Headlines

Video: ಕನಸನ್ನು ಬೆನ್ನಟ್ಟಿ ಹೋದ ವ್ಯಕ್ತಿ; ಇಂದು ಏರ್ ಇಂಡಿಯಾದಲ್ಲಿ ಸ್ವಚ್ಛತಾ ಸಿಬ್ಬಂದಿ – Kannada News | The story of Air India’s cleaning staff’s dream come true

ಪ್ರತಿಯೊಬ್ಬರಿಗೂ ಚಿಕ್ಕಂದಿನಿಂದಲೂ ಕನಸುಗಳಿರುತ್ತವೆ. ಸಣ್ಣ ಮಕ್ಕಳನ್ನು ಕೇಳಿದರೆ ದಕ್ಷ ಅಧಿಕಾರಿಯಾಗಬೇಕು, ವೈದ್ಯನಾಗಬೇಕು ಹೀಗೆ ತಮ್ಮ ಕನಸುಗಳನ್ನು ಹೇಳುತ್ತಾರೆ. ಆದರೆ ಅಂದುಕೊಂಡಿದ್ದನ್ನು ಸಾಧಿಸುವುದು, ಕೆಲಸ ಗಿಟ್ಟಿಸಿಕೊಳ್ಳೋದು ಹೇಳಿದ್ದಷ್ಟು ಸುಲಭವಲ್ಲ. ಇದೀಗ ಏರ್ ಇಂಡಿಯಾದಲ್ಲಿ (Air India) ಕ್ಲೀನರ್ ಆಗಿ ಕೆಲಸ ಮಾಡುವ ವ್ಯಕ್ತಿ ತಮ್ಮ ಕನಸಿನ ಉದ್ಯೋಗ ಗಿಟ್ಟಿಸಿಕೊಂಡು ಖುಷಿಯಿಂದ ಕೆಲಸ ಮಾಡುತ್ತಿದ್ದಾರೆ. ಏರ್ ಇಂಡಿಯಾದ ಸ್ವಚ್ಛತಾ ಸಿಬ್ಬಂದಿಯೊಬ್ಬರ ಹೃದಯಸ್ಪರ್ಶಿ ವಿಡಿಯೋ  ನೆಟ್ಟಿಗರ ಹೃದಯ ಗೆದ್ದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಕೆಲಸದ ಮೇಲೆ ಅವರಿಗಿರುವ ಪ್ರೀತಿಯನ್ನು ಮೆಚ್ಚಿಕೊಂಡಿದ್ದಾರೆ….

Read More

ಇಂದಿರಾ ಗಾಂಧಿ ಬದುಕಿದ್ದರೆ ಬಿಜೆಪಿಗೆ ನಿಷೇಧ ಹೇರುತ್ತಿದ್ದರು; ವಿವಾದಕ್ಕೀಡಾದ ಅಶೋಕ್ ಗೆಹ್ಲೋಟ್ – Kannada News | Indira Gandhi would have banned BJP Congress Leader Ashok Gehlot sparks Controversy

ಜೈಪುರ, ಜೂನ್ 15: “ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಇಂದು ಬದುಕಿದ್ದರೆ ಬಿಜೆಪಿಯಂತಹ ಕೋಮು ರಾಜಕಾರಣ ಮಾಡುವ ಪಕ್ಷವನ್ನು ನಿಷೇಧಿಸುತ್ತಿದ್ದರು” ಎಂದು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಸ್ತುತ ಆಡಳಿತಾರೂಢ ಬಿಜೆಪಿ ಸೃಷ್ಟಿಸಿರುವ ವಾತಾವರಣ ಅತ್ಯಂತ ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಜೈಪುರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್,…

Read More

ಸರ್ಕಾರಿ ಶಾಲೆಯಲ್ಲಿ ಓದಿದ 30 ಸಾವಿರ ಮಕ್ಕಳು ಅತಂತ್ರ! ಸರ್ಕಾರದ ಎಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು? – Kannada News | Karnataka English Medium School: 30,000 Students Struggle for Class 8 Admissions

ಪ್ರಾತಿನಿಧಿಕ ಚಿತ್ರImage Credit source: deccanherald ಬೆಂಗಳೂರು, ಜೂನ್​​ 15: ಸರ್ಕಾರಿ ಶಾಲೆಯ (government school) ಮಕ್ಕಳಿಗೂ ಇಂಗ್ಲಿಷ್ ಮೀಡಿಯಂ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಆರಂಭವಾದ ಯೋಜನೆಯೊಂದು, ಈಗ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ದೂಡಿದೆ. ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ (English Medium) ಓದಿದ ರಾಜ್ಯದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಈಗ ಮುಂದೇನು ಮಾಡಬೇಕು ತೋಚದೆ ಅತಂತ್ರರಾಗಿದ್ದಾರೆ. ಜೂನ್ ತಿಂಗಳು ಅರ್ಧ ಕಳೆದರೂ ಶಿಕ್ಷಣ ಇಲಾಖೆ ಮಾತ್ರ ಈ ಗೊಂದಲಕ್ಕೆ ಇನ್ನೂ ಮುಕ್ತಿ…

Read More

RSS ಬಗ್ಗೆ ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ಸಂಸದ ತೇಜಸ್ವಿ ಸೂರ್ಯ ಖಡಕ್ ಉತ್ತರ – Kannada News | BJP MP Tejaswi Surya Hits back at Miister Priyank Kharge over Letter to Mohan bhagwat about RSS Details

ನವದೆಹಲಿ, (ಜೂನ್ 15): ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಮೋಹನ್ ಭಾಗವತ್ (Mohan bhagwat) ಅವರಿಗೆ ಪತ್ರ ಬರೆದು ಆರ್​​​ಎಸ್​​ಎಸ್​​​ನ ನೋಂದಣಿ, ಆದಾಯ, ಆಸ್ತಿಪಾಸ್ತಿ ಸೇರಿದಂತೆ ಇತರೆ ವಿವರ ನೀಡುವಂತೆ ಆಗ್ರಹಿಸಿದ್ದಾರೆ. ಇನ್ನು ಇದಕ್ಕೆ ದೆಹಲಿಯಲ್ಲಿಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ(Tejaswi Surya) ಪ್ರತಿಕ್ರಿಯಿಸಿದ್ದು, ಅವರ ಪ್ರಶ್ನೆಗಳಿಗೆ ಆರ್‌ಎಸ್‌ಎಸ್‌ನವರು ಕಾನೂನಾತ್ಮಕವಾಗಿ ಉತ್ತರಿಸ್ತಾರೆ. ಸಂಘ ಸಂಸ್ಥೆ ಸ್ಥಾಪಿಸುವ ಹಕ್ಕನ್ನು ಸಂವಿಧಾನ ನೀಡಿದೆ. ಕೇವಲ ಆರ್‌ಎಸ್‌ಎಸ್‌ಗೆ ಮಾತ್ರ ಅವಕಾಶ ನೀಡಿಲ್ಲ. ಗ್ರಾಮೀಣ…

Read More

ವಿಟಮಿನ್ ಬಿ12 ಹೆಚ್ಚು ಅಥವಾ ಕಡಿಮೆಯಾದರೂ ಕ್ಯಾನ್ಸರ್ ಬರುತ್ತದೆಯೇ? ಹೊಸ ಅಧ್ಯಯನ ಹೇಳುವುದೇನು? – Kannada News | Can Too Much Vitamin B12 Increase Cancer Risk? Experts Explain

ದೇಹವನ್ನು ಆರೋಗ್ಯವಾಗಿಡಲು ವಿಟಮಿನ್ ಬಿ12 ಅತ್ಯಂತ ಮುಖ್ಯ. ಆದರೆ ಇತ್ತೀಚಿನ ಒಂದು ಅಧ್ಯಯನವು ವಿಟಮಿನ್ ಬಿ12 (Vitamin B12) ಮಟ್ಟದಲ್ಲಿ ಸರಿಯಾದ ಸಮತೋಲನ ಇಲ್ಲದಿದ್ದರೆ ಕ್ಯಾನ್ಸರ್ ಕಣಗಳ ಬೆಳವಣಿಗೆಯಾಗಬಹುದು, ಇವೆರಡಕ್ಕೂ ಸಂಬಂಧ ಇರಬಹುದು ಎಂಬ ಆತಂಕಕಾರಿ ವಿಷಯವನ್ನು ಬಹಿರಂಗಪಡಿಸಿದೆ. ಈ ವಿಚಾರ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅಧ್ಯಯನದ ಪ್ರಕಾರ, ವಿಟಮಿನ್ ಬಿ12ಗೆ ಸಂಬಂಧಿಸಿದ ಕೆಲವು ಜೀವ ರಾಸಾಯನಿಕ ಪ್ರಕ್ರಿಯೆಗಳು ಕ್ಯಾನ್ಸರ್ ಕಣಗಳು ಬದುಕಿ ಉಳಿಯಲು ಸಹಾಯ ಮಾಡಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ. ಸಾಮಾನ್ಯವಾಗಿ ದೇಹದಲ್ಲಿ…

Read More

‘ದೀದಿ ನಂಬರ್ 1’ ಶೋಗೆ ರಚನಾ ಬ್ಯಾನರ್ಜಿ ವಿದಾಯ? ಮತ್ತೊಬ್ಬ ನಾಯಕಿಗೆ ಆಫರ್ ನೀಡಿದ ವಾಹಿನಿ – Kannada News | Rachana Banerjee to quit Didi No 1 show Channel approaches another actress

ಬಂಗಾಳಿ ಕಿರುತೆರೆಯ ಅತ್ಯಂತ ಜನಪ್ರಿಯ ‘ದೀದಿ ನಂಬರ್ 1’ (Didi No. 1) ರಿಯಾಲಿಟಿ ಶೋನಿಂದ ನಟಿ ರಚನಾ ಬ್ಯಾನರ್ಜಿ (Rachana Banerjee) ಅವರನ್ನು ಬೇರ್ಪಡಿಸಿ ನೋಡುವುದು ಕಷ್ಟ. ಆದರೆ, ಈಗ ಕೇಳಿಬರುತ್ತಿರುವ ಲೇಟೆಸ್ಟ್ ಸುದ್ದಿಯೊಂದರ ಪ್ರಕಾರ, ರಚನಾ ಬ್ಯಾನರ್ಜಿ ಅವರು ಈ ಶೋನಿಂದ (Reality Show) ಹೊರನಡೆಯಲಿದ್ದಾರೆ ಎನ್ನಲಾಗಿದೆ. ಈಗಾಗಲೇ ವಾಹಿನಿಯು ಅವರ ಜಾಗಕ್ಕೆ ಚಿತ್ರರಂಗದ ಮತ್ತೊಬ್ಬ ಯುವ ನಾಯಕಿಯನ್ನು ಸಂಪರ್ಕಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. 2010ರಿಂದ ಆರಂಭವಾದ ‘ದೀದಿ ನಂಬರ್ 1’ ಶೋಗೆ ರಚನಾ…

Read More

ಅಡುಗೆಗೆ ಗರಂ ಮಸಾಲವನ್ನು ಯಾವಾಗ, ಎಷ್ಟು ಪ್ರಮಾಣದಲ್ಲಿ ಹಾಕಬೇಕು ಗೊತ್ತಾ? – Kannada News | When and how much garam masala should be added to dishes while cooking?

ಭಾರತೀಯ ಅಡುಗೆಮನೆಯಲ್ಲಿ ಗರಂ ಮಸಾಲಕ್ಕೆ (garam masala) ವಿಶೇಷ ಸ್ಥಾನವಿದೆ. ಗರಂ ಮಸಾಲವು ದಾಲ್ಚಿನ್ನಿ, ಲವಂಗ, ಏಲಕ್ಕಿ, ಮೆಣಸು, ಪಲಾವ್‌ ಎಲೆ, ಸೋಂಪು ಮುಂತಾದ ಮಸಾಲೆಗಳ ಮಿಶ್ರಣವಾಗಿದ್ದು, ಇದು ಸಸ್ಯಹಾರವೇ ಇರಲಿ ಮಾಂಸಹಾರವೇ ಇರಲಿ ಪ್ರತಿಯೊಂದು ಅಡುಗೆಯ ಘಮ, ರುಚಿಯನ್ನು ದ್ವಿಗುಣಗೊಳಿಸುವ ವಿಶೇಷ ಸಾಮರ್ಥ್ಯವನ್ನು ಹೊಂದಿದೆ. ಆದರೆ ಅಡುಗೆಗೆ ಅದನ್ನು ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇರಿಸುವುದು ತುಂಬಾನೇ ಮುಖ್ಯವಾಗಿರುತ್ತದೆ. ಇದಲ್ಲದಿದ್ದರೆ ಅಡುಗೆಯ ರುಚಿ ಕಳೆದುಹೋಗುವ ಅಥವಾ ಪದಾರ್ಥ ಕಹಿಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಅಡುಗೆಯ…

Read More

ಮೇ ತಿಂಗಳಲ್ಲಿ ರಫ್ತು ಶೇ. 18 ಹೆಚ್ಚಳ; ಆಮದು ಹೊರೆ ಇನ್ನೂ ಏರಿಕೆ; ಟ್ರೇಡ್ ಡೆಫಿಸಿಟ್ ಕೂಡ ಅಧಿಕ – Kannada News | May 2026 Trade: India’s Merchandise & Services Exports Rise, Positive Outlook from RBI

ನವದೆಹಲಿ, ಜೂನ್ 15: ಎಂಜಿನಿಯರಿಂಗ್ ಸರಕುಗಳು, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಎಲೆಕ್ಟ್ರಾನಿಕ್ಸ್ ಸರಕುಗಳ ಭರ್ಜರಿ ಮಾರಾಟದ ಹಿನ್ನೆಲೆಯಲ್ಲಿ ಮೇ ತಿಂಗಳಲ್ಲಿ ಭಾರತದ ಸರಕು ರಫ್ತು (Merchandise Exports) ಶೇ. 18 ರಷ್ಟು ಹೆಚ್ಚಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಬಿಡುಗಡೆ ಮಾಡಿರುವ ತಾತ್ಕಾಲಿಕ ಅಂಕಿ-ಅಂಶಗಳ ಪ್ರಕಾರ, ಕಳೆದ ವರ್ಷದ ಮೇ ತಿಂಗಳಿನಲ್ಲಿದ್ದ $38.30 ಬಿಲಿಯನ್‌ಗೆ ಹೋಲಿಸಿದರೆ ಈ ಬಾರಿ ರಫ್ತು $45.20 ಬಿಲಿಯನ್‌ಗೆ ತಲುಪಿದೆ. ಆದರೆ, ಇದೇ ಅವಧಿಯಲ್ಲಿ ಆಮದು (Imports) ಕೂಡ ಶೇ. 20.6…

Read More

ಉದ್ಧವ್ ಠಾಕ್ರೆಯವರ ಶಿವಸೇನೆಯಲ್ಲಿ ಬಿರುಕು; ಪ್ರತ್ಯೇಕ ಗುಂಪು ರಚಿಸುತ್ತಾರಾ ಯುಟಿಬಿ ಸಂಸದರು? – Kannada News | Rift in Uddhav Thackerays Shiv Sena Will UBT MPs form a separate group?

ನವದೆಹಲಿ, ಜೂನ್ 15: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಗಳು ನಡೆಯುತ್ತಿವೆ. ಏಕನಾಥ್ ಶಿಂಧೆ (Eknath Shinde) ಅವರ ಶಿವಸೇನಾ ಬಣ ಆಪರೇಷನ್ ಟೈಗರ್ ಅನ್ನು ಜಾರಿಗೊಳಿಸುತ್ತಿದೆ. ಈ ಅಭಿಯಾನದ ಅಡಿಯಲ್ಲಿ ಠಾಕ್ರೆ ಅವರ ಪಕ್ಷದ ಕೆಲವು ಸಂಸದರನ್ನು ವಿಭಜಿಸಲು ಪ್ರಯತ್ನ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮುಂಬೈನಲ್ಲಿ ಪಕ್ಷದ ಎಲ್ಲಾ ಸಂಸದರ ತುರ್ತು ಸಭೆಯನ್ನು ಕರೆದಿದ್ದರು. ಇದೇ ಉದ್ಧವ್ ಠಾಕ್ರೆ ಬಣದ ಶಿವಸೇನಾ ಸಂಸದರು ವಿಭಜನೆಯಾಗುವ…

Read More

ಮೈಸೂರಿನ ಪಬ್​​​​ನಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಜನರಿಗೆ ಗಂಭೀರ ಗಾಯ – Kannada News | Several Death And Injured after massive fire breaks out in Pub at Mysuru

ಮೈಸೂರು, (ಜೂನ್ 15): ಮೈಸೂರಿನ (Mysuru) ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಪಬ್ ನಲ್ಲಿ (Pub) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಈ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದರೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪಬ್​ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Source link

Read More