Headlines

ಲಂಚ ನೀಡಲು ಹಣವಿಲ್ಲದ್ದಕ್ಕೆ ಬೆಳೆದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ – Kannada News | Tumakuru farmer brings radish to govt office, in lieu of bribe insted of Money

ತುಮಕೂರು, (ಫೆಬ್ರವರಿ 05): ಕರ್ನಾಟದಲ್ಲಿ ಯಾವುದೇ ಕಚೇರಿಗಳಿಗೂ ಹೋದರೂ ಸಹ ಲಂಚವಿಲ್ಲದೇ ಯಾವುದೇ ಕೆಲಸಗಳು ಆಗುತ್ತಿಲ್ಲ. ಏನಾದರೂ ಒಂದು ಮಾಡಿಕೊಡಬೇಕೆಂದರೆ ಅಧಿಕಾರಿಗಳು ಮೊದಲು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಅದರಂತೆ ತುಮಕೂರಿನ ರೈತನೋರ್ವ ಜಮೀನಿಗೆ ರಸ್ತೆ ಮಾಡಿಕೊಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಹಣವಿಲ್ಲದ ಕಾರಣ ರೈತ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ತಾಲೂಕು ಕಚೇರಿಗೆ ತಂದಿದ್ದಾರೆ. ಹೌದು.. ತುಮಕೂರು ಜಿಲ್ಲೆ ಮಧುಗುರಿ ತಾಲೂಕಿನ ದೊಡ್ಡರಿ ಜಕ್ಕೇನಹಳ್ಳಿ ಗ್ರಾಮದ ರೈತ ಪ್ರಸನ್ನಕುಮಾರ್ ಎಂಬವರಿಗೆ ಜಮೀನಿಗೆ ರಸ್ತೆ ಮಾಡಿಕೊಡುವಂತೆ…

Read More

Video: ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿತ

ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ್ದಕ್ಕೆ ಗುಂಪೊಂದು ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಮನ ಬಂದತೆ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಹತ್ತಾರು ಗೂಂಡಾಗಳು ಇಬ್ಬರು ಬಂಕ್ ಸಿಬ್ಬಂದಿಯನ್ನು ಥಳಿಸುತ್ತಿರುವುದನ್ನು ಕಾಣಬಹುದು. ಇದು ಕೋಪವಲ್ಲ ದೌರ್ಜನ್ಯ ಎಂದು ನೆಟ್ಟಿಗರು ಕರೆದಿದ್ದಾರೆ. ಆ ಸಿಬ್ಬಂದಿ ಊಟಕ್ಕೆಂದು ಢಾಬಾಕ್ಕೆ ಬಂದ ಸಮಯದಲ್ಲಿ ಅವರ ಮೇಲೆ ದಾಳಿ ನಡೆದಿದೆ. ಈ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜನರು ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ಅಂಥವರು ಯಾರದ್ದೂ ಭಯವಿಲ್ಲದೆ ಗೂಂಡಾಗಿರಿ…

Read More

ವಿಮಾನ ಪ್ರಯಾಣಿಕರಿಗೆ ಒಳ್ಳೆ ಸುದ್ದಿ; ಟಿಕೆಟ್ ಮರುಪಾವತಿಯ ನಿಯಮದಲ್ಲಿ ಮಹತ್ವದ ಬದಲಾವಣೆ – Kannada News | Good news for flyers DGCAs Big Relief For Passengers new norms for ticket refund Check details

ನವದೆಹಲಿ, ಫೆಬ್ರವರಿ 26: ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಭಾರತದ ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ವಿಮಾನ ಟಿಕೆಟ್ ಮರುಪಾವತಿಯ ಮಾನದಂಡಗಳನ್ನು ಪರಿಷ್ಕರಿಸಿದೆ. ಈ ಹೊಸ ಬದಲಾವಣೆಯಿಂದ ರದ್ದತಿ ಮತ್ತು ವಿಮಾನದ ವೇಳಾಪಟ್ಟಿಗಳಲ್ಲಿನ ಬದಲಾವಣೆಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಹೊಸ ನಿಯಮದ ಪ್ರಕಾರ ಪ್ರಯಾಣಿಕರು ಬುಕಿಂಗ್ (Flight Booking) ಮಾಡಿದ 48 ಗಂಟೆಗಳ ಒಳಗೆ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು ಸಾಧ್ಯವಾಗುತ್ತದೆ. ಅದಕ್ಕಾಗಿ ಅವರು ಯಾವುದೇ ಹೆಚ್ಚುವರಿ ಶುಲ್ಕಗಳನ್ನು…

Read More

IPL 2026: ಎಂಎಸ್ ಧೋನಿ ಕಮ್​ಕ್ಯಾಕ್: ಸಿಎಸ್​ಕೆ ಅಭಿಮಾನಿಗಳಿಗೆ ಕೊನೆಗೂ ಸಿಕ್ಕಿತು ಗುಡ್​ ನ್ಯೂಸ್

ಬೆಂಗಳೂರು (ಏ. 02): ಇಂಡಿಯನ್ ಪ್ರೀಮಿಯರ್ ಲೀಗ್‌ (Indian Premier League) ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್, ಈ ಬಾರಿಯ 19ನೇ ಸೀಸನ್‌ನಲ್ಲಿ ಕಳಪೆ ಆರಂಭವನ್ನು ಪಡೆದುಕೊಂಡಿದೆ. ಸಿಎಸ್‌ಕೆ ತನ್ನ ಸೀಸನ್‌ನ ಆರಂಭಿಕ ಪಂದ್ಯದಲ್ಲೇ ರಾಜಸ್ಥಾನ ರಾಯಲ್ಸ್ ವಿರುದ್ಧ ಎಂಟು ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಸಿಎಸ್‌ಕೆ ಋತುವಿನ ಆರಂಭಿಕ ಪಂದ್ಯಗಳಲ್ಲಿ ಕೆಲವು ಪ್ರಮುಖ ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ. ಮುಖ್ಯವಾಗಿ ತಂಡದ ಸ್ಟಾರ್ ಪ್ಲೇಯರ್, ಮಾಜಿ ನಾಯಕ ಎಂಎಸ್ ಧೋನಿ. ಧೋನಿ ಐಪಿಎಲ್…

Read More

T20 World Cup: 43 ವರ್ಷಗಳಲ್ಲಿ 3ನೇ ಬಾರಿಗೆ; ಭಾರತವೇ ಚಾಂಪಿಯನ್ ಎನ್ನುತ್ತಿದೆ ಇತಿಹಾಸ – Kannada News | Team India’s 2026 T20 World Cup Hopes Soar: The Zimbabwe Australia Connection

2026 ರ ಟಿ20 ವಿಶ್ವಕಪ್ (T20 World Cup 2026) ಗೆಲ್ಲುವ ತಂಡಗಳಲ್ಲಿ ಎಲ್ಲರ ನೆಚ್ಚಿನ ತಂಡವೆಂದರೆ ಅದು ಟೀಂ ಇಂಡಿಯಾ. ಇದೇ ಕಾರಣ, ಕಳೆದ ಕೆಲವು ವರ್ಷಗಳಿಂದ ವೈಟ್ ಬಾಲ್ ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ನೀಡುತ್ತಿರುವ ಪ್ರದರ್ಶನ. ಇದರ ಜೊತೆಗೆ ಈ ಬಾರಿಯ ಟಿ20 ವಿಶ್ವಕಪ್ ಭಾರತದಲ್ಲಿ ನಡೆಯುತ್ತಿರುವುದರಿಂದ ತವರಿನ ಲಾಭವೂ ಸೂರ್ಯಕುಮಾರ್ ಪಡೆಗೆ ಸಿಗಲಿದೆ. ಆದ್ದರಿಂದ, ಟೀಂ ಇಂಡಿಯಾ ಸತತ 2ನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಅವಕಾಶವನ್ನು ಹೊಂದಿದೆ. ಇದೆಲ್ಲವುಗಳ ಜೊತೆಗೆ ಕಾಕತಾಳೀಯವೆಂಬಂತೆ…

Read More

Bomb Threat: ವಿಧಾನಸಭಾ ಸ್ಪೀಕರ್​ಗೆ ಬಾಂಬ್ ಬೆದರಿಕೆ, ಮೆಟ್ರೋ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬಂತು ಇ-ಮೇಲ್

ನವದೆಹಲಿ, ಮಾರ್ಚ್​ 24: ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ವಿಧಾನಸಭೆ ಕಟ್ಟಡ ಮತ್ತು ದೆಹಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಹಾಕಲಾಗಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು…

Read More

ಬಾಝ್​ ಬಾಲ್​ ಬೌಲ್ಡ್​… ಆ್ಯಶಸ್ ಗೆದ್ದ ಆಸ್ಟ್ರೇಲಿಯಾ – Kannada News | Australia retain the Ashes 4 1

ಬಾಝ್ ಬಾಲ್ ತಂತ್ರದೊಂದಿಗೆ 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಆ್ಯಶಸ್ ಸರಣಿ ಗೆಲ್ಲುವ ಧ್ಯೇಯದೊಂದಿಗೆ ಬಂದಿದ್ದ ಇಂಗ್ಲೆಂಡ್ ತಂಡವು 4 ಸೋಲುಗಳೊಂದಿಗೆ ಮತ್ತೊಮ್ಮೆ ಮಂಡಿಯೂರಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಪಂದ್ಯದಲ್ಲಿ 82 ರನ್​ಗಳ ಜಯ ಸಾಧಿಸಿತ್ತು. ಈ ಮೂಲಕ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದ್ದರು. ಇದಾಗ್ಯೂ ನಾಲ್ಕನೇ ಮ್ಯಾಚ್​ನಲ್ಲಿ ಕಂಬ್ಯಾಕ್ ಮಾಡಿದ್ದ ಇಂಗ್ಲೆಂಡ್ ತಂಡವು ಆತಿಥೇಯರಿಗೆ 4 ವಿಕೆಟ್​ಗಳ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಐದನೇ ಟೆಸ್ಟ್…

Read More

Karnataka Government Jobs: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಗಮನಕ್ಕೆ; KEAಯಿಂದ ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯದ ವಿವಿಧ ಪ್ರಮುಖ ನಿಗಮ, ಮಂಡಳಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS), ಬೆಂಗಳೂರು ಜಲಮಂಡಳಿ (BWSSB) ಮತ್ತು ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಈ ಪರೀಕ್ಷೆಗಳು ನಡೆಯಲಿವೆ. ಈ ಮೂಲಕ ಬಹುದಿನಗಳಿಂದ ಪರೀಕ್ಷೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಪ್ರಾಧಿಕಾರವು…

Read More

ಸ್ವಚ್ಛತಾ ಕಾರ್ಮಿಕೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ? – Kannada News | Rajinikanth felicitate A Sanitation Worker With A Gold Chain

ಮೇ 1ರಂದು ಅಥವಾ ಯಾವುದಾದರೂ ವಿಶೇಷ ದಿನದ ಹೊರತಾಗಿ ಸ್ವಚ್ಛತಾ ಕಾರ್ಮಿಕರನ್ನು ನೆನಪಿಸಿಕೊಳ್ಳುವುದೇ ಇಲ್ಲ. ಸಿನಿಮಾ ಸೆಲೆಬ್ರಿಟಿಗಳು ತಮಗೆ ಪ್ರಚಾರ ಬೇಕಾದಾಗ ಅಥವಾ ತಮ್ಮ ಸಿನಿಮಾಕ್ಕೆ ಪ್ರಚಾರ ಬೇಕಾದಾಗ ಮಾತ್ರ ಸ್ವಚ್ಛತಾ ಕಾರ್ಮಿಕರನ್ನು ಹುಡುಕಿಕೊಂಡು ಹೋಗಿ ಅವರಿಗೆ ಸನ್ಮಾನ ಮಾಡಿ ಫೋಟೊ ತೆಗೆಸಿಕೊಳ್ಳುತ್ತಾರೆ. ಇದೀಗ ಸೂಪರ್ ಸ್ಟಾರ್ ರಜನೀಕಾಂತ್ ಅವರು ಸ್ವಚ್ಛತಾ ಮಹಿಳಾ ಕಾರ್ಮಿಕರಾಗಿರುವ ಪದ್ಮ ಎಂಬುವರನ್ನು ಮನೆಗೆ ಕರೆಸಿ ಸನ್ಮಾನ ಮಾಡಿದ್ದಾರೆ. ಆದರೆ ಇದು ಪ್ರಚಾರಕ್ಕಾಗಿ ಮಾಡಿದ್ದಲ್ಲ, ಸನ್ಮಾನದ ಹಿಂದೆ ಕಾರಣವಿದೆ. ಚೆನ್ನೈನಲ್ಲಿ ಸ್ವಚ್ಛತಾ ಕಾರ್ಮಿಕೆಯಾಗಿ…

Read More

Important Days In May 2026: ಮೇ ತಿಂಗಳ ಪ್ರಮುಖ ರಾಷ್ಟ್ರೀಯ-ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ – Kannada News | Important Days In May 2026: What are the important national and international days celebrated in the month of May

ಧಾರ್ಮಿಕ ಹಬ್ಬ, ಹರಿದಿನಗಳನ್ನು ಆಚರಿಸುವಂತೆ ಪ್ರತಿ ತಿಂಗಳು ಸಹ ಒಂದಷ್ಟು ಪ್ರಮುಖ ರಾಷ್ಟ್ರೀಯ ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಒಂದೊಂದು ಉದ್ದೇಶ, ಧ್ಯೇಯವಾಕ್ಯಗಳನ್ನು ಇಟ್ಟುಕೊಂಡು ಜನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಈ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಇನ್ನೇನೂ ವರ್ಷದ 5 ನೇ ತಿಂಗಳಾದ ಮೇ (May) ಆರಂಭವಾಗುತ್ತಿದ್ದು, ಈ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದನ್ನು ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ. ಮೇ ತಿಂಗಳಲ್ಲಿನ ರಾಷ್ಟ್ರೀಯ ಅಂತಾರಾಷ್ಟ್ರೀಯ ಕಾರ್ಯಕ್ರಮಗಳು: ಮೇ 1 – ಕಾರ್ಮಿಕರ ದಿನ ಮೇ…

Read More