ಉತ್ತರ ಪ್ರದೇಶದಲ್ಲಿ ಮುಂಗಾರು ಆರ್ಭಟ: ಮನೆ ಗೋಡೆ ಕುಸಿದು 9 ಮಂದಿ ದುರಂತ ಸಾವು – Kannada News | UP Monsoon Tragedy: Wall Collapses Kill 9, Including Children, Amid Heavy Rains
ಲಕ್ನೋ, ಆಗಸ್ಟ್ 06: ಉತ್ತರ ಪ್ರದೇಶದಾದ್ಯಂತ ಸುರಿಯುತ್ತಿರುವ ಭಾರಿ ಮಳೆ(Rain)ಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮನೆಯ ಗೋಡೆ ಕುಸಿದುಬಿದ್ದ ಪರಿಣಾಮ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಪ್ರತಾಪ್ಗಢ, ಬಾರಾಬಂಕಿ ಮತ್ತು ಸಹರಾನ್ಪುರ ಜಿಲ್ಲೆಗಳಲ್ಲಿ ಈ ಕರುಣಾಜನಕ ದುರಂತಗಳು ಸಂಭವಿಸಿವೆ. ಪ್ರತಾಪ್ಗಢ ಜಿಲ್ಲಾ ಕೇಂದ್ರದ ಬಳಿಯ ಮಹುಲಿ ಬಜಾರ್ನಲ್ಲಿ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಶತಮಾನದಷ್ಟು ಹಳೆಯದಾದ ಜರ್ಜರಿತ ಮನೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಪ್ರಮೋದ್ ಶ್ರೀವಾಸ್ತವ (60),…