Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 26: ಚಿನ್ನದ ಬೆಲೆ ಭರ್ಜರಿ ಏರಿಕೆ ಮುಂದುವರಿದೆ. ಬೆಳ್ಳಿ ಬೆಲೆಯೂ ಭರ್ಜರಿಯಾಗಿ ಏರಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿ ದಾಟಿ ಹೋಗಿದೆ. ಆಭರಣ ಚಿನ್ನದ ಬೆಲೆ (Gold Rate) 15,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ತೀವ್ರವಾಗಿ ಹೆಚ್ಚಿದೆ. ಬೆಳ್ಳಿ ಬೆಲೆಯೂ ಗಗನಕ್ಕೇರುತ್ತಲೇ ಇದೆ. ಚೆನ್ನೈ ಮೊದಲಾದ ಕಡೆ ಬೆಳ್ಳಿ ಬೆಲೆ ಒಂದು ಕಿಲೋಗೆ 3,75,000 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,49,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,62,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 34,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,49,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 34,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 37,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,271 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,915 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,203 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 340 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,271 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,915 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 340 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,915 ರೂ
  • ಚೆನ್ನೈ: 15,025 ರೂ
  • ಮುಂಬೈ: 14,915 ರೂ
  • ದೆಹಲಿ: 14,930 ರೂ
  • ಕೋಲ್ಕತಾ: 14,915 ರೂ
  • ಕೇರಳ: 14,915 ರೂ
  • ಅಹ್ಮದಾಬಾದ್: 14,920 ರೂ
  • ಜೈಪುರ್: 14,930 ರೂ
  • ಲಕ್ನೋ: 14,930 ರೂ
  • ಭುವನೇಶ್ವರ್: 14,915 ರೂ

ಇದನ್ನೂ ಓದಿ: ಯೂರೋಪ್​ನ ಕಾರುಗಳ ಮೇಲಿನ ಟ್ಯಾರಿಫ್ ಶೇ. 110ರಿಂದ ಶೇ. 40ಕ್ಕೆ ಇಳಿಸಲಿದೆಯಾ ಭಾರತ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 630 ರಿಂಗಿಟ್ (14,527 ರುಪಾಯಿ)
  • ದುಬೈ: 556.50 ಡಿರಾಮ್ (13,872 ರುಪಾಯಿ)
  • ಅಮೆರಿಕ: 155 ಡಾಲರ್ (14,195 ರುಪಾಯಿ)
  • ಸಿಂಗಾಪುರ: 200.60 ಸಿಂಗಾಪುರ್ ಡಾಲರ್ (14,482 ರುಪಾಯಿ)
  • ಕತಾರ್: 552 ಕತಾರಿ ರಿಯಾಲ್ (13,867 ರೂ)
  • ಸೌದಿ ಅರೇಬಿಯಾ: 563 ಸೌದಿ ರಿಯಾಲ್ (13,746 ರುಪಾಯಿ)
  • ಓಮನ್: 59 ಒಮಾನಿ ರಿಯಾಲ್ (14,031 ರುಪಾಯಿ)
  • ಕುವೇತ್: 45.26 ಕುವೇತಿ ದಿನಾರ್ (13,584 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 340 ರೂ
  • ಚೆನ್ನೈ: 375 ರೂ
  • ಮುಂಬೈ: 340 ರೂ
  • ದೆಹಲಿ: 340 ರೂ
  • ಕೋಲ್ಕತಾ: 340 ರೂ
  • ಕೇರಳ: 375 ರೂ
  • ಅಹ್ಮದಾಬಾದ್: 340 ರೂ
  • ಜೈಪುರ್: 340 ರೂ
  • ಲಕ್ನೋ: 340 ರೂ
  • ಭುವನೇಶ್ವರ್: 375 ರೂ
  • ಪುಣೆ: 340

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Republic Day 2026: ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು – Kannada News | President Droupadi Murmu Honours Group Captain Shubhanshu Shukla with Ashoka Chakra on 77th Republic Day

ದೆಹಲಿ, ಜ.26: 2026ರ ಗಣರಾಜ್ಯೋತ್ಸವದಂದು ದೇಶವು ಅತ್ಯಂತ ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಭಾರತದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಪ್ರದಾನ ಮಾಡಿದರು. ಇದು 77ನೇ ಗಣರಾಜ್ಯೋತ್ಸವದ ಪ್ರಮುಖ ಘಟನೆಗಳಲ್ಲಿ ಒಂದಾಗಿತ್ತು. ಶುಭಾಂಶು ಶುಕ್ಲಾ ಅವರ ಈ ಗೌರವಕ್ಕೆ ಕಾರಣ ಅವರ ಅಸಾಧಾರಣ ಸೇವೆ ಮತ್ತು ಸಾಹಸಮಯ ಕಾರ್ಯ. ಬಾಹ್ಯಾಕಾಶದಲ್ಲಿ ಭಾರತದ ಪತಾಕೆಯನ್ನು ಹಾರಿಸಿದಂತಹ ಮಹತ್ತರ ಕೀರ್ತಿ ಅವರಿಗೆ ಸಲ್ಲುತ್ತದೆ. ಈ ಅನನ್ಯ ಸಾಧನೆ ಮತ್ತು ಧೈರ್ಯಕ್ಕಾಗಿ ಅಶೋಕ ಚಕ್ರದಂತಹ ಶ್ರೇಷ್ಠ ಗೌರವವನ್ನು ಅವರಿಗೆ ನೀಡಲಾಗಿದೆ. ಈ ಪ್ರಶಸ್ತಿಯು ಅವರ ಸಮರ್ಪಣೆ, ಸಾಹಸ ಮತ್ತು ರಾಷ್ಟ್ರಕ್ಕಾಗಿ ಮಾಡಿದ ಅಪ್ರತಿಮ ಕೊಡುಗೆಯನ್ನು ಗುರುತಿಸುತ್ತದೆ. ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಈ ಸಾಧನೆಯು ಯುವ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಮತ್ತು ಭಾರತೀಯ ಸೇನೆಯ ಶೌರ್ಯ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ. ದೇಶದ ಗೌರವ ಮತ್ತು ಕೀರ್ತಿಯನ್ನು ಬಾಹ್ಯಾಕಾಶದಲ್ಲೂ ಎತ್ತಿ ಹಿಡಿದ ಅವರ ಕಾರ್ಯ ಸದಾ ಸ್ಮರಣೀಯ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

400 ಕೋಟಿ ದರೋಡೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಚುನಾವಣೆಗಾಗಿ ಹಣ ಸಾಗಿಸಲಾಗ್ತಿತ್ತಾ? – Kannada News | Political Accusations and Hawala Links in the Belagavi 400 Crore Robbery Case

ಬೆಳಗಾವಿ, ಜನವರಿ 26: ಚೋರ್ಲಾ ಘಾಟ್ ಬಳಿ ಸುಮಾರು 400 ಕೋಟಿ ರೂಪಾಯಿ ಮೌಲ್ಯದ ಎರಡು ಕಂಟೇನರ್‌ಗಳು ದರೋಡೆಯಾದ ಪ್ರಕರಣ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದೆ. ಅಕ್ಟೋಬರ್‌ನಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಣ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣಾ ಖರ್ಚಿಗೆ ಸಾಗಿಸಲಾಗುತ್ತಿತ್ತು ಎಂಬ ಅನುಮಾನಗಳು ವ್ಯಕ್ತವಾಗಿವೆ. ಮಹಾರಾಷ್ಟ್ರ ಸರ್ಕಾರ ಈ ರಾಬರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದ್ದಾರೆ. ಮತ್ತೊಂದೆಡೆ ಈ ಬಗ್ಗೆ ಗಂಭೀರ ಆರೋಪ ಮಾಡಿರುವ ಕರ್ನಾಟಕ ಬಿಜೆಪಿ ಎಂಎಲ್ಸಿ ರವಿಕುಮಾರ್​​, ಗೋವಾದಿಂದ ತಿರುಪತಿಗೆ ಹಣ ಸಾಗಿಸಿ ಹಳೆ ನೋಟುಗಳನ್ನು ಹೊಸ ನೋಟುಗಳಾಗಿ ಬದಲಾಯಿಸುವ ಯೋಜನೆ ಇತ್ತು ಎಂದಿದ್ದಾರೆ. ಅಲ್ಲದೆ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ, ಪಾಂಡಿಚೇರಿ ಸೇರಿದಂತೆ ಐದು ರಾಜ್ಯಗಳ ಚುನಾವಣೆಗೆ ಹಣ ಸರಬರಾಜು ಆಗುತ್ತಿತ್ತಾ ಎಂ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ. ಪಾಟೀಲ್ ಕೂಡ ಹಣದ ಮೂಲದ ಬಗ್ಗೆ ಪ್ರಶ್ನಿಸಿ, ತನಿಖೆಗೆ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಉಡುಪಿಯ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧನಿಗೆ ಅವಮಾನ! – Kannada News | Retired Army Commander Humiliated at Sasthana Toll: Udupi Incident Sparks Outrage

ಉಡುಪಿ, ಜನವರಿ 26: ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್‌ನಲ್ಲಿ ಯೋಧರಿಗೆ ಟೋಲ್ ಫ್ರೀ ಅವಕಾಶ ಇದ್ದು, ಸೂಕ್ತ ದಾಖಲೆ ತೋರಿಸಿದರೂ ನಿವೃತ್ತ ಯೋಧನನ್ನು ನಿಲ್ಲಿಸಿ ಟೋಲ್ ಸಿಬ್ಬಂದಿ ಅವಮಾನಿಸಿದರು. ಘಟನೆ ವೇಳೆ ಶ್ಯಾಮರಾಜ್ ವೀಲ್‌ಚೇರ್‌ನಲ್ಲಿ ಕುಳಿತಿದ್ದು, ಸಂಪೂರ್ಣ ಘಟನೆಯನ್ನು ವಿಡಿಯೋ ಮಾಡಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಸೂರ್ಯಕುಮಾರ್ ಯಾದವ್

Source link

Republic Day Parade 2026 LIVE: 77ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ, ವಿದೇಶಿ ಗಣ್ಯರು – Kannada News | Prime Minister Modi, foreign dignitaries participate in 77th Republic Day celebrations

ದೆಹಲಿ, ಜ.26: ಇಂದು ದೇಶದಲ್ಲಿ 77ನೇ ಗಣರಾಜ್ಯೋತ್ಸವ ದಿನವನ್ನು (Republic Day) ಆಚರಣೆ ಮಾಡಲಾಗುತ್ತದೆ.  ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ,  ಯುರೋಪಿಯನ್ ಕಮಿಷನ್‌ನ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಹಾಗೂ ಯುರೋಪಿಯನ್ ಕೌನ್ಸಿಲ್‌ನ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಭಾಗವಹಿಸಿದ್ದಾರೆ. ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ. ಈ ಬಾರಿಯ ಪರೇಡ್‌ನಲ್ಲಿ ಮಹಿಳಾ ಸಬಲೀಕರಣ (ನಾರಿ ಶಕ್ತಿ) ಮತ್ತು ಭಾರತದ ವೈವಿಧ್ಯಮಯ ಸಂಸ್ಕೃತಿಯ ಅನಾವರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಕರ್ನಾಟಕದ ಸ್ತಬ್ಧಚಿತ್ರವೂ ಸಹ ಪ್ರೇಕ್ಷಕರ ಗಮನ ಸೆಳೆಯಿತು. ಈ ಬಾರಿಯ ಗಣರಾಜ್ಯೋತ್ಸವಕ್ಕೆ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದ (ASEAN) ನಾಯಕರನ್ನು ಆಹ್ವಾನಿಸಲಾಗಿತ್ತು. ಭಾರತ ಮತ್ತು ASEAN ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದ ಸಂಕೇತವಾಗಿ ಈ ಭೇಟಿ ಬಹುಮುಖ್ಯವಾಗಿದೆ. ದಕ್ಷಿಣ ಏಷ್ಯಾದಲ್ಲಿ ಭದ್ರತೆ ಮತ್ತು ಆರ್ಥಿಕ ಸಹಕಾರವನ್ನು ಬಲಪಡಿಸುವ ಉದ್ದೇಶವನ್ನು ಇದು ಹೊಂದಿದೆ. ಹಾಗೂ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವು “ಅನ್ನದಾತನ ಸಾಹಸ ಮತ್ತು ಸಿರಿಧಾನ್ಯಗಳ ಶ್ರೀಮಂತಿಕೆ” ಎಂಬ ವಿಷಯವನ್ನು ಆಧರಿಸಿದೆ. ಸ್ತಬ್ಧಚಿತ್ರದ ಮುಂಭಾಗದಲ್ಲಿ ರೈತ ಮಹಿಳೆಯರು ಸಿರಿಧಾನ್ಯಗಳನ್ನು (Millets) ಸಂಸ್ಕರಿಸುವ ದೃಶ್ಯವನ್ನು ಮನಮೋಹಕವಾಗಿ ಕೆತ್ತಲಾಗಿದೆ. ಜತೆಗೆ ಕರ್ನಾಟಕದ ಜಾನಪದ ಕಲೆಗಳಾದ ಡೊಳ್ಳು ಕುಣಿತ ಮತ್ತು ಯಕ್ಷಗಾನದ ಪ್ರದರ್ಶನವು ಸ್ತಬ್ಧಚಿತ್ರದ ಮೆರುಗನ್ನು ಹೆಚ್ಚಿಸಿದೆ.

ಗಣರಾಜ್ಯೋತ್ಸವದ ಮುನ್ನಾದಿನದಂದು ಪದ್ಮ ಪ್ರಶಸ್ತಿಗಳು ಮತ್ತು ಸೇನಾ ಪದಕಗಳನ್ನು ಘೋಷಿಸಲಾಗುತ್ತದೆ. ಈ ಬಾರಿ ಕರ್ನಾಟಕದ ಹಲವು ಗಣ್ಯರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದವರಿಗೆ ಪದ್ಮ ಪ್ರಶಸ್ತಿಗಳು ಮತ್ತು ಸೇನಾ ಪದಕ ಘೋಷಣೆ ಮಾಡಲಾಗಿದೆ. ಕಲೆ, ಸಮಾಜ ಸೇವೆ, ಮತ್ತು ಕೃಷಿ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಕರ್ನಾಟಕದ ಗ್ರಾಮೀಣ ಭಾಗದ ಸಾಧಕರಿಗೆ ಈ ಬಾರಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ವಿಶಿಷ್ಟ ಸೇವೆಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ‘ರಾಷ್ಟ್ರಪತಿ ಪೊಲೀಸ್ ಪದಕ’ಕ್ಕೆ ಭಾಜನರಾಗಿದ್ದಾರೆ. ಪ್ರಾಣದ ಹಂಗು ತೊರೆದು ಇತರರನ್ನು ರಕ್ಷಣೆ ನಿಂತ ಕರ್ನಾಟಕದ ಧೈರ್ಯಶಾಲಿ ಮಕ್ಕಳಿಗೆ ‘ರಾಷ್ಟ್ರೀಯ ಬಾಲ ಪುರಸ್ಕಾರ’ ನೀಡಿ ಗೌರವಿಸಲಾಗಿದೆ. ಪರೇಡ್‌ನಲ್ಲಿ ಪ್ರದರ್ಶಿಸಲಾದ ಕಲಾತಂಡಗಳು ಭಾರತವು ತಂತ್ರಜ್ಞಾನ ಮತ್ತು ಸಂಪ್ರದಾಯ ಎರಡರಲ್ಲೂ ಹೇಗೆ ಮುಂಚೂಣಿಯಲ್ಲಿದೆ ಎಂಬುದನ್ನು ತೋರಿಸಿಕೊಟ್ಟವು.

ಇಲ್ಲಿದೆ ನೋಡಿ ಲೈವ್​​​ ವಿಡಿಯೋ (Tv9 kannada)

ಜನವರಿ 26 ರಂದೇ ಏಕೆ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತದೆ?

ಭಾರತಕ್ಕೆ ಸ್ವಾತಂತ್ರ್ಯ ಸಿಗುವ ಮೊದಲು, 1929ರ ಡಿಸೆಂಬರ್‌ನಲ್ಲಿ ಲಾಹೋರ್‌ನಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಒಂದು ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು. ಬ್ರಿಟಿಷರ ಆಡಳಿತದಿಂದ ನಮಗೆ ಸಂಪೂರ್ಣ ಸ್ವಾತಂತ್ರ್ಯ ಬೇಕು ಎಂದು ನಿರ್ಣಯಿಸಿ, ಅದನ್ನು ‘ಪೂರ್ಣ ಸ್ವರಾಜ್ಯ’ ಎಂದು ಕರೆದರು. ಆ ದಿನದ ನೆನಪಿಗಾಗಿ 1930ರ ಜನವರಿ 26 ರಂದು ಮೊದಲ ಬಾರಿಗೆ “ಸ್ವಾತಂತ್ರ್ಯ ದಿನ”ವನ್ನು ಆಚರಿಸಲಾಗಿತ್ತು. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 1947ರ ಆಗಸ್ಟ್ 15 ರಂದು. ಆದರೆ, ಭಾರತಕ್ಕೆ ತನ್ನದೇ ಆದ ಕಾನೂನು ಮತ್ತು ಸಂವಿಧಾನ ಇರಲಿಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನ ರಚನೆಯಾದ ನಂತರ, ಅದನ್ನು ಜಾರಿಗೆ ತರಲು ಒಂದು ವಿಶೇಷ ದಿನ ಬೇಕಿತ್ತು. 1930ರ ಆ ಐತಿಹಾಸಿಕ ‘ಪೂರ್ಣ ಸ್ವರಾಜ್ಯ’ ಘೋಷಣೆಯ ದಿನಕ್ಕೆ ಗೌರವ ಸಲ್ಲಿಸಲು, ಸಂವಿಧಾನವನ್ನು 1950ರ ಜನವರಿ 26 ರಂದೇ ಜಾರಿಗೆ ತರಲಾಯಿತು. ಅಂದಿನಿಂದ ಭಾರತವು ಬ್ರಿಟಿಷ್ ಕಾನೂನುಗಳಿಂದ ಮುಕ್ತವಾಗಿ, ಒಂದು ಸಾರ್ವಭೌಮ ಗಣರಾಜ್ಯವಾಯಿತು.

ಇದನ್ನೂ ಓದಿ: 77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ಭಾರತವು ಆಗಸ್ಟ್ 15, 1947 ರಂದು ಸ್ವಾತಂತ್ರ್ಯ ಗಳಿಸಿತು, ಆದರೆ ಸಂವಿಧಾನ ಜಾರಿಗೆ ಬಂದ ನಂತರವೇ ಅದು ಪ್ರಜಾಪ್ರಭುತ್ವ ರಾಷ್ಟ್ರವಾಯಿತು. ಭಾರತದ ಸಂವಿಧಾನವನ್ನು ನವೆಂಬರ್ 26, 1949 ರಂದು ರಚಿಸಲಾಯಿತು, ಆದರೆ ಅದು ಜನವರಿ 26, 1950 ರಂದು ಜಾರಿಗೆ ಬಂದಿತು. ಈ ದಿನದಂದು, ಭಾರತವು ತನ್ನನ್ನು ತಾನು ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿಕೊಂಡಿತು. ಈ ದಿನವನ್ನು ಭಾರತದ ಗಣರಾಜ್ಯ ದಿನವೆಂದು ಗುರುತಿಸಲಾಯಿತು ಮತ್ತು ಈ ಕಾರಣಕ್ಕಾಗಿಯೇ ಭಾರತವು ಪ್ರತಿ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಆಚರಿಸುತ್ತದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:03 am, Mon, 26 January 26

Source link

ಸ್ಪಷ್ಟ ತೆಲುಗಿನಲ್ಲಿ ಮಾತನಾಡಿದ ಜಪಾನ್ ವ್ಯಕ್ತಿ; ಶಾಕ್ ಆದ ಅಲ್ಲು-ರಶ್ಮಿಕಾ – Kannada News | Japanese Fan’s Fluent Telugu Shocks Allu Arjun and Rashmika at Pushpa 2 Japan Event

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಜಪಾನ್​​ಗೆ ತೆರಳಿದರು. ಅಲ್ಲಿ ‘ಪುಷ್ಪ 2’ ಸಿನಿಮಾ ರಿಲೀಸ್ ಆಯಿತು. ಜಪಾನ್ ಭಾಷೆಯಲ್ಲಿ ಜನರು ಸಿನಿಮಾ ನೋಡಿದರು. ಜಪಾನ್‌ನಲ್ಲಿ ಚಿತ್ರದ ಪ್ರಚಾರ ನಡೆಯುತ್ತಿದ್ದಾಗ, ಅನಿರೀಕ್ಷಿತ ಘಟನೆ ಸಂಭವಿಸಿತು. ತನ್ನ ನೆಚ್ಚಿನ ನಾಯಕನನ್ನು ನೋಡಲು ಬಂದಿದ್ದ ಜಪಾನಿನ ಅಭಿಮಾನಿಯೊಬ್ಬರು ಇದ್ದಕ್ಕಿದ್ದಂತೆ ತೆಲುಗಿನಲ್ಲಿ ಮಾತನಾಡಿದರು. ಇದರಿಂದ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ದಿಗ್ಭ್ರಮೆಗೊಂಡಿದರು.

ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಯಶಸ್ಸನ್ನು ಕಂಡ ‘ಪುಷ್ಪ 2’ ಚಿತ್ರ ಇತ್ತೀಚೆಗೆ ಜಪಾನ್‌ನಲ್ಲಿ ಬಿಡುಗಡೆಯಾಯಿತು. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಈ ಚಿತ್ರದ ಪ್ರಚಾರಕ್ಕಾಗಿ ಜಪಾನ್‌ಗೆ ಹೋಗಿದ್ದರು. ಅಲ್ಲಿ, ಜಪಾನಿನ ಪ್ರೇಕ್ಷಕರು ನಮ್ಮ ನಾಯಕರು ಮತ್ತು ನಾಯಕಿಯರಿಗೆ ಭವ್ಯ ಸ್ವಾಗತ ನೀಡಿದರು.

ಪ್ರಚಾರ ಚಟುವಟಿಕೆಗಳ ಭಾಗವಾಗಿ ಅಭಿಮಾನಿಗಳೊಂದಿಗೆ ಸಂವಹನ ನಡೆಸುವಾಗ ಒಂದು ಆಸಕ್ತಿದಾಯಕ ದೃಶ್ಯ ನಡೆಯಿತು. ಜಪಾನ್ ವ್ಯಕ್ತಿ ಇದ್ದಕ್ಕಿದ್ದಂತೆ ಪರಿಪೂರ್ಣ ತೆಲುಗಿನಲ್ಲಿ ಮಾತನಾಡಿದರು. ಐಕಾನಿಕ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನೂ ಸಹ ಆಶ್ಚರ್ಯಗೊಂಡರು. ರಶ್ಮಿಕಾ ಅಚ್ಚರಿಯಿಂದ ಮಾತೇ ಬರದಂತೆ ಆದರು.

ಇದನ್ನೂ ಓದಿ: ‘ತುಂಬಾ ಚೆನ್ನಾಗಿ ಮಾಡಿದಿರಾ’ ಟ್ವೀಟ್​​ನಲ್ಲಿ ಕನ್ನಡ ಬಳಸಿದ ಅಲ್ಲು ಅರ್ಜುನ್, ಕಾರಣ?

ಸಾಮಾನ್ಯವಾಗಿ ವಿದೇಶಿಯರಿಗೆ ತೆಲುಗು ಪದಗಳನ್ನು ಉಚ್ಚರಿಸಲು ಕಷ್ಟವಾಗುತ್ತದೆ. ಆದರೆ ಜಪಾನಿನ ಅಭಿಮಾನಿಯೊಬ್ಬರು ಮುಂದೆ ಬಂದು ನಿಜವಾದ ತೆಲುಗು ವ್ಯಕ್ತಿಯಂತೆ ಅಲ್ಲು ಅರ್ಜುನ್ ಅವರೊಂದಿಗೆ ತುಂಬಾ ಸರಳವಾಗಿ ಮಾತನಾಡಲು ಪ್ರಾರಂಭಿಸಿದರು. ‘ನನಗೆ ನೀವು ತುಂಬಾ ಇಷ್ಟ.. ನಿಮ್ಮ ನಟನೆ ಅದ್ಭುತವಾಗಿದೆ’ ಎಂದು ಅವರು ತೆಲುಗಿನಲ್ಲಿ ಹೇಳಿದರು ಮತ್ತು ಅಲ್ಲು ಅರ್ಜುನ್ ಶಾಕ್ ಆದರು. ವಿದೇಶಿಯೊಬ್ಬ ತನ್ನ ಮಾತೃಭಾಷೆಯನ್ನು ಇಷ್ಟು ಸ್ಪಷ್ಟವಾಗಿ ಮಾತನಾಡುವುದನ್ನು ನೋಡಿ ಐಕಾನ್ ಸ್ಟಾರ್ ಸಂತೋಷಪಟ್ಟರು. ಅಭಿಮಾನಿಯ ಭಾಷಾ ಪ್ರಾವೀಣ್ಯತೆಯನ್ನು ನೋಡಿ ರಶ್ಮಿಕಾ ಮಂದಣ್ಣ ಕೂಡ ಆಶ್ಚರ್ಯಚಕಿತರಾದರು.

ಈ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅಲ್ಲು ಅರ್ಜುನ್ ಕೂಡ ಅಭಿಮಾನಿಯನ್ನು ಹತ್ತಿರಕ್ಕೆ ಕರೆದೊಯ್ದು ಅಭಿನಂದಿಸಿದರು. ಇದು ಎಲ್ಲರನ್ನೂ ಮೆಚ್ಚಿಸಿತು. ರಶ್ಮಿಕಾ ತಮ್ಮದೇ ಆದ ಶೈಲಿಯಲ್ಲಿ ಮುಗುಳ್ನಕ್ಕು ಅಭಿಮಾನಿಗೆ ಧನ್ಯವಾದ ಅರ್ಪಿಸಿದರು. ಸಾಮಾನ್ಯವಾಗಿ ಭಾರತದವರು ಬೇರೆ ಭಾಷೆ ಕಲಿಯಲು ಪ್ರಯತ್ನಿಸುತ್ತಾರೆ. ಆದರೆ, ಇದೊಂದು ಭಿನ್ನ ಬೆಳವಣಿಗೆ ಎನ್ನಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕದಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಹೇಗಿತ್ತು ನೋಡಿ!

Source link

ಗಣರಾಜ್ಯೋತ್ಸವದಂದು ರೂಪಿಸಿದ್ದ ಬಹುದೊಡ್ಡ ಸಂಚು ವಿಫಲಗೊಳಿಸಿದ ಭದ್ರತಾ ಪಡೆ, 10,000 ಕೆಜಿ ಸ್ಫೋಟಕ ವಶ – Kannada News | Rajasthan Security Alert: Huge Explosive Cache Seized in Nagaur Before Republic Day

ದೆಹಲಿ, ಜ.26: ಇಡೀ ದೇಶವೇ 77 ಗಣರಾಜ್ಯೋತ್ಸವವನ್ನು (Republic Day) ಅದ್ಧೂರಿಯನ್ನು ಆಚರಣೆ ಮಾಡಿಕೊಳ್ಳುತ್ತಿದೆ. ಪ್ರಧಾನಿ ಮೋದಿ ಅವರು ಇಂದು ದೇಶದ ಜನರನ್ನದ್ದೇಶಿ ಮಾತನಾಡುತ್ತಿದ್ದಾರೆ. ಇದೀಗ ಇದಕ್ಕೂ ಮುನ್ನ ಅಂದರೆ ನೆನ್ನೆ (ಜ.25) ರಾಜಸ್ಥಾನದಲ್ಲಿ ಉಗ್ರರು ಸಂಚು ರೂಪಿಸಿರುವ ಅಘಾತಕಾರಿ ಸುದ್ದಿ ಬಹಿರಂಗವಾಗಿದೆ. ಭದ್ರತಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಈ ಸಂಚು ವಿಫಲವಾಗಿದೆ. ರಾಜಸ್ಥಾನದ ನಾಗೌರ್ (Nagaur) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ. ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಕಾರ್ಯಚರಣೆ ಎಂದು ಹೇಳಲಾಗಿದೆ. ಸುಮಾರು 10,000 ಕೆಜಿ (9,550 ಕೆಜಿ ನಿಖರವಾಗಿ) ಅಮೋನಿಯಂ ನೈಟ್ರೇಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮೋನಿಯಂ ನೈಟ್ರೇಟ್‌ನೊಂದಿಗೆ ದೊಡ್ಡ ಪ್ರಮಾಣದ ಡೆಟೋನೇಟರ್‌ಗಳು, ಫ್ಯೂಸ್ ವೈರ್‌ಗಳು ಮತ್ತು ಇತರ ಸ್ಫೋಟಕ ಸಾಮಗ್ರಿಗಳನ್ನು ಹೊಂದಿದ್ದ 187 ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಾಗೌರ್ ಜಿಲ್ಲೆಯ ಹರ್ಸೋರ್ (Harsore) ಗ್ರಾಮದ ನಿರ್ಜನ ಪ್ರದೇಶದಲ್ಲಿದ್ದ ಫಾರ್ಮ್‌ಹೌಸ್ ಮೇಲೆ ಜಿಲ್ಲಾ ಪೊಲೀಸ್ ತಂಡ ದಾಳಿ ನಡೆಸಿತ್ತು. ಈ ವೇಳೆ ಈ ಸ್ಫೋಟಕಗಳು ಸಿಕ್ಕಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲೇಮಾನ್ ಖಾನ್ (50) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈತ ಹರ್ಸೋರ್ ಗ್ರಾಮದ ನಿವಾಸಿಯಾಗಿದ್ದು, ಇವನ ವಿರುದ್ಧ ಈಗಾಗಲೇ ಸ್ಫೋಟಕ ಕಾಯ್ದೆಯಡಿ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಪ್ರಾಥಮಿಕ ವಿಚಾರಣೆಯಲ್ಲಿ, ಆರೋಪಿಯು ಈ ಸ್ಫೋಟಕಗಳನ್ನು ಅಕ್ರಮ ಗಣಿಗಾರಿಕೆ ಉದ್ದೇಶಕ್ಕಾಗಿ ಪೂರೈಸಲು ಸಂಗ್ರಹಿಸಿದ್ದಾಗಿ ಹೇಳಿಕೆ ನೀಡಿದ್ದಾನೆ. ಗಣರಾಜ್ಯೋತ್ಸವದ ಮುನ್ನಾದಿನ ಇಷ್ಟು ದೊಡ್ಡ ಪ್ರಮಾಣದ ಸ್ಫೋಟಕ ಸಿಕ್ಕಿರುವುದು ಭದ್ರತಾ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಲಾಗಿದೆ. ಕಳೆದ ವರ್ಷ (ನವೆಂಬರ್ 2025) ದೆಹಲಿಯ ಕೆಂಪುಕೋಟೆಯ ಬಳಿ ನಡೆದ ಸ್ಫೋಟದ ಮಾದರಿಯಲ್ಲೇ ಈ ಸ್ಫೋಟಕಗಳೂ ಇರುವುದರಿಂದ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ (ಎಕ್ಸ್​ ಖಾತೆ)

ಪ್ರಕರಣದ ಗಂಭೀರತೆ ಅರಿತು ಕೇಂದ್ರ ತನಿಖಾ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದ್ದು, ಅವರು ಆರೋಪಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಈ ಪ್ರಕರಣದ ಗಂಭೀರತೆ ಮತ್ತು ಸ್ಫೋಟಕಗಳ ಬೃಹತ್ ಪ್ರಮಾಣವನ್ನು ಗಮನಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಇಂಟೆಲಿಜೆನ್ಸ್ ಬ್ಯೂರೋ (IB) ಈಗಾಗಲೇ ತನಿಖೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿವೆ. ಇತ್ತೀಚೆಗೆ ದೆಹಲಿಯ ಕೆಂಪುಕೋಟೆಯ ಬಳಿ ನಡೆದ ಸ್ಫೋಟದಲ್ಲಿ ಬಳಸಲಾಗಿದ್ದ ಅದೇ ಮಾದರಿಯ ಅಮೋನಿಯಂ ನೈಟ್ರೇಟ್ ಮತ್ತು ಡೆಟೋನೇಟರ್‌ಗಳು ಇಲ್ಲಿಯೂ ಸಿಕ್ಕಿರುವುದರಿಂದ, ಇವೆರಡಕ್ಕೂ ಏನಾದರೂ ಸಂಬಂಧವಿದೆಯೇ ಎಂಬ ನಿಟ್ಟಿನಲ್ಲಿ NIA ತನಿಖೆ ನಡೆಸುತ್ತಿದೆ. ಸ್ಫೋಟಕಗಳ ವಶದ ನಂತರ ದೇಶಾದ್ಯಂತ, ವಿಶೇಷವಾಗಿ ದೆಹಲಿ ಮತ್ತು ರಾಜಸ್ಥಾನದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಸುಲೇಮಾನ್ ಖಾನ್‌ನ ಹಿನ್ನೆಲೆ:

ಈತ ನಾಗೌರ್ ಜಿಲ್ಲೆಯ ಹರ್ಸೋರ್ (Harsore) ಗ್ರಾಮದ ನಿವಾಸಿಯಾಗಿದ್ದು, 58 ವರ್ಷ ವಯಸ್ಸಿನವನು. ಮೇಲ್ನೋಟಕ್ಕೆ ಈತ ಕೃಷಿ ಮತ್ತು ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿ. ಈತನ ಮೇಲೆ ಈ ಹಿಂದೆ ಸ್ಫೋಟಕ ಕಾಯ್ದೆಯಡಿ (Explosives Act) ಮೂರು ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಈತ ಖುಲಾಸೆಗೊಂಡಿದ್ದರೂ, ಉಳಿದ ಪ್ರಕರಣಗಳು ಈತನಿಗೆ ಸ್ಫೋಟಕಗಳ ಅಕ್ರಮ ವ್ಯವಹಾರದಲ್ಲಿ ದೀರ್ಘಕಾಲದ ನಂಟು ಇರುವ ಬಗ್ಗೆ ಹೇಳಲಾಗಿದೆ. ಈ ಹಿಂದೆ ಈತನ ಬಳಿ ಅಧಿಕೃತ ಸ್ಫೋಟಕಗಳ ಪರವಾನಗಿ ಇತ್ತಾದರೂ, ನಿಗದಿಪಡಿಸಿದ ಸುರಕ್ಷಿತ ಕಟ್ಟಡದ ಬದಲು ಬೇರೆ ಕಡೆ (ತನ್ನ ಫಾರ್ಮ್‌ಹೌಸ್‌ನಲ್ಲಿ) ಸ್ಫೋಟಕಗಳನ್ನು ಸಂಗ್ರಹಿಸುವ ಮೂಲಕ ನಿಯಮಗಳನ್ನು ಗಾಳಿಕೆಗೆ ತೂರಿದ್ದನು.

ಇದನ್ನೂ ಓದಿ: ದೇಶದ ಇತಿಹಾಸದಲ್ಲೇ ದೊಡ್ಡ ಕಾರ್ಯಚರಣೆ: 5 ಮಹಿಳೆಯರು ಸೇರಿಸಿ 17 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಕೇಂದ್ರ ಗೃಹ ಸಚಿವಾಲಯದ ಹೇಳಿಕೆ:

ಸ್ಫೋಟಕಗಳ ಬೃಹತ್ ಪ್ರಮಾಣವನ್ನು (10,000 ಕೆಜಿ) ಗಮನಿಸಿದ ಗೃಹ ಸಚಿವಾಲಯ, ಈ ಪ್ರಕರಣವನ್ನು ಸ್ಥಳೀಯ ಪೊಲೀಸರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವರ್ಗಾಯಿಸಲು ಸೂಚಿಸಿದೆ. ಕೇವಲ ಗಣಿಗಾರಿಕೆಯ ಉದ್ದೇಶಕ್ಕಾಗಿ ಇಷ್ಟು ದೊಡ್ಡ ಮೊತ್ತದ ಅಪಾಯಕಾರಿ ವಸ್ತುಗಳನ್ನು ಸಂಗ್ರಹಿಸಿಡುವುದು ಅಸಾಧ್ಯ ಎಂಬುದು ಸಚಿವಾಲಯದ ಅಭಿಪ್ರಾಯ. ಗಣರಾಜ್ಯೋತ್ಸವದ ಸಮಯದಲ್ಲಿ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವಂತಹ ಯಾವುದೇ ಸಂಚನ್ನು ಹತ್ತಿಕ್ಕಲು ಸಚಿವಾಲಯವು ಕಠಿಣ ಸೂಚನೆ ನೀಡಿದೆ. “ಇದು ಕೇವಲ ನಿಯಮ ಉಲ್ಲಂಘನೆಯಲ್ಲ, ಬದಲಿಗೆ ದೇಶದ ವಿರುದ್ಧದ ದೊಡ್ಡ ಸಂಚಿನ ಭಾಗವಾಗಿರಬಹುದು” ಎಂದು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಸ್ಫೋಟಕಗಳು ಯಾವ ರಾಜ್ಯದಿಂದ ಪೂರೈಕೆಯಾದವು ಎಂಬುದನ್ನು ಪತ್ತೆಹಚ್ಚಲು ನೆರೆಯ ರಾಜ್ಯಗಳಾದ ಹರಿಯಾಣ, ಪಂಜಾಬ್ ಮತ್ತು ದೆಹಲಿ ಪೊಲೀಸರೊಂದಿಗೆ ಸಮನ್ವಯ ಸಾಧಿಸಲು ಸಚಿವಾಲಯವು ನಿರ್ದೇಶನ ನೀಡಿದೆ. ಇದರ ಜತೆಗೆ ಕಳೆದ ವರ್ಷದ ಘಟನೆಗಳನ್ನು ಉಲ್ಲೇಖಿಸಿರುವ ಸಚಿವಾಲಯ, ಸ್ಫೋಟಕಗಳ ಅಕ್ರಮ ಚಲನವಲನದ ಮೇಲೆ ನಿಗಾ ಇಡಲು ‘ಎಕ್ಸ್‌ಪ್ಲೋಸಿವ್ಸ್ ಟ್ರ್ಯಾಕಿಂಗ್ ಸಿಸ್ಟಮ್’ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಾಜ್ಯಗಳಿಗೆ ಸೂಚಿಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Optical Illusion: ಸಮುದ್ರ ಆಳದಲ್ಲಿರುವ ಮೀನನ್ನು 10 ಸೆಕೆಂಡುಗಳಲ್ಲಿ ಕಂಡುಹಿಡಿಯುವಿರಾ – Kannada News | Optical Illusion: If you can find the hidden fish in this picture

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media

ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಪರೀಕ್ಷಿಸಿಕೊಳ್ಳಲು ಮುಂದಾಗಿದ್ದೀರಾ. ಹಾಗಾದ್ರೆ ಇದೀಗ ಒಳ್ಳೆಯ ಸಮಯ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳ ಮೂಲಕ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಬಹುದು. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಸಮುದ್ರ ತಳದಲ್ಲಿರುವ ಅನೇಕ ಜೀವಿಗಳ ನಡುವೆ ಮೀನು ಇದೆ. ಆ ಮೀನು ಎಲ್ಲಿದೆ ಎಂದು ಗುರುತಿಸುವುದೇ ನಿಮ್ಮ ಮುಂದಿರುವ ಸವಾಲು. ಇಲ್ಲಿ ನೀಡಿರುವ ನಿರ್ದಿಷ್ಟ ಸಮಯದೊಳಗೆ ಈ ಒಗಟು ಬಿಡಿಸಿ ನೀವು ಬುದ್ಧಿವಂತರೇ ಎಂದು ಪರೀಕ್ಷಿಸಿಕೊಳ್ಳಿ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಮೊದಲು ನೋಡಿದಾಗ ನಿಮಗೆ ಸಮುದ್ರ ತಳವು ಕಾಣಿಸುತ್ತದೆ. ಈ ಸಮುದ್ರದ ತಳದಲ್ಲಿ ಅನೇಕ ಜೀವಿಗಳಾದ ಆಮೆಗಳು, ಜೆಲ್ಲಿ ಮೀನುಗಳು, ಆಕ್ಟೋಪಸ್‌ಗಳು, ನಕ್ಷತ್ರ ಮೀನುಗಳು ಮತ್ತು ಇತರ ಜೀವಿಗಳು ಗೋಚರಿಸುತ್ತವೆ. ನೀವು ಇಲ್ಲಿ ವಿವಿಧ ರೀತಿಯ ಸಸ್ಯಗಳನ್ನು ಸಹ ನೋಡಬಹುದು. ಈ ಫೋಟೋದಲ್ಲಿ ಮೀನೊಂದು ಅಡಗಿದೆ. ನೀವು ಸವಾಲು ಸ್ವೀಕರಿಸಲು ರೆಡಿ ಇದ್ರೆ ಈ ಚಿತ್ರದತ್ತ ಗಮನ ಹರಿಸಿ.

ಇದನ್ನೂ ಓದಿ:ಜಸ್ಟ್‌ 13 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಮನೆಯ ಬೀಗದ ಕೈಯನ್ನು ಹುಡುಕಬಲ್ಲಿರಾ

ಮೀನನ್ನು ಗುರುತಿಸಲು ಸಾಧ್ಯವಾಯಿತೇ?

ಇಲ್ಯೂಷನ್ ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುತ್ತದೆ. ಹೀಗಾಗಿ ಈ ಚಿತ್ರದಲ್ಲಿರುವ ಮೀನು ನಿಮ್ಮ ಕಣ್ಣಿಗೆ ಅಷ್ಟು ಸುಲಭವಾಗಿ ಗೋಚರಿಸುವುದಿಲ್ಲ. ನೀವು ಸ್ವಲ್ಪ ಹತ್ತಿರದಿಂದ ನೋಡಬೇಕು. ಆದರೆ ಈ ಜಲಚರ ಜೀವಿ ಎಲ್ಲಿದೆ ಎಂದು ನಾವೇ ಹೇಳುತ್ತೇವೆ. ಹಚ್ಚ ಹಸಿರಿನ ಸಸ್ಯದ ನಡುವೆ ಮೀನು ಇದೆ. ಈ ಕೆಳಗಿನ ಚಿತ್ರದಲ್ಲಿ ನಾವು ಮೀನನ್ನು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version