ಅಮೆರಿಕ: ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾವು, ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ – Kannada News | US Police Accident Case: Indian Student Death, Family Gets Record 29 Million Dollar Settlement

ವಾಷಿಂಗ್ಟನ್, ಫೆಬ್ರವರಿ 12: ಅಮೆರಿಕದಲ್ಲಿ ನಡೆದ ಅಪಘಾತ(Accident)ದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು. 2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿ ಹೊಡೆದು 23 ವರ್ಷದ ಜಾಹ್ನವಿ ಕಂದುಲಾ ಸಾವನ್ನಪ್ಪಿದ್ದರು.

ಜಾಹ್ನವಿ ಕಂದುಲಾ ಭಾರತದವರಾಗಿದ್ದು, ಸಿಯಾಟಲ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಈ ಘಟನೆ ಜನವರಿ 2023 ರಲ್ಲಿ ನಡೆದಿತ್ತು. ಸಿಯಾಟಲ್ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಮಾದಕವಸ್ತು ಸೇವನೆ ಮಾಡಿ, ಫೋನ್​​ ಅಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದರು.

ಅವರು 25 mph ವೇಗದಲ್ಲಿ ಚಾಲನೆ ಮಾಡುವ ಪ್ರದೇಶದಲ್ಲಿ 74 mph (119 kph) ವೇಗದಲ್ಲಿ ಚಾಲನೆ ಮಾಡುತ್ತಿದ್ದರು. ನಂತರ ಅಧಿಕಾರಿಗೆ ಅಜಾಗರೂಕ ಚಾಲನೆಗಾಗಿ 5,000 ಡಾಲರ್ ದಂಡ ವಿಧಿಸಲಾಯಿತು. ಅವರನ್ನು ಪೊಲೀಸ್ ಇಲಾಖೆಯಿಂದ ವಜಾಗೊಳಿಸಲಾಯಿತು. ಆದಾಗ್ಯೂ, ಕಿಂಗ್ ಕೌಂಟಿ ಪ್ರಾಸಿಕ್ಯೂಟರ್‌ಗಳು ಅಧಿಕಾರಿ ಉದ್ದೇಶಪೂರ್ವಕವಾಗಿ ಸುರಕ್ಷತೆಯನ್ನು ನಿರ್ಲಕ್ಷಿಸಿದ್ದಾರೆಂದು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಅವರ ವಿರುದ್ಧ ಯಾವುದೇ ಗಂಭೀರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಿಲ್ಲ.

ಮತ್ತಷ್ಟು ಓದಿ: ನೈಜೀರಿಯಾ: ಕಾನೋದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅಪಘಾತ, 30 ಮಂದಿ ಸಾವು

ಮತ್ತೊಬ್ಬರ ಬಾಡಿ ಕ್ಯಾಮರಾದಲ್ಲಿ ರೆಕಾರ್ಡ್​ ಆಗಿದ್ದ ದೃಶ್ಯಗಳು ಬೆಳಕಿಗೆ ಬಂದಾಗ ವಿಷಯ ತುಂಬಾ ಗಂಭೀರವಾಯಿತು. ಕಳೆದ ಶುಕ್ರವಾರ ಕಿಂಗ್ ಕೌಂಟಿ ಸುಪೀರಿಯರ್ ನ್ಯಾಯಾಲಯದಲ್ಲಿ ಇತ್ಯರ್ಥ ಅರ್ಜಿ ಸಲ್ಲಿಸಲಾಗಿದೆ. ಕುಟುಂಬದ ವಕೀಲರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಗರ ಅಟಾರ್ನಿ ಎರಿಕಾ ಇವಾನ್ಸ್ ಮಾತನಾಡಿ, ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕವಾಗಿತ್ತು. ಈ ಆರ್ಥಿಕ ಇತ್ಯರ್ಥವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಸಾಂತ್ವನ ನೀಡುತ್ತದೆ ಎಂದು ನಂಬಿದ್ದೇವೆಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 2:53 pm, Thu, 12 February 26

Source link

ಕೆನಡಾದಲ್ಲಿ ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ – Kannada News | Chandans Father Mourns Sons Murder in Canada, Watches Last Rites via Mobile

ನೆಲಮಂಗಲ, ಫೆಬ್ರವರಿ 12: ಕೆನಡಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಬದುಕು ಕಟ್ಟಿಕೊಂಡಿದ್ದ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್, ಎರಡು ದಿನಗಳ ಹಿಂದೆ ದುಷ್ಕರ್ಮಿಗಳ ಶೂಟೌಟ್‌ಗೆ ಬಲಿ ಆಗಿದ್ದಾರೆ. ಚಂದನ್ ತಂದೆ ತಮ್ಮ ಮಗನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಕೆನಡಾಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಕೆನಡಾದ ಲೋಟಸ್‌ನಲ್ಲಿ ನಡೆದ ಅಂತಿಮ ದರ್ಶನವನ್ನು ಮೊಬೈಲ್ ವಿಡಿಯೋ ಮೂಲಕ ನೋಡಿ ತಂದೆ ಕಣ್ಣೀರಿಟ್ಟಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ಕುಟುಂಬಕ್ಕೆ ಅತೀವ ನೋವು ತಂದಿದೆ. ಏರ್ ಲಿಫ್ಟ್ ಮೂಲಕ ಇನ್ನೆರಡು ದಿನದಲ್ಲಿ ಪಾರ್ಥೀವ ಶರೀರ ಬೆಂಗಳೂರಿಗೆ ಬರಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs NAM: ಇಂದು ಅಭಿಷೇಕ್ ಶರ್ಮಾ ಕಣಕ್ಕಿಳಿಯುತ್ತಾರಾ?

Source link

ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ: ಅಧಿಕಾರಿಗಳಿಂದ 11 ಕಡೆ ಶೋಧ – Kannada News | Disproportionate Assets Probe: Lokayukta Conducts Raids on PWD Chief Engineer Purushottam

ಬೆಂಗಳೂರು, ಫೆ.12: ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಕೆ-ಶಿಪ್ ವಿಭಾಗದ ಮುಖ್ಯ ಇಂಜಿನಿಯರ್ ಪುರುಷೋತ್ತಮ್ ದಾಸ್ ಹೆಗಡೆ ಅವರಿಗೆ ಸಂಬಂಧಿಸಿದ ಬೆಂಗಳೂರು ಮತ್ತು ಮೈಸೂರಿನ ಒಟ್ಟು 11 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಈ ತನಿಖೆಯನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನ ಎರಡು ಸ್ಥಳಗಳು ಮತ್ತು ಮೈಸೂರಿನ ಐದಾರು ಸ್ಥಳಗಳು ಸೇರಿದಂತೆ ಒಟ್ಟು 11 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಪುರುಷೋತ್ತಮ್ ದಾಸ್ ಹೆಗಡೆ ಅವರು ತಮ್ಮ ಆದಾಯದ ಮೂಲಗಳಿಗೆ ತಕ್ಕಂತೆ ಆಸ್ತಿಯನ್ನು ಹೊಂದಿಲ್ಲ ಎಂಬುದು ಕಂಡುಬಂದಿದೆ. ದಾಳಿಯ ವೇಳೆ, ನಗದು, ಚಿನ್ನಾಭರಣ, ಬ್ಯಾಂಕ್ ಬ್ಯಾಲೆನ್ಸ್ ಸೇರಿದಂತೆ ಚರ ಮತ್ತು ಸ್ಥಿರ ಆಸ್ತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇದರಲ್ಲಿ ಸೈಟ್‌ಗಳು, ಮನೆಗಳು, ಯೋಜನೆಗಳು, ವಿವಿಧ ಕಂಪನಿಗಳಲ್ಲಿನ ಹೂಡಿಕೆಗಳು, ಮತ್ತು ಎರಡು ಶಾಲೆಗಳನ್ನು ಒಳಗೊಂಡಿರುವ ಟ್ರಸ್ಟ್‌ಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಸಂಪೂರ್ಣ ತನಿಖೆಯ ನಂತರ ವಿವರವಾದ ವರದಿಯನ್ನು ಸಲ್ಲಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗುರುತೇ ಸಿಗದಷ್ಟು ಬದಲಾದ ‘ಮಿಲನ’ ಸಿನಿಮಾ ನಟಿ ಪಾರ್ವತಿ

Source link

ಹೆಣದ ಮೇಲೂ ಹಣ: ಪೆದ್ದರಂತೆ ಫೋನ್​ಪೇನಲ್ಲೇ ಲಂಚ ಪಡೆದು ಸಿಕ್ಕಿಬಿದ್ದ ಮೂವರು ಸಿಬ್ಬಂದಿ ವಜಾ – Kannada News | KIMS Hubballi Staff Sacked for Taking Money from Patients’ Families After TV Report

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆImage Credit source: tv9

ಹುಬ್ಬಳ್ಳಿ, ಫೆಬ್ರವರಿ 12: ಉತ್ತರ ಕರ್ನಾಟಕದ ಬಡವರ ಸಂಜೀವನಿ ಎಂದೇ ಖ್ಯಾತಿ ಪಡೆದಿರುವ ಹುಬ್ಬಳ್ಳಿ ಕಿಮ್ಸ್ (KIMS Hospital) ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಅವರ ಕುಟುಂಬದವರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ಮೂವರು ಸಿಬ್ಬಂದಿಯ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗಿದೆ. ‘ಟಿವಿ9’ ವರದಿ ಮಾಡಿದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಹಣ ಪಡೆದ ಮೂವರು ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯಾಗಿದ್ದರೂ, ಕೆಲ ಸ್ವಚ್ಛತಾ ಹಾಗೂ ಡಿ-ಗ್ರೂಪ್ ಸಿಬ್ಬಂದಿ ರೋಗಿಗಳು ಮತ್ತು ಕುಟುಂಬದವರಿಂದ ಪ್ರತಿ ಕೆಲಸಕ್ಕೂ ಹಣ ಕೇಳುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ರೋಗಿಯನ್ನು ಸ್ಟ್ರೆಚರ್‌ನಲ್ಲಿ ಕರೆದೊಯ್ಯುವುದು, ವಾರ್ಡ್ ಬದಲಾವಣೆ ಮಾಡುವುದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟವರ ಶವವನ್ನು ಸಾಗಾಟ ಮಾಡುವುದು ಸೇರಿದಂತೆ ಪ್ರತಿಯೊಂದು ಹಂತದಲ್ಲೂ ಹಣ ವಸೂಲಿ ಮಾಡುತ್ತಿದ್ದರೆಂಬ ಆರೋಪ ಕೇಳಿಬಂದಿತ್ತು.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಆಶಾಳ ಅಡವಿಬಾವಿ ಗ್ರಾಮದ 52 ವರ್ಷದ ಗದ್ದೆಮ್ಮ ಎಂಬ ಮಹಿಳೆ ಪಿತ್ತಕೋಶದ ಸಮಸ್ಯೆಯಿಂದ ಜನವರಿ 31ರಂದು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಶನಿವಾರ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಬುಧವಾರ ನಸುಕಿನ ಜಾವ ಮೃತಪಟ್ಟಿದ್ದರು.

ಮೃತದೇಹ ಪ್ಯಾಕ್ ಮಾಡಿ ವಾಹನಕ್ಕೆ ಸಾಗಿಸಲು ಲಂಚ ಪಡೆದಿದ್ದ ಸಿಬ್ಬಂದಿ

ಮೃತದೇಹವನ್ನು ಪ್ಯಾಕ್ ಮಾಡಿ ವಾಹನಕ್ಕೆ ಸಾಗಿಸಲು ಡಿ-ಗ್ರೂಪ್ ಸಿಬ್ಬಂದಿ 500 ರೂ. ಹಣ ಕೇಳಿದರೆಂದು ಕುಟುಂಬದವರು ಆರೋಪಿಸಿದ್ದರು. ಹಣ ಇಲ್ಲವೆಂದು ಹೇಳಿದರೂ ಬಿಡದೇ ಪೀಡಿಸಿ, ಕೊನೆಗೆ 200 ರೂ. ಫೋನ್‌ಪೇ ಮೂಲಕ ಪಡೆದಿದ್ದರು. ನಂತರ ಶವವನ್ನು ವಾಹನಕ್ಕೆ ಹಾಕಿದ ಮೇಲೂ ಮತ್ತೆ ಹಣಕ್ಕಾಗಿ ಒತ್ತಾಯಿಸಿದ್ದರು ಎನ್ನಲಾಗಿದೆ.

ಈ ಬಗ್ಗೆ ‘ಟಿವಿ9’ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಕಿಮ್ಸ್ ನಿರ್ದೇಶಕರಿಗೆ ಕರೆ ಮಾಡಿ ವರದಿ ಕೇಳಿದ್ದರು. ಕಿಮ್ಸ್ ಆಡಳಿತ ಎಚ್ಚೆತ್ತುಕೊಂಡು ತನಿಖಾ ತಂಡವನ್ನು ರಚಿಸಿತು.

ಫೊನ್ ಪೇ ಮೂಲಕ ಲಂಚ ಪಡೆದು ಸಿಕ್ಕಾಕೊಂಡ್ರು!

ಹಣ ವಸೂಲಿ ಮಾಡಿದವರು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಅವರನ್ನು ವಿಚಾರಣೆ ನಡೆಸಿದಾಗ, ಮೂವರು ಸಿಬ್ಬಂದಿ ಹಣ ಪಡೆದಿರುವುದನ್ನು ಒಪ್ಪಿಕೊಂಡಿದ್ದಾರೆ. ಫೋನ್‌ಪೇ ಮೂಲಕ ಹಣ ಪಡೆದಿರುವ ಸಾಕ್ಷಿಗಳೂ ದೊರೆತ ಹಿನ್ನೆಲೆ ಮೂವರನ್ನು ತಕ್ಷಣವೇ ಕಿಮ್ಸ್ ಸೇವೆಯಿಂದ ವಜಾ ಮಾಡಲಾಗಿದೆ.

ಏಜೆನ್ಸಿಗಳಿಗೂ ಖಡಕ್ ಸೂಚನೆ

ಕಾರ್ಮಿಕರನ್ನು ಪೂರೈಕೆ ಮಾಡುವ ಏಜೆನ್ಸಿಗಳಿಗೆ ಸಹ ಕಠಿಣ ಸೂಚನೆ ನೀಡಲಾಗಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ. ಈ ಕುರಿತು ‘ಟಿವಿ9’ ಜೊತೆ ಮಾತನಾಡಿದ ಕಿಮ್ಸ್ ನಿರ್ದೇಶಕ ಡಾ. ಈಶ್ವರ್ ಹೊಸಮನಿ, ‘ಕಿಮ್ಸ್‌ನಲ್ಲಿ ರೋಗಿಗಳು ಮತ್ತು ಅವರ ಕುಟುಂಬದವರಿಂದ ಹಣ ವಸೂಲಿ ಮಾಡುವುದನ್ನು ಯಾವ ಕಾರಣಕ್ಕೂ ಸಹಿಸಲಾಗುವುದಿಲ್ಲ. ಇಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಕಿಮ್ಸ್​​ನಲ್ಲಿ ಹೆಣದ ಮೇಲೂ ಹಣ ಮಾಡ್ತಿರೋ ಸಿಬ್ಬಂದಿ!: ವ್ಯಾಪಕ ಆಕ್ರೋಶ

ಬಡವರು ಮತ್ತು ಮಧ್ಯಮ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆಗಾಗಿ ಬರುವ ಕಿಮ್ಸ್ ಆಸ್ಪತ್ರೆಯಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಪ್ರತಿಷ್ಠೆಗೆ ಕಪ್ಪು ಮಸಿ ಬಳಿಯುವಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಅಗತ್ಯವಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಫ್ಘಾನ್ ಪಡೆಯ ‘ಸೂಪರ್’ ವಿಶ್ವ ದಾಖಲೆ

Source link

‘ನಿಮ್ಮ ಕೆಟ್ಟತನ ನಿಮ್ಮ ಅವನತಿಗೆ ಕಾರಣ’; ಕೆಟ್ಟ ಕಮೆಂಟ್ ಹಾಕುವವರಿಗೆ ಜಗ್ಗೇಶ್ ತಿರುಗೇಟು – Kannada News | Jaggesh Slams Abusive Online Comments: A Strong Message to Trolls and Youth

ನಟ ಜಗ್ಗೇಶ್ (Jaggesh) ಅವರು ಅಭಿಮಾನಿಗಳನ್ನು ತುಂಬಾನೇ ಪ್ರೀತಿಸುತ್ತಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತಾರೆ. ಅದೇ ರೀತಿ ಕೆಟ್ಟದನ್ನು ಬಯಸುವವರನ್ನು ಅವರು ದೂರ ಇಡಲು ಪ್ರಯತ್ನಿಸುತ್ತಾರೆ. ಈಗ ಅಶ್ಲೀಲ ಕಮೆಂಟ್ ಹಾಕುವ ವ್ಯಕ್ತಿಗಳಿಗೆ ಜಗ್ಗೇಶ್ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಈಗ ಫೇಸ್​​ಬುಕ್ ಅಲ್ಲಿ ಉದ್ದನೆಯ ಪೋಸ್ಟ್ ಹಂಚಿಕೊಂಡು, ಕೆಟ್ಟ ಕಮೆಂಟ್ ಹಾಕುವವರನ್ನು ಹಲವು ಹಂತಗಳಲ್ಲಿ ತಿದ್ದುವ ಕೆಲಸ ಮಾಡಿದ್ದಾರೆ. ಅವರು ಬರೆದ ಪೋಸ್ಟ್​​ನ ಯಥಾವತ್ತು ವಿವರ ಕೆಳಗಿದೆ.

‘ನನ್ನ ಬದುಕಿನ ಕಷ್ಟ ಕಾಲದಲ್ಲಿ ನನ್ನ ಜೊತೆ ನಿಂತವರು ಜಯಮಾಲ. ಅದು 1994 (ಅಂದು ಹುಟ್ಟದ ಹಾಗು ಹುಟ್ಟಿದರು ಜಗ ಅರಿಯದ ಮಕ್ಕಳು ಇಂದು ನನ್ನ ಜೀವನ ಬಲ್ಲವರಂತೆ ಕಾಮೆಂಟ್ಸ್ ಹಾಕಿದ್ದಾರೆ). ಮಕ್ಕಳೆ ನಾನು ದೇಹ ಚನ್ನಾಗಿ ಇಟ್ಟು ತಲೆಗೆ ಡೈ ಹಾಕಿಕೊಂಡ ಮಾತ್ರಕ್ಕೆ ನಿಮ್ಮ ವಯಸ್ಸಿನವನು ಎಂಬಂತೆ ತಿಳಿಯದಿರಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ನನ್ನ ಮಾಹಿತಿ ಬೇಕಾದರೆ ನಿಮ್ಮ ಅಜ್ಜ, ಅಜ್ಜಿ, ತಂದೆ-ತಾಯಿ ಕೇಳಿ. ಒಬ್ಬ ಹಳ್ಳಿ ಹುಡುಗ ಹೇಗೆ ನವರಸನಾಯಕ ಆದ ಎಂದು ಕಥೆ ಹೇಳುತ್ತಾರೆ. ಸಂಸಾರ, ಮಕ್ಕಳು, ಜಗತ್ತು ಭಾರದ ನೇಗಿಲು ಮೈಮೇಲೆ ಬಿದ್ದಾಗ ನಿಮ್ಮ ಕಾಮೆಂಟ್ಸ್ ಹಾಕುವ ಕೈ ಸವೆದು, ಜೀವನ ನರಕವಾಗಿರುತ್ತದೆ. ಆಗ ಪಶ್ಚಾಪ ಕಾಡುತ್ತೆ ಸಮಯ ವ್ಯೆರ್ಥಕ್ಕೆ’ ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.

‘ನಾನು ಮಾತಾಡಿದ್ದು ಜಯಮಾಲ ಅವರ ಜೊತೆ ಸಿನಿಮಗಾಗಿ ದುಡಿದ ಸಹಸ್ರಾರು ಕಾರ್ಮಿಕರು ಹಾಗು ಸಿನಿಮಗಾಗಿ ಜೀವನ ಸವೆಸಿದ ಜೀವಗಳ ಮುಂದೆ. ಜೊತೆಗೆ ನನ್ನ 45ವರ್ಷ ಚಿತ್ರರಂಗದಲ್ಲಿ ವೈಯಕ್ತಿಕವಾಗಿ ಕಂಡ ಮಹನೀಯರ ಮುಂದೆ ಹಾಗು ಹೆಮ್ಮೆಯಿಂದ ರಾಜಣ್ಣ ನನ್ನ ಜೊತೆ 17 ವರ್ಷ ಇದ್ದ ಕಥೆ. ಇಂದಿನ ಮಕ್ಕಳಿಗೆ ಏನು ಗೊತ್ತು? ಅಂದಿನ ಅದ್ಭುತ ಸಂಬಂಧಗಳ ಬಗ್ಗೆ.

‘ಯಾರು ಏನು ಅಂದರು ನನ್ನ ಸಾಧನೆ ನನ್ನ ಶ್ರಮ ನನ್ನದೆ ಅದನ್ನ ಮುಟ್ಟಲು ಬಿಡಿ, ನೋಡಲು ಆಗದು. ಎರಡನೆಯದು ಶಿವಣ್ಣ ಬಂದಾಗ ನನ್ನ ಊಟ ಮುಗಿದು ಕೈ ತೊಳೆದು ಅವರ ಕಂಡಾಗ ಅಣ್ಣನಂತೆ ಗೌರವಿಸುವ ನಾನು ಎದ್ದು ನಿಂತು ಗೌರವ ನೀಡಿದೆ. ಬದಲಾಗಿ ಊಟ ಬಿಟ್ಟು ನಿಲ್ಲಲಿಲ್ಲ! ಅವರು ನನ್ನ “ದೇವರ ಮಗ” ಜೊತೆಗೆ ನನ್ನ ಕಷ್ಟಕಾಲದಲ್ಲಿ ಅವರ ಜೊತೆ ನಟಿಸಲು ರಣರಂಗ ಚಿತ್ರದಲ್ಲಿ ಇನ್ನೊಬ್ಬ ನಟನ ಬದಲಿಗೆ ನಾನು ಬೇಕೆ ಬೇಕು ಎಂದು ಅವಕಾಶ ಕೊಡಿಸಿದ ಬಂಧು’ ಎಂದು ಶಿವಣ್ಣನ ಹೊಗಳಿದ್ದಾರೆ.

‘ನಮಗೆ ಆದವರನ್ನು ದೇವರಂತೆ ಕಾಣಬೇಕು ಎಂಬ ನೀತಿಪಾಠವನ್ನು ನಮ್ಮ ತಂದೆತಾಯಿ ಕಲಿಸಿದ್ದಾರೆ ವಿನಃ, ಕಂಡಕಂಡವರಿಗೆ ಮೊಬೈಲ್ ಹಿಡಿದು ಕೆಟ್ಟ ಕಾಮೆಂಟ್ಸ್ ಹಾಕಿ ವಿಕೃತ ಆನಂದ ಪಡಿ ಎಂದು ಹೇಳಿಕೊಟ್ಟಿಲ್ಲ. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗಿತೇ? ನಾವು ಒಬ್ಬರ ಬಗ್ಗೆ ಮಾತಾಡ ಬೇಕಾದರೆ ಅವರು ತಿಳಿದವರೋ, ಹಿತರೋ,ಬಂಧುಗಳೋ ಆಗಿರಬೇಕು ಆಗ ನಿಮ್ಮ ಅಣಕದ ಮಾತಿಗೆ ಅರ್ಥವಿರುತ್ತದೆ’ ಎಂದಿದ್ದಾರೆ ಜಗ್ಗೇಶ್.

ನಾನು ಕಲಾವಿದ ನನ್ನ ಸಿನಿಮ ಜೀವನ ಬಿಟ್ಟರೆ ಇನ್ಯಾವ ವೈಯಕ್ತಿಕ ವಿಷಯ ಯಾರಿಗು ಗೊತ್ತಿಲ್ಲ. ನಾನು ಏಕಾಂಗಿ,ಕಾಯಕಪ್ರಿಯ, ದೇವರ ಕಾರ್ಯದಲ್ಲಿ ಮಗ್ನ, ಅನವಶ್ಯಕ ಯಾವ ವಿಷಯಕ್ಕೂ ಬರದವ ನನ್ನ ಗುಣದ ಬಗ್ಗೆ ನನ್ನ ಮನೆಯವರಿಗೆ ಸರಿಯಾದ ಅರಿವಿಲ್ಲ ಅಂತಹದರಲ್ಲಿ ಸಂಬಂಧ ಇಲ್ಲದವರು, ಬಾಳಿ ಬದುಕ ಬೇಕಾದವರು,ನನ್ನ ಮಕ್ಕಳಿಗಿಂತ ಕಿರಿಯರು ಜಾಲತಾಣದಲ್ಲಿ ಕೆಟ್ಟ ಮಾತು ಪ್ರಯೋಗ ಹಾಕೋದು ಯಾವ ಪುರುಷಾರ್ಥಕ್ಕೆ ಅರಿವಾಗಲಿಲ್ಲ’ ಎಂದು ಜಗ್ಗೇಶ್ ಬೇಸರ ಮಾಡಿಕೊಂಡಿದ್ದಾರೆ.

‘ಹಿರಿಯರ ಮಾತು ಸತ್ಯವಾಗುತ್ತೆ. ತನ್ನ ಕೇಡು ತನ್ನ ತಿಂದು ಅರಗು ಬಂಗಾರತಿನ್ನುತ್ತೆ. ಅರ್ಥಾತ್ ನೀವು ಇನ್ನೊಬರಿಗೆ ಅಣಕ ಕೇಡು ಕೆಟ್ಟ ಮಾತು ಬಳಸಿದರೆ ಬರೆದಿಟ್ಟುಕೊಳ್ಳಿ ನಿಮ್ಮ ಅದೃಷ್ಟ ಕರಗಿ ಕಷ್ಟದ ಸರಮಾಲೆ ಆವರಿಸಿ ನಿಮ್ಮ ಬೆಳವಣಿಗೆ ಸುಟ್ಟುಹಾಕುತ್ತೆ. ಯಾರನ್ನು ನೋಯಿಸದಿರಿ ಕಾಲಭೈರವ ನಿಮ್ಮ ಗಮನಿಸುತ್ತಿದ್ದಾನೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಸಂಘಕ್ಕೆ ಭೇಟಿ ಕೋಡಿ’; ಪ್ರಕಾಶ್ ರಾಜ್​​​ಗೆ ಜಗ್ಗೇಶ್ ಆಹ್ವಾನ

‘ನಿಮ್ಮ ಕೆಟ್ಟತನ ನಿಮ್ಮ ಅವನತಿಗೆ ಕಾರಣ. ಬದಲಾಗಿ ಬಂಗಾರದಂತ ಗುಣ ನಡತೆ ಜೀವನ ಕಟ್ಟಿಕೊಳ್ಳಿ ಇಲ್ಲವಾದರೆ ನಿಮ್ಮವರೆ ನಿಮ್ಮನ್ನ ದೂರ ತಳ್ಳುತ್ತಾರೆ. ಒಬ್ಬ ಹಿರಿಯನಾಗಿ ಬಾಳುವವರಿಗೆ ಒಂದು ಸಂದೇಶ ಎಂದು ಭಾವಿಸಿ. ನನ್ನ ಚಿಂತೆ ಬಿಡಿ ಯಾರ ಸಹಾಯವಿಲ್ಲದೆ ನನ್ನ ಗುಣ ನಡತೆ ಕಂಡು ಚಿತ್ರರಂಗದಲ್ಲಿ ನನ್ನ 45ವರ್ಷ ಬೆಳಸಿದರು, ಹಾಗು ರಾಜಕೀಯದಲ್ಲೂ ಹಳ್ಳಿಯಿಂದ ದಿಲ್ಲಿವರೆಗೆ ಆಶೀರ್ವಾದ ಮಾಡಿದ್ದಾರೆ. ನಮ್ಮ ತಂದೆತಾಯಿ ವಂಶಕ್ಕೆ ಒಳ್ಳೆ ಮಗನಾಗಿ ಗಂಡನಾಗಿ ತಂದೆಯಾಗಿ ತಾತನಾಗಿ ಸಾರ್ಥಕ ಜೀವನ ಸವೆಸಿರುವೆ. ಈ ಆದರ್ಶ ಛಲ ಚಿಂತನೆ ನಿಮಗೂ ಫಲಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ’ ಎಂದಿದ್ದಾರೆ ಜಗ್ಗೇಶ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL​ನಲ್ಲಿ ಇಲ್ಲ ಚಾನ್ಸ್​: ಪಾಕಿಸ್ತಾನ್​ ಸೂಪರ್​ ಲೀಗ್​ಗೆ 47 ವಿದೇಶಿ ಆಟಗಾರರು ಆಯ್ಕೆ

Source link

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ? RCB ಅಭಿಮಾನಿಗಳಿಗೆ ಸರ್ಕಾರದಿಂದ ಸಿಗುತ್ತಾ ಸಿಹಿ ಸುದ್ದಿ? – Kannada News | Chinnaswamy Stadium IPL Matches: RCB Matches Almost Confirmed, Cabinet Decision Pending

ಬೆಂಗಳೂರು, ಫೆಬ್ರವರಿ 12: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಬಹುತೇಕ ಅನುಮತಿ ದೊರೆತಿದೆ ಎಂದು ಮೂಲಗಳು ತಿಳಿಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ. ವಿಧಾನಸೌಧದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅಧಿಕಾರಿಗಳು ಮೈದಾನ ಪರಿಶೀಲನಾ ವರದಿಯನ್ನು ಸಲ್ಲಿಸಿದ್ದು, ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಷರತ್ತುಗಳೊಂದಿಗೆ ಸಹಮತ ನೀಡುವ ಸಾಧ್ಯತೆ ದಟ್ಟವಾಗಿದೆ. ಹಿಂದಿನ ದುರಂತದ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಅನುಮತಿ ಇರಲಿಲ್ಲ. ಆದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧಿಕಾರಿಗಳು ನ್ಯಾಯಮೂರ್ತಿ ಕುನ್ನ ಅವರ ವರದಿಯ ಶಿಫಾರಸುಗಳನ್ನು ಸಂಪೂರ್ಣವಾಗಿ ಪಾಲಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version