T20 World Cup 2026: ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶ್ ತಂಡ ಹೊರಬಿದ್ದಿದೆ. ಭಾರತದಲ್ಲಿ ಆಡಲು ನಿರಾಕರಿಸಿದ್ದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್ ಪಟ್ಟಿಯಿಂದ ಐಸಿಸಿ ಕೈ ಬಿಟ್ಟಿದೆ. ಅಲ್ಲದೆ ಬಾಂಗ್ಲಾ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಅವಕಾಶ ನೀಡಲಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ್ ಕೂಡ ಟಿ20 ವಿಶ್ವಕಪ್ನಿಂದ ಹೊರಗುಳಿಯುವ ಸುದ್ದಿಗಳು ಹರಿದಾಡುತ್ತಿದೆ.
ಬೆಳಗಾವಿ, ಜನವರಿ 25: ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ ರೂ ಹಣ ದರೋಡೆ (robbery) ಮಾಡಿದೆ. ಭಾರತದ ದರೋಡೆ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಬೆಳಗಾವಿ ಎಸ್ಪಿ ಕೆ.ರಾಮರಾಜನ್ ಮಾತನಾಡಿದ್ದು, ಮಹಾರಾಷ್ಟ್ರ ಪೊಲೀಸರು ತನಿಖೆ ಮಾಡುತ್ತಿದ್ದು, ನಾವು ಸಹಕಾರ ಕೊಡುತ್ತೇವೆ. ಚೋರ್ಲಾ ಘಾಟ್ ಮೂರು ರಾಜ್ಯಗಳಿಗೆ ಸಂಬಂಧಿಸಿದೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಬೆಳಗಾವಿ ಎಸ್ಪಿ ಕೆ.ರಾಮರಾಜನ್ ಹೇಳಿದ್ದಿಷ್ಟು
ನಗದರಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ಎಸ್ಪಿ ಕೆ.ರಾಮರಾಜನ್, ಜನವರಿ 6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ನಮಗೆ ಪತ್ರ ಬರುತ್ತೆ. ಚೋರ್ಲಾ ಘಾಟ್ನಲ್ಲಿ ರಾಬರಿಯಾಗಿದೆ. ಹಳೆಯ 400 ಕೋಟಿ ರೂ ಆಗಿರಬಹುದು ಅಂತಾ ಪತ್ರದಲ್ಲಿತ್ತು ಎಂದು ಮಾಹಿತಿ ನೀಡಿದರು.
ವಿಶಾಲ್ ನಾಯ್ಡು ಎಂಬಾತ ನಾಸಿಕ್ನಲ್ಲಿ ಅಕ್ಟೋಬರ್ 22ರಂದು ಸಂದೀಪ್ ಪಾಟೀಲ್ ಎಂಬಾತನ ಕಿಡ್ನ್ಯಾಪ್ ಮಾಡಿರುತ್ತಾರೆ. ಅಕ್ಟೋಬರ್ 16ರಂದು 400 ಕೋಟಿ ರೂ ಅಪಹರಣವಾಗಿದೆ. ಆ ಹಣ ಎಲ್ಲಿಗೆ ಹೋಗಿದೆ ಅಂತಾ ಪ್ರಶ್ನೆ ಮಾಡುತ್ತಾರೆ. ಈ ರಾಬರಿ ಆಗಿದ್ದು ಚೋರ್ಲಾ ಘಾಟ್ನಲ್ಲಿ ಅಂತಾ ಪತ್ರದಲ್ಲಿ ಉಲ್ಲೇಖವಿದೆ. ಈ ಕಾರಣಕ್ಕೆ ನಮ್ಮ ಖಾನಾಪುರದ ಸಬ್-ಇನ್ಸ್ಪೆಕ್ಟರ್ ಸೇರಿ ಒಂದು ತಂಡವನ್ನ ಕಳುಹಿಸಿದ್ದೇವೆ ಎಂದರು.
ಎಸ್ಐಟಿ ತಂಡ ಕೂಡ ರಚನೆ ಆಗಿದೆ. ಸಂದೀಪ್ ಪಾಟೀಲ್ ಬಳಿ ನಮ್ಮವರು ಮಾತಾಡಿದ್ದಾರೆ. ಆತ ಹೇಳಿರುವ ಪ್ರಕಾರ ಕಿಡ್ನ್ಯಾಪ್ ಮಾಡಿದವರು ಆತನಿಗೆ ದರೋಡೆ ಬಗ್ಗೆ ಹೇಳಿದ್ದಾರೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ. ಚೋರ್ಲಾ ಘಾಟ್ನಲ್ಲಿ ಹೊಸದಾಗಿ ಸಿಸಿಟಿವಿ ಅಳವಡಿಕೆ ಮಾಡುತ್ತೇವೆ ಎಂದು ಎಸ್ಪಿ ಕೆ.ರಾಮರಾಜನ್ ಹೇಳಿದ್ದಾರೆ.
ದರೋಡೆಕೋರರು ಚೋರ್ಲಾ ಘಾಟ್ ಆಯ್ಕೆ ಮಾಡಿಕೊಂಡಿದ್ದೇಕೆ?
ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮಧ್ಯೆ ಇರುವ ಚೋರ್ಲಾ ಘಾಟ್ ಪ್ರದೇಶದಲ್ಲಿ ನೆಟ್ವರ್ಕ್ ಬರುವುದಿಲ್ಲ. ಗೋವಾದ ಕೇರಿಯಿಂದ ಬೆಳಗಾವಿಯ ಜಾಂಬೋಟಿವರೆಗೂ 4 ಗಂಟೆ ಸಂಪರ್ಕ ಕಡಿತಗೊಳ್ಳುತ್ತೆ. ಗೋವಾದಿಂದ ಚೋರ್ಲಾ ಘಾಟ್ಗೆ ಬರಲು 3 ಗಂಟೆ ಸಮಯ ಬೇಕು. ಚೋರ್ಲಾದಿಂದ ಮಹಾರಾಷ್ಟ್ರಕ್ಕೆ ಅರಣ್ಯ ಅಂಚಿನ ದಾರಿ ಕನೆಕ್ಟ್ ಆಗುತ್ತೆ. ಚೋರ್ಲಾದಲ್ಲಿ ಸಣ್ಣಪುಟ್ಟ ವಾಹನ ಹೋಗುವಷ್ಟು ಕಾಲುದಾರಿ ಇದೆ. ಕಂಟೇನರ್ನಿಂದ ಮಿನಿ ಗೂಡ್ಸ್ಗೆ ಡಂಪ್ ಮಾಡಿ ಬಳಿಕ ಹಣ ಸಾಗಿಸಿದ್ರಾ, ಈ ಪ್ರದೇಶದಲ್ಲಿ ದರೋಡೆ ಮಾಡಿದರೆ ಯಾರಿಗೂ ಸಂಪರ್ಕ ಸಿಗೋದಿಲ್ಲ, ಹೀಗಾಗಿ ಈ ಎಲ್ಲಾ ವಿಚಾರಗಳಿಂದ ದರೋಡೆಕೋರರು ಚೋರ್ಲಾ ಘಾಟ್ ಆಯ್ಕೆ ಮಾಡಿಕೊಂಡರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
6 ಆರೋಪಿಗಳು ಅಂದರ್
400 ಕೋಟಿ ರೂ ದರೋಡೆ ಕೇಸ್ಗೆ ಸಂಬಂಧಿಸಿದಂತೆ, ನಿನ್ನೆ ಐವರನ್ನ ಬಂಧಿಸಿದ್ದ ಮಹಾರಾಷ್ಟ್ರ ಎಸ್ಐಟಿ ಅಧಿಕಾರಿಗಳು, ಇಂದು ಮತ್ತೊಬ್ಬನನ್ನ ಬಂಧಿಸಿದ್ದಾರೆ. ಜನವರಿ 23 ರಂದೇ ನಾಲ್ವರನ್ನ ಬಂಧಿಸಲಾಗಿತ್ತು. ಮಚೀಂದ್ರಾ ಮಾದವಿಯನ್ನ ವಿಚಾರಣೆ ನಡೆಸಿದ್ದಾರೆ.
ಮೈಸೂರು, ಜನವರಿ 25: ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಸಿದ್ಧತೆಗಳು, ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳು ಮತ್ತು ರಾಜ್ಯಪಾಲರ ಸಂವಿಧಾನಾತ್ಮಕ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಬಜೆಟ್ ಸಭೆಗಳು ಫೆಬ್ರವರಿ 2 ರಿಂದ ಪ್ರಾರಂಭವಾಗಲಿದ್ದು, ಪ್ರಸ್ತುತ ಹಣಕಾಸು ಇಲಾಖೆಯೊಂದಿಗೆ ಪ್ರಾಥಮಿಕ ಚರ್ಚೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದರು.
ರಾಜ್ಯಪಾಲರ ಭಾಷಣದ ಕುರಿತು ಸಂವಿಧಾನಾತ್ಮಕ ಅಂಶಗಳನ್ನು ವಿವರಿಸಿದ ಸಿದ್ದರಾಮಯ್ಯ, ಭಾರತೀಯ ಸಂವಿಧಾನದ 163 ಮತ್ತು 176ನೇ ವಿಧಿಗಳು ಭಾಷಣ ಮಾಡಲೇಬೇಕು ಎಂದು ಸ್ಪಷ್ಟವಾಗಿ ಬಳಸುತ್ತವೆ ಎಂದು ಹೇಳಿದರು. ನಾವು ಏನು ಬರೆದುಕೊಡುತ್ತೇವೋ, ಅದನ್ನು ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಮಾಡಲೇಬೇಕು ಎಂದು ಅವರು ಖಚಿತಪಡಿಸಿದರು. ನಾಳೆ ನಾವು ಭಾಷಣವನ್ನು ಬರೆದುಕೊಡುತ್ತೇವೆ. ಆದರೆ ರಾಜ್ಯಪಾಲರು ಅದನ್ನು ಬದಲಾಯಿಸುತ್ತಾರೋ ಇಲ್ಲವೋ ಎಂಬುದು ಅವರಿಗೆ ಬಿಟ್ಟಿದ್ದು ಎಂದು ಸಿಎಂ ಹೇಳಿದ್ದಾರೆ.
ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಅವರ ಅಭಿಮಾನಿಗಳ ನಡುವೆ ಯಾವಾಗಲೂ ಕಿರಿಕ್ ಆಗುತ್ತದೆ. ಅದಕ್ಕೆ ಈಗ ಹೊಸದೊಂದು ಉದಾಹರಣೆ ಸಿಕ್ಕಿದೆ. ಅಜಿತ್ ಕುಮಾರ್ (Ajith Kumar) ನಟನೆಯ ‘ಮಂಗಾತ’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಅಜಿತ್ ಅವರ ಅಭಿಮಾನಿಗಳನ್ನು ಕೆಣಕಲು ವಿಜಯ್ (Thalapathy Vijay) ಫ್ಯಾನ್ಸ್ ಪ್ರಯತ್ನಿಸಿದ್ದಾರೆ. ಅದರಿಂದಾಗಿ ಗಲಾಟೆ ಆಗಿದೆ. ವಿಜಯ್ ಅಭಿಮಾನಿಗೆ ಅಜಿತ್ ಫ್ಯಾನ್ಸ್ ಥಳಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.
ಸಿನಿಮಾದಿಂದ ದೂರ ಸರಿದಿರುವ ದಳಪತಿ ವಿಜಯ್ ಅವರು ಈಗ ರಾಜಕೀಯದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಟಿವಿಕೆ ಪಕ್ಷ ಕಟ್ಟಿ, ಅದರ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಅಭಿಮಾನಿಗಳು ಕೂಡ ಅವರಿಗೆ ಸಿಕ್ಕಾಪಟ್ಟೆ ಸಪೋರ್ಟ್ ಮಾಡುತ್ತಿದ್ದಾರೆ. ಟಿವಿಕೆ ಪಕ್ಷದ ಬಾವುಟವನ್ನು ಹಿಡಿದು ಫ್ಯಾನ್ಸ್ ಓಡಾಡುತ್ತಿದ್ದಾರೆ. ಅದೇ ಈಗ ಕಿರಿಕ್ಗೆ ಕಾರಣ ಆಗಿದೆ.
ತಮಿಳುನಾಡಿನ ಚಿತ್ರಮಂದಿರವೊಂದರಲ್ಲಿ ಅಜಿತ್ ಅಭಿನಯದ ‘ಮಂಗಾತ’ ಸಿನಿಮಾ ಪ್ರದರ್ಶನ ಆಗುತ್ತಿತ್ತು. ಈ ವೇಳೆ ವಿಜಯ್ ಅಭಿಮಾನಿಯೊಬ್ಬ ಟಿವಿಕೆ ಪಕ್ಷದ ಬಾವುಟ ಪ್ರದರ್ಶಿದ್ದಾನೆ. ಇದರಿಂದಾಗಿ ಅಜಿತ್ ಅಭಿಮಾನಿಗಳಿಗೆ ಕೋಪ ಬಂದಿದೆ. ಬೇಕಂತಲೇ ಬಾವುಟ ಪ್ರದರ್ಶಿದ ವ್ಯಕ್ತಿಗೆ ಅಜಿತ್ ಫ್ಯಾನ್ಸ್ ಥಳಿಸಿದ್ದಾರೆ. ಬಟ್ಟೆ ಹರಿದುಹೋಗುವ ರೀತಿಯಲ್ಲಿ ಹೊಡೆಯಲಾಗಿದೆ.
New video of Vijay fans getting beaten by Thala fans for waving party flag for reels during #Mankatha to irritate Ajith fans.
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ‘ದಳಪತಿ ವಿಜಯ್ ಅಭಿಮಾನಿಗಳ ಹುಚ್ಚು ಬಿಡಿಸುವುದು ಹೇಗೆ ಎಂಬುದು ಅಜಿತ್ ಫ್ಯಾನ್ಸ್ ಮತ್ತು ರಜನಿ ಫ್ಯಾನ್ಸ್ಗೆ ಮಾತ್ರ ಗೊತ್ತು’ ಎಂಬ ಕ್ಯಾಪ್ಷನ್ನೊಂದಿಗೆ ನೆಟ್ಟಿಗರೊಬ್ಬರು ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ‘ಆದರೆ ಈ ರೀತಿ ಥಳಿಸಿದ್ದಕ್ಕೆ ಅಜಿತ್ ಅಭಿಮಾನಿಗಳಿಗೆ ನಾಚಿಕೆ ಆಗಬೇಕು’ ಎಂಬ ಕಮೆಂಟ್ ಕೂಡ ಬಂದಿದೆ.
ಮರು ಬಿಡುಗಡೆ ವಿಚಾರದಲ್ಲಿ ವಿಜಯ್ ದಾಖಲೆಯನ್ನು ಅಜಿತ್ ಮುರಿದಿದ್ದಾರೆ. ವಿಜಯ್ ನಟನೆಯ ‘ಗಿಲ್ಲಿ’ ಸಿನಿಮಾ ಮರು ಬಿಡುಗಡೆ ಆದಾಗ ಮೊದಲ ದಿನ 4 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈಗ ಅಜಿತ್ ಅವರ ‘ಮಂಗಾತ’ ಸಿನಿಮಾ ಮರು-ಬಿಡುಗಡೆ ಆಗಿದ್ದು, ಮೊದಲ ದಿನ 4.1 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್ನಿಂದ ಬಂದ ಡಿಕೆಶಿ ಹೇಳಿದ್ದೇನು?
(ಫೋಟೋ: ಡಿಕೆ ಶಿವಕುಮಾರ್ರ ಎಕ್ಸ್ ಖಾತೆ)
ಬೆಂಗಳೂರು, ಜನವರಿ 25: ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ಹಲವು ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಾವೋಸ್ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಭಾಗವಹಿಸಿದ್ದ ಅನುಭವವನ್ನು ಹಂಚಿಕೊಳ್ಳುವುದರ ಜೊತೆಗೆ ಇಡೀ ರಾಜ್ಯದಲ್ಲಿ ಸಮಗ್ರ ಮೊಬಿಲಿಟಿ ವ್ಯವಸ್ಥೆ ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದಿದ್ದಾರೆ. ಬೆಂಗಳೂರು ಸೇರಿದಂತೆ ಚಿಕ್ಕ ಹಾಗೂ ದೊಡ್ಡ ನಗರಗಳ ಬೆಳವಣಿಗೆ ಅಗತ್ಯವಾಗಿದ್ದು, ದೇಶದ ಮಾನವ ಸಂಪತ್ತು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಅನಿವಾರ್ಯ ಎಂದರು.
ಕರ್ನಾಟಕದ ವ್ಯವಸ್ಥೆಗಳನ್ನು ಮೆಚ್ಚಿಕೊಂಡ ಅಂತಾರಾಷ್ಟ್ರೀಯ ನಾಯಕರು
ದಾವೋಸ್ ಸಭೆಯ ಕುರಿತು ಮಾತಾನಾಡಿದ ಡಿಸಿಎಂ, ಪ್ರಪಂಚದ 65 ದೇಶಗಳ ಪ್ರಮುಖರು ಅಲ್ಲಿ ಭಾಗವಹಿಸಿದ್ದರು. ಸುಮಾರು 45 ಕಂಪನಿಗಳ ಮುಖ್ಯಸ್ಥರು ಕರ್ನಾಟಕದಲ್ಲಿ ಹೂಡಿಕೆ ಬಗ್ಗೆ ನಮ್ಮೊಂದಿಗೆ ಚರ್ಚೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ಸ್, ನ್ಯಾನೋ ಟೆಕ್ನಾಲಜಿ, ಎಐ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೂಡಿಕೆ ಆಸಕ್ತಿ ವ್ಯಕ್ತವಾಗಿದೆ ಎಂದು ಹೇಳಿದರು.
ಸೌದಿ ಅರೇಬಿಯಾ ಹಣಕಾಸು ಸಚಿವರು ಸೇರಿದಂತೆ ಹಲವು ಅಂತಾರಾಷ್ಟ್ರೀಯ ನಾಯಕರು ಕರ್ನಾಟಕದ ನೀರು, ವಿದ್ಯುತ್ ಮತ್ತು ಮೂಲಸೌಕರ್ಯ ವ್ಯವಸ್ಥೆಯನ್ನು ಮೆಚ್ಚಿದ್ದಾರೆ. ಪಾರ್ಕಿಂಗ್ ವ್ಯವಸ್ಥೆ, ಟ್ರಾಫಿಕ್ ನಿರ್ವಹಣೆ ಹಾಗೂ ಟನಲ್ ರಸ್ತೆ ಯೋಜನೆಗಳ ಬಗ್ಗೆ ಮಹಾರಾಷ್ಟ್ರ ಸಿಎಂ ಫಡ್ನವಿಸ್ ಹಾಗೂ ಜಪಾನ್ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಟನಲ್ ಮಿಷಿನ್ ಕುರಿತು ನಮ್ಮ ತಂಡ ಸಮಗ್ರ ಅಧ್ಯಯನ ನಡೆಸುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
‘ಅಲ್ಲಿ ಯಾರು ಕೂಡ ಸಿಗ್ನಲ್ ಜಂಪ್ ಮಾಡಲ್ಲ’-ಡಿಸಿಎಂ
ದಾವೋಸ್ ವ್ಯವಸ್ಥೆಯ ಕುರಿತು ಹೇಳುತ್ತಾ, ಅಲ್ಲಿನ ಕಾನೂನು ಪಾಲನೆಯ ವಾತಾವರಣ ಶ್ಲಾಘನೀಯವಾಗಿದ್ದು, ಅಲ್ಲಿ ಯಾರು ಕೂಡ ಸಿಗ್ನಲ್ ಜಂಪ್ ಮಾಡುವುದಿಲ್ಲ. ಕಾನೂನಿಗೆ ಗೌರವ ನೀಡುವ ಸಂಸ್ಕೃತಿ ನಮ್ಮಲ್ಲೂ ಬೆಳೆಯಬೇಕು ಎಂದು ಡಿಸಿಎಂ ಕರೆ ನೀಡಿದರು. ಈ ದಾವೋಸ್ ಭೇಟಿ ರಾಜ್ಯಕ್ಕೆ ಉತ್ತಮ ಅವಕಾಶಗಳನ್ನು ತಂದಿದ್ದು, ಯುವಕರಿಗೆ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಬಿಡದಿ ಬಳಿ ಐಟಿ ಸಿಟಿ ನಿರ್ಮಾಣ
ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಯೋಜನೆ ರೂಪಿಸಿದ್ದು, ಫೆಬ್ರವರಿ ತಿಂಗಳಲ್ಲಿ ಕೆಲವು ಪ್ರಮುಖ ಯೋಜನೆಗಳ ಉದ್ಘಾಟನೆ ನಡೆಯಲಿದೆ ಎಂದು ಹೇಳಿದರು. ಬೆಂಗಳೂರು ಕೇಬಲ್ ವಿಚಾರದಲ್ಲಿ ಟೀಕೆಗಳಿದ್ದು, ಅದಕ್ಕೆ ಸಂಬಂಧಿಸಿದಂತೆ ತಜ್ಞರ ಸಲಹೆಗಳನ್ನು ಪಡೆಯಲಾಗುತ್ತಿದೆ ಎಂದರು. ಇದಲ್ಲದೆ ಬಿಡದಿ ಬಳಿ ಐಟಿ ಸಿಟಿ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿ ವ್ಯಕ್ತವಾಗಿದ್ದು, ರೈತರು ಸ್ವಯಂಪ್ರೇರಿತವಾಗಿ ಭೂಮಿ ನೀಡಲು ಮುಂದಾಗಿದ್ದಾರೆ. ರೈತರಿಗೆ ಉತ್ತಮ ಪರಿಹಾರ ಹಾಗೂ ಸೌಲಭ್ಯ ಒದಗಿಸಲಾಗುತ್ತದೆ. ಇಂತಹ ಆಫರ್ ದೇಶದಲ್ಲಿ ಎಲ್ಲೂ ನೀಡಲಾಗಿಲ್ಲ ಎಂದು ಡಿಕೆ ಹೇಳಿದರು.
ಪ್ರಾಚೀನ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಕರ ರಾಶಿಯು ಕುಜನ ಉಚ್ಚ ರಾಶಿ. ಅಂದರೆ ಇಲ್ಲಿ ಕುಜನು ಅತ್ಯಂತ ಬಲಿಷ್ಠನಾಗಿರುತ್ತಾನೆ. ಮಕರ ರಾಶಿಯ ಉತ್ತರಾಷಾಢ ನಕ್ಷತ್ರದಲ್ಲಿ ಕುಜನು ಸಂಚರಿಸುವಾಗ ಉಂಟಾಗುವ ಶುಭ-ಅಶುಭ ಫಲಗಳ ವಿವರ ಇಲ್ಲಿದೆ. ಇನ್ನು ಉತ್ತರಾಷಾಢ ನಕ್ಷತ್ರದಲ್ಲಿ ಜನವರಿ 28 ರಬರೆಗೆ ಕುಜನು ಇರಲಿದ್ದು ಇದರ ಅಧಿಪತಿ ಸೂರ್ಯ. ಕುಜ ಮತ್ತು ಸೂರ್ಯ ಮಿತ್ರ ಗ್ರಹಗಳಾದ್ದರಿಂದ, ಈ ನಕ್ಷತ್ರದಲ್ಲಿ ಕುಜನಿರುವುದು ಸಾಮಾನ್ಯವಾಗಿ ಆಡಳಿತಾತ್ಮಕ ಕೆಲಸಗಳಲ್ಲಿ ಇರುವವರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ತುಂಬಾ ಒಳ್ಳೆಯದು. ಇದು ದೃಢ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ. ಶುಭ ಫಲಗಳನ್ನು ಪಡೆಯುವ ರಾಶಿಗಳು ಕುಜನು ಮಕರ ರಾಶಿಯಲ್ಲಿರುವಾಗ ಈ ಕೆಳಗಿನ ರಾಶಿಯವರಿಗೆ ಹೆಚ್ಚಿನ ಲಾಭ ಮತ್ತು ಪ್ರಗತಿ ಕಂಡುಬರುತ್ತದೆ.
ಮೇಷ ರಾಶಿ:
ನಿಮ್ಮ ರಾಶ್ಯಾಧಿಪತಿಯಾದ ಕುಜನು ದಶಮ ಸ್ಥಾನದಲ್ಲಿ ಇರುವುದರಿಂದ ವೃತ್ತಿಜೀವನದಲ್ಲಿ ದೊಡ್ಡ ಯಶಸ್ಸು ಸಿಗಲಿದೆ. ಹೊಸ ಉದ್ಯೋಗ ಅಥವಾ ಬಡ್ತಿ ಸಿಗುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ:
ತೃತೀಯ ಸ್ಥಾನದಲ್ಲಿ ಕುಜನಿರುವುದರಿಂದ ನಿಮ್ಮ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ವಿಜಯ ಲಭಿಸುತ್ತದೆ. ಸಣ್ಣ ಪ್ರಯಾಣಗಳಿಂದ ಲಾಭವಾಗಲಿದೆ.
ಕನ್ಯಾ ರಾಶಿ:
ಪಂಚಮ ಸ್ಥಾನದಲ್ಲಿ ಕುಜನಿರುವುದು ಆರ್ಥಿಕವಾಗಿ ಲಾಭದಾಯಕ. ಹಳೆಯ ಹೂಡಿಕೆಗಳಿಂದ ಆದಾಯ ಬರಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗುತ್ತದೆ.
ಮೀನ ರಾಶಿ:
ಲಾಭ ಸ್ಥಾನದಲ್ಲಿ ಕುಜನಿರುವುದರಿಂದ ಹಣಕಾಸಿನ ಹರಿವು ಉತ್ತಮವಾಗಿರುತ್ತದೆ. ಸ್ನೇಹಿತರಿಂದ ಮತ್ತು ಹಿರಿಯ ಸಹೋದರರಿಂದ ಬೆಂಬಲ ಸಿಗಲಿದೆ.
ಮಿಶ್ರ ಫಲ:
ಮಕರ ರಾಶಿ:
ಕುಜನು ನಿಮ್ಮದೇ ರಾಶಿಯಲ್ಲಿದ್ದಾಗ ಅಧಿಕಾರ ಮತ್ತು ಶಕ್ತಿ ನೀಡುತ್ತಾನೆ, ಆದರೆ ಅತಿಯಾದ ಆತುರ ಮತ್ತು ಕೋಪ ಉಂಟಾಗಬಹುದು. ರಕ್ತದೊತ್ತಡ ಅಥವಾ ಸಣ್ಣಪುಟ್ಟ ಗಾಯಗಳ ಬಗ್ಗೆ ಎಚ್ಚರವಿರಲಿ.
ಕರ್ಕಾಟಕ ರಾಶಿ:
ಏಳನೇ ಮನೆಯಲ್ಲಿ ಕುಜನಿರುವುದರಿಂದ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಬಹುದು. ಪಾಲುದಾರಿಕೆ ವ್ಯವಹಾರದಲ್ಲಿ ಜಾಗರೂಕತೆ ಅಗತ್ಯ.
ಅಶುಭ ಫಲ:
ಮಿಥುನ ರಾಶಿ:
ಎಂಟನೇ ಮನೆಯಲ್ಲಿ ಕುಜನಿರುವುದು ಅನಿರೀಕ್ಷಿತ ಅಡೆತಡೆಗಳನ್ನು ತರಬಹುದು. ಆರೋಗ್ಯದ ಕಡೆ ಗಮನವಿರಲಿ ಮತ್ತು ವಾಹನ ಚಾಲನೆ ಮಾಡುವಾಗ ಜಾಗ್ರತೆ ವಹಿಸಿ.
ಧನು ರಾಶಿ:
ಎರಡನೇ ಮನೆಯಲ್ಲಿ ಕುಜನಿರುವುದರಿಂದ ಮಾತಿನಲ್ಲಿ ಕಠೋರತೆ ಬರಬಹುದು. ಇದು ಕುಟುಂಬದಲ್ಲಿ ಕಲಹಕ್ಕೆ ಕಾರಣವಾಗಬಹುದು. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ.
ಕುಜನ ಪ್ರಭಾವದಿಂದ ತೊಂದರೆ ಆಗುತ್ತಿದ್ದರೆ ಪ್ರತಿದಿನ ಹನುಮಾನ್ ಚಾಲೀಸಾ ಪಠಿಸುವುದು ಅಥವಾ ಮಂಗಳವಾರ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಮಾಡುವುದು ಉತ್ತಮ.
ಅಂಡರ್-19 ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿಗೆ ದಿನಾಂಕ ನಿಗದಿಯಾಗಿದೆ. ಅದರಂತೆ ಫೆಬ್ರವರಿ 1 ರಂದು ನಡೆಯಲಿರುವ ಸೂಪರ್-6 ಹಂತದ 12ನೇ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಝಿಂಬಾಬ್ವೆಯ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ಮೈದಾನ ಆತಿಥ್ಯವಹಿಸಲಿದೆ.
ಈ ಬಾರಿಯ ಅಂಡರ್-19 ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ಭಾರತ ತಂಡವು ಮೊದಲ ಪಂದ್ಯದಲ್ಲಿ ಯುಎಸ್ಎ ವಿರುದ್ಧ 6 ವಿಕೆಟ್ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು 18 ರನ್ಗಳಿಂದ ಮಣಿಸಿದ್ದರು.
ಹಾಗೆಯೇ ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡಕ್ಕೆ 7 ವಿಕೆಟ್ಗಳ ಸೋಲುಣಿಸಿದ್ದರು. ಈ ಮೂಲಕ ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿ ಟೀಮ್ ಇಂಡಿಯಾ ಸೂಪರ್-6 ಹಂತಕ್ಕೇರಿದ್ದರು.
ಮತ್ತೊಂದೆಡೆ ಗ್ರೂಪ್-ಸಿ ನಲ್ಲಿ ಕಣಕ್ಕಿಳಿದಿದ್ದ ಪಾಕಿಸ್ತಾನ್ ತಂಡವು ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 37 ರನ್ಗಳ ಸೋಲನುಭವಿಸಿದ್ದರು. ಈ ಸೋಲಿನ ಹೊರತಾಗಿಯೂ ಪಾಕ್ ಪಡೆ ಸ್ಕಾಟ್ಲೆಂಡ್ ಹಾಗೂ ಝಿಂಬಾಬ್ವೆ ವಿರುದ್ಧ ಜಯಗಳಿಸಿ 4 ಅಂಕಗಳೊಂದಿಗೆ ಸೂಪರ್-6 ಹಂತಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.
ಇದೀಗ ಸೂಪರ್-6 ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಗ್ರೂಪ್-2 ನಲ್ಲಿ ಸ್ಥಾನ ಪಡೆದುಕೊಂಡಿದೆ. ಅದರಂತೆ ಉಭಯ ತಂಡಗಳು ಫೆಬ್ರವರಿ 1 ರಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ ಏಷ್ಯಾಕಪ್ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ ಟೀಮ್ ಇಂಡಿಯಾ.
2025ರ ಅಂಡರ್-19 ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲುಣಿಸುವಲ್ಲಿ ಪಾಕಿಸ್ತಾನ್ ತಂಡ ಯಶಸ್ವಿಯಾಗಿತ್ತು. ದುಬೈನ ಐಸಿಸಿ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ್ ತಂಡವು 50 ಓವರ್ಗಳಲ್ಲಿ 347 ರನ್ ಕಲೆಹಾಕಿದ್ದರು.
ಈ ಗುರಿಯನ್ನು ಬೆನ್ನತ್ತಿದ್ದ ಟೀಮ್ ಇಂಡಿಯಾ ಗಳಿಸಿದ್ದು ಕೇವಲ 156 ರನ್ಗಳು ಮಾತ್ರ. ಈ ಮೂಲಕ 191 ರನ್ಗಳ ಅಂತರದಿಂದ ಸೋತು ಭಾರತ ತಂಡವು ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಈ ಸೋಲು-ಗೆಲುವಿನ ಬಳಿಕ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲು ಮುಂದಾಗಿದೆ.
ಬಳ್ಳಾರಿ, ಜನವರಿ 25: ನಗದರಲ್ಲಿ ಜಿ ಸ್ಕೇರ್ ಬಡಾವಣೆಯಲ್ಲಿನ ಮಾಡೆಲ್ ಹೌಸ್ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಜನಾರ್ದನ ರೆಡ್ಡಿ ಪೊಲೀಸರ ತನಿಖೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ವಿಡಿಯೋ ಆಧರಿಸಿ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಇರುವವರನ್ನು ಸೈಟ್ ಇಂಜಿನಿಯರ್ ರಿಜ್ವಾನ್ ಮತ್ತು ಇಮ್ರಾನ್ ಮೂಲಕ ವಿಡಿಯೋ ಮಾಡಿದವರು ಎಂದು ಹೇಳಿಸಲಾಗಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.
ಬೆಂಗಳೂರು, ಜನವರಿ 25: ಬಾಯ್ಫ್ರೆಂಡ್ಗೆ ಖಾಸಗಿ ಫೋಟೋಗಳನ್ನು (Private Photos) ಕಳಿಸಿದ ಯುವತಿ ಪೇಚೆಗೆ ಸಿಲುಕಿದ್ದು, ಪೊಲೀಸರ ಮೊರೆಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ (Bengaluru)ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೇಮಿಗೆ ಕಳಿಸಿದ್ದು, ಅದೇ ಫೋಟೋಗಳನ್ನಿಟ್ಟುಕೊಂಡು ಅಪರಿಚಿತ ನಂಬರ್ನಿಂದ ಬ್ಲಾಕ್ಮೇಲ್ ಕರೆ ಬಂದಿದೆ. ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ.
1 ಲಕ್ಷ ರೂ. ನೀಡಿದರೂ ಹೆಚ್ಚು ಹಣಕ್ಕೆ ಬೇಡಿಕೆ
ಯುವತಿ ಕೆಲ ಸಮಯದ ಹಿಂದೆ ತನ್ನ ಬಾಯ್ಫ್ರೆಂಡ್ಗೆ ಖಾಸಗಿ ಫೋಟೋಗಳನ್ನು ಕಳಿಸಿದ್ದಳು. ನಂತರ ಅಪರಿಚಿತ ಸಂಖ್ಯೆಯಿಂದ ಅದೇ ಖಾಸಗಿ ಫೋಟೋಗಳನ್ನು ಯುವತಿಯ ಮೊಬೈಲ್ಗೆ ಕಳುಹಿಸಿ, ಹಣ ನೀಡದಿದ್ದರೆ ಫೋಟೋಗಳನ್ನು ಸಾರ್ವಜನಿಕವಾಗಿ ಹರಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ.
ಈ ವಿಚಾರವನ್ನು ಯುವತಿ ತನ್ನ ಸ್ನೇಹಿತನೊಂದಿಗೆ ಚರ್ಚಿಸಿದ್ದು, ಬ್ಲ್ಯಾಕ್ಮೇಲರ್ನ ಒತ್ತಡಕ್ಕೆ ಒಳಗಾಗಿ ಸ್ನೇಹಿತನ ಮೂಲಕ ಸುಮಾರು 1 ಲಕ್ಷ ರೂಪಾಯಿ ಹಣವನ್ನು ಪಾವತಿಸಿದ್ದಳು. ಆದರೂ ಅಪರಿಚಿತ ಸಂಖ್ಯೆಯಿಂದ ಮತ್ತೆ ಮತ್ತೆ ಹೆಚ್ಚಿನ ಹಣಕ್ಕೆ ಬೇಡಿಕೆ ಬರುತ್ತಲೇ ಇತ್ತು. ಈ ವೇಳೆ ಫೋಟೋಗಳು ಬ್ಲ್ಯಾಕ್ಮೇಲರ್ಗೆ ಹೇಗೆ ಸಿಕ್ಕವು ಎಂಬ ಅನುಮಾನ ಮೂಡಿತ್ತು. ಮೊದಲಿಗೆ ತನ್ನ ಪ್ರಿಯಕರನೇ ಈ ಕೆಲಸ ಮಾಡಿರಬಹುದೆಂಬ ಅನುಮಾನವೂ ಯುವತಿಯ ತಲೆ ಹೊಕ್ಕಿತ್ತು. ಆದರೆ ಪ್ರಾಥಮಿಕ ತನಿಖೆಯಲ್ಲಿ ಈ ದುಷ್ಕೃತ್ಯದಲ್ಲಿ ಆಕೆಯ ಬಾಯ್ಫ್ರೆಂಡ್ ಪಾತ್ರ ಇಲ್ಲ ಎಂಬುದು ಪೊಲೀಸರಿಂದ ತಿಳಿದುಬಂದಿದೆ.
ಸಧ್ಯಕ್ಕೆ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸರು ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ. ಸಾರ್ವಜನಿಕರು ಈ ರೀತಿ ಖಾಸಗಿ ಮಾಹಿತಿಯನ್ನು ಹಂಚಿಕೊಳ್ಳುವ ವೇಳೆ ಎಚ್ಚರ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ದೆಹಲಿ, ಜನವರಿ 25: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 2026ರ ಮೊದಲ ಮನ್ ಕಿ ಬಾತ್ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಜನತೆಗೆ ಗಣರಾಜ್ಯೋತ್ಸವ ಮತ್ತು ರಾಷ್ಟ್ರೀಯ ಮತದಾರರ ದಿನಾಚರಣೆಯ ಶುಭಾಶಯ ತಿಳಿಸಿದರು. ಮತದಾನ ಮಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದ 130ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿ ಮತದಾನಕ್ಕೆ ಅರ್ಹರಾಗುವ ಯುವಜನರನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಪ್ರಜಾಪ್ರಭುತ್ವದಲ್ಲಿ ಭಾಗವಹಿಸುವಿಕೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ, ಯುವ ನಾಗರಿಕರು ಮತದಾರರಾಗುವ ಕ್ಷಣವನ್ನು ಸಮುದಾಯಗಳಲ್ಲಿ ಸಂಭ್ರಮಿಸುವಂತೆ ಸಲಹೆ ನೀಡಿದರು.
ಹುಟ್ಟುಹಬ್ಬಗಳನ್ನು ಸಂಭ್ರಮದಿಂದ ಆಚರಿಸುವಂತೆ, ಯುವಕ ಅಥವಾ ಯುವತಿ ಮೊದಲ ಬಾರಿ ಮತದಾರರಾಗುವ ಸಂದರ್ಭದಲ್ಲೂ ಸಂಪೂರ್ಣ ನೆರೆಹೊರೆಯವರು, ಗ್ರಾಮ ಅಥವಾ ನಗರ ಒಂದಾಗಿ ಅವರನ್ನು ಅಭಿನಂದಿಸಿ ಸಿಹಿ ಹಂಚಬೇಕು. ಇದರಿಂದ ಮತದಾನದ ಬಗ್ಗೆ ಜಾಗೃತಿ ಹೆಚ್ಚುವುದರ ಜೊತೆಗೆ, ಮತದಾರರ ಮಹತ್ವ ಮತ್ತಷ್ಟು ಬಲವಾಗುತ್ತದೆ ಎಂದರು.
ಭಾರತದ ಆರ್ಥಿಕತೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಜೈವಿಕ ತಂತ್ರಜ್ಞಾನದಲ್ಲಿ ಸಾಕಷ್ಟು ಸ್ಟಾರ್ಟ್ ಅಪ್ಗಳು ಆರಂಭವಾಗಿವೆ. ಭಾರತವು ವಿಶ್ವದಲ್ಲೇ ಮೂರನೇ ಅತಿದೊಡ್ಡ ಸ್ಟಾರ್ಟ್ಅಪ್ ಹಬ್ ಆಗಿ ಹೊರಹೊಮ್ಮುತ್ತಿದೆ. ಹತ್ತು ವರ್ಷಗಳ ಹಿಂದೆ ಊಹಿಸಲೂ ಸಾಧ್ಯವಾಗದ ಹಲವು ಕ್ಷೇತ್ರಗಳಲ್ಲಿ ಇಂದು ಸ್ಟಾರ್ಟ್ಅಪ್ಗಳು ಕಾರ್ಯನಿರ್ವಹಿಸುತ್ತಿವೆ. ಕೃತಕ ಬುದ್ಧಿಮತ್ತೆ, ಬಾಹ್ಯಾಕಾಶ, ಅಣುಶಕ್ತಿ, ಸೆಮಿಕಂಡಕ್ಟರ್ಗಳು, ಮೊಬೈಲಿಟಿ, ಹಸಿರು ಹೈಡ್ರೋಜನ್ ಹಾಗೂ ಜೈವಿಕ ತಂತ್ರಜ್ಞಾನ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ.
ಸ್ವಂತ ಸ್ಟಾರ್ಟ್ಅಪ್ ಆರಂಭಿಸಲು ಮುಂದಾಗುವ ಯುವಜನತೆಗೆ ಅಭಿನಂದಿಸಿದ ಪ್ರಧಾನಿ ಮೋದಿ, ನಾವು ತಯಾರಿಸುವ ಪ್ರತಿಯೊಂದು ಉತ್ಪನ್ನದ ಗುಣಮಟ್ಟವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಸಂಕಲ್ಪ ಮಾಡುವಂತೆ ಕರೆ ನೀಡಿದರು. ಅದು ವಸ್ತ್ರೋದ್ಯಮವಾಗಲಿ, ತಂತ್ರಜ್ಞಾನವಾಗಲಿ, ಎಲೆಕ್ಟ್ರಾನಿಕ್ಸ್ ಅಥವಾ ಪ್ಯಾಕೇಜಿಂಗ್ ಆಗಲಿ, ಭಾರತೀಯ ಉತ್ಪನ್ನ ಎಂದರೆ ‘ಅತ್ಯುತ್ತಮ ಗುಣಮಟ್ಟ’ ಎಂಬ ಅರ್ಥ ಮೂಡಿಬರಬೇಕು. ಶ್ರೇಷ್ಠತೆಯನ್ನೇ ನಮ್ಮ ಮಾನದಂಡವಾಗಿಸೋಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.