‘ಒದೆ ತಿಂತೀಯ, ಅವನನ್ನ ಬದುಕೋಕೆ ಬಿಡಲ್ಲ’: ಚೇತನ್ ವಿರುದ್ಧ ಸಾರಾ ಕೆಂಡ – Kannada News | Sa Ra Govindu Launches Sharp verbal Attack Against Chetan Ahimsa for talking about Dr Rajkumar

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಡಾ ರಾಜ್​ಕುಮಾರ್ (Dr Rajkumar) ಸಮಾಧಿಯ ಬಗ್ಗೆ ಮಾಡಿರುವ ಪೋಸ್ಟ್​​ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚೇತನ್ ಅಹಿಂಸ ವಿರುದ್ಧ ಈಗಾಗಲೇ ಕೆಲ ಕನ್ನಡಪರ ಸಂಘಟನೆಗಳು, ರಾಜ್​ಕುಮಾರ್ ಅಭಿಮಾನಿಗಳ ಸಂಘಗಳು ಪೊಲೀಸ್ ಠಾಣೆಯಲ್ಲಿ ಮತ್ತು ಚಲನಚಿತ್ರ ಸಂಘಗಳಿಗೆ ದೂರು ನೀಡಿವೆ. ಇದೀಗ ರಾಜ್​ಕುಮಾರ್ ಸಂಘದ ಅಧ್ಯಕ್ಷರಾಗಿದ್ದ ಸಾರಾ ಗೋವಿಂದು ಅವರು ಈ ಬಗ್ಗೆ ಮಾತನಾಡಿದ್ದು, ಚೇತನ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿರುವ ಜೊತೆಗೆ ಚೇತನ್ ಅವರಿಗೆ ನೇರವಾಗಿ, ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ. ‘ಈ ಬಾರಿ ಚೇತನ್​​ಗೆ ಒದೆ ಬೀಳುವುದು ಖಂಡಿತ’ ಎಂದಿದ್ದಾರೆ.

‘ಈ ಹಿಂದೆ ಗೌರಿ ಹತ್ಯೆ ನಡೆದ ಸಂದರ್ಭದಲ್ಲಿ ಆತ ವಾಟಾಳ್ ನಾಗರಾಜ್ ಜೊತೆಗೆ ನಡೆದುಕೊಂಡ ರೀತಿಗೆ ಅಂದೇ ನನ್ನ ಕೈಯಲ್ಲಿ ಒದೆ ತಿನ್ನುತ್ತಿದ್ದ ಆದರೆ ಅಂದು ಪೊಲೀಸರು ಆತನನ್ನು ಕಾಪಾಡಿದರು. ಆದರೆ ಈಗ ಖಂಡಿತ ಒದೆ ತಿನ್ನುತ್ತಾನೆ. ಆತ ಮಾತನಾಡಿರುವುದು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಡಾ ರಾಜ್​ಕುಮಾರ್ ಅವರ ಬಗ್ಗೆ. ಅವರ ಸಾಧನೆ, ಸೇವೆಯ ಬಗ್ಗೆ ಎಳ್ಳಷ್ಟೂ ಸಹ ಆತನಿಗೆ ಗೊತ್ತಿಲ್ಲ. ಈ ಬಾರಿ ಜನ, ಅಭಿಮಾನಿಗಳು ಸುಮ್ಮನೆ ಬಿಡಲ್ಲ. ಸಾಮಾಜಿಕ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ಅವನನ್ನು ಕೂಡಲೇ ಗಡಿಪಾರು ಮಾಡಬೇಕು, ಅವನು ರಾಜ್ಯದಲ್ಲೇ ಇದ್ದರೆ ಅವನನ್ನು ಬದುಕಲು ಬಿಡಲ್ಲ’ ಎಂದು ಸಾರಾ ಗೋವಿಂದು ಹೇಳಿದ್ದಾರೆ.

‘ಬಹಳಷ್ಟು ಜನರನ್ನು ಆತನ ಮಾತು ಕೆರಳಿಸಿದೆ. ಕ್ಷಮೆ ಕೇಳುವುದಕ್ಕೂ ಸಹ ಅವನಿಗೆ ಯೋಗ್ಯತೆ ಇಲ್ಲ. ಕರ್ನಾಟಕಕ್ಕೆ ಅವನ (ಚೇತನ್ ಅಹಿಂಸ) ಕೊಡುವೆ ಏನು? ಎಷ್ಟು ಸಿನಿಮಾ ಮಾಡಿದ್ದಾನೆ ಅವನು? ತಿರ್ಕೋಂಡು ತಿಂತಿದ್ದಾನೆ. ಹಾದಿ ಬೀದಿಯಲ್ಲಿ ಬೇಡಿಕೊಂಡು ತಿಂತಿದ್ದೀಯ? ನೀನು ಮೇರು ನಟರ ಬಗ್ಗೆ ಮಾತನಾಡುತ್ತೀಯ. ಆತನೊಬ್ಬ ನಿರುದ್ಯೋಗಿ, ಕೈಯಲ್ಲಿ ಮಾಡೋಕೆ ಕೆಲಸ ಇಲ್ಲ, ಮೊದಲು ಕೆಲಸ ಹುಡುಕಿಕೊ. ನಾವು ಸರ್ಕಾರದ ಮೇಲೆ ಒತ್ತಡ ಹಾಕುತ್ತೀವಿ, ಆತನನ್ನು ಈ ಕೂಡಲೇ ರಾಜ್ಯದಿಂದ ಹೊರಗೆ ಹಾಕಬೇಕು’ ಎಂದಿದ್ದಾರೆ.

‘ಹೊರದೇಶದಲ್ಲಿ ಹುಟ್ಟಿಬಂದು ಅಲ್ಲಿನ ಸಂಸ್ಕೃತಿ ಮೈಗೂಡಿಸಿಕೊಂಡಿದ್ದಾನೆ. ಅವನಿಗೆ ಇಲ್ಲಿನ ಸಂಸ್ಕೃತಿ, ಸಂಸ್ಕಾರ ಇಲ್ಲ. ಅಣ್ಣಾವ್ರಿಗೆ ಕೊಟ್ಟಿರುವ ಪ್ರಶಸ್ತಿಗಳ ಬಗ್ಗೆ ಮಾತನಾಡುತ್ತಾನೆ ಅವನು. ಭಾವನಾತ್ಮಕವಾಗಿ ನೋಡಬೇಡಿ ಅನ್ನೋದು ಸಹ ತಪ್ಪು. ನಾವು ಭಾವನಾತ್ಮಕವಾಗಿಯೇ ನೋಡುವುದು. ಅಣ್ಣಾವ್ರು, ವಿಷ್ಣುವರ್ಧನ್ ಅವರಂಥಹಾವರನ್ನು ಸಹ ನಾವು ನೆನಪಿಸಿಕೊಳ್ಳದೇ ಹೋದರೆ ಹೇಗೆ? ಚೇತನ್, ಅಣ್ಣಾವ್ರ ಬಗ್ಗೆ ಮಾತನಾಡಿ ಬಹಳ ಚಿಕ್ಕವನಾಗಿದ್ದಾನೆ. ಅವನೊಬ್ಬ ಶುದ್ಧ ಹುಚ್ಚ, ಪ್ರಚಾರ ಪಡೆಯಲು ಮಾತ್ರವೇ ಆತ ಹೀಗೆಲ್ಲ ಮಾಡ್ತಿದ್ದಾನೆ. ನಿಜವಾಗಿಯೂ ಕನ್ನಡಪರ ಆಗಿದ್ದರೆ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿರುವವರ ಮುಂದೆ ಹೋಗಿ ಧರಣಿ ಮಾಡು, ನಿನ್ನ ಹಿಂದೆ ನಾಲ್ಕು ಜನ ಇಲ್ಲ’ ಎಂದೆಲ್ಲ ಕಟುವಾಗಿಯೇ ಸಾರಾ ಗೋವಿಂದು ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಶಿವಮೊಗ್ಗ: ಲವ್ ವಿಚಾರಕ್ಕೆ ಯುವಕನ ಮೇಲೆ ಡೆಡ್ಲಿ ಅಟ್ಯಾಕ್; ತಲೆಯಲ್ಲೇ ಮಚ್ಚು ಬಿಟ್ಟು ಪರಾರಿ – Kannada News | Machete Attack: Teen Critically Injured in Love Affair Violence

ಶಿವಮೊಗ್ಗ, ಏಪ್ರಿಲ್​ 25: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ (shivamogga) ಮತ್ತೆ ನೆತ್ತರು ಹರಿದಿದೆ. ಲವ್ (Love)​​ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆ ಯತ್ನದಲ್ಲಿ ಅಂತ್ಯವಾಗಿದ್ದು, 17 ವರ್ಷದ ಯುವಕನ ತಲೆಯನ್ನ ಮಚ್ಚಿನಿಂದ ಸೀಳಿ ವಿಕೃತಿ ಮೆರೆಯಲಾಗಿದೆ. ತಲೆಯಲ್ಲೇ ಮಚ್ಚು ಸಿಲುಕಿಕೊಂಡ ಸ್ಥಿತಿಯಲ್ಲಿ ಯುವಕ ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಜನತೆಯನ್ನು ಬೆಚ್ಚಿಬೀಳಿಸಿದೆ.

ನಡೆದಿದ್ದೇನು?

ಶಿವಮೊಗ್ಗದ ವಾದಿ ಎ ಹುದಾ ಬಡಾವಣೆಯಲ್ಲಿ ಲವ್​​ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಆರೋಪಿ ಸೊಹೇಲ್ ಎಂಬಾತನಿಗೆ ಯುವತಿಯೊಬ್ಬಳ ಜೊತೆ ಮದುವೆ ನಿಶ್ಚಯವಾಗಿತ್ತು. ಆದರೆ, ತಾನು ಮದುವೆಯಾಗಲಿರುವ ಯುವತಿಯನ್ನು 17 ವರ್ಷದ ಅಪ್ರಾಪ್ತ ಯುವಕ ಪ್ರೀತಿಸುತ್ತಿದ್ದಾನೆ ಮತ್ತು ಆಕೆಯ ಸಂಪರ್ಕದಲ್ಲಿದ್ದಾನೆ ಎಂಬ ವಿಷಯ ಸೊಹೇಲ್​ಗೆ ತಿಳಿದು ಕೆಂಡಾಮಂಡಲವಾಗಿದ್ದ. ಇದೇ ಸೇಡಿನಿಂದ ಯುವಕನನ್ನು ಮುಗಿಸಲು ಸೊಹೇಲ್ ಸಂಚು ರೂಪಿಸಿದ್ದ.

ತಲೆಯಲ್ಲೇ ಮಚ್ಚು ಬಿಟ್ಟು ಕ್ರೌರ್ಯ

ನಿನ್ನೆ ರಾತ್ರಿ ಸೊಹೇಲ್ ತನ್ನ ಐವರು ಸಹಚರರೊಂದಿಗೆ ಯುವಕನ ಮನೆ ಬಳಿ ಹೊಂಚು ಹಾಕಿ ಕುಳಿತಿದ್ದ. ಯುವಕ ಕಾಣಿಸಿಕೊಳ್ಳುತ್ತಿದ್ದಂತೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ದಾಳಿಯ ತೀವ್ರತೆ ಎಷ್ಟಿತ್ತೆಂದರೆ, ಮಚ್ಚಿನಿಂದ ತಲೆಗೆ ಹೊಡೆದಾಗ ಆ ಮಚ್ಚು ತಲೆಯ ಒಳಗೇ ಸಿಲುಕಿಕೊಂಡಿದೆ. ನನ್ನವಳ ತಂಟೆಗೆ ಬಂದರೆ ಇದೇ ಗತಿ ಎಂಬಂತೆ ಮಚ್ಚನ್ನು ತಲೆಯಲ್ಲೇ ಬಿಟ್ಟು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಮದ್ವೆಗೆ ಕೆಲವೇ ಗಂಟೆಗಳಿರುವಾಗಲೇ ವಧು ನಾಪತ್ತೆ: ಪೋಷಕರಲ್ಲಿ ಅದೊಂದು ಅನುಮಾನ

ಹಿಂದೆ-ಮುಂದೆ ನೋಡದೆ ಸೊಹೇಲ್​​ 17 ವರ್ಷದ ಯುವಕನ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದಾನೆ. ಇದರಿಂದ ಆತನ ಸ್ಥಿತಿ ಗಂಭೀರವಾಗಿದೆ. ವೈದ್ಯರು ಹರಸಾಹಸ ಪಟ್ಟು ತಲೆಯಲ್ಲಿದ್ದ ಮಚ್ಚನ್ನು ಹೊರ ತೆಗೆದಿದ್ದಾರೆ. ಸದ್ಯ ಯುವಕ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಈ ಘಟನೆಯಿಂದ ವಾದಿ ಎ ಹುದಾ ಬಡಾವಣೆ ಮತ್ತು ನಗರದ ಜನರು ಬೆಚ್ಚಿಬಿದ್ದಿದ್ದಾರೆ. ತುಂಗಾ ನಗರ ಪೊಲೀಸರು ಮರ್ಡರ್ ಕೇಸ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ. ಘಟನೆಯಲ್ಲಿ ಈಗಾಗಲೇ ಕೆಲವರನ್ನು ವಶಕ್ಕೆ ಕೂಡ ಪಡೆದುಕೊಂಡಿದ್ದಾರೆ. ಇನ್ನು ನಾಪತ್ತೆಯಾದ ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಇದನ್ನೂ ಓದಿ: ಅತ್ತೆ ಮಗಳ ಜೊತೆ ಸರಸ, ಬೇರೊಬ್ಬಳ ಜತೆ ಸಂಸಾರ: ಇದೇನಿದು ವಿದ್ಯೆ ಕಲಿಸುವ ಗುರುವಿನ ಆಟ?

ಲವ್ ವಿಚಾರಕ್ಕೆ ಯುವಕರ ನಡುವೆ ಶುರುವಾದ ಗಲಾಟೆ ಕೊಲೆ ಮಾಡುವ ಹಂತಕ್ಕೆ ಹೋಗಿದ್ದು ಮಾತ್ರ ಆತಂಕ ಸೃಷ್ಟಿಸಿದೆ. ಅತ್ತ 17 ವರ್ಷದ ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪೊಲೀಸಪ್ಪನ ಪ್ರೇಮ ಪುರಾಣ; ಕಾನ್​ಸ್ಟೆಬಲ್​ನ​ ಹೆಂಡತಿ, ಮಗುವಿಗೆ ಚಾಕುವಿನಿಂದ ಇರಿದು ಕೊಂದ ಪ್ರೇಯಸಿ – Kannada News | Chhattisgarh Constable’s Lover kills His Wife and Son in house, Daughters Critical

ರಾಯ್ಪುರ, ಏಪ್ರಿಲ್ 25: ಛತ್ತೀಸ್​​ಗಢದಲ್ಲಿ ಪೊಲೀಸ್ ಕಾನ್​ಸ್ಟೆಬಲ್​ನ ಲವ್ ಸ್ಟೋರಿಗೆ (Love Story) ಆತನ ಇಡೀ ಕುಟುಂಬವೇ ಛಿದ್ರವಾಗಿದೆ. ಮದುವೆಯಾಗಿ, ಹೆಂಡತಿಗೆ ಮೂರು ಮಕ್ಕಳನ್ನು ಕರುಣಿಸಿದ್ದರೂ ಇನ್ನೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದ ಕಾನ್​ಸ್ಟೆಬಲ್ ಆಕೆಯ ಮನೆಯಲ್ಲೇ ಇರುತ್ತಿದ್ದ. ಇದು ಆತನ ಹೆಂಡತಿಗೂ ಗೊತ್ತಿತ್ತು. ಆದರೆ, ಏನೂ ಮಾಡಲಾಗದ ಸ್ಥಿತಿಯಲ್ಲಿದ್ದ ಆಕೆ ಅಸಹಾಯಕಳಾಗಿ ಎಲ್ಲವನ್ನೂ ಸಹಿಸಿಕೊಂಡಿದ್ದಳು. ಆತ ತನ್ನ ಮನೆಯಲ್ಲಿದ್ದಾಗಲೂ ಆ ಪ್ರೇಯಸಿ ಆಗಾಗ ಬಂದು ಆತನ ಹೆಂಡತಿ, ಮಕ್ಕಳ ಮುಂದೆಯೇ ಆತನೊಂದಿಗೆ ಸಲ್ಲಾಪ ನಡೆಸುತ್ತಿದ್ದಳು.

ಮದುವೆಯಾಗಿ 3 ಮಕ್ಕಳಿದ್ದ ಪೊಲೀಸ್ ಜೊತೆ ಅಕ್ರಮ ಸಂಬಂಧ ಹೊಂದಿದ್ದ 25 ವರ್ಷದ ಯುವತಿ ಈ ಬಾರಿ ಆತನಿಂದ ಆತನ ಕುಟುಂಬವನ್ನು ಸಂಪೂರ್ಣವಾಗಿ ದೂರ ಮಾಡಲೆಂದೇ ಬಂದಿದ್ದಳು. ಕಾನ್ಸ್‌ಟೇಬಲ್‌ನ ಮನೆಗೆ ಬಲವಂತವಾಗಿ ನುಗ್ಗಿದ ಆಕೆ ಆತನ ಪತ್ನಿ ಮತ್ತು ಮೂವರು ಮಕ್ಕಳನ್ನು ಚಾಕುವಿನಿಂದ ಇರಿದಿದ್ದಾಳೆ. ಇದರಿಂದ ತೀವ್ರವಾಗಿ ಗಾಯಗೊಂಡ ಕಾನ್​ಸ್ಟೆಬಲ್​ನ ಹೆಂಡತಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಡಬಾರದ ತಪ್ಪು ಮಾಡಿದ್ದು ಪೊಲೀಸ್ ಆದರೂ ಶಿಕ್ಷೆ ಅನುಭವಿಸಿದ್ದು ಮಾತ್ರ ಆತನ ಹೆಂಡತಿ ಮತ್ತು ಮಕ್ಕಳು.

ಇದನ್ನೂ ಓದಿ: ಶಾಲೆಗೆ ಹೋಗುತ್ತಿದ್ದಾಗ ರಾಜಸ್ಥಾನದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಇಂದು ಬೆಳಿಗ್ಗೆ ಆರೋಪಿ ಸರೋಜಿನಿ ಭಾರದ್ವಾಜ್ ತಮ್ಮ ಊರಿಗೆ ಹೋಗಲು ಟಿಕೆಟ್ ಖರೀದಿಸಲು ರೈಲ್ವೆ ನಿಲ್ದಾಣಕ್ಕೆ ಹೋಗಿದ್ದಾಗ ದುರ್ಗದಲ್ಲಿರುವ ಕಾನ್ಸ್‌ಟೇಬಲ್ ಲಲಿತೇಶ್ ಯಾದವ್ ಮನೆಗೆ ನುಗ್ಗಿದ್ದಳು. ಮನೆಯೊಳಗೆ ನುಗ್ಗಿದ ಸರೋಜಿನಿ ಲಲಿತೇಶ್ ಯಾದವ್​​ನ ಹೆಂಡತಿ ರೀನಾ ಯಾದವ್ ಜೊತೆ ಜಗಳವಾಡಿದಳು. ಈ ಜಗಳದ ನಡುವೆ ಆಕೆ ರೀನಾಳಿಗೆ ಚಾಕುವಿನಿಂದ ಚುಚ್ಚಿದಳು. ನಂತರ ಆಕೆಯ ಮೂವರು ಮಕ್ಕಳ ಮೇಲೂ ಹಲ್ಲೆ ನಡೆಸಿದಳು. ರೂಂಗೆ ಹೋಗಿ ಅಲ್ಲಿ ಹಾಸಿಗೆಯ ಮೇಲೆ ನಿದ್ರೆ ಮಾಡುತ್ತಿದ್ದ 9 ವರ್ಷದ ಆದಿತ್ಯ ಎಂಬ ಮಗುವಿಗೆ ಪದೇಪದೇ ಚಾಕುವಿನಿಂದ ಇರಿದ ಹಿನ್ನೆಲೆಯಲ್ಲಿ ಆತ ಅಲ್ಲೇ ಸಾವನ್ನಪ್ಪಿದ್ದಾನೆ. ರೀನಾಳಿಗೂ ಮನಸೋಇಚ್ಛೆ ಇರಿದಿದ್ದರಿಂದ ಆಕೆಯೂ ಮೃತಪಟ್ಟಿದ್ದಾಳೆ. ಇನ್ನಿಬ್ಬರು ಹೆಣ್ಣುಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿದ್ದಾರೆ ಎಂದು ಎನ್​ಡಿಟಿವಿ ವರದಿ ಮಾಡಿದೆ.

ವಿಪರ್ಯಾಸವೆಂದರೆ ಸರೋಜಿನಿ ಈ ರೀತಿ ದಾಳಿ ಮಾಡುವಾಗ ಲಲಿತೇಶ್ ಕೂಡ ಅಲ್ಲಿಯೇ ಇದ್ದ. ತನ್ನ ಮಕ್ಕಳ ಮೇಲೆ ಚಾಕುವಿನಿಂದ ಇರಿಯುವಾಗಲೂ ಆತ ಆಕೆಯನ್ನು ತಡೆಯಲಿಲ್ಲ. ಮಕ್ಕಳಿಗೆ ಇರಿಯುವುದನ್ನು ನೋಡಿದ ರೀನಾ ತನ್ನ ಗಂಡನ ಬಳಿ ಮಕ್ಕಳನ್ನು ಕಾಪಾಡುವಂತೆ ಗೋಗರೆದಿದ್ದಾಳೆ. ತನ್ನ ನೋವಿನ ನಡುವೆಯೂ ರೀನಾ ತನ್ನ ಮಕ್ಕಳಾದ ನೈನಾ ಮತ್ತು ತಾನಿಯಾರನ್ನು ಬಾತ್​​ರೂಂನಲ್ಲಿ ಲಾಕ್ ಮಾಡಿ ಸರೋಜಿನಿಯಿಂದ ಕಾಪಾಡಲು ಪ್ರಯತ್ನಿಸಿದ್ದಾಳೆ. ಮಕ್ಕಳನ್ನು ಏನೂ ಮಾಡಬೇಡ ಎಂದು ಸರೋಜಿನಿಯ ಕಾಲು ಹಿಡಿದು ಬೇಡಿಕೊಂಡಿದ್ದಾಳೆ.

ಇದನ್ನೂ ಓದಿ: ಗುರುಕುಲದಲ್ಲಿ 11 ವರ್ಷದ ವಿದ್ಯಾರ್ಥಿಯ ಬರ್ಬರ ಹತ್ಯೆ; ಮೈಮೇಲಿತ್ತು 42 ಗಾಯ

ಅಷ್ಟರಲ್ಲಿ ಗಲಾಟೆ ಕೇಳಿ ಅಕ್ಕಪಕ್ಕದ ಫ್ಲಾಟ್​ನವರು ಬಂದ ಕಾರಣದಿಂದ ಆ ಇಬ್ಬರು ಹೆಣ್ಣುಮಕ್ಕಳ ಜೀವ ಉಳಿದಿದೆ. ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ ಅಕ್ಕಪಕ್ಕದವರು ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಪೊಲೀಸರು ಲಲಿತೇಶ್ ಯಾದವ್ ಮತ್ತು ಸರೋಜಿನಿಯನ್ನು ಬಂಧಿಸಿದ್ದಾರೆ. ರೀನಾ ಯಾದವ್ ಮತ್ತು ಅವರ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ರೀನಾ ಮತ್ತು ಅವರ ಮಗ ಮೃತಪಟ್ಟಿದ್ದರು. ಪೊಲೀಸರ ಮನೆಯಲ್ಲಿಯೇ ನಡೆದ ಈ ಕೊಲೆ ಆತಂಕ ಮೂಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

DC vs PBKS: ಡೆಲ್ಲಿ ಬೌಲರ್​ ಲುಂಗಿ ಎನ್​ಗಿಡಿಗೆ ಗಂಭೀರ ಗಾಯ; ಆಸ್ಪತ್ರೆಗೆ ರವಾನೆ – Kannada News | Lungi Ngidi Suffers Serious Head Injury During Match; IPL Future in Doubt for DC Bowler

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಮಹಾ ಅವಘಡವೊಂದು ಸಂಭವಿಸಿದೆ. ಕ್ಯಾಚ್ ಹಿಡಿಯುವ ಯತ್ನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ವೇಗದ ಬೌಲರ್ ಲುಂಗಿ ಎನ್​ಗಿಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಂಜಾಬ್ ಬ್ಯಾಟರ್ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಎನ್​ಗಿಡಿ ಅವರ ತಲೆ ನೆಲಕ್ಕೆ ಜೋರಾಗಿ ಅಪ್ಪಳಿಸಿತು. ಇದರಿಂದ ಎನ್​ಗಿಡಿ ಮೈದಾನದಲ್ಲೇ ಬಿದ್ದು ನೋವಿನಲ್ಲಿ ನರಳಾಡಲಾರಂಬಿಸಿದರು.

ಎನ್​ಗಿಡಿ ಅವರ ಗಾಯದ ತೀವ್ರತೆ ಎಷ್ಟಿತ್ತೆಂದರೆ ಅವರಿಗೆ ಮೇಲೇಳಲು ಸಾಧ್ಯವಾಗಲಿಲ್ಲ. ಕೂಡಲೇ ಮೈದಾನಕ್ಕೆ ಆಗಮನಿಸಿದ ಡೆಲ್ಲಿ ತಂಡದ ಫಿಸಿಯೋ ಎನ್​ಗಿಡಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಆದರೂ ಎನ್​ಗಿಡಿ ಚೇತರಿಸಿಕೊಳ್ಳುವಂತೆ ಕಾಣಲಿಲ್ಲ. ಕೂಡಲೇ ಸ್ಟ್ರೆಚರ್ ಮೂಲಕ ಎನ್​ಗಿಡಿ ಅವರನ್ನು ಡಗೌಟ್​ಗೆ ಕರೆದೊಯ್ಯಲು ಪ್ರಯತ್ನಿಸಲಾಯಿತು. ಆದರೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಗಾಯದ ಗಂಭೀರತೆಯನ್ನು ಅರಿತು ಕೂಡಲೇ ಆಂಬುಲೆನ್ಸ್ ಅನ್ನು ಮೈದಾನಕ್ಕೆ ಕರೆತರಲಾಯಿತು. ನಂತರ ಅವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಪ್ರಸ್ತುತ ಎನ್​ಗಿಡಿ ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿದ ಬಳಿಕವಷ್ಟೇ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂದು ತಿಳಿಯಲಿದೆ. ಎನ್​ಗಿಡಿ ಅವರನ್ನು ಸ್ಕ್ಯಾನಿಂಗ್​ ಒಳಪಡಿಸುವ ಸಾಧ್ಯತೆ ಇದ್ದು, ಅದರ ವರದಿ ಬಂದ ಬಳಿಕವಷ್ಟೇ ಅವರ ಚೇತರಿಕೆಯ ಬಗ್ಗೆ ಹಾಗೂ ಅವರ ಲಭ್ಯತೆಯ ಬಗ್ಗೆ ಮಾಹಿತಿ ತಿಳಿಯಲಿದೆ. ಸದ್ಯದ ಪರಿಸ್ಥಿತಿಯನ್ನು ನೋಡಿದರೆ, ಎನ್​ಗಿಡಿ ಚೇತರಿಸಿಕೊಳ್ಳಲು ಸಾಕಷ್ಟು ದಿನಗಳು ಬೇಕಾಗಬಹುದು. ಇದರಿಂದ ಅವರು ಐಪಿಎಲ್​ನಿಂದ ಹೊರಬೀಳುವ ಸಾಧ್ಯತೆಗಳೆ ಹೆಚ್ಚಿವೆ. ಅದೇನೆ ಆಗಲಿ ಎನ್​ಗಿಡಿ ಬೇಗ ಗುಣಮುಖರಾಗಿ ಆಟಕ್ಕೆ ಮರಳುವಂತ್ತಾಗಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ವಾಸ್ತವವಾಗಿ ಕಳೆದ 24 ಗಂಟೆಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದು ಎರಡನೇ ಆಘಾತವಾಗಿದೆ. ಈ ಪಂದ್ಯಕ್ಕೂ ಒಂದು ದಿನ ಮೊದಲು ಅಭ್ಯಾಸದ ವೇಳೆ ತಂಡದ ಯುವ ಆಟಗಾರ ಮುಖಕ್ಕೆ ಚೆಂಡು ಬಡಿದು ತೀವ್ರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಕೂಡ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಎನ್​ಗಿಡಿ ಹೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿಕೊಂಡಿದ್ದಾರೆ. ಇವರಿಬ್ಬರ ಗಾಯದ ತೀವ್ರತೆ ಎಷ್ಟಿದೆ ಎಂಬುದು ಇನ್ನು ಕೆಲವೇ ಗಂಟೆಗಳಲ್ಲಿ ಗೊತ್ತಾಗಲಿದೆ.

Source link

May Horoscope: ಮೇ ತಿಂಗಳ ಅದೃಷ್ಟದ ರಾಶಿಗಳು; ಈ 4 ರಾಶಿಯವರಿಗೆ ಕಾದಿದೆ ಭಾರೀ ಆರ್ಥಿಕ ಲಾಭ! – Kannada News | May 2026 Horoscope: Lucky Zodiac Signs and Financial Success Predictions

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸಂಚಾರವು ಮನುಷ್ಯನ ಜೀವನದ ಮೇಲೆ ನಿರಂತರ ಪ್ರಭಾವ ಬೀರುತ್ತದೆ. 2026ರ ಮೇ ತಿಂಗಳು ಕೆಲವು ರಾಶಿಯ ವ್ಯಕ್ತಿಗಳಿಗೆ ಸುವರ್ಣ ಕಾಲವೆಂದೇ ಹೇಳಬಹುದು. ಈ ತಿಂಗಳು ಸಂಭವಿಸುವ ಪ್ರಮುಖ ಗ್ರಹಗಳ ಪಥ ಬದಲಾವಣೆಯು ಕೆಲವು ರಾಶಿಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದಲ್ಲದೆ, ಜೀವನದಲ್ಲಿ ನೆಮ್ಮದಿ ಮತ್ತು ಯಶಸ್ಸನ್ನು ತರಲಿವೆ. ಆ ಅದೃಷ್ಟವಂತ ರಾಶಿಗಳ ವಿವರ ಇಲ್ಲಿದೆ.

ಮಿಥುನ ರಾಶಿ ಅನಿರೀಕ್ಷಿತ ಬದಲಾವಣೆಗಳ ಪರ್ವ:

ಮಿಥುನ ರಾಶಿಯವರಿಗೆ ಮೇ ತಿಂಗಳು ಸರ್ವತೋಮುಖ ಅಭಿವೃದ್ಧಿಯನ್ನು ತರಲಿದೆ. ಈ ರಾಶಿಯವರು ಆರ್ಥಿಕವಾಗಿ ಮತ್ತು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಸದೃಢರಾಗಿರುತ್ತಾರೆ. ಮುಖ್ಯವಾಗಿ, ವಿದೇಶ ಪ್ರಯಾಣದ ಕನಸು ಕಾಣುತ್ತಿರುವವರಿಗೆ ಈ ಅವಧಿಯು ಅತ್ಯಂತ ಅನುಕೂಲಕರವಾಗಿದೆ. ನೀವು ಕೈಗೊಳ್ಳುವ ಪ್ರಯಾಣಗಳು ಕೇವಲ ಸಂತೋಷ ನೀಡುವುದಲ್ಲದೆ, ಅನಿರೀಕ್ಷಿತ ಆರ್ಥಿಕ ಲಾಭಗಳನ್ನು ತಂದುಕೊಡಲಿವೆ. ಜೀವನದಲ್ಲಿ ಎದುರಾಗುವ ಸಕಾರಾತ್ಮಕ ಬದಲಾವಣೆಗಳು ನಿಮ್ಮನ್ನು ಯಶಸ್ಸಿನ ಹಾದಿಗೆ ಕೊಂಡೊಯ್ಯಲಿವೆ.

ಕುಂಭ ರಾಶಿ ಉದ್ಯೋಗದಲ್ಲಿ ಪ್ರಗತಿ ಮತ್ತು ಕೌಟುಂಬಿಕ ಸುಖ:

ಕುಂಭ ರಾಶಿಯವರಿಗೆ ಈ ತಿಂಗಳು ಆರ್ಥಿಕ ಲಾಭಗಳ ಮಹಾಪೂರವೇ ಹರಿಯಲಿದೆ. ವೃತ್ತಿಜೀವನದಲ್ಲಿ ಉತ್ತಮ ಪದೋನ್ನತಿ ಅಥವಾ ಪ್ರಗತಿಯನ್ನು ಕಾಣುವ ಸಾಧ್ಯತೆ ಇದೆ. ಇನ್ನು ವಿದ್ಯಾರ್ಥಿಗಳಿಗೆ ಇದು ಶೈಕ್ಷಣಿಕವಾಗಿ ಅತ್ಯುತ್ತಮ ಸಮಯವಾಗಿದ್ದು, ಪರೀಕ್ಷೆಗಳಲ್ಲಿ ಉತ್ತಮ ಶ್ರೇಣಿಯನ್ನು ಸಾಧಿಸಲಿದ್ದಾರೆ. ಕುಟುಂಬ ಸದಸ್ಯರೊಂದಿಗೆ ತೀರ್ಥಯಾತ್ರೆಗೆ ಹೋಗುವ ಸುಯೋಗ ಒದಗಿಬರಲಿದ್ದು, ಮನೆಯಲ್ಲಿ ಸದಾ ಸಂತೋಷದ ವಾತಾವರಣ ನೆಲೆಸಿರುತ್ತದೆ.

ಇದನ್ನೂ ಓದಿ: ಭಾರತದ ಈ ಪಟ್ಟಣದಲ್ಲಿ ಈರುಳ್ಳಿ ಮಾರಾಟ ಮಾಡುವಂತಿಲ್ಲ, ನಿಷೇಧದ ಹಿಂದಿನ ಕುತೂಹಲಕಾರಿ ಸಂಗತಿ ಇಲ್ಲಿದೆ

ವೃಶ್ಚಿಕ ರಾಶಿ ಆದಾಯ ದ್ವಿಗುಣ ಮತ್ತು ಆಸ್ತಿ ಖರೀದಿ:

ಗ್ರಹಗಳ ಶುಭ ಸಂಚಾರದಿಂದಾಗಿ ವೃಶ್ಚಿಕ ರಾಶಿಯವರ ಆರ್ಥಿಕ ಸಂಕಷ್ಟಗಳು ದೂರವಾಗಲಿವೆ. ನಿಮ್ಮ ಆದಾಯವು ನಿರೀಕ್ಷೆಗೂ ಮೀರಿ ದ್ವಿಗುಣಗೊಳ್ಳಲಿದ್ದು, ಅಗತ್ಯ ಕೆಲಸಗಳಿಗೆ ಹಣದ ಕೊರತೆ ಎದುರಾಗದು. ಬಹಳ ದಿನಗಳಿಂದ ವಾಹನ ಖರೀದಿಸಬೇಕು ಎಂದು ಯೋಜಿಸುತ್ತಿದ್ದವರಿಗೆ ಈ ತಿಂಗಳು ಅತ್ಯಂತ ಸೂಕ್ತವಾಗಿದೆ. ಕೌಟುಂಬಿಕ ಸಮಸ್ಯೆಗಳು ಬಗೆಹರಿದು ಮನಸ್ಸಿಗೆ ಶಾಂತಿ ದೊರೆಯಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ಸಮಯವಿದು.

ಧನು ರಾಶಿ ಚಿನ್ನದಂತ ಕಾಲ ಮತ್ತು ಕಲಾತ್ಮಕ ಯಶಸ್ಸು:

ಧನು ರಾಶಿಯವರಿಗೆ ಮೇ ತಿಂಗಳು ಅದ್ಭುತ ಪ್ರಯೋಜನಗಳನ್ನು ನೀಡಲಿದೆ. ವಿಶೇಷವಾಗಿ ಮಹಿಳೆಯರು ಅಥವಾ ಬಹಳ ದಿನಗಳಿಂದ ಚಿನ್ನಾಭರಣ ಖರೀದಿಸಲು ಬಯಸುತ್ತಿದ್ದವರಿಗೆ ಈ ಅವಧಿಯಲ್ಲಿ ಆಸೆ ಈಡೇರಲಿದೆ. ಆದಾಯದ ಮೂಲಗಳು ಹೆಚ್ಚಾಗುವುದರಿಂದ ಆರ್ಥಿಕವಾಗಿ ಸುಭದ್ರರಾಗುವಿರಿ. ಇನ್ನು ಕಲಾ ಕ್ಷೇತ್ರ, ಸಂಗೀತ ಅಥವಾ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡವರಿಗೆ ಹೆಚ್ಚಿನ ಕೀರ್ತಿ ಮತ್ತು ಲಾಭ ದೊರೆಯಲಿದೆ. ಒಟ್ಟಾರೆಯಾಗಿ ಧನು ರಾಶಿಯವರಿಗೆ ಎಲ್ಲವೂ ಸಕಾರಾತ್ಮಕವಾಗಿ ಜರುಗಲಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:16 pm, Sat, 25 April 26

Source link

ಆಸ್ಪತ್ರೆಯಿಂದಲೇ ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ – Kannada News | CM Siddaramaiah Gives Minister D Sudhakar health update after met kims hospital Doctors

ಬೆಂಗಳೂರು, (ಏಪ್ರಿಲ್ 25): ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ (Minister D Sudhakar) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಬೆಂಗಳೂರಿನ  (Bengaluru) ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸುಧಾಕರ್ ಅವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಅವರು ಇಂದು ಏಪ್ರಿಲ್ 25) ಕಿಮ್ಸ್ ಆಸ್ಪತ್ರಗೆ ಭೇಟಿ ನೀಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು.

ಡಿ.ಸುಧಾಕರ್ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಚಿವ ಡಿ.ಸುಧಾಕರ್​ಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಶ್ವಾಸಕೋಶ ಕಸಿ ಮಾಡಬೇಕಾದರೆ ಬ್ರೈನ್ ಕಾನ್ಸಿಯಸ್ ಇರಬೇಕು. ಡಿ.ಸುಧಾಕರ್​ಗೆ ಪ್ರಜ್ಞೆ ಬಂದಮೇಲೆ ವೈದ್ಯರು ನಿರ್ಧಾರ ಮಾಡಲಿದ್ದಾರೆ.ವೆಂಟಿಲೇಷನ್​ನಲ್ಲಿ ಬೇರೆ ಎಲ್ಲಾ ಆರ್ಗನ್ಸ್​ ಸ್ಟೇಬಲ್​ ಆಗಿವೆ. ಆದ್ರೆ, ಬ್ರೈನ್ ಮಾತ್ರ ಕಾನ್ಸಿಯಸ್ ಆಗಿಲ್ಲ.ನಾಳೆ (ಏಪ್ರಿಲ್ 26) ಕಿಮ್ಸ್ ಆಸ್ಪತ್ರೆಯ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದು, ಸಿಟಿ ಸ್ಕ್ಯಾನ್ ನಂತರ ಕಂಡಿಷನ್ ಏನು ಅಂತಾ ಗೊತ್ತಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: D Sudhakar Health Bulletin: ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಡಾಕ್ಟರ್

Source link

Chanakya Niti: ಈ ಅಭ್ಯಾಸಗಳು ನಿಮ್ಮನ್ನು ಒಂಟಿಯಾನ್ನಾಗಿಸುತ್ತದೆ ಎಚ್ಚರ! – Kannada News | Chanakya Niti: Chanakya says that you will have to be alone because of these habits

ನಮ್ಮ ಅಭ್ಯಾಸಗಳು ಕೂಡ ನಮ್ಮ ಉನ್ನತಿ-ಅವನತಿಯನ್ನು ನಿರ್ಧರಿಸುತ್ತವೆ. ಹೌದು ಕೆಲವೊಂದು ಒಳ್ಳೆಯ ಅಭ್ಯಾಸಗಳು ನಮ್ಮನ್ನು ಯಶಸ್ಸಿನತ್ತ ಕೊಂಡೊಯ್ದರೆ, ಕೆಲವೊಂದು ಅಭ್ಯಾಸಗಳು ಜೀವನಕ್ಕೆ ಮುಳುವಾಗುತ್ತದೆ, ಶಾಂತಿಯನ್ನು ಹಾಳು ಮಾಡುತ್ತದೆ. ಅದರಲ್ಲೂ ಕೆಲವು ಕೆಟ್ಟ ಅಭ್ಯಾಸಗಳು ಕ್ರಮೇಣ ನಮ್ಮನ್ನು ಒಂಟಿತನಕ್ಕೆ (Loneliness) ಕರೆದೊಯ್ಯುತ್ತವೆ. ಇದರಿಂದಾಗಿ ಒಬ್ಬಂಟಿಯಾಗಿಯೇ ಜೀವನಪೂರ್ತಿ ಕಳೆಯಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಹಾಗಿದ್ರೆ ಒಂಟಿತನಕ್ಕೆ ಕಾರಣವಾಗುವ ಪ್ರಮುಖ ಅಭ್ಯಾಸಗಳು ಯಾವುವು ಎಂಬುದನ್ನು ತಿಳಿಯೋಣ.

ಈ ಅಭ್ಯಾಸಗಳೇ ಒಂಟಿತನಕ್ಕೆ ಕಾರಣ:

ಇತರರನ್ನು ಅರ್ಥಮಾಡಿಕೊಳ್ಳದಿರುವುದು: ನಾವು ಇತರರ ಭಾವನೆಗಳನ್ನು ಅರ್ಥಮಾಡಿಕೊಳ್ಳದಿದ್ದರೆ, ಸಂಬಂಧಗಳು ಕ್ರಮೇಣ ದುರ್ಬಲಗೊಳ್ಳುತ್ತದೆ. ಪ್ರತಿಯೊಬ್ಬರೂ ಕೂಡ ತಮ್ಮ ಭಾವನೆಗಳನ್ನು ಗೌರವಿಸುವ ಜನರೊಂದಿಗೆ ಮಾತನಾಡಲು ಮತ್ತು ಇರಲು ಬಯಸುತ್ತಾರೆ. ಆದರೆ ನಾವು ಅವರ ಭಾವನೆಗಳ ಬಗ್ಗೆ ಕಾಳಜಿ ವಹಿಸದಿದ್ದರೆ, ಅವರು ನಮ್ಮ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಈ ನಂಬಿಕೆ ಕಳೆದುಹೋದಾಗ, ಅವರು ನಮ್ಮೊಂದಿಗೆ ಮಾತನಾಡುವುದನ್ನು ಸಹ ನಿಲ್ಲಿಸುತ್ತಾರೆ. ಪರಿಣಾಮವಾಗಿ, ನಾವು ಒಂಟಿತನವನ್ನು ಅನುಭವಿಸುತ್ತೇವೆ. ಆದ್ದರಿಂದ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಜೀವನ ನಡೆಸುವುದು ತುಂಬಾನೇ ಮುಖ್ಯ.

ಅತಿಯಾದ ಕೋಪ: ಸಣ್ಣ ವಿಷಯಗಳಿಗೂ ಕೋಪಗೊಳ್ಳುವ ಜನರಿಂದ ಸ್ನೇಹಿತರು, ಕುಟುಂಬ ಸದಸ್ಯರು ಸಹ ದೂರವಾಗುತ್ತಾರೆ. ಕೋಪಗೊಂಡಾಗ ನಾವು ಏನು ಮಾತನಾಡುತ್ತೇವೆ ಎಂಬ ಅರಿವು ನಮಗೆ ಇರುವುದಿಲ್ಲ, ಆದರೆ ಇದು ನಮ್ಮ ಸುತ್ತಲಿನ ಜನರ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಕಾಲಾನಂತರದಲ್ಲಿ, ಇದು ಸಂಬಂಧಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ  ಮತ್ತು ಎಲ್ಲರೂ ನಮ್ಮಿಂದ ದೂರ ಹೋಗುತ್ತಾರೆ. ಇದು ಒಂಟಿತನಕ್ಕೆ ಕಾರಣವಾಗುತ್ತದೆ.

ನಂಬಿಕೆಯ ಕೊರತೆ: ಅನುಮಾನ ಮತ್ತು ಅಪನಂಬಿಕೆಯಿಂದ ಸಂಬಂಧಗಳು ದುರ್ಬಲಗೊಳ್ಳುತ್ತವೆ. ಹೌದು ನಂಬಿಕೆ ಇಲ್ಲದಿದ್ದರೆ ಸಂಬಂಧಗಳಲ್ಲಿ ಅಂತರ ಬೆಳೆಯುತ್ತದೆ. ಕಾಲಾನಂತರದಲ್ಲಿ, ಇದು ಒಂಟಿತನಕ್ಕೆ ಕಾರಣವಾಗಬಹುದು ಮತ್ತು ಜನರು ನಮ್ಮಿಂದ ದೂರವಾಗಬಹುದು ಮತ್ತು ನಾವು ಒಬ್ಬಂಟಿಯಾಗಿಯೇ ಜೀವನ ನಡೆಸಬೇಕಾಗುತ್ತದೆ ಎಂದಿದ್ದಾರೆ ಚಾಣಕ್ಯ.

ಇದನ್ನೂ ಓದಿ: ಅಭ್ಯಾಸಗಳು ನಿಮ್ಮಲ್ಲಿದ್ದರೆ ಜೀವನದಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದಿದ್ದಾರೆ ಚಾಣಕ್ಯ

ಸ್ವಾರ್ಥಿಯಾಗಿರುವುದು: ಸ್ವಾರ್ಥಿಗಳು ಇತರರ ಅಗತ್ಯತೆಗಳು ಮತ್ತು ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಾರೆ. ಕಾಲಾನಂತರದಲ್ಲಿ ಇದು ಅವರ ಸಂಬಂಧಗಳ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ಅವರಿಗೆ ಅಗತ್ಯವಿದ್ದಾಗ ಸಹಾಯ ಮಾಡಲು ಕಡಿಮೆ ಜನರಿರುತ್ತಾರೆ. ಇದು ಅವರನ್ನು ಸಾಮಾಜಿಕವಾಗಿ ಪ್ರತ್ಯೇಕಗೊಳಿಸುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಮತ್ತು ಒಂಟಿತನಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ ಚಾಣಕ್ಯ.

ನಕಾರಾತ್ಮಕ ಆಲೋಚನೆಗಳು: ನಕಾರಾತ್ಮಕವಾಗಿ ಯೋಚಿಸುವ ಜನರ ಸುತ್ತ ಯಾರೂ ಇರಲು ಬಯಸುವುದಿಲ್ಲ. ಅಂತಹ ಆಲೋಚನೆಗಳು ಸಂಬಂಧಗಳನ್ನು ದುರ್ಬಲಗೊಳಿಸುತ್ತವೆ. ಎಲ್ಲದರಲ್ಲೂ ತಪ್ಪುಗಳನ್ನು ಹುಡುಕುವುದು ಮತ್ತು ನಕಾರಾತ್ಮಕ ರೀತಿಯಲ್ಲಿ ಮಾತನಾಡುವುದು ನಿಮ್ಮ ಸುತ್ತಮುತ್ತಲಿನವರನ್ನು ದೂರವಿಡಬಹುದು. ಇದು ಒಂಟಿತನಕ್ಕೂ ಕಾರಣವಾಗಬಹುದು ಎನ್ನುತ್ತಾರೆ ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಷಕಾರಿ ಹಾವಿನಿಂದ 30 ಮಕ್ಕಳನ್ನು ಕಾಪಾಡಿ ಪ್ರಾಣ ಬಿಟ್ಟ ಬೀದಿ ನಾಯಿ ಕಾಳಿ! – Kannada News | Stray dog Kali becomes Hero after sacrifices life to save 30 students from Venomous snake in Odisha

ಒಡಿಶಾ, ಏಪ್ರಿಲ್ 25: ವಿಷಕಾರಿ ಹಾವಿನಿಂದ 30 ಮಕ್ಕಳನ್ನು ರಕ್ಷಿಸಿದ ನಂತರ ಒಡಿಶಾದಲ್ಲಿ ಬೀದಿ ನಾಯಿ ವೀರಮರಣವನ್ನಪ್ಪಿದೆ. ಒಡಿಶಾದ ಹಳ್ಳಿಯೊಂದರಲ್ಲಿ ವಿಷಕಾರಿ ಹಾವಿನಿಂದ 30ಕ್ಕೂ ಹೆಚ್ಚು ಚಿಕ್ಕ ಮಕ್ಕಳನ್ನು ರಕ್ಷಿಸಿದ ನಂತರ ಬೀದಿ ನಾಯಿ (Stray Dog) ಸಾವನ್ನಪ್ಪಿದೆ. ಇದು ಸ್ಥಳೀಯ ನಿವಾಸಿಗಳಲ್ಲಿ ಭಾರೀ ದುಃಖವನ್ನು ಉಂಟುಮಾಡಿದೆ. ತಮ್ಮ ಮಕ್ಕಳನ್ನು ಕಾಪಾಡಲು ಪ್ರಾಣ ಬಿಟ್ಟ ಕಾಳಿ ಎಂಬ ಬೀದಿ ನಾಯಿಯ ಶವವನ್ನು ಮೆರವಣಿಗೆ ಮಾಡಿ ಊರಿನವರೆಲ್ಲರೂ ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಮೂಲಕ ಅವರು ಆ ಬೀದಿನಾಯಿಗೆ ಗೌರವ ಸಲ್ಲಿಸಿದ್ದಾರೆ.

ಆ ಏರಿಯಾದವರಿಂದ ಕಾಳಿ ಎಂದು ಕರೆಯಲ್ಪಡುತ್ತಿದ್ದ ಬೀದಿನಾಯಿ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಧೀರಕುಲ ಗ್ರಾಮದಲ್ಲಿ ಬಹಳ ಜನಪ್ರಿಯವಾಗಿತ್ತು. ಸೋಮವಾರ ಬೆಳಿಗ್ಗೆ ಸುಮಾರು ಎಂಟೂವರೆ ಗಂಟೆಗೆ ಹತ್ತಿರದ ಪ್ರಾಥಮಿಕ ಶಾಲೆಯಾದ ಶ್ರೀ ಜಗನ್ನಾಥ ಶಿಶು ವಿದ್ಯಾ ಮಂದಿರದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಶಾಲಾ ಆವರಣದ ಹೊರಗೆ ಕುಳಿತಿದ್ದಾಗ ವಿಷಕಾರಿ ಹಾವು ಅವರ ಕಡೆಗೆ ಬರುತ್ತಿತ್ತು. ಇದನ್ನು ನೋಡಿದ ಕಾಳಿ ನಾಯಿ ಆ ಹಾವನ್ನು ಕಚ್ಚಿ ಕೊಂದಿತು. ಹಾವು ಕಚ್ಚಿದರೂ ಹೆದರದ ಕಾಳಿ ಹಿಂಜರಿಕೆಯಿಲ್ಲದೆ ಆ ಹಾವಿನೊಂದಿಗೆ ಹೋರಾಡಿತು.

ಇದನ್ನೂ ಓದಿ: ಬೀದಿ ನಾಯಿ ಪರಚಿದ್ದಕ್ಕೆ ಲಸಿಕೆ ಪಡೆಯಲು ಭಯಪಟ್ಟ ಬಾಲಕಿ, ರೇಬಿಸ್​ನಿಂದ ಸಾವು

ಹಾವು ಮತ್ತು ನಾಯಿಯ ಜಗಳವನ್ನು ನೋಡುತ್ತಾ ಭಯಗೊಂಡಿದ್ದ ಆ 30 ಮಕ್ಕಳ ಬಳಿ ಹಾವಿಗೆ ಹೋಗಲು ಅವಕಾಶ ನೀಡದ ಆ ನಾಯಿ ತನ್ನ ಪ್ರಾಣವನ್ನೇ ಒತ್ತೆಯಿಟ್ಟು ಮಕ್ಕಳನ್ನು ಕಾಪಾಡಿತು. ಈ ಜಗಳದ ವೇಳೆ ವಿಷಕಾರಿ ಹಾವು ಕಾಳಿಯ ಬಾಯಿಗೆ ಕಚ್ಚಿತು. ಈ ವಿಷದಿಂದ ನಾಯಿ ಸಾವನ್ನಪ್ಪಿತು. ಕಾಳಿಯ ಸಾವಿನ ಸುದ್ದಿ ಹಳ್ಳಿಯಾದ್ಯಂತ ಹರಡಿದಾಗ ಊರಿನ ನಿವಾಸಿಗಳು ದುಃಖಿತರಾದರು. ಆ ನಾಯಿಗೆ ಗೌರವ ಸಲ್ಲಿಸಲು ನಾಯಿಯ ಅಂತ್ಯಕ್ರಿಯೆಯ ಮೆರವಣಿಗೆಯನ್ನು ಆಯೋಜಿಸಿದರು. ನಾಯಿಯ ದೇಹವನ್ನು ಟ್ರಾಲಿಯ ಮೇಲೆ ಇರಿಸಿ, ಹೂವುಗಳಿಂದ ಅಲಂಕರಿಸಿ, ಬಿಳಿ ಬಟ್ಟೆಯಲ್ಲಿ ಸುತ್ತಿ, ಪೂರ್ಣ ವಿಧಿವಿಧಾನಗಳೊಂದಿಗೆ ಸಮಾಧಿ ಮಾಡಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೇಸಿಗೆಯಲ್ಲಿ ಬಿಪಿ ಸಾಮಾನ್ಯವಾಗಿದ್ದರೂ ಹೃದಯಕ್ಕೆ ಅಪಾಯ: ಮಾಸ್ಕ್ಡ್ ಹೈಪರ್ಟೆನ್ಷನ್ ಬಗ್ಗೆ ವೈದ್ಯರ ಎಚ್ಚರಿಕೆ – Kannada News | What Is Masked Hypertension? Hidden Cause of Stroke and Heart Attack

ಇತ್ತೀಚಿನ ದಿನಗಳಲ್ಲಿ ಆರೋಗ್ಯ ತಪಾಸಣೆ ವೇಳೆ ರಕ್ತದ ಒತ್ತಡ (BP) ಸಾಮಾನ್ಯವಾಗಿದೆ ಎಂದು ಬಂದರೂ, ಹೃದಯಕ್ಕೆ ಅಪಾಯ ಇರುವ ಸಾಧ್ಯತೆ ಇದೆ ಎಂದು ತಜ್ಞರು . ಎಚ್ಚರಿಸುತ್ತಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಇದನ್ನು ಮಾಸ್ಕ್ಡ್ ಹೈಪರ್ಟೆನ್ಷನ್ (Masked Hypertension) ಎಂದು ಕರೆಯಲಾಗುತ್ತದೆ. ಅಂದರೆ, ಆಸ್ಪತ್ರೆ ಅಥವಾ ಕ್ಲಿನಿಕ್‌ನಲ್ಲಿ ಬಿಪಿ ನಾರ್ಮಲ್ ಕಾಣಿಸಿಕೊಂಡರೂ, ದಿನನಿತ್ಯದ ಜೀವನದಲ್ಲಿ ಅದು ಹೆಚ್ಚಾಗಿರುವ ಸ್ಥಿತಿಯಾಗಿದೆ. ಹಾಗಾದರೆ ಇದು ಜೀವಕ್ಕೆ ಅಪಾಯಕಾರಿಯೇ, ಈ ರೀತಿಯಾಗುವುದಕ್ಕೆ ಕಾರಣವೇನು, ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಾಸ್ಕ್ಡ್ ಹೈಪರ್ಟೆನ್ಷನ್ ಎಂದರೇನು?

ತಜ್ಞರ ಪ್ರಕಾರ, ಈ ಸ್ಥಿತಿಯಲ್ಲಿ ವ್ಯಕ್ತಿಯ ಬಿಪಿ ಆಸ್ಪತ್ರೆಯಲ್ಲಿ 120/80 mmHg ಆಸುಪಾಸು ಇರುತ್ತದೆ. ಆದರೆ ಮನೆ ಅಥವಾ ಕೆಲಸದ ಸ್ಥಳದಲ್ಲಿ ಇದು 140/90 mmHg ಅಥವಾ ಅದಕ್ಕಿಂತ ಹೆಚ್ಚಾಗಿರಬಹುದು.

ಏಕೆ ಇದು ಅಪಾಯಕಾರಿ?

ಮಾಸ್ಕ್ಡ್ ಹೈಪರ್ಟೆನ್ಷನ್ ಅಪಾಯಕಾರಿ ಏಕೆಂದರೆ ಇದು ಸುಲಭವಾಗಿ ಪತ್ತೆಯಾಗುವುದಿಲ್ಲ. ದೀರ್ಘಕಾಲ ಬಿಪಿ ಹೆಚ್ಚಾಗಿ ಇರುವುದರಿಂದ ಹೃದಯದ ಮೇಲೆ ಒತ್ತಡ ಹೆಚ್ಚುತ್ತದೆ. ಇದರ ಪರಿಣಾಮವಾಗಿ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯ ಹೆಚ್ಚಾಗಬಹುದು. ಮಾನಸಿಕ ಒತ್ತಡ, ಕೆಲಸದ ಒತ್ತಡ, ಆತಂಕ ಮತ್ತು ಅಶಾಂತಿ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ಅದಲ್ಲದೆ ಕೆಲವರು ಹೊರಗಿನ ಪರಿಸ್ಥಿತಿಗಳಲ್ಲಿ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾರೆ, ಆದರೆ ಆಸ್ಪತ್ರೆಯಲ್ಲಿ ಶಾಂತವಾಗಿರುವುದರಿಂದ ಬಿಪಿ ಸಾಮಾನ್ಯವಾಗಿ ಕಾಣಿಸುತ್ತದೆ.

ಇದನ್ನೂ ಓದಿ: ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಹೇಗೆ ಗುರುತಿಸಬೇಕು?

ವೈದ್ಯರು ಹೇಳುವಂತೆ, ಕೇವಲ ಆಸ್ಪತ್ರೆಯಲ್ಲಿ ಬಿಪಿ ಪರೀಕ್ಷೆ ಮಾಡಿಸಿದರೆ ಸಾಕಾಗುವುದಿಲ್ಲ. 24 ಗಂಟೆಗಳ ಆಂಬ್ಯುಲೇಟರಿ ರಕ್ತದೊತ್ತಡ ಮಾನಿಟರಿಂಗ್ (ABPM) ಮಾಡಿಸುವುದು ಉತ್ತಮ. ಇದು ದಿನಪೂರ್ತಿ ಬಿಪಿ ಮಟ್ಟವನ್ನು ತಿಳಿಯಲು ಸಹಾಯ ಮಾಡುತ್ತದೆ.

ತಡೆಗಟ್ಟಲು ಸಲಹೆಗಳು:

  • ಪ್ರತಿದಿನ ಕನಿಷ್ಠ 30 ನಿಮಿಷ ವ್ಯಾಯಾಮ ಮಾಡಿ
  • ಉಪ್ಪಿನ ಸೇವನೆ ಕಡಿಮೆ ಮಾಡಿ
  • ಮಾನಸಿಕ ಒತ್ತಡ ನಿಯಂತ್ರಿಸಿ
  • ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ

ತಜ್ಞರ ಸಲಹೆಯಂತೆ, ಸಮಯಕ್ಕೆ ಸರಿಯಾಗಿ ಪರೀಕ್ಷೆ ಮಾಡಿಸಿಕೊಳ್ಳುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಹೃದಯದ ಆರೋಗ್ಯ ಕಾಪಾಡಲು ಅತ್ಯಂತ ಮುಖ್ಯವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್: ವಿಡಿಯೋ – Kannada News | Chetan Ahimsa talks about Dr Rajkumar’s memorial watch video

ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಮಾಡಿರುವ ಫೇಸ್​​ಬುಕ್ ಪೋಸ್ಟ್ ತೀವ್ರ ಟೀಕೆಗೆ ಗುರಿ ಆಗಿದೆ. 2.50 ಎಕರೆ ಭೂಮಿಯನ್ನು ಒಬ್ಬ ವ್ಯಕ್ತಿಯ ಸಮಾಧಿಗೆ ಕೊಡುವುದು ಸರಿಯೇ ಎಂಬಂತೆ ಚೇತನ್ ಅಹಿಂಸ ಪ್ರಶ್ನೆ ಮಾಡಿದ್ದಾರೆ. ಇಂದು ಟಿವಿ9 ಜೊತೆಗೆ ಮಾತನಾಡಿರುವ ಚೇತನ್ ಅಹಿಂಸ, ತಮ್ಮ ಪ್ರಶ್ನೆಯ ಉದ್ದೇಶ ಏನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ. ರಾಜ್​ಕುಮಾರ್ ಎಂಬ ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ಅಷ್ಟು ಭೂಮಿಯನ್ನು ಮೀಸಲಿಟ್ಟ ಸರ್ಕಾರವನ್ನು ತಾವು ಟೀಕಿಸುತ್ತಿರುವುದಾಗಿ ಚೇತನ್ ಅಹಿಂಸ ಹೇಳಿದ್ದಾರೆ. ಚೇತನ್ ಅಹಿಂಸ ವಾದವೇನು? ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version