ನಾನು ನಟ ಹೌದು, ಆದ್ರೆ ರಾಜಕೀಯದಲ್ಲಿ ನಾಟಕ ಮಾಡಲ್ಲ: ಟೀಕಾಕಾರರಿಗೆ ವಿಜಯ್ ಖಡಕ್ ತಿರುಗೇಟು – Kannada News | Actor Thalapathy Vijay TVK speech in Chennai on Tamil Nadu Elections Karur Stampede
ತಮಿಳುನಾಡು ವಿಧಾನಸಭೆ ಚುನಾವಣೆಗೆ (Tamil Nadu Elections) ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಚೆನ್ನೈನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ತಮ್ಮನ್ನು ಟೀಕಿಸುವವರ ವಿರುದ್ಧ ಕೆಂಡಕಾರಿದ್ದಾರೆ. ತಮ್ಮನ್ನು ಕೇವಲ ನಟ ಎಂದು ಹೀಯಾಳಿಸುತ್ತಿರುವವರಿಗೆ ವಿಜಯ್ (Thalapathy Vijay) ತಿರುಗೇಟು ನೀಡಿದ್ದಾರೆ. ಚೆನ್ನೈನಲ್ಲಿ ಮಂಗಳವಾರ (ಏಪ್ರಿಲ್ 21) ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯ್, ಆಡಳಿತ ಪಕ್ಷ ಮತ್ತು ತಮ್ಮನ್ನು ಟೀಕಿಸುವ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮನ್ನು…