Video: ಕನಸನ್ನು ಬೆನ್ನಟ್ಟಿ ಹೋದ ವ್ಯಕ್ತಿ; ಇಂದು ಏರ್ ಇಂಡಿಯಾದಲ್ಲಿ ಸ್ವಚ್ಛತಾ ಸಿಬ್ಬಂದಿ – Kannada News | The story of Air India’s cleaning staff’s dream come true

ಪ್ರತಿಯೊಬ್ಬರಿಗೂ ಚಿಕ್ಕಂದಿನಿಂದಲೂ ಕನಸುಗಳಿರುತ್ತವೆ. ಸಣ್ಣ ಮಕ್ಕಳನ್ನು ಕೇಳಿದರೆ ದಕ್ಷ ಅಧಿಕಾರಿಯಾಗಬೇಕು, ವೈದ್ಯನಾಗಬೇಕು ಹೀಗೆ ತಮ್ಮ ಕನಸುಗಳನ್ನು ಹೇಳುತ್ತಾರೆ. ಆದರೆ ಅಂದುಕೊಂಡಿದ್ದನ್ನು ಸಾಧಿಸುವುದು, ಕೆಲಸ ಗಿಟ್ಟಿಸಿಕೊಳ್ಳೋದು ಹೇಳಿದ್ದಷ್ಟು ಸುಲಭವಲ್ಲ. ಇದೀಗ ಏರ್ ಇಂಡಿಯಾದಲ್ಲಿ (Air India) ಕ್ಲೀನರ್ ಆಗಿ ಕೆಲಸ ಮಾಡುವ ವ್ಯಕ್ತಿ ತಮ್ಮ ಕನಸಿನ ಉದ್ಯೋಗ ಗಿಟ್ಟಿಸಿಕೊಂಡು ಖುಷಿಯಿಂದ ಕೆಲಸ ಮಾಡುತ್ತಿದ್ದಾರೆ. ಏರ್ ಇಂಡಿಯಾದ ಸ್ವಚ್ಛತಾ ಸಿಬ್ಬಂದಿಯೊಬ್ಬರ ಹೃದಯಸ್ಪರ್ಶಿ ವಿಡಿಯೋ  ನೆಟ್ಟಿಗರ ಹೃದಯ ಗೆದ್ದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಕೆಲಸದ ಮೇಲೆ ಅವರಿಗಿರುವ ಪ್ರೀತಿಯನ್ನು ಮೆಚ್ಚಿಕೊಂಡಿದ್ದಾರೆ.

ವರ್ಷ (Vursha) ಎಂಬ ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕ್ಲಿಪಿಂಗ್ ಉದ್ಯೋಗಿಯ ಜೀವನ ಹಾಗೂ ತಮ್ಮ ಕನಸಿನ ಕೆಲಸದ ಮೇಲಿರುವ ಪ್ರೀತಿಯನ್ನು ಎತ್ತಿ ತೋರಿಸುತ್ತಿದೆ. ಈ ಕ್ಲಿಪ್ ನಲ್ಲಿ ಯಾವುದೂ ಸುಲಭವಲ್ಲ, ಆದರೆ ಎಲ್ಲವೂ ಸಾಧ್ಯ ಎಂದು ಬರೆಯಲಾಗಿದೆ.

ವೈರಲ್‌ ವಿಡಿಯೋ ಇಲ್ಲಿದೆ

ವರ್ಷ ಅವರು ಆಕಸ್ಮಿಕವಾಗಿ  ಏರ್‌ ಇಂಡಿಯಾದ ಸ್ವಚ್ಫತಾ ಸಿಬ್ಬಂದಿಯನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಕೆಲಸದ ಬಗ್ಗೆ ಮಾತನಾಡಿದ ರೀತಿ ನನ್ನನ್ನು ಬೆರಗುಗೊಳಿಸಿತು. ಇಷ್ಟು ಆತ್ಮವಿಶ್ವಾಸದಿಂದ ಮಾತನಾಡುತ್ತಿದ್ದ ಸ್ವಚ್ಛತಾ ಸಿಬ್ಬಂದಿಯನ್ನು ನಾನು ಈಗಷ್ಟೇ ಭೇಟಿಯಾದೆ. ಏರ್ ಇಂಡಿಯಾ ಜೊತೆ ಕೆಲಸ ಮಾಡಲು ಇಷ್ಟವಿದೆಯೇ ಎಂದು ನಾನು ಕೇಳಿದಾಗ, ಅವರು ತಮ್ಮ ವರ್ಷಗಳ ಅನುಭವವನ್ನು ಹಂಚಿಕೊಂಡು, ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ಶ್ಲಾಘಿಸಿದರು ಎಂದಿದ್ದಾರೆ.

ಏರ್ ಇಂಡಿಯಾಗೆ ಸೇರುವುದು ಅವರ ಕನಸಾಗಿತ್ತು. ಅವರನ್ನು ಭೇಟಿಯಾಗಿದ್ದು ಸಂತೋಷವಾಗಿದೆ. ಜೀವನದ ಉದ್ದೇಶ ಸಂತೋಷವಾಗಿರುವುದು ಹೇಗೆ ಎಂಬುದಕ್ಕೆ ಅವರು ಅತ್ಯುತ್ತಮ ಉದಾಹರಣೆ. ನೀವು ತೆಗೆದುಕೊಳ್ಳಬಹುದಾದ ದೊಡ್ಡ ಸಾಹಸವೆಂದರೆ ನಿಮ್ಮ ಕನಸುಗಳಂತೆ ಜೀವನವನ್ನು ನಡೆಸುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಪೊರೇಟ್ ಕೆಲಸದ ಸ್ಥಳಗಳಲ್ಲಿನ ಐದು ವಿಷಕಾರಿ ಅಂಶಗಳನ್ನು ಟೀಕಿಸಿದ ಸ್ಟಾರ್ಟ್ಅಪ್ ಸಂಸ್ಥಾಪಕಿ

ಈ ವಿಡಿಯೋ ನವತ್ತೈದು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪುಸ್ತಕದ ಮುಖಪುಟ ನೋಡಿ ಎಂದಿಗೂ ನಿರ್ಣಯಿಸಬೇಡಿ ಎಂದಿದ್ದಾರೆ. ಇನ್ನೊಬ್ಬರು, ನೀವು ದೊಡ್ಡ ಅಪ್ಪುಗೆಗೆ ಅರ್ಹರು ಎಂದು ಹೇಳಿದ್ದಾರೆ. ಮತ್ತೊಬ್ಬರು, ಕನಸು ನನಸಾಗಿಸಿಕೊಂಡು ಖುಷಿಯಿಂದ ಇರುವ ನೀವೇ ನಮಗೆ ಸ್ಫೂರ್ತಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:12 pm, Mon, 15 June 26

Source link

ಇಂದಿರಾ ಗಾಂಧಿ ಬದುಕಿದ್ದರೆ ಬಿಜೆಪಿಗೆ ನಿಷೇಧ ಹೇರುತ್ತಿದ್ದರು; ವಿವಾದಕ್ಕೀಡಾದ ಅಶೋಕ್ ಗೆಹ್ಲೋಟ್ – Kannada News | Indira Gandhi would have banned BJP Congress Leader Ashok Gehlot sparks Controversy

ಜೈಪುರ, ಜೂನ್ 15: “ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಇಂದು ಬದುಕಿದ್ದರೆ ಬಿಜೆಪಿಯಂತಹ ಕೋಮು ರಾಜಕಾರಣ ಮಾಡುವ ಪಕ್ಷವನ್ನು ನಿಷೇಧಿಸುತ್ತಿದ್ದರು” ಎಂದು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಸ್ತುತ ಆಡಳಿತಾರೂಢ ಬಿಜೆಪಿ ಸೃಷ್ಟಿಸಿರುವ ವಾತಾವರಣ ಅತ್ಯಂತ ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಜೈಪುರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್, ದೇಶದ ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. “ನನ್ನ 50 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಭಯಾನಕ ಮತ್ತು ಅಪಾಯಕಾರಿ ವಾತಾವರಣವನ್ನು ನಾನು ಎಂದೂ ನೋಡಿಲ್ಲ. ಭಾರತದ ಸಂವಿಧಾನವು ಯಾವುದೇ ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಲು ಅನುಮತಿ ನೀಡುವುದಿಲ್ಲ. ಆದರೆ, ಬಿಜೆಪಿ ಕೇವಲ ಹಿಂದುತ್ವದ ಹೆಸರಿನಲ್ಲಿ ಜನರನ್ನು ಪ್ರಚೋದಿಸಿ, ಧ್ರುವೀಕರಣ ಮಾಡುವ ಮೂಲಕ ದೇಶವನ್ನು ದುರ್ಬಲಗೊಳಿಸುತ್ತಿದೆ. ಇಂದಿರಾ ಗಾಂಧಿಯವರಂತಹ ದೃಢ ನಾಯಕಿ ಇಂದು ಬದುಕಿದ್ದರೆ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಯಂತಹ ಪಕ್ಷದ ಮೇಲೆ ಖಂಡಿತವಾಗಿಯೂ ನಿಷೇಧ ಹೇರುತ್ತಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಎನ್‌ಸಿಪಿಐ’ ಜೊತೆ 20 ಟಿಎಂಸಿ ಬಂಡಾಯ ಸಂಸದರ ವಿಲೀನ, ಸಂಸತ್ತಿನಲ್ಲಿ ಹೊಸ ಬಣದ ಉದಯ

“ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಆದರೆ, ಖಲಿಸ್ತಾನ್ ರಚನೆಯಾಗಲು ಬಿಡಲಿಲ್ಲ. ರಾಜೀವ್ ಗಾಂಧಿ ದೇಶದ ಏಕತೆಗಾಗಿ ಹುತಾತ್ಮರಾದರು. ಆದರೆ, ಬಿಜೆಪಿ ಸರ್ಕಾರವು ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಧ್ವಂಸಗೊಳಿಸುತ್ತಿದೆ” ಎಂದು ಅಶೋಕ್ ಗೆಹ್ಲೋಟ್ ನೇರ ಆರೋಪ ಮಾಡಿದರು. “ಜಾರಿ ನಿರ್ದೇಶನಾಲಯ (ED), ಸಿಬಿಐ (CBI) ಮತ್ತು ಆದಾಯ ತೆರಿಗೆ ಇಲಾಖೆಗಳನ್ನು (IT) ವಿರೋಧ ಪಕ್ಷಗಳ ನಾಯಕರನ್ನು ಮಟ್ಟಹಾಕಲು ರಾಜಕೀಯ ಅಸ್ತ್ರಗಳಾಗಿ ಬಳಸಲಾಗುತ್ತಿದೆ. ನ್ಯಾಯಾಂಗದ ಮೇಲೂ ಒತ್ತಡ ಹೇರಲಾಗುತ್ತಿದೆ. ದೇಶದ ಚುನಾವಣಾ ಆಯೋಗವು ಸ್ವತಂತ್ರವಾಗಿ ಕೆಲಸ ಮಾಡುವ ಬದಲು, ಸಂಪೂರ್ಣವಾಗಿ ಬಿಜೆಪಿಯ ‘ಏಜೆಂಟ್’ ತರಹ ವರ್ತಿಸುತ್ತಿದೆ” ಎಂದು ಅವರು ಆರೋಪಿಸಿದರು.

ಲೋಕಸಭೆಯಲ್ಲಿ ಬಿಜೆಪಿಯ ಒಬ್ಬನೇ ಒಬ್ಬ ಮುಸ್ಲಿಂ ಸಂಸದರಿಲ್ಲದಿರುವುದನ್ನು ಪ್ರಶ್ನಿಸಿದ ಅಶೋಕ್ ಗೆಹ್ಲೋಟ್, ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಶಹನವಾಜ್ ಹುಸೇನ್ ಅವರಂತಹ ಹಿರಿಯ ಮುಸ್ಲಿಂ ನಾಯಕರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ

“ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಸ್ಥಾನಗಳಿವೆ, ಆದರೂ ನೀವು ಒಬ್ಬ ಮುಸ್ಲಿಂ ಅಭ್ಯರ್ಥಿಗೆ ಒಂದೇ ಒಂದು ಸ್ಥಾನವನ್ನು ನೀಡುವುದಿಲ್ಲ, ಆದರೂ ನೀವು ನಿಮ್ಮನ್ನು ರಾಷ್ಟ್ರೀಯ ರಾಜಕೀಯ ಪಕ್ಷ ಎಂದು ಕರೆದುಕೊಳ್ಳುತ್ತೀರಿ! ನೀವು ದೇಶವಾಸಿಗಳಿಗೆ ಹೆಮ್ಮೆ ಪಡಲು 5 ಸ್ಥಾನಗಳನ್ನು ನೀಡಬಹುದಿತ್ತು. ಆದರೆ ನೀವು ‘ನಾವು ಸಂಪೂರ್ಣವಾಗಿ ಹಿಂದುತ್ವ ಪಕ್ಷ’ ಎಂದು ತೋರಿಸಲು ಬಯಸುತ್ತೀರಿ. ಆ ಬಡ ಮುಖ್ತಾರ್ ಅಬ್ಬಾಸ್ ನಖ್ವಿ ಇಷ್ಟು ದಿನ ಬಿಜೆಪಿಯ ಅದ್ಭುತ ವಕೀಲರಾಗಿದ್ದರು. ಶಹನವಾಜ್ ಹುಸೇನ್ ಸಚಿವರಾಗಿದ್ದರು. ಆದರೆ ಇಂದು ನೀವು ಎಲ್ಲರನ್ನೂ ಮನೆಗೆ ಕಳುಹಿಸಿದ್ದೀರಿ” ಎಂದು ಗೆಹ್ಲೋಟ್ ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರ್ಕಾರಿ ಶಾಲೆಯಲ್ಲಿ ಓದಿದ 30 ಸಾವಿರ ಮಕ್ಕಳು ಅತಂತ್ರ! ಸರ್ಕಾರದ ಎಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು? – Kannada News | Karnataka English Medium School: 30,000 Students Struggle for Class 8 Admissions

ಪ್ರಾತಿನಿಧಿಕ ಚಿತ್ರImage Credit source: deccanherald

ಬೆಂಗಳೂರು, ಜೂನ್​​ 15: ಸರ್ಕಾರಿ ಶಾಲೆಯ (government school) ಮಕ್ಕಳಿಗೂ ಇಂಗ್ಲಿಷ್ ಮೀಡಿಯಂ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಆರಂಭವಾದ ಯೋಜನೆಯೊಂದು, ಈಗ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ದೂಡಿದೆ. ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ (English Medium) ಓದಿದ ರಾಜ್ಯದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಈಗ ಮುಂದೇನು ಮಾಡಬೇಕು ತೋಚದೆ ಅತಂತ್ರರಾಗಿದ್ದಾರೆ. ಜೂನ್ ತಿಂಗಳು ಅರ್ಧ ಕಳೆದರೂ ಶಿಕ್ಷಣ ಇಲಾಖೆ ಮಾತ್ರ ಈ ಗೊಂದಲಕ್ಕೆ ಇನ್ನೂ ಮುಕ್ತಿ ನೀಡಿಲ್ಲ.

ಮುಖ್ಯಾಂಶಗಳು

  • ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳ ಮಕ್ಕಳ ಸ್ಥಿತಿ ಅತಂತ್ರ
  • ಇದುವರೆಗೂ 8ನೇ ತರಗತಿ ಇಂಗ್ಲಿಷ್​ ‌ಮೀಡಿಯಂ ಪ್ರಾರಂಭಿಸದ ಸರ್ಕಾರ
  • ವಿದ್ಯಾರ್ಥಿಗಳ ಪೋಷಕರು ಅಸಮಾಧಾನ

30 ಸಾವಿರ ವಿದ್ಯಾರ್ಥಿಗಳ ಸ್ಥಿತಿ ಅತಂತ್ರ

ಕಳೆದ 2018-19ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರವು ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಆಯ್ದ 1001 ಸರ್ಕಾರಿ ಶಾಲೆಗಳಲ್ಲಿ 1ರಿಂದ 7ನೇ ತರಗತಿವರೆಗೆ ಇಂಗ್ಲಿಷ್ ಮಾಧ್ಯಮವನ್ನು ಆರಂಭಿಸಿತ್ತು. ಖಾಸಗಿ ಶಾಲೆಗಳ ಪೈಪೋಟಿಯ ನಡುವೆ ಹೆತ್ತವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದ್ದರು. ಅದರಂತೆ ಈ 1001 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂನಲ್ಲಿ ಓದಿದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಈಗ ಯಶಸ್ವಿಯಾಗಿ 7ನೇ ತರಗತಿ ಪಾಸಾಗಿದ್ದಾರೆ. ಆದರೆ, ಅಸಲಿ ಸಮಸ್ಯೆ ಇಲ್ಲಿಂದ ಆರಂಭವಾಗಿದೆ.

ಇದನ್ನೂ ಓದಿ: ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ!: ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ

7ನೇ ತರಗತಿ ಮುಗಿಸಿದ ಈ ಮಕ್ಕಳಿಗೆ ಮುಂದಿನ 8ನೇ ತರಗತಿಯಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಮುಂದುವರಿಸಲು ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಪರಿಣಾಮ, 1001 ಶಾಲೆಗಳ 30 ಸಾವಿರ ವಿದ್ಯಾರ್ಥಿಗಳು ಈಗ 8ನೇ ತರಗತಿಗೆ ಎಲ್ಲಿ ಸೇರಬೇಕು ಎಂಬ ಗೊಂದಲದಲ್ಲಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲೇ ಓದು ಮುಂದುವರಿಸಬೇಕೆಂದರೆ ಪೋಷಕರು ಲಕ್ಷ ಲಕ್ಷ ಹಣ ಕೊಟ್ಟು ಖಾಸಗಿ ಶಾಲೆಗಳಿಗೆ ಸೇರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇಲ್ಲದಿದ್ದರೆ, ಇಷ್ಟು ವರ್ಷ ಇಂಗ್ಲಿಷ್‌ನಲ್ಲಿ ಓದಿದ ಮಕ್ಕಳು ಮತ್ತೆ ಪುನಃ ಕನ್ನಡ ಮಾಧ್ಯಮಕ್ಕೆ ಹಿಂತಿರುಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿ ಜೂನ್ ಅರ್ಧ ತಿಂಗಳು ಕಳೆದಿದ್ದರೂ ಶಿಕ್ಷಣ ಇಲಾಖೆ ಮಾತ್ರ ಈ ಗಂಭೀರ ಸಮಸ್ಯೆಗೆ ಯಾವುದೇ ಪರಿಹಾರ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ: ನಿಮಗೆ ಪುಣ್ಯ ಬರುತ್ತದೆ ಎಂದ ಪೋಷಕರು 

ಇನ್ನು ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಪೋಷಕರೊಬ್ಬರು ಈ ಬಗ್ಗೆ ಮಾತನಾಡಿದ್ದು, 7ನೇ ತರಗತಿವರೆಗೂ ಮಕ್ಕಳು ಇಂಗ್ಲಿಷ್​​ನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. 8ನೇ ತರಗತಿ ಆರಂಭ ಮಾಡದಿದ್ದರೆ ವಿದ್ಯಾರ್ಥಿಗಳು ಎಲ್ಲಿ ಓದಬೇಕು, ಎಲ್ಲಿಗೆ ಹೋಗಬೇಕು. ಯಾವುದೇ ಕಾರಣಕ್ಕೂ ಇದನ್ನು ಬಂದ್ ಮಾಡಬಾರದು. ಸರ್ಕಾರಿ ಶಾಲೆಗಳು, ಆಸ್ಪತ್ರೆಗಳನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಸುಮಾರು 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು 7ನೇ ತರಗತಿ ಪಾಸ್ ಆಗಿ 8ನೇ ತರಗತಿಗೆ ಬಂದಿದ್ದಾರೆ. ಸರ್ಕಾರ ದ್ವಂದ್ವ ನೀತಿ ಅನುಸರಿಸುತ್ತಿದೆ. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ನಿಮಗೆ ಪುಣ್ಯ ಬರುತ್ತದೆ. ದಯವಿಟ್ಟು ಇಂಗ್ಲಿಷ್ ‌ಮಾಧ್ಯಮವನ್ನು ಬಂದ್‌ ಮಾಡಬಾರದು ಎಂದು‌ ಪೋಷಕರು ಮನವಿ ಮಾಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಶಾಲೆಗಳಿಗೆ ಸಮಸ್ಯೆ ಏದುರಾಗಿದೆ?

  • ಬಾಗಲಕೋಟೆ-28
  • ಬಳ್ಳಾರಿ-43
  • ಬೆಳಗಾವಿ-74
  • ಬೆಂಗಳೂರು -144
  • ಬೀದರ್ -26
  • ಚಾಮರಾಜನಗರ-17
  • ಚಿಕ್ಕಬಳ್ಳಾಪುರ-20
  • ಚಿಕ್ಕಮಗಳೂರು-21
  • ಚಿತ್ರದುರ್ಗ- 24
  • ದಕ್ಷಿಣ ಕನ್ನಡ-48
  • ದಾವಣಗೆರೆ -31
  • ಧಾರವಾಡ- 28
  • ಗದಗ-17
  • ಹಾಸನ- 38
  • ಹಾವೇರಿ-25
  • ಕಲಬುರಗಿ-39
  • ಕೊಡಗು-08
  • ಕೋಲಾರ-24
  • ಕೊಪ್ಪಳ-20
  • ಮಂಡ್ಯ-32
  • ಮೈಸೂರು-4
  • ರಾಯಚೂರು-33
  • ರಾಮನಗರ-24
  • ಶಿವಮೊಗ್ಗ-30
  • ತುಮಕೂರು-49
  • ಉಡುಪಿ-24
  • ಉತ್ತರ ‌ಕನ್ನಡ-27
  • ವಿಜಯಪುರ-38
  • ಯಾದಗಿರಿ-23

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

RSS ಬಗ್ಗೆ ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ಸಂಸದ ತೇಜಸ್ವಿ ಸೂರ್ಯ ಖಡಕ್ ಉತ್ತರ – Kannada News | BJP MP Tejaswi Surya Hits back at Miister Priyank Kharge over Letter to Mohan bhagwat about RSS Details

ನವದೆಹಲಿ, (ಜೂನ್ 15): ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಮೋಹನ್ ಭಾಗವತ್ (Mohan bhagwat) ಅವರಿಗೆ ಪತ್ರ ಬರೆದು ಆರ್​​​ಎಸ್​​ಎಸ್​​​ನ ನೋಂದಣಿ, ಆದಾಯ, ಆಸ್ತಿಪಾಸ್ತಿ ಸೇರಿದಂತೆ ಇತರೆ ವಿವರ ನೀಡುವಂತೆ ಆಗ್ರಹಿಸಿದ್ದಾರೆ. ಇನ್ನು ಇದಕ್ಕೆ ದೆಹಲಿಯಲ್ಲಿಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ(Tejaswi Surya) ಪ್ರತಿಕ್ರಿಯಿಸಿದ್ದು, ಅವರ ಪ್ರಶ್ನೆಗಳಿಗೆ ಆರ್‌ಎಸ್‌ಎಸ್‌ನವರು ಕಾನೂನಾತ್ಮಕವಾಗಿ ಉತ್ತರಿಸ್ತಾರೆ. ಸಂಘ ಸಂಸ್ಥೆ ಸ್ಥಾಪಿಸುವ ಹಕ್ಕನ್ನು ಸಂವಿಧಾನ ನೀಡಿದೆ. ಕೇವಲ ಆರ್‌ಎಸ್‌ಎಸ್‌ಗೆ ಮಾತ್ರ ಅವಕಾಶ ನೀಡಿಲ್ಲ. ಗ್ರಾಮೀಣ ಭಾಗದ ನಾಲ್ವರು ಯುವಕರು ಸೇರಿ ಸಂಘ ಕಟ್ಟಬಹುದು. ಸಂವಿಧಾನ ಇಲ್ಲದಾಗಲೂ, ಬ್ರಿಟಿಷರ ಕಾಲದಲ್ಲೂ ಕೆಲಸ ಮಾಡಿದೆ. ಸಂಘದ ಆಸ್ತಿ, ವಹಿವಾಟುಗಳು ನಿಯಮಗಳ ಅಡಿಯಲ್ಲಿ ನಡೆಯುತ್ತಿವೆ. ಸಚಿವ ಪ್ರಿಯಾಂಕ್ ಖರ್ಗೆ ಇದೇ ಮೊದಲ ಅಲ್ಲ ಆಡಿಟ್ ಕೇಳ್ತಿರೋದು. ಐಟಿ-ಬಿಟಿ ಇಲಾಖೆಯಲ್ಲಿ ರಿಸರ್ಚ್ ಇನೋವೇಷನ್ ಮಾಡಬೇಕಿತ್ತು. ಆದರೆ ಪ್ರಿಯಾಂಕ್ ಖರ್ಗೆ ಇಲ್ಲಿ ರಿಸರ್ಚ್ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ನಾನೇ ಮೊದಲು ನೋಂದಣಿ ಕೇಳುತ್ತಿದ್ದೇನೆ ಅಂದುಕೊಂಡರೆ ಅದು ತಪ್ಪು.ಹಿಂದೆ ಪಥಸಂಚಲನಕ್ಕೆ ವಿರೋಧಿಸಿದರು, ಕೋರ್ಟ್ ಅನುಮತಿ ನೀಡಿತು. ಮೊದಲು 500 ಸೇರುವ ಜಾಗದಲ್ಲಿ ವಿರೋಧದ ಬಳಿಕ 5 ಸಾವಿರ ಜನ ಸೇರಿದರು. ವಿರೋಧಿಸಿದಷ್ಟು ಅದರ ಚಿಂತನೆಗಳು ಬಲಿಷ್ಠವಾಗುತ್ತವೆ, ಇದಕ್ಕೆ ಸ್ವಾಗತಿಸುತ್ತೇನೆ. ದೇಶದ ಸಂವಿಧಾನದ ಅಡಿಯಲ್ಲಿ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ. ಸಂವಿಧಾನದ ಮೇಲೆ ಎಂದು ಕೆಲಸ ಮಾಡುವ ಜನರು, ಸಂಘಟನೆ ಯಾರು ಎಂದು ಗೊತ್ತಿದೆ, ನೋಂದಣಿ ಬಗ್ಗೆ ಚರ್ಚೆ ಆಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಾನೂನು ಸಲಹೆ ಪಡೆಯಬೇಕಿತ್ತು. ಇದಕ್ಕೆ ಆರ್‌ಎಸ್‌ಎಸ್ ಮತ್ತು ಜನರು ಮುಂದೆ ಉತ್ತರ ಕೊಡುತ್ತಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ

Source link

ವಿಟಮಿನ್ ಬಿ12 ಹೆಚ್ಚು ಅಥವಾ ಕಡಿಮೆಯಾದರೂ ಕ್ಯಾನ್ಸರ್ ಬರುತ್ತದೆಯೇ? ಹೊಸ ಅಧ್ಯಯನ ಹೇಳುವುದೇನು? – Kannada News | Can Too Much Vitamin B12 Increase Cancer Risk? Experts Explain

ದೇಹವನ್ನು ಆರೋಗ್ಯವಾಗಿಡಲು ವಿಟಮಿನ್ ಬಿ12 ಅತ್ಯಂತ ಮುಖ್ಯ. ಆದರೆ ಇತ್ತೀಚಿನ ಒಂದು ಅಧ್ಯಯನವು ವಿಟಮಿನ್ ಬಿ12 (Vitamin B12) ಮಟ್ಟದಲ್ಲಿ ಸರಿಯಾದ ಸಮತೋಲನ ಇಲ್ಲದಿದ್ದರೆ ಕ್ಯಾನ್ಸರ್ ಕಣಗಳ ಬೆಳವಣಿಗೆಯಾಗಬಹುದು, ಇವೆರಡಕ್ಕೂ ಸಂಬಂಧ ಇರಬಹುದು ಎಂಬ ಆತಂಕಕಾರಿ ವಿಷಯವನ್ನು ಬಹಿರಂಗಪಡಿಸಿದೆ. ಈ ವಿಚಾರ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅಧ್ಯಯನದ ಪ್ರಕಾರ, ವಿಟಮಿನ್ ಬಿ12ಗೆ ಸಂಬಂಧಿಸಿದ ಕೆಲವು ಜೀವ ರಾಸಾಯನಿಕ ಪ್ರಕ್ರಿಯೆಗಳು ಕ್ಯಾನ್ಸರ್ ಕಣಗಳು ಬದುಕಿ ಉಳಿಯಲು ಸಹಾಯ ಮಾಡಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ. ಸಾಮಾನ್ಯವಾಗಿ ದೇಹದಲ್ಲಿ ಹಾನಿಗೊಳಗಾದ ಅಥವಾ ವಯಸ್ಸಾದ ಕೋಶಗಳನ್ನು ದೇಹವೇ ನಾಶಪಡಿಸುವ ಪ್ರಕ್ರಿಯೆಯನ್ನು “ಫೆರೋಪ್ಟೋಸಿಸ್” ಎಂದು ಕರೆಯಲಾಗುತ್ತದೆ. ಆದರೆ ಕ್ಯಾನ್ಸರ್ ಕಣಗಳು ಈ ಸಹಜ ಮರಣ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವಲ್ಲಿ ವಿಟಮಿನ್ ಬಿ12 ಸಂಬಂಧಿತ ಕ್ರಿಯೆಗಳು ಸಹಕಾರಿಯಾಗಬಹುದು ಎಂಬುದು ಅಧ್ಯಯನದ ಅಭಿಪ್ರಾಯ.

ಫೆರೋಪ್ಟೋಸಿಸ್ ಎಂದರೇನು?

ಸಾಮಾನ್ಯವಾಗಿ, ಫೆರೋಪ್ಟೋಸಿಸ್ ಎನ್ನುವುದು ದೇಹದ ರಕ್ಷಣಾತ್ಮಕ ವ್ಯವಸ್ಥೆಯ ಒಂದು ಭಾಗ. ಇದು ಹಾನಿಕಾರಕ ಕೋಶಗಳನ್ನು ತೆಗೆದುಹಾಕಿ ಆರೋಗ್ಯ ಕಾಪಾಡುತ್ತದೆ. ಆದರೆ ಕ್ಯಾನ್ಸರ್ ಕೋಶಗಳು ಈ ಪ್ರಕ್ರಿಯೆಯಿಂದ ತಪ್ಪಿಸಿಕೊಂಡರೆ ಅವು ದೇಹದಲ್ಲಿ ವೇಗವಾಗಿ ವೃದ್ಧಿಯಾಗುವ ಸಾಧ್ಯತೆ ಇರುತ್ತದೆ.

ತಜ್ಞರ ಪ್ರಕಾರ, ಮೊಟ್ಟೆ, ಹಾಲು, ಹಾಲು ಉತ್ಪನ್ನಗಳು, ಮಾಂಸ, ಪಪ್ಪು ಧಾನ್ಯಗಳು ಹಾಗೂ ಹಸಿರು ತರಕಾರಿಗಳಲ್ಲಿ ದೊರೆಯುವ ಬಿ12 ದೇಹಕ್ಕೆ ಅಗತ್ಯವಾದ ಪೋಷಕಾಂಶವಾಗಿದೆ. ಇದು ಶಕ್ತಿ ಉತ್ಪಾದನೆ, ನರಗಳ ಆರೋಗ್ಯಕ್ಕೆ ಬಹಳ ಮುಖ್ಯ. ಆದರೆ ವೈದ್ಯರ ಸಲಹೆ ಇಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಬಿ12 ಸಪ್ಲಿಮೆಂಟ್‌ಗಳನ್ನು ಸೇವಿಸುವುದು ಅಪಾಯಕಾರಿಯಾಗಬಹುದು. ಜೊತೆಗೆ ದೀರ್ಘಕಾಲ ಹೈ- ಡೋಸ್ ಸಪ್ಲಿಮೆಂಟ್‌ಗಳನ್ನು ಬಳಸುವುದರಿಂದ ಕೆಲವು ಸಂದರ್ಭಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ವಿಟಮಿನ್ ಬಿ12 ದೇಹಕ್ಕೆ ಅಗತ್ಯವಾದ ಪೋಷಕಾಂಶವಾಗಿದ್ದು ಸಹಜ ಆಹಾರದಿಂದ ದೊರೆಯುವ B12 ಸುರಕ್ಷಿತ. ಆದರೆ ವೈದ್ಯರ ಸಲಹೆ ಇಲ್ಲದೆ ಸಪ್ಲಿಮೆಂಟ್ ಸೇವನೆ ಬೇಡ. ಅಧ್ಯಯನ ಇನ್ನೂ ಆರಂಭಿಕ ಹಂತದಲ್ಲಿದೆ, ಆದ್ದರಿಂದ ಅನಗತ್ಯ ಭಯ ಪಡುವ ಅಗತ್ಯವಿಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ದೀದಿ ನಂಬರ್ 1’ ಶೋಗೆ ರಚನಾ ಬ್ಯಾನರ್ಜಿ ವಿದಾಯ? ಮತ್ತೊಬ್ಬ ನಾಯಕಿಗೆ ಆಫರ್ ನೀಡಿದ ವಾಹಿನಿ – Kannada News | Rachana Banerjee to quit Didi No 1 show Channel approaches another actress

ಬಂಗಾಳಿ ಕಿರುತೆರೆಯ ಅತ್ಯಂತ ಜನಪ್ರಿಯ ‘ದೀದಿ ನಂಬರ್ 1’ (Didi No. 1) ರಿಯಾಲಿಟಿ ಶೋನಿಂದ ನಟಿ ರಚನಾ ಬ್ಯಾನರ್ಜಿ (Rachana Banerjee) ಅವರನ್ನು ಬೇರ್ಪಡಿಸಿ ನೋಡುವುದು ಕಷ್ಟ. ಆದರೆ, ಈಗ ಕೇಳಿಬರುತ್ತಿರುವ ಲೇಟೆಸ್ಟ್ ಸುದ್ದಿಯೊಂದರ ಪ್ರಕಾರ, ರಚನಾ ಬ್ಯಾನರ್ಜಿ ಅವರು ಈ ಶೋನಿಂದ (Reality Show) ಹೊರನಡೆಯಲಿದ್ದಾರೆ ಎನ್ನಲಾಗಿದೆ. ಈಗಾಗಲೇ ವಾಹಿನಿಯು ಅವರ ಜಾಗಕ್ಕೆ ಚಿತ್ರರಂಗದ ಮತ್ತೊಬ್ಬ ಯುವ ನಾಯಕಿಯನ್ನು ಸಂಪರ್ಕಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

2010ರಿಂದ ಆರಂಭವಾದ ‘ದೀದಿ ನಂಬರ್ 1’ ಶೋಗೆ ರಚನಾ ಬ್ಯಾನರ್ಜಿ ಅವರು 2011ರಲ್ಲಿ ನಿರೂಪಕಿಯಾಗಿ ಎಂಟ್ರಿ ಕೊಟ್ಟಿದ್ದರು. ಸೀಸನ್ 3 ಮತ್ತು 2013ರಲ್ಲಿ ಬೇರೆಯವರು ಶೋ ನಡೆಸಿಕೊಟ್ಟಿದ್ದನ್ನು ಬಿಟ್ಟರೆ, 2014ರಿಂದ 2026ರವರೆಗೆ ಅಂದರೆ ಸುಮಾರು 12 ವರ್ಷಗಳ ಕಾಲ ರಚನಾ ಬ್ಯಾನರ್ಜಿ ಅವರೇ ಸತತವಾಗಿ ಈ ಶೋ ಅನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದಾರೆ. ಈ ಶೋನ ಅತಿ ಹೆಚ್ಚು ಎಪಿಸೋಡ್‌ಗಳನ್ನು ಶೂಟ್ ಮಾಡಿದ ಹೆಗ್ಗಳಿಕೆಯೂ ಅವರದ್ದಾಗಿದೆ.

2024ರ ಮಾರ್ಚ್‌ನಲ್ಲಿ ರಚನಾ ಅವರ ಕರೆಯ ಮೇರೆಗೆ ಮಮತಾ ಬ್ಯಾನರ್ಜಿ ಅವರು ಈ ಶೋಗೆ ಅತಿಥಿಯಾಗಿ ಆಗಮಿಸಿದ್ದರು. ಶೋನಲ್ಲಿ ಮಮತಾ ಬ್ಯಾನರ್ಜಿ ಅವರು ರೊಟ್ಟಿ ಲಟ್ಟಿಸುತ್ತಿದ್ದ ವಿಡಿಯೋ ಆಗ ಭಾರಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ರಚನಾ ಅವರಿಗೆ ತೃಣಮೂಲ ಕಾಂಗ್ರೆಸ್ ಟಿಕೆಟ್ ಸಿಕ್ಕು, ಅವರು ಸಂಸದರಾಗಿಯೂ ಆಯ್ಕೆಯಾಗಿದ್ದರು.

ಆದರೆ ಇತ್ತೀಚಿನ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಹಿನ್ನಡೆ ಅನುಭವಿಸಿದ ನಂತರ, ಪಕ್ಷದ ಬಂಡಾಯ ಸಂಸದರ ಪಟ್ಟಿಯಲ್ಲಿ ರಚನಾ ಬ್ಯಾನರ್ಜಿ ಅವರ ಹೆಸರು ಕೇಳಿಬರುತ್ತಿದೆ. ಸದ್ಯ ಅವರು ನಗರದಿಂದ ಹೊರಗೆ ರಜಾದಿನಗಳನ್ನು ಕಳೆಯುತ್ತಿದ್ದು, ಇದೇ ಸಮಯದಲ್ಲಿ ಅವರು ಶೋನಿಂದ ಹೊರನಡೆಯುತ್ತಿರುವ ಸುದ್ದಿ ಕಿರಿತೆರೆಯಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ‘ಮಹಾನ್ ಕಿಲಾಡಿ’ ರಿಯಾಲಿಟಿ ಶೋ ಆರಂಭಿಸಿದ ಮಿಂಚು: ಏನಿದರ ವಿಶೇಷ?

ರಚನಾ ಬ್ಯಾನರ್ಜಿ ಅವರ ನಿರ್ಗಮನದ ಸುದ್ದಿಯ ಬಗ್ಗೆ ಅಧಿಕೃತ ಮಾಹಿತಿ ಪಡೆಯಲು ಶೋ ನಿರ್ದೇಶಕ ಅಭಿಜಿತ್ ಸೇನ್ ಅಥವಾ ಸ್ವತಃ ರಚನಾ ಬ್ಯಾನರ್ಜಿ ಅವರನ್ನ ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಟಿವಿ9 ಬಾಂಗ್ಲಾ ವರದಿ ಮಾಡಿದೆ. ರಚನಾ ಬದಲಿಗೆ ಖ್ಯಾತ ಹೊಸ ನಟಿಯೊಬ್ಬರಿಗೆ ವಾಹಿನಿಯು ಈ ಶೋ ನಡೆಸಿಕೊಡಲು ಆಫರ್ ನೀಡಿದ್ದು, ಮಾತುಕತೆಗಳು ಬಹುತೇಕ ಅಂತಿಮ ಹಂತ ತಲುಪಿವೆ ಎಂದು ಹೇಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಡುಗೆಗೆ ಗರಂ ಮಸಾಲವನ್ನು ಯಾವಾಗ, ಎಷ್ಟು ಪ್ರಮಾಣದಲ್ಲಿ ಹಾಕಬೇಕು ಗೊತ್ತಾ? – Kannada News | When and how much garam masala should be added to dishes while cooking?

ಭಾರತೀಯ ಅಡುಗೆಮನೆಯಲ್ಲಿ ಗರಂ ಮಸಾಲಕ್ಕೆ (garam masala) ವಿಶೇಷ ಸ್ಥಾನವಿದೆ. ಗರಂ ಮಸಾಲವು ದಾಲ್ಚಿನ್ನಿ, ಲವಂಗ, ಏಲಕ್ಕಿ, ಮೆಣಸು, ಪಲಾವ್‌ ಎಲೆ, ಸೋಂಪು ಮುಂತಾದ ಮಸಾಲೆಗಳ ಮಿಶ್ರಣವಾಗಿದ್ದು, ಇದು ಸಸ್ಯಹಾರವೇ ಇರಲಿ ಮಾಂಸಹಾರವೇ ಇರಲಿ ಪ್ರತಿಯೊಂದು ಅಡುಗೆಯ ಘಮ, ರುಚಿಯನ್ನು ದ್ವಿಗುಣಗೊಳಿಸುವ ವಿಶೇಷ ಸಾಮರ್ಥ್ಯವನ್ನು ಹೊಂದಿದೆ. ಆದರೆ ಅಡುಗೆಗೆ ಅದನ್ನು ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇರಿಸುವುದು ತುಂಬಾನೇ ಮುಖ್ಯವಾಗಿರುತ್ತದೆ. ಇದಲ್ಲದಿದ್ದರೆ ಅಡುಗೆಯ ರುಚಿ ಕಳೆದುಹೋಗುವ ಅಥವಾ ಪದಾರ್ಥ ಕಹಿಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಅಡುಗೆಯ ರುಚಿಯನ್ನು ದುಪ್ಪಟ್ಟುಗೊಳಿಸಲು ಗರಂ ಮಸಾಲವನ್ನು ಯಾವ ಸಮಯದಲ್ಲಿ ಸೇರಿಸಬೇಕು ಎಂಬುದನ್ನು ತಪ್ಪದೇ ತಿಳಿದುಕೊಳ್ಳಿ.

ಅಡುಗೆಗೆ ಗರಂ ಮಸಾಲ ಸೇರಿಸಲು ಸರಿಯಾದ ಸಮಯ ಯಾವುದು?

ಅತ್ಯಂತ ಮುಖ್ಯವಾದ ವಿಷಯವೆಂದರೆ ಗರಂ ಮಸಾಲವನ್ನು ಯಾವಾಗಲೂ ಅಡುಗೆಯ ಕೊನೆಯಲ್ಲಿ ಸೇರಿಸಬೇಕು. ಪದಾರ್ಥ ಬಹುತೇಕ ಬೆಂದ ನಂತರ, ಕೊನೆಯ 2 ರಿಂದ 3 ನಿಮಿಷಗಳಲ್ಲಿ ಗರಂ ಮಸಾಲ ಸೇರಿಸಿ. ಇತರೆ ಮಸಾಲೆಗಳೊಂದಿಗೆ ಬೇಗನೆ ಗರಂ ಮಸಾಲೆ ಸೇರಿಸುವುದರಿಂದ ಖಾದ್ಯದ ಮೂಲ ರುಚಿ ಮತ್ತು ಸುವಾಸನೆ ಹಾಳಾಗುತ್ತದೆ. ಕೊನೆಯಲ್ಲಿ ಸೇರಿಸುವುದರಿಂದ ಅಡುಗೆಯ ಘಮ, ರುಚಿ ದ್ವಿಗುಣಗೊಳ್ಳುತ್ತದೆ.

ಅಡುಗೆಯ ಆರಂಭದಲ್ಲಿ ಗರಂ ಮಸಾಲವನ್ನು ಏಕೆ ಸೇರಿಸಬಾರದು?

ಇತರೆ ಮಸಾಲೆ, ತರಕಾರಿ ಇತ್ಯಾದಿಗಳೊಂದಿಗೆ ಆರಂಭದಲ್ಲಿ ಗರಂ ಮಸಾಲವನ್ನು ಸೇರಿಸಿದರೆ, ಮಸಾಲೆ ಫ್ರೈ ಮಾಡುವ ಸಂದರ್ಭದಲ್ಲಿ ಅದು ಹುರಿಯುತ್ತದೆ,  ಅದರ ಪರಿಮಳ ಕಳೆದುಹೋಗುತ್ತದೆ ಮತ್ತು ಕೆಲವೊಮ್ಮೆ ಇದರಿಂದ ಪದಾರ್ಥ ಕಹಿಯಾಗುತ್ತದೆ. ಆದ್ದರಿಂದ   ಗರಂ ಮಸಾಲವನ್ನು ಯಾವಾಗಲೂ ಅಡುಗೆಯ ಕೊನೆಯಲ್ಲಿಯೇ ಸೇರಿಸಬೇಕು.

ಇದನ್ನೂ ಓದಿ: ಪ್ರತಿದಿನ ಊಟದ ಬಳಿಕ ಒಂದು ಸ್ಪೂನ್‌ ಸೋಂಪು ತಿನ್ನಿ, ಅದ್ಭುತ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ

ಅಡುಗೆಗೆ ಗರಂ ಮಸಾಲೆ ಸೇರಿಸುವ ಸರಿಯಾದ ವಿಧಾನ:

  • ಗರಂ ಮಸಾಲ ಸೇರಿಸಿದ ನಂತರ, ಪದಾರ್ಥವನ್ನು ನಿಧಾನವಾಗಿ ಬೆರೆಸಿ. ಹೆಚ್ಚು ಹೊತ್ತು ಬೇಯಿಸಬೇಡಿ. ಕೇವಲ 1-2 ನಿಮಿಷಗಳ ಕಾಲ ಕಡಿಮೆ ಉರಿಯಲ್ಲಿ ಬೇಯಲು ಬಿಡಿ. ಕೊನೆಗೆ, ಒಲೆ ಆಫ್ ಮಾಡಿ ಮತ್ತು ಪಾತ್ರೆಯ ಮುಚ್ಚಳ ಮುಚ್ಚಿಡಿ.
  • ಹೆಚ್ಚು ಗರಂ ಮಸಾಲ ಸೇರಿಸುವುದರಿಂದ ಅಡುಗೆಯ ರುಚಿ ಹಾಳಾಗಬಹುದು, ಆದ್ದರಿಂದ ಪ್ರಮಾಣವನ್ನು ಮಿತಿಗೊಳಿಸಿ.ಯಾವಾಗಲೂ ಸಣ್ಣ ಪ್ರಮಾಣದಲ್ಲಿ ಗರಂ ಮಸಾಲ ಸೇರಿಸಬೇಕು. 1/2 ರಿಂದ 1 ಟೀಸ್ಪೂನ್ ಸಾಕು. ಹೆಚ್ಚು ಗರಂ ಸೇರಿಸುವುದರಿಂದ ಅಡುಗೆ ಕಹಿಯಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೇ ತಿಂಗಳಲ್ಲಿ ರಫ್ತು ಶೇ. 18 ಹೆಚ್ಚಳ; ಆಮದು ಹೊರೆ ಇನ್ನೂ ಏರಿಕೆ; ಟ್ರೇಡ್ ಡೆಫಿಸಿಟ್ ಕೂಡ ಅಧಿಕ – Kannada News | May 2026 Trade: India’s Merchandise & Services Exports Rise, Positive Outlook from RBI

ನವದೆಹಲಿ, ಜೂನ್ 15: ಎಂಜಿನಿಯರಿಂಗ್ ಸರಕುಗಳು, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಎಲೆಕ್ಟ್ರಾನಿಕ್ಸ್ ಸರಕುಗಳ ಭರ್ಜರಿ ಮಾರಾಟದ ಹಿನ್ನೆಲೆಯಲ್ಲಿ ಮೇ ತಿಂಗಳಲ್ಲಿ ಭಾರತದ ಸರಕು ರಫ್ತು (Merchandise Exports) ಶೇ. 18 ರಷ್ಟು ಹೆಚ್ಚಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಬಿಡುಗಡೆ ಮಾಡಿರುವ ತಾತ್ಕಾಲಿಕ ಅಂಕಿ-ಅಂಶಗಳ ಪ್ರಕಾರ, ಕಳೆದ ವರ್ಷದ ಮೇ ತಿಂಗಳಿನಲ್ಲಿದ್ದ $38.30 ಬಿಲಿಯನ್‌ಗೆ ಹೋಲಿಸಿದರೆ ಈ ಬಾರಿ ರಫ್ತು $45.20 ಬಿಲಿಯನ್‌ಗೆ ತಲುಪಿದೆ.

ಆದರೆ, ಇದೇ ಅವಧಿಯಲ್ಲಿ ಆಮದು (Imports) ಕೂಡ ಶೇ. 20.6 ರಷ್ಟು ಏರಿಕೆಯಾಗಿದ್ದು, $60.86 ಬಿಲಿಯನ್‌ನಿಂದ $73.41 ಬಿಲಿಯನ್‌ಗೆ ತಲುಪಿದೆ. ಇದರ ಪರಿಣಾಮವಾಗಿ, ದೇಶದ ವ್ಯಾಪಾರ ಕೊರತೆ (Trade Deficit – ಆಮದು ಮತ್ತು ರಫ್ತಿನ ನಡುವಿನ ವ್ಯತ್ಯಾಸ) ಕಳೆದ ವರ್ಷದ ಮೇ ತಿಂಗಳಿನಲ್ಲಿದ್ದ $22.56 ಬಿಲಿಯನ್‌ನಿಂದ ಈ ಬಾರಿ $28.21 ಬಿಲಿಯನ್‌ಗೆ ಏರಿಕೆಯಾಗಿದೆ.

ಸೇವಾ ವಲಯದ ರಫ್ತು ಮತ್ತು ಒಟ್ಟಾರೆ ವ್ಯಾಪಾರ

ಮೇ ತಿಂಗಳಲ್ಲಿ ಸೇವಾ ವಲಯದ ರಫ್ತು $32.46 ಬಿಲಿಯನ್‌ನಿಂದ $36.76 ಬಿಲಿಯನ್‌ಗೆ ಏರಿದೆ. ಸೇವೆಗಳ ಆಮದು ಕೂಡ $16.70 ಬಿಲಿಯನ್‌ನಿಂದ $19.06 ಬಿಲಿಯನ್‌ಗೆ ಹೆಚ್ಚಾಗಿದೆ.

ಇದನ್ನೂ ಓದಿ: ಸಂಬಳ ₹15,000 ಇದ್ದರೂ ಸಾಲವಿಲ್ಲದೆ ಬದುಕಬಹುದೇ? ಹೌದು ಎನ್ನುತ್ತದೆ ಈ ಸರಳ ಬಜೆಟ್ ಸೂತ್ರ

ಸರಕು ಮತ್ತು ಸೇವೆಗಳೆರಡನ್ನೂ ಒಳಗೊಂಡಂತೆ ಭಾರತದ ಒಟ್ಟು ರಫ್ತು $81.96 ಬಿಲಿಯನ್ ತಲುಪಿದೆ (ಕಳೆದ ವರ್ಷ $70.76 ಬಿಲಿಯನ್ ಇತ್ತು). ಒಟ್ಟು ಆಮದು $92.47 ಬಿಲಿಯನ್‌ಗೆ ಏರಿದೆ (ಕಳೆದ ವರ್ಷ $77.55 ಬಿಲಿಯನ್ ಇತ್ತು). ಸೇವೆಗಳನ್ನೂ ಒಳಗೊಂಡ ಒಟ್ಟಾರೆ ವ್ಯಾಪಾರ ಕೊರತೆಯು $10.51 ಬಿಲಿಯನ್‌ಗೆ ವಿಸ್ತರಿಸಿದೆ.

ಇರಾನ್-ಯುಎಸ್ ಒಪ್ಪಂದದ ಸಕಾರಾತ್ಮಕ ನಿರೀಕ್ಷೆ

ಅಮೆರಿಕ ಮತ್ತು ಇರಾನ್ ನಡುವೆ ಇತ್ತೀಚೆಗೆ ಏರ್ಪಟ್ಟಿರುವ ಶಾಂತಿ ಒಪ್ಪಂದದ ಬೆನ್ನಲ್ಲೇ ಈ ಅಂಕಿ-ಅಂಶಗಳು ಹೊರಬಿದ್ದಿವೆ. ಜಾಗತಿಕ ವ್ಯಾಪಾರ ಮತ್ತು ಇಂಧನ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿದ್ದ (Strait of Hormuz) ಸಂಘರ್ಷ ತಿಳಿಯಾಗುತ್ತಿರುವುದರಿಂದ, ಮುಂಬರುವ ದಿನಗಳಲ್ಲಿ ಭಾರತದ ರಫ್ತುದಾರರಿಗೆ ಸರಕು ಸಾಗಣೆ ವೆಚ್ಚ (Freight Costs) ಕಡಿಮೆಯಾಗಲಿದೆ ಹಾಗೂ ಪೂರೈಕೆ ಸರಪಳಿ ಸುಗಮವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಹಿಂದೆ ಗಲ್ಫ್ ಪ್ರಾಂತ್ಯದ ಉದ್ವಿಗ್ನತೆಯಿಂದಾಗಿ ಭಾರತದ ಸಣ್ಣ ರಫ್ತುದಾರರು (ದೇಶದ ಒಟ್ಟು ರಫ್ತಿನಲ್ಲಿ ಶೇ 48 ರಷ್ಟು ಪಾಲು ಹೊಂದಿರುವವರು) ಭಾರಿ ತೊಂದರೆ ಅನುಭವಿಸಿದ್ದರು.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ವಿಶ್ಲೇಷಣೆ

ಜೂನ್ 5 ರಂದು ಆರ್‌ಬಿಐ ನೀಡಿದ ಹೇಳಿಕೆಯ ಪ್ರಕಾರ, ಜಾಗತಿಕ ಆರ್ಥಿಕತೆಯಲ್ಲಿನ ಅನಿಶ್ಚಿತತೆ ಮತ್ತು ಇಂಧನ ಬೆಲೆಗಳ ಏರಿಕೆಯು ಭಾರತದ ಚಾಲ್ತಿ ಖಾತೆ ಕೊರತೆಯ (Current Account Deficit) ಮೇಲೆ ಸಣ್ಣ ಮಟ್ಟದ ಅಪಾಯವನ್ನು ಉಂಟುಮಾಡುತ್ತಲೇ ಇರುತ್ತದೆ. ಆದಾಗ್ಯೂ, ಭಾರತದ ಸೇವಾ ವಲಯದ ರಫ್ತು ಹೆಚ್ಚಿರುವುದು ಮತ್ತು ವಿದೇಶಗಳಿಂದ ಭಾರತೀಯರು ದೇಶಕ್ಕೆ ಕಳುಹಿಸುವ ಹಣ (Remittances) ದೇಶದ ಆರ್ಥಿಕತೆಗೆ ದೊಡ್ಡ ಬಲ ತರಲಿದೆ ಎಂದು ಆರ್‌ಬಿಐ ಹೇಳಿದೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಭೀತಿಯ ನಡುವೆಯೂ ಭಾರತದ ಐಟಿ ಮತ್ತು ಸೇವಾ ವಲಯಕ್ಕೆ ಜಾಗತಿಕವಾಗಿ ಉತ್ತಮ ಬೇಡಿಕೆ ಮುಂದುವರಿದಿದೆ.

ಇದನ್ನೂ ಓದಿ: ಹಳೆಯ ಕಾರಿಗೆ ಇ20 ಪೆಟ್ರೋಲ್ ಹಾಕಿಸಿದ್ರೆ ಇನ್ಷೂರೆನ್ಸ್ ಸಿಗಲ್ಲವಾ? ವಿಮಾ ಕಂಪನಿ ಹೇಳಿದ್ದಿದು

2031ರ ಹಣಕಾಸು ವರ್ಷದ ವೇಳೆಗೆ ಭಾರತದ ಒಟ್ಟು ರಫ್ತನ್ನು $2 ಟ್ರಿಲಿಯನ್‌ಗೆ (ಸರಕುಗಳಲ್ಲಿ $1 ಟ್ರಿಲಿಯನ್ ಮತ್ತು ಸೇವೆಗಳಲ್ಲಿ $1 ಟ್ರಿಲಿಯನ್) ದ್ವಿಗುಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇದಕ್ಕಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (MSME), ಕೃಷಿ ಉತ್ಪನ್ನಗಳು ಮತ್ತು ‘ಬ್ರಾಂಡ್ ಇಂಡಿಯಾ’ ಪ್ರಚಾರದ ಮೇಲೆ ಹೆಚ್ಚಿನ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಉದ್ಧವ್ ಠಾಕ್ರೆಯವರ ಶಿವಸೇನೆಯಲ್ಲಿ ಬಿರುಕು; ಪ್ರತ್ಯೇಕ ಗುಂಪು ರಚಿಸುತ್ತಾರಾ ಯುಟಿಬಿ ಸಂಸದರು? – Kannada News | Rift in Uddhav Thackerays Shiv Sena Will UBT MPs form a separate group?

ನವದೆಹಲಿ, ಜೂನ್ 15: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಗಳು ನಡೆಯುತ್ತಿವೆ. ಏಕನಾಥ್ ಶಿಂಧೆ (Eknath Shinde) ಅವರ ಶಿವಸೇನಾ ಬಣ ಆಪರೇಷನ್ ಟೈಗರ್ ಅನ್ನು ಜಾರಿಗೊಳಿಸುತ್ತಿದೆ. ಈ ಅಭಿಯಾನದ ಅಡಿಯಲ್ಲಿ ಠಾಕ್ರೆ ಅವರ ಪಕ್ಷದ ಕೆಲವು ಸಂಸದರನ್ನು ವಿಭಜಿಸಲು ಪ್ರಯತ್ನ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮುಂಬೈನಲ್ಲಿ ಪಕ್ಷದ ಎಲ್ಲಾ ಸಂಸದರ ತುರ್ತು ಸಭೆಯನ್ನು ಕರೆದಿದ್ದರು. ಇದೇ ಉದ್ಧವ್ ಠಾಕ್ರೆ ಬಣದ ಶಿವಸೇನಾ ಸಂಸದರು ವಿಭಜನೆಯಾಗುವ ಬಲವಾದ ಸಾಧ್ಯತೆ ಕಂಡುಬರುತ್ತಿದೆ. ಕೆಲವು ಸಂಸದರು ಪ್ರತ್ಯೇಕ ಗುಂಪನ್ನು ರಚಿಸಬಹುದು ಎಂದು ಹೇಳಲಾಗುತ್ತಿದೆ.

ಉದ್ಧವ್ ಠಾಕ್ರೆ ಅವರ ಪಕ್ಷದ ಕೆಲವು ಸಂಸದರು ಹೊಸ ಗುಂಪನ್ನು ರಚಿಸುವ ಸಾಧ್ಯತೆಯಿದೆ. ನಿನ್ನೆ, ಠಾಕ್ರೆ ಬಣದ ಸಂಸದರ ಸಭೆ ನಡೆಯಿತು. ಈ ಸಭೆಯ ನಂತರ, ನಮ್ಮ ಎಲ್ಲಾ ಸಂಸದರು ನಮ್ಮೊಂದಿಗಿದ್ದಾರೆ, ಠಾಕ್ರೆ ಗುಂಪು ಪಕ್ಷವನ್ನು ಬಿಡುವುದಿಲ್ಲ ಎಂದು ಹೇಳಿಕೊಂಡಿದೆ. ಆಪರೇಷನ್ ಟೈಗರ್ ಇಲ್ಲ. ನಾವು ಆಪರೇಷನ್ ವುಲ್ಫ್ ಅನ್ನು ಪ್ರಾರಂಭಿಸಲಿದ್ದೇವೆ ಎಂದು ಸಂಜಯ್ ರಾವತ್ ಹೇಳಿದ್ದರು. ಆದರೆ ಈಗ ಠಾಕ್ರೆ ಬಣದ ಕೆಲವು ಸಂಸದರು ನೇರವಾಗಿ ಹೊಸ ಗುಂಪನ್ನು ರಚಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಉದ್ಧವ್ ಠಾಕ್ರೆ ಬಣದ ಕೆಲವು ಸಂಸದರು ಲೋಕಸಭಾ ಸ್ಪೀಕರ್‌ಗೆ ಪತ್ರವನ್ನು ಸಲ್ಲಿಸುವ ಸಾಧ್ಯತೆಯಿದೆ. ಉದ್ಧವ್ ಠಾಕ್ರೆ ಅವರ ಕೆಲವು ಸಂಸದರು ಏಕನಾಥ್ ಶಿಂಧೆ ಅವರ ಪಕ್ಷದ ಸಂಸದ ಮತ್ತು ಕೇಂದ್ರ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಆದ್ದರಿಂದ, ಈ ಸಂಸದರು ಶೀಘ್ರದಲ್ಲೇ ಹೊಸ ಗುಂಪನ್ನು ರಚಿಸಬಹುದು ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿನ ಪ್ರಸ್ತುತ ಬೆಳವಣಿಗೆಗಳನ್ನು ಪರಿಗಣಿಸಿ, ಠಾಕ್ರೆ ಪಕ್ಷದ ನಾಯಕ ಮತ್ತು ಸಂಸದ ಸಂಜಯ್ ರಾವತ್ ತಕ್ಷಣ ದೆಹಲಿಗೆ ತೆರಳಿದ್ದಾರೆ.

ಇದನ್ನೂ ಓದಿ: ಉದ್ಧವ್ ಠಾಕ್ರೆ, ರಾಜ್ ಠಾಕ್ರೆ ‘ಮಹಾ’ ಸಂಗಮ: ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ

ಜೂನ್ 14ರಂದು ಉದ್ಧವ್ ಠಾಕ್ರೆ ಆಯೋಜಿಸಿದ್ದ ಸಂಸದರ ಸಭೆಗೆ ಒಟ್ಟು 5 ಸಂಸದರು ಗೈರುಹಾಜರಾಗಿದ್ದರು. ಆದ್ದರಿಂದ, ಶೀಘ್ರದಲ್ಲೇ ಈ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಏನಿದು ಘಟನೆ?:

ಮಹಾರಾಷ್ಟ್ರದಲ್ಲಿ ಶಿವಸೇನೆ (ಯುಬಿಟಿ) ಬಣದ 9 ಲೋಕಸಭಾ ಸಂಸದರಲ್ಲಿ 7 ಮಂದಿ ಪಕ್ಷಾಂತರಕ್ಕೆ ಸಜ್ಜಾಗಿದ್ದಾರೆ ಮತ್ತು ಅವರು ದೆಹಲಿಗೆ ತೆರಳಿ ಏಕನಾಥ್ ಶಿಂಧೆ ಬಣ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂಬ ವರದಿಗಳು ಹರಡಿದ್ದವು. ಇದನ್ನು ‘ಆಪರೇಷನ್ ಟೈಗರ್’ ಎಂದು ಕರೆಯಲಾಗುತ್ತಿದೆ. ಈ ಮೂಲಕ ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೂ ಮುನ್ನ ಪಕ್ಷದೊಳಗೆ ಒಡಕು ಮೂಡಿಸಲು ಪ್ರಯತ್ನ ನಡೆಯುತ್ತಿದೆ ಎಂಬುದು ಆರೋಪ. ಈ ವದಂತಿಗಳನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ತಳ್ಳಿಹಾಕಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಏಕನಾಥ್ ಶಿಂದೆ ನೇತೃತ್ವದ ‘ಮಹಾಯುತಿ’ ಸರ್ಕಾರ ಮುಂದಿನ 5 ವರ್ಷಗಳ ಕಾಲ ಮತ್ತಷ್ಟು ಬಲಗೊಳ್ಳಲಿದೆ ಎಂದು ಠಾಕ್ರೆ ಬಣದ ಹಲವು ಸಂಸದರು ಆತಂಕಗೊಂಡಿದ್ದಾರೆ ಎನ್ನಲಾಗಿದೆ. ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರದಿಂದ ಧನಸಹಾಯ ಮತ್ತು ಅನುದಾನ ಪಡೆಯಲು ಕಷ್ಟವಾಗುತ್ತಿರುವುದರಿಂದ, ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅವರು ಆಡಳಿತಾರೂಢ ಮೈತ್ರಿಕೂಟದತ್ತ ಮುಖ ಮಾಡಿದ್ದಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ.

ಇದನ್ನೂ ಓದಿ: ಮುಂಬೈ ಕಿರೀಟವನ್ನು ಮುಡಿಗೇರಿಸಿಕೊಂಡ ಬಿಜೆಪಿ ನೇತೃತ್ವದ ಮಹಾಯುತಿ; 25 ವರ್ಷಗಳ ಬಳಿಕ ಠಾಕ್ರೆ ಭದ್ರಕೋಟೆ ಪತನ

ಇತ್ತೀಚೆಗೆ ನಡೆದ ದೆಹಲಿ ಪ್ರವಾಸದ ವೇಳೆ ಠಾಕ್ರೆ ಬಣದ ಸುಮಾರು 7 ಸಂಸದರು ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಹಸ್ಯವಾಗಿ ಭೇಟಿಯಾಗಿದ್ದಾರೆ ಎಂಬ ಸುದ್ದಿಗಳು ಮರಾಠಿ ಮಾಧ್ಯಮಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ಒಟ್ಟು 9 ಸಂಸದರಲ್ಲಿ ಕನಿಷ್ಠ ಮೂರನೇ ಎರಡರಷ್ಟು ಅಂದರೆ 6 ಸಂಸದರು ಒಟ್ಟಿಗೆ ಹೊರಬರಬೇಕಾಗುತ್ತದೆ. ಸದ್ಯ ಅದಕ್ಕೆ ಬೇಕಾದ ಸಂಖ್ಯೆಯನ್ನು ಕ್ರೋಢೀಕರಿಸಿ ಹೊಸ ಗುಂಪು ರಚಿಸಲು ಸಂಸದರು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ಬಿರುಕಿನ ವದಂತಿಗಳು ದಟ್ಟವಾಗುತ್ತಿದ್ದಂತೆಯೇ ಎಚ್ಚೆತ್ತ ಉದ್ಧವ್ ಠಾಕ್ರೆ ಭಾನುವಾರ ಮುಂಬೈನ ತಮ್ಮ ನಿವಾಸ ‘ಮಾತೋಶ್ರೀ’ಯಲ್ಲಿ ಪಕ್ಷದ ಎಲ್ಲಾ 9 ಲೋಕಸಭಾ ಸಂಸದರ ತುರ್ತು ಸಭೆ ಕರೆದಿದ್ದರು. ಆದರೆ, ಈ ಸಭೆಗೆ ಕೇವಲ 4 ಸಂಸದರು ಮಾತ್ರ ಖುದ್ದಾಗಿ ಹಾಜರಾಗಿದ್ದು, ಉಳಿದ 5 ಸಂಸದರು ಆನ್‌ಲೈನ್ (ವಿಡಿಯೋ ಕಾನ್ಫರೆನ್ಸ್) ಮತ್ತು ಫೋನ್ ಮೂಲಕ ಭಾಗವಹಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಸೂರಿನ ಪಬ್​​​​ನಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಜನರಿಗೆ ಗಂಭೀರ ಗಾಯ – Kannada News | Several Death And Injured after massive fire breaks out in Pub at Mysuru

ಮೈಸೂರು, (ಜೂನ್ 15): ಮೈಸೂರಿನ (Mysuru) ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಪಬ್ ನಲ್ಲಿ (Pub) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಈ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದರೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪಬ್​ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Source link

Exit mobile version