ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು: ನಾಳೆಯಿಂದಲೇ ಶುರುವಾಗಲಿದೆ ತೆರವು ಕಾರ್ಯ – Kannada News | Bengaluru Footpath Encroachment Drive Begins Tomorrow: GBA to Clear 2000 KM of Roads Starting July 1

ಬೆಂಗಳೂರು, ಜೂನ್ 30: ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವುಗೊಳಿಸಲು ಇಂದು ಅಂತಿಮ ಗಡುವು ನೀಡಲಾಗಿದೆ. ಜುಲೈ 1 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಮತ್ತು ಐದು ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೃಹತ್ ಕಾರ್ಯಾಚರಣೆ ಆರಂಭವಾಗಲಿದೆ. ಸಚಿವ ಕೃಷ್ಣ ಭೈರೇಗೌಡರು ಈಗಾಗಲೇ ಎರಡು ಸುತ್ತಿನ ಸಭೆ ನಡೆಸಿ, ಯಾವುದೇ ಕಾರಣಕ್ಕೂ ಕಾರ್ಯಾಚರಣೆಯನ್ನು ನಿಲ್ಲಿಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಲೈಸೆನ್ಸ್ ಹೊಂದಿರುವ ವ್ಯಾಪಾರಿಗಳನ್ನು ಹೊರತುಪಡಿಸಿ, ಉಳಿದ ಅತಿಕ್ರಮಣಗಳನ್ನು ತೆರವುಗೊಳಿಸಲಾಗುತ್ತದೆ. ಫುಟ್‌ಪಾತ್‌ಗಳು ಜನಸಾಮಾನ್ಯರ ಹಕ್ಕು ಮತ್ತು ಪಾದಚಾರಿಗಳ…

Read More

ದೇಶವನ್ನೇ ಬೆಚ್ಚಿಬೀಳಿಸಿದ ಅಹ್ಮದ್ ಕೃತ್ಯ!: 180 ಅಪ್ರಾಪ್ತ ಬಾಲಕಿಯರ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ವೈರಲ್ – Kannada News | Amravati Sexual Abuse Scandal: Teen Accused, 180 Minors, 350 Videos, House Bulldozed

ಮಹಾರಾಷ್ಟ್ರದಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಭೀಕರ ಪ್ರಕರಣವೊಂದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. 19 ವರ್ಷದ ಅಯಾನ್ ಅಹ್ಮದ್ ತನ್ವೀರ್ ಎಂಬ ಯುವಕ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಾಗ, ಆರೋಪಿಯ ಬಳಿ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿ ಅವರನ್ನು ಶಾಕ್‌ಗೆ ಒಳಪಡಿಸಿದೆ. ಅಯಾನ್ ಅಹ್ಮದ್ ತನ್ವೀರ್ ಮೂಲತಃ ಅಮರಾವತಿಯ ಪರತ್ವಾಡ ನಿವಾಸಿ. ಈ ಗಂಭೀರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಸ್ಥಳೀಯ ಹಿಂದೂ ಸಂಘಟನೆಗಳು ಪರತ್ವಾಡದಲ್ಲಿ…

Read More

ಆಂಧ್ರದ ಮಾರ್ಕಪುರಂನಲ್ಲಿ ಹೊತ್ತಿ ಉರಿದ ಬಸ್; 10 ಜನ ಸಜೀವದಹನ

ಮಾರ್ಕಪುರಂ, ಮಾರ್ಚ್ 26: ಇತ್ತೀಚೆಗೆ ಖಾಸಗಿ ಬಸ್​​ಗಳಿಗೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು, ಆಂಧ್ರಪ್ರದೇಶದಲ್ಲಿ (Andhra Pradesh Bus Accident) ಅದೇ ರೀತಿಯ ಮತ್ತೊಂದು ಪ್ರಕರಣ ನಡೆದಿದೆ. ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಟಿಪ್ಪರ್ ಟ್ರಕ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟುಹೋಗಿದೆ. ಈ ಘಟನೆಯಲ್ಲಿ ಬಸ್​ನೊಳಗಿದ್ದ 10 ಜನರು ಜೀವಂತವಾಗಿ ಸುಟ್ಟು ಕರಕಲಾಗಿದ್ದಾರೆ. ಇನ್ನುಳಿದವರನ್ನು ರಕ್ಷಿಸಲಾಗಿದ್ದು, ತೀವ್ರವಾಗಿ ಗಾಯಗಳಾಗಿರುವ 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ…

Read More

ಇರಾನ್ ಯುದ್ಧದಿಂದೀಚೆ ಹೂಡಿಕೆದಾರರಿಗೆ 41 ಲಕ್ಷ ರೂ ನಷ್ಟ; ಷೇರುಗಳಲ್ಲಿ ಹೂಡಿಕೆ ಮಾಡುವ ಸಮಯವಾ?

ನವದೆಹಲಿ, ಏಪ್ರಿಲ್ 2: ಇರಾನ್ ಯುದ್ಧಕ್ಕೆ ಮೊದಲು ಚೇತರಿಕೆಯ ಹಾದಿಯಲ್ಲಿದ್ದ ಭಾರತೀಯ ಷೇರು ಮಾರುಕಟ್ಟೆ (stock market) ಈಗ ಮತ್ತೆ ತತ್ತರಿಸುತ್ತಿದೆ. ಇರಾನ್ ಯುದ್ಧ ಆರಂಭವಾದ ಬಳಿಕ ಗಡಗಡ ನಡುಗುತ್ತಿದೆ. ಮಾರ್ಚ್ ತಿಂಗಳಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಶೇ 11ರಷ್ಟು ಕುಸಿತ ಕಂಡಿವೆ. ಹೆಚ್ಚಿನ ಸೂಚ್ಯಂಕಗಳು ಶೇ. 10ಕ್ಕಿಂತಲೂ ಹೆಚ್ಚಿನ ಕುಸಿತ ಕಂಡಿವೆ. ಇಸ್ರೇಲ್ ಮತ್ತು ಅಮೆರಿಕ ದೇಶಗಳು ಇರಾನ್ ಮೇಲೆ ದಾಳಿ ಮಾಡುವ ಮುನ್ನ, ಅಂದರೆ ಫೆಬ್ರುವರಿ 27ರಂದು ಬಿಎಸ್​ಇಯಲ್ಲಿ ಲಿಸ್ಟ್ ಆಗಿರುವ ಕಂಪನಿಗಳ…

Read More

ವಿಶ್ವದ ದೊಡ್ಡ ಆರ್ಥಿಕತೆ: 5ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ ಭಾರತ; ಕಾರಣ ಏನು ಗೊತ್ತಾ? – Kannada News | India’s economy size lower than UK and Japan in 2025, as per IMF data, Know why India slipped on place

ನವದೆಹಲಿ, ಏಪ್ರಿಲ್ 15: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು (Indian economy) ಹೊಂದಿರುವ ದೇಶ. ವಿಶ್ವದ ಅತಿದೊಡ್ಡ ಆರ್ಥಿಕತೆಯ ದೇಶಗಳ ಪಟ್ಟಿಯಲ್ಲಿ ಬ್ರಿಟನ್ ಮತ್ತು ಜಪಾನ್ ಅನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ದೌಡಾಯಿಸಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಐಎಂಎಫ್ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಭಾರತ ಅತಿದೊಡ್ಡ ಆರ್ಥಿಕತೆಗಳ ಸಾಲಿನಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಪ್ರಕಾರ 2025ರಲ್ಲಿ ಭಾರತದ ಆರ್ಥಿಕತೆ 3.92 ಟ್ರಿಲಿಯನ್ ಡಾಲರ್ ಗಾತ್ರದ್ದಾಗಿರುತ್ತದೆ. ಆ ವರ್ಷ ಯುಕೆ ಅಥವಾ…

Read More

ಶುಕ್ರನ ಸಂಚಾರ: ಅಬ್ಬಾಬ್ಬ ಈ 4 ರಾಶಿಯವರಿಗೆ ಅದೃಷ್ಟವೋ ಅದೃಷ್ಟ – Kannada News | Shukra Gochar 2024: How Venus in Shravana Nakshatra Impacts Your Zodiac

ಇನ್ನು ಕೆಲವು ದಿನ ಮಕರ ರಾಶಿಯ ಶ್ರವಣ ನಕ್ಷತ್ರದಲ್ಲಿ ಶುಕ್ರನ ಸಂಚಾರವು ಆಗಲಿದೆ. ಮಕರ ರಾಶಿಯ ಅಧಿಪತಿ ಶನಿ ಮತ್ತು ಶ್ರವಣ ನಕ್ಷತ್ರದ ಅಧಿಪತಿ ಚಂದ್ರ. ಶುಕ್ರ ಮತ್ತು ಶನಿ ಮಿತ್ರರಾಗಿದ್ದರೂ, ಮನಸ್ಸಿಗೆ ಕಾರಕನಾದ ಚಂದ್ರನ ನಕ್ಷತ್ರದಲ್ಲಿ ಶುಕ್ರನ ಸಂಚಾರವು ಭಾವನಾತ್ಮಕ ಬದಲಾವಣೆಗಳನ್ನು ತರುತ್ತದೆ. ನಕಾರಾತ್ಮಕ ಬದಲಾವಣೆಗೆ ಕುಗ್ಗದೇ, ಬುದ್ಧಿಯಿಂದ ಅದನ್ನು ಸರಿಮಾಡಿಕೊಳ್ಳಿ. ​ಈ ಸಂಚಾರದಿಂದ ಯಾವ ರಾಶಿಯವರಿಗೆ ಲಾಭ ಮತ್ತು ಯಾರಿಗೆ ಎಚ್ಚರಿಕೆ ಅಗತ್ಯ ಎಂಬ ವಿವರ ಇಲ್ಲಿದೆ: ​ಶುಭ ಫಲ ​ವೃಷಭ ರಾಶಿ: ಭಾಗ್ಯ…

Read More

ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ! – Kannada News | Major Security Lapse Near Mysuru Palace? Blast Footage Missing Despite CCTV Cameras

ಮೈಸೂರು, ಡಿಸೆಂಬರ್ 27: ಕ್ರಿಸ್ಮಸ್ ದಿನ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಮುಂಭಾಗದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ. ಬಲೂನು ಮಾರಾಟಗಾರ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡು ಮೂಲದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮೀ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಸ್ಥಳದ ಸಮೀಪವೇ ಅಳವಡಿಸಲಾಗಿದ್ದ ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾದಲ್ಲಿ ಘಟನೆಯ ಯಾವುದೇ ದೃಶ್ಯ ಸೆರೆಯಾಗದಿರುವುದು ಅಚ್ಚರಿ ಮೂಡಿಸಿದೆ. 360 ಡಿಗ್ರಿ ಕ್ಯಾಮರಾ…

Read More

ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯಿಂದ ಹಲ್ಲೆ: ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯ – Kannada News | Bagalkote: Mentally Challenged Student Assaulted by Divya Jyothi School Teacher Couple

ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಬಾಗಲಕೋಟೆ, ಡಿಸೆಂಬರ್​ 20: ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ (Teacher Couple) ಹಲ್ಲೆ (Assaulted) ನಡೆಸಿ ರಾಕ್ಷಸಿ ಕೃತ್ಯ ಮೆರೆದಿರುವಂತಹ ಘಟನೆ ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ ನಡೆದಿದೆ. ದೀಪಕ್ ರಾಠೋಡ್​​(16) ಹಲ್ಲೆಗೊಳಗಾದ ಬುದ್ಧಿಮಾಂದ್ಯ ಬಾಲಕ. ಮಹಾರಾಷ್ಟ್ರ ಮೂಲದ ಶಿಕ್ಷಕ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ​​ಪತ್ನಿ ಮಾಲಿನಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ…

Read More

‘ರಾಮಾಯಣ’ ಸಿನಿಮಾದ ಹೈಲೈಟ್ ವಿಎಫ್​​ಎಕ್ಸ್ ಅಲ್ಲ, ನಿರ್ದೇಶಕ ಹೇಳಿದ್ದೇನು?

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸಿರುವ ‘ರಾಮಾಯಣ’ ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಭಾರಿ ಅದ್ಧೂರಿ ವಿಎಫ್​​ಎಕ್ಸ್, ಅದ್ಧೂರಿ ಸೆಟ್​​ಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಪೌರಾಣಿಕ ಕತೆಗೆ ಭವ್ಯತೆಯನ್ನು ಸೇರಿಸಿ ಪ್ರೇಕ್ಷಕರಿಗೆ ನೀಡಲಾಗುತ್ತಿದೆ ‘ರಾಮಾಯಣ’ ಸಿನಿಮಾನಲ್ಲಿ. ಹಲವು ಆಸ್ಕರ್​​ಗಳನ್ನು ಗೆದ್ದಿರುವ ಡಿಎನ್​​ಇಜಿ ಸಂಸ್ಥೆ ಈ ಸಿನಿಮಾಕ್ಕೆ ವಿಎಫ್​​ಎಕ್ಸ್ ಮಾಡಿದೆ. ಸಿನಿಮಾಕ್ಕೆ ಇಬ್ಬರು ಆಸ್ಕರ್ ವಿಜೇತ ಸಂಗೀತ ನಿರ್ದೇಶಕರು ಸಂಗೀತ ನೀಡಲಿದ್ದಾರೆ. ರಣ್​​ಬೀರ್, ಯಶ್ ಇನ್ನೂ ಹಲವು ಸ್ಟಾರ್​​ಗಳು ಸಿನಿಮಾನಲ್ಲಿ ನಟಿಸಲಿದ್ದಾರೆ. ಇಷ್ಟೆಲ್ಲ…

Read More

Video: ಏನಾದರೂ ತಗೊಳ್ಳಿ ಪ್ಲೀಸ್, ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ – Kannada News | Watch: Shop Assistant Breaks Down After Customer Walks Away

ಜೈಪುರ, ಜನವರಿ 13: ಯಾವುದೇ ಅಂಗಡಿಗೆ ಹೋದಾಗ ಅಲ್ಲಿರುವ ವಸ್ತುಗಳು ಇಷ್ಟವಾಗಬೇಕಂತೇನಿಲ್ಲ, ಖರೀದಿ ಮಾಡಬೇಕಂತಲೂ ಇಲ್ಲ. ಆದರೆ ಗಂಟೆಗಟ್ಟಲೆ ಅದು ತೋರಿಸಿ, ಇದು ತೋರಿಸಿ ಎಂದು ಸಿಬ್ಬಂದಿಯ ಸಮಯ ಹಾಳು ಮಾಡಿ, ಏನೂ ಕೊಳ್ಳದೆ ಹೊರಟಾಗ ಅವರಿಗೆ ಬೇಸರವಾಗದೇ ಇದ್ದೀತೆ. ಅಂಥದ್ದೇ ಘಟನೆ ಜೈಪುರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಜೈಪುರದ ಅಂಗಡಿಗೆ ಹೋಗಿ ಗಂಟೆಗಟ್ಟಲೆ ಸಮಯ ಹಾಳು ಮಾಡಿ ಕೊನೆಗೆ ಏನೂ ಕೊಳ್ಳದೆ ಹೊರಟಾಗ ಮಹಿಳಾ ವ್ಯಾಪಾರಿ ಗ್ರಾಹಕರ ಕಾಲಿಗೆ ಬಿದ್ದು ಏನಾದರೂ ಖರೀದಿ ಮಾಡುವಂತೆ ಮನವಿ ಮಾಡಿರುವ…

Read More