T20 World Cup 2026: ಟಿ20 ವಿಶ್ವಕಪ್ 2026ರ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ (Team India) ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತ ಗೆಲುವಿನೊಂದಿಗೆ. ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಸತತವಾಗಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ವರ್ಲ್ಡ್ ರೆಕಾರ್ಡ್ ಟೀಮ್ ಇಂಡಿಯಾ ಪಾಲಾಗಿದೆ.
T20 World Cup 2026: ಟಿ20 ವಿಶ್ವಕಪ್ 2026ರ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ (Team India) ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತ ಗೆಲುವಿನೊಂದಿಗೆ. ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಸತತವಾಗಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ವರ್ಲ್ಡ್ ರೆಕಾರ್ಡ್ ಟೀಮ್ ಇಂಡಿಯಾ ಪಾಲಾಗಿದೆ.
ಟಿ20 ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್ಎ ವಿರುದ್ಧದ ಮ್ಯಾಚ್ನಲ್ಲಿ ಭಾರತ ತಂಡವು 29 ರನ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಅದರಲ್ಲೂ ನಿನ್ನೆಯಷ್ಟೇ ಭಾರತ ತಂಡವನ್ನು ಕೂಡಿಕೊಂಡಿದ್ದ ಸಿರಾಜ್ಗೆ ಈ ಪಂದ್ಯದಲ್ಲಿ ಆಡುವ ಬಗ್ಗೆ ಯಾವುದೇ ಖಚಿತತೆ ಇರಲಿಲ್ಲ. ಆದರೆ ಜಸ್ಪ್ರೀತ್ ಬುಮ್ರಾ ಜ್ವರಕ್ಕೆ ತುತ್ತಾಗಿದ್ದರಿಂದ ದಿಢೀರ್ ಕಣಕ್ಕಿಳಿಯಬೇಕಾಯಿತು. ಹೀಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಸಿರಾಜ್ 3 ವಿಕೆಟ್ ಕಬಳಿಸಿ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ವಿಶೇಷ ಎಂದರೆ ಮೊಹಮ್ಮದ್ ಸಿರಾಜ್ ಟಿ20 ವಿಶ್ವಕಪ್ಗೆ ಆಯ್ಕೆಯಾಗಿಯೇ ಇರಲಿಲ್ಲ. ಅಂದರೆ ಭಾರತ ತಂಡದ ಘೋಷಣೆಯಾದಾಗ ಪ್ರಮುಖ ವೇಗಿಗಳಾಗಿ ಆಯ್ಕೆಯಾಗಿದ್ದು ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ. ಆದರೆ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಹರ್ಷಿತ್ ರಾಣಾ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿದ್ದ ಕಾರಣ ಅವರನ್ನು ವಿಶ್ವಕಪ್ ತಂಡದಿಂದ ಕೈ ಬಿಡಲಾಯಿತು.
ಇತ್ತ ಹರ್ಷಿತ್ ರಾಣಾ ಟಿ20 ವಿಶ್ವಕಪ್ನಿಂದ ಹೊರಬೀಳುವುದು ಖಚಿತವಾಗುತ್ತಿದ್ದಂತೆ, ಶುಕ್ರವಾರ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊಹಮ್ಮದ್ ಸಿರಾಜ್ಗೆ ಕರೆ ಮಾಡಿದ್ದರು. ಹೀಗೆ ಕರೆ ಮಾಡಿದ ಸೂರ್ಯ ಹೇಳಿದ್ದು ಒಂದೇ ಮಾತು, ಮಿಯಾ ಬ್ಯಾಗ್ ಪ್ಯಾಕ್ ಮಾಡಿ ಬಂದು ಬಿಡು.
ಸೂರ್ಯಕುಮಾರ್ ಯಾದವ್ ಬ್ಯಾಗ್ ಪ್ಯಾಕ್ ಮಾಡಿ ಬಂದು ಬಿಡು ಅಂದಾಗ, ನಾನು ತಮಾಷೆ ಅಂದ್ಕೊಂಡೆ. ಹೀಗಾಗಿ ಸೂರ್ಯನ ಜೊತೆ ಪ್ರಾಂಕ್ ಮಾಡಬೇಡ ಅಂದೆ. ಆ ಬಳಿಕ ಅವರು ಸಿರಿಯಸ್ಸ್ ಆಗಿ ಮಾತನಾಡಿದರು. ಹೀಗಾಗಿ ನಾನು ಮುಂಬೈಗೆ ಹೊರಟೆ. ವಿಮಾನದಲ್ಲಿದ್ದಾಗಲೂ ನನಗೆ ಇದೊಂದು ಕನಸು ಅನಿಸುತ್ತಿತ್ತು.
ಏಕೆಂದರೆ ತವರಿನಲ್ಲಿ ವಿಶ್ವಕಪ್ ಆಡುವುದು ನನ್ನ ಕನಸಾಗಿತ್ತು. ಇದಾಗ್ಯೂ ನಾನು ಆಯ್ಕೆಯಾಗಿರಲಿಲ್ಲ. ಇದೀಗ ಅನಿರೀಕ್ಷಿತವಾಗಿ ಅವಕಾಶ ಸಿಕ್ಕಿದೆ. ಎಲ್ಲವೂ ಅದೃಷ್ಟ ಎಂದು ಭಾವಿಸಿದ್ದೀನಿ ಎಂದು ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.
ನನ್ನ ದೇಶೀಯ ಟೂರ್ನಿಯ ಸೀಸನ್ ಮುಗಿದಿದೆ. ಟಿ20 ವಿಶ್ವಕಪ್ ತಂಡದಲ್ಲೂ ನಾನಿಲ್ಲ. ಹೀಗಾಗಿ ಫುಟ್ಬಾಲ್ ಮ್ಯಾಚ್ ನೋಡಲು ಪ್ಲ್ಯಾನ್ ರೂಪಿಸಿದ್ದೆ. ಫೆಬ್ರವರಿ 15 ರಂದು ರಿಯಲ್ ಮ್ಯಾಡ್ರಿಡ್ ಮ್ಯಾಚ್ ಇದೆ. ಈ ಪಂದ್ಯವನ್ನು ನೋಡಲು ಸ್ಪೇನ್ಗೆ ತೆರಳಲು ಯೋಜನೆ ಹಾಕಿಕೊಂಡಿದ್ದೆ.
ಅಷ್ಟೇ ಅಲ್ಲದೆ ರಂಝಾನ್ ಬೇರೆ ಬರುತ್ತಿದೆ. ಹೀಗಾಗಿ ಸಂಪೂರ್ಣ ವಿಶ್ರಾಂತಿ ಪಡೆಯಬೇಕೆಂದು ನಿರ್ಧರಿಸಿದ್ದೆ. ಆದರೆ ಎಲ್ಲವೂ ದೇವರ ಇಚ್ಛೆ. ಏನಾಗುತ್ತದೋ, ಅದು ಆಗುತ್ತದೆ.
ಇದಾಗ್ಯೂ ನನಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಸಿಗುತ್ತದೆ ಅಂದುಕೊಂಡಿರಲಿಲ್ಲ. ಏಕೆಂದರೆ ಈಗಷ್ಟೇ ನಾನು ತಂಡವನ್ನು ಕೂಡಿಕೊಂಡಿದ್ದೆ. ಮೊದಲ ಪಂದ್ಯಕ್ಕಾಗಿ ಸಿದ್ಧತೆಗಳನ್ನು ಸಹ ಶುರು ಮಾಡಿರಲಿಲ್ಲ.
ಆದರೆ ಜಸ್ಪ್ರೀತ್ ಬುಮ್ರಾಗೆ ಹುಷಾರಿಲ್ಲದ ಕಾರಣ ನೀನು ಆಡಬೇಕೆಂದು ತಿಳಿಸಿದ್ದರು. ಬೆಳಿಗ್ಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಭಾಗವಾಗಬೇಕೆಂದು ತಿಳಿಸಿದಾಗ ನಿಜಕ್ಕೂ ಖುಷಿಯಾಯಿತು. ಈ ಖುಷಿಯೊಂದಿಗೆ ನಾನು ಕೆಲ ವಿಡಿಯೋಗಳನ್ನು ವೀಕ್ಷಿಸಿ ಪಂದ್ಯಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದೆ.
ಇನ್ನು ಬ್ಯಾಟಿಂಗ್ ಮುಗಿಸಿದ ಬಂದ ಇಶಾನ್ ಕಿಶನ್ ಕೂಡ ಪಿಚ್ ಬಗ್ಗೆ ಕೆಲ ಮಾಹಿತಿಗಳನ್ನು ಹಂಚಿಕೊಂಡರು. ಹೀಗಾಗಿ ಹೇಗೆ ಬೌಲಿಂಗ್ ಮಾಡಬೇಕೆಂದು ನಾನು ಯೋಜನೆ ರೂಪಿಸಿದ್ದೆ. ಅದರಂತೆ ಮೊದಲ ಪಂದ್ಯದಲ್ಲೇ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿರುವುದಕ್ಕೆ ಖುಷಿಯಿದೆ ಎಂದು ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.
ಇದನ್ನೂ ಓದಿ: ಕೊನೆಗೂ ಕೊಹ್ಲಿಯ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್
ಈ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದಿದ್ದ ಮೊಹಮ್ಮದ್ ಸಿರಾಜ್ 29 ರನ್ ನೀಡಿ 4 ವಿಕೆಟ್ ಕಬಳಿಸಿದ್ದಾರೆ. ಅದು ಕೂಡ 2024 ರ ಬಳಿಕ. ಅಂದರೆ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಪರ ಕೊನೆಯ ಟಿ20 ಪಂದ್ಯವಾಡಿದ್ದು 2024 ರಲ್ಲಿ. ಇದಾದ ಬಳಿಕ ಅವರು ಭಾರತ ಟಿ20 ತಂಡದ ಭಾಗವಾಗಿರಲಿಲ್ಲ. ಇದೀಗ ದಿಢೀರ್ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಮಿಯಾ ಭಾಯ್ ಯಶಸ್ವಿಯಾಗಿದ್ದಾರೆ.
ಮೈಸೂರು, ಫೆಬ್ರವರಿ 08: ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಕೆ.ಜೆ. ಜಾರ್ಜ್ ನಂತರ ಕಾಂಗ್ರೆಸ್ನ ಮತ್ತೊಬ್ಬ ನಾಯಕ ಅಸಮಾಧಾನ ಹೊರ ಹಾಕಿದ್ದಾರೆ. ಪೊಲೀಸ್ ಠಾಣೆ ಉದ್ಘಾಟನೆ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿ ಹೊರ ನಡೆಯಲು ಮುಂದಾದ ಪ್ರಸಂಗ ನಡೆದಿದೆ. ಈ ವೇಳೆ ಸಚಿವ ಪರಮೇಶ್ವರ್ ತನ್ವೀರ್ಸೇಠ್ ಮನವೊಲಿಕೆ ಯತ್ನ ಮಾಡಿದ್ದು, ಜೊತೆಗೆ ಶಾಸಕ ಅನಿಲ್ ಕೂಡ ಅವರನ್ನು ಸಮಾಧಾನ ಮಾಡಿದ್ದಾರೆ. ಸ್ಟೇಜ್ ಮೇಲೆ ಬಂದರೆ ಬೇರೆ ಮಾತನಾಡುತ್ತೇನೆ ಎಂದಿದ್ದ ತನ್ವೀರ್ ಸೇಠ್, ಕೊನೆಗೆ ಒಲ್ಲದ ಮನಸ್ಸಿನಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakapura Srinivas) ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅನೇಕರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಕೆ ಶಿವಕುಮಾರ್, ಧ್ರುವ ಸರ್ಜಾ, ಎ.ಪಿ. ಅರ್ಜುನ್, ಜೋಗಿ ಪ್ರೇಮ್, ಪುನೀತ್ ರಾಜ್ಕುಮಾರ್ ಸೇರಿದಂತೆ ಹಲವರ ವಿರುದ್ಧ ಅವರು ಅಶ್ಲೀಲವಾಗಿ ಮಾತನಾಡಿದ್ದರು. ಅದಕ್ಕೆ ಚಿತ್ರರಂಗದಲ್ಲಿ ಖಂಡನೆ ವ್ಯಕ್ತವಾಗಿದೆ. ಸಿಸಿಎಲ್ ಗೆಲುವಿನ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರಿಗೆ ಈ ಬಗ್ಗೆ ಪ್ರಶ್ನೆ ಕೇಳಲಾಯಿತು. ತಮ್ಮದೇ ರೀತಿಯಲ್ಲಿ ಅವರು ಉತ್ತರ ನೀಡಿದ್ದಾರೆ. ‘ಇದು ಸಿಸಿಎಲ್ ಸುದ್ದಿಗೋಷ್ಠಿ. ಸಿಹಿ ತಿನ್ನುವ ಸಂದರ್ಭ. ಈ ವೇಳೆ ಮೆಣಸಿನಕಾಯಿ ಯಾಕೆ? ನಾವು ಕಪ್ ಗೆಲ್ಲಲು 12 ವರ್ಷ ಕಾದಿದ್ದೇವೆ. ನಮ್ಮ ಉತ್ತರಕ್ಕಾಗಿ ನೀವು ಕೂಡ ಸ್ವಲ್ಪ ಕಾಯಿರಿ. ಇನ್ನೊಂದು ವೇದಿಕೆ ಹತ್ತುತ್ತೇನೆ. ಆಗ ಮಾತನಾಡುತ್ತೇನೆ. ಈಗ ಲಾಡು ತಿನ್ನುವ ಸಮಯ, ಮೆಣಸಿನಕಾಯಿ ಅಲ್ಲ. ಇದು 30 ವರ್ಷದ ಅನುಭವದ ಮಾತು’ ಎಂದು ಕಿಚ್ಚ ಸುದೀಪ್ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕೊಡಗು, ಫೆಬ್ರುವರಿ 08: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಬೆಂಕಿ (Car Catches Fire) ಕಾಣಿಸಿಕೊಂಡ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಿಂದ ಧೂಮ ಮತ್ತು ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ತಕ್ಷಣವೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿಗೆ ಹೆಚ್ಚಿನ ಹಾನಿಯಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದಿಲ್ಲ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ
ಬೆಂಗಳೂರು, ಫೆಬ್ರುವರಿ 08: ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ (Bengaluru Air Quality) ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 173ಕ್ಕೆ ತಲುಪಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ. ಮೂರು ನಾಲ್ಕು ದಿನಗಳ ಹಿಂದೆ 100ರ ಆಸು ಪಾಸಿದ್ದ ಮಂಗಳೂರಿನ AQI, ಇಂದು 174ಕ್ಕೆ ತಲುಪಿದ್ದು ಆಶ್ಚರ್ಯ ಉಂಟು ಮಾಡಿದೆ.
ಜೊತೆಗೆ ಮೈಸೂರಿನ AQI 176, ಬೆಳಗಾವಿಯ AQI 178 ಆಗಿದ್ದು, ಈ ನಗರಗಳು ಬೆಂಗಳೂರನ್ನೂ ಮೀರಿಸಿವೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ನಟಿ ಸಂಗೀತಾ ಮಾಧವನ್ (Sangita Madhavan) ಅವರು ಕನ್ನಡ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಅವರು ಕನ್ನಡ ಸಿನಿಮಾಗಳಲ್ಲಿ ನಟಿಸದೇ ಎರಡೂವರೆ ದಶಕಕ್ಕೂ ಹೆಚ್ಚು ಕಾಲ ಆಗಿದೆ. 1998ರಲ್ಲಿ ಬಿಡುಗಡೆ ಆಗಿದ್ದ ‘ಯಾರೆ ನೀನು ಚೆಲುವೆ’ (Yaare Neenu Cheluve) ಸಿನಿಮಾದಲ್ಲಿ ಸಂಗೀತಾ ಮಾಧವನ್ ಅವರು ಹೀರೋಯಿನ್ ಆಗಿ ನಟಿಸಿದ್ದರು. 2000ನೇ ಇಸವಿಯಲ್ಲಿ ರಿಲೀಸ್ ಆದ ‘ಯಾರೆ ನೀ ಅಭಿಮಾನಿ’ ಸಿನಿಮಾದಲ್ಲಿ ಕೂಡ ಅವರು ಅಭಿನಯಿಸಿದ್ದರು. ಆ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡಿದ್ದರು.
ಈಗ ಸಂಗೀತಾ ಮಾಧವನ್ ಅವರು ಮತ್ತೆ ಕನ್ನಡ ಚಿತ್ರರಂಗದ ಕಡೆಗೆ ಮುಖ ಮಾಡಿದ್ದಾರೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಹೊಸ ತಂಡವೊಂದು ಸಂಗೀತಾ ಅವರನ್ನು ಕನ್ನಡ ಚಿತ್ರರಂಗಕ್ಕೆ ಮರಳಿ ಕರೆತಂದಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕಿಚ್ಚ ಸುದೀಪ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡ ಕಿರಣ್ ವಿಶ್ವನಾಥ್ ಅವರ ನಿರ್ದೇಶನದ ಸಿನಿಮಾದಲ್ಲಿ ಸಂಗೀತಾ ನಟಿಸಲಿದ್ದಾರೆ.
ಕಿರಣ್ ವಿಶ್ವನಾಥ್ ಅವರು ಈ ಮೊದಲು ‘ರನ್ನ’, ‘ವಿಕ್ಟರಿ’ ಸಿನಿಮಾಗಳಿಗೆ ಸಹ-ನಿರ್ದೇಶಕನಾಗಿ ಕೆಲಸ ಮಾಡಿದ್ದರು. ಅವರು ಇದೇ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊಸ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ಸಂಗೀತ ಮಾಧವನ್ ಅವರು ಒಂದು ಪ್ರಮುಖ ಪಾತ್ರವನ್ನು ಮಾಡುತ್ತಿದ್ದಾರೆ.
ಈ ಸಿನಿಮಾದಲ್ಲಿ ಸಂಗೀತಾ ಅವರಿಗೆ ಭಾಗ್ಯ ಎಂಬ ಪಾತ್ರವನ್ನು ನೀಡಲಾಗಿದೆ. ನಾಯಕನ ತಾಯಿಯಾಗಿ ಅವರು ಅಭಿನಯಿಸಲಿದ್ದಾರೆ. ಇತ್ತೀಚೆಗಷ್ಟೇ ಚಿತ್ರತಂಡ ‘ಮಹಾನಟಿ’ ಖ್ಯಾತಿಯ ಪ್ರಿಯಾಂಕಾ ಆಚಾರ್ ಅವರನ್ನು ಹೀರೋಯಿನ್ ಆಗಿ ಪರಿಚಯಿಸಿತ್ತು. ಇದೀಗ ಸಂಗೀತಾ ಮಾಧವನ್ ಅವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ ಎಂಬುದನ್ನು ತಿಳಿಸಲಾಗಿದೆ.
ಇದನ್ನೂ ಓದಿ: ನಂದಿತಾ ಶ್ವೇತಾ ನಟನೆಯ ಹೊಸ ಸಿನಿಮಾ ‘ಬೆನ್ನಿ’: ಬದಲಾಯ್ತು ಗೆಟಪ್
ಅಷ್ಟಕ್ಕೂ ಸಿನಿಮಾದ ಹೆಸರೇನು? ಹಿರೋ ಯಾರು ಎಂಬಿತ್ಯಾದಿ ಮಾಹಿತಿಯನ್ನು ಚಿತ್ರತಂಡದವರು ಸದ್ಯಕ್ಕೆ ಗೌಪ್ಯವಾಗಿ ಇಟ್ಟಿದ್ದಾರೆ. ಬಹಳ ಗ್ರ್ಯಾಂಡ್ ಆಗಿ ನಾಯಕನ ಪರಿಚಯ ಮಾಡಲು ಸಿದ್ಧತೆ ನಡೆದಿದೆ. ‘ಗೌರಿ ಆರ್ಟ್ಸ್ ಬ್ಯಾನರ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸಂಗೀತಾ ಅವರ ಆಗಮನದಿಂದ ಸಿನಿಮಾ ಮೇಲೆ ನಿರೀಕ್ಷೆ ಮೂಡುವಂತಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬೆಂಗಳೂರು, ಫೆಬ್ರವರಿ 08: ಮದ್ಯದ ಅಮಲಿನಲ್ಲಿ ಕಾರು, ಬೈಕ್ಗಳಿಗೆ ದ್ವಿಚಕ್ರ ವಾಹನ ಗುದ್ದಿ ಯುವತಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಬಳಿ ನಡೆದಿದೆ. ಕ್ಯಾಬ್ ಡ್ರೈವರ್ ಜೊತೆ ವಾಗ್ವಾದ ನಡೆಸಿ ಆತನ ಮೇಲೆ ಹಲ್ಲೆ ನಡೆಸಲು ಉತ್ತರ ಭಾರತೀಯ ಯುವತಿಯರು ಯತ್ನಿಸಿದ್ದು, ಪ್ರಶ್ನಿಸಿದ ಜನರ ಜೊತೆಗೂ ಯುವತಿಯರು ಅಸಭ್ಯವಾಗಿ ವರ್ತಿಸಿದ್ದಾರೆ. ಕೂಡಲೇ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳ್ಕೆ ಬಂದರೂ ಯುವತಿಯರ ಹೈಡ್ರಾಮಾ ಮಾತ್ರ ನಿಂತಿಲ್ಲ.
ಸ್ನೇಹಿತರ ಜೊತೆಗೆ ಖಾಸಗಿ ಹೋಟೆಲ್ಗೆ ಬಂದಿದ್ದ ಜೆ.ಪಿ.ನಗರ ಹಾಗೂ ಕೋರಮಂಗಲದದ ಇಬ್ಬರು ಯುವತಿಯರು ವಾಪಸ್ ಹೋಗುವಾಗ ಹಿಂದಿನಿಂದ ಕ್ಯಾಬ್ಗೆ ಸ್ಕೂಟಿ ಡಿಕ್ಕಿ ಹೊಡೆದಿದ್ದಾರೆ. ಯುವತಿಯರನ್ನು ಕ್ಯಾಬ್ ಚಾಲಕ ಅಹ್ಮದ್ ಪ್ರಶ್ನೆ ಮಾಡಿದ್ದಕ್ಕೆ, ಆತನಿಗೆ ನಿಂದಿಸಿ ಎಸ್ಕೇಪ್ ಆಗಲು ಯತ್ನಿಸಿದ್ದ ಯುವತಿಯರನ್ನು ಸ್ಥಳೀಯರು ತಡೆದಿದ್ದಾರೆ. ಈ ವೇಳೆ ಕೈಗೆ ಚೈನ್ ಸುತ್ತಿಕೊಂಡು ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅಸಭ್ಯ ಸನ್ನೆ ತೋರಿಸಿ ನಿಂದನೆ ನಡೆಸಿರುವ ಆರೋಪ ಕೇಳಿಬಂದಿದೆ. ಬಳಿಕ ಇಬ್ಬರು ಯುವತಿಯರನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು, ಲೀಸಾ ಮತ್ತು ಮ್ಯಾಥ್ಯೂ ಎಂಬ ಯುವತಿಯರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ: ಗ್ಯಾಸ್ ಗೀಸರ್ ಲೀಕ್ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿಯೂ ಆತ್ಮಹತ್ಯೆ!
ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾಬ್ ಚಾಲಕ ಅಹ್ಮದ್, ಕಸ್ಟಮರ್ ಪಿಕ್ಅಪ್ಗೆಂದು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದು ಸ್ಕೂಟಿನ ಕ್ಯಾಬ್ಗೆ ಟಚ್ ಮಾಡಿದ್ದಾರೆ. ಈ ವೇಳೆ ಗಾಡಿಗೆ ಡ್ಯಾಮೇಜ್ ಆಗಿದ್ದನ್ನ ಕಟ್ಟಿಕೊಡಿ ಎಂದು ಅವರ ಬಳಿ ಕೇಳಿದ್ದೇನೆ. ಆ ಸಂದರ್ಭದಲ್ಲಿ ಅವರು ಗಾಡಿ ಸ್ಟಾರ್ಟ್ ಮಾಡಿಕೊಂಡು ಹೋಗೋಕೆ ನೋಡಿದ್ದು, ಕೂಡಲೇ ಸ್ಥಳೀಯರೆಲ್ಲ ಸೇರಿ ಅವರನ್ನ ಹಿಡಿದುಕೊಂಡಿದ್ದಾರೆ. ನಾನು ಕೀ ತೆಗೆಯಲು ಹೋದಾಗ ನನ್ನ ಮೇಲೆ ಹಲ್ಲೆ ಮಾಡಿದ್ದು, ಚೈನ್ ಸುತ್ತಿಕೊಂಡು ಮುಖ, ಕೈ, ಬೆನ್ನಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳೀಯರೆಲ್ಲ ಸೇರಿ ನನಗೆ ಸಪೋರ್ಟ್ ಮಾಡಿದ್ದು, ಘಟನೆ ಬಗ್ಗೆ ದೂರು ನೀಡಿರೋದಾಗಿ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 8:02 am, Sun, 8 February 26
ಅಷ್ಟೇ ಅಲ್ಲದೇ, ಅಸೋಸಿಯೇಟ್ ನೇಷನ್ ವಿರುದ್ಧ ಪವರ್ ಪ್ಲೇನಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಬ್ಯಾಟರ್ ಗಳು 4 ವಿಕೆಟ್ಗಳನ್ನು ಕಳೆದುಕೊಂಡಿದ್ದಾರೆ. ಅಂದರೆ ಎಲ್ಲಾ ಅರ್ಥದಲ್ಲೂ ಅಮೆರಿಕ ಬೌಲರ್ಗಳು ಪವರ್ ಪ್ಲೇನಲ್ಲಿ ಟೀಮ್ ಇಂಡಿಯಾವನ್ನು ಇಕ್ಕಟಿಗೆ ಸಿಲುಕಿಸಿತ್ತು ಎಂದರೆ ತಪ್ಪಾಗಲಾರದು.