅವರು ಈ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಫ್ತಾ ವಸೂಲಿ ಮಾಡುತ್ತ ಏರಿಯಾದಲ್ಲಿ ಹವಾ, ಮಸೀದಿ ಪಕ್ಕದ ಜಾಗಕ್ಕಾಗಿ ಬಿತ್ತು ಹೆಣ – Kannada News | Rowdy sheeter shabbir Hacked to death In Bengaluru For Land Near mosque

ಬೆಂಗಳೂರು, (ಜನವರಿ 26): ಹಫ್ತಾ ವಸೂಲಿ ಮಾಡುತ್ತಿದ್ದ ಏರಿಯಾದಲ್ಲಿ ಹವಾ ಮಾಡಿದ್ದ ನಟೋರಿಯಸ್ ರೌಡಿಶೀಟರ್ ನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಬೆಂಗಳೂರಿನ (Bengaluru) ಮಂಗಮ್ಮನಪಾಳ್ಯದ ನಿವಾಸಿ ಮೊಹಮ್ಮದ್ ಶಬ್ಬೀರ್ ಕೊಲೆಯಾದ ರೌಡಿಶೀಟರ್. ಪ್ರತಿನಿತ್ಯ ಹಫ್ತಾ ವಸೂಲಿ ಮಾಡುತ್ತಿದ್ದ ಕಿರುಕುಳ ನೀಡುತ್ತಿದ್ದ. ಸಾಲದಕ್ಕೆ ರಿಯಲ್ ಎಸ್ಟೇಟ್ ದಂಧೆ ಮಾಡುತ್ತಾ ಮಸೀದಿ ಪಕ್ಕದ ಜಾಗದ ಮೇಲೆ ಕಣ್ಣು ಹಾಕಿದ್ದ. ಇದರಿಂದ ರೋಸಿ ಹೋಗಿದ್ದ ಏರಿಯಾದ ಯುವ ಪಡೆಯೊಂದು ರೌಡಿಶೀಟರ್​ ಮೊಹಮ್ಮದ್ ಶಬ್ಬೀರ್ ನನ್ನು ಹತ್ಯೆ ಮಾಡಿದೆ. ಹೇಳಿ ಕೇಳಿ ರೌಡಿಶೀಟರ್ ಆಗಿದ್ದರಿಂದ ದಾಳಿ ಮಾಡಲಾಗದೇ ಮೊದಲು ಖಾರದ ಪುಡಿ ಎರಚಿ ಜೀವ ತೆಗೆದಿದ್ದಾರೆ.

ಜನವರಿ 12 ರಂದು ರಾತ್ರಿ ಮಂಗಮ್ಮನಪಾಳ್ಯ ನಿವಾಸಿಯಾಗಿರೊ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್ ನನ್ನ 11 ಜನರ ತಂಡ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆ ಮಾಡಿದ್ದರು. ಸ್ನೇಹಿತನನ್ನ ಮಾತಾಡಿಸಿ ಆಟೋದಲ್ಲಿ ವಾಪಸ್ ಆಗುತ್ತಿದ್ದಂತೆ ಮಂಗಮ್ಮನಪಾಳ್ಯ ಮುಖ್ಯ ರಸ್ತೆಯ ತಿರುವಿನಲ್ಲಿ ಖಾರದ ಪುಡಿ ಎರಚಿ ಮಚ್ಚು,ಲಾಂಗ್ ನಿಂದ ಹಲ್ಲೆ ನಡೆಸಿ‌ ಕೊಚ್ಚಿ ಕೊಲೆ ಮಾಡಿದ್ದರು. ಸದ್ಯ ಕೊಲೆ ಸಂಬಂಧ 11 ಜನ ಆರೋಪಿಗಳನ್ನು ಬಂಧಿಸಿರುವ ಬಂಡೆಪಾಳ್ಯ ಪೊಲೀಸರು ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಹಾಕಲು ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ: ಮದುವೆಯಾದ ಎರಡೇ ವರ್ಷಕ್ಕೆ ಉಸಿರು ನಿಲ್ಲಿಸಿದ ಕೀರ್ತಿ ಶ್ರೀ, ಆಗಿದ್ದೇನು?

ಕೋರಮಂಗಲ ರೌಡಿ ಶೀಟರ್ ಶಬ್ಬಿರ್ ಕೊಲೆಗೆ ಸಂಬಂಧಪಟ್ಟಂತೆ ನೂರುಲ್ಲಾ ಅಲಿಯಾಸ್ ಸನ್ನಿ,ಉಮ್ರೇಜ್,ನದೀಮ್,ಸೈಯದ್ ಖಲೀಂ,ಸಲ್ಮಾನ್ ಖಾನ್,ಸೈಯದ್ ಸಿದ್ದಿಕ್,ಮೊಹಮ್ಮದ್ ಆಲಿ,ಸೈಯದ್ ಇಸ್ಮಾಯಿಲ್,ಇಮ್ರಾನ್ ,ನವಾಜ್ ಷರೀಫ್ ಮತ್ತು ಸೈಯದ್ ಮುಬಾರಕ್ ಸೇರಿದಂತೆ 11 ಜನ ಆರೋಪಿಗಳನ್ನು ಮುಂಬೈ,ರಾಜಸ್ಥಾನ್ ಮತ್ತು ಹೈದರಾಬಾದ್ ಸೇರಿದಂತೆ ಹಲವು ಕಡೆಯಿಂದ ಬಂಧಿಸಿರುವ ಬಂಡೆಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕೊಲೆಗೆ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

ಮಸೀದಿ ಪಕ್ಕದ ಜಾಗಕ್ಕಾಗಿ ಬಿತ್ತು ಹೆಣ

ರೌಡಿ ಶೀಟರ್ ಆಗಿದ್ದ ಶಬ್ಬಿರ್ ಏರಿಯಾದಲ್ಲಿ ಹವಾ ಮೇಂಟೇನ್ ಮಾಡುತ್ತಿದ್ದ.ಗುಜರಿ ಅಂಗಡಿ ಸೇರಿದಂತೆ ಕಾರ್ಪೆಂಟರ್ ಬಳಿಯೂ ಹಫ್ತಾ ವಸೂಲಿ ಮಾಡುತ್ತಿದ್ದ.ಬೇರೆ ಹುಡುಗರನ್ನ ತಾನು ಹೇಳಿದಂತೆ ಕೇಳಬೇಕು ಎಂದು ಆವಾಜ್ ಹಾಕ್ತಿದ್ದ.ಇದರಿಂದಾಗಿ ಹುಡುಗ್ರು ರೋಸಿ ಹೋಗಿದ್ರು. ಅಲ್ಲದೆ ಮಸೀದಿ ಪಕ್ಕದಲ್ಲೇ ಸನ್ನಿ ಸಹೋದರಿಯ ಜಾಗ ಇದ್ದು, ಅದರ ಮೇಲೆ ಕಣ್ಣು ಹಾಕಿದ್ದ ಶಬ್ಬಿರ್, ಆ ಜಾಗ ನನಗೆ ಕೊಡುವಂತೆ ಪೀಡಿಸ ತೊಡಗಿದ್ದ. ಅಲ್ಲದೇ ಆದಷ್ಟು ಬೇಗ ಕಾಂಪೌಂಡ್ ಹಾಕುತ್ತೇನೆಂದು ಧಮ್ಕಿ ಹಾಕಿದ್ದ‌. ಇದರಿಂದ ರೋಸಿ ಹೋಗಿದ್ದ ಹುಡುಗರು, ಇದಕ್ಕೆ ಕಡಿವಾಣ ಹಾಕಬೇಕೆಂದು ತೀರ್ಮಾನ ಮಾಡಿದ್ದರು.

ನೂರುಲ್ಲ ಅಲಿಯಾಸ್ ಸನ್ನಿ ನೇತೃತ್ವದಲ್ಲಿ 11 ಜನರ ತಂಡ ಶಬ್ಬಿರ್ ಮುಗಿಸಲು ಹೊಂಚು ಹಾಕಿದ್ದು,
ಆತನ ಚಲನವಲನದ ಮೇಲೆ‌ ಕಣ್ಣಿಟ್ಟಿದ್ದರು. ಗ್ಯಾರೆಜ್ ನಲ್ಲಿ ಮಾರಕಾಸ್ತ್ರದ ಜೊತೆಗೆ ಕೂತಿದ್ದ ಹಂತಕರು ಶಬ್ಬಿರ್ ಬರ್ತಿದ್ದಂತೆ ಕಣ್ಣಿಗೆ ಖಾರದ ಪುಡಿ ಎರಚಿ ಬರ್ಬರವಾಗಿ ಕೊಂದು ಎಸ್ಕೇಪ್ ಆಗಿದ್ದರು. ಘಟನೆ ಬಳಿ ಆಟೋ‌ ಹಿಡಿದಿದ್ದ ಆರೋಪಿಗಳು ಕೆ.ಆರ್.ಪುರಂ ರೈಲ್ವೇ ಸ್ಟೇಷನ್ ವರೆಗೂ ಹೋಗಿ ಎಸ್ಕೇಪ್ ಆಗಿದ್ದರು.

ಬಳಿಕ ಆರೋಪಿಗಳ ಪತ್ತೆಗೆ ಎಲೆಕ್ಟ್ರಾನಿಕ್ ಸಿಟಿ ವಿಭಾಗ ಪೊಲೀಸರು ವಿಶೇಷ ತಂಡ ರಚನೆ ಮಾಡಿಕೊಂಡು ಬಲೆ ಬೀಸಿ, ಬಾಂಬೆ ,ರಾಜಸ್ಥಾನ ಮತ್ತು ಹೈದರಾಬಾದ್ ಕಡೆಯಿಂದ ಆರೋಪಿಗಳನ್ನ ಬಂಧಿಸಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಹಾಕಲು ಪೊಲೀಸರು ಮುಂದಾಗಿದ್ದಾರೆ. ಇದರಿಂದ ಒಂದು ವರ್ಷಗಳ ಕಾಲ ಆರೋಪಿಗಳಿಗೆ ಜಾಮೀನು‌ ಸಿಗುವುದಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬದರಿನಾಥ-ಕೇದಾರನಾಥ ದೇವಾಲಯಕ್ಕೆ ಹಿಂದೂಗಳಲ್ಲದವರಿಗೆ ಪ್ರವೇಶ ನಿಷೇಧ – Kannada News | Badrinath and Kedarnath To Ban Non Hindus from entering dham Temple Panel To Pass Proposal Soon

ಉತ್ತರಕಾಶಿ, ಜನವರಿ 26: ಉತ್ತರಾಖಂಡದ ಹಿಮಾಲಯ ಪರ್ವತದಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ (Badrinath) ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ. ಹಿಂದೂಗಳನ್ನು ಹೊರತುಪಡಿಸಿ ಬೇರೆ ಧರ್ಮದವರಿಗೆ ಈ ದೇವಾಲಯಗಳಿಗೆ ಪ್ರವೇಶ ನಿಷೇಧಿಸಲು ತೀರ್ಮಾನಿಸಲಾಗಿದೆ. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಈ 2 ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು ಎಂದು ಈ ದೇವಾಲಯಗಳನ್ನು ನಿರ್ವಹಿಸುವ ದೇವಾಲಯ ಸಂಸ್ಥೆ ಘೋಷಿಸಿದೆ.

ಬದರಿನಾಥ-ಕೇದಾರನಾಥ ಧಾಮ ಸೇರಿದಂತೆ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (BKTC) ನಿಯಂತ್ರಿಸುವ ಎಲ್ಲಾ ದೇವಾಲಯಗಳಿಗೆ ಹಿಂದೂಯೇತರರ ನಿಷೇಧವು ಅನ್ವಯಿಸುತ್ತದೆ ಎಂದು ದೇವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಪ್ರಸ್ತಾವನೆಯನ್ನು ಮುಂಬರುವ ದೇವಾಲಯ ಸಮಿತಿ ಮಂಡಳಿ ಸಭೆಯಲ್ಲಿ ಅಂಗೀಕರಿಸಲಾಗುವುದು.

ಇದನ್ನೂ ಓದಿ: Kedarnath Yatra 2025: ಕೇದಾರನಾಥಕ್ಕೆ ಭೇಟಿ ನೀಡುವ ಮೊದಲು ಗೌರಿಕುಂಡದಲ್ಲಿ ಸ್ನಾನ ಮಾಡುವುದು ಏಕೆ?

ಈ ನಿರ್ಬಂಧವು ಗಂಗೋತ್ರಿ ಧಾಮಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಇದು ಮಾ ಗಂಗೆಯ ಚಳಿಗಾಲದ ವಾಸಸ್ಥಾನ ಎಂದು ಕರೆಯಲ್ಪಡುವ ಮುಖ್ಬಾಕ್ಕೂ ಅನ್ವಯಿಸುತ್ತದೆ. ಶ್ರೀ ಗಂಗೋತ್ರಿ ದೇವಾಲಯ ಸಮಿತಿಯ ಅಧ್ಯಕ್ಷ ಸುರೇಶ್ ಸೆಮ್ವಾಲ್ ಅವರು, ಹಿಂದೂಯೇತರರು ಧಾಮಕ್ಕೆ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲು ಸಮಿತಿ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಚಳಿಗಾಲದ ತಿಂಗಳುಗಳಲ್ಲಿ ಮುಖ್ಬಾದಲ್ಲಿ ಅದೇ ನಿಯಮ ಜಾರಿಯಲ್ಲಿರುತ್ತದೆ ಎಂದು ಅವರು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಹಿಮಚ್ಛಾದಿತ ಬೆಟ್ಟಗಳ ನಡುವಿನ ಕೇದಾರನಾಥ ದೇವಾಲಯ ಹೀಗಿದೆ

ಗಂಗೋತ್ರಿ ಧಾಮದ ದ್ವಾರಗಳು ಪ್ರಸ್ತುತ ಭಕ್ತರಿಗೆ ಮುಚ್ಚಲ್ಪಟ್ಟಿವೆ. ಚಳಿಗಾಲದ ತಿಂಗಳುಗಳಲ್ಲಿ ಭಾರೀ ಹಿಮಪಾತ ಮತ್ತು ತೀವ್ರ ಶೀತದಿಂದಾಗಿ, ಎಲ್ಲಾ 4 ಚಾರ್ ಧಾಮಗಳ ದ್ವಾರಗಳನ್ನು ವಾರ್ಷಿಕವಾಗಿ ಅಕ್ಟೋಬರ್ ಮತ್ತು ನವೆಂಬರ್ ನಡುವೆ ಮುಚ್ಚಲಾಗುತ್ತದೆ. ಅವು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಮತ್ತೆ ತೆರೆಯುತ್ತವೆ. ಗಂಗೋತ್ರಿ ದೇವಾಲಯವು ಪ್ರವೇಶಿಸಲಾಗದ ಚಳಿಗಾಲದ 6 ತಿಂಗಳುಗಳಲ್ಲಿ ಭಕ್ತರು ಮುಖ್ಬಾ ಗ್ರಾಮದಲ್ಲಿರುವ ಗಂಗಾ ದೇವಿಯ ಚಳಿಗಾಲದ ವಾಸಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version