ಸಾಲಿನಲ್ಲಿ ನಿಲ್ಲದೇ ಮುಂದೆ ಹೋಗಿ ಮತದಾನ ಮಾಡಿದ ಕಮಲ್ ಹಾಸನ್; ವಿಡಿಯೋ ನೋಡಿ ಜನರ ಟೀಕೆ – Kannada News | Kamal Haasan Shruti Haasan criticized for skipping voting queue in Tamil Nadu Election

ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Election) ಇಂದು (ಏಪ್ರಿಲ್ 23) ನಡೆದಿದೆ. ಜನಸಾಮಾನ್ಯರ ಜೊತೆ ಅನೇಕ ಸೆಲೆಬ್ರಿಟಿಗಳು ಕೂಡ ಬಂದು ಮತ ಚಲಾಯಿಸಿದ್ದಾರೆ. ಮತದಾನ ಮಾಡಲು ಬಂದಿದ್ದ ನಟ ಕಮಲ್ ಹಾಸನ್ (Kamal Haasan) ಮತ್ತು ಅವರ ಪುತ್ರಿ ಶ್ರುತಿ ಹಾಸನ್ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ಸರತಿಯ ಸಾಲನ್ನು ಮೀರಿ ನೇರವಾಗಿ ಒಳಗೆ ಹೋಗಿ ಮತ ಚಲಾಯಿಸಿದ್ದೇ ಈ ಟೀಕೆಗೆ ಕಾರಣ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಖಾರವಾಗಿ ಕಮೆಂಟ್ ಮಾಡುತ್ತಿದ್ದಾರೆ.

ಕಮಲ್ ಹಾಸನ್ ಮತ್ತು ಶ್ರುತಿ ಹಾಸನ್ ಅವರು ಮತದಾನ ಮಾಡಲು ಒಟ್ಟಿಗೆ ಬಂದರು. ಚೆನ್ನೈನ ಆಳ್ವಾರ್‌ಪೇಟೆ ಶಾಲೆಯ ಮತಗಟ್ಟೆಗೆ ಬಂದ ಅವರು ಸಾಲಿನಲ್ಲಿ ನಿಲ್ಲದೆ ನೇರವಾಗಿ ಹೋಗಿದ್ದನ್ನು ನೆಟ್ಟಿಗರು ಖಂಡಿಸುತ್ತಿದ್ದಾರೆ. ಎಎನ್​ಐ ಸುದ್ದಿ ಸಂಸ್ಥೆ ಪೋಸ್ಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋ ನೋಡಿದ ಜನರು ಗರಂ ಆಗಿದ್ದಾರೆ.

ಅಸಲಿಗೆ, ಕಮಲ್ ಹಾಸನ್ ಮತ್ತು ಶ್ರುತಿ ಹಾಸನ್ ಅವರು ಮತಗಟ್ಟೆಯ ಸಾಲಿನಲ್ಲಿ ನಿಂತಿದ್ದರು. ಆದರೆ, ಅಲ್ಲಿ ನೆರೆದಿದ್ದ ಕ್ಯಾಮೆರಾಗಳು ಮತ್ತು ಮಾಧ್ಯಮದವರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬುದನ್ನು ಅಲ್ಲಿದ್ದ ಭದ್ರತಾ ಸಿಬ್ಬಂದಿ ಅಥವಾ ಅವರ ತಂಡದವರು ತಿಳಿಸಿದ್ದಾರೆ. ಕೂಡಲೇ ಪೊಲೀಸರು ಕಮಲ್ ಮತ್ತು ಶ್ರುತಿ ಅವರಿಗೆ ನೇರವಾಗಿ ಒಳಗೆ ಹೋಗಲು ಸೂಚಿಸಿದ್ದಾರೆ.

ಈ ವೇಳೆ ಶ್ರುತಿ ಹಾಸನ್ ಮತ್ತು ಕಮಲ್ ಹಾಸನ್ ಅವರು ತಮ್ಮ ಮುಂದೆ ನಿಂತಿದ್ದ ವ್ಯಕ್ತಿಯಲ್ಲಿ ಕ್ಷಮೆ ಕೇಳಿ, ನಂತರವೇ ನೇರವಾಗಿ ಮತದಾನದ ಕೊಠಡಿಯೊಳಗೆ ತೆರಳಿದ್ದಾರೆ. ಆದರೂ ಟೀಕೆ ತಪ್ಪಿಲ್ಲ. ಕಮಲ್ ಹಾಸನ್ ಅವರು ಸಮಾಜವಾದ, ಸಮಾನತೆ ಮತ್ತು ಆದರ್ಶಗಳ ಬಗ್ಗೆ ನೀಡುವ ಭಾಷಣಗಳನ್ನು ನೆನಪಿಸಿರುವ ನೆಟ್ಟಿಗರು, ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

‘ಬಡತನ, ಸಮಾಜವಾದ ಮತ್ತು ಆದರ್ಶಗಳ ಬಗ್ಗೆ ಭಾಷಣ ಬಿಗಿಯುವ ನಟ ಕಮಲ್ ಹಾಸನ್, ಅತ್ಯಂತ ಐಷಾರಾಮಿ ಕಾರಿನಲ್ಲಿ ಬಂದು ಸಾಮಾನ್ಯ ಜನರ ಸಾಲನ್ನು ಮುರಿದು ಮತದಾನ ಮಾಡಿದ್ದಾರೆ. ಅವರಿಗೆ ಎರಡು ನಿಮಿಷ ಸಾಲಿನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲವೇ’ ಎಂದು ನೆಟ್ಟಿಗರೊಬ್ಬರು ಕಿಡಿಕಾರಿದ್ದಾರೆ. ‘ಉದ್ದನೆಯ ಸಾಲುಗಳು ಕೇವಲ ಬಡವರಿಗೆ ಮಾತ್ರ ಎಂಬಂತಿದೆ ಇವರ ವರ್ತನೆ’ ಎಂದು ಮತ್ತೊಬ್ಬರು ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್; ಇಲ್ಲಿವೆ ಫೋಟೋಸ್

ಈ ಮಧ್ಯೆ ಕೆಲವರು ಕಮಲ್ ಹಾಸನ್ ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ. ‘ದೊಡ್ಡ ನಟರು ಸಾಲಿನಲ್ಲಿ ನಿಂತರೆ ಅವರನ್ನು ನೋಡಲು ಜನ ಮುಗಿಬೀಳುತ್ತಾರೆ. ಇದರಿಂದ ಮತದಾನಕ್ಕೆ ಮತ್ತಷ್ಟು ವಿಳಂಬವಾಗುತ್ತದೆ ಮತ್ತು ಭದ್ರತಾ ಸಮಸ್ಯೆಗಳು ಉಂಟಾಗುತ್ತವೆ. ಜನಜಂಗುಳಿಯನ್ನು ನಿಯಂತ್ರಿಸಲು ಪೊಲೀಸರೇ ಅವರಿಗೆ ಮುಂದೆ ಹೋಗಲು ಅನುಮತಿ ನೀಡಿದ್ದಾರೆ’ ಎಂದು ಫ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಆಯುಷ್ ಮ್ಹಾತ್ರೆ ಬದಲಿಗೆ ಸಿಎಸ್​​ಕೆ ತಂಡ ಸೇರಿಕೊಂಡ ಯುವ ವೇಗಿ

Source link

Animation Career Guide: ಉತ್ತಮ ಗಳಿಕೆಯ ಅನಿಮೇಷನ್ ಲೋಕದಲ್ಲಿ ವೃತ್ತಿಜೀವನ ಶುರು ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ – Kannada News | Animation Career Guide: Lucrative Jobs, Courses and Future Scope

ಅನಿಮೇಷನ್ ಲೋಕದಲ್ಲಿ ವೃತ್ತಿಜೀವನImage Credit source: Pinterest

ಇಂದಿನ ಡಿಜಿಟಲ್ ಯುಗದಲ್ಲಿ ಸಾಂಪ್ರದಾಯಿಕ ವೃತ್ತಿಗಳ ಆಚೆಗೆ ಅನೇಕ ಹೊಸ ಆಯ್ಕೆಗಳು ವೇಗವಾಗಿ ಬೆಳೆಯುತ್ತಿವೆ. ಅವುಗಳಲ್ಲಿ ಅನಿಮೇಷನ್ ಕ್ಷೇತ್ರವು ಅತ್ಯಂತ ಪ್ರಮುಖ ಮತ್ತು ಲಾಭದಾಯಕ ವೃತ್ತಿಯಾಗಿ ಹೊರಹೊಮ್ಮಿದೆ. ಚಲನಚಿತ್ರಗಳು, ವೆಬ್ ಸರಣಿಗಳು, ಗೇಮಿಂಗ್ ಮತ್ತು ಸೋಶಿಯಲ್ ಮೀಡಿಯಾ ಕಂಟೆಂಟ್‌ಗಳ ಜನಪ್ರಿಯತೆ ಹೆಚ್ಚಾದಂತೆ ಈ ಕ್ಷೇತ್ರಕ್ಕೆ ಬೇಡಿಕೆ ಕುದುರಿದೆ. ನೀವು ಚಿತ್ರಕಲೆ, ವಿನ್ಯಾಸ ಮತ್ತು ಹೊಸತನ್ನು ಸೃಷ್ಟಿಸುವ ಹಂಬಲ ಹೊಂದಿದ್ದರೆ, ಅನಿಮೇಷನ್ ನಿಮಗೆ ಬಣ್ಣದ ಭವಿಷ್ಯವನ್ನು ನೀಡಬಲ್ಲದು.

ಅನಿಮೇಷನ್ ಎಂದರೆ ನಿಖರವಾಗಿ ಏನು?

ಸರಳವಾಗಿ ಹೇಳುವುದಾದರೆ, ಸ್ಥಿರವಾಗಿರುವ ಚಿತ್ರಗಳು ಅಥವಾ ಗ್ರಾಫಿಕ್ಸ್‌ಗಳಿಗೆ ಚಲನೆಯನ್ನು ನೀಡಿ ಅವು ಜೀವಂತವಾಗಿರುವಂತೆ ಮಾಡುವ ತಂತ್ರವೇ ಅನಿಮೇಷನ್. ಇದು ಕೇವಲ ಕಾರ್ಟೂನ್ ಬಿಡಿಸುವುದಕ್ಕೆ ಸೀಮಿತವಾಗಿಲ್ಲ; ಇದರಲ್ಲಿ 2D ಅನಿಮೇಷನ್, 3D ಅನಿಮೇಷನ್, VFX (ದೃಶ್ಯ ಪರಿಣಾಮಗಳು) ಮತ್ತು ಮೋಷನ್ ಗ್ರಾಫಿಕ್ಸ್ ಎಂಬ ವಿವಿಧ ವಿಭಾಗಗಳಿವೆ. ಇಂದಿನ ಬ್ಲಾಕ್‌ಬಸ್ಟರ್ ಸಿನಿಮಾಗಳಿಂದ ಹಿಡಿದು ಮೊಬೈಲ್ ಗೇಮ್‌ಗಳವರೆಗೆ ಪ್ರತಿಯೊಂದರಲ್ಲೂ ಅನಿಮೇಷನ್ ತಂತ್ರಜ್ಞರ ಕೈಚಳಕ ಅಡಗಿರುತ್ತದೆ.

ಅಗತ್ಯವಿರುವ ಶೈಕ್ಷಣಿಕ ಅರ್ಹತೆ ಮತ್ತು ಕೋರ್ಸ್‌ಗಳು:

ನಿಮ್ಮ ಆಸಕ್ತಿ ಮತ್ತು ಸಮಯಕ್ಕೆ ಅನುಗುಣವಾಗಿ ವಿವಿಧ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು:

  • ಡಿಪ್ಲೊಮಾ ಕೋರ್ಸ್‌ಗಳು: ಇವು ಸಾಮಾನ್ಯವಾಗಿ 6 ತಿಂಗಳಿಂದ 1 ವರ್ಷದ ಅವಧಿಯದ್ದಾಗಿರುತ್ತವೆ.
  • ಪ್ರಮಾಣಪತ್ರ (Certificate) ಕೋರ್ಸ್‌ಗಳು: ಕೇವಲ 3 ರಿಂದ 6 ತಿಂಗಳಲ್ಲಿ ಬೇಸಿಕ್ ಕಲಿಯಲು ಇವು ಸಹಕಾರಿ.
  • ವಿಶೇಷ ಕೋರ್ಸ್‌ಗಳು: 3D ಅನಿಮೇಷನ್, ಗೇಮ್ ಡಿಸೈನಿಂಗ್ ಅಥವಾ VFX ನಂತಹ ಉನ್ನತ ಮಟ್ಟದ ಕೌಶಲ್ಯಗಳನ್ನು ಕಲಿಯಲು ದೀರ್ಘಾವಧಿಯ ಪದವಿ ಕೋರ್ಸ್‌ಗಳೂ ಲಭ್ಯವಿವೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಅನಿಮೇಷನ್ ತಜ್ಞರಿಗೆ ಬೇಡಿಕೆ ಎಲ್ಲಿದೆ?

ಕೇವಲ ಚಲನಚಿತ್ರ ಮತ್ತು ಟಿವಿ ಉದ್ಯಮವಲ್ಲದೆ, ಇಂದು ಅನೇಕ ಕ್ಷೇತ್ರಗಳಲ್ಲಿ ಅನಿಮೇಷನ್ ಅನಿವಾರ್ಯವಾಗಿದೆ. ಗೇಮಿಂಗ್ ಕಂಪನಿಗಳು ಸಾಹಸಮಯ ಆಟಗಳನ್ನು ಸೃಷ್ಟಿಸಲು ಅನಿಮೇಟರ್‌ಗಳನ್ನು ಹುಡುಕುತ್ತಿವೆ. ಜಾಹೀರಾತು ಏಜೆನ್ಸಿಗಳು ಗ್ರಾಹಕರನ್ನು ಆಕರ್ಷಿಸಲು ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ ಅನಿಮೇಷನ್ ಬಳಸುತ್ತಿವೆ. ಇದಲ್ಲದೆ, ಯೂಟ್ಯೂಬ್ ಮತ್ತು ಎಜುಕೇಶನ್ ಅಪ್ಲಿಕೇಶನ್‌ಗಳಲ್ಲೂ (Ed-Tech) ಅನಿಮೇಷನ್ ತಜ್ಞರಿಗೆ ಅಪಾರ ಬೇಡಿಕೆಯಿದೆ.

ಆರ್ಥಿಕ ಗಳಿಕೆ ಮತ್ತು ಭವಿಷ್ಯ:

ಈ ಕ್ಷೇತ್ರದಲ್ಲಿ ಆರಂಭಿಕ ಹಂತದಲ್ಲಿ ಕೆಲಸಕ್ಕೆ ಸೇರಿದರೆ ತಿಂಗಳಿಗೆ ಸುಮಾರು 15,000 ರಿಂದ 30,000ರೂ. ವರೆಗೆ ಸಂಬಳ ನಿರೀಕ್ಷಿಸಬಹುದು. ಕೆಲಸದಲ್ಲಿ ಅನುಭವ ಮತ್ತು ಸೃಜನಶೀಲತೆ ಹೆಚ್ಚಾದಂತೆ, ಮಾಸಿಕ ಗಳಿಕೆಯು 50,000 ರಿಂದ 1 ಲಕ್ಷಕ್ಕೂ ಹೆಚ್ಚು ತಲುಪಬಹುದು. ಇದಲ್ಲದೆ, ನೀವು ಸ್ವತಂತ್ರವಾಗಿ (Freelancing) ಕೆಲಸ ಮಾಡುವ ಮೂಲಕ ವಿಶ್ವಾದ್ಯಂತ ಇರುವ ಗ್ರಾಹಕರಿಗೆ ಸೇವೆ ಸಲ್ಲಿಸಿ ದೊಡ್ಡ ಮಟ್ಟದ ಆದಾಯ ಗಳಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈಗಾಗಲೇ ಅನುಭವಿಸಿದ್ದೇನೆ: ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ – Kannada News | HD Kumaraswamy dismisses rumours of Minister Zameer Ahmed Khan joining JDS

ಹಾಸನ, (ಏಪ್ರಿಲ್ 23): ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ (Davanagere South By Election) ಟಿಕೆಟ್ ವಿಚಾರವಾಗಿ ಕಾಂಗ್ರೆಸ್​​ನಲ್ಲಿ (Congress) ಶುರುವಾದ ಅಸಮಾಧಾನ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂದು ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮ್ಮದ್ ಹಾಗೂ ಸಚಿವ ಜಮಿರ್ ಅಹ್ಮದ್ ಖಾನ್ ಅಸಮಾಧಾನಗೊಂಡಿದ್ದು, ಪ್ರಚಾರವೇ ಮಾಡಿರಲಿಲ್ಲ. ಇದರಿಂದ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಿದರೆ, ನಸೀರ್ ಅಹದ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದ್ದು, ಇದೀಗ ಜಮೀರ್ ವಿರುದ್ಧವೂ ಕ್ರಮಕ್ಕೆ ಚಿಂತನೆಗಳು ನಡೆದಿವೆ. ಈ ಸಂಬಂಧ ಜಮಿರ್ ಅಹ್ಮದ್ ಖಾನ್ ಕಾಂಗ್ರೆಸ್ ತೊರೆದು ವಾಪಸ್ ಜೆಡಿಎಸ್​​ನತ್ತ ಮುಖ ಮಾಡುತ್ತಾರೆ ಎನ್ನುವ ಚರ್ಚೆಗಳು ಜೋರಾಗಿವೆ. ಆದ್ರೆ, ಇದನ್ನು ಸ್ವತಃ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ, ಅಲ್ಲಗಳೆದಿದಿದ್ದಾರೆ.

ಈ ಬಗ್ಗೆ ಮತ್ತೊಮ್ಮೆ ಹಾಸನದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಅಧಿಕಾರಕ್ಕಾಗಿ ಅಂತಹ ಜನರನ್ನು ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ. ಯಾವುದೇ ಕಾರಣಕ್ಕೂ ಆ ವಿಷಯವನ್ನು ನನ್ನ ಮುಂದೆ ಹೇಳಬೇಡಿ. ಅವರನ್ನು ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ, ಈಗಾಗಲೇ ಅನುಭವಿಸಿದ್ದೇನೆ. ರಾಜಕೀಯದಲ್ಲಿ ಶಕ್ತಿ ಬರುತ್ತೆ ಎಂದು ಹೇಳಿ ಈ ಕೆಲಸಕ್ಕೆ ಕೈಹಾಕಲ್ಲ. ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಝಲ್ಮುರಿ ತಿಂದಿದ್ದು ನಾನು, ಖಾರವಾಗಿದ್ದು ಟಿಎಂಸಿಗೆ: ಬಂಗಾಳದಲ್ಲಿ ಪ್ರಧಾನಿ ಮೋದಿ ಲೇವಡಿ – Kannada News | I ate jhalmuri TMC felt the heat PM Modi jab at Mamata Banerjee in West Bengal

ನವದೆಹಲಿ, ಏಪ್ರಿಲ್ 23: “ಬಂಗಾಳದಲ್ಲಿ ನಾನು ಝಲ್ಮುರಿ ಸವಿದ ವಿಷಯವು ಇಲ್ಲಿನ ಕೆಲವು ಜನರನ್ನು ನಡುಗಿಸಿತು ಎಂದು ನಾನು ಕೇಳಿದೆ. ತಮಾಷೆಯೆಂದರೆ ಝಲ್ಮುರಿ ತಿಂದಿದ್ದು ನಾನೇ ಆದರೂ ಅದರ ಖಾರ ಅನುಭವಿಸಿದ್ದು ತೃಣಮೂಲ ಕಾಂಗ್ರೆಸ್. ಮೇ 4ರಂದು ಫಲಿತಾಂಶಗಳು ಘೋಷಣೆಯಾದ ನಂತರ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ವಿಜಯವನ್ನು ಆಚರಿಸುತ್ತದೆ. ಆ ಸಮಯದಲ್ಲಿ ಸಿಹಿತಿಂಡಿಗಳು ಮತ್ತು ಝಲ್ಮುರಿ ಎರಡನ್ನೂ ವಿತರಿಸಲಾಗುತ್ತದೆ” ಎಂದು ಪ್ರಧಾನಿ ಮೋದಿ (PM Narendra Modi) ಹೇಳಿದ್ದಾರೆ.

“ಇಂದು ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ನಾನು ಎಲ್ಲಾ ಮತದಾರರನ್ನು ಅಭಿನಂದಿಸುತ್ತೇನೆ. ಎಲ್ಲರೂ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಬೇಕು. ಈ ಬಾರಿ ಇಲ್ಲಿಯವರೆಗೆ ಹಿಂಸಾಚಾರ ಕಡಿಮೆಯಾಗಿದೆ. ನಾನು ಭಾರತದ ಚುನಾವಣಾ ಆಯೋಗವನ್ನು ಅಭಿನಂದಿಸುತ್ತೇನೆ” ಎಂದು ಏಪ್ರಿಲ್ 29ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣನಗರದಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣಾ ಕಣದಲ್ಲಿ ಮೋದಿ ‘ಝಲ್​ಮುರಿ’ ಸವಿ; ಝಾರ್​ಗ್ರಾಮ್​ನಲ್ಲಿ ಜನಸಾಮಾನ್ಯರಂತೆ ಮಿಂಚಿದ ಪ್ರಧಾನಿ

“ಮತದಾನ ನಡೆಯುತ್ತಿರುವ ರೀತಿ ಮತ್ತು ಮತದಾರರು ಮತ ಚಲಾಯಿಸುತ್ತಿರುವ ಉತ್ಸಾಹವನ್ನು ನೋಡಿದರೆ ಈ ಬಾರಿ ಎಲ್ಲಾ ದಾಖಲೆಗಳು ಮುರಿಯುತ್ತವೆ ಎಂದು ತೋರುತ್ತದೆ. ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿಸಲು ರಾಜ್ಯ ಸರ್ಕಾರಿ ನೌಕರರು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರನ್ನೂ ನಾನು ಅಭಿನಂದಿಸುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರ ‘ಝಲ್ಮುರಿ’ ವಿಡಿಯೋ ವೈರಲ್: ಇನ್ಸ್​ಟಾಗ್ರಾಮ್‌ನಲ್ಲಿ 100 ಮಿಲಿಯನ್ ವೀಕ್ಷಣೆ

ಪ್ರಧಾನಿ ಮೋದಿ ಝಲ್ಮುರಿಯನ್ನು ತಿನ್ನುತ್ತಾ ಎಂಜಾಯ್ ಮಾಡುತ್ತಿರುವ ದೃಶ್ಯಗಳು ವೈರಲ್ ಆದ ಕೂಡಲೇ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದನ್ನು ಚುನಾವಣಾ ಗಿಮಿಕ್ ಮತ್ತು ನಾಟಕ ಎಂದು ಕರೆದಿದ್ದರು. ಇದನ್ನು ಮೊದಲೇ ಸ್ಕ್ರಿಪ್ಟ್ ಮಾಡಲಾಗಿತ್ತು ಎಂದು ಅವರು ಟೀಕಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಿಂತೆಯೆಲ್ಲಾ ಬಿಟ್ಟು ಸಂತೋಷದಿಂದ ಜೀವನ ನಡೆಸಲು ಈ ಸಿಂಪಲ್‌ ಸಲಹೆ ಪಾಲಿಸಿದರೆ ಸಾಕು – Kannada News | Just follow this simple advice to live a happy life without worrying

ಹಣವಿದ್ದರೆ ಸಂತೋಷದಿಂದ ಜೀವನ (happy life) ಸಾಗಿಸಬಹುದು ಎಂದು ಹಲವರು ಭಾವಿಸುತ್ತಾರೆ. ಆದರೆ ವಾಸ್ತವ ಏನೆಂದರೆ ಹಣವೊಂದರಿಂದಲೇ ಸಂತೋಷದಿಂದಿರಲು ಸಾಧ್ಯವಿಲ್ಲ, ಹಣದಿಂದ ಸಂತೋಷವನ್ನು ಖರೀದಿಸಲು ಸಾಧ್ಯವಿಲ್ಲ. ಬದಲಿಗೆ ನಮ್ಮಲ್ಲೇ ನಾವು ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಸಂತೋಷವನ್ನು ಕಂಡುಕೊಳ್ಳಬಹುದು. ಇಂದಿನ ಈ ಬ್ಯುಸಿ ಜೀವನದಲ್ಲಿ ಹೆಚ್ಚಿನವರು ಚಿಂತೆಯಲ್ಲಿಯೇ ಸಮಯ ಕಳೆಯುತ್ತಿದ್ದಾರೆ. ಈ ಚಿಂತೆಯಿಂದ ನೆಮ್ಮದಿ ಹಾಳಾಗುವುದಂತೂ ಖಂಡಿತ. ಹಾಗಾಗಿ ಈ ಕೆಲವೊಂದು ಸರಳ ಸೂತ್ರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಂತೋಷದ ಜೀವನವನ್ನು ನಡೆಸಿ.

ಸಂತೋಷವಾಗಿರಲು ಏನು ಮಾಡಬೇಕು?

ಅನುಪಯುಕ್ತ ವಾದಗಳಿಂದ ದೂರವಿರಲು ಕಲಿಯಿರಿ: ಸಂತೋಷವಾಗಿರಲು, ಅರ್ಥಹೀನ ವಾದಗಳಿಂದ ದೂರವಿರಿ. ಈ ಅರ್ಥಹೀನ ವಾದಗಳು  ಸಮಯ ವ್ಯರ್ಥ ಮಾಡುತ್ತದೆ ಮತ್ತು ಮಾನಸಿಕ ಶಾಂತಿಯನ್ನು ಹಾಳು ಮಾಡುತ್ತದೆ. ವಾದಿಸುವ ಬದಲು ಯಾವಾಗಲೂ ಅರ್ಥಪೂರ್ಣ ಚರ್ಚೆಗಳಿಗೆ ಆದ್ಯತೆ ನೀಡಿ. ಈ ರೀತಿಯ ಮನೋಭಾವ ಸಂತೋಷದಿಂದ ಜೀವನ ನಡೆಸಲು ಸಹಕಾರಿ.

ನೀವು ಹೇಗಿದ್ದೀರೋ ಹಾಗೆಯೇ ಇರಿ:  ಇತರರನ್ನು ಮೆಚ್ಚಿಸಲು ಬದುಕುವ ಅವಶ್ಯಕತೆಯಿಲ್ಲ. ಇತರರನ್ನು ಮೆಚ್ಚಿಸುವ ಭರದಲ್ಲಿ ನೀವು ಅನವಶ್ಯಕವಾಗಿ ಒತ್ತಡವನ್ನು ನಿಮ್ಮ ಮೈ ಮೇಲೆ ಎಳೆದುಕೊಳ್ಳುತ್ತೀರಿ. ಹಾಗಾಗಿ ಯಾರನ್ನು ಮೆಚ್ಚಿಸುವ ಸಲುವಾಗಿ ಜೀವನ ನಡೆಸಬೇಡಿ, ನಿಮಗಾಗಿ ಜೀವಿಸಿ. ಇದರಿಂದ ಖಂಡಿತವಾಗಿಯೂ ನೀವು ಸಂತೋಷದಿಂದ ಜೀವನ ನಡೆಸಲು ಸಾಧ್ಯ.

ಜನರ ಬಗ್ಗೆ ತಲೆಕೆಡಿಸಿಕೊಳ್ಳುವುದನ್ನು ಬಿಟ್ಟುಬಿಡಿ: ಇತರರು ನಿಮ್ಮ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ತಲೆ ಕೆಡಿಸಿಕೊಳ್ಳುವುದನ್ನು ನಿಲ್ಲಿಸಿ. ನಾವು ಈ ಕೆಲಸ ಮಾಡಿದರೆ ಯಾರು ಏನೆನ್ನುತ್ತಾರೋ, ಜನ ನನ್ನ ಬಗ್ಗೆ ಏನು ತಿಳಿದುಕೊಳ್ಳುತ್ತಾರೋ ಎಂದು ತಲೆ ಕೆಡಿಸುತ್ತಾ ಕುಳಿತರೆ ನೀವು ಚಿಂತೆಯಲ್ಲೇ ಇರುತ್ತಾರೆಯೇ ವಿನಃ ಸಂತೋಷದಿಂದ ಜೀವನ ನಡೆಸಲು ಸಾಧ್ಯವಿಲ್ಲ. ಖುಷಿಯಾಗಿರಬೇಕೆಂದರೆ ನೀವು ನೀವಾಗಿರಿ, ಇತರರು ಏನೆನ್ನುತ್ತಾರೆ ಎಂಬ ಬಗ್ಗೆ ಚಿಂತಿಸುವುದನ್ನು ಬಿಡಿ.

ಇದನ್ನೂ ಓದಿ: ಸುಡು ಬಿಸಿಲಿಗೆ ಬಸವಳಿದ ಮೂಕ ಜೀವಿಗಳಿಗೆ ರೀತಿ ನಿಮ್ಮ ಕೈಲಾದಷ್ಟು ಸಹಾಯ ಮಾಡಿ

ಸಕಾರಾತ್ಮಕವಾಗಿ ಯೋಚಿಸಿ: ನಕಾರಾತ್ಮಕ ಆಲೋಚನೆಗಳು ನಮ್ಮ ಶಾಂತಿ ಮತ್ತು ನೆಮ್ಮದಿಯನ್ನು ಹಾಳು ಮಾಡುತ್ತದೆ. ಹಾಗಾಗಿ ಯಾವಾಗಲೂ ಸಕಾರಾತ್ಮಕವಾಗಿ ಯೋಚಿಸಿ, ಮುಖ್ಯವಾಗಿ ಇತರರ ಬಗ್ಗೆ ತಲೆ ಕೆಡಿಸುವುದನ್ನು ನಿಲ್ಲಿಸಿ, ನಿಮ್ಮ ಬಗ್ಗೆ ಮಾತ್ರ ಯೋಚಿಸಿ, ಈ ಸ್ವ ಪ್ರೀತಿ ಮತ್ತು ಸಕಾರಾತ್ಮಕ ಆಲೋಚನೆ ನಿಮಗೆ ಸಂತೋಷವನ್ನು ನೀಡುತ್ತದೆ.  ಒಟ್ಟಾರೆಯಾಗಿ ಜನರ ಅಭಿಪ್ರಾಯಗಳ ಮೇಲೆ ಸಮಯ ವ್ಯರ್ಥ ಮಾಡುವ ಬದಲು, ನಿಮ್ಮ ಇಚ್ಛೆಯಂತೆ ನಿಮ್ಮ ಜೀವನವನ್ನು ಸಂತೋಷದಿಂದ ಬದುಕಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಂದು ತಿಂಗಳಲ್ಲಿ ಫೋನ್​ಪೇನಲ್ಲಿ 1,000 ಕೋಟಿ ಟ್ರಾನ್ಸಾಕ್ಷನ್ಸ್; ಈ ಮೈಲಿಗಲ್ಲು ಮುಟ್ಟಿದ ಮೊದಲ ಯುಪಿಐ ಆ್ಯಪ್ – Kannada News | NPCI data for 2026 March, Phone pe sees 10 billion transactions, with Gpay close second, here are details

ನವದೆಹಲಿ, ಏಪ್ರಿಲ್ 23: ಭಾರತದ ಅತಿದೊಡ್ಡ ಯುಪಿಐ ಆ್ಯಪ್ ಎನಿಸಿರುವ ಫೋನ್​ಪೇ (PhonePe) ಮಾರ್ಚ್ ತಿಂಗಳಲ್ಲಿ ಹೊಸ ದಾಖಲೆ ಬರೆದಿದೆ. 2026ರ ಮಾರ್ಚ್​ನಲ್ಲಿ ಫೋನ್​ಪೇ ಪ್ಲಾಟ್​ಫಾರ್ಮ್​ನಲ್ಲಿ 10 ಬಿಲಿಯನ್​ಗೂ ಹೆಚ್ಚು ಟ್ರಾನ್ಸಾಕ್ಷನ್​ಗಳು ಆಗಿವೆ. ಅಂದರೆ, ಒಂದು ತಿಂಗಳಲ್ಲಿ 1,000 ಕೋಟಿಗೂ ಹೆಚ್ಚು ಹಣ ವಹಿವಾಟುಗಳು ಫೋನ್ ಪೇನಿಂದ ಆಗಿವೆ. ಈ ಮೈಲಿಗಲ್ಲು ಮುಟ್ಟಿದ ಮೊದಲ ಯುಪಿಐ ಆ್ಯಪ್ ಎನ್ನುವ ದಾಖಲೆ ಫೋನ್​ಪೇನದ್ದು.

ಯುಪಿಐ ಮಾರುಕಟ್ಟೆಯಲ್ಲಿ ಫೋನ್​ಪೇ ಮತ್ತು ಗೂಗಲ್ ಪೇ ಪಾರಮ್ಯ

ಯುಪಿಐ ಪೇಮೆಂಟ್ ವಿಚಾರದಲ್ಲಿ ಫೋನ್ ಪೇ ನಂಬರ್ ಸ್ಥಾನದಲ್ಲಿ ಮುಂದುವರಿದಿದೆ. ಗೂಗಲ್ ಪೇ ಎರಡನೇ ಸ್ಥಾನದಲ್ಲಿ ಸಮೀಪದಲ್ಲೇ ಇದೆ. ಪೇಟಿಎಂ ಮೂರನೇ ಸ್ಥಾನದಲ್ಲಿ ಬಹಳ ಹಿಂದಿದೆ. ಫೋನ್​ಪೇ 1,000 ಕೋಟಿ ಟ್ರಾನ್ಸಾಕ್ಷನ್​ಗಳಾದರೆ, ಗೂಗಲ್ ಪೇ 750 ಕೋಟಿ ವಹಿವಾಟುಗಳನ್ನು ಕಂಡಿದೆ. ಪೇಟಿಎಂನಲ್ಲಿ ಆದ ಟ್ರಾನ್ಸಾಕ್ಷನ್​ಗಳ ಸಂಖ್ಯೆ 170 ಕೋಟಿ ದಾಟಿದೆ.

ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆ ಸಾಧ್ಯತೆಯನ್ನು ತಳ್ಳಿ ಹಾಕಿದ ಸರ್ಕಾರ

ಟಾಪ್-6 ಯುಪಿಐ ಆ್ಯಪ್​ಗಳು

  1. ಫೋನ್​ಪೇ: 1,000 ಕೋಟಿ ಟ್ರಾನ್ಸಾಕ್ಷನ್
  2. ಗೂಗಲ್ ಪೇ: 750 ಕೋಟಿ ಟ್ರಾನ್ಸಾಕ್ಷನ್
  3. ಪೇಟಿಎಂ: 170 ಕೋಟಿ ಟ್ರಾನ್ಸಾಕ್ಷನ್ಸ್
  4. ನವಿ: 80 ಕೋಟಿ ಟ್ರಾನ್ಸಾಕ್ಷನ್
  5. ಸೂಪರ್ ಡಾಟ್ ಮನಿ: 34 ಕೋಟಿ ಟ್ರಾನ್ಸಾಕ್ಷನ್ಸ್
  6. ಭೀಮ್: 20 ಕೋಟಿ ಟ್ರಾನ್ಸಾಕ್ಷನ್ಸ್

ಎನ್​ಪಿಸಿಐ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶದ ಪ್ರಕಾರ, ಮಾರ್ಚ್ ತಿಂಗಳಲ್ಲಿ ಒಟ್ಟಾರೆ ಯುಪಿಐ ಟ್ರಾನ್ಷಾಕ್ಷನ್ಸ್ ಸಂಖ್ಯೆ 22.6 ಬಿಲಿಯನ್ ಆಗಿದೆ. ಹಣದ ಮೌಲ್ಯ 29.6 ಲಕ್ಷ ಕೋಟಿ ರೂ. ಫೋನ್ ಪೇ ಪ್ಲಾಟ್​ಫಾರ್ಮ್​ನಲ್ಲಿ ಮಾರ್ಚ್ ತಿಂಗಳಲ್ಲಿ 1,000 ಕೋಟಿ ವಹಿವಾಟುಗಳ ಮೂಲಕ 14.48 ಲಕ್ಷ ಕೋಟಿ ರೂ ಮೌಲ್ಯದ ಹಣದ ಟ್ರಾನ್ಸಾಕ್ಷನ್ ಆಗಿದೆ. ಗೂಗಲ್ ಪೇನಲ್ಲಿ ವಹಿವಾಟು ಆದ ಹಣದ ಮೊತ್ತ 10 ಲಕ್ಷ ಕೋಟಿ ರೂ ದಾಟಿದೆ.

ಇದನ್ನೂ ಓದಿ: ಮೇ 1ರಿಂದ ಹೊಸ ಗೇಮಿಂಗ್ ರೂಲ್ಸ್; ಆಟಗಾರರಿಗೆ ಬದಲಾವಣೆಗಳೇನು? ಇಲ್ಲಿದೆ ಡೀಟೇಲ್ಸ್

ಯುಪಿಐ ಮಾರುಕಟ್ಟೆಯಲ್ಲಿ ಫೋನ್ ಪೇ ಮತ್ತು ಗೂಗಲ್ ಪೇ ಪ್ರಾಬಲ್ಯ ಹೆಚ್ಚಿದೆ. ಫೋನ್ ಪೇ ಶೇ. 45ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದರೆ, ಗೂಗಲ್ ಪೇ ಶೇ. 33ರಷ್ಟು ಪಾಲು ಹೊಂದಿದೆ. ಇವೆರಡು ಆ್ಯಪ್​ಗಳು ಹೊಂದಿರುವ ಒಟ್ಟು ಮಾರುಕಟ್ಟೆ ಪಾಲು ಶೇ. 78 ದಾಟುತ್ತದೆ. ಯಾವುದೇ ಒಂದು ಆ್ಯಪ್ ಶೇ. 30ಕ್ಕಿಂತ ಹೆಚ್ಚಿನ ಮಾರುಕಟ್ಟೆ ಪಾಲು ಹೊಂದಿರದಂತೆ ನೋಡಿಕೊಳ್ಳುವುದು ಎನ್​ಪಿಸಿಐನ ಗುರಿಗಳಲ್ಲಿ ಒಂದು ಎಂಬುದನ್ನು ಗಮನಿಸಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕೋಲಾರ: SSLC ಪರೀಕ್ಷೆ ಪಾಸ್​ ಆದ ಖುಷಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು – Kannada News | SSLC Result Joy Turns Tragic: Kolar Student Drowns While Swimming

ನೀರುಪಾಲಾದ ಕಿರಣ್​​Image Credit source: Tv9 Kannada

ಕೋಲಾರ, ಏಪ್ರಿಲ್​​ 23: ಈಜಲು ಹೋಗಿ ನೀರುಪಾಲಾಗುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದ್ದು, ತಲಕಾಡು ಬಳಿ ಮೊನ್ನೆ ಮೊನ್ನೆಯಷ್ಟೇ ವಿದ್ಯಾರ್ಥಿನಿಯರು ನೀರುಪಾಲಾದ ಘಟನೆ ಮಾಸುವ ಮುನ್ನವೇ ಇತ್ತ ಕೋಲಾರದಲ್ಲಿಯೂ SSLC ಪರೀಕ್ಷೆ ಪಾಸ್​ ಆದ ಖುಷಿಯಲ್ಲಿದ್ದ ಬಾಲಕನೋರ್ವ ಈಜಲು ಹೋಗಿ ಜಲಸಮಾಧಿಯಾಗಿರುವ ಘಟನೆ ನಡೆದಿದೆ. ಕಿರಣ್(15) ಮೃತ ಬಾಲಕನಾಗಿದ್ದು, ಎಸ್​​ಎಸ್​​ಎಲ್​​ಸಿ ಫಲಿತಾಂಶ ಬಂದ ಬಳಿಕ ಸ್ನೇಹಿತರ ಜೊತೆ ಈತ ಈಜಲು ತೆರಳಿದ್ದ ವೇಳೆ ಬಾವಿಯ ನೀರಲ್ಲಿ ಮುಳುಗಿ ಅವಘಡ ನಡೆದಿದೆ ಎನ್ನಲಾಗಿದೆ.

ರಘುಪತಿ ಎಂಬವರ ಪುತ್ರನಾದ ಕಿರಣ್​​, ಇಂದು ಎಸ್​​ಎಸ್​ಎಲ್​​ಸಿ ಫಲಿತಾಂಶ ಬಂದ ಖುಷಿಯಲ್ಲಿದ್ದ. 625ಕ್ಕೆ 239 ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ್ದ ಈತ ಪರೀಕ್ಷೆ ಪಾಸಾದೆ ಎಂದು ಸಂತಸಪಟ್ಟಿದ್ದ. ಆದರೆ ಈಜಲು ತೆರಳಿದ್ದ ಕಿರಣ್​​ ಸ್ಮಿಮ್ಮಿಂಗ್​​ ಬಾರದ ಕಾರಣ ಬಾವಿಯ ನೀರಲ್ಲಿ ಮುಳುಗಿದ್ದಾನೆ. ಘಟನೆ ಬೆನ್ನಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕಿರಣ್ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕಾಲು ಜಾರಿ ಕೆರೆಗೆ ಬಿದ್ದ ಅಳಿಯನ ರಕ್ಷಣೆಗೆ ಹೋದ ಮಾವನೂ ಸಾವು; ಅತ್ತ ಪಿರಿಯಾಪಟ್ಟಣದಲ್ಲಿ ಇಬ್ಬರು ಯುವಕರು ನೀರು ಪಾಲು

ರಾಜ್ಯದಲ್ಲಿ ಸಾಲು ಸಾಲು ಅವಘಡ

  • ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡಿನ ನಿಸರ್ಗಧಾಮದಲ್ಲಿ ಕಾವೇರಿ ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲಾಗಿರುವ ಘಟನೆ ಏಪ್ರಿಲ್​​ 21ಎಂದು ನಡೆದಿತ್ತು. ಅವಘಡದಲ್ಲಿ ಚಾರ್ವಿ(15), ರಮ್ಯಾ(16) ಪ್ರಾಣ ಕಳೆದುಕೊಂಡಿದ್ದರು.
  • ಕಾಲು ಜಾರಿ ಕೆರೆಗೆ ಬಿದ್ದ ಬಾಲಕನ ರಕ್ಷಣೆ ಗೆ ಹೋದ ಮಾವನೂ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಎನ್‌. ಹೊಸಳ್ಳಿ ಗ್ರಾಮದಲ್ಲಿ ನಡೆದಿತ್ತು. ಪ್ರಭಾಕರ್ (45), ಪ್ರತೀಕ್ (12) ಏಪ್ರಿಲ್​​ 20ರಂದು ಮೃತಪಟ್ಟಿದ್ದರು.
  • ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಪ್ರಾಣಬಿಟ್ಟಿರುವ ಘಟನೆ ಪಿರಿಯಾಪಟ್ಟಣದ ದೊಡ್ಡ ಹರವೆ ಗ್ರಾಮದ ಬಳಿ ಏಪ್ರಿಲ್​​ 19ರಂದು ನಡೆದಿತ್ತು. ಗಣೇಶ್ (22) ಮತ್ತು ಇಮ್ರಾನ್ (28) ಜಲಸಮಾಧಿಯಾಗಿದ್ದರು.
  • ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ದುರ್ಮರಣ ಹೊಂದಿರುವ ಘಟನೆ ಮೈಸೂರು ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ಏಪ್ರಿಲ್​​ 19ರಂದು ನಡೆದಿತ್ತು. ಬೆಂಗಳೂರಿನ ಯಾಸಿನ್​(23) ಹಾಗೂ ಹೈಮಾ(13), ಊಟಿ ಮೂಲದ 38 ವರ್ಷದ ಸೈದ್ ಫಾತಿಮಾ, ಮೈಸೂರು ಜಿಲ್ಲೆಯ ನೇಹಾ(20), ಉಮೇರ್(7), ಅಫಿಯಾ(20) ಮೃತಪಟ್ಟಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:58 pm, Thu, 23 April 26

Source link

ವಾಟ್ಸಾಪ್​ನಲ್ಲಿ ಪ್ರೀಪೇಡ್ ಮೊಬೈಲ್ ರೀಚಾರ್ಜ್; ಬಂದಿದೆ ಹೊಸ ಫೀಚರ್

ಬೆಂಗಳೂರು, ಏಪ್ರಿಲ್ 23: ನಂಬರ್ ಒನ್ ಮೆಸೇಜಿಂಗ್ ಆ್ಯಪ್ ಆದ ವಾಟ್ಸಾಪ್​ನಲ್ಲಿ ರೀಚಾರ್ಜ್ ಸರ್ವಿಸ್ ಅನ್ನು ಪರಿಚಯಿಸಲಾಗುತ್ತಿದೆ. ಭಾರತದಲ್ಲಿ ವಾಟ್ಸಾಪ್ ಬಳಕೆದಾರರಿಗೆ ಪ್ರೀಪೇಡ್ ಮೊಬೈಲ್ ರೀಚಾರ್ಜ್ ಸೇವೆ ಲಭ್ಯ ಇರಲಿದೆ. ಆಂಡ್ರಾಯ್ಡ್ ಮತ್ತು ಆ್ಯಪಲ್ ಮೊಬೈಲ್​ಗಳಲ್ಲಿ ಎರಡರಲ್ಲೂ ಇದು ಸಿಗಲಿದೆ. ಆದರೆ, ಹಂತ ಹಂತವಾಗಿ ಇದು ಜಾರಿಯಾಗುತ್ತದೆ. ಮುಂಬರುವ ಕೆಲ ವಾರಗಳಲ್ಲಿ ಎಲ್ಲಾ ವಾಟ್ಸಾಪ್ ಬಳಕೆದಾರರಿಗೂ ಈ ಸೇವೆ ಸಿಗುತ್ತದೆ. ಮೊಬೈಲ್ ರೀಚಾರ್ಜ್ ಸೇವೆ ನೀಡಲು ವಾಟ್ಸಾಪ್​ಗೆ ಪೇಯು (PayU) ನೆರವು ನೀಡುತ್ತಿದೆ.

ವಾಟ್ಸಾಪ್ ಬಳಕೆದಾರರು ತಮ್ಮದೇ ಮೊಬೈಲ್ ನಂಬರ್ ಅನ್ನು ರೀಚಾರ್ಜ್ ಮಾಡಬಹುದು. ತಮ್ಮ ಸ್ನೇಹಿತರು, ಕುಟುಂಬ ಸದಸ್ಯರು ಅಥವಾ ಯಾರದೇ ಮೊಬೈಲ್ ನಂಬರ್ ಆದರೂ ಕೆಲ ಸರಳ ಕ್ರಮಗಳಲ್ಲಿ ರೀಚಾರ್ಜ್ ಮಾಡಬಹುದು. ಜಿಯೋ, ಏರ್​ಟೆಲ್, ವೊಡಾಫೋನ್ ಐಡಿಯಾದ ಪ್ರೀಪೇಡ್ ನಂಬರ್​ಗಳನ್ನು ರೀಚಾರ್ಜ್ ಮಾಡಬಹುದು. ಇದಕ್ಕೆ ಪೇಮೆಂಟ್ ಕೂಡ ವಾಟ್ಸಾಪ್ ಪ್ಲಾಟ್​ಫಾರ್ಮ್​ನಲ್ಲೇ ಮಾಡಬಹುದು. ಬೇರೆ ಯುಪಿಐ ಆ್ಯಪ್​ಗೆ ಹೋಗುವ ಅವಶ್ಯಕತೆ ಇರುವುದಿಲ್ಲ. ಮೆಟಾ ಮತ್ತು ಪೇಯು ಸಂಸ್ಥೆಗಳು ಈ ಮಾಹಿತಿ ಪ್ರಕಟಿಸಿವೆ.

ಇದನ್ನೂ ಓದಿ: ಒಂದು ತಿಂಗಳಲ್ಲಿ ಫೋನ್​ಪೇನಲ್ಲಿ 1,000 ಕೋಟಿ ಟ್ರಾನ್ಸಾಕ್ಷನ್ಸ್; ಈ ಮೈಲಿಗಲ್ಲು ಮುಟ್ಟಿದ ಮೊದಲ ಯುಪಿಐ ಆ್ಯಪ್

ವಾಟ್ಸಾಪ್​ನಲ್ಲಿ ₹ ಐಕಾನ್ ಗಮನಿಸಿ

ವಾಟ್ಸಾಪ್​ನ ಹೋಮ್ ಸ್ಕ್ರೀನ್​ನ ಮೇಲ್ಭಾಗದಲ್ಲಿ ₹ ಚಿಹ್ನೆ ಇರುತ್ತದೆ. ಅದನ್ನು ಒತ್ತಿದರೆ ಪೇಮೆಂಟ್ ಸೇವೆಗಳು ಲಿಸ್ಟ್ ಆಗಿರುವುದನ್ನು ಕಾಣಬಹುದು. ಫೋನ್ ಪೇ, ಗೂಗಲ್ ಪೇ ಇತ್ಯಾದಿ ಯುಪಿಐ ಆ್ಯಪ್​ಗಳಂತೆ ವಾಟ್ಸಾಪ್​ನಲ್ಲೂ ಯುಪಿಐ ಪೇಮೆಂಟ್ ಸರ್ವಿಸ್ ಲಭ್ಯ ಇದ್ದು, ಬ್ಯಾಂಕ್ ಅಕೌಂಟ್​ಗಳನ್ನು ಸೇರಿಸಬಹುದು.

ಯುಪಿಐ ಆ್ಯಪ್​ಗಳಂತೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಕಳುಹಿಸಬಹುದು. ಯಾವುದೇ ಮೊಬೈಲ್ ನಂಬರ್​ಗೆ ಹಣ ಕಳುಹಿಸಬಹುದು.

ಇದರ ಜೊತೆಗೆ ಈಗ ಮೊಬೈಲ್ ರೀಚಾರ್ಜ್ ಸೇವೆ ಪರಿಚಯಿಸಲಾಗಿದೆ. ಪೇಯು ಸಂಸ್ಥೆಯು ವಾಟ್ಸಾಪ್​ಗೆ ಸಪೋರ್ಟ್ ನೀಡುತ್ತಿದೆ.

ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆ ಸಾಧ್ಯತೆಯನ್ನು ತಳ್ಳಿ ಹಾಕಿದ ಸರ್ಕಾರ

ವಾಟ್ಸಾಪ್​ನಲ್ಲಿ ಸದ್ಯ ಹಣದ ಟ್ರಾನ್ಸಾಕ್ಷನ್ ಜೊತೆಗೆ ಬಿಲ್ ಪೇಮೆಂಟ್, ಮೆಟ್ರೋ ಟಿಕೆಟ್ ಬುಕಿಂಗ್ ಇತ್ಯಾದಿಯನ್ನು ಮಾಡಬಹುದು. ಅದಕ್ಕೆ ಈಗ ಪ್ರೀಪೇಡ್ ಮೊಬೈಲ್ ರೀಚಾರ್​ಜ್ ಸೇವೆಯೂ ಸೇರ್ಪಡೆಯಾಗಿದೆ. ಸದ್ಯ ಕೆಲ ಬಳಕೆದಾರರಿಗೆ ಅಲಭ್ಯ ಇರಬಹುದು. ಮುಂದಿನ ದಿನಗಳಲ್ಲಿ ಎಲ್ಲರಿಗೂ ಅದು ಸಿಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವಂಚನೆ, ಬೆದರಿಕೆ ಆರೋಪ: ಪ್ರತಿಕ್ರಿಯೆ ನೀಡಿದ ಗಾಯಕಿ ಮಂಗ್ಲಿ – Kannada News | Singer Mangli reaction about allegation made against her

ಮಂಗ್ಲಿ (Mangli), ದಕ್ಷಿಣ ಭಾರತದ ಜನಪ್ರಿಯ ಗಾಯಕಿ. ತೀರಾ ಹಿಂದುಳಿದ ಸಮುದಾಯದಿಂದ ಬಂದು, ತನ್ನ ಜನಪದ ಗಾಯಕ ಕಲೆಯಿಂದ ಒಂದೊಂದೆ ಮೆಟ್ಟಿಲು ಹತ್ತಿ ಇಂದು ದಕ್ಷಿಣ ಭಾರತದ ಬೇಡಿಕೆಯ ಗಾಯಕರಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಕನ್ನಡದ ‘ರಾಬರ್ಟ್’ ಸಿನಿಮಾದ ತೆಲುಗು ಡಬ್​​ನಲ್ಲಿ ಮಂಗ್ಲಿ ಹಾಡಿದ ಹಾಡು ಭಾರಿ ದೊಡ್ಡ ಹಿಟ್ ಆಗಿತ್ತು. ಕರ್ನಾಟಕದಲ್ಲಿ ಹಲವು ಲೈವ್ ಶೋಗಳನ್ನು ಸಹ ಮಂಗ್ಲಿ ನೀಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರಕ್ಕೂ ಅವರು ಬಂದಿದ್ದರು. ಆದರೆ ಇದೀಗ ಮಂಗ್ಲಿ ಹೆಸರು ವಿವಾದದಲ್ಲಿ ಸಿಲುಕಿಕೊಂಡಿದ್ದು, ಅವರ ವಿರುದ್ಧ ಕ್ರಿಮಿನಲ್ ಆರೋಪ ಹೊರಿಸಲಾಗಿದೆ.

ಮಂಗ್ಲಿ ವಿರುದ್ಧ ಹಣಕಾಸು ವಂಚನೆ, ಬೆದರಿಕೆ, ಹಲ್ಲೆಗೆ ಬೆಂಬಲ ಇನ್ನಿತರೆ ಆರೋಪಗಳನ್ನು ಕೆಲವರು ಮಾಡಿದ್ದು, ದೂರು ಸಹ ದಾಖಲಾಗಿದೆ. ಮೈಕ್ರೋ ಫೈನಾನ್ಸ್ ಮತ್ತು ‘ಶುಭಾಕ್ಷೇತ್ರ ಇನ್ಫ್ರಾ’ ಹೆಸರಿನಲ್ಲಿ ನಡೆದ ಕೋಟ್ಯಂತರ ರೂಪಾಯಿಗಳ ಆರ್ಥಿಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ಕೇಳಿಬರುತ್ತಿರುವ ಆರೋಪಗಳ ಕುರಿತು ಜನಪ್ರಿಯ ಗಾಯಕಿ ಮಂಗ್ಲಿ ಇದೀಗ ಪ್ರತಿಕ್ರಿಯಿಸಿದ್ದಾರೆ. ಪ್ರಕರಣ ಕುರಿತು ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ಗಾಯಕಿ ಮಂಗ್ಲಿ ಈ ಹಗರಣದಲ್ಲಿ ಮೋಸಹೋದ ಸಂತ್ರಸ್ತರಿಗೆ ಅನ್ಯಾಯವಾಗಿದ್ದು, ಅವರಿಗೆ ನ್ಯಾಯ ಸಿಗುವವರೆಗೂ ತಾನು ಬೆಂಬಲವಾಗಿ ನಿಲ್ಲುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಹಣಕಾಸು ವಂಚನೆ ಪ್ರಕರಣಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಮಂಗ್ಲಿ ತಿಳಿಸಿದ್ದಾರೆ.

ಕೆಲವು ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ತನ್ನ ಹೆಸರನ್ನು ಈ ಪ್ರಕರಣಕ್ಕೆ ಎಳೆದು ತರುತ್ತಿದ್ದಾರೆ ಮತ್ತು ತನ್ನ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ‘ಸತ್ಯ ಖಂಡಿತವಾಗಿಯೂ ಹೊರಬರುತ್ತದೆ. ನನಗೆ ಭಾರತದ ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ಗೌರವ ಹಾಗೂ ನಂಬಿಕೆಯಿದೆ. ಕಾನೂನು ಪ್ರಕ್ರಿಯೆಯ ಮೂಲಕವೇ ಎಲ್ಲವೂ ಸ್ಪಷ್ಟವಾಗಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ

ಸಿಮೆಂಟ್ ಕಂಪನಿ ಮತ್ತು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿದರೆ ಅಲ್ಪಾವಧಿಯಲ್ಲಿ ಹೆಚ್ಚಿನ ಲಾಭ ಹಾಗೂ ಹಣ ದ್ವಿಗುಣವಾಗುತ್ತದೆ ಎಂದು ನಂಬಿಸಿ ಮಧು ಮತ್ತು ಗ್ಯಾಂಗ್ ಕೋಟ್ಯಂತರ ರೂಪಾಯಿ ವಸೂಲಿ ಮಾಡಿರುವ ಬಗ್ಗೆ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಆರೋಪಿಗಳಾದ ರಮಾವತ್ ಮಧು, ಬಾಲಾಜಿನಾಯಕ್ ಮತ್ತು ಭರತ್ ಚೌಹಾಣ್ ವಿರುದ್ಧ ನಲ್ಗೊಂಡ ಮತ್ತು ಗದ್ವಾಲ್‌ನಲ್ಲಿ ಸುಮಾರು 62 ಪ್ರಕರಣಗಳು ದಾಖಲಾಗಿವೆ. ಈ ಆರೋಪಿಗಳು ಮಂಗ್ಲಿಯವರ ಆಪ್ತರಾಗಿದ್ದು, ಸಹೋದರರು ಸಹ ಆಗಿದ್ದಾರೆ. ಮಂಗ್ಲಿ ವಿರುದ್ಧವೂ ಸಹ ವಂಚನೆ ಆರೋಪ ಮಾಡಲಾಗಿದೆ.

ಮಧ್ಯಮ ವರ್ಗದವರು, ಸಣ್ಣ ವ್ಯಾಪಾರಿಗಳು ಮತ್ತು ಗ್ರಾಮೀಣ ಹೂಡಿಕೆದಾರರನ್ನು ಗುರಿಯಾಗಿಸಿಕೊಂಡು ಈ ಸ್ಕೀಮ್ ನಡೆಸಲಾಗಿತ್ತು. ಆರಂಭದಲ್ಲಿ ಲಾಭ ನೀಡುವ ಮೂಲಕ ನಂಬಿಕೆ ಹುಟ್ಟಿಸಿ, ನಂತರ ದೊಡ್ಡ ಮೊತ್ತದ ಹಣ ಹೂಡಿಕೆ ಮಾಡಿಸಿ ವಂಚಿಸಲಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ವಕೀಲರೊಬ್ಬರು ಮಂಗ್ಲಿ ಹಾಗೂ ಸಂಗಡಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಅದಾದ ಬಳಿಕ ಗಾಯಕಿ ಮಂಗ್ಲಿ ಸಹ ಪ್ರತಿದೂರು ದಾಖಲಿಸಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ. ಪ್ರಸ್ತುತ ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಮಂಗ್ಲಿ ಅವರ ಹೆಸರು ಕೇಳಿಬಂದಿರುವುದು ಚಿತ್ರರಂಗದಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಆದರೆ ಮಂಗ್ಲಿ ಮಾತ್ರ ತಾನು ನಿರ್ದೋಷಿ ಎಂದು ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version