Headlines

Video: ಆಷಾಢದ ಕೊನೆಯ ಶುಕ್ರವಾರ; ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ – Kannada News | Devotion at Chamundi Hills: Last Ashada Friday Sees Special Mahalakshmi Alankara

ಮೈಸೂರಿನ ಐತಿಹಾಸಿಕ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ಮತ್ತು ಅಲಂಕಾರಗಳು ನಡೆಯುತ್ತಿವೆ. ಈ ಶುಭ ಸಂದರ್ಭದಲ್ಲಿ, ಜಗನ್ಮಾತೆ ಚಾಮುಂಡೇಶ್ವರಿ ದೇವಿಯನ್ನು ಮಹಾಲಕ್ಷ್ಮೀ ಅಲಂಕಾರದಲ್ಲಿ ಸಿಂಗಾರಗೊಳಿಸಿದ್ದು, ದೇವಿಯ ಸೌಂದರ್ಯವು ಭಕ್ತರ ಮನಸೆಳೆಯುತ್ತಿದೆ. ಬೆಳಗಿನ ಜಾವದಿಂದಲೇ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ದೇವಸ್ಥಾನದ ಆವರಣದಲ್ಲಿ ಎಲ್ಲೆಡೆ ಭಕ್ತಿಯ ವಾತಾವರಣ ನೆಲೆಸಿತ್ತು. ಅಧಿಕಾರಿಗಳು ಮತ್ತು ಸ್ವಯಂಸೇವಕರು ಭಕ್ತರಿಗೆ ಸುಗಮ ದರ್ಶನಕ್ಕೆ ಸಹಕರಿಸುತ್ತಿದ್ದಾರೆ….

Read More

‘ಶಾಂತಿ ಕ್ರಾಂತಿ’ ಮರುಬಿಡುಗಡೆಗೆ ಹಲವು ಸವಾಲು; ಅಂದುಕೊಂಡಷ್ಟು ಸುಲಭವಿಲ್ಲ ರೀ-ರಿಲೀಸ್ – Kannada News | Re Release Challenges: Why Ravichandran Shanti Kranti Is not Easy to Bring Back to Theatres

‘ಶಾಂತಿ ಕ್ರಾಂತಿ’ ಇದು 1991ರಲ್ಲಿ ರಿಲೀಸ್ ಆದ ಅಸಲಿ ಪ್ಯಾನ್ ಇಂಡಿಯಾ ಸಿನಿಮಾ. ಕೇವಲ ಡಬ್ ಮಾಡದೆ ಹಲವು ಭಾಷೆಗಳಲ್ಲಿ ಬೇರೆ ಬೇರೆ ಕಲಾವಿದರನ್ನೇ ಇಟ್ಟುಕೊಂಡು ಶೂಟ್ ಮಾಡಲಾಗಿತ್ತು. ಆ ಸಮಯದಲ್ಲೇ ಇದರ ಬಜೆಟ್ 10 ಕೋಟಿ ರೂಪಾಯಿ ಮೀರಿತ್ತು. ಈಗ ‘ಶಾಂತಿ ಕ್ರಾಂತಿ’ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ರೀ-ರಿಲೀಸ್ ಮಾಡಬೇಕೆಂಬ ಒತ್ತಾಯ ಸೋಶಿಯಲ್ ಮೀಡಿಯಾದಲ್ಲಿ ಜೋರಾ್ಉದೆ. ಆದರೆ, ಸೋಶಿಯಲ್ ಮೀಡಿಯಾ ಟ್ರೆಂಡ್‌ಗೂ ಮತ್ತು ವಾಸ್ತವದ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ ಎಂಬ ವಿಶ್ಲೇಷಣೆ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾ ಕ್ರೇಜ್…

Read More

TV9 Kannada News Live: ಕರಾವಳಿ, ಮಲೆನಾಡಿಗೆ ಭಾರಿ ಮಳೆ ಅಲರ್ಟ್! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 07 August 2026 Monsoon, Cabinet expansion, winter session, Politics Cinema Latest Updates Online

Breaking News Today Live Updates in Kannada: ದೇಶ ಮತ್ತು ವಿದೇಶಗಳ ಇಂದಿನ ಪ್ರಮುಖ ಸುದ್ದಿಗಳ ಲೈವ್ ಅಪ್ಡೇಟ್ಸ್‌ಗೆ ಸುಸ್ವಾಗತ. ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 7) ಕರಾವಳಿ ಹಾಗೂ ಮಲೆನಾಡಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ, ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರ ಅನುಕೂಲಕ್ಕಾಗಿ ವಿಶೇಷ ‘ಸುಗಮ ದರ್ಶನ’ ನೀತಿಯನ್ನು ಜಾರಿಗೆ ತರಲಾಗಿದೆ. ಇನ್ನು ಅಮೆರಿಕ ಅಧ್ಯಕ್ಷ…

Read More

Sugama Darshan: ಅಯೋಧ್ಯೆಯಲ್ಲಿ ವೃದ್ಧರಿಗೆ ‘ಸುಗಮ ದರ್ಶನ’ ಪಾಸ್; 3 ವರ್ಷದೊಳಗಿನ ಮಕ್ಕಳ ತಾಯಂದಿರಿಗೂ ನೇರ ದರ್ಶನ! – Kannada News | Ayodhya Ram Temple: Sugama Darshana for Elders and Kids, Easy Darshan Policy

ದೇಶಾದ್ಯಂತ ಶ್ರೀರಾಮ ಮಂದಿರಕ್ಕೆ ಪ್ರತಿದಿನ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಶ್ರೀರಾಮ ಜನ್ಮಭೂಮಿ ದೇವಾಲಯ ಟ್ರಸ್ಟ್ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ವೃದ್ಧರು, ಸಣ್ಣ ಮಕ್ಕಳಿರುವ ತಾಯಂದಿರು ಹಾಗೂ ಕುಟುಂಬಗಳಿಗೆ ಯಾವುದೇ ಅಡೆತಡೆಯಿಲ್ಲದೆ ಶ್ರೀರಾಮನ ದರ್ಶನ ಕಲ್ಪಿಸಲು ವಿಶೇಷ ‘ಸುಗಮ ದರ್ಶನ’ ನೀತಿಯನ್ನು ಜಾರಿಗೆ ತರಲಾಗಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಸುದೀರ್ಘ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯುವ ಭಕ್ತರ ಶ್ರಮ ತಪ್ಪಲಿದ್ದು, ಎಲ್ಲರಿಗೂ ಶಾಂತಿಯುತ ಹಾಗೂ ಆರಾಮದಾಯಕವಾಗಿ ಶ್ರೀರಾಮನ ದರ್ಶನ ಪಡೆಯಲು ಹಾದಿ ಸುಗಮವಾಗಿದೆ. ಹಿರಿಯ ನಾಗರಿಕರಿಗೆ ಕೇವಲ…

Read More

ಲೈಂಗಿಕ ದೌರ್ಜನ್ಯಕ್ಕೂ ಮುನ್ನ ಆಕೆ ಬಳಿ ನಾನು ನಿನ್ನ ಬಾಸ್, ನಾನು ಏನು ಬೇಕಿದ್ರೂ ಮಾಡಬಹುದು ಎಂದಿದ್ದ ತರುಣ್ ತೇಜ್​ಪಾಲ್ – Kannada News | ‘I’m Your Boss’: Tarun Tejpal’s Conversation Referenced in Court Verdict Draws Attention

ಪಣಜಿ, ಆಗಸ್ಟ್​ 07: ಗೋವಾದ ಪಂಚತಾರಾ ಹೋಟೆಲ್​ ಒಂದರ ಲಿಫ್ಟ್​ನಲ್ಲಿ ತಮ್ಮ ಉದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕೆ ಸಂಸ್ಥಾಪಕ ಹಾಗೂ ಮಾಜಿ ಸಂಪಾದಕ ತರುಣ್ ತೇಜ್​ಪಾಲ್(Tarun Tejpal)​ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಘಟನೆ ನಡೆದಿದ್ದು, 2013ರಲ್ಲಿ, ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌ಗೆ ಪ್ರಾಸಿಕ್ಯೂಷನ್ ಸಲ್ಲಿಸಿದ ಸಾಕ್ಷ್ಯಾಧಾರಗಳ ಪೈಕಿ, ಘಟನೆಯ ನಂತರ ತೇಜ್‌ಪಾಲ್ ಸಂತ್ರಸ್ತೆಗೆ ಬರೆದಿದ್ದ ಕ್ಷಮೆಯಾಚನೆಯ ಇ-ಮೇಲ್ ಈ ಐತಿಹಾಸಿಕ ತೀರ್ಪಿಗೆ ಅತ್ಯಂತ ಪ್ರಮುಖ ತಿರುವಾಯಿತು….

Read More

ಬೆಂಗಳೂರಿನಲ್ಲಿ ಐದು ದಿನಗಳಲ್ಲಿ 4000 ಟನ್ ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ವೇಗ – Kannada News | Bengaluru Clears 4,000 Tonnes of Construction Waste in Five Days Under Freedom From Waste Campaign

ಸಾಂದರ್ಭಿಕ ಚಿತ್ರImage Credit source: Indian Institute for Human Settlements ಬೆಂಗಳೂರು, ಆಗಸ್ಟ್ 7: ಬೆಂಗಳೂರು ಉತ್ತರ ನಗರ ಪಾಲಿಕೆ (BNCC) ಮತ್ತು ಬೆಂಗಳೂರು ದಕ್ಷಿಣ ನಗರ ಪಾಲಿಕೆ (BSCC) ಜಂಟಿಯಾಗಿ ನಡೆಸುತ್ತಿರುವ ‘ತ್ಯಾಜ್ಯದಿಂದ ಸ್ವಾತಂತ್ರ್ಯ (Freedom From Waste)’ ಅಭಿಯಾನದಡಿ ಕಳೆದ ಐದು ದಿನಗಳಲ್ಲಿ ಸುಮಾರು 4,000 ಟನ್ ಕಟ್ಟಡ ನಿರ್ಮಾಣ ಮತ್ತು ತೆರವು (Construction & Demolition – C&D) ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಈ ಪೈಕಿ ಬೆಂಗಳೂರು ಉತ್ತರ ನಗರ ಪಾಲಿಕೆ 2,500…

Read More

ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು: ಸಿಸಿಟಿವಿಯಲ್ಲಿ ಸೆರೆಯಾಯ್ತು ಗಜಪಡೆಯ ದಾಂಧಲೆ! – Kannada News | Viral Video: Wild Elephants Destroy Farms, Carry Away Entire Coconut Tree in Gudalur

ಚಾಮರಾಜನಗರ, ಆಗಸ್ಟ್ 07: ಗಡಿ ಜಿಲ್ಲೆ ಚಾಮರಾಜನಗರಕ್ಕೆ ಹೊಂದಿಕೊಂಡಂತಿರುವ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗೂಡಲೂರಿನಲ್ಲಿ ಕಾಡಾನೆಗಳ ಹಿಂಡು ರೈತರ ಜಮೀನಿಗೆ ಲಗ್ಗೆ ಇಟ್ಟು ಭಾರಿ ದಾಂಧಲೆ ನಡೆಸಿವೆ. ಆಹಾರ ಅರಸಿ ಬಂದ ಪುಂಡಾನೆಗಳು ತೆಂಗಿನ ಮರಗಳನ್ನೇ ಬುಡಸಮೇತ ಕಿತ್ತು, ಗೋನೆ ಸಮೇತ ಹೊತ್ತೊಯ್ದಿರುವ ಆಘಾತಕಾರಿ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿನಿಮೀಯ ಶೈಲಿಯಲ್ಲಿ ಎಳನೀರನ್ನು ಕಾಲಿನಿಂದ ತುಳಿದು ಕುಡಿದ ಸಲಗಗಳು, ಬಳಿಕ ಮರವನ್ನೇ ಹೊತ್ತು ಸಾಗಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್…

Read More

ಅಂದುಕೊಂಡಿದ್ದೇ ಒಂದು, ಆಗಿದ್ದೇ ಇನ್ನೊಂದು; ವಿಜಯ್ ಭೇಟಿ ಬಗ್ಗೆ ಮಾತನಾಡಿದ ನಿರ್ಮಾಪಕಿ – Kannada News | Why Bigil Producer Archana Kalpathi Avoided Meeting Thalapathy Vijay For Years

ತಮಿಳು ಚಿತ್ರರಂಗದ ದಳಪತಿ ವಿಜಯ್ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದ ಸೂಪರ್ ಸ್ಟಾರ್. ಅವರ ಸರಳತೆ ಮತ್ತು ಶಿಸ್ತು ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಆದರೆ ಇಂತಹ ನಟನನ್ನು ಭೇಟಿಯಾಗಲು ಪ್ರಸಿದ್ಧ ನಿರ್ಮಾಪಕಿ ಅರ್ಚನಾ ಕಲ್ಪತಿ ವರ್ಷಗಳ ಕಾಲ ಹಿಂಜರಿದಿದ್ದರು. ಆ ಕುತೂಹಲಕಾರಿ ಸಂಗತಿಯನ್ನು ಅವರು ಈಗ ಮುಕ್ತವಾಗಿ ಹಂಚಿಕೊಂಡಿದ್ದಾರೆ. ಅರ್ಚನಾ ಕಲ್ಪತಿ ಅವರು ಎಜಿಎಸ್ ಎಂಟರ್‌ಟೇನ್‌ಮೆಂಟ್ ಸಂಸ್ಥೆಯ ಸಿಇಒ ಆಗಿದ್ದಾರೆ. ಅವರ ತಂದೆ ಕಲ್ಪತಿ ಎಸ್ ಅಘೋರಂ ಅವರಿಗೆ ವಿಜಯ್ ಜೊತೆ ಉತ್ತಮ ಒಡನಾಟವಿತ್ತು. ವಿಜಯ್ ಅವರ ಮನೆಗೆ…

Read More

ಆಗಸ್ಟ್ 8ರಿಂದ ಜೀ ಕನ್ನಡದಲ್ಲಿ ‘ಹಳ್ಳಿ ಪವರ್ ರಿಲೋಡೆಡ್’; ಇಲ್ಲಿದೆ ಸ್ಪರ್ಧಿಗಳ ವಿವರ – Kannada News | Halli Power Reloaded on Zee Kannada: Akul Balaji to Host New Rural Reality Show From August 8

ತನ್ನ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಕನ್ನಡಿಗರ ಮನಗೆದ್ದಿರುವ ಜೀ ಕನ್ನಡ ವಾಹಿನಿ, ಈಗ ‘ಹಳ್ಳಿ ಪವರ್ ರಿಲೋಡೆಡ್’ ಎಂಬ ಅತ್ಯಂತ ಕುತೂಹಲಕಾರಿ ಹಾಗೂ ವಿನೂತನ ರಿಯಾಲಿಟಿ ಶೋವನ್ನು ಪ್ರೇಕ್ಷಕರ ಮುಂದೆ ತರಲು ಸಜ್ಜಾಗಿದೆ. ಕರ್ನಾಟಕದ ಗ್ರಾಮೀಣ ಸೊಗಡು, ಕಲ್ಚರ್ ಮತ್ತು ಹಳ್ಳಿಯ ಸವಾಲುಗಳನ್ನು ಅನಾವರಣಗೊಳಿಸುವ ಈ ಶೋ, ಆಗಸ್ಟ್ 8ರಿಂದ ಪ್ರಸಾರ ಕಾಣಲಿದೆ. ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9:00 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಈ ಕಾರ್ಯಕ್ರಮ ಜೀ ಕನ್ನಡದಲ್ಲಿ ಮೂಡಿಬರಲಿದೆ….

Read More

ಶಸ್ತ್ರಾಸ್ತ್ರ ಕೊರತೆ ವರದಿಗೆ ಟ್ರಂಪ್ ಕೆಂಡಾಮಂಡಲ: ವಾಷಿಂಗ್ಟನ್ ಪೋಸ್ಟ್ ವರದಿಯನ್ನು ದೇಶದ್ರೋಹ ಎಂದ ಯುಎಸ್ ಅಧ್ಯಕ್ಷ – Kannada News | Trump Blasts Washington Post as ‘Treasonous’ Amidst Iran Nuclear Tensions

ವಾಷಿಂಗ್ಟನ್, ಆಗಸ್ಟ್​ 07: ಇರಾನ್ ಜೊತೆಗಿನ ಮಿಲಿಟರಿ ಸಂಘರ್ಷವು ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಇರಾನ್(Iran) ಹೆಚ್ಚು ಕಾಲ ಈ ಯುದ್ಧವನ್ನು ಮುಂದುವರೆಸಲು ಸಾಧ್ಯವಿಲ್ಲ ಎಂದಿರುವ ಟ್ರಂಪ್, ಯಾವುದೇ ಕಾರಣಕ್ಕೂ ಟೆಹ್ರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ ಶ್ವೇತಭವನದ ಓವಲ್ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹಾರ್ಮುಜ್ ಜಲಸಂಧಿಯ ಭದ್ರತೆ ಹಾಗೂ ಯುಎಸ್ ಮಿಲಿಟರಿ ಶಸ್ತ್ರಾಸ್ತ್ರ ಕೊರತೆಯ ಕುರಿತು ಹರಿದಾಡುತ್ತಿರುವ ವರದಿಗಳ ಬಗ್ಗೆ ಸ್ಪಷ್ಟನೆ…

Read More