ಟಿ20 ವಿಶ್ವಕಪ್​ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವು ಹೊರಬಿದ್ದಿದೆ. ಭಾರತದಲ್ಲಿ ಟೂರ್ನಿ ಆಡಲು ನಿರಾಕರಿಸಿರುವ ಬಾಂಗ್ಲಾ ತಂಡವನ್ನು ಟಿ20 ವಿಶ್ವಕಪ್​ನಿಂದ ಐಸಿಸಿ ಕೈ ಬಿಟ್ಟಿದೆ. ಬದಲಾಗಿ ಸ್ಕಾಟ್ಲೆಂಡ್ ತಂಡವನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೀಗ ಟಿ20 ವಿಶ್ವಕಪ್​ ವೇಳಾಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ.

ಈ ಹಿಂದೆ ಬಾಂಗ್ಲಾದೇಶ್ ತಂಡವು ಗ್ರೂಪ್ ಸಿ ನಲ್ಲಿ ಸ್ಥಾನ ಪಡೆದಿತ್ತು. ಇದೀಗ ಗ್ರೂಪ್ ಸಿ ನಲ್ಲಿ ಸ್ಕಾಟ್ಲೆಂಡ್ ತಂಡ ಕಾಣಿಸಿಕೊಂಡಿದೆ. ಅದರಂತೆ ಮೊದಲ ಸುತ್ತಿನಲ್ಲಿ ಸ್ಕಾಟ್ಲೆಂಡ್ ತಂಡವು ಇಂಗ್ಲೆಂಡ್, ಇಟಲಿ, ವೆಸ್ಟ್ ಇಂಡೀಸ್ ಹಾಗೂ ನೇಪಾಳ ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ. ಈ ಟೂರ್ನಿಯ ಪರಿಷ್ಕೃತ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದ್ದು, ಈ ಪಂದ್ಯಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಟಿ20 ವಿಶ್ವಕಪ್ ವೇಳಾಪಟ್ಟಿ:

ದಿನಾಂಕ ಪಂದ್ಯ ಸ್ಥಳ
ಫೆಬ್ರವರಿ 7
ಪಾಕಿಸ್ತಾನ vs ನೆದರ್​ಲೆಂಡ್ಸ್ ಎಸ್‌ಎಸ್‌ಸಿ, ಕೊಲಂಬೊ
ಫೆಬ್ರವರಿ 7 ವೆಸ್ಟ್ ಇಂಡೀಸ್ vs ಸ್ಕಾಟ್ಲೆಂಡ್ ಕೋಲ್ಕತ್ತಾ
ಫೆಬ್ರವರಿ 7 ಭಾರತ vs ಅಮೆರಿಕ ಮುಂಬೈ
ಫೆಬ್ರವರಿ 8 ನ್ಯೂಝಿಲೆಂಡ್ vs ಅಫ್ಘಾನಿಸ್ತಾನ್ ಚೆನ್ನೈ
ಫೆಬ್ರವರಿ 8 ಇಂಗ್ಲೆಂಡ್ vs ನೇಪಾಳ ಮುಂಬೈ
ಫೆಬ್ರವರಿ 8 ಶ್ರೀಲಂಕಾ vs ಐರ್ಲೆಂಡ್ ಪ್ರೇಮದಾಸ, ಕೊಲಂಬೊ
ಫೆಬ್ರವರಿ 9 ಸ್ಕಾಟ್ಲೆಂಡ್ vs ಇಟಲಿ ಕೋಲ್ಕತ್ತಾ
ಫೆಬ್ರವರಿ 9 ಝಿಂಬಾಬ್ವೆ vs ಓಮನ್ ಎಸ್‌ಎಸ್‌ಸಿ, ಕೊಲಂಬೊ
 ಫೆಬ್ರವರಿ 9 ಸೌತ್ ಆಫ್ರಿಕಾ vs ಕೆನಡಾ ಅಹಮದಾಬಾದ್
ಫೆಬ್ರವರಿ 10 ನೆದಲೆಂಡ್ಸ್ vs ನಮೀಬಿಯಾ ದೆಹಲಿ
ಫೆಬ್ರವರಿ 10 ನ್ಯೂಝಿಲೆಂಡ್ vs ಯುಎಇ ಚೆನ್ನೈ
ಫೆಬ್ರವರಿ 10 ಪಾಕಿಸ್ತಾನ್ vs ಅಮೆರಿಕ ಎಸ್‌ಎಸ್‌ಸಿ, ಕೊಲಂಬೊ
ಫೆಬ್ರವರಿ 11 ಸೌತ್ ಆಫ್ರಿಕಾ vs ಅಫ್ಘಾನಿಸ್ತಾನ್ ಅಹಮದಾಬಾದ್
ಫೆಬ್ರವರಿ 11 ಆಸ್ಟ್ರೇಲಿಯಾ vs ಐರ್ಲೆಂಡ್ ಪ್ರೇಮದಾಸ, ಕೊಲಂಬೊ
ಫೆಬ್ರವರಿ 11 ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ಮುಂಬೈ
ಫೆಬ್ರವರಿ 12 ಶ್ರೀಲಂಕಾ vs ಒಮಾನ್ ಕ್ಯಾಂಡಿ
ಫೆಬ್ರವರಿ 12 ನೇಪಾಳ vs ಇಟಲಿ ಮುಂಬೈ
ಫೆಬ್ರವರಿ 12 ಭಾರತ vs ನಮೀಬಿಯಾ ದೆಹಲಿ
ಫೆಬ್ರವರಿ 13 ಆಸ್ಟ್ರೇಲಿಯಾ vs ಝಿಂಬಾಬ್ವೆ ಪ್ರೇಮದಾಸ, ಕೊಲಂಬೊ
ಫೆಬ್ರವರಿ 13 ಕೆನಡಾ vs ಯುಎಇ ದೆಹಲಿ
ಫೆಬ್ರವರಿ 13 ಅಮೆರಿಕ vs ನೆದಲೆಂಡ್ಸ್ ಚೆನ್ನೈ
ಫೆಬ್ರವರಿ 14 ಐರ್ಲೆಂಡ್ vs ಒಮಾನ್ ಎಸ್‌ಎಸ್‌ಸಿ, ಕೊಲಂಬೊ
ಫೆಬ್ರವರಿ 14 ಇಂಗ್ಲೆಂಡ್ vs ಸ್ಕಾಟ್ಲೆಂಡ್ ಕೋಲ್ಕತ್ತಾ
ಫೆಬ್ರವರಿ 14 ನ್ಯೂಝಿಲೆಂಡ್ vs ಸೌತ್ ಆಫ್ರಿಕಾ ಅಹಮದಾಬಾದ್
ಫೆಬ್ರವರಿ 15 ವೆಸ್ಟ್ ಇಂಡೀಸ್ vs ನೇಪಾಳ ಮುಂಬೈ
ಫೆಬ್ರವರಿ 15 ಅಮೆರಿಕ vs ನಮೀಬಿಯಾ ಚೆನ್ನೈ
ಫೆಬ್ರವರಿ 15 ಭಾರತ vs ಪಾಕಿಸ್ತಾನ್ ಪ್ರೇಮದಾಸ, ಕೊಲಂಬೊ
ಫೆಬ್ರವರಿ 16 ಅಫ್ಘಾನಿಸ್ತಾನ vs ಯುಎಇ ದೆಹಲಿ
ಫೆಬ್ರವರಿ 16 ಇಂಗ್ಲೆಂಡ್ vs ಇಟಲಿ ಕೋಲ್ಕತ್ತಾ
ಫೆಬ್ರವರಿ 16 ಆಸ್ಟ್ರೇಲಿಯಾ vs ಶ್ರೀಲಂಕಾ ಕ್ಯಾಂಡಿ
ಫೆಬ್ರವರಿ 17 ನ್ಯೂಝಿಲೆಂಡ್ vs ಕೆನಡಾ ಚೆನ್ನೈ
ಫೆಬ್ರವರಿ 17 ಐರ್ಲೆಂಡ್ vs ಝಿಂಬಾಬ್ವೆ ಕ್ಯಾಂಡಿ
ಫೆಬ್ರವರಿ 17 ಸ್ಕಾಟ್ಲೆಂಡ್ vs ನೇಪಾಳ ಮುಂಬೈ
ಫೆಬ್ರವರಿ 18 ಸೌತ್ ಆಫ್ರಿಕಾ vs ಯುಎಇ ದೆಹಲಿ
ಫೆಬ್ರವರಿ 18 ಪಾಕಿಸ್ತಾನ್ vs ನಮೀಬಿಯಾ ಎಸ್‌ಎಸ್‌ಸಿ, ಕೊಲಂಬೊ
ಫೆಬ್ರವರಿ 18 ಭಾರತ vs ನೆದರ್​ಲೆಂಡ್ಸ್ ಅಹಮದಾಬಾದ್
ಫೆಬ್ರವರಿ 19 ವೆಸ್ಟ್ ಇಂಡೀಸ್ vs ಇಟಲಿ ಕೋಲ್ಕತ್ತಾ
ಫೆಬ್ರವರಿ 19 ಶ್ರೀಲಂಕಾ vs ಝಿಂಬಾಬ್ವೆ ಪ್ರೇಮದಾಸ, ಕೊಲಂಬೊ
ಫೆಬ್ರವರಿ 19 ಅಫ್ಘಾನಿಸ್ತಾನ vs ಕೆನಡಾ ಚೆನ್ನೈ
ಫೆಬ್ರವರಿ 20 ಆಸ್ಟ್ರೇಲಿಯಾ vs ಒಮಾನ್ ಕ್ಯಾಂಡಿ

ಸೂಪರ್-8 ಮತ್ತು ನಾಕೌಟ್ ಪಂದ್ಯಗಳು:

ಲೀಗ್ ಹಂತದಲ್ಲಿ ಕಣಕ್ಕಿಳಿಯುವ 20 ತಂಡಗಳಲ್ಲಿ  ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ 8 ಹಂತಕ್ಕೆ ಪ್ರವೇಶಿಸುತ್ತದೆ.
  • ಸೂಪರ್ 8 ಹಂತದ ಪಂದ್ಯಗಳು: ಫೆಬ್ರವರಿ 21 ರಿಂದ ಮಾರ್ಚ್ 1, 2026 ರವರೆಗೆ ನಡೆಯಲಿದೆ. ಇದಾದ ಬಳಿಕ ಸೆಮಿಫೈನಲ್ ಜರುಗಲಿದೆ.
  • ಸೆಮಿಫೈನಲ್  ಪಂದ್ಯಗಳು: ಮಾರ್ಚ್ 4 ರಂದು ಮೊದಲ ಸೆಮಿಫೈನಲ್ ಹಾಗೂ ಮಾರ್ಚ್ 5 ರಂದು ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದೆ.
  • ಫೈನಲ್: ಮಾರ್ಚ್ 8 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ: ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ

ತಂಡಗಳ ಗ್ರೂಪ್:

  • ಗುಂಪು A: ಭಾರತ, ಪಾಕಿಸ್ತಾನ್, ನೆದರ್‌ಲೆಂಡ್ಸ್, ನಮೀಬಿಯಾ, ಯುಎಸ್‌ಎ.
  • ಗುಂಪು B: ಶ್ರೀಲಂಕಾ, ಆಸ್ಟ್ರೇಲಿಯಾ, ಝಿಂಬಾಬ್ವೆ, ಐರ್ಲೆಂಡ್, ಒಮಾನ್.
  • ಗುಂಪು C: ಇಂಗ್ಲೆಂಡ್, ವೆಸ್ಟ್ ಇಂಡೀಸ್, ಸ್ಕಾಟ್ಲೆಂಡ್ , ನೇಪಾಳ, ಇಟಲಿ.
  • ಗುಂಪು D: ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಯುಎಇ, ಕೆನಡಾ. 

 

 

Source link

Bengaluru Traffic Advisory: ವರ್ತೂರು ಜಾತ್ರೆ ಹಿನ್ನೆಲೆ 3 ದಿನ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗಗಳ ಕುರಿತ ಮಾಹಿತಿ ಇಲ್ಲಿದೆ – Kannada News | Whitefield Traffic Alert: Varthur Road Closures for Channarayaswamy Festival January 25th to January 27th

ವರ್ತೂರು ಜಾತ್ರೆ ಹಿನ್ನೆಲೆ 3 ದಿನ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗಗಳ ಕುರಿತ ಮಾಹಿತಿ ಇಲ್ಲಿದೆ

ಬೆಂಗಳೂರು, ಜನವರಿ 25: ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ  (Traffic Advisory) ವರ್ತೂರಿನಲ್ಲಿ ಮೂರು ದಿನ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ ದೀಪೋತ್ಸವ ಮತ್ತು ಪಲ್ಲಕ್ಕಿ ಕರಗ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆ ಠಾಣಾ ವ್ಯಾಪ್ತಿಯಲ್ಲಿನ ಸಂಚಾರ ಮಾರ್ಗಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ವಾಹನ ಸವಾರರು ಸಹಕರಿಸುವಂತೆ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಸಂಚಾರದ ಪರ್ಯಾಯ ರಸ್ತೆಗಳ ವಿವರ ಇಲ್ಲಿದೆ.

ಜನವರಿ 25 ಭಾನುವಾರದಿಂದ ಜನವರಿ 27ರವರೆಗೆ ಮೂರು ದಿನ ನಡೆಯಲಿರುವ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಜಾತ್ರಾ ಸ್ಥಳದಲ್ಲಿ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಪಾರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಬೆಂಗಳೂರು ನಗರ ಸಂಚಾರ ಪೂರ್ವ ವಿಭಾಗ ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಎಕ್ಸ್ ಪೋಸ್ಟ್ ಇಲ್ಲಿದೆ

ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗಗಳು

ವೈಟ್‌ಫೀಲ್ಡ್‌ನಿಂದ ಗುಂಜೂರು ಕಡೆಗೆ ಬರುವ ಲಘು ವಾಹನಗಳು ಇಮ್ಮಡಿಹಳ್ಳಿ, ವಾಲೇಪುರ ಸೂರಹುಣಸೆ ರಸ್ತೆಯಿಂದ ಮಧುರನಗರದ ಮೂಲಕ ಹಲಸಹಳ್ಳಿ ಗುಂಜೂರು ಕಡೆಗೆ ಹಾಗೂ ವರ್ತೂರು ಪೊಲೀಸ್ ಠಾಣೆ ಕಡೆಯಿಂದ ಸಂಚರಿಸಬಹುದಾಗಿದೆ.

ಗುಂಜೂರಿನಿಂದ ವೈಟ್‌ ಫೀಲ್ಡ್ ಕಡೆಗೆ ಸಂಚರಿಸುವ ಲಘು ವಾಹನಗಳು ಗುಂಜೂರಿನ ಶ್ರೀರಾಮದೇವಾಲಯದ ಬಳಿ ಬಲ ತಿರುವು ಪಡೆದು ಹಲಸಹಳ್ಳಿ ರಸ್ತೆಯಿಂದ ಮಧುರನಗರದ ಮೂಲಕ ಸೂರಹುಣಸೆ ಮತ್ತು ವಾಲೇಪುರ ಮೂಲಕ ಹಾಗೂ ವರ್ತೂರು ಕಾಲೇಜು ಮೂಲಕ ವೈಟ್ ಫೀಲ್ಡ್ ಕಡೆಗೆ ಸಂಚರಿಸಬಹುದು.

ಗುಂಜೂರು ಕಡೆಯಿಂದ ಬರುವ ವಾಹನ ಸವಾರರು ಕುಂದಲಹಳ್ಳಿ ಮತ್ತು ಮಾರತ್ ಹಳ್ಳಿ ಕಡೆಗೆ ಸಂಚರಿಸುವ ಲಘು ವಾಹನಗಳು ಗುಂಜೂರು ಕೆ.ಎಫ್.ಸಿ ರಸ್ತೆ, ಪಣತ್ತೂರು ರೈಲ್ವೆ ಬ್ರಿಜ್ ಮೂಲಕ ಹಾಗೂ ವಿಬ್ ಗಯಾರ್ ಕಡೆಯಿಂದ ಸಂಚರಿಸವಂತೆ ಸಂಚಾರ ಪೊಲೀಸರು ಕೋರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ – Kannada News | RCB’s Final Qualification Scenarios in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ.

Source link

Bengaluru Air Quality: ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality got better today

ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ!

ಬೆಂಗಳೂರು, ಜನವರಿ 25: ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ (Bengaluru Air Quality) ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ.

ಬೆಂಗಳೂರಿನ ಏರ್ ಕ್ವಾಲಿಟಿ 144 ಇದ್ದು, ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಂದಿನ ಮಟ್ಟಿಗೆ ವಾಯು ಗುಣಮಟ್ಟ ಚೇತರಿಸಿಕೊಂಡಿದೆ. ಆದರೂ ಇಂದಿಗೂ ಗಾಳಿಯು ಕಲುಷಿತವಾಗಿಯೇ ಇದ್ದು, ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –144
  • ಮಂಗಳೂರು-157
  • ಮೈಸೂರು –127
  • ಬೆಳಗಾವಿ – 96
  • ಕಲಬುರ್ಗಿ-136
  • ಶಿವಮೊಗ್ಗ – 162
  • ಬಳ್ಳಾರಿ – 164
  • ಹುಬ್ಬಳ್ಳಿ- 154
  • ಉಡುಪಿ –150
  • ವಿಜಯಪುರ –141

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​? – Kannada News | Belagavi: biggest robbery; 2 containers carrying Rs 400 crore hijacked at Belagavi border

ಬೆಳಗಾವಿ, ಜನವರಿ 25: ಬೆಳಗಾವಿಯ ಗಡಿ ಭಾಗದ ಮೂಲಕ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ ಸಾಗಿಸುತ್ತಿದ್ದ 2 ಕಂಟೇನರ್​​ಗಳನ್ನು ಹೈಜಾಕ್​​ ಮಾಡಲಾಗಿದೆ ಎನ್ನಲಾಗುತ್ತಿದೆ. 2025 ಅಕ್ಟೋಬರ್ 16ರಂದು ನಡೆದಿರುವ ದೇಶದ ಅತಿ ದೊಡ್ಡ ರಾಬರಿ ಪ್ರಕರಣ ಸದ್ಯ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸ್​​ಗೆ ಪ್ರಕರಣ ದೊಡ್ಡ ಸವಾಲಾಗಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

ಒಟಿಟಿಯಲ್ಲಿ ‘ಲವ್ ಯೂ ಮುದ್ದು’ ಸಿನಿಮಾ ನೋಡಿ ಮೆಚ್ಚಿದ ಶಿವಣ್ಣ – Kannada News | Shivarajkumar meets Love You Muddu movie team after watching it on Amazon Prime Video OTT

ನೈಜ ಘಟನೆ ಆಧಾರಿತ ‘ಲವ್ ಯೂ ಮುದ್ದು’ (Love You Muddu) ಸಿನಿಮಾ 2025ರಲ್ಲಿ ತೆರೆಕಂಡಿತ್ತು. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಖ್ಯಾತಿಯ ಕುಮಾರ್ ಅವರು ‘ಲವ್ ಯೂ ಮುದ್ದು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಭಾರಿ ಸದ್ದು ಮಾಡಿದ್ದ ಪ್ರೇಮಿಗಳ ನೈಜ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿತ್ತು. ಭಾಷೆಯ ಗಡಿಯನ್ನು ಮೀರಿ ಈ ಸಿನಿಮಾ ಎಲ್ಲರಿಗೂ ಇಷ್ಟ ಆಯಿತು. ಈಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ಅಮೇಜಾನ್ ಪ್ರೈಮ್‌ ವಿಡಿಯೋ’ (Amazon Prime Video) ಮೂಲಕ ಪ್ರಸಾರ ಆಗುತ್ತಿದೆ. ಈ ಸಿನಿಮಾವನ್ನು ಶಿವರಾಜ್​​ಕುಮಾರ್ (Shivarajkumar) ನೋಡಿದ್ದಾರೆ.

ಒಟಿಟಿಯಲ್ಲಿ ‘ಲವ್ ಯೂ ಮುದ್ದು’ ಸಿನಿಮಾ ನೋಡಿದ ಶಿವರಾಜ್​ಕುಮಾರ್ ಅವರಿಗೆ ಈ ಚಿತ್ರ ಸಖತ್ ಇಷ್ಟ ಆಗಿದೆ. ಹೊಸ ತಂಡಗಳಿಗೆ, ಒಳ್ಳೆಯ ಸಿನಿಮಾಗಳಿಗೆ ಶಿವಣ್ಣ ಯಾವಾಗಲೂ ಬೆಂಬಲ ನೀಡುತ್ತಾರೆ. ಈಗ ಅವರು ‘ಲವ್ ಯೂ ಮುದ್ದು’ ಚಿತ್ರತಂಡದ ಬೆನ್ನು ತಟ್ಟಿದ್ದಾರೆ. ಸಿನಿಮಾದ ನಾಯಕ ನಟ ಸಿದ್ದು ಮೂಲಿಮನಿ ಅವರಿಗೆ ಶಿವಣ್ಣ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರೆ ಮಾಡಿ ಮಾತನಾಡಿದ್ದು ಮಾತ್ರವಲ್ಲದೇ ಚಿತ್ರತಂಡದ ಸಮೇತ ತಮ್ಮನ್ನು ಭೇಟಿ ಆಗುವಂತೆ ಆಹ್ವಾನವನ್ನೂ ನೀಡಿದ್ದಾರೆ. ಇದರಿಂದ ಖುಷಿಯಾದ ಹೀರೋ ಸಿದ್ದು ಮೂಲಿಮನಿ, ಹೀರೋಯಿನ್ ರೇಷ್ಮಾ, ನಿರ್ದೇಶಕ ಕುಮಾರ್, ನಿರ್ಮಾಪಕ ನರಸಿಂಹ ಮೂರ್ತಿ, ವಿತರಕ ಜಗದೀಶ್ ಗೌಡ ಸೇರಿದಂತೆ ತಂಡದ ಹಲವರು ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿ ಶಿವರಾಜ್​ಕುಮಾರ್ ಅವರನ್ನು ‘ಲವ್ ಯೂ ಮುದ್ದು’ ಚಿತ್ರತಂಡ ಭೇಟಿ ಮಾಡಿದೆ. ಚಿತ್ರೀಕರಣದ ನಡುವೆಯೂ ಬಿಡುವು ಮಾಡಿಕೊಂಡ ಶಿವಣ್ಣ ಅವರು ಈ ಸಿನಿಮಾದ ಬಗ್ಗೆ ಮಾತನಾಡಿದರು. ಸಿನಿಮಾ ಮೂಡಿ ಬಂದಿರುವ ಬಗೆಯನ್ನು ಕೊಂಡಾಡಿದರು. ಇದರಿಂದ ಚಿತ್ರತಂಡದ ಖುಷಿ ಡಬಲ್ ಆಗಿದೆ. ಒಟಿಟಿಯಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರಿಗೂ ಇಷ್ಟ ಆಗುತ್ತಿದೆ.

ಇದನ್ನೂ ಓದಿ: ‘ಲವ್ ಯೂ ಮುದ್ದು’ ಗೆದ್ದಿದ್ದಕ್ಕೆ ಕನ್ನಡದಲ್ಲೇ ಧನ್ಯವಾದ ಹೇಳಿದ ಮರಾಠಿ ರಿಯಲ್ ಜೋಡಿ

‘ಕಿಶನ್ ಎಂಟರ್‌ಟೈನ್ಮೆಂಟ್’ ಬ್ಯಾನರ್ ಮೂಲಕ ಕಿಶನ್ ಟಿ.ಎನ್. ಅವರು ‘ಲವ್ ಯೂ ಮುದ್ದು’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಲಕ್ಷ್ಮಿಕಾಂತ್ ಟಿ.ಎಸ್. ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಕೃಷ್ಣ ದೀಪಕ್ ಅವರ ಛಾಯಾಗ್ರಹಣ, ಅನಿರುದ್ಧ್ ಶಾಸ್ತ್ರಿ ಅವರ ಸಂಗೀತ ನಿರ್ದೇಶನ, ಸಿ.ಎಸ್. ದೀಪು ಅವರ ಸಂಕಲನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ – Kannada News | Rcbs final qualification scenarios in wpl 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ.

Source link

ಅಮೆರಿಕದ ಹಲವೆಡೆ ಭಾರಿ ಹಿಮಪಾತ: 9000ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – Kannada News | US Winter Storm: 9000 Flights Cancelled, 15 States Declare Emergency as Extreme Cold Hits

ಡಲ್ಲಾಸ್ (ಎಪಿ), ಜನವರಿ 25: ಅಮೆರಿಕದ ಹಲವೆಡೆ ದಟ್ಟ ಮಂಜು ಮತ್ತು ಭಾರಿ ಹಿಮಪಾತ (Winter Storm) ಹಿನ್ನೆಲೆ  ನಿಗದಿಯಾಗಿದ್ದ 9000ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ (Flights Cancelled). ಈ ಚಂಡಮಾರುತದಿಂದ ದೇಶದ ಬಹುತೇಕ ಭಾಗಗಳಲ್ಲಿ ಭಾರೀ ಅಸ್ತವ್ಯಸ್ತತೆ ಉಂಟಾಗುವ ನಿರೀಕ್ಷೆಯಿದೆ. ಅಲ್ಲದೆ, 15 ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಮಾತನಾಡಿ, ತಮ್ಮ ಆಡಳಿತವು ರಾಜ್ಯ ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿಗೆ ತ್ವರಿತವಾಗಿ ಸ್ಪಂದಿಸಲು ಫೆಡರಲ್ ಎಮರ್ಜೆನ್ಸಿ ಮ್ಯಾನೇಜ್‌ಮೆಂಟ್ ಏಜೆನ್ಸಿ (ಫೀಮಾ) ಸಂಪೂರ್ಣ ಸಿದ್ಧತೆಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮದುವೆ ಮನೆಗೆ ಸೂತಕ ತಂದ ದಾಳಿಕೋರ: ಆತ್ಮಾಹುತಿ ಬಾಂಬ್ ದಾಳಿಗೆ 7 ಜನ ಸಾವು

ರಾಷ್ಟ್ರೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಉತ್ತರ ಟೆಕ್ಸಾಸ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಪೂರ್ತಿ ಹಿಮ ಹಾಗೂ ಮಳೆಯಾಗಿದೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ತೀವ್ರ ಶೀತ ಅಲೆ ಅಪಾಯಕಾರಿ ಮಟ್ಟದಲ್ಲಿ ವ್ಯಾಪಿಸುತ್ತಿದ್ದು, ಇದು ಸೋಮವಾರದವರೆಗೆ ಮುಂದುವರಿಯಲಿದೆ ಎಂದು ಇಲಾಖೆ ಎಚ್ಚರಿಸಿದೆ. ಮುಂದಿನ ಕೆಲವು ರಾತ್ರಿಗಳಲ್ಲಿ ತಾಪಮಾನ ಮೈನಸ್ 24 ಡಿಗ್ರಿ ಸೆಲ್ಸಿಯಸ್ ಮಟ್ಟಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಸಿಎನ್‌ಎನ್ ವರದಿಯ ಪ್ರಕಾರ, ಅಮೆರಿಕದ ಒಟ್ಟು ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಭಾಗವು ಭಾರೀ ಹಿಮಪಾತದ ಚಂಡಮಾರುತ ಹಾಗೂ ತೀವ್ರ ಶೀತ ಅಲೆಯನ್ನು ಎದುರಿಸುವ ಪರಿಸ್ಥಿತಿ ಎದುರಾಗಿದೆ. ಈ ಚಂಡಮಾರುತದಿಂದ ಉಂಟಾಗುವ ಹಿಮವು ಟೆಕ್ಸಾಸ್‌ನಿಂದ ನ್ಯೂ ಇಂಗ್ಲೆಂಡ್‌ವರೆಗೆ 2,000 ಮೈಲುಗಳಿಗಿಂತ ಹೆಚ್ಚು ವ್ಯಾಪ್ತಿಯಲ್ಲಿ ಹರಡುವ ಸಾಧ್ಯತೆ ಇದೆ. ಈ ನಡುವೆ, ಶುಕ್ರವಾರ ಒಕ್ಲಹೋಮಾ ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ಹಿಮಪಾತ ಹಾಗೂ ಮಳೆ ಸುರಿದಿದೆ.

ಇದನ್ನೂ ಓದಿ: ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ, ಇರಾನ್​ಗೆ ಹೊಸ ಎಚ್ಚರಿಕೆ ಕೊಟ್ಟ ಡೊನಾಲ್ಡ್​ ಟ್ರಂಪ್

ಚಂಡಮಾರುತ ಉತ್ತರ–ಪೂರ್ವ ದಿಕ್ಕಿನತ್ತ ಸಾಗಲಿದೆ. ಇದರ ಪರಿಣಾಮವಾಗಿ ವಾಷಿಂಗ್ಟನ್‌ನಿಂದ ನ್ಯೂಯಾರ್ಕ್ ಹಾಗೂ ಬೋಸ್ಟನ್‌ವರೆಗೆ ವ್ಯಾಪಿಸಿರುವ ಪ್ರದೇಶಗಳಲ್ಲಿ ಸುಮಾರು ಒಂದು ಅಡಿ ಹಿಮಪಾತ ಸಂಭವಿಸುವ ಸಾಧ್ಯತೆ ಇದೆ. ಹಲವು ದಿನಗಳ ಕಾಲ ಮುಂದುವರಿದ ಭಾರೀ ಹಿಮಪಾತದ ಹಿನ್ನೆಲೆಯಲ್ಲಿ, ಗ್ರಾಮೀಣ ಲೂಯಿಸ್ ಕೌಂಟಿ ಹಾಗೂ ಮೇಲಿನ ನ್ಯೂಯಾರ್ಕ್‌ನ ಇತರ ಭಾಗಗಳಲ್ಲಿ ಬೆಳಗಿನ ಜಾವ ತಾಪಮಾನ ಮೈನಸ್ 34 ಡಿಗ್ರಿ ಸೆಲ್ಸಿಯಸ್ ಮಟ್ಟಕ್ಕೆ ಇಳಿದಿದೆ ಎಂದು ಇಲಾಖೆ ತಿಳಿಸಿದೆ.

ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ – Kannada News | India Playing XI For 3rd T20 Against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಇಂದು (ಜ.25) ನಡೆಯಲಿದೆ. ಗುವಾಹಟಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಕಳೆದ ಮ್ಯಾಚ್​ ವೇಳೆ ವಿಶ್ರಾಂತಿ ಪಡೆದಿದ್ದ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಈ ಪಂದ್ಯವು ಸರಣಿ ನಿರ್ಣಾಯಕವಾಗಿರುವುದರಿಂದ ಬುಮ್ರಾ ಹರ್ಷಿತ್ ರಾಣಾ ಅಥವಾ ಅರ್ಷದೀಪ್ ಸಿಂಗ್ ಸ್ಥಾನದಲ್ಲಿ ಕಣಕ್ಕಿಳಿಯಬಹುದು.

ಅದರಂತೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಬ್ಯಾಟ್ ಬೀಸಿದರೆ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ.

ಇನ್ನು ಐದನೇ ಕ್ರಮಾಂಕದಲ್ಲಿ ಶಿವಂ ದುಬೆ ಕಣಕ್ಕಿಳಿದರೆ, ಆರನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ಏಳನೇ ಕ್ರಮಾಂಕದಲ್ಲಿ ರಿಂಕು ಸಿಂಗ್ ಕಾಣಿಸಿಕೊಳ್ಳಲಿದ್ದಾರೆ.

ಇನ್ನುಳಿದಂತೆ ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ಬೌಲರ್​​ಗಳಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿರಲಿದೆ…

  • ಅಭಿಷೇಕ್ ಶರ್ಮಾ
  • ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  • ಇಶಾನ್ ಕಿಶನ್
  • ಸೂರ್ಯಕುಮಾರ್ ಯಾದವ್
  • ಶಿವಂ ದುಬೆ
  • ಹಾರ್ದಿಕ್ ಪಾಂಡ್ಯ
  • ರಿಂಕು ಸಿಂಗ್
  • ಜಸ್​ಪ್ರೀತ್ ಬುಮ್ರಾ
  • ಅರ್ಷದೀಪ್ ಸಿಂಗ್
  • ಕುಲ್ದೀಪ್ ಯಾದವ್
  • ವರುಣ್ ಚಕ್ರವರ್ತಿ.

ನಿರ್ಣಾಯಕ ಪಂದ್ಯ:

ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಐದು ಪಂದ್ಯಗಳ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ತಂಡವು ಗೆದ್ದರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ನ್ಯೂಝಿಲೆಂಡ್ ತಂಡವು ಇಂದಿನ ಮ್ಯಾಚ್​ನಲ್ಲಿ ಗೆಲ್ಲಲೇಬೇಕು. ಹೀಗಾಗಿ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇದನ್ನೂ ಓದಿ: ನೇರವಾಗಿ ಫೈನಲ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ! – Kannada News | Bengaluru temperature: dry and cold weather all over karnataka, misty weather in Bengaluru

ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ!

ಬೆಂಗಳೂರು, ಜನವರಿ 25: ಇಂದೂ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ (Weather Forecast) ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಂಜು

ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version