WPL 2026: ಮುಂಬೈ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | RCB vs MI WPL 2026: Final Berth or Playoff Hope? Match 16 Stakes, Toss and Playing XIs

ಮಹಿಳಾ ಪ್ರೀಮಿಯರ್ ಲೀಗ್  (Women’s Premier League) 2026 ರ 16 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಮುಂಬೈ ಇಂಡಿಯನ್ಸ್ (RCB vs MI) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯವೂ ವಡೋದರಾದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಗೆಲುವು ನಿರ್ಣಾಯಕವಾಗಿದೆ. ಇತ್ತ ಆರ್​ಸಿಬಿಗೂ ಈ ಪಂದ್ಯದ ಗೆಲುವು ಅವಶ್ಯಕವಾಗಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ, ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಲಿದೆ. ಇತ್ತ ಮುಂಬೈ ಗೆದ್ದರೆ, ಅದರ ಫ್ಲೇ ಆಫ್ ಕನಸು ಜೀವಂತವಾಗಿರಲಿದೆ. ಮುಂಬೈ ಇಂಡಿಯನ್ಸ್ ತಂಡ ಇದುವರೆಗೆ ಆರು ಪಂದ್ಯಗಳನ್ನು ಆಡಿದ್ದು, ಕೇವಲ ಎರಡರಲ್ಲಿ ಗೆದ್ದು ನಾಲ್ಕರಲ್ಲಿ ಸೋತಿದೆ. ಮತ್ತೊಂದೆಡೆ, ಆರ್‌ಸಿಬಿ ಆಡಿರುವ 6 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದಿದ್ದು, ತನ್ನ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲ ಸೋಲನ್ನು ಅನುಭವಿಸಿತ್ತು.

ಟಾಸ್ ಗೆದ್ದ ಆರ್​ಸಿಬಿ

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದುವರೆಗೆ ನಡೆದಿರುವ ಪಂದ್ಯಗಳಲ್ಲಿ ಟಾಸ್ ಗೆದ್ದ ಎಲ್ಲರೂ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗಲಿದೆ. ಹೀಗಾಗಿಯೇ ಸ್ಮೃತಿ ಮಂಧಾನ ಕೂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಆ ಪ್ರಕಾರ, ಆರ್​ಸಿಬಿ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇತ್ತ ಮುಂಬೈ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ (ನಾಯಕಿ), ಜಾರ್ಜಿಯಾ ವೋಲ್, ಗೌತಮಿ ನಾಯಕ್, ರಿಚಾ ಘೋಷ್ (ವಿಕೆಟ್ ಕೀಪರ್), ರಾಧಾ ಯಾದವ್, ನಡಿನ್ ಡಿ ಕ್ಲರ್ಕ್, ಅರುಂಧತಿ ರೆಡ್ಡಿ, ಸಯಾಲಿ ಸತ್ಘರೆ, ಶ್ರೇಯಾಂಕಾ ಪಾಟೀಲ್ ಮತ್ತು ಲಾರೆನ್ ಬೆಲ್.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಸಜನಾ ಸಜೀವನ್, ಹೇಲಿ ಮ್ಯಾಥ್ಯೂಸ್, ನ್ಯಾಟ್ ಸ್ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್ (ನಿಕೋಲಾ ಕ್ಯಾರಿ ಬದಲಿಗೆ), ಅಮಾನ್ಜೋತ್ ಕೌರ್, ಸಂಸ್ಕೃತಿ ಗುಪ್ತಾ, ರಾಹಿಲಾ ಫಿರ್ದೌಸ್ (ವಿಕೆಟ್ ಕೀಪರ್), ಪೂನಮ್ ಖೇಮ್ನಾರ್, ಶಬ್ನಿಮ್ ಇಸ್ಮಾಯಿಲ್, ಮತ್ತು ವೈಷ್ಣವಿ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:17 pm, Mon, 26 January 26

Source link

ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು! – Kannada News | 15 km Traffic Jam in Manali Snowfall Tourists recount harrowing Manali trip

ಮನಾಲಿ, ಜನವರಿ 26: ಹಿಮಾಚಲ ಪ್ರದೇಶದಲ್ಲಿ ಉಂಟಾದ ಭಾರೀ ಹಿಮಪಾತವು (Snowfall) ನೂರಾರು ಪ್ರವಾಸಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಹಿಮಭರಿತ ರಸ್ತೆಗಳು ಮತ್ತು ಭಾರೀ ಟ್ರಾಫಿಕ್ ಜಾಮ್​ನಿಂದಾಗಿ ಮನಾಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ಸ್ಥಗಿತಗೊಂಡಿತು. ರಸ್ತೆ ಸಂಪರ್ಕ ಕಡಿತಗೊಂಡ ಕಾರಣದಿಂದಾಗಿ 15 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಿಮಪಾತದಿಂದ ರಸ್ತೆ ಮುಚ್ಚಿದ್ದರಿಂದಾಗಿ ಪ್ರವಾಸಿಗರಿಗೆ ಮುಂದೆ ಸಾಗಲು ಸಾಧ್ಯವಾಗದೆ ಸಿಕ್ಕ ಹೋಟೆಲ್​ಗಳನ್ನೆಲ್ಲ ಬುಕ್ ಮಾಡಿಕೊಂಡರು. ಇದರಿಂದ ಕೆಲವು ಪ್ರವಾಸಿಗರು ಹೋಟೆಲ್ ರೂಂ ಸಿಗದೆ, ಹಿಮಪಾತದಿಂದ ಹೊರಗೂ ಹೋಗಲಾಗದೆ 24 ಗಂಟೆಗಳ ಕಾಲ ಕಾರಿನಲ್ಲೇ ಕುಳಿತಿದ್ದರು. ಹೀಗಾಗಿ, ನೀವು ಕೂಡ ಹಿಮಪಾತ ನೋಡಲು ಮನಾಲಿಗೆ ಪ್ರವಾಸ ಹೋಗುವ ಪ್ಲಾನ್ ಮಾಡಿದ್ದರೆ ಮತ್ತೊಮ್ಮೆ ಯೋಚಿಸುವುದು ಉತ್ತಮ. ಇದು ಅಲ್ಲಿಗೆ ಹೋಗಿರುವ ಪ್ರವಾಸಿಗರೇ ನೀಡಿರುವ ಸಲಹೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Ranji Trophy: ಕರ್ನಾಟಕ ತಂಡಕ್ಕೆ ಪಡಿಕ್ಕಲ್ ನಾಯಕ; ರಾಹುಲ್ ಇನ್, ಕರುಣ್ ಔಟ್ – Kannada News | Devdutt Padikkal to Lead Karnataka Ranji; KL Rahul Returns for Punjab Clash

ಪಂಜಾಬ್ ವಿರುದ್ಧದ ಮುಂದಿನ ರಣಜಿ ಟ್ರೋಫಿ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ವಿಜಯ್ ಹಜಾರೆ ಟ್ರೋಫಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಯಾಂಕ್ ಅಗರ್ವಾಲ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿದ್ದು, ಅವರ ಬದಲಿಗೆ ಯುವ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಇತ್ತೀಚಿಗಷ್ಟೇ ಮುಗಿದ ವಿಜಯ್ ಹಜಾರೆ ಟ್ರೋಫಿಯಲ್ಲಿ ದೇವದತ್ ಪಡಿಕ್ಕಲ್ ಅದ್ಭುತ ಪ್ರದರ್ಶನ ನೀಡಿದ್ದರು. ಅದರ ಫಲವಾಗಿ ಇದೀಗ ಪಡಿಕ್ಕಲ್​ಗೆ ತಂಡದ ನಾಯಕತ್ವ ನೀಡಲಾಗಿದೆ. ಇನ್ನೊಂದು ಪ್ರಮುಖ ಸುದ್ದಿಯೆಂದರೆ ಕೆಎಲ್ ರಾಹುಲ್ ಕೂಡ ರಣಜಿ ಟ್ರೋಫಿ ಪಂದ್ಯದಲ್ಲಿ ಆಡುವುದನ್ನು ಕಾಣಬಹುದು.

ರಾಜ್ಯ ತಂಡಕ್ಕೆ ಕೆಎಲ್ ರಾಹುಲ್ ಎಂಟ್ರಿ

ಮುಂದಿನ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕದ ಪರವಾಗಿ ಕೆಎಲ್ ರಾಹುಲ್ ಆಡಲಿದ್ದಾರೆ. ಈ ಪಂದ್ಯ ಜನವರಿ 29 ರಂದು ಮೊಹಾಲಿಯಲ್ಲಿ ಪಂಜಾಬ್ ವಿರುದ್ಧ ನಡೆಯಲಿದೆ. ರಾಹುಲ್ ಮಾತ್ರವಲ್ಲದೆ, ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ಅನುಭವಿ ಬ್ಯಾಟ್ಸ್‌ಮನ್ ಕರುಣ್ ನಾಯರ್ ಫಿಟ್ನೆಸ್ ಇಲ್ಲದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಕರುಣ್ ಜೊತೆಗೆ ಅಭಿನವ್ ಮನೋಹರ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಕರ್ನಾಟಕ ರಣಜಿ ತಂಡ: ಮಾಯಂಕ್ ಅಗರ್ವಾಲ್, ಕೆಎಲ್ ರಾಹುಲ್, ಕೆವಿ ಅನೀಶ್, ದೇವದತ್ ಪಡಿಕ್ಕಲ್ (ನಾಯಕ), ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ, ಎಂ ವೆಂಕಟೇಶ್, ವಿದ್ಯಾದರ್ ಪಾಟೀಲ್, ವಿದ್ವತ್ ಕಾವೇರಪ್ಪ, ಪ್ರಸಿದ್ಧ್ ಕೃಷ್ಣ, ಮೊಹ್ಸಿನ್ ಖಾನ್, ಶಿಖರ್ ಶೆಟ್ಟಿ, ಕೆಎಲ್ ಶ್ರೀಜಿತ್ ಮತ್ತು ಧ್ರುವ ಪ್ರಭಾಕರ್.

2025-26ರ ರಣಜಿ ಟ್ರೋಫಿಯಲ್ಲಿ ಕರ್ನಾಟಕದ ಪ್ರದರ್ಶನ

ಪ್ರಸ್ತುತ ರಣಜಿ ಟ್ರೋಫಿ ಆವೃತ್ತಿಯಲ್ಲಿ ಕರ್ನಾಟಕ ತಂಡವು ಗ್ರೂಪ್ ಬಿಯಲ್ಲಿ ಮೂರನೇ ಸ್ಥಾನದಲ್ಲಿದೆ. ತಂಡವು ತನ್ನ ಆರು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದಿದ್ದು, ಒಂದರಲ್ಲಿ ಸೋತಿದ್ದರೆ, ಮೂರರಲ್ಲಿ ಡ್ರಾ ಸಾಧಿಸಿದೆ. ಕರುಣ್ ನಾಯರ್ ಈ ಆವೃತ್ತಿಯಲ್ಲಿ ಕರ್ನಾಟಕ ಪರ ಅತಿ ಹೆಚ್ಚು (614) ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕಗಳು ಮತ್ತು ಎರಡು ಅರ್ಧಶತಕಗಳು ಸೇರಿವೆ. ಸ್ಮರಣ್ ರವಿಚಂದ್ರನ್ ಕೂಡ ಆಡಿರುವ ಐದು ಪಂದ್ಯಗಳಲ್ಲಿ 119 ಸರಾಸರಿಯಲ್ಲಿ 595 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕಗಳು ಮತ್ತು ಎರಡು ಅರ್ಧಶತಕಗಳು ಸೇರಿವೆ. ಲೆಗ್-ಸ್ಪಿನ್ನರ್ ಶ್ರೇಯಸ್ ಗೋಪಾಲ್ ಕರ್ನಾಟಕ ಪರ ಅತಿ ಹೆಚ್ಚು ವಿಕೆಟ್ (31) ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:59 pm, Mon, 26 January 26

Source link

ಕಂಟ್ರಿ ಪಿಸ್ತೂಲ್ ತೋರಿಸಿ ಬಂಗಾರದ ಅಂಗಡಿ ದರೋಡೆ: ಬೆಚ್ಚಿ ಬೀಳಿಸೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ – Kannada News | Two Masked Men Rob a Gold Shop in Halasangi, Vijayapur, Using a Country Made Pistol

ವಿಜಯಪುರ, ಜನವರಿ 26: ಮೈಸೂರು ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼಗೆ ನುಗ್ಗಿದ್ದ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 7 ಕೆಜಿ ಚಿನ್ನ ಮತ್ತು ವಜ್ರ ದರೋಡೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹುದ್ದೇ ಮತ್ತೊಂದು ರಾಬರಿ ನಡೆದಿದೆ. ಹೆಲ್ಮೆಟ್ ಧರಿಸಿ ಬಂದಿದ್ದ ಇಬ್ಬರು ಕಂಟ್ರಿ ಪಿಸ್ತೂಲ್ ತೋರಿಸಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಚಿನ್ನದ ಅಂಗಡಿಯಲ್ಲಿ ದರೋಡೆ ನಡೆಸಿದ್ದಾರೆ.

ಗಾಳಿಯಲ್ಲಿ 2 ಸುತ್ತು ಗುಂಡು ಹಾರಿಸಿ ದರೋಡೆ

ಮಹಾರುದ್ರ ಕಂಚಗಾರ ಅವರಿಗೆ ಸೇರಿರುವ ಬಂಗಾರದ ಅಂಗಡಿಯಲ್ಲಿ ದರೋಡೆ ನಡೆದಿದ್ದು, ಅಂಗಡಿಗೆ ಬಂದಿದ್ದ ವೃದ್ಧೆಯನ್ನ ಸಹ ಪಿಸ್ತೂಲ್​​ ತೋರಿಸಿ ಹೆದರಿಸಿ ಆರೋಪಿಗಳು ಕಳುಹಿಸಿದ್ದಾರೆ. ಅಲ್ಲದೆ ದರೋಡೆಕೋರರು ಈ ವೇಳೆ ಗಾಳಿಯಲ್ಲಿ 2 ಸುತ್ತು ಗುಂಡು ಕೂಡ ಹಾರಿಸಿದ್ದು, ಆತ್ಮಲಿಂಗ ಹೂಗಾರ ಎಂಬುವನ ಕಾಲಿಗೆ ಬುಲೆಟ್​ ತಾಗಿದೆ. ಗಾಯಾಳುವನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿನ್ನ ದೋಚಿದ ಆರೋಪಿಗಳು ಮಹಾರಾಷ್ಟ್ರದತ್ತ ತೆರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ; ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿ ಪೊಲೀಸರ ಬಲೆಗೆ

ಸಿಸಿ ಕ್ಯಾಮರಾದಲ್ಲಿ ದರೋಡೆ ದೃಶ್ಯ ಸೆರೆ

ದರೋಡೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ SP ಲಕ್ಷ್ಮಣ ನಿಂಬರಗಿ, ಎಎಸ್​​ಪಿ ರಾಮನಗೌಡ ಹಟ್ಟಿ, DySP ಕಟ್ಟಿಮನಿ, ಇನ್ಸ್​ಪೆಕ್ಟರ್ ಪರಶುರಾಮ ಮನಗೂಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿನ್ನದಂಗಡಿಗೆ ಎಂಟ್ರಿ ಕೊಟ್ಟು ಗನ್​​ ತೋರಿಸಿ ಆರೋಪಿಗಳು ದರೋಡೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ದರೋಡೆಕೋರರ ಬಂಧನಕ್ಕೆ ಖಾಕಿ ಬಲೆ ಬೀಸಿದೆ.  ಆರೋಪಿಗಳು ಅಂಗಡಿಯಿಂದ ಏನೇನು ರಾಬರಿ ಮಾಡಿದ್ದಾರೆಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಮತ್ತೊಂದೆಡೆ ಮೇಲಿಂದ ಮೇಲೆ ನಡೆಯುತ್ತಿರುವ ದರೋಡೆ ಪ್ರಕರಣಗಳು ಚಿನ್ನದಂಗಡಿ ಮಾಲಕರ ನಿದ್ರೆಗೆಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಿಯಲ್‌ ಲೈಫ್‌ ಸ್ಪೈಡರ್‌ ಮ್ಯಾನ್;‌ ಹಗ್ಗದ ಸಹಾಯವಿಲ್ಲದೆಯೇ 508 ಮೀಟರ್ ಎತ್ತರದ ಕಟ್ಟಡವನ್ನೇರಿದ ಅಮೆರಿಕದ ರಾಕ್‌ ಕ್ಲೈಂಬರ್ – Kannada News | US rock climber Alex Honnold climbs Taipei 101 skyscraper without ropes

ಖ್ಯಾತ ರಾಕ್ ಕ್ಲೈಂಬರ್ ಅಲೆಕ್ಸ್ ಹೊನ್ನಾಲ್ಡ್

ಸ್ಪೈಡರ್‌ ಮ್ಯಾನ್‌ ಸಿನಿಮಾವನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಅದೆಷ್ಟೋ ಮಂದಿ ತಾವು ಕೂಡ ಬಂಡೆ, ಎತ್ತರದ ಕಟ್ಟಡಗಳನ್ನು ಏರುವಂತಹ ಅಪಾಯಕಾರಿ ಸಾಹಸಗಳನ್ನು ಮಾಡುತ್ತಿರುತ್ತಾರೆ. ಸಾಮಾನ್ಯವಾಗಿ ಇಂತಹ ಸಾಹಸಗಳನ್ನು ಮಾಡುವವರು ಕ್ಲೈಂಬಿಂಗ್‌ ರೋಪ್‌ಗಳನ್ನು ಬಳಸುತ್ತಾರೆ. ಆದ್ರೆ ಇದೀಗ ಅಮೆರಿಕದ ಖ್ಯಾತ ರಾಕ್ ಕ್ಲೈಂಬರ್ ಅಲೆಕ್ಸ್ ಹೊನ್ನಾಲ್ಡ್ (Alex Honnold) ಅವರು ಕ್ಲೈಂಬಿಂಗ್‌ ರೋಪ್‌ ಹಾಗೂ ಯಾವುದೇ ಸುರಕ್ಷತಾ ಪರಿಕರಗಳ ಸಹಾಯವಿಲ್ಲದೆಯೇ ತೈವಾನ್‌ನ ರಾಜಧಾನಿ ತೈಪೆಯಲ್ಲಿ ಐಕಾನಿಕ್ ತೈಪೆ 101  ಕಟ್ಟಡವನ್ನು ಏರಿದ್ದಾರೆ.  ಹೊನ್ನಾಲ್ಡ್ ಸುಮಾರು 90 ನಿಮಿಷಗಳಲ್ಲಿ ಈ ಆರೋಹಣವನ್ನು ಪೂರ್ಣಗೊಳಿಸಿದ್ದು, ಈ ಕುರಿತ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ಕ್ಲೈಂಬಿಂಗ್‌ ರೋಪ್‌ ಸಹಾಯವಿಲ್ಲದೆಯೇ ಕಟ್ಟಡವನ್ನೇರಿದ ಅಲೆಕ್ಸ್ ಹೊನ್ನಾಲ್ಡ್:

ಭಾನುವಾರ (ಜನವರಿ 25) ತೈವಾನ್‌ನ ರಾಜಧಾನಿ ತೈಪೆಯಲ್ಲಿ 101 ಅಂತಸ್ತುಗಳನ್ನು ಹೊಂದಿರುವ 508 ಮೀಟರ್ (1,667 ಅಡಿ ಎತ್ತರದ) ತೈಪೆ 101 ಕಟ್ಟಡವನ್ನು ಅಮೆರಿಕದ ಖ್ಯಾತ ರಾಕ್ ಕ್ಲೈಂಬರ್ ಅಲೆಕ್ಸ್ ಹೊನ್ನಾಲ್ಡ್ ಕ್ಲೈಂಬಿಂಗ್‌ ರೋಪ್‌ ಸಹಾಯವಿಲ್ಲದೆಯೇ ಏರಿದ್ದಾರೆ.  ಹೊನ್ನಾಲ್ಡ್ ಸುಮಾರು 90 ನಿಮಿಷಗಳಲ್ಲಿ ಆರೋಹಣವನ್ನು ಪೂರ್ಣಗೊಳಿಸಿದರು. ಈ ಅಪಾಯಕಾರಿ ಆರೋಹಣವನ್ನು ವೀಕ್ಷಿಸಲು ಕಟ್ಟಡದ ಮುಂಭಾಗದಲ್ಲಿ ಸಾವಿರಾರು ಮಂದಿ ಸೇರಿದ್ದರು.

ಅವರು ಕಟ್ಟಡದ ಒಂದು ಮೂಲೆಯಿಂದ ತೈಪೆ 101 ಅನ್ನು ಹತ್ತಲು ಪ್ರಾರಂಭಿಸಿದರು. ಅವರು ಕಟ್ಟಡದ ಸಣ್ಣ L-ಆಕಾರದ ಅಂಚುಗಳ ಮೇಲೆ ಪಾದಗಳನ್ನಿಡುವ ಮೂಕಲ ಹಗ್ಗದ ಸಹಾಯವಿಲ್ಲದೆ ಕಟ್ಟಡವನ್ನು ಏರಿದ್ದಾರೆ. ಈ ಸಾಹಸದ ಅತ್ಯಂತ ಸವಾಲಿನ ಭಾಗವೆಂದರೆ “ಬ್ಯಾಂಬೂ ಬಾಕ್ಸಸ್” ಎಂದು ಕರೆಯಲ್ಪಡುವ ಮಧ್ಯದ 64 ಮಹಡಿಗಳು. ಇದು ಕಟ್ಟಡವನ್ನು ಪ್ರತ್ಯೇಕಿಸುವ ವಿಶಿಷ್ಟ ವಿನ್ಯಾಸವಾಗಿದ್ದು, ಈ ಭಾಗದ  ಮಹಡಿಗಳಿಗೆ ಹತ್ತುವುದು ಸವಾಲಿನ ಸಂಗತಿಯಾಗಿತ್ತು. ಆದರೂ ಛಲ ಬಿಡದೆ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತು ಕಟ್ಟಡದ ತುತ್ತ ತುದಿಗೆ ತಲುಪಿದ್ದಾರೆ. ಅಲೆಕ್ಸ್ ಹೊನ್ನಾಲ್ಡ್ ತೈಪೆ 101 ಶಿಖರವನ್ನು ಹಗ್ಗವಿಲ್ಲದೆ ಏರಿದ ಮೊದಲ ವ್ಯಕ್ತಿ. ಇದಕ್ಕೂ ಮೊದಲು, ಫ್ರೆಂಚ್ ಪರ್ವತಾರೋಹಿ ಅಲೈನ್ ರಾಬರ್ಟ್ 2004 ರಲ್ಲಿ ಹಗ್ಗದ ಮೂಲಕ ಇದೇ ಕಟ್ಟಡವನ್ನು ಏರಿದ್ದರು.

ವೈರಲ್‌  ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಜೀವನವನ್ನು ಆನಂದಿಸಲು ಬೆಂಗಳೂರನ್ನು ಹೀಗೆ ಬಳಸಿಕೊಳ್ಳಿ ಎಂದ ಮಹಿಳೆ

ಈ ರೋಮಾಂಚಕಾರಿ ಆರೋಹಣವನ್ನು ನೆಟ್‌ಫ್ಲಿಕ್ಸ್‌ನಲ್ಲಿ ನೇರ ಪ್ರಸಾರ ಮಾಡಲಾಯಿತು, ಇದರಿಂದಾಗಿ ಪ್ರಪಂಚದಾದ್ಯಂತದ ಜನರಿಗೆ ಈ ಅಪಾಯಕಾರಿ ಸಾಹಸವನ್ನು ವೀಕ್ಷಿಸಲು ಒಂದು ಅವಕಾಶ ಸಿಕ್ಕಿತು.  ಅಲೆಕ್ಸ್ ಹೊನ್ನಾಲ್ಡ್ ಹಗ್ಗವಿಲ್ಲದೆ ಈ ಅಸಾಮಾನ್ಯ ಆರೋಹಣವನ್ನು ಮಾಡಿದ್ದು, ಈ ಮೂಲಕ  ಈ ರೀತಿಯಲ್ಲಿ ತೈಪೆ 101 ಕಟ್ಟಡವನ್ನು ಏರಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಹೊನ್ನಾಲ್ಡ್ ಪಾತ್ರರಾದರು.

ಅಲೆಕ್ಸ್ ಹೊನ್ನಾಲ್ಡ್ ಅವರ ಈ ಸಾಧನೆ ಹೊಸದೇನಲ್ಲ. ಈ ಹಿಂದೆ, ಹೊನ್ನಾಲ್ಡ್ ಅಮೆರಿಕದ ಪ್ರಸಿದ್ಧ ಯೊಸೆಮೈಟ್ ರಾಷ್ಟ್ರೀಯ ಉದ್ಯಾನವನದಲ್ಲಿರುವ ಎಲ್ ಕ್ಯಾಪಿಟನ್ ಕಟ್ಟಡವನ್ನು ಹಗ್ಗವಿಲ್ಲದೆ ಹತ್ತುವುದರ ಮೂಲಕ ಇತಿಹಾಸ ನಿರ್ಮಿಸಿದ್ದರು. ಹೀಗೆ ಇವರು ತಮ್ಮ ಧೈರ್ಯಶಾಲಿ ಕ್ಲೈಂಬಿಂಗ್‌ಗಳಿಗೆ  ಹೆಸರುವಾಸಿಯಾಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:45 pm, Mon, 26 January 26

Source link

77th Republic Day: ಅಟ್ಟಾರಿ-ವಾಘಾ ಗಡಿಯಲ್ಲಿ ‘ಬೀಟಿಂಗ್ ರಿಟ್ರೀಟ್’ – Kannada News | 77th Republic Day: Attari Wagah Border Witnessed Spectacular Beating Retreat 2026

ಪಂಜಾಬ್, ಜ.26: ಅಮೃತಸರದ ಅಟ್ಟಾರಿ ವಾಘಾ (Attari-Wagah) ಗಡಿಯಲ್ಲಿ ಇಂದು (ಜನವರಿ 26, 2026) ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ ನಡೆದ ‘ಬೀಟಿಂಗ್ ರಿಟ್ರೀಟ್’ (Beating Retreat) ಸಮಾರಂಭವು ಅತ್ಯಂತ ಅದ್ಧೂರಿಯಾಗಿತ್ತು. ಭದ್ರತಾ ಪಡೆಯ (ಯೋಧರು ನಡೆಸಿದ ಸಾಂಪ್ರದಾಯಿಕ ಪಥಸಂಚಲನ ಮತ್ತು ಅವರ ಆಕ್ರಮಣಕಾರಿ ನಡಿಗೆಯನ್ನು ನೋಡಲು ಸಾವಿರಾರು ಪ್ರವಾಸಿಗರು ಗಡಿಯಲ್ಲಿ ಜಮಾಯಿಸಿದ್ದರು. ಲರಿಯಲ್ಲಿ ಕುಳಿತಿದ್ದ ಸಾವಿರಾರು ಜನರು ‘ಭಾರತ್ ಮಾತಾ ಕಿ ಜೈ’ ಮತ್ತು ‘ವಂದೇ ಮಾತರಂ’ ಎಂಬ ಘೋಷಣೆಗಳನ್ನು ಕೂಗುತ್ತಾ ಯೋಧರನ್ನು ಹುರಿದುಂಬಿಸಿದರು. ಗಣರಾಜ್ಯೋತ್ಸವದ ಪ್ರಯುಕ್ತ ಭಾರತೀಯ ಬಿಎಸ್ಎಫ್ ಯೋಧರು ಪಾಕಿಸ್ತಾನಿ ರೇಂಜರ್ಸ್‌ಗೆ ಸಿಹಿ ಹಂಚುವ ಮೂಲಕ ಸೌಹಾರ್ದತೆಯನ್ನು ಪ್ರದರ್ಶಿಸಿದರು. ಇದು ಗಡಿಯಲ್ಲಿನ ಉದ್ವಿಗ್ನತೆಯ ನಡುವೆಯೂ ನಡೆಯುವ ಒಂದು ಸಾಂಪ್ರದಾಯಿಕ ಆಚರಣೆಯಾಗಿದೆ.77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಅಟ್ಟಾರಿ ಗಡಿಯ ಸುತ್ತಮುತ್ತ ಬಿಗಿ ಪೊಲೀಸ್ ಮತ್ತು ಅರೆಸೇನಾ ಪಡೆಯ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಡ್ರೋನ್ ಮತ್ತು ಸಿಸಿಟಿವಿಗಳ ಮೂಲಕ ಹದ್ದಿನ ಕಣ್ಣಿಡಲಾಗಿತ್ತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ – Kannada News | Bigg Boss Kannada Season 12 Winner Gilli Nata thanks police personnel for support

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಟ್ರೋಫಿ ಗೆದ್ದ ಗಿಲ್ಲಿ ನಟ ಅವರು ಅನೇಕ ಕಾರ್ಯಕ್ರಮಗಳಿಗೆ ಅತಿಥಿಯಾಗಿ ತೆರಳುತ್ತಿದ್ದಾರೆ. ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಕನಕಪುರದಲ್ಲಿ ನಡೆದ ಕನಕೋತ್ಸವ ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಭಾಗಿ ಆಗಿದ್ದಾರೆ. ಈ ವೇಳೆ ಅವರು ಭಾವುಕವಾಗಿ ಮಾತನಾಡಿದರು. ತಮಗೆ ಬೆಂಬಲ ನೀಡಿದ ಪೊಲೀಸರಿಗೂ ಅವರು ಧನ್ಯವಾದ ತಿಳಿಸಿದರು. ‘ಇಷ್ಟೊಂದು ಪ್ರೀತಿ ಸಂಪಾದನೆ ಮಾಡುತ್ತೇನೆ ಅಂತ ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಸತ್ಯವಾಗಲೂ ಅಂದುಕೊಂಡಿರಲಿಲ್ಲ. ನನ್ನ ಹೆಣ ಬೀಳುವವರೆಗೂ ನಿಮ್ಮ ಋಣ ಮರೆಯಲ್ಲ. ಪೊಲೀಸರ ಕೆಲಸ ಎಷ್ಟು ಕಷ್ಟ ಅಂತ ನನಗೆ ಗೊತ್ತು. 24 ಗಂಟೆ ಅವರು ಕೆಲಸ ಮಾಡುತ್ತಾರೆ. ಅಂಥವರು ನನ್ನ ಶೋ ನೋಡಿ, ಮನೆಯವರಿಂದ ವೋಟ್ ಹಾಕಿಸಿದ್ದಾರೆ. ಆ ವಿಷಯ ಕೇಳಿ ಸಿಕ್ಕಾಪಟ್ಟೆ ಖುಷಿ ಆಗಿದೆ’ ಎಂದು ಗಿಲ್ಲಿ ನಟ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ: ಮಹಿಳೆ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ – Kannada News | Illicit Affair Tragedy: Man Murders Woman, Then Commits Suicide in Chikkaballapur

ಚಿಕ್ಕಬಳ್ಳಾಪುರ, ಜನವರಿ 26: ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಸಲ್ಮಾಳನ್ನು ಚಾಕುವಿನಿಂದ ಇರಿದು ಕೊಂದು ಆಕೆಯ ಪ್ರಿಯತಮ ಬಾಬಾಜಾನ್ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಬಾಜಾನ್ ಯಾಕಾಗಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲವಾದರೂ, ಇವರಿಬ್ಬರ ಅನೈತಿಕ ಸಂಬಂಧ ವಿಚಾರದಲ್ಲಿ ಎರಡು ಕುಟುಂಬಗಳ ಮಧ್ಯೆ ಈ ಹಿಂದೆ ಗಲಾಟೆ ಆಗಿತ್ತು ಎನ್ನಲಾಗಿದೆ.

ಸಲ್ಮಾ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ಗರಿಗಿರೆಡ್ಡಿಪಾಳ್ಯಾ ನಿವಾಸಿಯಾಗಿದ್ದು, ಈಕೆಯ ಗಂಡ ಕೂಲಿ ಕೆಲಸ ಮಾಡಿಕೊಂಡಿದ್ದ. ಈಕೆಯೂ ಅದೇ ಕೆಲಸ ಮಾಡುತ್ತಿದ್ದಳು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಮತ್ತೊಂದೆಡೆ ಮೂಲತಃ ಆಂಧ್ರದ ನಿವಾಸಿಯಾಗಿರುವ ಬಾಬಾಜಾನ್ ಕುಟುಂಬ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದಲ್ಲಿ ವಾಸವಿತ್ತು. ಈತ ಚೆಳೂರು ಪಟ್ಟಣದಲ್ಲಿ ರೂಮ್​​ ಮಾಡಿಕೊಂಡು ವಾಸವಿದ್ದ. ಇಬ್ಬರಿಗೂ ಪ್ರತ್ಯೇಕ ವಿವಾಹವಾಗಿ ಮಕ್ಕಳು ಇದ್ದರೂ ಪ್ರೀತಿ ಪ್ರೇಮದ ಹೆಸರಲ್ಲಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು. ಈ ನಡುವೆ ಅದೇನಾಗಿತ್ತೋ ಗೊತ್ತಿಲ್ಲ. ಸಲ್ಮಾ ಮನೆಗೆ ಬಂದಿದ್ದ ಬಾಬಾಜಾನ್ ಆಕೆಯ ತ್ತು ಕೊಯ್ದು ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಚುಚ್ಚಿದ ಮಹಿಳೆ, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ!

ಇನ್ನು ಸಲ್ಮಾ ಕೊಲೆ ಬಳಿಕ ಚೆಳೂರು ಪಟ್ಟಣದಲ್ಲಿ ಮಾಡಿಕೊಂಡಿದ್ದ ಬಾಡಿಗೆ ರೂಮ್​​ಗೆ ತೆರಳಿರುವ ಬಾಬಾಜಾನ್​​, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚೇಳೂರು ಠಾಣೆ ಪೊಲೀಸರು ಎರಡು ಸ್ಥಳಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಲ್ಮಾ ಹತ್ಯೆ ಪ್ರಕರಣದ ಜೊತೆಗೆ ಆತ್ಮಹತ್ಯೆ ಕೇಸ್​​ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅನೈತಿಕ ಸಂಬಂಧದ ವಿಚಾರವಾಗಿ ಕುಟುಂಬಸ್ಥರ ಗಲಾಟೆ ಬಳಿಕವೂ ಇವರು ಬೇರೆ ಬೇರೆ ಆಗಿರಲಿಲ್ಲ ಎಂಬ ಮಾಹಿತಿ ತನಿಖೆ ವೇಳೆ ಬಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್; ಆರೋಪಿ ರಾಜೀವ್ ಗೌಡ ಕೊನೆಗೂ ಅರೆಸ್ಟ್! – Kannada News | Shidlaghatta Commissioner Threat Case: Congress Leader Rajeev Gowda Arrested In Kerala Border

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್

ಬೆಂಗಳೂರು, ಜನವರಿ 23: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು (Rajeev Gowda Arrest) ಬಂಧಿಸಲಾಗಿದೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು (ಜನವರಿ 26) ಕೇರಳ ಗಡಿಯಲ್ಲಿ ಬಂಧಿಸುವಲ್ಲಿ  ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬ್ಯಾನರ್ ವಿಚಾರಕ್ಕೆ ಜನವರಿ 12ರಂದು ಪೌರಾಯುಕ್ತೆ ಅಮೃತಾಗೌಡಗೆ ಕರೆ ಮಾಡಿ ಧಮ್ಕಿ ಹಾಕಿದ್ದು, ಈ ಬಗ್ಗೆ ಜನವರಿ 14ರಂದು ದೂರು ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ. ಇಂದು ಬೆಳಗ್ಗೆ ಅಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದಾನೆ ಎನ್ನುವ ಸುಳಿವು ಸಿಕ್ಕ ಬೆನ್ನಲ್ಲೇ ಪೊಲೀಸರು ಸಹ ಅಲರ್ಟ್​ ಆಗಿದ್ದರು. ಆದ್ರೆ, ಪೊಲೀಸರು ಬಂಧನಕ್ಕೆ ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆಯೇ ರಾಜೀವ್ ಗೌಡ ಮಂಗಳೂರಿನಿಂದ ಎಸ್ಕೇಪ್ ಆಗಿದ್ದ.

FIR ರದ್ದತಿಗೆ ಹೈ ಕೋರ್ಟ್​ ಮೊರೆ ಹೋಗಿದ್ದ ಮುಖಂಡ

ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ಪೌರಾಯುಕ್ತೆ ಅಮೃತಾಗೌಡ ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿತ್ತು. ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣ ವಿಚಾರವಾಗಿ ರಾಜೀವ್​​ ಗೌಡನನ್ನು ಪೊಲೀಸರು ಇನ್ನೂ ಬಂಧಿಸದ ಬಗ್ಗೆ ಸ್ವಪಕ್ಷ ಕಾಂಗ್ರೆಸ್​​ನಲ್ಲಿಯೇ ಆಕ್ರೋಶ ಭುಗಿಲೆದ್ದಿತ್ತು. ರಾಜೀವ್ ಗೌಡ FIR ರದ್ದತಿಗೆ ಹೈಕೋರ್ಟ್ ಮೊರೆ ಹೋದಾಗ ವಿಚಾರಣೆ ಮಾಡಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ರಾಜೀವ್ ಗೌಡರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ಇದನ್ನೂ ಓದಿ: ಶಿಡ್ಲಘಟ್ಟ ಮಹಿಳಾಧಿಕಾರಿಗೆ ಬೆದರಿಕೆ: ರಾಜೀವ್ ಗೌಡ ಜಾಮೀನು ಅರ್ಜಿ ವಜಾ

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಯಾವುದೇ ಷರತ್ತುಗಳಿಲ್ಲದೆ ವಜಾಗೊಳಿಸಿ, ವಿಚಾರಣೆಯನ್ನು ಜನವರಿ 24ಕ್ಕೆ ಮುಂದೂಡಿತ್ತು. ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ, ಶತಾಯಗತಾಯ ರಾಜೀವ್ ಗೌಡನ ಬಂಧನಕ್ಕೆ ಪೊಲೀಸರು ಸಿದ್ಧತೆ ನಡೆಸಿ, ಕೊನೆಗೂ ಬಂಧಿಸಿದ್ದಾರೆ.

ನಡೆದಿದ್ದೇನು?

ಶಿಡ್ಲಘಟ್ಟ ನಗರದಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಕ್ಕಾಗಿ ಪೌರಾಯುಕ್ತೆ ಅಮೃತಾ ಅವರಿಗೆ ದೂರವಾಣಿ ಕರೆ ಮಾಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಕಚೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.  ಇದು ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನ ಮೂಡಿಸಿತ್ತು. ಇನ್ನು ಈ ಪ್ರಕರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿತ್ತು. ಇದರ ಬೆನ್ನಲ್ಲೇ ರಾಜೀವ್​ ಗೌಡನನ್ನು  ಪಕ್ಷದಿಂದ ಅಮಾನತುಗೊಳಿಸಿ ಶಿಸ್ತು ಸಮಿತಿಗೆ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 6:08 pm, Mon, 26 January 26

Source link

ಬಜೆಟ್​ನಲ್ಲಿ ಜಿಎಸ್​ಟಿ ದರ ಇಳಿಕೆಗೆ ಕ್ರಮ: ಎಂಎಸ್​ಎಂಇಗಳಿಂದ ನಿರೀಕ್ಷೆ – Kannada News | Small business owners expecting GST rate cut on essential commodities in upcoming budget

ನವದೆಹಲಿ, ಜನವರಿ 26: ದಿನನಿತ್ಯ ಬಳಕೆಯ ಸರಕುಗಳ ಮೇಲೆ ಜಿಎಸ್​ಟಿ ದರಗಳನ್ನು ಮುಂಬರುವ ಬಜೆಟ್​ನಲ್ಲಿ (Union Budget) ಕಡಿಮೆ ಮಾಡಬೇಕು ಎಂದು ಸಣ್ಣ ಉದ್ದಿಮೆದಾರರು ನಿರೀಕ್ಷಿಸುತ್ತಿದ್ದಾರೆ. ಅಧಿಕ ತೆರಿಗೆಗಳು ಹಾಗೂ ಅಧಿಕ ಖರೀದಿ ವೆಚ್ಚದಿಂದಾಗಿ ತಮ್ಮ ಬ್ಯುಸಿನೆಸ್​ಗಳು ತುಸು ತೊಡಕು ಎದುರಿಸುತ್ತಿವೆ ಎಂಬುದು ಇವರ ಕೂಗು. ದಿನ ನಿತ್ಯದ ವಸ್ತುಗಳ ಮೇಲೆ ತೆರಿಗೆ ಹೆಚ್ಚು ಇರುವುದರಿಂದ ಬ್ಯುಸಿನೆಸ್ ನಡೆಸುವುದು ಕಷ್ಟವಾಗಿರುವುದು ಮಾತ್ರವಲ್ಲ, ಗ್ರಾಹಕರಿಗೂ ಹೊರೆಯಾಗುತ್ತಿದೆ ಎಂದು ಹೈದರಾಬಾದ್​ನಲ್ಲಿರುವ ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

ಅವಶ್ಯಕ ಸರಕುಗಳ ಬೆಲೆ ಬಾರಿ ಬಾರಿ ಹೆಚ್ಚಳ ಆಗುತ್ತಿರುವುದರಿಂದ, ಆ ಸರಕುಗಳನ್ನು ಖರೀದಿಸಿ ಸಂಗ್ರಹಿಸುವುದು ಕಷ್ಟವಾಗಿದೆ. ಇದರಿಂದಾಗಿ ಲಾಭದ ಮಾರ್ಜಿನ್ ಕಡಿಮೆ ಆಗುತ್ತಿದೆ. ನಿತ್ಯದ ವಹಿವಾಟುಗಳೂ ಕಡಿಮೆಗೊಂಡಿವೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು

ಹಾಲು, ಸಕ್ಕರೆ ಇತ್ಯಾದಿ ಮೂಲಭೂತವಾದ ಆಹಾರ ಮತ್ತು ಡೈರಿ ಉತ್ಪನ್ನಗಳು ಹಾಗೂ ಇತರ ನಿತ್ಯ ಬಳಕೆಯ ವಸ್ತುಗಳ ಮೇಲೆ ಜಿಎಸ್​ಟಿಯನ್ನು ತೆಗೆದುಹಾಕಬೇಕು ಇಲ್ಲವೇ ಕಡಿಮೆ ಮಾಡಬೇಕು. ಇದರಿಂದ ರೀಟೇಲ್ ವ್ಯಾಪಾರಿಗಳು ಮತ್ತು ಗ್ರಾಹಕರು ಇಬ್ಬರಿಗೂ ರಿಲೀಫ್ ಸಿಕ್ಕಂತಾಗುತ್ತದೆ ಎಂಬುದು ಇವರ ಅನಿಸಿಕೆ.

ಅಗತ್ಯ ವಸ್ತುಗಳ ಮೇಲಿನ ತೆರಿಗೆ ಪ್ರಮಾಣವು ತಳಮಟ್ಟದಲ್ಲಿ ಸಮಸ್ಯೆ ಸೃಷ್ಟಿಸುತ್ತಿದೆ. ಜನಸಾಮಾನ್ಯರ ಖರೀದಿ ಶಕ್ತಿಯನ್ನು ಕಡಿಮೆ ಮಾಡುತ್ತಿದೆ. ಒಟ್ಟಾರೆ ಮಾರುಕಟ್ಟೆ ಭಾವನೆಗೂ ಹಿನ್ನಡೆ ತರುತ್ತಿದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್​ನಲ್ಲಿ ಈಡೇರುತ್ತಾ?

ಇತ್ತೀಚೆಗಷ್ಟೇ ಸರ್ಕಾರವು ಜಿಎಸ್​ಟಿ ಸಿಸ್ಟಂ ಅನ್ನು ಸರಳೀಕೃತಗೊಳಿಸಿತ್ತು. ನಾಲ್ಕು ವಿಧ ಇದ್ದ ಜಿಎಸ್​ಟಿ ದರಗಳನ್ನು ಎರಡಕ್ಕೆ ಇಳಿಸಲಾಯಿತು. ಶೇ. 5 ಮತ್ತು ಶೇ. 18ರ ದರಗಳು ಮಾತ್ರವೇ ಇದೆ. ಶೇ. 12 ಮತ್ತು ಶೇ. 28ರ ದರಗಳನ್ನು ಕೈಬಿಡಲಾಗಿದೆ. ಹೆಚ್ಚಿನ ಸರಕುಗಳ ಮೇಲಿನ ಟ್ಯಾಕ್ಸ್ ಕಡಿಮೆ ಆಗಿದೆ. ಅದೇ ವೇಳೆ ಜಿಎಸ್​ಟಿ ಇನ್ನಷ್ಟು ಇಳಿಯಬೇಕು ಎಂಬ ಆಗ್ರಹ ಮುಂದುವರಿದಿದೆ. ಇನ್ನೂ ಕೆಲವರು ಎಲ್ಲಾ ಸರಕುಗಳ ಮೇಲೆ ಸಮಾನವಾಗಿ ಕನಿಷ್ಠ ಜಿಎಸ್​ಟಿ ಮಾತ್ರ ಹಾಕಿ ಎಂದು ವಾದಿಸುತ್ತಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version