ಸಿನೆಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ: ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​! – Kannada News | Vijayapura Police Crack Raju Khari Murder: Property Dispute Behind Brutal Cinema Style Killing

ವಿಜಯಪುರ, ಏಪ್ರಿಲ್​​ 24: ಅಲಿಯಾಬಾದ್ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ರಾಜು ಖರಿ (48) ಏಪ್ರಿಲ್ 14ರಂದು ಭೀಕರವಾಗಿ ಕೊಲೆಯಾಗಿದ್ದರು. ಅಲಿಯಾಬಾದ್ ಬಳಿಯ ಕೈಗಾರಿಕಾ ಪ್ರದೇಶದ ಬಳಿ ಸಿನಿಮಾ ಸ್ಟೈಲ್​​ನಲ್ಲಿ ದಾಳಿ ನಡೆಸಿದ್ದ ಆರೋಪಿಗಳು ರಾಜು ಅವರನ್ನು ಬರ್ಬರವಾಗಿ ಕೊಂದಿದ್ದರು. ಪ್ರಕರಣ ಸಂಬಂಧ ಆರೋಪಿಗಳ ಕೈಗೆ ಕೋಳ ತೊಡಿಸಿರುವ ಪೊಲೀಸರು, ಆಸ್ತಿ ವಿವಾದವೇ ಡೆಡ್ಲಿ ಮರ್ಡರ್​​ಗೆ ಕಾರಣ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಆ ಮೂಲಕ ಗ್ರಾಮ ಪಂಚಾಯತಿಯ ಮಾಜಿ ಸದಸ್ಯನ ಕೊಲೆಗೆ ಅಸಲಿ ಕಾರಣ ಏನೆಂಬುದು ಬಹಿರಂಗಗೊಂಡಿದೆ.

ತಮ್ಮ ತೋಟದ ಮನೆಯಿಂದ ವಿಜಯಪುರದತ್ತ ಪ್ರಯಾಣ ಮಾಡುತ್ತಿದ್ದ ರಾಜು ಖರಿ ಅವರ ಥಾರ್​​ ಜೀಪ್​​ಗೆ ಮೊದಲು ಟಿಪ್ಪರ್​​ ಡಿಕ್ಕಿ ಹೊಡೆಸಲಾಗಿತ್ತು. ಅಪಗಾತದ ತೀವ್ರತೆಗೆ ಥಾರ್​​ ಜೀಪ್​​ ಮುಂಭಾಗ ಜಖಂ ಆಗಿದ್ದು, ಇದೇ ವೇಳೆ ವಾಹನದ ಬಳಿ ಆಗಮಿಸಿದ್ದ ಹಂತಕರು ಜೀಪ್ ಡೋರ್​​ನ ದೊಡ್ಡ ಕಲ್ಲಿನಿಂದ ಜಜ್ಜಿ ಒಡೆದು, ರಾಜು ತಲೆ ಮತ್ತು ಎದೆ ಭಾಗಕ್ಕೆ 6 ಸುತ್ತು ಗುಂಡಿನ ದಾಳಿ ನಡೆಸಿದ್ದರು. ಕಂಟ್ರಿ ಪಿಸ್ತೂಲ್​​ನಿಂದ ಆರೋಪಿಗಳು ಮಾಡಿದ್ದ ಈ ಫೈರಿಂಗ್​​ಗೆ ರಾಜು ಉಸಿರು ಚೆಲ್ಲಿದ್ದರು. ಅದಾದ ಬಳಿಕವೂ ಅವರ ತಲೆಗೆ ಕಲ್ಲಿನಿಂದ ಹೊಡೆದು ಹಂತಕರು ಎಸ್ಕೇಪ್​​ ಆಗಿದ್ದರು. ಈ ಭೀಕರ ಕೊಲೆ ಇಡೀ ಜಿಲ್ಲೆಯನ್ನೇ ನಡುಗಿಸಿ ಬಿಟ್ಟಿತ್ತು. ಹೀಗಾಗಿ ಪ್ರಕರಣ ಸಂಬಂಧ ಎಸ್ಪಿ ಲಕ್ಷ್ಮಣ ನಿಂಬರಗಿ ಎರಡು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಹಂತಕರ ಬೆನ್ನುಬಿದ್ದ ಖಾಕಿ ಪಡೆ ಒಟ್ಟು 6 ಮಂದಿಯನ್ನೀಗ ಬಂಧಿಸಿದೆ. ಅಲಿಯಾಬಾದಿಯ ಪಾಂಗ್ರೂನ್ ದೊಡ್ಡಿಯ ಪ್ರಮುಖ ಆರೋಪಿ ಅಬಾಶ್ಯಾ ಕೊಡ್ಲೆಕರ, ಮಾನೇನದೊಡ್ಡಿಯ ಅಬಾಶ್ಯಾ ಮಾನೆ, ಅಲಿಯಾಬಾದಿನ ವಾಗೀಶ ಪೋಳ, ಅಲಿಯಾಬಾದ ತಾಂಡಾದ ಖಂಡೂಬಾ ತಾಂಡೆ, ಪಾಂಗ್ರೂಬನ್ ದೊಡ್ಡಿಯ ಜಾಲಿಂದರ್ ಹಕ್ಕೆ, ಪಾಂಗ್ರೂನ್ ದೊಡ್ಡಿಯ ಮುರುಗು ಹಕ್ಕೆ ಬಂಧಿತರಾಗಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು; 6 ಸುತ್ತು ಫೈರಿಂಗ್ ಮಾಡಿ ಗ್ರಾ.ಪಂ ಸದಸ್ಯನ ಹತ್ಯೆ

ಇನ್ನು ಕೊಲೆಗೆ ಆಸ್ತಿ ವಿಚಾರವೇ ಕಾರಣ ಎನ್ನಲಾಗಿದೆ. ಖರಿ ಕುಟುಂಬಕ್ಕೆ ಸೇರಿದ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ರಾಜೂ ಖರಿ ಭಾಗಿಯಾಗಿದ್ದ. ಇದೇ ವಿಚಾರವಾಗಿ ಪ್ರಮುಖ ಆರೋಪಿ ಅಬಾಶ್ಯಾ ಕೋಪಕೊಂಡಿದ್ದ. ಇದೇ ಸಿಟ್ಟಲ್ಲಿ ಆರೋಪಿಗಳು ರಾಜು ಕೊಲೆ ಮಾಡಿರುವ ಬಗ್ಗೆ ಎಸ್ಪಿ ಮಾಹಿತಿ ನೀಡಿದ್ದಾರೆ. ಬಂಧಿತರಿಂದ 2 ಕಂಟ್ರಿ ಪಿಸ್ತೂಲ್ ಗಳು, 7 ಮೊಬೈಲ್, 2 ಮೋಟರ್ ಸೈಕಲ್ ಗಳು, ಟಿಪ್ಪರ್ ಮತ್ತು ಕಾರನ್ನು ವಶಕ್ಕೆ ಪಡೆದಿರೋದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:33 pm, Fri, 24 April 26

Source link

ಬಿಜೆಪಿಯಿಂದ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ; ರಾಘವ್ ಚಡ್ಡಾ ಸೇರಿ 7 ಸಂಸದರ ರಾಜೀನಾಮೆಗೆ ಕೇಜ್ರಿವಾಲ್ ಪ್ರತಿಕ್ರಿಯೆ – Kannada News | Arvind Kejriwals First Reaction On Raghav Chadha and Other 6 AAP MPs Joinging BJP

ನವದೆಹಲಿ, ಏಪ್ರಿಲ್ 24: ಆಮ್ ಆದ್ಮಿ ಪಕ್ಷಕ್ಕೆ ಒಂದರ ಹಿಂದೊಂದರಂತೆ ಹೊಡೆತಗಳು ಬೀಳುತ್ತಲೇ ಇವೆ. ಪಕ್ಷಕ್ಕೆ ನಿಯತ್ತಾಗಿರುವ ಅನೇಕ ನಾಯಕರು ಇದೀಗ ಆಮ್ ಆದ್ಮಿ ಪಕ್ಷದ (AAP) ಧೋರಣೆಯ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಪಕ್ಷದೊಳಗೆ ಅತೃಪ್ತರ ಬಣ ದೊಡ್ಡದಾಗುತ್ತಲೇ ಇದೆ. ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ಕೇಜ್ರಿವಾಲ್ (Arvind Kejriwal) ವಜಾಗೊಳಿಸಿದ ನಂತರ ಪಕ್ಷದಲ್ಲೇ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ರಾಘವ್ ಚಡ್ಡಾ ಮಹತ್ವದ ನಿರ್ಧಾರ ತೆಗೆದುಕೊಂಡು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದಾರೆ. ಹಾಗಂತ ಅವರೊಬ್ಬರೇ ಪಕ್ಷ ಬಿಟ್ಟು ಹೋಗುತ್ತಿಲ್ಲ. ಆಪ್​​ನೊಳಗಿನ ಇನ್ನೂ 6 ರಾಜ್ಯಸಭಾ ಸದಸ್ಯರನ್ನು ಕೂಡ ತಮ್ಮೊಂದಿಗೆ ಕರೆದುಕೊಂಡು ಬಿಜೆಪಿಗೆ ಕಾಲಿಟ್ಟಿದ್ದಾರೆ. ಇದು ಅರವಿಂದ್ ಕೇಜ್ರಿವಾಲ್​ಗೆ ದೊಡ್ಡ ಆಘಾತ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.’ಬಿಜೆಪಿ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ ಮಾಡಿದೆ’ ಎಂದು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆಮ್ ಆದ್ಮಿ ಪಕ್ಷದ 10 ರಾಜ್ಯಸಭಾ ಸಂಸದರಲ್ಲಿ 7 ಮಂದಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರುವುದಾಗಿ ಘೋಷಿಸಿದ ನಂತರ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್​ಗೆ ಭಾರೀ ಹೊಡೆತ; 6 ಸಂಸದರೊಂದಿಗೆ ಆಮ್ ಆದ್ಮಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ರಾಘವ್ ಚಡ್ಡಾ

ರಾಘವ್ ಚಡ್ಡಾ ಜೊತೆಗೆ ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರು ಆಮ್ ಆದ್ಮಿ ಪಕ್ಷ ಬಿಟ್ಟು ಹೋಗಿದ್ದಾರೆ. ಪಕ್ಷದ ರಾಜ್ಯಸಭಾ ಸಂಸದರಲ್ಲಿ ಮೂರನೇ ಎರಡರಷ್ಟು ಜನರು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದಾರೆ ಎಂದು ರಾಘವ್ ಚಡ್ಡಾ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ.

“ರಾಜ್ಯಸಭೆಯಲ್ಲಿ 10 ಎಎಪಿ ಸಂಸದರಿದ್ದಾರೆ. ಅವರಲ್ಲಿ 2/3ಕ್ಕಿಂತ ಹೆಚ್ಚು ಜನರು ನಮ್ಮೊಂದಿಗಿದ್ದಾರೆ. ಅವರು ಸಹಿ ಮಾಡಿದ್ದಾರೆ. ಇಂದು ಬೆಳಿಗ್ಗೆ ನಾವು ಸಹಿ ಮಾಡಿದ ಪತ್ರ ಮತ್ತು ದಾಖಲೆಗಳನ್ನು ರಾಜ್ಯಸಭಾ ಅಧ್ಯಕ್ಷರಿಗೆ ಸಲ್ಲಿಸಿದ್ದೇವೆ. ಅವರಲ್ಲಿ ಮೂವರು ನಿಮ್ಮ ಮುಂದೆ ಇದ್ದಾರೆ. ಇವರು ಮಾತ್ರವಲ್ಲದೆ ಹರ್ಭಜನ್ ಸಿಂಗ್, ರಾಜಿಂದರ್ ಗುಪ್ತಾ, ವಿಕ್ರಮಜಿತ್ ಸಿಂಗ್ ಸಹ್ನಿ ಮತ್ತು ಸ್ವಾತಿ ಮಲಿವಾಲ್ ಕೂಡ ಬಿಜೆಪಿಗೆ ಸೇರಲಿದ್ದಾರೆ” ಎಂದು ರಾಘವ್ ಚಡ್ಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

“ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಸಂಸತ್ತಿನ ಮೂರನೇ ಎರಡರಷ್ಟು ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸುತ್ತೇವೆ ಮತ್ತು ಭಾರತೀಯ ಜನತಾ ಪಕ್ಷದೊಂದಿಗೆ (BJP) ವಿಲೀನಗೊಳ್ಳುತ್ತೇವೆ.” ಎಂದು ರಾಘವ್ ಚಡ್ಡಾ ಹೇಳಿದ್ದಾರೆ. ಸ್ವಾತಿ ಮಲಿವಾಲ್, ಹರ್ಭಜನ್ ಸಿಂಗ್, ರಾಜಿಂದರ್ ಗುಪ್ತಾ ಮತ್ತು ವಿಕ್ರಮ್‌ಜಿತ್ ಸಿಂಗ್ ಸಾಹ್ನಿ ಕೂಡ ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ ಎಂದು ರಾಘವ್ ಚಡ್ಡಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಪ್ಪನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಕ್ಯಾಲ್ಸಿಯಂ ಕೊರತೆ ಉಂಟಾಗುತ್ತದೆಯೇ? – Kannada News | How High Salt Intake Affects Calcium Levels and Bone Health

ಉಪ್ಪು (Salt) ನಮ್ಮ ದೈನಂದಿನ ಆಹಾರದ ಅವಿಭಾಜ್ಯ ಅಂಗವಾಗಿದ್ದರೂ, ಅದನ್ನು ಅತಿಯಾಗಿ ಸೇವಿಸುವುದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ತಿಳಿದ ವಿಚಾರ. ಹಾಗಾಗಿ ಉಪ್ಪನ್ನು ಇತಿಮಿತಿಯಲ್ಲಿ ಸೇವನೆ ಮಾಡುವುದು ಬಹಳ ಒಳ್ಳೆಯದು ಎಂದು ಹೇಳಲಾಗುತ್ತದೆ. ಆದರೆ ಇತ್ತೀಚಿಗೆ ಹೊಸ ಪ್ರಶ್ನೆಯೊಂದು ಹುಟ್ಟಿಕೊಂಡಿದ್ದು ದೇಹದಲ್ಲಿ ಕ್ಯಾಲ್ಸಿಯಂ (Calcium Deficiency) ಸಮತೋಲನದ ಮೇಲೆ ಉಪ್ಪಿನ ಪ್ರಭಾವ ಹೇಗಿರುತ್ತದೆ ಎಂಬುದು ಹೆಚ್ಚು ಚರ್ಚೆಗೆ ಕಾರಣವಾಗಿದೆ. ಹಾಗಾದರೆ ಉಪ್ಪು ಮತ್ತು ಕ್ಯಾಲ್ಸಿಯಂ ನಡುವೆ ಇರುವ ಸಂಬಂಧವೇನು, ಯಾರಿಗೆ ಹೆಚ್ಚು ಅಪಾಯ ಮತ್ತು ಇಂತಹ ಸಮಸ್ಯೆಯನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಉಪ್ಪು ಮತ್ತು ಕ್ಯಾಲ್ಸಿಯಂ ನಡುವಿನ ಸಂಬಂಧ

ಕ್ಯಾಲ್ಸಿಯಂ ನಮ್ಮ ಎಲುಬು ಮತ್ತು ಹಲ್ಲುಗಳ ಬಲಕ್ಕೆ ಅತ್ಯಂತ ಅಗತ್ಯವಾದ ಖನಿಜವಾಗಿದೆ. ಜೊತೆಗೆ ನರ ಮತ್ತು ಸ್ನಾಯುಗಳ ಸರಿಯಾದ ಕಾರ್ಯನಿರ್ವಹಣೆಗೆ ಇದು ಪ್ರಮುಖವಾಗಿದೆ. ಆದರೆ ಹೆಚ್ಚು ಉಪ್ಪು ಸೇವಿಸಿದಾಗ ದೇಹದಲ್ಲಿ ಖನಿಜಗಳ ಸಮತೋಲನ ವ್ಯತ್ಯಯಗೊಳ್ಳುವ ಸಾಧ್ಯತೆ ಇದೆ. ಕೆಲವು ಅಧ್ಯಯನಗಳ ಪ್ರಕಾರ, ಅಧಿಕ ಉಪ್ಪು ಸೇವನೆಯಿಂದ ಮೂತ್ರದ ಮೂಲಕ ಕ್ಯಾಲ್ಸಿಯಂ ಹೊರಹೋಗುವ ಪ್ರಮಾಣ ಹೆಚ್ಚಾಗಬಹುದು. ಅದಲ್ಲದೆ ದೀರ್ಘಕಾಲ ಉಪ್ಪನ್ನು ಹೆಚ್ಚಾಗಿ ಸೇವಿಸಿದರೆ ಎಲುಬುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಇದರಿಂದ ಎಲುಬುಗಳು ದುರ್ಬಲವಾಗುವ ಅಪಾಯ ಹೆಚ್ಚಾಗಿರುತ್ತದೆ. ವಿಶೇಷವಾಗಿ ಕ್ಯಾಲ್ಸಿಯಂ ಕೊರತೆಯಿರುವವರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳಬಹುದು.

ಇದನ್ನೂ ಓದಿ: ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ

ಯಾರು ಹೆಚ್ಚು ಅಪಾಯದಲ್ಲಿದ್ದಾರೆ?

ಹಿರಿಯರು, ಮಹಿಳೆಯರು ಮತ್ತು ಈಗಾಗಲೇ ಕ್ಯಾಲ್ಸಿಯಂ ಕೊರತೆಯಿಂದ ಬಳಲುತ್ತಿರುವವರು ಹೆಚ್ಚು ಎಚ್ಚರಿಕೆಯಿಂದಿರಬೇಕು. ಹಾರ್ಮೋನ್ ಬದಲಾವಣೆಗಳು, ಆಹಾರ ಪದ್ಧತಿ ಸರಿಯಾಗಿ ಪಾಲನೆ ಮಾಡದಿದ್ದವರು ಮತ್ತು ವ್ಯಾಯಾಮದ ಕೊರತೆಯೂ ಈ ಅಪಾಯವನ್ನು ಹೆಚ್ಚಿಸಬಹುದು.

ಹೇಗೆ ನಿಯಂತ್ರಿಸಬೇಕು?

ಉಪ್ಪಿನ ಸೇವನೆಯನ್ನು ನಿಯಂತ್ರಿತ ಮಟ್ಟದಲ್ಲಿ ಇಡುವುದು ಅತ್ಯಂತ ಮುಖ್ಯ. ಹೆಚ್ಚು ಉಪ್ಪು ಇರುವ ಪ್ರೊಸೆಸ್ಡ್ ಆಹಾರಗಳನ್ನು ಕಡಿಮೆ ಮಾಡಬೇಕು. ಜೊತೆಗೆ ಹಾಲು, ಮೊಸರು, ಹಸಿರು ತರಕಾರಿಗಳು ಮುಂತಾದ ಕ್ಯಾಲ್ಸಿಯಂ ಸಮೃದ್ಧ ಆಹಾರಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಉಪ್ಪನ್ನು ಮಿತ ಪ್ರಮಾಣದಲ್ಲಿ ಬಳಸುವುದು ಮತ್ತು ಸಮತೋಲನ ಆಹಾರ ಪದ್ಧತಿಯನ್ನು ಅನುಸರಿಸುವುದು ದೇಹದ ಖನಿಜ ಸಮತೋಲನ ಕಾಪಾಡಲು ಸಹಾಯಕ. ಸರಿಯಾದ ಜೀವನಶೈಲಿಯ ಮೂಲಕ ಕ್ಯಾಲ್ಸಿಯಂ ಕೊರತೆಯ ಅಪಾಯವನ್ನು ಕಡಿಮೆ ಮಾಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ – Kannada News | 56400 Jobs Fill under New SC internal reservation Announced By CM Siddaramaiah

ಬೆಂಗಳೂರು, (ಏಪ್ರಿಲ್ 24): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಅನ್ವಯ, ದಲಿತ ಎಡಗೈ, ಬಲಗೈ ಮತ್ತು ಇತರ ಸ್ಪೃಶ್ಯ ಸಮುದಾಯಗಳಿಗೆ ನಿರ್ದಿಷ್ಟ ಶೇಕಡಾ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಎಡ, ಬಲಕ್ಕೆ ತಲಾ 5.25ರಷ್ಟು ಮೀಸಲಾತಿ ನೀಡಲಾಗಿದ್ದರೆ, ಇನ್ನುಳಿದಂತೆ ಇತರೆ ಸಮುದಾಯಕ್ಕೆ ಶೇ.4.5ರಷ್ಟು ಹಂಚಿಕೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್‌ನಲ್ಲಿ ಘೋಷಿಸಿದಂತೆ 56,400 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತಕ್ಷಣವೇ ಆರಂಭವಾಗಲಿದೆ. ಈ ಎಲ್ಲಾ ನೇಮಕಾತಿಗಳಲ್ಲಿ ಈಗ ಘೋಷಿಸಲಾದ ಹೊಸ ಒಳ ಮೀಸಲಾತಿ ಪದ್ಧತಿಯನ್ನೇ ಅನುಸರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು?

Source link

ಕ್ರೆಡಿಟ್ ಕಾರ್ಡ್ ಇದ್ದೂ ಅದನ್ನು ಬಳಸದೇ ಇದ್ದರೆ ಏನಾಗುತ್ತೆ? ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತಾ? – Kannada News | Know what happens if Credit Card not used for long time, how it affects credit score

ಕ್ರೆಡಿಟ್ ಕಾರ್ಡ್ ಎಂದರೆ ಬಹಳ ಜನರು ಹೌಹಾರಿ ದೂರ ಓಡುತ್ತಾರೆ. ಇನ್ನೂ ಹಲವರು ಸಾಲು ಸಾಲಾಗಿ ಕ್ರೆಡಿಟ್ ಕಾರ್ಡ್​ಗಳನ್ನು ಪಡೆದು ಇಎಂಐಗಳ ಗಾಳಕ್ಕೆ ಬೀಳುತ್ತಾರೆ. ಇನ್ನೂ ಕೆಲವರು ಕ್ರೆಡಿಟ್ ಕಾರ್ಡ್ (Credit Card) ಪಡೆದು, ಅದನ್ನು ಬಳಸದೆ ಹಾಗೇ ಬಿಟ್ಟಿರುತ್ತಾರೆ. ಕಾರ್ಡ್ ಬಳಸದೆ ಬಹಳ ಕಾಲ ಬಿಟ್ಟರೆ ಏನಾಗುತ್ತೆ? ಕಾರ್ಡ್ ಬಳಸದೇ ಇರುವುದು ಹಣಕಾಸು ದೃಷ್ಟಿಯಿಂದ ಉತ್ತಮ ಕ್ರಮ ಅನಿಸಬಹುದು. ಆದರೆ, ಕ್ರೆಡಿಟ್ ಸ್ಕೋರ್ ದೃಷ್ಟಿಯಿಂದ ಇದು ತುಸು ಸಂಕೀರ್ಣವಾಗಿದೆ.

‘ಕ್ರೆಡಿಟ್ ಕಾರ್ಡ್ ಬಳಕೆ ನಿಲ್ಲಿಸಿದರೆ ಕ್ರೆಡಿಟ್ ಸ್ಕೋರ್ ಕಡಿಮೆ ಆಗುವುದಿಲ್ಲ ಎನ್ನುವುದು ಹೌದು. ಆದರೆ, ಕಾರ್ಡ್ ಬಳಕೆ ದೀರ್ಘಾವಧಿಯವರೆಗೆ ಇಲ್ಲದಿದ್ದಾಗ ಕ್ರೆಡಿಟ್ ಹಿಸ್ಟರಿಯ ಅವಧಿ ಕಡಿಮೆ ಆಗುತ್ತದೆ. ಇದರಿಂದ ಕ್ರೆಡಿಟ್ ಕಾರ್ಡ್ ಕಂಪನಿ ನಿಮ್ಮ ಅಕೌಂಟ್ ಮುಚ್ಚಬಹುದು. ಇದು ಒಟ್ಟಾರೆ ಯುಟಿಲೈಸೇಶನ್ ರೇಶಿಯೋ ಹೆಚ್ಚಲು ಕಾರಣವಾಗಬಹುದು. ಆ ಮೂಲಕ ಕ್ರೆಡಿಟ್ ಸ್ಕೋರ್​ಗೆ ಸ್ವಲ್ಪ ಹಿನ್ನಡೆಗೆ ಕಾರಣವಾಗಬಹುದು’ ಎಂದು ಝ್ಯಾಗಲ್ ಕಂಪನಿಯ ಎಕ್ಸಿಕ್ಯೂಟಿವ್ ಛೇರ್ಮನ್ ರಾಜ್ ಪಿ ನಾರಾಯಣಂ ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷ ರೂ ಹೂಡಿಕೆಯಿಂದ 5,000 ರೂ ಪಿಂಚಣಿ; ಜನಪ್ರಿಯವಾಗುತ್ತಿದೆ ಎಪಿವೈ ಪೆನ್ಷನ್ ಸ್ಕೀಮ್

ಕ್ರೆಡಿಟ್ ಹಿಸ್ಟರಿ ಅವಧಿ ಕಡಿಮೆ ಇದ್ದರೆ ಏನು ಸಮಸ್ಯೆ?

ಸಾಲ ಪಡೆಯಬೇಕೆನ್ನುವವರು ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರಬೇಕು. ಸ್ಕೋರ್ ಹೆಚ್ಚಿಸಬೇಕೆಂದರೆ ಉತ್ತಮ ಕ್ರೆಡಿಟ್ ಹಿಸ್ಟರಿ ಇರಬೇಕು. ಕ್ರೆಡಿಟ್ ಕಾರ್ಡ್ ಮೂಲಕ ವೆಚ್ಚ ಮಾಡುವುದು, ಸರಿಯಾದ ಸಮಯಕ್ಕೆ ಹಣ ಪಾವತಿಸುವುದು, ಇಎಂಐ ಕಟ್ಟುವುದು ಇವು ಕ್ರೆಡಿಟ್ ಸ್ಕೋರ್ ಅನ್ನು ಹೆಚ್ಚಿಸುತ್ತವೆ.

ಹಣಕಾಸು ಸಂಸ್ಥೆಗಳು ನಿಮ್ಮ ಸಾಲದ ನಿರ್ವಹಣೆ ಹೇಗಿದೆ, ನಿಮಗೆ ಸಾಲ ತೀರಿಸುವ ಜವಾಬ್ದಾರಿ ಮತ್ತು ಶಕ್ತಿ ಇದೆಯಾ ಎಂಬುದನ್ನು ಗಮನಿಸುತ್ತವೆ. ಇಲ್ಲಿ ಕ್ರೆಡಿಟ್ ಸ್ಕೋರ್ ಜೊತೆಗೆ ಕ್ರೆಡಿಟ್ ಹಿಸ್ಟರಿಯೂ ಗಣನೆಗೆ ಬರುತ್ತದೆ.

ಇದನ್ನೂ ಓದಿ: ಮಾಸಿಕ 20,500 ರೂ ಆದಾಯ ತರಬಲ್ಲ ಪೋಸ್ಟ್ ಆಫೀಸ್​ನ ಎಸ್​ಸಿಎಸ್​ಎಸ್ ಸ್ಕೀಮ್

ನೀವು ಕ್ರೆಡಿಟ್ ಕಾರ್ಡ್ ಪಡೆದು ಅದನ್ನು ಬಹಳ ಕಾಲ ಉಪಯೋಗಿಸುವುದನ್ನು ನಿಲ್ಲಿಸಿದ್ದರೆ ಅಕೌಂಟ್ ಮುಚ್ಚಬಹುದು. ಇದರಿಂದ ಕ್ರೆಡಿಟ್ ಹಿಸ್ಟರಿ ಮೊಟಕುಗೊಳ್ಳಬಹುದು. ಇದರ ಬದಲು ಕ್ರೆಡಿಟ್ ಕಾರ್ಡ್ ಅನ್ನು ಯಾವಾಗಲಾದರೊಮ್ಮೆಯಾದರೂ ಉಪಯೋಗಿಸಿ, ಬಿಲ್ ಅನ್ನು ಸಕಾಲಕ್ಕೆ ಪಾವತಿಸುತ್ತಿದ್ದರೆ ಕ್ರೆಡಿಟ್ ಹಿಸ್ಟರಿ ಬೆಳೆಯುತ್ತಿರುತ್ತದೆ. ನಿಮಗೆ ಮುಂದೆ ಸಾಲಗಳು ಸಿಗುವುದು ಸುಲಭವಾಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

D Sudhakar Health Bulletin: ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಡಾಕ್ಟರ್ – Kannada News | Lung specialist doctor Manjunath gives minister D Sudhakar health updates, here Is hospital statement

ಬೆಂಗಳೂರು, (ಏಪ್ರಿಲ್ 24): ಕರ್ನಾಟಕ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್(D Sudhakar) ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು (Lung Infection) ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಚಿನ್ನದುರೈ ಎಂ ಡಿ ಅವರು ಪ್ರಕಟಣೆ ಹೊರಡಿಸಿದ್ದು, ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ತೊಂದರೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸಚಿವರ ಅರೋಗ್ಯದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡುತ್ತಿವೆ. ಇದು ಅವರ ಅಭಿಮಾನಿಗಳಲ್ಲಿ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ, ಆಗಿದ್ದೇನು?

ಕಿಮ್ಸ್ ಆಸ್ಪತ್ರೆಯ ಶ್ವಾಸಕೋಶ ಕಸಿ ವೈದ್ಯ ಹೇಳಿದ್ದೇನು?

ಇನ್ನು ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ಕಿಮ್ಸ್ ಆಸ್ಪತ್ರೆ ಶ್ವಾಸಕೋಶ ಕಸಿ ವೈದ್ಯ ಮಂಜುನಾಥ್ ಪ್ರತಿಕ್ರಿಯಿಸಿದ್ದು, ಶ್ವಾಸಕೋಶ ಸೋಂಕು ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಸಚಿವ ಡಿ ಸುಧಾಕರ್ಗೆ ಚಿಕಿತ್ಸೆ ನೀಡಲಾಗುತ್ತಿದೆ.ತಜ್ಞ ವೈದ್ಯಕೀಯ ತಂಡದಿಂದ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ವೆಂಟಿಲೇಟರ್ ಮತ್ತು ಎಕ್ಮೋ ನೆರವಿನಿಂದ ಉಸಿರಾಟವಾಡುತ್ತಿದ್ದಾರೆ. ಇನ್ಫೆಕ್ಷನ್ ಆಗಿರುವ ಶ್ವಾಸಕೋಶ ಸರಿಪಡಿಸಲು ಪ್ರಯತ್ನ ಪ್ರಯತ್ನ ನಡೆದಿದೆ. ಸಾಧ್ಯವಾಗದಿದ್ದಾಗ ಶ್ವಾಸಕೋಶ ಕಸಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಆಸ್ಪತ್ರೆಯಿಂದ ಹೆಲ್ತ್​ ಬುಲೆಟಿನ್

ಇನ್ನು ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿಬರುತ್ತಿರುವುದರಿಂದ ಕಿಮ್ಸ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಚಿನ್ನದೊರೈ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸುಧಾಕರ್ ಅವರಿಗೆ ಕಿಮ್ಸ್ ನ‌ ICU ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸಚಿವ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವ ಅವರು ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಚಿನ್ನದೊರೈ ಹೆಲ್ತ್ ಬುಲೆಟಿನ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಆಪರೇಷನ್ ಬಳಿಕ ಶ್ವಾಸಕೋಶ ಸೋಂಕು

ಮೊದಲು ಮೊಣಕಾಲು ಸಂಬಂಧ ಆಪರೇಷನ್​ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿದ್ದು, ಇದು ಇದ್ದಕ್ಕಿದ್ದಂತೆ ಉಲ್ಬಣವಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಕಳೆದ ಮೂರು ದಿನಗಳ ಹಿಂದೆ ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ, ಸಂಪುಟ ತೀರ್ಮಾನದ ಬಗ್ಗೆ ಸಿಎಂ ಹೇಳಿದ್ದಿಷ್ಟು – Kannada News | Siddaramaiah Governmnet takes Final destinations about SC internal reservation, here CM press conference

ಬೆಂಗಳೂರು, (ಏಪ್ರಿಲ್ 24): ಒಳ ಮೀಸಲಾತಿ (Internal Reservation) ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಶೇ.15 ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ ಎಡಗೈ ಸಮುದಾಯ ಶೇ. 5.25, ಬಲಗೈ ಸಮುದಾಯ ಶೇ. 5.25 ಹಾಗೂ ಇತರ ಪರಿಶಿಷ್ಟ ಜಾತಿಗಳಿಗೆ ಶೇ. 4.5 ಒಳ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರವಾಗಿ ಹೇಳಿದ್ದಾರೆ ನೋಡಿ.

ಇದನ್ನೂ ಓದಿ: ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು?

Source link

ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ: ಗೋಲ್ಡ್​​ ಮೆಡಲ್​​ ಪಡೆದ ರೈತ ಕುಟುಂಬದ ವಿದ್ಯಾರ್ಥಿನಿ – Kannada News | Bagalkot Universitys First Convocation Celebrates Gold Medalists: Farmers Daughters Shine

ಬಾಗಲಕೋಟೆ, ಏಪ್ರಿಲ್​​ 24: ಇಲ್ಲಿನ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರು ಚಿನ್ನದ ಪದಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ಈ ಐತಿಹಾಸಿಕ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದ್ದು, ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಭಾಗವಹಿಸಿದ್ದರು. ಎಂಎಸ್ಸಿ ಭೌತಶಾಸ್ತ್ರದಲ್ಲಿ 8.9 ಸಿಜಿಪಿಎ ಗಳಿಸಿರುವ ಸನ್ಮತಿ ಜಿನಪ್ಪ ಕುಪ್ಪಿ ಅವರು ಬಸವೇಶ್ವರ ಬಾಗಲಕೋಟ್ ಕಾಲೇಜಿನಿಂದ ವಿಶ್ವವಿದ್ಯಾಲಯದ ಮೊದಲ ಭೌತಶಾಸ್ತ್ರ ಗೋಲ್ಡ್​​ ಮೆಡಲ್​ ವಿಜೇತರಾಗಿದ್ದಾರೆ. ರೈತ ಕುಟುಂಬದಿಂದ ಬಂದಿರುವ ಸನ್ಮತಿ, ತಮ್ಮ ಈ ಸಾಧನೆಯು ತಮ್ಮ ಹಲವು ವರ್ಷಗಳ ಕಷ್ಟದ ಫಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಸನ್ಮತಿ ಪ್ರಸ್ತುತ ಬಿಎಲ್ಡಿ ಕಾಲೇಜಿನಲ್ಲಿ ಬೋಧಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಪಿಎಚ್‌ಡಿ ಮತ್ತು ಸಂಶೋಧನಾ ಕ್ಷೇತ್ರವನ್ನು ಪ್ರವೇಶಿಸುವ ಆಕಾಂಕ್ಷೆ ಹೊಂದಿದ್ದಾರೆ. ಕಳೆದ ವರ್ಷ ಕೆಸೆಟ್ ಪರೀಕ್ಷೆಯನ್ನು ಕೂಡ ಅವರು ಉತ್ತೀರ್ಣರಾಗಿದ್ದಾರೆ. ಇದೇ ರೀತಿ, ಇತಿಹಾಸ ವಿಷಯದಲ್ಲಿ ಚಿನ್ನದ ಪದಕ ಗಳಿಸಿದ ಪ್ರಿಯಾಂಕ ಅಟ್ಪತ್ ಕೂಡ ತಮ್ಮ ಸಾಧನೆಯ ಬಗ್ಗೆ ಅಪಾರ ಸಂತಸಗೊಂಡಿದ್ದಾರೆ. ಇತ್ತೀಚೆಗೆ ಕೆಸೆಟ್ ಪರೀಕ್ಷೆಯನ್ನು ಉತ್ತೀರ್ಣರಾಗಿರುವ ಪ್ರಿಯಾಂಕ, ಸಹಾಯಕ ಪ್ರಾಧ್ಯಾಪಕರಾಗುವ ಗುರಿ ಹೊಂದಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರೂ ತಮ್ಮ ಪೋಷಕರ ಸಂಪೂರ್ಣ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ್ದು, ಅವರ ಪ್ರೋತ್ಸಾಹವೇ ಈ ಯಶಸ್ಸಿಗೆ ಕಾರಣ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ರಾಜ್​ಕುಮಾರ್ ಸಮಾಧಿ ಜಾಗ: ಚೇತನ್ ಪ್ರಶ್ನೆಗೆ ಅಭಿಮಾನಿಗಳ ಆಕ್ರೋಶ – Kannada News | Chetan Ahimsa questions government for giving land to Dr Rajkumar’s memorial

ಇಂದು (ಏಪ್ರಿಲ್ 24) ಡಾ ರಾಜ್​ಕುಮಾರ್ (Dr Rajkumar) ಅವರ ಜಯಂತಿ. ಸಾವಿರಾರು ಮಂದಿ ಅಭಿಮಾನಿಗಳು ಡಾ ರಾಜ್​ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಅಭಿಮಾನಿಗಳು, ಅಣ್ಣಾವ್ರ ನೆನಪಿನಲ್ಲಿ ಅನ್ನದಾನ, ರಕ್ತದಾನ, ನೇತ್ರದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದಾರೆ. ಅಣ್ಣಾವ್ರ ನೆನಪಿನಲ್ಲಿ ಗೀತ-ಗಾಯನ ಕಾರ್ಯಕ್ರಮವೂ ಇಂದು ನಡೆದಿದೆ. ರಾಜ್ಯದ ಹಲವು ಮೂಲೆಗಳಲ್ಲಿ ಅಣ್ಣಾವ್ರ ಜಯಂತಿಯನ್ನು ಆಚರಿಸಲಾಗುತ್ತಿದೆ. ಕರ್ನಾಟಕಕ್ಕಾಗಿ, ಕನ್ನಡಕ್ಕಾಗಿ ಮಹತ್ವದ ಯೋಗದಾನ ನೀಡಿದ ಅಪ್ರತಿಮ ಕಲಾವಿದರನ್ನು ಸ್ಮರಿಸಲಾಗುತ್ತಿದೆ. ಆದರೆ ಇದರ ಮಧ್ಯೆ, ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ಅವರು ಅಣ್ಣಾವ್ರ ಸಮಾಧಿ ಸ್ಥಳದ ಬಗ್ಗೆ ಕೊಂಕು ತೆಗೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟ ಚೇತನ್ ಅಹಿಂಸ, ಅಣ್ಣಾವ್ರ ಸಮಾಧಿ ಸ್ಥಳಕ್ಕೆ ಜಾಗ ಕೊಟ್ಟಿರುವ ಸರ್ಕಾರದ ಕ್ರಮವನ್ನು ಟೀಕೆ ಮಾಡಿದ್ದಾರೆ. ‘ನಾವು ರಾಜಕುಮಾರ್ ಅವರನ್ನು ಒಬ್ಬ ಮಹಾನ್ ಕಲಾವಿದರಾಗಿ ಗೌರವಿಸುತ್ತೇವೆ. ಆದರೆ, ಬೆಂಗಳೂರು ನಗರ ಮಧ್ಯದಲ್ಲಿ 2006ರಲ್ಲಿ ಒಬ್ಬ ನಟನ “ಸಮಾಧಿ ಕಾಂಪ್ಲೆಕ್ಸ್”ಗಾಗಿ 2.5 ಎಕರೆ ಭೂಮಿಯನ್ನು ನೀಡುವುದು ತಿಳುವಳಿಕೆಯ ನಿರ್ಧಾರವಾಗಿತ್ತೇ ಎಂಬುದನ್ನು ಪ್ರಶ್ನಿಸಬೇಕಾಗಿದೆ. 21ನೇ ಶತಮಾನದ ಭಾರತದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರವು ಅದನ್ನು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸಾರ್ವಜನಿಕ ಉಪಯೋಗಕ್ಕೆ ತಕ್ಕಂತೆ ಹಂಚಬೇಕು. ಮತಗಳ ಲಾಭದ ಅವಕಾಶವಾದಿ ಉದ್ದೇಶದಿಂದ ಅಲ್ಲ’ ಎಂದಿದ್ದಾರೆ.

ಆದರೆ ಚೇತನ್ ಅಹಿಂಸ ಅವರ ಈ ಕೊಂಕು ಮಾತಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ‘ಯಾವುದೋ ಅಮಲಿನಲ್ಲಿ ಈ ವ್ಯಕ್ತಿ ಪೋಸ್ಟ್​​ ಹಂಚಿಕೊಂಡಿದ್ದಾರೆ’ ಎಂದು ಒಬ್ಬರು ಟೀಕೆ ಮಾಡಿದರೆ. ಇನ್ನು ಕೆಲವರು ರಾಜ್​ಕುಮಾರ್ ಅವರು ಕನ್ನಡ ಭಾಷೆಗೆ, ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಚೇತನ್ ಅಹಿಂಸಗೆ ನೆನಪು ಮಾಡುವ ಪ್ರಯತ್ನ ಮಾಡಿದ್ದಾರೆ. ಇನ್ನು ಕೆಲವರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇನ್ನಿತರರ ಸಮಾಧಿ ಸ್ಥಳಗಳ ಉಲ್ಲೇಖವನ್ನು ಮಾಡಿದ್ದಾರೆ.

ರಾಜ್​ಕುಮಾರ್ ಅವರ ಸಮಾಧಿ ಕಂಠೀರವ ಸ್ಟುಡಿಯೋನಲ್ಲಿದೆ. ಇದೇ ಸ್ಥಳದಲ್ಲಿ ಅಂಬರೀಶ್, ಪುನೀತ್ ರಾಜ್​ಕುಮಾರ್ ಅವರ ಸಮಾಧಿಗಳೂ ಇವೆ. ಕಂಠೀರವ ಸ್ಟುಡಿಯೋ ಸಹ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ರಾಜ್​ಕುಮಾರ್ ಸಮಾಧಿ ಸ್ಥಳ ಅಥವಾ ಇನ್ನಿತರೆ ಸಮಾಧಿ ಸ್ಥಳಗಳನ್ನು ಯಾವುದೇ ವಾಣಿಜ್ಯ ಲಾಭಕ್ಕೆ ಯಾರೂ ಸಹ ಬಳಸಿಕೊಂಡಿಲ್ಲ. ಈ ಬಗ್ಗೆ ಈ ವರೆಗೆ ಯಾರೂ ಪ್ರಶ್ನೆಯನ್ನೂ ಸಹ ಮಾಡಿರಲಿಲ್ಲ. ಆದರೆ ಇದೀಗ ಚೇತನ್ ಅಹಿಂಸ ಅವರು ವಿನಾಕಾರಣ ಕೊಂಕು ತೆಗೆದಿದ್ದಾರೆ. ಇದಕ್ಕೆ ಅಣ್ಣಾವ್ರ ಅಭಿಮಾನಿಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು, ಮುಂದೆ ಇದು ಯಾವ ತಿರುವು ಪಡೆದುಕೊಳ್ಳಲಿದೆ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಟೀಸರ್ ನೋಡಿ ಮೆಚ್ಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – Kannada News | Lakshmi Hebbalkar talks about Daali Dhananjay starrer Anna from Mexico movie teaser

ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕುಟುಂಬ ಈ ಚಿತ್ರರಂಗಕ್ಕೂ ಕಾಲಿಟ್ಟಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಬಿ. ಹಟ್ಟಿಹೊಳಿ ಅವರು ‘ಐರಾ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ ‘ಅಣ್ಣ ಫ್ರಮ್ ಮೆಕ್ಸಿಕೋ’ (Anna From Mexico) ಸಿನಿಮಾ ನಿರ್ಮಾಣ ಆಗಿದೆ. ‘ದಿ ರಾಯಲ ಸ್ಟುಡಿಯೋಸ್’ ಕೈ ಜೋಡಿಸಿದೆ. ಈಗ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ನಟ ಡಾಲಿ ಧನಂಜಯ್ (Daali Dhananjay) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಭಾಗವಹಿಸಿ ಮಾತನಾಡಿದರು.

‘ಟೀಸರ್ ಚೆನ್ನಾಗಿದೆ, ಹೊಸತನದಿಂದ ಕೂಡಿದೆ. ಧನಂಜಯ್ ಅವರ ನಟನೆ ಸೂಪರ್. ಧನಂಜಯ್ ಧರಿಸಿದ ಕರ್ನಾಟಕ ಭೂಪಟದ ಲಾಕೆಟ್ ಬಹಳಷ್ಟು ಇಷ್ಟವಾಯ್ತು. ನಾವು ಚಿತ್ರರಂಗಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಸಿನಿಮಾ ನಿರ್ಮಾಣಕ್ಕೆ ಬಂದಿದ್ದೇವೆ. ಕನ್ನಡ ಚಲನಚಿತ್ರಗಳನ್ನು ನೋಡಿಕೊಂಡು ಬೆಳೆದಿದ್ದೇವೆ. ಕನ್ನಡ ಚಿತ್ರರಂಗ ಸಾಕಷ್ಟು ಶ್ರೀಮಂತವಾಗಿದೆ. ಇದು ನಮ್ಮ ಪರಂಪರೆ. ಈ ಕ್ಷೇತ್ರಕ್ಕೆ ನಾನು ಹೊಸಬಳು’ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದರು.

ಸಿನಿಮಾ ಶುರುವಾದ ಬಗೆಯ ಬಗ್ಗೆ ಡಾಲಿ ಧನಂಜಯ್ ಮಾತನಾಡಿದರು. ‘ಹೊಯ್ಸಳ ಸಿನಿಮಾ ಶೂಟಿಂಗ್ ಬೆಳಗಾವಿಯಲ್ಲಿ ನಡೆಯುವಾಗ ಲಕ್ಷ್ಮಿ ಮೇಡಂ ಮನೆಗೆ ಹೋಗಿ ಊಟ ಮಾಡ್ಕೊಂಡು ಬರುವಾಗ ನಮ್ಮ ತಮ್ಮನಿಗೆ ಸಿನಿಮಾ ಮಾಡುವ ಆಸಕ್ತಿ ಇದೆ ಎಂದಿದ್ದರು. ಆ ಬಳಿಕ ಈ ಜರ್ನಿ ಶುರುವಾಯ್ತು. ಚನ್ನರಾಜು ಅವರು ಪ್ರೊಡಕ್ಷನ್ ‌ಮಾಡಿದ್ದಾರೆ ಎಂಬುವುದು ಗೊತ್ತಾಯ್ತು. ಸಖತ್ ಸ್ಟೈಲಿಶ್ ಆಗಿ, ಆ್ಯಕ್ಷನ್ ರೀತಿ ನನ್ನನ್ನು ತೋರಿಸಬೇಕು ಅಂತ ಅವರು ಎಂದುಕೊಂಡಿದ್ದರು. ಆದರೆ ಫ್ಯಾಮಿಲಿ ನೋಡುವಂತಹ ಸಿನಿಮಾ ಕೂಡ ಆಗಬೇಕು. ಹಾಗಾಗಿ ನಿರ್ದೇಶಕ ಶಂಕರ್ ಬಂದರು. ಒಳ್ಳೆಯ ಟೀಮ್ ಸಿದ್ಧವಾಯಿತು’ ಎಂದು ಡಾಲಿ ಹೇಳಿದರು.

‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಟೀಸರ್:

‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾದಲ್ಲಿ ರೀಷ್ಮಾ ನಾಣಯ್ಯ ಅವರು ನಾಯಕಿ ಆಗಿದ್ದಾರೆ. ರಂಗಾಯಣ ರಘು, ನಾಗಭೂಷಣ, ಪೂರ್ಣಚಂದ್ರ ಮೈಸೂರು, ಉಮಾಶ್ರೀ, ಸಾಧು ಕೋಕಿಲ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ವಾಸುಕಿ ವೈಭವ್‌ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಜಯ್ ಅವರು ಸಂಕಲನ ಮಾಡಿದ್ದಾರೆ. ಗುಣ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ.

ಇದನ್ನೂ ಓದಿ: ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?

ವಾಸುಕಿ ವೈಭವ್, ನಿರ್ದೇಶಕ ಶಂಕರ್‌ ಗುರು, ಚನ್ನರಾಜ್ ಹಟ್ಟಿಹೊಳಿ, ನಯನಾ ಮೋಟಮ್ಮ, ಸಹ-ನಿರ್ಮಾಪಕರಾದ ಸತ್ಯ ರಾಯಲ, ಜೀ ಸ್ಟುಡಿಯೋಸ್​ನ ದಿವ್ಯಾ, ಆನಂದ್ ಆಡಿಯೋದ ಶ್ಯಾಮ್ ಮುಂತಾದವರು ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಹಾಜರಿದ್ದರು. ಅಭಿಮಾನಿಗಳಿಂದ ‘ಅಣ್ಣ ಫ್ರಮ್ ಮೆಕ್ಸಿಕೋ’ ಟೀಸರ್​ಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version