ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ? ಸತೀಶ್ ಜಾರಕಿಹೊಳಿ ಹೇಳಿದ್ದೇನು? – Kannada News | Congress Internal Tumult: Satish Jarkiholi Addresses Concerns Over Disciplinary Action Against Muslim Leaders

ಬೆಂಗಳೂರು, ಏ.21: ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದ್ದಂತೆ ಕಾಂಗ್ರೆಸ್​​​​ನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಮೂವರು ಮುಸ್ಲಿಂ ನಾಯಕರನ್ನು ಗುರಿ ಮಾಡಲಾಗಿತ್ತು. ಇದರಲ್ಲಿಅಬ್ದುಲ್ ಜಬ್ಬಾರ್ ಅವರನ್ನು ಅಲ್ಪಸಂಖ್ಯಾತ ಘಟಕದ ಸ್ಥಾನದಿಂದ ಕೆಳಗಿಸಿ, ಕಾಂಗ್ರೆಸ್​​ ಪ್ರಾಥಮಿಕ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್​ ಅಹ್ಮದ್​ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು. ಇದೀಗ ಜಮೀರ್​​ ಕೂಡ ಇದು ದೊಡ್ಡ ಸಂಕಷ್ಟವಾಗಿದೆ. ಇದೀಗ ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ ಮೇಲೆ ಇವರ ಮೇಲೆಯೂ ಕ್ರಮವಾಗುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆ ಉಪಚುನಾವಣೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಗೊಂದಲಗಳ ಕುರಿತು ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಂ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಸ್ತಾಪಗಳು ಕೇಳಿ ಬರುತ್ತಿದ್ದು, ಇದು ಚುನಾವಣೆ ಸಂದರ್ಭದಲ್ಲಿ ಸಹಜ ಎಂದು ಅವರು ಹೇಳಿದರು. ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಗಳು ಕೇಳಿಬರುತ್ತಿದ್ದರೂ, ಫಲಿತಾಂಶ ಬರುವವರೆಗೂ ಕಾದು ನೋಡಬೇಕು ಎಂದು ಜಾರಕಿಹೊಳಿ ಸ್ಪಷ್ಟಪಡಿಸಿದರು. ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ಯಾವುದೇ ಕ್ರಮ ಕೈಗೊಳ್ಳುವ ಹಂತದಲ್ಲಿ ತಾವು ಇಲ್ಲ ಎಂದು ತಿಳಿಸಿದರು. ಕ್ರಮ ಕೈಗೊಳ್ಳುವ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಮುಸ್ಲಿಂ ನಾಯಕರ ಮೇಲಿನ ಕ್ರಮಗಳು ಮತಬ್ಯಾಂಕ್ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ICC Rankings: ಜಾರಿದ ಮಂಧಾನ; ಶಫಾಲಿಗೆ ಮುಂಬಡ್ತಿ – Kannada News | India Women’s T20 Rankings: Mandhana Drops, Shafali Rises After SA Series Losses

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳಲ್ಲಿ ಭಾರತ ತಂಡ ಸೋಲನುಭವಸಿದೆ. ತಂಡದ ಈ ಸೋಲಿಗೆ ಬ್ಯಾಟಿಂಗ್‌ ವಿಭಾಗದ ವೈಫಲ್ಯವೇ ಕಾರಣ ಎನ್ನಬಹುದು. ಇದೀಗ ಇದರ ಪರಿಣಾಮ ಐಸಿಸಿ ಟಿ20 ಶ್ರೇಯಾಂಕದಲ್ಲಿ (T20 Rankings) ಸ್ಪಷ್ಟವಾಗಿ ಗೋಚರಿಸಿದೆ. ಈ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಐಸಿಸಿ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಆದರೆ ಈ ಸೋಲುಗಳ ಹೊರತಾಗಿಯೂ ತಂಡದ ಪರ ಅಮೋಘ ಪ್ರದರ್ಶನ ನೀಡುತ್ತಿರುವ ಶಫಾಲಿ ವರ್ಮಾ ಮುಂಬಡ್ತಿ ಪಡೆದಿದ್ದಾರೆ. ಈ ಸರಣಿಯಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿರುವ ಶಫಾಲಿ ವರ್ಮಾ ಐಸಿಸಿ ಮಹಿಳಾ ಟಿ20 ಶ್ರೇಯಾಂಕದಲ್ಲಿ ಎರಡು ಸ್ಥಾನ ಜಿಗಿತ ಸಾಧಿಸಿದ್ದು ಆರನೇ ಸ್ಥಾನಕ್ಕೆ ತಲುಪಿದ್ದಾರೆ.

ಮಂಧಾನಾಗೆ ಆಘಾತ

ಟಿ20 ರ್ಯಾಂಕಿಂಗ್​ನಲ್ಲಿ ಕುಸಿತ ಕಂಡಿರುವ ಸ್ಮೃತಿ ಮಂಧಾನ ಎರಡು ಪಂದ್ಯಗಳಲ್ಲಿ ಕೇವಲ 25 ರನ್ ಗಳಿಸಿದ್ದರು. ಹೀಗಾಗಿ ಮಂಧಾನ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ. ವೆಸ್ಟ್ ಇಂಡೀಸ್‌ನ ಹೇಲಿ ಮ್ಯಾಥ್ಯೂಸ್ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನ ಪಡೆದಿದ್ದಾರೆ. ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಎರಡು ಸ್ಥಾನಗಳ ಏರಿಕೆ ಕಂಡು ಪ್ರಸ್ತುತ 11 ನೇ ಸ್ಥಾನದಲ್ಲಿದ್ದಾರೆ. ಸ್ಮೃತಿ ಅವರಂತೆ ಜೆಮಿಮಾ ರೊಡ್ರಿಗಸ್ ಕೂಡ ಶ್ರೇಯಾಂಕದಲ್ಲಿ ಹಿನ್ನಡೆ ಅನುಭವಿಸಿದ್ದು, ನಾಲ್ಕು ಸ್ಥಾನಗಳು ಕುಸಿದು 14 ನೇ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾ ಆಟಗಾರ್ತಿಯರಿಗೆ ಲಾಭ

ಭಾರತ ವಿರುದ್ಧದ ಎರಡನೇ ಪಂದ್ಯದಲ್ಲಿ ಅದ್ಭುತ ಅರ್ಧಶತಕ ಬಾರಿಸಿದ್ದ ದಕ್ಷಿಣ ಆಫ್ರಿಕಾ ನಾಯಕಿ ಲಾರಾ ವೊಲ್ಫರ್ಟ್ ಐದನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಹಾಗೆಯೇ ಅನ್ನೆರಿ ಡೆರ್ಕ್ಸೆನ್ 18 ಸ್ಥಾನ ಏರಿಕೆಯಾಗಿ 33 ನೇ ಸ್ಥಾನಕ್ಕೆ ತಲುಪಿದ್ದಾರೆ. ಸುನೆ ಲೂಸ್ ಎಂಟು ಸ್ಥಾನ ಏರಿಕೆಯಾಗಿ 35 ನೇ ಸ್ಥಾನಕ್ಕೆ ತಲುಪಿದ್ದಾರೆ.

2026 ರ ಟಿ20 ವಿಶ್ವಕಪ್‌ನಲ್ಲಿ ಮ್ಯಾಚ್ ಫಿಕ್ಸಿಂಗ್..! ತನಿಖೆ ಪ್ರಾರಂಭಿಸಿದ ಐಸಿಸಿ

ದೀಪ್ತಿ-ರೇಣುಕಾಗೆ ಹಿಂಬಡ್ತಿ

ಏತನ್ಮಧ್ಯೆ, ಭಾರತದ ಆಲ್‌ರೌಂಡರ್ ದೀಪ್ತಿ ಶರ್ಮಾ, ವೇಗದ ಬೌಲರ್ ರೇಣುಕಾ ಸಿಂಗ್ ಠಾಕೂರ್ ಮತ್ತು ಅರುಂಧತಿ ರೆಡ್ಡಿ ಬೌಲರ್‌ಗಳ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ದೀಪ್ತಿ ಎರಡು ಸ್ಥಾನ ಕುಸಿದು ಐದನೇ ಸ್ಥಾನಕ್ಕೆ ಇಳಿದರೆ, ರೇಣುಕಾ ನಾಲ್ಕು ಸ್ಥಾನ ಕುಸಿದು ಒಂಬತ್ತನೇ ಸ್ಥಾನಕ್ಕೆ ಜಾರಿದ್ದಾರೆ. ಏತನ್ಮಧ್ಯೆ, ಅರುಂಧತಿ ಮೂರು ಸ್ಥಾನ ಕುಸಿದು ಟಾಪ್ 10 ರಿಂದ ಹೊರಬಿದ್ದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೌತ್‌ವಾಶ್ ಬಳಕೆ ಹೆಚ್ಚಾದರೆ ಹೈ ಬಿಪಿ ಬರುತ್ತಾ? ಸಂಶೋಧನೆಯಲ್ಲಿ ಹೊಸ ವಿಷಯ ಬಹಿರಂಗ – Kannada News | Can Daily Mouthwash Raise Blood Pressure? Study Findings Explained

Can Daily Mouthwash Raise Blood Pressure? Study Findings ExplainedImage Credit source: Getty Images

ಇತ್ತೀಚಿನ ದಿನಗಳಲ್ಲಿ ಬಾಯಿಯ ಸ್ವಚ್ಛತೆಗೆ ಮೌತ್‌ವಾಶ್ (Mouthwash) ಬಳಕೆ ಹೆಚ್ಚಾಗಿದೆ. ವಿಶೇಷವಾಗಿ ಯುವಜನರಲ್ಲಿ ಇದರ ಬಳಕೆ ಟ್ರೆಂಡ್ ಆಗುತ್ತಿದೆ. ಆದರೆ, ಇತ್ತೀಚಿನ ಸಂಶೋಧನೆ ಒಂದು ಅಚ್ಚರಿ ಮೂಡಿಸುವ ಮಾಹಿತಿಯನ್ನು ಹೊರತಂದಿದ್ದು, ಮೌತ್‌ವಾಶ್ ಅತಿಯಾಗಿ ಬಳಸುವುದರಿಂದ ಹೈ ಬ್ಲಡ್ ಪ್ರೆಶರ್ (High Blood Pressure) ಅಪಾಯ ಹೆಚ್ಚಾಗಬಹುದು ಎಂದು ಸೂಚಿಸಿದೆ. ಹೌದು, ಇದು ಆಶ್ಚರ್ಯ ಹುಟ್ಟಿಸಿದರೂ ಸತ್ಯ. ಕೆಲವರಿಗೆ ಮೌತ್‌ವಾಶ್ ಬಳಸುವುದಕ್ಕೆ ತುಂಬಾ ಖುಷಿಯಾಗುತ್ತದೆ. ಎಲ್ಲೇ ಹೋಗುವುದಾದರೂ ಬ್ರಶ್ ಜೊತೆಗೆ ಅದನ್ನು ತೆಗೆದುಕೊಂಡು ಹೋಗುತ್ತಾರೆ. ಅದನ್ನು ಬಳಸಿ ಬಳಸಿ ಅಭ್ಯಾಸವಾಗಿರುತ್ತದೆ. ಆದರೆ ಇದರ ಬಳಕೆಯಿಂದ ಎಷ್ಟೆಲ್ಲಾ ಆರೋಗ್ಯ ಸಮಸ್ಯೆಗಳು ಬರಬಹುದು ಎಂಬುದನ್ನು ಯಾರೂ ಕೂಡ ಊಹಿಸಿರುವುದಿಲ್ಲ. ಹಾಗಾಗಿ ಹೊಸ ಸಂಶೋಧನೆ ಹೇಳುವುದೇನು, ಮೌತ್‌ವಾಶ್ ಬಳಕೆಯಿಂದ ಏನೆಲ್ಲಾ ಆಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಂಶೋಧನೆ ಏನು ಹೇಳುತ್ತದೆ?

ರಾಷ್ಟ್ರೀಯ ವೈದ್ಯಕೀಯ ಗ್ರಂಥಾಲಯದಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ನಮ್ಮ ಬಾಯಿಯಲ್ಲಿ ಹಲವು ಉತ್ತಮ ಬ್ಯಾಕ್ಟೀರಿಯಾಗಳು ಇರುತ್ತವೆ. ಇವು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಉತ್ಪಾದನೆಗೆ ಸಹಾಯ ಮಾಡುತ್ತವೆ. ನೈಟ್ರಿಕ್ ಆಕ್ಸೈಡ್ ರಕ್ತನಾಳಗಳನ್ನು ವಿಶ್ರಾಂತಗೊಳಿಸಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಪ್ರಮುಖ ಪಾತ್ರವಹಿಸುತ್ತದೆ. ಆದರೆ, ಕೆಲವು ಮೌತ್‌ವಾಶ್‌ಗಳಲ್ಲಿ ಇರುವ ಬಲವಾದ ಆಂಟಿಬ್ಯಾಕ್ಟೀರಿಯಲ್ ರಸಾಯನಗಳು ಈ ಉತ್ತಮ ಬ್ಯಾಕ್ಟೀರಿಯಾಗಳನ್ನೂ ನಾಶ ಮಾಡಬಹುದು. ಇದರಿಂದ ನೈಟ್ರಿಕ್ ಆಕ್ಸೈಡ್ ಉತ್ಪಾದನೆ ಕಡಿಮೆಯಾಗಬಹುದು ಮತ್ತು ಹೈ ಬಿಪಿ ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಮೌತ್ ವಾಶ್ ಬಳಸುತ್ತೀರಾ? ಕ್ಯಾನ್ಸರ್ ಬರಬಹುದು ಎಚ್ಚರ

ಎಲ್ಲಾ ಮೌತ್‌ವಾಶ್‌ಗಳು ಹಾನಿಕರವೇ?

ಎಲ್ಲಾ ಮೌತ್‌ವಾಶ್‌ಗಳಿಂದ ಅಪಾಯವಿಲ್ಲ. ಹೆಚ್ಚು ಬಲವಾದ ಆಂಟಿಬ್ಯಾಕ್ಟೀರಿಯಲ್ ಅಂಶಗಳಿರುವ ಮೌತ್‌ವಾಶ್‌ಗಳಿಂದ ಮಾತ್ರ ಸಮಸ್ಯೆ ಉಂಟಾಗಬಹುದು. ಮೃದುವಾದ ಅಥವಾ ಕಡಿಮೆ ರಸಾಯನಗಳಿರುವ ಮೌತ್‌ವಾಶ್‌ಗಳನ್ನು ನಿಯಮಿತವಾಗಿ, ಆದರೆ ಮಿತವಾಗಿ ಬಳಸುವುದು ಸುರಕ್ಷಿತ ಎಂದು ತಜ್ಞರು ತಿಳಿಸಿದ್ದಾರೆ. ವಾರಕ್ಕೆ ಒಂದು ಅಥವಾ ಎರಡು ಬಾರಿ ಮೌತ್‌ವಾಶ್ ಬಳಸುವವರಿಗೆ ಹೆಚ್ಚಿನ ಸಮಸ್ಯೆ ಕಾಣಿಸಿಕೊಳ್ಳುವುದಿಲ್ಲ. ಆದರೆ ದಿನದಲ್ಲಿ ಮೂರು ಅಥವಾ ನಾಲ್ಕು ಬಾರಿ ಬಳಸುವವರು ಹೆಚ್ಚು ಅಪಾಯಕ್ಕೆ ಒಳಗಾಗಬಹುದು. ಇದು ಬಾಯಿಯ ಉತ್ತಮ ಬ್ಯಾಕ್ಟೀರಿಯಾ ನಾಶವಾಗಲು ಕಾರಣವಾಗುತ್ತದೆ.

ಬಾಯಿಯ ಆರೋಗ್ಯ ಕಾಪಾಡಲು ಸರಳ ಸಲಹೆಗಳು:

  • ದಿನಕ್ಕೆ ಎರಡು ಬಾರಿ ಬ್ರಷ್ ಮಾಡುವುದು
  • ಫ್ಲಾಸಿಂಗ್ ಅಭ್ಯಾಸ ಮಾಡುವುದು
  • ವರ್ಷಕ್ಕೆ ಕನಿಷ್ಠ ಒಂದು ಬಾರಿ ಡೆಂಟಲ್ ಚೆಕ್‌ಅಪ್ ಮಾಡಿಸುವುದು
  • ವೈದ್ಯರ ಸಲಹೆಯಂತೆ ಮಾತ್ರ ಮೌತ್‌ವಾಶ್ ಬಳಸುವುದು

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SRH vs DC: ಡೆಲ್ಲಿ ವಿರುದ್ಧ ಅಬ್ಬರಿಸಿದ ಅಭಿಷೇಕ್; ಸ್ಫೋಟಕ ಅರ್ಧಶತಕ – Kannada News | IPL 2026: Abhishek Sharma’s Blazing Fifty Powers SRH vs DC in Hyderabad Clash

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಆರಂಭಿಕ ಅಭಿಷೇಕ್ ಶರ್ಮಾ ಮತ್ತೆ ನೆರವಾಗಿದ್ದಾರೆ. ಬೌಲಿಂಗ್ ಸ್ನೇಹಿ ಪಿಚ್​ನಲ್ಲಿ ನಿಧಾನಗತಿಯ ಆರಂಭ ಪಡೆದುಕೊಂಡ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಈ ಪಂದ್ಯದಲ್ಲಿ ಸನ್‌ರೈಸರ್ಸ್​ಗೆ ಸ್ಫೋಟಕ ಆರಂಭ ಸಿಗಲಿಲ್ಲ. ಮೊದಲ 6 ಓವರ್​ಗಳಲ್ಲಿ ಸನ್‌ರೈಸರ್ಸ್ ತಂಡ 67 ರನ್ ಮಾತ್ರ ಕಲೆಹಾಕಿತು. ಆದರೆ ತಂಡ ಒಂದೇ ಒಂದು ವಿಕೆಟ್ ಕಳೆದುಕೊಂಡಿರಲಿಲ್ಲ. ಆದಾಗ್ಯೂ ಇಲ್ಲಿಂದ ಗೇರ್ ಬದಲಿಸಿದ ಅಭಿಷೇಕ್ 25 ಎಸೆತಗಳಲ್ಲಿ ಈ ಆವೃತ್ತಿಯ ಮೂರನೇ ಅರ್ಧಶತಕವನ್ನು ಪೂರೈಸಿದರು. ಇದರ ಜೊತೆಗೆ ಹೆಡ್ ಅವರೊಂದಿಗೆ ಮೊದಲ ವಿಕೆಟ್​ಗೆ 97 ರನ್​ಗಳ ಜೊತೆಯಾಟವನ್ನು ರಚಿಸಿದರು.

Source link

ಉದ್ಯಮಿಯ ಮನೆಯಿಂದ 220 ಗ್ರಾಂ ಚಿನ್ನ ಕದ್ದ ಐವರು ಪೊಲೀಸ್ ಅಧಿಕಾರಿಗಳು! – Kannada News | 5 police officers stole 220 grams gold from businessman’s house in Indore

ಇಂದೋರ್, ಏಪ್ರಿಲ್ 21: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಳ್ಳರಿಂದ ಜನರನ್ನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಗಳೇ ಕಳ್ಳತನ (Robbery) ಮಾಡಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ನಿವೃತ್ತ ಎಸಿಪಿಯನ್ನು ಒಳಗೊಂಡ ಆಸ್ತಿ ವಿವಾದವನ್ನು ಪರಿಹರಿಸುವ ನೆಪದಲ್ಲಿ ಒಟ್ಟು 5 ಪೊಲೀಸ್ ಅಧಿಕಾರಿಗಳು ತಮ್ಮ ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ರೇಡ್ ಮಾಡುವ ನೆಪದಲ್ಲಿ ಮನೆಯೊಳಗೆ ಬಂದ ಪೊಲೀಸ್ ಅಧಿಕಾರಿಗಳು 220 ಗ್ರಾಂ ಚಿನ್ನ ದೋಚಿದ್ದಾರೆ ಎಂದು ಆ ಉದ್ಯಮಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಗೌರವ್ ಜೈನ್ ಎಂಬ ಉದ್ಯಮಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪೊಲೀಸರು ತಮ್ಮ ಮನೆಯ ಹೊರಗಿನ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿ ಮಾಸ್ಟರ್ ಕೀ ಬಳಸಿ ಮುಖ್ಯ ಬಾಗಿಲನ್ನು ತೆರೆದಿದ್ದಾರೆ ಎಂದು ಅವರು ಹೇಳಿದ್ದಾರೆ. ಪೊಲೀಸರು ತಮ್ಮ ಮನೆಯಿಂದ ಸುಮಾರು 220 ಗ್ರಾಂ ಚಿನ್ನವನ್ನು ಕದ್ದಿದ್ದಾರೆ ಎಂದು ಗೌರವ್ ಜೈನ್ ಆರೋಪಿಸಿದ್ದಾರೆ. ಪೊಲೀಸರನ್ನು ಎಸ್‌ಐ ಸಂಜಯ್ ವಿಷ್ಣೋಯ್, ರಣವೀರ್ ಕುಶ್ವಾ, ಪ್ರಣೀತ್ ಭಡೋರಿಯಾ, ದಿನೇಶ್ ಗುರ್ಜರ್ ಮತ್ತು ದೀಪೇಂದ್ರ ಮಿಶ್ರಾ ಎಂದು ಗುರುತಿಸಲಾಗಿದೆ. ಈ ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿ ನಂತರ ತನ್ನನ್ನು ಗ್ವಾಲಿಯರ್‌ನ ಅತಿಥಿ ಗೃಹದಲ್ಲಿ ನಿವೃತ್ತ ಎಸಿಪಿಗೆ ಸಂಬಂಧಿಸಿದ ಜನರಿಗೆ ಹಸ್ತಾಂತರಿಸಿದ್ದಾರೆ ಎಂದು ಗೌರವ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳದ ತ್ರಿಶೂರ್‌ನಲ್ಲಿ ಪಟಾಕಿಗಳ ಸ್ಫೋಟ; 10 ಜನ ಸಾವು, ಹಲವರಿಗೆ ಗಾಯ

ಪೊಲೀಸರು ಗೌರವ್ ಜೈನ್ ಅವರಿಂದ 27,000 ರೂ. ಹಣವನ್ನು ಸುಲಿಗೆ ಮಾಡಿದ್ದಾರೆ. ಕ್ಯೂಆರ್ ಕೋಡ್ ಮೂಲಕ ಅವರಿದ್ದ ಹೋಟೆಲ್‌ಗೆ 10,000 ರೂ.ಗಳನ್ನು ನೀಡಲಾಗಿದೆ. 17,000 ರೂ.ಗಳನ್ನು ಎಸ್‌ಐ ಮಗನ ಖಾತೆಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿರಿಯ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದರು. ಇದಾದ ಬಳಿಕ ಡಿಸಿಪಿ ಅಮರೇಂದ್ರ ಸಿಂಗ್ ಎಲ್ಲಾ ಐವರು ಅಧಿಕಾರಿಗಳನ್ನು ಅಮಾನತು ಮಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಲ್ಲಿಕಾರ್ಜುನ್ ನಂಬಿ ಮೋಸ ಹೋಗಬೇಡಿ: ಎಚ್ಚರಿಕೆ ನೀಡಿದ ದಿನಕರ್ ತೂಗುದೀಪ – Kannada News | Darshan brother Dinakar Thoogudeepa viral post about Ex Manager Mallikarjun

ಹಲವು ವರ್ಷಗಳ ಕಾಲ ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ (Darshan Ex Manager Mallikarjun) ಇತ್ತೀಚೆಗೆ ದಿಢೀರ್ ಪ್ರತ್ಯಕ್ಷ ಆದರು. ಬಳಿಕ ಅವರು ಸುದ್ದಿಗೋಷ್ಠಿ ನಡೆಸಿ ಹಲವು ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದರು. 7 ವರ್ಷ ತಾವು ಕಾಣೆ ಆಗಿದ್ದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದರು. ಆದರೆ ಈಗ ಮಲ್ಲಿಕಾರ್ಜುನ್ ವಿರುದ್ಧ ದರ್ಶನ್ ಸಹೋದರ ದಿನಕರ್ ತೂಗುದೀಪ (Dinakar Thoogudeepa) ಗುಡುಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಮಲ್ಲಿಕಾರ್ಜುನ್ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಮಲ್ಲಿಕಾರ್ಜುನ್ ಓರ್ವ ವಂಚಕ ಎಂದು ದಿನಕರ್ ತೂಗುದೀಪ ಹೇಳಿದ್ದಾರೆ. ಅವರ ಪೋಸ್ಟ್ ಈ ಕೆಳಗಿನಂತಿದೆ.

‘ಮಲ್ಲಿಕಾರ್ಜುನ್ ಗದಗ ಅಲಿಯಾಸ್ ಚೀಟರ್ ಮಲ್ಲು ಎಂಬ ಫ್ರಾಡ್ ಎಂಟು ವರ್ಷಗಳ ಹಿಂದೆ ನಮಗೂ ಹಣಕಾಸಿನಲ್ಲಿ ಮೋಸ ಮಾಡಿ ನನ್ನ ಹೆಸರನ್ನು, ದರ್ಶನ್ ಅವರ ಹೆಸರನ್ನು ಮತ್ತು ನಮ್ಮ ತೂಗುದೀಪ ಸಂಸ್ಥೆ ಹೆಸರನ್ನು ದುರ್ಬಳಕೆ ಮಾಡಿ, ನಮ್ಮ ಪರಿಚಯದವರ, ಸ್ನೇಹಿತರ ಹಾಗೂ ನಮ್ಮ ಸಂಪರ್ಕದಲ್ಲಿದ್ದ ಅನೇಕ ವ್ಯಕ್ತಿಗಳ ಬಳಿ ಸುಳ್ಳು ಹೇಳಿ ಹಣ ಪಡೆದು ವಂಚಿಸಿ ಪರಾರಿಯಾಗಿದ್ದವನು ಈಗ ದಿಢೀರನೆ ಪ್ರತ್ಯಕ್ಷನಾಗಿ 16-04-2026 ರಂದು ಪತ್ರಿಕಾಗೋಷ್ಠಿ ನಡೆಸಿರುತ್ತಾನೆ.’

‘ಅದರಲ್ಲಿ ಜನರನ್ನು ನಂಬಿಸಲು ತನಗೆ ಬೇಕಾದಂತೆ ಹೇಳಿಕೆ ಕೊಟ್ಟಿರುತ್ತಾನೆ. ತನಗೆ ಏನೇನೆಲ್ಲಾ ಆಯಿತು ಎಂದು ಹೇಳುತ್ತಿರುವ ಈತ ತನ್ನಿಂದ ಯಾರಿಗೆಲ್ಲ ಏನು ಅನಾಹುತ ಆಯಿತು ಎಂದು ಹೇಳಿರುವುದಿಲ್ಲ. ಈತ ಮಹಾ ಮೋಸಗಾರ. ಆ ಪತ್ರಿಕಾಗೋಷ್ಠಿಯಲ್ಲಿ ತನ್ನ ಲಾಭಕ್ಕೆ ತಕ್ಕಂತೆ ಪದೇ ಪದೇ ನಮ್ಮ ತೂಗುದೀಪ ಸಂಸ್ಥೆಯ ಹೆಸರು, ದರ್ಶನ್ ಅವರ ಹೆಸರು ಮತ್ತು ನನ್ನ ಹೆಸರನ್ನು ದುರ್ಬಳಕೆ ಮಾಡಿರುತ್ತಾನೆ.’

ದಿನಕರ್ ತೂಗುದೀಪ ಅವರ ಇನ್​ಸ್ಟಾಗ್ರಾಮ್ ಪೋಸ್ಟ್:

‘ನಮ್ಮ ನಂಬಿಕೆಗೆ ದ್ರೋಹ ಮಾಡಿರುವ ಮೋಸಗಾರ ಇವನು. ಮೋಸ ಮಾಡುವ ಮುನ್ನ ಈತ ಬಳಸುವ ದಾಳವೇ ಸಿಂಪತಿ. ಅದನ್ನು ಪಡೆಯಲು ಈತ ಹೇಳುವುದೇ ಕಟ್ಟು ಕತೆಗಳು. ಇವನನ್ನು ಯಾರೂ ನಂಬಬೇಡಿ. ನಾನಾಗಲಿ, ನಮ್ಮ ತೂಗುದೀಪ ಸಂಸ್ಥೆ, ದರ್ಶನ್ ಅವರು ಯಾರೂ ಈತನನ್ನು ಸೇರಿಸುವುದಿಲ್ಲ. ಈ ನಂಬಿಕೆ ದ್ರೋಹಿಗೂ ನಮಗೂ ಯಾವುದೇ ಸಂಬಂಧವಿರುವುದಿಲ್ಲ.’

ಇದನ್ನೂ ಓದಿ: ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಎಲ್ಲವನ್ನೂ ಹೇಳಿದ ಮಲ್ಲಿಕಾರ್ಜುನ್

‘ಈತ ಎಲ್ಲಾದರೂ ನಮ್ಮ ಒಡನಾಟದ ಬಗ್ಗೆ ಹೇಳಿಕೊಂಡು ಲಾಭ ಮಾಡಲು ಬಂದರೆ ಯಾಮಾರಬೇಡಿ. ದರ್ಶನ್ ಅವರ ಹೆಸರನ್ನು ಬಳಸಿ ದುಡ್ಡು ಮಾಡುವ ಇನ್ನೊಂದು ಹುನ್ನಾರವಷ್ಟೇ. ದಯವಿಟ್ಟು ಯಾರೂ ಇವನ ಮಾತನ್ನು ನಂಬಿ ಮೋಸ ಹೋಗಬೇಡಿ. ಇಂತಿ ನಿಮ್ಮ, ದಿನಕರ್ ತೂಗುದೀಪ’ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಮಲ್ಲಿಕಾರ್ಜುನ್ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗೃಹ ಸಚಿವ ಪರಮೇಶ್ವರ್‌ಗೆ ‘500 ರೂ. ಬೆಟ್ಟಿಂಗ್’ ಸಂಕಷ್ಟ: ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ! – Kannada News | Court Orders FIR Against Karnataka Home Minister Dr. G. Parameshwara for Rs 500 Bet

ಬೆಂಗಳೂರು, ಏ.21: ಗೃಹ ಇಲಾಖೆ ಎಂದರೆ ಅದೊಂದು ಶಿಸ್ತಿನ ಇಲಾಖೆ. ಬೆಟ್ಟಿಂಗ್​​​ಗಳನ್ನು ತಡೆಯಬೇಕಿದ್ದ ಇಲಾಖೆಯ ಸಚಿವರೇ ಬೆಟ್ಟಿಂಗ್ ಮಾಡಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ. ಆದರೆ ನಂಬಲೇಬೇಕು. ಕಬಡ್ಡಿ ಪಂದ್ಯಾವಳಿಯೊಂದರಲ್ಲಿ ಕೇವಲ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದಾಗಿ ಹೇಳಿಕೆ ನೀಡಿದ್ದ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿರುದ್ಧ ಇದೀಗ ಎಫ್‌ಐಆರ್ (FIR) ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ತಾನು ನೀಡಿದ ಹೇಳಿಕೆಯೇ ಈಗ ಅವರಿಗೆ ಸುತ್ತಿಕೊಂಡಿದೆ. ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬಾಜಿ ಕಟ್ಟಿದ್ದರು. ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತು. ಇದರಿಂದಾಗಿ ಬಾಜಿ ಹಣವನ್ನು ಕಳೆದುಕೊಂಡ ಸಚಿವ ಪರಮೇಶ್ವರ್, ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸುವಾಗ ಈ ವಿಷಯವನ್ನು ಸ್ವತಃ ಬಹಿರಂಗಪಡಿಸಿದ್ದರು. ಇದೀಗ ಇದುವೇ ಅವರಿಗೆ ಸಮಸ್ಯೆಯಾಗಿದೆ.

ಏನಿದು ಪ್ರಕರಣ?

ಕೆಲವು ದಿನಗಳ ಹಿಂದೆ ನಡೆದ ಕಬಡ್ಡಿ ಟೂರ್ನಿಯಲ್ಲಿ ಗೃಹ ಸಚಿವರು ಕುತೂಹಲಕ್ಕಾಗಿ ಅಥವಾ ತಮಾಷೆಗಾಗಿ “ಯಾರು ಗೆಲ್ಲುತ್ತಾರೆ ಎಂದು 500 ರೂಪಾಯಿ ಬೆಟ್ಟಿಂಗ್ ಕಟ್ಟೋಣ” ಎಂದು ಹೇಳಿಕೆ ನೀಡಿದ್ದರು. ಆದರೆ, ಸಾರ್ವಜನಿಕವಾಗಿ ಬೆಟ್ಟಿಂಗ್ ಕಟ್ಟುವುದು ಅಥವಾ ಅದನ್ನು ಪ್ರೋತ್ಸಾಹಿಸುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಹೆಚ್.ಆರ್. ನಾಗಭೂಷಣ್ ಎಂಬುವವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆಎಂ (ACJM) ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎನ್. ಶಿವಕುಮಾರ್ ಅವರು ಕೆಲವೊಂದು ಸೂಚನೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಬೆಟ್ಟಿಂಗ್ ಆಡಿ ಸೋತ ಗೃಹ ಸಚಿವ: ವ್ಯಾಪಕ ಟೀಕೆಗೆ ಗುರಿಯಾದ ಪರಮೇಶ್ವರ್!

ಗೃಹ ಸಚಿವರ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು.ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ತುಮಕೂರಿನ ಕೊಡಿಗೇಹಳ್ಳಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಮಾತನಾಡುವುದು ಸರಿಯಲ್ಲ ಎಂಬ ಅಂಶದ ಮೇಲೆ ದೂರು ದಾಖಲಾಗಿದೆ. ಬೆಟ್ಟಿಂಗ್ ಹಣ ಚಿಕ್ಕದಾಗಿದ್ದರೂ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರೇ ಇಂತಹ ಹೇಳಿಕೆ ನೀಡಿರುವುದು ವಿರೋಧ ಪಕ್ಷಗಳಿಗೂ ಆಹಾರವಾಗಿದೆ. ಈಗ ಪೊಲೀಸರು ತಮ್ಮದೇ ಇಲಾಖೆಯ ಮುಖ್ಯಸ್ಥರ ವಿರುದ್ಧ ತನಿಖೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು – ಇಲ್ಲಿದೆ ಸಂಪೂರ್ಣ ವಿವರ – Kannada News | 8th pay commission central govt employees demand rs 69k minimum wage key revisions

ನವದೆಹಲಿ, ಏಪ್ರಿಲ್ 21: ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗಾಗಿ 8ನೇ ವೇತನ ಆಯೋಗಕ್ಕೆ ಬೇಡಿಕೆ ಇಡಲಾಗಿದೆ. ಈ ನಿಟ್ಟಿನಲ್ಲಿ ‘ರಾಷ್ಟ್ರೀಯ ಜಂಟಿ ಸಮಾಲೋಚನಾ ಸಮಿತಿ’ (NCJCM) ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, 7 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಇತ್ತೀಚಿನ ಜ್ಞಾಪನಾ ಪತ್ರದಲ್ಲಿ, ಕೇವಲ ವೇತನ ಏರಿಕೆ ಮಾತ್ರವಲ್ಲದೆ ವೇತನ ಶ್ರೇಣಿಯ ಸ್ವರೂಪವನ್ನೇ ಬದಲಿಸುವಂತಹ ಪ್ರಮುಖ ಬೇಡಿಕೆಗಳನ್ನು ಇಡಲಾಗಿದೆ. ಎನ್​ಸಿಜೆಸಿಎಂ ಸಂಘಟನೆಯು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರನ್ನು ಪ್ರತಿನಿಧಿಸುತ್ತದೆ.

1. ಕನಿಷ್ಠ ವೇತನ 69,000 ರೂ.ಗೆ ಏರಿಕೆ

7ನೇ ವೇತನ ಆಯೋಗದಲ್ಲಿ ಕನಿಷ್ಠ ವೇತನ 18,000 ರೂ. ಇತ್ತು. ಆದರೆ ಈಗಿನ ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಆಧರಿಸಿ, 8ನೇ ವೇತನ ಆಯೋಗದಲ್ಲಿ ಕನಿಷ್ಠ ಮೂಲ ವೇತನವನ್ನು 69,000 ರೂಪಾಯಿಗಳಿಗೆ ನಿಗದಿಪಡಿಸಬೇಕು ಎಂದು NCJCM ಒತ್ತಾಯಿಸಿದೆ.

2. ವಾರ್ಷಿಕ ವೇತನ ಏರಿಕೆ (Increment) ಶೇ. 6ಕ್ಕೆ ಹೆಚ್ಚಳ

ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರಿಗೆ ವಾರ್ಷಿಕವಾಗಿ ಶೇ. 3ರಷ್ಟು ವೇತನ ಏರಿಕೆ (Increment) ನೀಡಲಾಗುತ್ತಿದೆ. ಆದರೆ ನೌಕರರ ಸಂಘಟನೆಯು ಇದನ್ನು ಶೇ. 6ಕ್ಕೆ ಹೆಚ್ಚಿಸಬೇಕು ಎಂದು ಬೇಡಿಕೆ ಇಟ್ಟಿದೆ. ಇದರಿಂದ ನೌಕರರ ವೇತನದ ಬೆಳವಣಿಗೆ ವೇಗವಾಗಿ ನಡೆಯಲಿದೆ.

ಇದನ್ನೂ ಓದಿ: ಬರಲಿದೆ ಆಲ್ಕೋಹಾಲ್ ಆಧಾರಿತ ಸುಂಕ; ಇಲ್ಲಿವೆ ಕರ್ನಾಟಕದ ಪ್ರಸ್ತಾಪಿತ ಹೊಸ ಮದ್ಯ ನೀತಿ ಮುಖ್ಯಾಂಶಗಳು

3. ಪೌಷ್ಟಿಕಾಂಶ ಆಧಾರಿತ ವೇತನ ಲೆಕ್ಕಾಚಾರ (Nutrition Linked Calculation)

ನೌಕರರ ಕನಿಷ್ಠ ವೇತನವನ್ನು ಕೇವಲ ಅಂದಾಜಿನ ಮೇಲೆ ನಿರ್ಧರಿಸಬಾರದು. ‘ಅಯಕ್ರೋಯ್ಡ್ ಫಾರ್ಮುಲಾ’ (Aykroyd Formula) ಅನ್ವಯ, ಒಬ್ಬ ನೌಕರನ ಕುಟುಂಬಕ್ಕೆ ಅಗತ್ಯವಿರುವ ಪೌಷ್ಟಿಕ ಆಹಾರ, ಬಟ್ಟೆ, ಮನೆ ಬಾಡಿಗೆ ಮತ್ತು ಇತರೆ ಅಗತ್ಯಗಳನ್ನು ಇಂದಿನ ಮಾರುಕಟ್ಟೆ ಬೆಲೆಗೆ ಅನುಗುಣವಾಗಿ ಲೆಕ್ಕ ಹಾಕಿ, ಕನಿಷ್ಠ ವೇತನವನ್ನು 69,000 ರೂ. ಗೆ ನಿಗದಿಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

4. ಫಿಟ್‌ಮೆಂಟ್ ಫ್ಯಾಕ್ಟರ್ 3.833

ವೇತನವನ್ನು ಮಲ್ಟಿಪ್ಲೈ ಮಾಡಲು ಬಳಸುವ ಫಿಟ್‌ಮೆಂಟ್ ಫ್ಯಾಕ್ಟರ್ ಅನ್ನು 3.833 ಕ್ಕೆ ನಿಗದಿಪಡಿಸಬೇಕು. ಇದು ಜಾರಿಯಾದಲ್ಲಿ ಮೂಲ ವೇತನದಲ್ಲಿ ಭಾರಿ ಜಿಗಿತ ಕಂಡುಬರಲಿದೆ.

5. ಪೇ ಲೆವೆಲ್‌ಗಳ ವಿಲೀನ (Merging of Pay Levels)

7ನೇ ವೇತನ ಆಯೋಗದಲ್ಲಿರುವ ಕೆಲವು ಕೆಳಹಂತದ ಪೇ ಲೆವೆಲ್‌ಗಳನ್ನು (Pay Levels 1, 2, and 3) ವಿಲೀನಗೊಳಿಸಲು ಪ್ರಸ್ತಾಪಿಸಲಾಗಿದೆ. 4 ಮತ್ತು 5ನೇ ಲೆವೆಲ್ ಅನ್ನು ಲೆವೆಲ್ 5ಕ್ಕೆ ವಿಲೀನಗೊಳಿಸಬೇಕು. 9 ಮತ್ತು 10 ಅನ್ನು 10ಕ್ಕೆ ಸೇರಿಸಬೇಕು. ಲೆವೆಲ್ 5ರ ಉದ್ಯೋಗಿಗಳ ಪೇ ಲೆವೆಲ್ ಅನ್ನು 6ಕ್ಕೆ ಅಪ್​​ಗ್ರೇಡ್ ಮಾಡಬೇಕು ಎನ್ನುವ ಒತ್ತಾಯ ಇದೆ.

6. 10 ವರ್ಷಗಳ ಕಾಯುವಿಕೆ ಬೇಡ (Periodical Revision)

ಮುಂದಿನ ವೇತನ ಪರಿಷ್ಕರಣೆಗಾಗಿ ಮತ್ತೆ 10 ವರ್ಷ ಕಾಯುವ ಅಗತ್ಯವಿರಬಾರದು. ತುಟ್ಟಿಭತ್ಯೆ (DA) ಶೇ. 50 ದಾಟಿದಾಗ ಅಥವಾ ಕಾಲಕಾಲಕ್ಕೆ ಮಾರುಕಟ್ಟೆ ಏರಿಳಿತಕ್ಕೆ ಅನುಗುಣವಾಗಿ ವೇತನವನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆ ಬರಬೇಕು.

7. ನಿವೃತ್ತರಿಗೂ ಸಮಾನ ವೇತನ ಪರಿಷ್ಕರಣೆ (Pension Parity)

ಸೇವೆಯಲ್ಲಿರುವ ನೌಕರರ ವೇತನ ಎಷ್ಟು ಹೆಚ್ಚಾಗುತ್ತದೆಯೋ, ಅದೇ ಅನುಪಾತದಲ್ಲಿ ನಿವೃತ್ತ ನೌಕರರ ಪಿಂಚಣಿಯೂ ಸಹ ಪರಿಷ್ಕರಣೆಯಾಗಬೇಕು ಎಂಬ ‘ಒಂದು ಶ್ರೇಣಿ ಒಂದು ಪಿಂಚಣಿ’ ಮಾದರಿಯ ಬೇಡಿಕೆಯನ್ನು ಬಲವಾಗಿ ಮಂಡಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ಟೆಕ್ಕಿಯ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ ರಾದ್ದಾಂತ; ಬ್ಲ್ಯಾಕ್​ಮೈಲ್, ಆತ್ಮಹತ್ಯೆ ಬೆದರಿಕೆ, ಅಶ್ಲೀಲ ಚಿತ್ರಗಳ ಕರ್ಮಕಾಂಡ

ಈ ಅಂಶಗಳು ಜಾರಿಯಾದಲ್ಲಿ ಕೇಂದ್ರ ಸರ್ಕಾರಿ ನೌಕರರ ಆರ್ಥಿಕ ಸ್ಥಿತಿಯಲ್ಲಿ ಅಭೂತಪೂರ್ವ ಬದಲಾವಣೆ ಉಂಟಾಗಲಿದೆ. ಸದ್ಯಕ್ಕೆ ಈ ಎಲ್ಲಾ ಅಂಶಗಳು ಸಂಘಟನೆಯ ಬೇಡಿಕೆಗಳಾಗಿದ್ದು, ಸರ್ಕಾರದ ಅಧಿಕೃತ ಪ್ರತಿಕ್ರಿಯೆಗಾಗಿ ನೌಕರರು ಕಾಯುತ್ತಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್’ ಗೆದ್ದರೂ ರಣವೀರ್ ಸಿಂಗ್ ‘ಶಕ್ತಿಮಾನ್’ ಆಗಲು ಸಾಧ್ಯವಿಲ್ಲ: ಕಾರಣ ಏನು? – Kannada News | Mukesh Khanna on why Ranveer Singh is not right for Shaktimaan Movie

ಭಾರತದ ಮೊದಲ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಕಥೆಯನ್ನು ಬೆಳ್ಳಿತೆರೆಗೆ ತರುವ ಪ್ಲ್ಯಾನ್ ಇದೆ. ಆದರೆ, ಈ ಪಾತ್ರಕ್ಕೆ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರನ್ನು ಆಯ್ಕೆ ಮಾಡುವ ವಿಚಾರದಲ್ಲಿ ಕಿರುತೆರೆಯ ಶಕ್ತಿಮಾನ್ ನಟ ಮುಖೇಶ್ ಖನ್ನಾ Mukesh Khanna ಅವರು ಸಹಮತಿ ಸೂಚಿಸುತ್ತಿಲ್ಲ. ರಣವೀರ್ ಎಷ್ಟೇ ದೊಡ್ಡ ನಟನಾಗಿದ್ದರೂ ಅವರು ಶಕ್ತಿಮಾನ್ ಪಾತ್ರಕ್ಕೆ ಸೂಕ್ತವಲ್ಲ ಎಂದು ಮುಖೇಶ್ ಖನ್ನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ರಣವೀರ್ ಸಿಂಗ್ (Ranveer Singh) ಅವರ ನಟನಾ ಸಾಮರ್ಥ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೂ, ಪಾತ್ರದ ಘನತೆಯ ವಿಚಾರದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಲು ಸಿದ್ಧರಿಲ್ಲ ಎಂದು ಹೇಳಿದ್ದಾರೆ.

ರಣವೀರ್ ಸಿಂಗ್ ಅವರ ಇತ್ತೀಚಿನ ಯಶಸ್ವಿ ಚಿತ್ರಗಳಾದ ‘ಧುರಂಧರ್’ ಮತ್ತು ‘ಧುರಂಧರ್ 2’ ಬಗ್ಗೆ ಮಾತನಾಡಿದ ಖನ್ನಾ, ‘ಅವರು ಅದ್ಭುತ ಶಕ್ತಿಯುಳ್ಳ ನಟ. ಅವರು ಧುರಂಧರ್, ಗಲ್ಲಿ ಬಾಯ್ ಅಥವಾ ಖಿಲ್ಜಿಯಂತಹ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಬಲ್ಲರು. ಆದರೆ ಶಕ್ತಿಮಾನ್ ಪಾತ್ರಕ್ಕೆ ಕೇವಲ ನಟನೆಯಷ್ಟೇ ಸಾಲದು, ಆ ಪಾತ್ರಕ್ಕೆ ಒಪ್ಪುವ ಮುಖವೂ ಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಅಕ್ಷಯ್ ಕುಮಾರ್ ಅವರು ಪೃಥ್ವಿರಾಜ್ ಚೌಹಾಣ್ ಪಾತ್ರ ಮಾಡಿದರು. ಎಷ್ಟೇ ಕಾಸ್ಟ್ಯೂಮ್ ಮತ್ತು ವಿಗ್ ಹಾಕಿದರೂ ಅವರು ಆ ಪಾತ್ರದಂತೆ ಕಾಣಲಿಲ್ಲ. ಐತಿಹಾಸಿಕ ಅಥವಾ ಪೌರಾಣಿಕ ಪಾತ್ರಗಳಿಗೆ ಒಂದು ರೀತಿಯ ಸರಳತೆ ಮತ್ತು ಗಾಂಭೀರ್ಯ ಬೇಕು. ಅದು ರಣವೀರ್ ಅವರ ಇಮೇಜ್‌ಗೆ ಹೊಂದಿಕೆಯಾಗುವುದಿಲ್ಲ’ ಎಂದು ಮುಖೇಶ್ ಖನ್ನಾ ಅವರು ಹೇಳಿದ್ದಾರೆ.

ಸೋನಿ ಪಿಕ್ಚರ್ಸ್ ಈ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ನಿರ್ಮಾಣ ಮಾಡಲು ಉತ್ಸುಕವಾಗಿದ್ದು, ರಣವೀರ್ ಅವರನ್ನೇ ನಾಯಕನನ್ನಾಗಿ ಮಾಡಲು ಬಯಸಿದೆ. ‘ಸೋನಿ ಸಂಸ್ಥೆ ನನಗೆ ಕೋಟಿಗಟ್ಟಲೆ ಹಣ ನೀಡಲು ಸಿದ್ಧವಿದೆ. ಈ ಪ್ರಾಜೆಕ್ಟ್ ತಡೆಹಿಡಿಯುತ್ತಿರುವುದರಿಂದ ನನಗೂ ಆರ್ಥಿಕವಾಗಿ ನಷ್ಟವಾಗುತ್ತಿದೆ. ಆದರೆ ನನಗೆ ಹಣಕ್ಕಿಂತ ಪಾತ್ರದ ಗುಣಮಟ್ಟ ಮುಖ್ಯ. ನನಗೆ ಸ್ಟಾರ್ ನಟ ಬೇಡ, ದೇಶಾದ್ಯಂತ ಆಡಿಷನ್ ನಡೆಸಿ, ಶಕ್ತಿಮಾನ್‌ನಂತಹ ಮುಗ್ಧತೆ ಮತ್ತು ಶಕ್ತಿ ಇರುವ ಹೊಸ ಮುಖವನ್ನು ಹುಡುಕಲು ನಾನು ಸಿದ್ಧನಿದ್ದೇನೆ’ ಎಂದು ಮುಖೇಶ್ ಖನ್ನಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಂಬಾನಿ ಮಗನ ಹುಟ್ಟುಹಬ್ಬದ ಪಾರ್ಟಿ: ಕುಣಿದು ಕುಪ್ಪಳಿಸಿದ ನಟ ರಣವೀರ್ ಸಿಂಗ್

ಒಮ್ಮೆ ಸೋನಿ ಸಂಸ್ಥೆಯು ರಣವೀರ್ ಮತ್ತು ಮುಖೇಶ್ ಖನ್ನಾ ನಡುವೆ ಮೀಟಿಂಗ್ ಏರ್ಪಡಿಸಿತ್ತು. ರಣವೀರ್ ಅವರು ಮುಖೇಶ್ ಖನ್ನಾ ಅವರನ್ನು ಒಪ್ಪಿಸಲು ಪ್ರಯತ್ನಿಸಿದ್ದರು. ಆದರೆ ಖನ್ನಾ ಮಾತ್ರ ಒಪ್ಪಿಕೊಳ್ಳಲೇ ಇಲ್ಲ. ಬದಲಿಗೆ, ‘ನಿನಗೆ ಶಕ್ತಿಮಾನ್ ಆಗಲು ಇಷ್ಟವಿದ್ದರೆ, ಅದರ ಬದಲು ವಿಲನ್ ತಾಮ್ರಾಜ್ ಕಿಲ್ವಿಶ್ ಪಾತ್ರ ಮಾಡು’ ಎಂದು ರಣವೀರ್‌ಗೆ ಸಲಹೆ ನೀಡಿದ್ದರಂತೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Chanakya Niti: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ ಜೀವನದಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದಿದ್ದಾರೆ ಚಾಣಕ್ಯ – Kannada News | Chanakya Niti: If you have these habits, you will never be successful in life

ಜೀವನದಲ್ಲಿ ಮುಂದುವರೆಯಬೇಕು, ಯಶಸ್ಸನ್ನು (success) ಗಳಿಸಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಈ ಕೆಲವೊಂದು ಅಭ್ಯಾಸಗಳನ್ನು ಹೊಂದಿರುವವರು ಖಂಡಿತವಾಗಿಯೂ ಜೀವನದಲ್ಲಿ ಜಯಿಸುವುದಿಲ್ಲ, ಅವರಿಗೆ ಸೋಲು ಖಚಿತ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ನಿಮ್ಮಲೂ ಕೂಡ ಈ ಅಭ್ಯಾಸಗಳಿರಬಹುದು, ಆ ತಪ್ಪು ಅಭ್ಯಾಸಗಳನ್ನು ಸರಿಪಡಿಸಿದರೆ ಖಂಡಿತವಾಗಿಯೂ ನೀವು ಸಹ ಜೀವನದಲ್ಲಿ ಮುಂದುವರೆಯಬಹುದು. ಹಾಗಿದ್ರೆ ಯಶಸ್ಸಿಗೆ ಅಡ್ಡಿಪಡಿಸುವ, ಸೋಲುಣಿಸುವ ಆ ಅಭ್ಯಾಸಗಳು ಯಾವುವು  ಎಂಬುದನ್ನು ನೋಡೋಣ ಬನ್ನಿ.

ಈ ಅಭ್ಯಾಸಗಳಿದ್ದರೆ ಜೀವನದಲ್ಲಿ ಯಶಸ್ಸು ಸಿಗಲಾರದು:

ಸಮಯವನ್ನು ವ್ಯರ್ಥ ಮಾಡುವುದು: ಸಮಯಕ್ಕಿಂತ ಅಮೂಲ್ಯವಾದದ್ದು ಯಾವುದೂ ಇಲ್ಲ ಎಂದು ಚಾಣಕ್ಯರು ಹೇಳುತ್ತಾರೆ. ಸಮಯಕ್ಕೆ ಸರಿಯಾಗಿ ಕೆಲಸವನ್ನು ಮಾಡದೆ ಅದನ್ನು ನಾಳೆಗೆ ಮುಂದೂಡುವ ಅಭ್ಯಾಸವನ್ನು ಬೆಳೆಸಿಕೊಂಡಿರುವ ವ್ಯಕ್ತಿಯು ಕ್ರಮೇಣ ತನ್ನ ಗುರಿಗಳನ್ನು ಮರೆತುಬಿಡುತ್ತಾನೆ. ಇಂದಿನ ಕೆಲಸಗಳನ್ನು ನಾಳೆಗೆ ಮುಂದೂಡುವುದರಿಂದ ಉತ್ಪಾದಕತೆ ಕಡಿಮೆಯಾಗುವುದಲ್ಲದೆ ಯಶಸ್ಸಿನ ಹಾದಿಯೂ ಜಟಿಲವಾಗುತ್ತದೆ. ಆದ್ದರಿಂದ, ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದು ಮತ್ತು ಸಮಯದ ಮೌಲ್ಯವನ್ನು ಕಲಿಯುವುದು ಬಹಳ ಮುಖ್ಯ.

ಸಂಬಂಧಗಳನ್ನು ನಿರ್ಲಕ್ಷಿಸುವುದು: ಕುಟುಂಬ ಮತ್ತು ಸ್ನೇಹಿತರು ಜೀವನದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಹಾಗಾಗಿ ಸಂಬಂದವು ಜೀವನದಲ್ಲಿ ತುಂಬಾನೇ ಮುಖ್ಯ.  ಚಾಣಕ್ಯ ನೀತಿಯ ಪ್ರಕಾರ, ಯಾರೂ ಒಬ್ಬಂಟಿಯಾಗಿ ಸಂತೋಷವಾಗಿರಲು ಸಾಧ್ಯವಿಲ್ಲ. ನಿಮ್ಮ ನಿಕಟ ಸಂಬಂಧಗಳಿಗೆ ನೀವು ಸಮಯ ನೀಡದಿದ್ದರೆ, ಕಷ್ಟದ ಸಮಯದಲ್ಲಿ ನೀವು ಒಂಟಿಯಾಗಿರುತ್ತೀರಿ. ಆದ್ದರಿಂದ, ನಿಮ್ಮ ಪ್ರೀತಿಪಾತ್ರರ ಜೊತೆ ಸಮಯ ಕಳೆಯುವುದು ಮತ್ತು ಬಲವಾದ ಸಂಬಂಧಗಳನ್ನು ಕಾಪಾಡಿಕೊಳ್ಳುವುದು ಮುಖ್ಯ.

ಇದನ್ನೂ ಓದಿ: ಮಹಿಳೆಯರು ರೀತಿಯ ಜನರಿಂದ ಸಾಧ್ಯವಾದಷ್ಟು ದೂರವಿರಬೇಕು ಎನ್ನುತ್ತಾರೆ ಚಾಣಕ್ಯ

ಕಲಿಕೆಯನ್ನು ನಿಲ್ಲಿಸುವುದು: ಒಬ್ಬ ವ್ಯಕ್ತಿಯು ಕಲಿಯುವುದನ್ನು ನಿಲ್ಲಿಸಿದ ದಿನ ಅವನ ಪ್ರಗತಿ ನಿಲ್ಲುತ್ತದೆ ಎಂದು ಚಾಣಕ್ಯ ಹೇಳುತ್ತಾರೆ. ಯಾವುದೇ ಕಠಿಣ ಪರಿಸ್ಥಿತಿಯನ್ನು ನಿವಾರಿಸಲು ನಿಮಗೆ ಸಹಾಯ ಮಾಡುವ ಏಕೈಕ ಶಕ್ತಿ ಜ್ಞಾನ. ಜೀವನದಲ್ಲಿ ಯಾವಾಗಲೂ ಹೊಸ ವಿಷಯಗಳನ್ನು ಕಲಿಯುವ ಬಯಕೆಯನ್ನು ಕಾಪಾಡಿಕೊಳ್ಳಿ ಮತ್ತು ಇತರರ ಅನುಭವಗಳಿಂದ ಕಲಿಯಲು ಪ್ರಯತ್ನಿಸಿ. ಆಗ ಮಾತ್ರ ಯಶಸ್ಸಿನ ಹಾದಿಯನ್ನು ತಲುಪಲು ಸಾಧ್ಯ, ಇಲ್ಲದಿದ್ದರೆ ಸೋಲು ಕಟ್ಟಿಟ್ಟ ಬುತ್ತಿ.

ಆರೋಗ್ಯವನ್ನು ಕಡೆಗಣಿಸುವುದು:  ಯಶಸ್ಸು ಮತ್ತು ಶ್ರೀಮಂತಿಕೆ ಗಳಿಸುವ ಧಾವಂತದಲ್ಲಿ ಅನೇಕ ಜನರು ಹೆಚ್ಚಾಗಿ ತಮ್ಮ ಆರೋಗ್ಯವನ್ನು ನಿರ್ಲಕ್ಷಿಸುತ್ತಾರೆ. ಚಾಣಕ್ಯರ ಪ್ರಕಾರ, ಇದು ಜೀವನಕ್ಕೆ ಅಡ್ಡಿಯಾಗುವ ಗಂಭೀರ ತಪ್ಪು. ನಿಮ್ಮ ಆರೋಗ್ಯ ಕೆಟ್ಟದಾಗಿದ್ದರೆ, ನಿಮ್ಮ ಸಾಧನೆಗಳನ್ನು ಆನಂದಿಸಲು ಅಥವಾ ಜೀವನದಲ್ಲಿ ಮುಂದುವರಿಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ಕೆಲಸದ ಜೊತೆಗೆ, ನೀವು ನಿಮ್ಮ ಆರೋಗ್ಯದ ಬಗ್ಗೆಯೂ ಸಂಪೂರ್ಣ ಕಾಳಜಿ ವಹಿಸಬೇಕು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version