ಬೆಂಗಳೂರಿನಲ್ಲಿ ಸಂಜೆ ಮಳೆ ಫಿಕ್ಸ್: ಕರಾವಳಿ ಜನರಿಗೆ ಸೆಖೆಯ ಕಾಟ; ಉಷ್ಣಾಂಶದ ಮಟ್ಟ ಏರಿಕೆಯಾಗುವ ಸಾಧ್ಯತೆ – Kannada News | Bengaluru Rain Alert: IMD Predicts Moderate Showers, North Karnataka Heatwave

ಬೆಂಗಳೂರು, ಏ.23: ರಾಜ್ಯದ ಹವಾಮಾನದಲ್ಲಿ ಏರುಪೇರು ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ತಂಪಾದ ವಾತಾವರಣ ಮನೆಮಾಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಗುಡುಗು ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದರೂ, ಉಷ್ಣಾಂಶವು ಹೆಚ್ಚಿರಲಿದೆ. ಸಮುದ್ರ ತೀರದಲ್ಲಿ ಆರ್ದ್ರತೆ (Humidity) ಹೆಚ್ಚಿರುವ ಕಾರಣ ಸೆಖೆಯ ಅನುಭವ ಜಾಸ್ತಿ ಇರಲಿದೆ.ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಆದರೆ, ಕಲಬುರಗಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿಸಿಲ ತಾಪಮಾನವು 40°C ದಾಟುವ ಸಾಧ್ಯತೆಯಿದೆ.

ನಗರದಲ್ಲಿ ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 22°C ದಾಖಲಾಗಬಹುದು. ಸಂಜೆ ವೇಳೆಗೆ ಮೋಡಕವಿದ ವಾತಾವರಣವಿದ್ದು, ಲಘು ಮಳೆಯ ನಿರೀಕ್ಷೆಯಿದೆ. ಇನ್ನು ಮೈಸೂರು ಹಾಗೂ ಕೋಲಾರದಲ್ಲಿ ಈ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 33°C – 35°C ಆಸುಪಾಸಿನಲ್ಲಿರಲಿದೆ. ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಸ್ವಲ್ಪ ಹೆಚ್ಚಿರಲಿದ್ದು, ಚದುರಿದಂತೆ ಮಳೆಯಾಗಲಿದೆ. ಕಾಫಿ ತೋಟಗಳಿಗೆ ಈ ಮಳೆ ಪೂರಕವಾಗಲಿದೆ. ತಂಪಾದ ಗಾಳಿ ಬೀಸಲಿದ್ದು, ಹವಾಮಾನವು ಆಹ್ಲಾದಕರವಾಗಿರಲಿದೆ.

ಇದನ್ನೂ ಓದಿ: ದಿನ ಭವಿಷ್ಯ: ಇಂದು ಈ ರಾಶಿಯವರ ಪ್ರಭಾವಕ್ಕೆ ಆಗದೇ ಇರುವುದೂ ಆಗಲಿದೆ

ಹುಬ್ಬಳ್ಳಿ – ಧಾರವಾಡ ಈ ಅವಳಿ ನಗರಗಳಲ್ಲಿ ಬಿಸಿಲಿನ ತಾಪಮಾನವು ಹೆಚ್ಚಿರಲಿದೆ (ಸುಮಾರು 37°C – 39°C). ಆದರೆ, ವಾತಾವರಣದಲ್ಲಿನ ಬದಲಾವಣೆಯಿಂದಾಗಿ ಸಂಜೆ ವೇಳೆಗೆ ತುಂತುರು ಮಳೆಯಾಗುವ ಅಥವಾ ಮೋಡಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ಧೂಳಿನ ಮಿಶ್ರಿತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:17 am, Thu, 23 April 26

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಪ್ರಭಾವಕ್ಕೆ ಆಗದೇ ಇರುವುದೂ ಆಗಲಿದೆ – Kannada News | Horoscope April 23 Sunday 2026; Dina Rashi Bhavishya Today, Checkout the details here

ಮೇಷ ರಾಶಿ :

ಬೋಧಕರಾಗಿದ್ದರೆ ನಿಮ್ಮ ವಿದ್ಯಾರ್ಥಿಗಳಿಂದ ಉಡುಗೊರೆ ಸಿಗಬಹುದು. ತಂದೆಯು ನಿಮ್ಮ ಪ್ರಗತಿಯನ್ನು ನಿರೀಕ್ಷಿಸುವಿರಿ. ಬಂಧುಗಳ ಮನೆಯಲ್ಲಿ ಆತಿಥ್ಯ, ನೆಮ್ಮದಿಯಿಂದ ದಿನ ಮುಗಿಯಲಿದೆ. ಯೋಜನೆಯು ಮಸುಕಾಗಿದ್ದು ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಯೋಜನೆಯನ್ನು ನಿರ್ನಾಮ ಮಾಡಬಹುದು.

ವೃಷಭ ರಾಶಿ:

ದೀರ್ಘ ಪ್ರಯಾಣವನ್ನು ಇಚ್ಛಿಸುವ ನೀವು ಆರೋಗ್ಯದ ಮೇಲೂ ಗಮನವಿರಿಕೊಳ್ಳಿ. ಪುನಶ್ಚೇತನಕ್ಕೆ ಅನ್ಯರ ಸಹಕಾರ ಅಗತ್ಯ. ಯಾರದ್ದೋ ಮಾತನ್ನು ಕೇಳಿ ಕೆಲಸಗಳನ್ನು ಮಾಡಬೇಡಿ. ನಿಮ್ಮ ಮನಸ್ಸಿಗೆ ಅದು ಒಪ್ಪಿಗೆಯಾಗಲಿ. ಹಿರಿಯರಿಂದ ಸಂಪತ್ತು ಸಿಗಬಹುದು ಅಥವಾ ಉತ್ತಮಮಾರ್ಗದಿಂದ ಬರುವ ಸಂಪತ್ತು ನಿಮ್ಮನ್ನು ಖುಷಿಯಾಗಿಡಲಿದೆ. ಕುಟುಂಬವು ನಿಮಗೆ ಕೊಡುವ ಕಿಮ್ಮತ್ತು ಕಡಿಮೆ ಆಗಿದೆ ಎಂದು ಅನ್ನಿಸುವುದು. ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ.

ಮಿಥುನ ರಾಶಿ:

ನಿಮಗೆ ಸಾಲ ಕೊಟ್ಟವರು ಕಟುವಾಗಿ ಮಾತನಾಡಬಹುದು. ಸಮಾಧಾನದಿಂದ ಅವರಿಗೆ ಉತ್ತರಕೊಟ್ಟು ಕೆಲವು ದಿನಗಳ ಅನಂತರ ಪಾವತಿಸುವೆನು ಎಂದು ಹೇಳಿ. ಆಮೆಯ ಗತಿ ಸಾಗುವ ಬದುಕನ್ನು ಕಂಡು ನಿರಾಶರಾಗುವುದು ಬೇಡ. ಮಂದಗತಿ, ಶೀಘ್ರಗತಿ ಬದುಕಿನಲ್ಲಿ ಸಾಮಾನ್ಯವೆಂದು ತಿಳಿಯಿರಿ. ಭೂಮಿಯ ವ್ಯವಹಾರದಲ್ಲಿ ಅನುಭವಿಗಳನ್ನು ಜೊತೆಯಲ್ಲಿ ಇರಿಸಿಕೊಳ್ಳಿ. ನಿಮ್ಮ ಬಗ್ಗೆ ನೀವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳು ಸ್ನೇಹಿತರು ಹೇಳುವರು.

ಕರ್ಕಾಟಕ ರಾಶಿ:

ಎಲ್ಲ ಕಾರ್ಯಕ್ಕೆ ಸಂಗಾತಿಯೇ ನಿಮಗೆ ದೊಡ್ಡ ಅಡ್ಡಿ ಎನಿಸಬಹುದು. ಅದಕ್ಕೋಸ್ಕರ ನಿಮ್ಮ ಶ್ರಮವನ್ನು ವ್ಯರ್ಥಮಾಡಿಕೊಳ್ಳಬೇಡಿ. ಮಾಡುತ್ತಿರುವ ವ್ಯಾಪಾರದಲ್ಲಿ ಅಭಿವೃದ್ಧಿಯಾಗಲಿದೆ. ಓದಿನೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ಇರಿ. ನಿಮ್ಮ ಅದೃಷ್ಟದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬಂಧುಗಳ ಆಗಮನವು ನಿಮಗೆ ಸಂತೋಷವನ್ನು ಕೊಡುವುದು. ತಾಯಿಯ ಮೇಲೆ ನಿಮ್ಮ ಕೋಪವನ್ನು ತೋರಿಸುವಿರಿ. ಇಕ್ಕಟ್ಟಿನಿಂದ ಹೊರಬರಲು ಮನಸ್ಸು ಮಾಡುವಿರಿ.

ಸಿಂಹ ರಾಶಿ:

ಹೇಳಬೇಕಾದುದನ್ನು ಹೇಳುವಲ್ಲಿ, ಹೇಳುವ ರೀತಿಯಲ್ಲಿ‌ ಹೇಳಿ. ಸಾಲವನ್ನು ಕೊಟ್ಟವರು ಇಂದು ಪೀಡಿಸಲಿದ್ದಾರೆ. ವ್ಯವಸ್ಥಾಪಕರಾಗಿದ್ದರೆ ನಿಮ್ಮ ಕೆಲಸವು ಮೇಲಧಿಕಾರಿಗಳಿಗೆ ಸಂತಸ ನೀಡುವುದು. ಹೊಸ ವಾಹನ ಖರೀದಿಗೆ ಮನಸ್ಸು ಮಾಡಿದರೆ ಸ್ವಲ್ಪ ಮುಂದೂಡಿ. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು. ನಿಮ್ಮ ಸುರಕ್ಷಿತ ತಾಣವನ್ನು ನೀವೇ ಆರಿಸಿಕೊಳ್ಳಿ. ಸಾಲದ ಕಾರಣಕ್ಕೆ ತಲೆ ಮರೆಸಿಕೊಳ್ಳಬಹುದು.

ಕನ್ಯಾ ರಾಶಿ:

ನಿಮ್ಮ ಬಾಯಿಯ ಚಪಲಕ್ಕೆ ಬೇರೆಯವರು ನೋವುಣ್ಣುವರು. ಸದಾ ನಗುಮುಖದಿಂದ ಇರಿ. ವ್ಯಾಪರ ಸುಗಮವಾಗಿ ಸಾಗುವುದು. ವ್ಯಾವಹಾರಿಕ ಭಾರವನ್ನು ಪಕ್ಕದಲ್ಲಿಟ್ಟು ನಿಶ್ಚಿಂತೆಯಿಂದ ನಿದ್ರಿಸಬಹುದು. ನಾಳೆಯದನ್ನು ಹಂಬಲಿಸಿ ಇಂದು ಹಾಗೂ ನಾಳೆಯನ್ನು ಹಾಳು ಮಾಡಿಕೊಳ್ಳಬೇಡಿ. ಶ್ರಮದಷ್ಟು ಫಲ ಸಿಗುತ್ತದೆ. ವಕೀಲವೃತ್ತಿಯವರಿಗೆ ಹೆಚ್ಚಿನ ಕಾರ್ಯವು ಬರಲಿದ್ದು ನಿಭಾಯಿಸುವ ಕಲೆಯನ್ನು ಕಲಿತಿರುವಿರಿ.

ತುಲಾ ರಾಶಿ:

ವಾಹನದಿಂದ ಗಾಯ ಅಥವಾ ಆರ್ಥಿಕ ಸಂಕಟ ಇರಲಿದೆ. ಸ್ನೇಹಿತರು ಮಾಡಿದ ಕೆಟ್ಟ ಕೆಲಸದಿಂದ ನಿಮಗೆ ಕಂಟಕವು ಬರಬಹುದು. ಭೂಮಿಯ ವ್ಯವಹಾರದಲ್ಲಿ ಹೊಂದಾಣಿಕೆ ಕಷ್ಟ. ಲೇವಾದೇವಿಯ ವ್ಯವಹಾರದಿಂದ ತೊಂದರೆ ಹಾಗೂ ನಷ್ಟ. ತಂದೆಯ ಆಸೆಯನ್ನು ಪೂರ್ಣ ಮಾಡಿ, ಅವರಿಗೆ ಖುಷಿಯನ್ನು ಕೊಡುವಿರಿ. ಮಂದಗತಿಯಲ್ಲಿ ಸಾಗುವ ನಿಮ್ಮ ಕೆಲಸದಿಂದ ಸಹೋದ್ಯೋಗಿಗಳು ಆಡಿಕೊಳ್ಳುವರು.

ವೃಶ್ಚಿಕ ರಾಶಿ:

ಹಿತಶತ್ರುಗಳು ನಿಮ್ಮ ವಿರುದ್ಧ ಕಾಣದಂತೆ ಕತ್ತಿಯನ್ನು ಮಸೆಯುತ್ತಲೇ ಇದ್ದಾರು. ಕುಟುಂಬದಲ್ಲಿ ಮಾತಿನ ಚಕಮಕಿ ನಡೆಯಬಹುದು. ದಾಂಪತ್ಯದ ನಡುವೆ ವಿರಸಭಾವವು ಕೆಲವು ಸಮಯವಿದ್ದು ಶಾಂತವಾಗುವುದು. ಮನಸ್ಸು ಹೇಳಿದಂತೆ ಕೇಳದೇ ಸಮಾಧಾನದಿಂದ ಇರಿ. ಪ್ರವಾಸದಲ್ಲಿ ಇರುವವರಿಗೆ ಆಹಾರದ ವ್ಯತ್ಯಾಸದಿಂದ ಕಷ್ಟವಾಗುವುದು. ಸಂಶೋಧನೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯದಲ್ಲಿ ಪ್ರವೃತ್ತರಾಗುವರು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಯಶಸ್ಸು ಸಿಗುವುದು.

ಧನು ರಾಶಿ:

ಭೂಮಿಯ ಕ್ರಯ ಮತ್ತು ವಿಕ್ರಯಗಳ ವಿಷಯದಲ್ಲಿ ಲಾಭವನ್ನು ಕಾಣಬಹುದಾಗಿದೆ. ಸಹೋದರರ ನಡುವೆ ಭಿನ್ನಾಭಿಪ್ರಾಯಗಳು ನಡೆಯಬಹುದು. ಸಾಲದ ಭಾರವನ್ನು ಕಡಿಮೆ ಮಾಡಿಕೊಳ್ಳಲಾಗದು. ವ್ಯಾಪಾರದಲ್ಲಿ ಚಾಣಕ್ಷತೆಯಿಂದ ಲಾಭವನ್ನು ಪಡೆಯುವಿರಿ. ಸಹೋದರಿಯ ಜವಾಬ್ದಾರಿಯೂ ನಿಮಗೆ ಬರಲಿದ್ದು ನಿಮ್ಮ ಜವಾಬ್ದಾರಿ ಹೆಚ್ಚಾಗುವುದು. ಭೂಮಿಯ ವ್ಯವಹಾರವು ಪಾಲುದಾರರ ಸಹಕಾರದಿಂದ ಸುಗಮವಾಗಿ ಸಾಗಲಿದೆ.

ಮಕರ ರಾಶಿ:

ಇಷ್ಟವಿಲ್ಲದೇ ಇದ್ದರೂ ಕಾರ್ಯದ ನಿಮಿತ್ತ ಅನ್ಯಸ್ಥಳಕ್ಕೆ ಹೋಗಬೇಕಾಗಿ ಬರಬಹುದು. ಅಲ್ಲಿಯೇ ಇಂದಿನ ನಿಮ್ಮ ವಾಸವಾಗಲಿದೆ. ನಿಮ್ಮ ಸಾಧನೆಯೇ ಮಾತನಾಡುವಂತೆ ಆದರೆ ಒಳ್ಳೆಯದು. ಅಪರಿತರು ನಿಮಗೆ ಸಹಾಯವನ್ನು ಮಾಡಲಿದ್ದಾರೆ. ಬಯಸಿದ್ದನ್ನು ಪಡೆದುಕೊಳ್ಳುವ ಅರ್ಹತೆ ನಿಮಗೆ ಬರಲಿದೆ. ಶಿಸ್ತನ್ನು ಬಿಡದೇ ಪಾಲಿಸುವುದು ನಿಮಗೆ ಗೌರವವನ್ನು ತಂದು ಕೊಡುವುದು. ವ್ಯವಹಾರದಿಂದ ನಿಮಗೆ ಪ್ರಶಂಸೆಯೂ ಸಿಗುವುದು.

ಕುಂಭ ರಾಶಿ:

ಕೃಷಿಯನ್ನು ಅವಲಂಬಿಸಿ ಬದುಕುವವರಿಗೆ ಅಲ್ಪ ಲಾಭವೂ ಸಿಗಲಿದೆ‌. ವಿದ್ಯಾರ್ಥಿಗಳು ಹತ್ತಾರು ಗೊಂದಲಗಳನ್ನು ಇಟ್ಟುಕೊಳ್ಳಲಿದ್ದಾರೆ. ಹೂಡಿಕೆಯಿಂದ ಬರುವ ಆದಾಯದಿಂದ ಅಚ್ಚರಿಯಾಗಲಿದೆ. ಧಾರ್ಮಿಕವಾಗಿ ಹಣವನ್ನು ವ್ಯಯಿಸಲಿದ್ದೀರಿ. ಕುಟುಂಬದಲ್ಲಿ ನಿಮ್ಮ ವಿವಾಹದ ಕುರಿತು ಚರ್ಚೆಯಾಗುವುದು. ನಿಮಗಾಗಿ ಅನುಕೂಲಕರ ವಾತಾವರಣವನ್ನು ಸಿದ್ಧ ಮಾಡುವರು. ಪ್ರೀತಿಯಲ್ಲಿ ಇಂದು ಸಮಯ ಸರಿಯುವುದೇ ಗೊತ್ತಾಗದು.

ಮೀನ ರಾಶಿ:

ಇಂದು ಯಾರಿಗಾದರೂ ಮಾತುಕೊಡುವಾಗ ಹಲವು ಬಾರಿ ಯೋಚಿಸುವಿರಿ. ಅನೇಕ ದಿನಗಳಿಂದ ಅನಾರೋಗ್ಯದ ಕಾರಣ ಕಿರಿಕಿರಿಯನ್ನು ಅನುಭವಿಸುತ್ತಿರುವ ನಿಮ್ಮ ಆರೋಗ್ಯದಲ್ಲಿ ಚೇತರಿಕೆ ಇರುವುದು. ವಿದ್ಯಾಭ್ಯಾಸಕ್ಕೆ ವಿದೇಶ ಗಮನ ನಿಶ್ಚಯ ಆಗಬಹುದು. ಹೊಸ ಉದ್ಯೋಗದಿಂದ ನೀವು ಸಾಕಷ್ಟು ಯಶಸ್ಸನ್ನು ಪಡೆಯುತ್ತೀರಿ. ಹಿರಿಯರ ಆರೋಗ್ಯವೂ ಚೇತರಿಕೆ ಕಾಣುವುದು. ಇಂದು ನಿಮ್ಮ ಆದಾಯವನ್ನು ಇಮ್ಮಡಿಗೊಳಿಸಿಕೊಳ್ಳಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ಶೋಭನ, ಕರಣ : ಬಾಲವ, ಸೂರ್ಯೋದಯ – 06 – 07 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:57 – 15:39, ಯಮಗಂಡ ಕಾಲ 06:08 – 07:41, ಗುಳಿಕ ಕಾಲ 09:15 – 10:49

-ಲೋಹಿತ ಹೆಬ್ಬಾರ್ – 8762924271 (what’s app only)

Source link

LSG vs RR: ರಾಯಲ್ಸ್ ಮುಂದೆ ಪಂತ್ ಪಡೆ ಪಲ್ಟಿ! – Kannada News | IPL 2026 LSG vs RR Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ (22) ಆರಂಭದಲ್ಲಿ ಅಬ್ಬರಿಸಿದರೂ ಬೇಗನೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಧ್ರುವ್ ಜುರೆಲ್ (0) ಸಹ ಔಟಾದರು. ಎರಡು ವಿಕೆಟ್ ಪತನ ಬಳಿಕ ವೈಭವ್ ಸೂರ್ಯವಂಶಿ (8) ಕೂಡ ವಿಕೆಟ್ ಕೈಚೆಲ್ಲಿದರು.

ಹೀಗೆ ಪವರ್​ಪ್ಲೇನಲ್ಲೇ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಸರೆಯಾಗಿದ್ದು ಅನುಭವಿ ಆಟಗಾರ ರವೀಂದ್ರ ಜಡೇಜಾ. 29 ಎಸೆತಗಳನ್ನು ಎದುರಿಸಿದ ಜಡೇಜಾ ಅಜೇಯ 43 ರನ್​ ಬಾರಿಸಿದರು.  ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಸ್ಕೋರ್ ಅನ್ನು 20 ಓವರ್​ಗಳಲ್ಲಿ 159 ಕ್ಕೆ ತಂದು ನಿಲ್ಲಿಸಿದರು.

160 ರನ್​ಗಳ ಗುರಿ:

ಈ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಆಯುಷ್ ಬದೋನಿ (0) ಮೊದಲ ಓವರ್​ನಲ್ಲೇ ರನೌಟ್​ಗೆ ಬಲಿಯಾದರು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ (0) ಸೊನ್ನೆ ಸುತ್ತಿ ನಿರ್ಗಮಿಸಿದರು.

ಆ ಬಳಿಕ ಬಂದ ಐಡೆನ್ ಮಾರ್ಕ್ರಾಮ್ (0) ಜೋಫ್ರಾ ಆರ್ಚರ್ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಈ ಹಂತದಲ್ಲಿ ಜೊತೆಗೂಡಿದ ಮಿಚೆಲ್ ಮಾರ್ಷ್ ಹಾಗೂ ನಿಕೋಲಸ್ ಪೂರನ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಇದಾಗ್ಯೂ 22 ರನ್​ಗಳಿಸಿದ ಬಳಿಕ ಜಡೇಜಾ ಎಸೆತದಲ್ಲಿ ಪೂರನ್ ಕ್ಯಾಚಿತ್ತು ನಿರ್ಗಮಿಸಿದರು.

ಆದರೆ ಮತ್ತೊಂದೆಡೆ ಕ್ರೀಸ್ ಕಚ್ಚಿ ಆಡಿದ ಮಿಚೆಲ್ ಮಾರ್ಷ್ 39 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರ ನಡುವೆ 15 ರನ್​ ಬಾರಿಸಿ ಹಿಮ್ಮತ್ ಸಿಂಗ್ ವಿಕೆಟ್ ಒಪ್ಪಿಸಿದ್ದರು.

ಅದರಂತೆ ಕೊನೆಯ 5 ಓವರ್​ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 61 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಮಿಚೆಲ್ ಮಾರ್ಷ್ (55) ನಾಂಡ್ರೆ ಬರ್ಗರ್ ಎಸೆತದಲ್ಲಿ ಕ್ಯಾಚಿತ್ತು ಔಟಾದರು. ಇದರ ಬೆನ್ನಲ್ಲೇ ರಿಯಾನ್ ಪರಾಗ್ ಹಿಡಿದ ಅತ್ಯುತ್ತಮ ಕ್ಯಾಚ್​ಗೆ ಮುಕುಲ್ ಚೌಧರಿ (7) ಬಲಿಯಾದರು.

ಅಂತಿಮವಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 18 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು 40 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್, ಆಯುಷ್ ಬಡೋನಿ, ರಿಷಭ್ ಪಂತ್ (ನಾಯಕ), ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಮುಕುಲ್ ಚೌಧರಿ, ಮೊಹಮ್ಮದ್ ಶಮಿ, ಮೊಹ್ಸಿನ್ ಖಾನ್, ಪ್ರಿನ್ಸ್ ಯಾದವ್, ದಿಗ್ವೇಶ್ ಸಿಂಗ್ ರಾಠಿ, ಮಯಾಂಕ್ ಯಾದವ್.

ಇದನ್ನೂ ಓದಿ: ದಾಖಲೆ… ವಿಶ್ವ ದಾಖಲೆ… ಅಭಿಷೇಕ್ ಶರ್ಮಾ ಹೆಸರಿಗೆ ಭರ್ಜರಿ ದಾಖಲೆ

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್, ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ, ನಾಂಡ್ರೆ ಬರ್ಗರ್.

Published On – 11:15 pm, Wed, 22 April 26

Source link

ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ – Kannada News | Dhruva Sarja talks about Rakshitha Prem during KD Kannada movie trailer launch

ಬಹುನಿರೀಕ್ಷಿತ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಧ್ರುವ ಸರ್ಜಾ (Dhruva Sarja), ರಮೇಶ್ ಅರವಿಂದ್, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ರವಿಚಂದ್ರನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಏ.22) ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ‘ಕೆಡಿ’ ಸಿನಿಮಾದ ಟ್ರೇಲರ್ ಬಿಡುಗಡೆ ವೇದಿಕೆಯಲ್ಲಿ ಧ್ರುವ ಸರ್ಜಾ ಅವರು ಮಾತನಾಡಿದರು. ಆ ವೇಳೆ ರಕ್ಷಿತಾ ಪ್ರೇಮ್ (Rakshitha Prem) ಬಗ್ಗೆ ಧ್ರುವ ಒಂದು ಇಂಟರೆಸ್ಟಿಂಗ್ ವಿಷಯ ತಿಳಿಸಿದರು. ಮಧ್ಯರಾತ್ರಿ 2 ಗಂಟೆ ಮೇಲೆ ಫೋನ್ ಬಂದರೆ ಅದು ರಕ್ಷಿತಾ ಪ್ರೇಮ್ ಅವರದ್ದೇ ಅಂತ ಅರ್ಥ. ಸಿನಿಮಾ ಬಗ್ಗೆ ಮಾತನಾಡಲು ಅವರು ಕರೆ ಮಾಡಿದ್ದರು ಎಂದು ಧ್ರುವ ಸರ್ಜಾ ಹೇಳಿದ್ದಾರೆ. ವೇದಿಕೆ ಮೇಲೆ ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೆರೂರು ಠಾಣೆ ಪಿಎಸ್‌ಐ, ಪಿಸಿ ಲೋಕಾಯುಕ್ತ ಬಲೆಗೆ:ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಯುವಕರು – Kannada News | Youths Celebrations For Kerur PSI Bheemappa Caught in Lokayukta Trap Bagalkot

ಬಾಗಲಕೋಟೆ, (ಏಪ್ರಿಲ್ 22): ಇಸ್ಪೀಟ್ ಆಡುವವರ ಬಳಿ ಲಂಚ ಸ್ವೀಕರಿಸುವಾಗ ಪೊಲೀಸ್​ ಸಬ್ ಇನ್ಸ್​ಪೆಕ್ಟರ್ ( Kerur PSI Bheemappa) ಹಾಗೂ ಕಾನ್ಸ್​​​ಟೇಬಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಎನ್ನುವರು ಮುತ್ತಪ್ಪ ನಾಯ್ಕರ್​ ಎಂಬುವರಿಂದ ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರಿಂದ ಯುವಕ ಗುಂಪು ಕೆರೂರು ಪೊಲೀಸ್ ಠಾಣೆ ಮುಂದೆಯೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದೆ.

ಇಸ್ಪೀಟ್ ಆಡುತ್ತಿದ್ದ ಓರ್ವ ಆರೋಪಿ ರಕ್ಷಣೆಗೆ ಮುಂದಾಗಿದ್ದ ಪೊಲೀಸರು, ಬೈಕ್ ಬಿಡಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಮುತ್ತಪ್ಪ ನಾಯ್ಕರ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರಿನ ಅನ್ವಯ ಲೋಕಾಯುಕ್ತ SP ಮಹಾಲಿಂಗ ನಂದಗಾಂವಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿ, ಪಿಎಸ್​ಐ ಭೀಮಪ್ಪ, ಪಿಸಿ ಬಿರಾದಾರನನ್ನು 1.70 ಲಕ್ಷ ಲಂಚ ಸ್ವೀಕರಿಸುವಾಗ ಹಿಡಿದಿದ್ದರು. ಇದರ ಬೆನ್ನಲ್ಲೇ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ಇನ್ಸ್‌ಪೆಕ್ಟರ್​​​ನಿಂದಲೇ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ!

ಇನ್ಸ್​​ಪೆಕ್ಟರ್ ಭೀಮಪ್ಪ ತಮ್ಮ ವರ್ತನೆಯಿಂದ ಸಾರ್ವಜನಿಕರ ವಿರೋಧ ಕಟ್ಟಿಕೊಂಡಿದ್ದರು. ಅಲ್ಲದೇ ಪಿಎಸ್​​ಐ ವಿರುದ್ಧ ಹಲವು ಆರೋಪ ಕೇಳಿಬಂದಿದ್ದವು. ಇದೀಗ ಲೋಕಾಯುಕ್ತಕ್ಕೆ ಬಲೆಗೆ ಬೀಳುತ್ತಿದ್ದಂತೆಯೇ ಜನರು ಫುಲ್ ಖುಷ್ ಆಗಿದ್ದಾರೆ. ಇನ್ನು ಇನ್ಸ್​​ಪೆಕ್ಟರ್​ ಏನೆಲ್ಲಾ ಕೆಟ್ಟ ಕೆಲಸ ಮಾಡಿದ್ದಾರೆ ಎನ್ನುವುದನ್ನು ಸಾಕ್ಷಿ ನೀಡುತ್ತೇವೆ. ಹೀಗಾಗಿ ಎಸ್ಪಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಈ ಘಟನೆ ಅಚ್ಚರಿ ಮೂಡಿಸಿದೆ. ಯಾಕಂದ್ರೆ, ಓರ್ವ ಪಿಎಸ್​ಐ ಲೋಕಾಯುಕ್ತ ಬಲಿಗೆ ಬಿದ್ದಿದ್ದರಿಂದ ಈ ಪರಿ ಸಂಭ್ರಮಾರಣೆ ಮಾಡುತ್ತಿರುವುದು ಅಪರೂಪ. ಇದರ ಅರ್ಥ ಪಿಎಸ್​​ಐ ಕಾರ್ಯವೈಖರಿ ತೋರಿಸುತ್ತಿದೆ.

Source link

ಕರವೇ ನಾರಾಯಣ ಗೌಡಗೆ ನಿಂದನೆ; ರಾಜ್ಯಾದ್ಯಂತ ಕಿಡಿಗೇಡಿಗಳ ವಿರುದ್ಧ ಕೇಸ್ ಬುಕ್, ಆಗಿದ್ದೇನು? – Kannada News | Hindi Row: Karave Narayan Gowda Defamed, Cases Filed Against Trolls

ಬೆಂಗಳೂರು, ಏಪ್ರಿಲ್​ 22: ಕನ್ನಡ ಮತ್ತು ಹಿಂದಿ ಭಾಷಾ (Kannada-Hindi Conflict) ಯುದ್ಧದಲ್ಲಿ ಕನ್ನಡ ಹೋರಾಟಗಾರರ ಬಗ್ಗೆ ಅವಹೇಳನ ಮಾಡಲಾಗುತ್ತಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ (Narayana Gowda) ವಿರುದ್ಧ ನೇರವಾಗಿಯೇ ಕಿಡಿಗೇಡಿಗಳು ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಕರವೇ ಪಡೆ ಕಾನೂನಿನ ಮೊರೆ ಹೋಗಿದ್ದು, ಅನೇಕ ಕಡೆ ಕೇಸ್ ದಾಖಲಾಗಿವೆ.

ಕನ್ನಡ ನಾಡು, ನುಡಿ, ಜಲದ ಹೋರಾಟಗಳಲ್ಲಿ ಕರವೇ ಸಂಘಟನೆ ಸದಾ ಮುಂಚೂಣಿಯಲ್ಲಿರುತ್ತೆ.‌ ಇತ್ತೀಚೆಗೆ ನಡೆಯುತ್ತಿರುವ ಕನ್ನಡ- ಹಿಂದಿ ಭಾಷಾ ಯುದ್ಧದಲ್ಲೂ ಕರವೇ ನಾರಾಯಣ ಗೌಡ ಹಿಂದಿ ಏರಿಕೆ ವಿರುದ್ಧ ಹರಿಹಾಯ್ದಿದ್ದರು. ಆದರೆ ಕೆಲ ಹಿಂದಿ ಪ್ರೇಮಿಗಳು ಇಷ್ಟಕ್ಕೆ ನಾರಾಯಣ ಗೌಡ ಮೇಲೆ‌ ಮುಗಿಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಎಸ್​​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕ ಬದಲು ಗ್ರೇಡ್ ನೀಡುವ ಬಗ್ಗೆ ಕರವೇ ನಾರಾಯಣ ಗೌಡ ಮಾತಾಡಿದ್ದರು. ಹೀಗಾಗಿ ಸುಭಾಷ್ ಮಾಲೀ ಎಂಬಾತ ಫೇಸ್ ಬುಕ್​​ನಲ್ಲಿ ನಾರಾಯಣ ಗೌಡ ಬಗ್ಗೆ ಅವಹೇಳನವಾಗಿ ಬರೆದುಕೊಂಡಿದ್ದ. ಇದು ಮಹೇಶ್ ವಿಕ್ರಮ ಹೆಗ್ಡೆ ಎಂಬಾತನ ಪೇಜ್​​ನಲ್ಲೂ ಪೋಸ್ಟ್ ಆಗಿತ್ತು. ಹೀಗಾಗಿ ಕರವೇ ಕಾರ್ಯಕರ್ತರು ಕಿಡಿಗೇಡಿಗಳ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ, ಉಪ್ಪಾರಪೇಟೆ ಸೇರಿದಂತೆ ಅನೇಕ ಜಿಲ್ಲೆಗಳಲ್ಲೂ ದೂರು ನೀಡಿದ್ದಾರೆ.

ಇಂತಹ ಕೆಲಸಕ್ಕೆ ನಾವು ಬಗ್ಗಲ್ಲ ಎಂದ ನಾರಾಯಣ ಗೌಡ 

ಇನ್ನು ಈ ಬಗ್ಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಮಾತನಾಡಿದ್ದು, ಇಂತಹ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸಕ್ಕೆ ನಾವು ಬಗ್ಗಲ್ಲ. ನಾವು ಕಾನೂನು ಬಿಟ್ಟು ಹೋಗಲ್ಲ. ಪೊಲೀಸರು ಬೇಗ ಕ್ರಮಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ.

ಇದನ್ನೂ ಓದಿ: SSLC ಹಿಂದಿ ಪರೀಕ್ಷೆ ಕೇಂದ್ರಗಳಿಗೆ ಕನ್ನಡ ಸಂಘಟನೆಗಳಿಂದ ಮುತ್ತಿಗೆ ಎಚ್ಚರಿಕೆ: ಪೊಲೀಸ್ ಮೊರೆ ಹೋದ ಶಿಕ್ಷಣ ಇಲಾಖೆ

ಕರವೇ ಆರೋಪಕ್ಕೆ ಫೇಸ್ ಬುಕ್​ನಲ್ಲೇ ಪ್ರತಿಕ್ರಿಯಿಸಿದ್ದ ಮಹೇಶ್ ಹೆಗ್ಡೆ ಎಂಬಾತ ತಾನು ಯಾವುದೇ ಪೋಸ್ಟ್ ಮಾಡಿಲ್ಲ, ತನ್ನ ಹೆಸರಿನ ಪೇಜ್​​ನಲ್ಲಿ ಪೋಸ್ಟ್​​ ಆಗಿದೆ ಎಂದಿದ್ದಾನೆ. ಸದ್ಯ ಅವಹೇಳನ ಮತ್ತು ಬೆದರಿಕೆ ಬಗ್ಗೆ ಅನೇಕ ಪೊಲೀಸ್ ಠಾಣೆಗಳಲ್ಲಿ ಕೇಸ್​​ಗಳು ದಾಖಲಾಗಿದ್ದು, ಮುಂದೇನಾಗುತ್ತೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ – Kannada News | Delhi 80 year old retired postmaster wins Rs 6 crore Punjab Baisakhi Bumper lottery

ನವದೆಹಲಿ, ಏಪ್ರಿಲ್ 22: ದೆಹಲಿಯ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ ಪಂಜಾಬ್ ರಾಜ್ಯ ಡಿಯರ್ ಬೈಸಾಖಿ ಬಂಪರ್ ಲಾಟರಿಯಲ್ಲಿ (Bumper Lottery) 6 ಕೋಟಿ ರೂ. ಪ್ರಥಮ ಬಹುಮಾನವನ್ನು ಗೆದ್ದಿದ್ದಾರೆ. ದೆಹಲಿಯ ನಿವಾಸಿಯಾದ 80 ವರ್ಷದ ಓಂ ಪ್ರಕಾಶ್ ಲುಧಿಯಾನದ ಘಂಟಾ ಘರ್ ನಲ್ಲಿರುವ ಅಂಗಡಿಯಿಂದ 500 ರೂ.ಗೆ ಲಾಟರಿ ಟಿಕೆಟ್ ಖರೀದಿಸಿದ್ದರು. ಬಿ 520729 ಸಂಖ್ಯೆಯ ಅವರ ಲಾಟರಿ ಟಿಕೆಟ್ ಏಪ್ರಿಲ್ 19ರಂದು ಘೋಷಿಸಲಾದ ಡ್ರಾದಲ್ಲಿ ಮೊದಲ ಬಹುಮಾನವನ್ನು ಪಡೆದುಕೊಂಡಿದೆ. ಹೀಗಾಗಿ, ರಾತ್ರಿ ಬೆಳಗಾಗುವಷ್ಟರಲ್ಲಿ ಅವರು ಕೋಟ್ಯಧಿಪತಿಯಾಗಿದ್ದಾರೆ.

ಓಂ ಪ್ರಕಾಶ್ ಸುಮಾರು 30 ವರ್ಷಗಳಿಂದ ಲಾಟರಿ ಟಿಕೆಟ್‌ಗಳನ್ನು ಖರೀದಿಸುತ್ತಿದ್ದರು. ಆಗಾಗ ಸಂಬಂಧಿಕರ ಮೂಲಕ ಲಾಟರಿ ಟಿಕೆಟ್ ಖರೀದಿಸುತ್ತಿದ್ದರು. ಅವರು ತಮ್ಮ ಅತ್ತಿಗೆಯನ್ನು ಭೇಟಿ ಮಾಡಲು ಆಗಾಗ ಲುಧಿಯಾನಕ್ಕೆ ಪ್ರಯಾಣಿಸುತ್ತಿದ್ದರು. ಅವರು ಅಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಟಿಕೆಟ್‌ಗಳನ್ನು ಖರೀದಿಸುತ್ತಿದ್ದರು.

ಇದನ್ನೂ ಓದಿ: ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ

ಲಾಟರಿ ಫಲಿತಾಂಶಗಳು ಘೋಷಣೆಯಾದ ನಂತರ, ಓಂ ಪ್ರಕಾಶ್ ಲುಧಿಯಾನಕ್ಕೆ ಪ್ರಯಾಣ ಬೆಳೆಸಿದರು. ಅಲ್ಲಿ ಅವರನ್ನು ಸಂಭ್ರಮಾಚರಣೆಗಳೊಂದಿಗೆ ಸ್ವಾಗತಿಸಲಾಯಿತು. ಈ ಹಣವನ್ನು ದತ್ತಿ ಉದ್ದೇಶಗಳಿಗಾಗಿ ಬಳಸಲು ಅವರ ಕುಟುಂಬ ಯೋಜಿಸಿದೆ. ಲುಧಿಯಾನ ಪ್ರದೇಶದ ನಿರ್ಗತಿಕರಿಗೆ ಮತ್ತು ಅನಾಥಾಶ್ರಮಗಳಲ್ಲಿ ಅಗತ್ಯವಿರುವವರಿಗೆ ಸಹಾಯ ಮಾಡುವುದಾಗಿ ಓಂ ಪ್ರಕಾಶ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:47 pm, Wed, 22 April 26

Source link

‘ಕೆಡಿ’ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್ ಅರವಿಂದ್ – Kannada News | Actor Ramesh Aravind speech in KD movie trailer launch event

ನಟ ರಮೇಶ್ ಅರವಿಂದ್ (Ramesh Aravind) ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್​ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಕಾಳಿದಾಸ ಎಂಬ ಪಾತ್ರ ಮಾಡಿದ್ದಾರೆ. ಅದರ ಸಂಕ್ಷಿಪ್ತ ರೂಪವೇ ಕೆಡಿ. ಆದರೆ ಈ ಸಿನಿಮಾದಲ್ಲಿ ಕೇವಲ ಅವರು ಮಾತ್ರ ಕೆಡಿ ಅಲ್ಲ. ಇನ್ನೂ ಅನೇಕರು ಕೆಡಿಗಳು ಇದ್ದಾರೆ ಎಂದು ರಮೇಶ್ ಅರವಿಂದ್ ಹೇಳಿದ್ದಾರೆ. ‘ಕೆಡಿ’ ಸಿನಿಮಾದ ಟ್ರೇಲರ್ (KD Movie Trailer) ಬಿಡುಗಡೆಯ ವೇದಿಕೆಯಲ್ಲಿ ಅವರು ಆ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ ನಿಗೂಢ – Kannada News | Couple Dead Body Found In gangenahalli Home at Bengaluru

ಬೆಂಗಳೂರು, (ಏಪ್ರಿಲ್ 22): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಆರ್.ಟಿ.ನಗರದ ಗಂಗೇನಹಳ್ಳಿಯ ಮನೆಯೊಂದರಲ್ಲಿ ದಂಪತಿ (Couple) ಶವ ಪತ್ತೆಯಾಗಿದೆ. 10 ವರ್ಷಗಳ ಹಿಂದೆ ವಿವಾಹವಾಗಿದ್ದ ಸುಮಿತ್ರಾ ಹಾಗೂ ಡೇವಿಡ್ ಇದೀಗ ಏಕಾಏಕಿ ಸಾವನ್ನಪ್ಪಿದ್ದಾರೆ. ಆದ್ರೆ, ಇಬ್ಬರ ಸಾವಿಗೆ ನಿಖರ ಕಾರಣ ತಿಳಿದುಬಂದಿದ್ದಲ್ಲ. ಇನ್ನು ಸ್ಥಳಕ್ಕೆ ಆರ್​​ಟಿ ನಗರ ಪೊಲೀಸರು ಮತ್ತು ಸೊಕೊ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಡೇವಿಡ್, ಸುಮಿತ್ರಾಳನ್ನ ಉಸಿರುಗಟ್ಟಿಸಿ ಕೊಂದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಪತಿ ಡೇವಿಡ್, ಉಸಿರುಗಟ್ಟಿಸಿ ಕೊಂದು ಬಳಿಕ ಸೀರೆಯಿಂದ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಪತಿ ಡೇವಿಡ್ ಕೈಗಳ ಮೇಲೆ ಪ್ರತಿರೋಧವೊಡ್ಡಿ ತರಚಿರುವ ಗುರುತು ಸಹ ಕಂಡುಬಂದಿದೆ.  ಹೀಗಾಗಿ ಡೇವಿಡನೇ ಪತ್ನಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ!

ಇನ್ನು ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಬಿ.ಎಸ್.ನೇಮಗೌಡ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದು, ಬಳಿಕ ಪ್ರತಿಕ್ರಿಯಿಸಿರುವ ಅವರು, ಸಂಬಂಧಿಕರ ಮಾಹಿತಿ ಪ್ರಕಾರ ಕೌಟುಂಬಿಕ ಕಲಹ ಇತ್ತು. ಜಗಳವಾಡಿದ್ದರಿಂದ ಮಕ್ಕಳನ್ನು ಸೋದರ ಸಂಬಂಧಿ ಕರೆದೊಯ್ದಿದ್ದರು. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಇಬ್ಬರ ಶವ ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

ಮೇಲ್ನೋಟಕ್ಕೆ ಕೌಟುಂಬಿಕ ಕಲಹ ಎನ್ನಲಾಗುತ್ತಿದೆಯಾರೂ ಮರಣೋತ್ತರ ಪರೀಕ್ಷೆ ವರದಿ ಹಾಗೂ ಪೊಲೀಸರ ತನಿಖೆ ಬಳಿಕ ಸಾವಿನ ರಹಸ್ಯ ಬಯಲಿಗೆ ಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು – Kannada News | Heat Stroke Warning Signs: Spot These 3 Symptoms Early

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ (Heat Stroke) ಪ್ರಕರಣಗಳು ಹೆಚ್ಚಾಗುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆದರೆ ದೇಹದ ತಾಪಮಾನ ನಿಯಂತ್ರಣ ತಪ್ಪಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಗಡೆ ಕೆಲಸ ಮಾಡುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಹಾಗಾಗಿ ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ. ಇದನ್ನು ಸರಿಯಾಗಿ ತಿಳಿದುಕೊಂಡು ಈ ರೀತಿಯಾದಾಗ ತಕ್ಷಣ ಮುನ್ನೆಚ್ಚರಿಕೆ ವಹಿಸಿ ಆರೋಗ್ಯ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಹಾಗಾದರೆ ಈ ಲಕ್ಷಣಗಳು ಯಾವವು, ಈ ಸಮಸ್ಯೆ ತಡೆಗಟ್ಟುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೀಟ್ ಸ್ಟ್ರೋಕ್ ಕಂಡುಬರುವ ಮುನ್ನ ಕಾಸಿಕೊಳ್ಳುವ ಲಕ್ಷಣಗಳು:

ವೈದ್ಯಕೀಯ ಮಾಹಿತಿಯ ಪ್ರಕಾರ, ಹೀಟ್ ಸ್ಟ್ರೋಕ್ ಮೊದಲು ದೇಹವು ಕೆಲವು ಸ್ಪಷ್ಟ ಸೂಚನೆಗಳನ್ನು ನೀಡುತ್ತದೆ. ಮೊದಲನೆಯದಾಗಿ, ತೀವ್ರ ತಲೆನೋವು ಮತ್ತು ತಲೆ ಸುತ್ತುವಿಕೆ ಕಾಣಿಸಿಕೊಳ್ಳುತ್ತದೆ. ಇದು ದೇಹದ ತಾಪಮಾನ ಹೆಚ್ಚುತ್ತಿರುವ ಸೂಚನೆ ಆಗಿರಬಹುದು. ಎರಡನೇ ಲಕ್ಷಣ, ಅತಿಯಾದ ದುರ್ಬಲತೆ ಮತ್ತು ಆಯಾಸ ಕಾಣಿಸುತ್ತದೆ. ವ್ಯಕ್ತಿಗೆ ಸಣ್ಣ ಕೆಲಸ ಮಾಡುವುದು ಕೂಡ ಕಷ್ಟವಾಗುತ್ತದೆ ಮತ್ತು ದೇಹದಲ್ಲಿ ಶಕ್ತಿ ಕಡಿಮೆಯಾಗಿರುವಂತೆ ಅನಿಸುತ್ತದೆ. ಮೂರನೇ ಲಕ್ಷಣವೆಂದರೆ ಹೆಚ್ಚು ಬೆವರು ಬರುವುದು ಅಥವಾ ಕೆಲವೊಮ್ಮೆ ಏಕಾಏಕಿ ಬೆವರು ಬರುವುದು ನಿಲ್ಲುವುದು. ಇದು ದೇಹವು ತನ್ನ ತಾಪಮಾನವನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂಬ ಸೂಚನೆಯಾಗಿದೆ. ಜೊತೆಗೆ ಅಶಾಂತಿ, ಬಾಯಾರಿಕೆ, ಗಮನ ಕೊಡಲು ಸಾಧ್ಯವಾಗದಿರುವುದು ಹಾಗೂ ಸ್ವಲ್ಪ ಜ್ವರದ ಅನುಭವವೂ ಆಗಬಹುದು.

ಇದನ್ನೂ ಓದಿ: ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಳ: ತಡೆಗಟ್ಟಲು ಇಲ್ಲಿದೆ ಸಿಂಪಲ್ ಟಿಪ್ಸ್

ಹೇಗೆ ತಡೆಯಬೇಕು?

ಹೀಟ್ ಸ್ಟ್ರೋಕ್ ನಿಂದ ತಪ್ಪಿಸಿಕೊಳ್ಳಲು ಮಧ್ಯಾಹ್ನದ ತೀವ್ರ ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸುವುದು ಅತ್ಯಂತ ಮುಖ್ಯ. ಹೊರಗೆ ಹೋಗುವಾಗ ತಲೆಗೆ ಮುಚ್ಚಿಕೊಳ್ಳುವುದು ಮತ್ತು ಹಗುರ, ಸಡಿಲ, ಹತ್ತಿ ಬಟ್ಟೆಗಳನ್ನು ಧರಿಸುವುದು ಒಳಿತು. ದಿನಪೂರ್ತಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ದೇಹ ಹೈಡ್ರೇಟೆಡ್ ಆಗಿರುತ್ತದೆ. ಎಳನೀರು ನೀರು, ಮಜ್ಜಿಗೆ ಮತ್ತು ನಿಂಬೆ ನೀರು ದೇಹವನ್ನು ತಂಪಾಗಿಡಲು ಸಹಕಾರಿ. ಹೊರಗಡೆ ಕೆಲಸ ಮಾಡುವವರು ಸ್ವಲ್ಪ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳುವುದು ಅಗತ್ಯ. ಬೇಸಿಗೆಯಲ್ಲಿ ಪೋಷಕಾಂಶಯುಕ್ತ ಆಹಾರ ಸೇವನೆ ಮುಖ್ಯ. ಹೆಚ್ಚು ಎಣ್ಣೆ ಮತ್ತು ಮಸಾಲೆಯುಕ್ತ ಆಹಾರ ತಪ್ಪಿಸಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version