ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆಯ ವಿಚಾರಣೆ ವೇಳೆ ಬಯಲಾಯ್ತು ಸ್ಫೋಟಕ ವಿಚಾರ! ಅಸಲಿಗೆ ಆಗಿದ್ದೇನು ಗೊತ್ತೇ? – Kannada News | Bengaluru Love Tragedy: Girl Planned end life After Burning Boyfriend Alive in Byadarahalli; Stunning Details Emerge

ಮೃತ ಕಿರಣ್‌ (ಎಡಚಿತ್ರ) ಹಾಗೂ ಆರೋಪಿImage Credit source: tv9

ಬೆಂಗಳೂರು, ಏಪ್ರಿಲ್ 22: ಬೆಂಗಳೂರಿನ (Bengaluru) ಬ್ಯಾಡರಹಳ್ಳಿಯಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನನ್ನೇ ಜೀವಂತ ದಹನ ಮಾಡಿದ (Byadarahalli Murder Case) ಭೀಕರ ಘಟನೆಗೆ ಸಂಬಂಧಿಸಿದಂತೆ ಈಗ ಮತ್ತಷ್ಟು ಆಘಾತಕಾರಿ ವಿಚಾರಗಳು ಬಯಲಾಗಿವೆ. ಪ್ರಿಯಕರ ಕಿರಣ್‌ನನ್ನು ಕೊಲೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಆರೋಪಿ ಪ್ರೇಮಾ ಸ್ಕೆಚ್ ಹಾಕಿದ್ದಳು ಎಂಬ ಸ್ಫೋಟಕ ವಿಚಾರ ಪೊಲೀಸ್ ವಿಚಾರಣೆ ವೇಳೆ ಬಯಲಾಗಿದೆ. ಅಲ್ಲದೆ, ಅದಕ್ಕಾಗಿ ಏನೇನು ಸಿದ್ಧತೆ ಮಾಡಿಕೊಂಡಿದ್ದಳು ಎಂಬುದೂ ಗೊತ್ತಾಗಿದೆ.

ಸಾವಿಗೆ ಶರಣಾಗಲು ಮಾಡಿಕೊಂಡಿದ್ದಳು ಸಕಲ ಸಿದ್ಧತೆ!

ಪ್ರಿಯಕರ ಕಿರಣ್‌ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಬಳಿಕ ಪ್ರೇಮಾ ಕೂಡ ಅದೇ ಬೆಂಕಿಯಲ್ಲಿ ಆಹುತಿಯಾಗಲು ನಿರ್ಧರಿಸಿದ್ದಳು. ಒಂದು ವೇಳೆ ಬೆಂಕಿಯಿಂದ ಬದುಕುಳಿದರೆ ಆತ್ಮಹತ್ಯೆ ಮಾಡಿಕೊಳ್ಳಲು ರೂಮಿನಲ್ಲಿ ವಿಷದ ಬಾಟಲಿ ಹಾಗೂ ಮಾತ್ರೆಗಳನ್ನು ಸಿದ್ಧಪಡಿಸಿಟ್ಟುಕೊಂಡಿದ್ದಳು. ಆದರೆ, ಕಿರಣ್ ಬೆಂಕಿಯಲ್ಲಿ ನರಳುತ್ತಾ ಕಿರುಚಾಡುತ್ತಿದ್ದಾಗ ಬೆಂಕಿಯ ತೀವ್ರತೆ ಹೆಚ್ಚಾದ ಕಾರಣ ಪ್ರೇಮಾ ಭಯಬಿದ್ದು ಹೊರಕ್ಕೆ ಓಡಿ ಬಂದಿದ್ದಾಳೆ. ಅರೆಬರೆ ಬಟ್ಟೆಯಲ್ಲಿದ್ದ ಆಕೆಯನ್ನು ಕಂಡು ಪಕ್ಕದ ಮನೆಯ ಮಹಿಳೆ ಮಾನವೀಯತೆಯ ದೃಷ್ಟಿಯಿಂದ ಬಟ್ಟೆ ನೀಡಿ ರಕ್ಷಿಸಿದ್ದರು.

ಕೊಲೆಗೆ ಪ್ರಚೋದನೆ ನೀಡಿದ್ದು ‘ಮಾಜಿ ಲವರ್’ ಫೋಟೋ!

ಕಳೆದ ನಾಲ್ಕು ವರ್ಷಗಳಿಂದ ಪರಿಚಿತರಾಗಿದ್ದ ಕಿರಣ್ ಮತ್ತು ಪ್ರೇಮಾ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಕಿರಣ್, ಪ್ರೇಮಾಳನ್ನು ಕಡೆಗಣಿಸಿ ತನ್ನ ಹಳೆಯ ಪ್ರಿಯತಮೆಯ ಜೊತೆ ಮತ್ತೆ ಸಂಪರ್ಕದಲ್ಲಿದ್ದ. ಮಾಜಿ ಪ್ರಿಯತಮೆಯ ಹುಟ್ಟುಹಬ್ಬವನ್ನು ಆಚರಿಸಿ ಕಿರಣ್ ಫೋಟೋಗಳನ್ನು ತೆಗೆಸಿಕೊಂಡಿದ್ದ. ಇದನ್ನು ಕಂಡು ಆಕ್ರೋಶಗೊಂಡ ಪ್ರೇಮಾ ಕಿರಣ್ ಜೊತೆ ಜಗಳವಾಡಿದ್ದಳು. ಕಿರಣ್ ಆಕೆಯ ನಂಬರ್ ಬ್ಲಾಕ್ ಮಾಡಿದ್ದರಿಂದ ಸೇಡು ಮತ್ತಷ್ಟು ಹೆಚ್ಚಾಗಿತ್ತು.

ಆನ್‌ಲೈನ್‌ನಲ್ಲಿ ಹ್ಯಾಂಡ್‌ಕಪ್ ಖರೀದಿ

‘ನೀನು ಹೇಳಿದ ದಿನವೇ ನಾವು ಮದುವೆಯಾಗೋಣ’ ಎಂದು ನಂಬಿಸಿ ಕಿರಣ್‌ನನ್ನು ಪ್ರೇಮಾ ತನ್ನ ಮನೆಗೆ ಕರೆಸಿಕೊಂಡಿದ್ದಳು. ಕೇವಲ ಎರಡು ದಿನಗಳಲ್ಲಿ ಕೊಲೆಗೆ ಬೇಕಾದ ಸಕಲ ಸಿದ್ಧತೆ ಮಾಡಿಕೊಂಡಿದ್ದ ಈಕೆ, ಆನ್‌ಲೈನ್‌ನಲ್ಲಿ ಹ್ಯಾಂಡ್‌ಕಪ್ (ಕೈಕೋಳ) ಬೆಲ್ಟ್ ಖರೀದಿಸಿದ್ದಳು ಎನ್ನಲಾಗಿದೆ. ಸದ್ಯ ಬ್ಯಾಡರಹಳ್ಳಿ ಪೊಲೀಸರು ಪ್ರೇಮಾಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಈ ಕೃತ್ಯದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ‘ಫಾರಿನ್ ಸ್ಟೈಲ್’ ಪ್ರಪೋಸ್ ಮಾಡ್ತೀನಿ ಅಂತ ಕೈ-ಕಾಲು ಕಟ್ಟಿ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ! ಕಣ್ಣೆದುರೇ ಸುಟ್ಟು ಕರಕಲಾದ ಯುವಕ

ಆರಂಭದಲ್ಲಿ, ಕಿರಣ್ ತಾನೇ ಬೆಂಕಿ ಹಚ್ಚಿಕೊಂಡಿದ್ದಾನೆ ಎನ್ನಲಾಗಿತ್ತು. ಆದರೆ ಪೊಲೀಸರ ತನಿಖೆಯಲ್ಲಿ ಪ್ರೇಮಾಳೇ ಕೈಕಾಲು ಕಟ್ಟಿ ಆತನಿಗೆ ಬೆಂಕಿ ಹಚ್ಚಿದ್ದು ದೃಢಪಟ್ಟಿದೆ. ಪ್ರೀತಿಯಲ್ಲಿ ಉಂಟಾದ ಬಿರುಕು ಮತ್ತು ಕಿರಣ್ ಮತ್ತೊಬ್ಬ ಯುವತಿಯ ಜೊತೆ ಸಂಬಂಧ ಹೊಂದಿದ್ದೇ ಈ ಕಗ್ಗೊಲೆಗೆ ಮೂಲ ಕಾರಣ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ ವರದಿ: ಕಾದ ಕೆಂಡದಂತಾಗಿದ್ದ ಕರಾವಳಿಯಲ್ಲಿ ಇಂದು ವರ್ಷಧಾರೆ! – Kannada News | Karnataka Weather Forecast: Thunderstorm all over Karnataka

ಕಾದ ಕೆಂಡದಂತಾಗಿದ್ದ ರಾಜ್ಯಕ್ಕಿಂದು ವರ್ಷಧಾರೆ!

ಬೆಂಗಳೂರು, ಏಪ್ರಿಲ್ 22: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ  (Karnataka Weather)   ಹೆಚ್ಚಾಗಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದೆ. ಆದರೆ ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಗುಡುಗು ಸಹಿತ ಮಳೆ

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 23ರವರೆಗೂ ಇದೇ ವಾತಾವರಣವಿರಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ ಎನ್ನಲಾಗಿದೆ. ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಹಾವೇರಿ ಮತ್ತು ಧಾರವಾಡ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುಡುವ ಬಿಸಿಲಿನ ನಡುವೆ ಎಲ್ ನಿನೋ ಆತಂಕ: ಮುಂಗಾರು ಮಳೆಗೆ ಕಂಟಕ, ದೇಶಾದ್ಯಂತ ಬರಗಾಲದ ಭೀತಿ! – Kannada News | El Nino Threat in Karnataka, India: IMD Warns of Drought and Monsoon Failure Amid Rising Temperatures

ಬೆಂಗಳೂರು, ಏಪ್ರಿಲ್ 22: ಕರ್ನಾಟಕದಲ್ಲಿ (Karnataka) ಸೂರ್ಯನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಮಯದಲ್ಲಿ ಹವಾಮಾನ ಇಲಾಖೆಯು ‘ಎಲ್ ನಿನೋ (El Nino)’ ಸುಳಿವು ನೀಡಿದ್ದು, ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಪೆಸಿಫಿಕ್ ಸಾಗರದ ಉಷ್ಣಾಂಶದಲ್ಲಿನ ಏರಿಕೆಯಿಂದ ಉಂಟಾಗುವ ಈ ಹವಾಮಾನ ವೈಪರೀತ್ಯವು ಭಾರತದ ಮುಂಗಾರು ಮಳೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಎಲ್ ನಿನೋ ಎಂದರೇನು?

ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣಾಂಶವು ವಾಡಿಕೆಗಿಂತ ಹೆಚ್ಚಾಗುವುದನ್ನೇ ‘ಎಲ್ ನಿನೋ’ ಎನ್ನಲಾಗುತ್ತದೆ. ಇದರಿಂದ ವಾತಾವರಣದಲ್ಲಿನ ತೇವಾಂಶ ಕಡಿಮೆಯಾಗಿ ಗಾಳಿಯ ದಿಕ್ಕು ಬದಲಾಗುತ್ತದೆ. ಇದರ ನೇರ ಪರಿಣಾಮ ನೈಋತ್ಯ ಮುಂಗಾರು ಮಳೆಯ ಮೇಲೆ ಉಂಟಾಗಲಿದ್ದು, ಮಳೆಯ ಪ್ರಮಾಣ ಗಣನೀಯವಾಗಿ ಕುಸಿಯುವ ಸಾಧ್ಯತೆಯಿದೆ. ಮಳೆ ಕಡಿಮೆಯಾದರೆ ಉಷ್ಣಾಂಶ ಮತ್ತಷ್ಟು ಹೆಚ್ಚಾಗಿ ತೀವ್ರ ಬರಗಾಲದಂತಹ ಪರಿಸ್ಥಿತಿ ನಿರ್ಮಾಣವಾಗಬಹುದು.

ಕೃಷಿ ಮತ್ತು ಆರ್ಥಿಕತೆಗೆ ಪೆಟ್ಟು

ಮುಂಗಾರು ಮಳೆ ಕುಂಠಿತಗೊಂಡರೆ ಭಾರತದ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಇಳಿಕೆಯಾಗಲಿದೆ. ಇದು ಆಹಾರ ಭದ್ರತೆಗೆ ಧಕ್ಕೆ ತರುವುದಲ್ಲದೆ, ಮಾರುಕಟ್ಟೆಯಲ್ಲಿ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಲಿದೆ. ಈಗಾಗಲೇ ಮಹಾರಾಷ್ಟ್ರ ಸರ್ಕಾರ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದೆ.

ಶಾಲೆಗಳಿಗೆ ರಜೆ, ಸಮಯ ಬದಲಾವಣೆ

ಒಡಿಶಾದ ತಿಟ್ಲಾಘರ್​ನಲ್ಲಿ 42.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಒಡಿಶಾದ 9 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಶಾಲಾ ಸಮಯವನ್ನು ಬದಲಿಸಲಾಗಿದ್ದು, ಬೆಳಗ್ಗೆ 7:30 ರಿಂದ ಮಧ್ಯಾಹ್ನ 1:30 ರವರೆಗೆ ಮಾತ್ರ ತರಗತಿ ನಡೆಸಲು ಸೂಚಿಸಲಾಗಿದೆ. ಜಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇಂತಹದೇ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ‘ಹೀಟ್ ವೇವ್’ ಅಬ್ಬರ: ಆಸ್ಪತ್ರೆಗಳಲ್ಲಿ ಎಮರ್ಜೆನ್ಸಿ ಬೆಡ್ ಮೀಸಲಿಡಲು ದಿನೇಶ್ ಗುಂಡೂರಾವ್ ಸೂಚನೆ!

ಒಟ್ಟಾರೆಯಾಗಿ, ಅಗ್ನಿಕುಂಡದಂತಾಗಿರುವ ಭೂಮಿಗೆ ಎಲ್ ನಿನೋ ಎಂಟ್ರಿಯು ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಮುಂಬರುವ ದಿನಗಳಲ್ಲಿ ಬರಗಾಲ ಎದುರಿಸಲು ಸಜ್ಜಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್ ವಿರುದ್ಧದ ದಾಳಿಗೆ ಸದ್ಯಕ್ಕೆ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಟ್ರಂಪ್ – Kannada News | Trump Halts Iran Attack Amid Pakistan Mediation: Diplomatic Push for Peace

ವಾಷಿಂಗ್ಟನ್ , ಏಪ್ರಿಲ್ 22: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತು ಬಿಗುವಿನ ವಾತಾವರಣದ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇರಾನ್ ವಿರುದ್ಧದ ದಾಳಿಯನ್ನು ಸದ್ಯಕ್ಕೆ ತಡೆಹಿಡಿದಿರುವ ಟ್ರಂಪ್, ರಾಜತಾಂತ್ರಿಕತೆಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಸ್ಫೋಟಕ ಹಂತ ತಲುಪಿರುವಾಗಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮವನ್ನು ವಿಸ್ತರಿಸುವುದಾಗಿ ಘೋಷಿಸಿದ್ದಾರೆ. ಪಾಕಿಸ್ತಾನದ ನಾಯಕರ ವಿಶೇಷ ವಿನಂತಿಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನದ ರಾಜತಾಂತ್ರಿಕ ನಡೆ
ಡೊನಾಲ್ಡ್​ ಟ್ರಂಪ್ ತಮ್ಮ ಟ್ರುತ್ ಸೋಶಿಯಲ್​​ ಪ್ಲಾಟ್​ಫಾರ್ಮ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಾಕಿಸ್ತಾನದ ಫೀಲ್ಡ್​ ಮಾರ್ಷಲ್ ಆಸಿಮ್ ಮುನೀರ್ ಮತ್ತು ಶೆಹಬಾಜ್ ಷರೀಫ್ ಅವರು ಅಮೆರಿಕವನ್ನು ಸಂಪರ್ಕಿಸಿ ಮಾತುಕತೆಗೆ ಸಮಯ ಕೋರಿದ್ದಾರೆ ಎಂದು ತಿಳಿಸಿದ್ದಾರೆ.
ಇರಾನ್ ನಾಯಕರು ಮತ್ತು ಪ್ರತಿನಿಧಿಗಳು ಒಂದು ಏಕೀಕೃತ ಪ್ರಸ್ತಾಪವನ್ನು ಮಂಡಿಸುವವರೆಗೆ ದಾಳಿಯನ್ನು ತಡೆ ಹಿಡಿಯುವಂತೆ ಪಾಕಿಸ್ತಾನ ಮನವಿ ಮಾಡಿದೆ. ಅವರ ಪ್ರಸ್ತಾಪ ಬರುವವರೆಗೆ ಮತ್ತು ಚಚರ್ಚಗಳು ತಾರ್ಕಿಕ ಅಂತ್ಯ ಕಾಣುವವರೆಗೆ ತಾವು ಕದನ ವಿರಾಮ ವಿಸ್ತರಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ.

ಹಾರ್ಮುಜ್ ಜಲಸಂಧಿ: ಟ್ರಂಪ್ ಅವರ ದಿಗ್ಬಂಧನ ತಂತ್ರ
ಜಾಗತಿಕ ತೈಲ ವ್ಯಾಪಾರದ ನಾಡಿಮಿಡಿತವಾಗಿರುವ ಹಾರ್ಮುಜ್ ಜಲಸಂಧಿಯ ವಿಚಾರದಲ್ಲಿ ಟ್ರಂಪ್ ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಹಾರ್ಮುಜ್ ಜಲಸಂಧಿ ಮುಕ್ತವಾಗಿದ್ದರೆ ಇರಾನ್ ದಿನಕ್ಕೆ ಸುಮಾರು 500 ಮಿಲಿಯನ್ ಡಾಲರ್ ಆದಾಯ ಗಳಿಸುತ್ತದೆ. ಆದರೆ ಅಮೆರಿಕದ ನೌಕಾಪಡೆಯು ಈ ಮಾರ್ಗವನ್ನು ಸಂಪೂರ್ಣವಾಗಿ ನಿರ್ಬಂಧಿಸಿರುವುದರಿಂದ ಇರಾನ್ ಆರ್ಥಿಕವಾಗಿ ಕಂಗೆಟ್ಟಿದೆ.

ಇರಾನ್ ಈ ಜಲಸಂಧಿಯನ್ನು ತಾನೇ ಮುಚ್ಚುವುದಾಗಿ ಹೇಳಿಕೊಳ್ಳುತ್ತಿದೆ. ಆದರೆ ಟ್ರಂಪ್ ಪ್ರಕಾರ, ಇದು ಕೇವಲ ತನ್ನ ಮರ್ಯಾದೆ ಉಳಿಸಿಕೊಳ್ಳಲು ಇರಾನ್ ಮಾಡುತ್ತಿರುವ ನಾಟಕ. ಅಮೆರಿಕ ಈಗಾಗಲೇ ಅದನ್ನು ಮುಚ್ಚಿರುವುದರಿಂದ ಇರಾನ್ ಅಸಹಾಯಕವಾಗಿದೆ.

ಮತ್ತಷ್ಟು ಓದಿ: ನನ್ನಿಂದ ಖುಷಿಯಾಗಿರುವ ಚೀನಾದ ಅಧ್ಯಕ್ಷ ಬಿಗಿ ಅಪ್ಪುಗೆ ನೀಡುತ್ತಾರೆ; ಟ್ರಂಪ್

ಅಮೆರಿಕ ಮತ್ತು ಇರಾನ್ ನಡುವಿನ ಎರಡು ವಾರಗಳ ಮೊದಲ ಹಂತದ ಕದನ ವಿರಾಮ ಬುಧವಾರಕ್ಕೆ ಅಂತ್ಯಗೊಂಡಿತ್ತು. ಎರಡನೇ ಸುತ್ತಿನ ಮಾತುಕತೆಗಳು ಯಾವುದೇ ಫಲ ನೀಡದೆ ಸ್ಥಗಿತಗೊಂಡಿದ್ದವು. ಟ್ರಂಪ್ ಮೊದಲು ಕದನ ವಿರಾಮ ವಿಸ್ತರಣೆ ನಿರಾಕರಿಸಿದ್ದರೂ, ಕೊನೆಯ ಕ್ಷಣದಲ್ಲಿ ಪಾಕಿಸ್ತಾನದ ಮಧ್ಯಸ್ಥಿಕೆಯಿಂದಾಗಿ ಮನಸ್ಸು ಬದಲಿಸಿದ್ದಾರೆ. ಆದರೂ ಅಮರಿಕ ಸೇನೆಗೆ ಯಾವುದೇ ಕ್ಷಣದಲ್ಲಿ ದಾಳಿಗೆ ಸಿದ್ದರಾಗಿರಿ ಎಂದು ಅವರು ಆದೇಶಿಸಿದ್ದಾರೆ.

ಮುಂದಿನ ಹಾದಿ ಕಠಿಣ
ಈ ಕದನ ವಿರಾಮ ವಿಸ್ತರಣೆಯು ತಾತ್ಕಾಲಿಕವಾಗಿದ್ದು, ಇರಾನ್ ಮಂಡಿಸುವ ಪ್ರಸ್ತಾಪದ ಮೇಲೆ ಎಲ್ಲವೂ ನಿರ್ಧರಿತವಾಗಲಿದೆ. ಒಂದೋ ಒಪ್ಪಂದವಾಗಬೇಕು, ಇಲ್ಲದಿದ್ದರೆ ಇರಾನ್ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಪರೋಕ್ಷ ಎಚ್ಚರಿಕೆಯನ್ನು ಟ್ರಂಪ್ ನೀಡಿದ್ದಾರೆ. ಟ್ರಂಪ್ ಅವರ ಈ ನಡೆ ಇರಾನ್ ಸರ್ಕಾರವನ್ನು ಆರ್ಥಿಕವಾಗಿ ಹೈರಾಣಾಗಿಸಿ, ಅವರನ್ನು ಮಾತುಕತೆಯ ಮೇಜಿಗೆ ಬರುವಂತೆ ಮಾಡುವ ತಂತ್ರದ ಭಾಗವಾಗಿದೆ ಎಂದು ರಾಜತಾಂತ್ರಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವೇದಿಕೆಯ ಮೇಲೆ ಗಳಗಳನೆ ಅತ್ತ ಜೆನಿಲಿಯಾ ಡಿಸೋಜಾ; ಕಾರಣ ಏನು? – Kannada News | Genelia D’Souza Cries: Emotional Moment at Raj Shivaji Trailer Launch Revealed

ನಟಿ ಜೆನಿಲಿಯಾ ಪರಿಚಯ ಕನ್ನಡದವರಿಗೂ ಇದೆ. ಅವರು ಪರಭಾಷೆ ನಟಿ ಆದರೂ ಕನ್ನಡದಲ್ಲಿ 2008ರಲ್ಲಿ ರಿಲೀಸ್ ಆದ ‘ಸತ್ಯ ಇನ್ ಲವ್’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಜೊತೆ ತೆರೆ ಹಂಚಿಕೊಂಡರು. ಅವರು ಇತ್ತೀಚೆಗೆ ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು. ಈಗ ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಇದಕ್ಕೆ ಕಾರಣವೂ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಜೆನಿಲಿಯಾ ಪತಿ ರಿತೇಶ್ ದೇಶ್​​ಮುಖ್ ಅವರು ‘ರಾಜ ಶಿವಾಜಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ ಕೂಡ ಇದೆ. ಮರಾಠ ಸಾಮ್ರಾಜ್ಯದ ದೊರೆ ಛತ್ರಪತಿ ಶಿವಾಜಿ ಮಹರಾಜ ಅವರ ಜೀವನ ಆಧರಿಸಿ ‘ರಾಜ ಶಿವಾಜಿ’ ಸಿನಿಮಾ ಸಿದ್ಧವಾಗಿದೆ. ಇದರಲ್ಲಿ ರಿತೇಶ್ ಶಿವಾಜಿ ಪಾತ್ರ ಮಾಡಿದ್ದಾರೆ. ಏಪ್ರಿಲ್ 20ರಂದು ಮುಂಬೈನಲ್ಲಿ ಅದ್ದೂರಿ ವೇದಿಕೆ ಮೇಲೆ ಟ್ರೇಲರ್ ಲಾಂಚ್ ನಡೆದಿದೆ. ಈ ವೇಳೆ ರಿತೇಶ್ ಭಾವುಕರಾದರು.

‘ರಾಜ ಶಿವಾಜಿ’ ಸಿನಿಮಾ ರಿತೇಶ್ ಅವರ ಕನಸಿನ ಪ್ರಾಜೆಕ್ಟ್. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಶ್ರಮ ಹಾಕಿದ್ದಾರೆ. ಈ ಜರ್ನಿಯಲ್ಲಿ ಬೆಂಬಲವಾಗಿ ನಿಂತ ಎಲ್ಲರಿಗೂ ರಿತೇಶ್ ಧನ್ಯವಾದ ಹೇಳಿದ್ದಾರೆ. ಅವರು ಎಲ್ಲರಿಗೂ ಥ್ಯಾಂಕ್ಸ್ ಹೇಳುತ್ತಾ ಭಾವುಕರಾದರು. ಅವರಿಗೆ ಕಣ್ಣೀರು ತಡೆಯಲಾಗಲಿಲ್ಲ. ಅವರ ಪಕ್ಕದಲ್ಲೇ ಇದ್ದ ಜೆನಿಲಿಯಾ ಅವರು ರಿತೇಶ್ ಅಳುವುದನ್ನು ನೋಡಿ ಕಣ್ಣೀರು ಹಾಕಿದರು. ಅವರಿಗೂ ಕಣ್ಣೀರು ತಡೆಯಲು ಸಾಧ್ಯವೇ ಆಗಿಲ್ಲ. ಈ ಭಾವುಕ ಕ್ಷಣ ನೋಡಿ ಸಂಜಯ್ ದತ್ ಕಣ್ಣುಗಳು ತುಂಬಿ ಬಂದವು. ಸದಾ ಬೆಂಬಲವಾಗಿ ನಿಂತ ಜೆನಿಲಿಯಾ ಅವರಿಗೆ ಧನ್ಯವಾದ ಹೇಳುವುದನ್ನು ರಿತೇಶ್ ಮರೆತಿಲ್ಲ.

ಇದನ್ನೂ ಓದಿ: ‘ರಾಜ ಶಿವಾಜಿ ಪಾತ್ರಕ್ಕೆ ರಿತೇಶ್ ದೇಶ್‌ಮುಖ್ ಸೂಕ್ತವಲ್ಲ’: ನೆಟ್ಟಿಗರಿಂದ ಟ್ರೋಲ್ ಆದ ನಟ

‘ರಾಜ ಶಿವಾಜಿ’ ಚಿತ್ರವನ್ನು ಮುಂಬೈ ಫಿಲ್ಮ್ ಕಂಪನಿ ನಿರ್ಮಾಣ ಮಾಡಿದೆ. ಈ ಚಿತ್ರವನ್ನು ಜಿಯೋ ಸ್ಟುಡಿಯೋಸ್ ಪ್ರೆಸೆಂಟ್ ಮಾಡುತ್ತಿದೆ. ಅಜಯ್ ಹಾಗೂ ಅತುಲ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದೆ. ಈ ಸಿನಿಮಾ ಕಾರ್ಮಿಕ ದಿನಾಚರಣೆ ಪ್ರಯುಕ್ತ ಮೇ 1ರಂದು ರಿಲೀಸ್ ಆಗುತ್ತಿದೆ. ಹಿಂದಿ ಜೊತೆಗೆ ಮರಾಠಿಯಲ್ಲೂ ಸಿನಿಮಾ ಸಿದ್ಧವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Horoscope Today: ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 22, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಂಚಮಿ ತಿಥಿ, ಆರ್ದ್ರ ನಕ್ಷತ್ರ, ಅತಿಗಂಡ ಯೋಗ, ಮತ್ತು ಬಾಲವ ಕರಣದಿಂದ ಕೂಡಿದೆ.

ಇಂದು ರಾಮಾನುಜಾಚಾರ್ಯರ ಜಯಂತಿ, ಲಾವಣ್ಯ ಗೌರಿ ವ್ರತ, ಗಾಯತ್ರಿ ಜಯಂತಿ, ದಾರುಕಾಚಾರ್ಯರ ಜಯಂತಿ ಹಾಗೂ ಗಜಕೇಸರಿ ಮಹಾಯೋಗದ ಸುದಿನವಾಗಿದೆ. ಗುರು ಮೀನ ರಾಶಿಯಲ್ಲಿ, ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸುವುದರಿಂದ ಗಜಕೇಸರಿ ಮಹಾಯೋಗ ಸೃಷ್ಟಿಯಾಗಿದ್ದು, ಇದು ದಿನಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿದೆ. ಡಾ. ಬಸವರಾಜ ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳ ಮೇಲೆ ಈ ಗ್ರಹಗಳ ಸಂಚಾರದ ಪರಿಣಾಮಗಳನ್ನು ವಿವರಿಸಿದ್ದು, ಪ್ರತಿಯೊಂದು ರಾಶಿಯವರಿಗೂ ಆರ್ಥಿಕ ಸ್ಥಿತಿ, ಆರೋಗ್ಯ, ಸಂಬಂಧಗಳು, ವೃತ್ತಿಜೀವನ ಮತ್ತು ಅದೃಷ್ಟದ ಕುರಿತು ವಿವರವಾದ ಮಾಹಿತಿ ನೀಡಿದ್ದಾರೆ.

 

 

 

Source link

Daily Devotional: ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ? – Kannada News | Balagraha Mantras for Kids: Traditional Protection

ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪುಟ್ಟ ಮಕ್ಕಳು, ಒಂದು ವರ್ಷದಿಂದ ಹನ್ನೆರಡು ವರ್ಷದವರೆಗೆ, ಕೆಲವೊಮ್ಮೆ ವಿಚಿತ್ರವಾಗಿ ವರ್ತಿಸುತ್ತಾರೆ, ಹಠ ಮಾಡುತ್ತಾರೆ, ಅಳುತ್ತಾರೆ ಅಥವಾ ಜ್ವರದಿಂದ ಬಳಲುತ್ತಾರೆ. ಇಂತಹ ಸಂದರ್ಭಗಳಲ್ಲಿ, ಹಿಂದೂ ಸಂಸ್ಕೃತಿ ಮತ್ತು ಸನಾತನ ಪರಂಪರೆಯಲ್ಲಿ, ಅನುಭವಿಗಳು ಮತ್ತು ಮಂತ್ರದ ಶಕ್ತಿಯನ್ನು ಪಡೆದವರು ಮಕ್ಕಳಿಗೆ ಮಂತ್ರಗಳನ್ನು ಹಾಕಿಸುವ ಪದ್ಧತಿ ಇದೆ.

ಈ ಮಂತ್ರ ಪಠಣವು ಮಕ್ಕಳಲ್ಲಿನ ಜ್ವರ, ಭಯ ಮತ್ತು ಅಳು ನಿವಾರಿಸಲು ಸಹಕಾರಿಯಾಗಿದೆ ಎಂದು ನಂಬಲಾಗಿದೆ. ಇದನ್ನು ಒಂದು ರೀತಿಯ ಪ್ರಾಥಮಿಕ ಚಿಕಿತ್ಸೆ ಅಥವಾ ಫಸ್ಟ್ ಏಡ್ ಎಂದು ಪರಿಗಣಿಸಲಾಗುತ್ತದೆ. ಹಿರಿಯರು, ವಿದ್ವಾಂಸರು, ಅಥವಾ ದೈವಾಂಶ ಸಂಭೂತರು ಎಂದು ಪರಿಗಣಿಸಲ್ಪಟ್ಟವರು ಕುಂಕುಮ, ವಿಭೂತಿ ಅಥವಾ ವಸ್ತ್ರದ ಮೂಲಕ ಮಂತ್ರಗಳನ್ನು ಹಾಕುತ್ತಾರೆ. ಇದು ಮಕ್ಕಳಿಗೆ ದೃಷ್ಟಿ ದೋಷ ಅಥವಾ ನಕಾರಾತ್ಮಕ ಶಕ್ತಿಗಳಿಂದ ರಕ್ಷಣೆ ನೀಡುತ್ತದೆ ಎಂದು ನಂಬಿಕೆ ಇದೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

 

 

 

Source link

ಕಸ ಹಾಕಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ: ಪ್ರಿಯಕರನ ಜೊತೆ ಪರಾರಿಯಾದ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ! – Kannada News | Bengaluru: Woman Goes Missing After Leaving Home to Throw Garbage; Husband Alleges Elopement with Paramour in Bagalagunte

ಆರೋಪಿ ಪ್ರಭು ಹಾಗೂ ಮಹಿಳೆImage Credit source: tv9

ಬೆಂಗಳೂರು, ಏಪ್ರಿಲ್ 22: ‘ಕಸ ಹಾಕಿ ಬರುತ್ತೇನೆ’ ಎಂದು ಮನೆಯಿಂದ ಹೊರಹೋದ ಇಬ್ಬರು ಮಕ್ಕಳ ತಾಯಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ (Bengaluru) ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯು ತನ್ನ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ ಎಂದು ಪತಿ ಗಂಭೀರ ಆರೋಪ ಮಾಡಿದ್ದು, ಸದ್ಯ ಪ್ರಕರಣ ಪೊಲೀಸ್ ಮೆಟ್ಟಿಲೇರಿದೆ.

ಮಹಿಳೆ ನಿಗೂಢ ನಾಪತ್ತೆ ಘಟನೆಯ ಹಿನ್ನೆಲೆ

ಬಾಗಲಗುಂಟೆಯಲ್ಲಿ ವಾಸವಿದ್ದ ಶರತ್ ಕುಮಾರ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಶರತ್ ಕೆಲಸಕ್ಕೆ ಹೋದ ಸಮಯದಲ್ಲಿ ಅದೇ ಏರಿಯಾದಲ್ಲಿ ಕಟಿಂಗ್ ಶಾಪ್ ನಡೆಸುತ್ತಿದ್ದ ಪ್ರಭು ಎಂಬಾತನ ಜೊತೆ ಮಹಿಳೆ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ಪ್ರಭು ಮಹಿಳೆಯ ಮೊಬೈಲ್ ರೀಚಾರ್ಜ್ ಮಾಡಿಸುತ್ತಿದ್ದ ವಿಷಯ ತಿಳಿದು ದಂಪತಿ ನಡುವೆ ಈ ಹಿಂದೆ ಗಲಾಟೆಯೂ ನಡೆದಿತ್ತು. ಪತಿ ಶರತ್ ಈ ಬಗ್ಗೆ ಪತ್ನಿಗೆ ಬುದ್ಧಿವಾದ ಹೇಳಿದ್ದರು.

ನಿದ್ದೆ ಮಾತ್ರೆ ಹಾಕಿ ಎಸ್ಕೇಪ್?

ಏಪ್ರಿಲ್ 11ರ ರಾತ್ರಿ ಸುಮಾರು 11:57ಕ್ಕೆ ಮಹಿಳೆ ಮನೆ ಬಿಟ್ಟು ಹೋಗಿದ್ದಾಳೆ. ಹೋಗುವ ಮುನ್ನ ಪತಿ ಮತ್ತು ಮಕ್ಕಳಿಗೆ ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿದ್ದಳು ಎಂಬ ಗಂಭೀರ ಆರೋಪವನ್ನು ಪತಿ ಶರತ್ ಮಾಡಿದ್ದಾರೆ. ‘ನಾನು ಮನೆಯಲ್ಲಿದ್ದಾಗಲೇ ಒಂದು ಕೈಯಲ್ಲಿ ಕಸದ ಬಕೆಟ್ ಹಾಗೂ ಮತ್ತೊಂದು ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ಪ್ರಿಯಕರನ ಜೊತೆ ಹೋಗಿದ್ದಾಳೆ’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಸಿಸಿಟಿವಿಯಲ್ಲಿ ದೃಶ್ಯ ದಾಖಲು

ಮಹಿಳೆಯು ಬ್ಯಾಗ್ ಹಿಡಿದು ಹೋಗುತ್ತಿರುವ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಪತ್ನಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ ಪತಿ ಶರತ್, ಕೊನೆಗೆ ಸಿಗದಿದ್ದಾಗ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ‘ಫಾರಿನ್ ಸ್ಟೈಲ್’ ಪ್ರಪೋಸ್ ಮಾಡ್ತೀನಿ ಅಂತ ಕೈ-ಕಾಲು ಕಟ್ಟಿ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ! ಕಣ್ಣೆದುರೇ ಸುಟ್ಟು ಕರಕಲಾದ ಯುವಕ

ವರದಿ: ಅರುಣ್ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:35 am, Wed, 22 April 26

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಲ್ಲ ಕಾರ್ಯಕ್ಕೂ ಅನನುಕೂಲ, ದಿಟ್ಟ ನಿರ್ಧಾರ – Kannada News | Today’s Horoscope April 22: Daily Astrology, Important Decisions

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಬುಧವಾರದಂದು ಯೋಗ್ಯ ಶಿಕ್ಷಣ, ಬರುವ ಸಂಪತ್ತಿನ ರಕ್ಷಣೆ, ಅತಿಯಾದ ಆಹಾರ ಭಕ್ಷಣೆ, ಭವಿಷ್ಯದ ವೀಕ್ಷಣೆ, ಇವೆಲ್ಲ ಇರಲಿದೆ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಸೌಭಾಗ್ಯ, ಕರಣ : ಭದ್ರ, ಸೂರ್ಯೋದಯ – 06 – 08 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:23 – 13:57, ಯಮಗಂಡ ಕಾಲ 07:42 – 09:16, ಗುಳಿಕ ಕಾಲ 10:49 – 12:23

ಮೇಷ ರಾಶಿ :

ಆತ್ಮವಿಶ್ವಾಸದಿಂದ ನೀವು ದಿನವನ್ನು ಸುಗಮವಾಗಿ ಕಳೆಯುತ್ತೀರಿ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಸಂಗಾತಿಯೊಂದಿಗೆ ಜಗಳವಾದರೂ, ತಾಳ್ಮೆ ಬೇಕು. ಆಸೆಗೆ ಪೂರಕ ವಾತಾವರಣ ಸಿಕ್ಕಿದ್ದು ತೃಪ್ತಿ ನೀಡುವುದು. ಹಿರಿಯರಿಂದ ಮಾರ್ಗದರ್ಶನ ಸಿಗಬಹುದು. ಸಹಾಯ ಮಾಡುವ ಮನೋಭಾವನೆ ನಿಮಗೆ ಸಂತೋಷ ನೀಡುತ್ತದೆ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು.

ವೃಷಭ ರಾಶಿ :

ಯಾರ ವ್ಯಕ್ತಿತ್ವವನ್ನೂ ಕೇವಲವಾಗಿ ನೋಡುವುದು ಬೇಡ. ಪ್ರೇಮ ಜೀವನದಲ್ಲಿ ಪ್ರಾಮಾಣಿಕತೆ ಮುಖ್ಯ. ದಿವಸದ ಕೊನೆಯಲ್ಲಿ ಆತ್ಮೀಯರೊಂದಿಗೆ ಸಮಯ ಕಳೆಯಬಹುದು. ಸಂಗಾತಿಯ ಪ್ರೀತಿ ನಿಮ್ಮ ನೆನಪಿನಲ್ಲಿ ಉಳಿಯುವ ರೀತಿಯಲ್ಲಿರುತ್ತದೆ. ಕೆಲವು ಸನ್ನಿವೇಶವು ನಿಮಗೆ ಇಷ್ಟವಾಗದು. ಅದರೂ ಅನಿವಾರ್ಯ ಎನಿಸೀತು. ಕೋಪವನ್ನು ಬಿಟ್ಟರೂ ಬಿಡಲಾಗದು. ನಕಾರಾತ್ಮಕ ಸೂಚನೆ ನಿಮಗೆ ಸಿಗಲಿದ್ದು, ಅದನ್ನು ನಿರ್ಲಕ್ಷ್ಯ ಮಾಡುವಿರಿ.

ಮಿಥುನ ರಾಶಿ :

ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಇರುವಾಗ ಸಹನೆವಹಿಸಿ. ಪ್ರೇಮದಲ್ಲಿ ವಿಶಿಷ್ಟ ಅನುಭವ ಸಾಧ್ಯ. ಕೆಲಸಕ್ಕಾಗಿ ಕೈಗೊಂಡ ಪ್ರಯಾಣ ಯಶಸ್ಸು ತರುತ್ತದೆ. ಭೂಮಿಯನ್ನು ಪಡೆಯಲು ಓಡಾಟ‌ಮಾಡುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಬದಲಾವಣೆ ಇರಲಿದೆ. ವ್ಯವಹಾರದಲ್ಲಿ ನಿಮ್ಮ ನಿರ್ಧಾರಗಳೇ ಅಂತಿಮವಾಗುವುದು. ಯಶಸ್ಸಿನ ಗುಟ್ಟನ್ನು ನೀವು ಯಾರಿಗೂ ಹೇಳಲಾರಿರಿ. ಮನೆಯಲ್ಲಿ ಹರ್ಷದ ವಾತಾವರಣ, ಬಂಧುಗಳ ಸಮಾಗಮ.

ಕರ್ಕಾಟಕ ರಾಶಿ :

ಅನಿರೀಕ್ಷಿತ ಲಾಭವು ಉತ್ಸಾಹ ತರುವುದು. ಪ್ರೇಮ ಜೀವನದಲ್ಲಿ ಅನಿರೀಕ್ಷಿತ ಶಾಂತಿ. ಹೆಚ್ಚು ಕೆಲಸವಿದ್ದರೂ ನೀವು ಶಕ್ತಿವಂತನಂತೆ ಕಾಣಬಹುದು. ಕೆಲಸ ಮುಗಿದ ಅನಂತರ ಮನೆಯಲ್ಲಿಯೂ ಸಮಯ ಕಳೆಯಲು ಪ್ರಯತ್ನ ಮಾಡಿ. ನಿಮ್ಮ ತಪ್ಪನ್ನು ಒಪ್ಪಿಕೊಳ್ಳಲು ನಿಮಗೆ ಸಂಕೋಚವಾಗಬಹುದು. ವಾಹನ ಮುಂತಾದ ಉದ್ಯಮವನ್ನು ನಡೆಸುತ್ತಿದ್ದರೆ ಲಾಭವು ಇರುವುದು. ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಎಡವಟ್ಟು ಮಾಡಿಕೊಳ್ಳುವಿರಿ. ಯಾರಿಂದಲೋ ನಿಮಗೆ ಸಂಕಟವಾಗುವುದು.

ಸಿಂಹ ರಾಶಿ :

ಸ್ಥಾನಮಾನಕ್ಕೆ ಶೀತಲ ಸಮರ ಆರಂನಬವಾಗಲಿದೆ. ಹಣದ ಬದಲು ಸುರಕ್ಷಿತ ಹೂಡಿಕೆ ಅತ್ಯುತ್ತಮ. ಮನೆಯಲ್ಲಿ ಸಮಸ್ಯೆಗಳಿದ್ದರೂ ನೀವು ಸಮಾಧಾನದಿಂದಿರುವುದು ಉತ್ತಮ. ಉಚಿತ ಸಮಯದಲ್ಲಿ ಹೊಸದನ್ನು ಕಲಿಯಿರಿ. ಸಂಗಾತಿಯ ಬೆಂಬಲ ನಿಮಗೆ ಬೆರಗಾಗಿಸುವಷ್ಟು ಉತ್ತಮವಾಗಿರಬಹುದು. ಅನವಶ್ಯಕವಾಗಿ ಹಣವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಜೀವನಕ್ಕೆ ಕೆಲವು ಮಾರ್ಪಾಡುಗಳು ಅನಿವಾರ್ಯವಾದೀತು.

ಕನ್ಯಾ ರಾಶಿ :

ಪ್ರೇಮ ಜೀವನದಲ್ಲಿ ಗಾಢವಾದ ಅನುಭವ ಆಗುವುದು. ನಿಮ್ಮ ಶ್ರಮದ ಫಲವನ್ನು ಇತರರು ಪಡೆದರೆ ವ್ಯಥೆ ಆಗಬಹುದು. ಹಳೆ ಸ್ನೇಹಿತರ ಭೇಟಿಗೆ ಯೋಜನೆ ಮಾಡುವಿರಿ. ಹಿತಶತ್ರುಗಳು ನಿಮಗೆ ಮಾಡಿದ ಕೆಡುಕು ನಿಮಗೆ ಒಳ್ಳೆಯದೇ ಆಗಲಿದೆ. ಸರ್ಕಾರಿ ಕೆಲಸ ಮಾಡುವವರಿಗೆ ಉನ್ನತ ಸ್ಥಾನದ ವಾರ್ತೆ ಬರುವುದು. ಹೊಸ ಉದ್ಯೋಗವನ್ನು ಆರಂಭಿಸಲು ತೀವ್ರತೆಯು ಇರಲಿದೆ. ಮಕ್ಕಳನ್ನು ದೂರ ಮಾಡಿಕೊಂಡು ಬೇಸರಗೊಳ್ಳುವಿರಿ.

ತುಲಾ ರಾಶಿ :

ನಿಮ್ಮ ವಸ್ತು ಕೈಗೆ ಸಿಗದೇ ಇರುವುದನ್ನು ನೀವು ಮಾಡಿದ ತ್ಯಾಗ ಎಂದು ತಿಳಿಯಿರಿ‌. ಸಂಗಾತಿಯ ಅತಿಯಾದ ಆಸಕ್ತಿ ನಿಮ್ಮ ಮನಸ್ಸಿಗೆ ಒತ್ತಡ ತರಬಹುದು. ಆದರೆ ಅವರ ನಿಜವಾದ ಉದ್ದೇಶ ನಿಮಗೆ ನಂತರ ಸ್ಪಷ್ಟವಾಗಲಿದೆ. ಅನುಭವಿ ವ್ಯಕ್ತಿಯಿಂದ ನೀವು ಪ್ರಯೋಜನಕಾರಿ ಸಲಹೆಯು ಸಿಗುವುದು. ನಿಮ್ಮ ವ್ಯಾಪಾರ ವಿಸ್ತರಣೆಯನ್ನು ಮಾಡಲು ನಿರ್ಧಾರ ಮಾಡುವಿರಿ. ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟ.

ವೃಶ್ಚಿಕ ರಾಶಿ :

ಅನಿರೀಕ್ಷಿತ ಆರ್ಥಿಕ ನಷ್ಟ ಸಂಭವಿಸುವುದು. ನಿಮಗೆ ಅರಿವಿಲ್ಲದೇ ಯೋಗವು ನಷ್ಟವಾಗುವುದು. ಅಪರೂಪದ ಭೇಟಿಗಳು ಸಂತೋಷ ತರಬಹುದು. ಪ್ರೇಮದಲ್ಲಿ ಹೊಸ ಚೈತನ್ಯ ಜಾಗರೂಕವಾಗಲಿ. ವೃತ್ತಿ ಯೋಜನೆಗಳು ಸಕಾರಾತ್ಮಕ ಫಲಿತಾಂಶ ತರುತ್ತವೆ. ವಹಿಸಿಕೊಂಡ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣ ಮಾಡುವಿರಿ. ತೊಂದರೆಗಳನ್ನು ನೀವು ಎದುರಿಸಲು ಸಕ್ಷಮರಾಗಿರುವಿರಿ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿ ಕಳೆದುಕೊಳ್ಳಬಹುದು.

ಧನು ರಾಶಿ :

ಅವಶ್ಯಕತೆ ಇಲ್ಲದಿದ್ದರೂ ಕೃತಜ್ಞತೆಯನ್ನು ಅರ್ಪಿಸುವುದು ಕರ್ತವ್ಯ. ಸಹೋದ್ಯೋಗಿಗಳ ಜೊತೆ ಒಳ್ಳೆಯ ಸಂಬಂಧ ಬೆಳೆಸಿಕೊಳ್ಳಿ. ಕೆಲಸದಲ್ಲಿ ಹೊಸ ಜನರನ್ನು ಭೇಟಿಯಾಗಿ ಮುಂದಿನ ಅವಕಾಶಗಳತ್ತ ಗಮನ ಹರಿಸಿ. ಸಮಯದ ಪೂರಕವಾಗಿ ಕೆಲಸ ಮಾಡಿದರೆ ಯಶಸ್ಸು ಖಚಿತ. ತುರ್ತು ಹಣವು ಬೇಕಿದ್ದರಿಂದ ಸ್ನೇಹಿತರನ್ನು ಕೇಳುವಿರಿ. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು.

ಮಕರ ರಾಶಿ :

ನೀವು ಉದ್ಯೋಗವನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ತಾನಾಗಿಯೇ ಬೀಳುವ ಮರವನ್ನು ನೀವು ತಲೆಯ ಮೇಲೆ ಬೀಳಿಸಿಕೊಳ್ಳುವಿರಿ. ಹಣದ ವಿಚಾರದಲ್ಲಿ ಜಾಣೆ ಅಗತ್ಯ ಸಂಗಾತಿಯೊಂದಿಗೆ ಜಗಳ ಉಂಟಾದರೂ ಅವರು ಶಾಂತಿ ಕಾಪಾಡುತ್ತಾರೆ. ನಿಮ್ಮ ಸಂಗಾತಿಯ ಆರೋಗ್ಯವೂ ವ್ಯತ್ಯಾಸವಾಗಿ ಉದ್ವೇಗಕ್ಕೆ ಒಳಗಾಗುವರು. ಶುಭಕರ್ಮವನ್ನು ಮಾಡುವ ಉತ್ಸಾಹವಗಬಹುದು. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು.

ಕುಂಭ ರಾಶಿ :

ಸೋತೆನೆಂದು ಹತಾಶರಾಗುವ ಬದಲು ಗೆಲವಿಗೆ ಇನ್ನೊಂದು ಅವಕಾಶ ಎಂದುಕೊಂಡರೆ ಸುಖ.‌ ದಿನದ ಕೊನೆಯಲ್ಲಿ ನಿಮ್ಮ ತಾಳ್ಮೆ ಯಶಸ್ಸಿಗೆ ಕಾರಣವಾಗಲಿದೆ. ದುಃಖವನ್ನು ಅನುಭವಿಸುವ ಸಂದರ್ಭ ಬರಬಹುದು. ಮನಸ್ಸು, ಬುದ್ಧಿಗಳನ್ನು ನಿಶ್ಚಲಗೊಳಿಸಿ. ಇಂದು ನೀವು ಸೋಮಾರಿತನವನ್ನು ಬೆಳೆಸಿಕೊಳ್ಳುವಿರಿ. ಹಣಕ್ಕೆ ಸಂಬಂಧಿಸಿದ ಯಾವುದಾದರೂ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಸುಲಭದ ದಾರಿಯು ನಿಮಗೆ ಕಾಣಿಸುವುದು. ವೃತ್ತಿಶೀಲರು ತಮ್ಮನ್ನು ಅತಿಮಾನುಷರಂತೆ ತೋರ್ಪಡಿಸುವರು.

ಮೀನ ರಾಶಿ :

ಇಂದು ಎಲ್ಲವೂ ಖಾಲಿ ಖಾಲಿ ಎನ್ನುವ ಮನೋಭಾವ ಬರಬಹುದು. ಶಕ್ತಿಯ ಮಟ್ಟವನ್ನು ಬಾಕಿಯಿರುವ ಕೆಲಸಗಳಿಗೆ ಬಳಸಬಹುದು. ಹಣಕಾಸಿನ ಕಾರ್ಯದಿಂದ ಯಶಸ್ಸು ಸಿಗಬಹುದು. ಸಂಗಾತಿಯ ಕುಟುಂಬದ ಅಡ್ಡಿ ಕೆಲವೊಂದು ವ್ಯತ್ಯಯ ತಂದರೂ, ನಿಮ್ಮ ಸಹನೆಗೆ ಅದರ ಬಗ್ಗೆ ಪ್ರಭಾವ ಬೀರುವುದಿಲ್ಲ. ಆರ್ಥಿಕಸ್ಥಿತಿಯಲ್ಲಿ ಪ್ರಗತಿಯ ಲಕ್ಷಣವಿದೆ. ವ್ಯವಹಾರದಲ್ಲಿ ಇಂದು ನಿಮಗೆ ತುಂಬಾ ಒತ್ತಡದ ದಿನವಾಗಿರುತ್ತದೆ. ನಿಮ್ಮ ಹಣವನ್ನು ಬಲಾತ್ಕಾರದಿಂದ ಪಡೆಯಬೇಕಾಗಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಮೋದಿಗೆ ಭಯೋತ್ಪಾದಕ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು – Kannada News | BJP files complaint to Election Commission against Mallikarjun Kharges terrorist remark on PM Modi

ನವದೆಹಲಿ, ಏಪ್ರಿಲ್ 21: ಪ್ರಧಾನಿ ನರೇಂದ್ರ ಮೋದಿಯನ್ನು (PM Modi) ಭಯೋತ್ಪಾದಕ ಎಂದು ಕರೆದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದೆ. ಕೂಡಲೇ ಕಾಂಗ್ರೆಸ್ ಅಧ್ಯಕ್ಷರು ಸಾರ್ವಜನಿಕ ಕ್ಷಮೆಯಾಚಿಸುವಂತೆ ನಿರ್ದೇಶಿಸುವಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಕಿರಣ್ ರಿಜಿಜು ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಬುಧವಾರ ಈ ವಿಷಯವನ್ನು ಎತ್ತಲು ಚುನಾವಣಾ ಆಯೋಗವನ್ನು ಭೇಟಿ ಮಾಡಲಿವೆ ಎಂದು ಬಿಜೆಪಿ ತಿಳಿಸಿದೆ.

ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಿದ ಅರ್ಜಿಯಲ್ಲಿ, ಬಿಜೆಪಿ ನಾಯಕರು ಪ್ರಧಾನ ಮಂತ್ರಿ ಮೋದಿಯ ವಿರುದ್ಧದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ತೀವ್ರ ಅವಹೇಳನಕಾರಿ ಮತ್ತು ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗಳಿಗಾಗಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಸೂಕ್ತ ದಂಡ ವಿಧಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪತ್ರದಲ್ಲಿ ಒತ್ತಾಯಿಸಲಾಗಿದೆ.

“ಅಣ್ಣಾದೊರೈ ಅವರ ಫೋಟೋ ಹಾಕುವ ಈ ಎಐಎಡಿಎಂಕೆ ಜನರು ಮೋದಿಯೊಂದಿಗೆ ಹೇಗೆ ಕೈಜೋಡಿಸುತ್ತಾರೆ? ಎಐಎಡಿಎಂಕೆ ಮೋದಿಯೊಂದಿಗೆ ಹೇಗೆ ಕೈ ಜೋಡಿಸಿದರು? ಅವರೊಬ್ಬ ಭಯೋತ್ಪಾದಕ. ಅವರು ಸಮಾನತೆಯನ್ನು ನಂಬುವುದಿಲ್ಲ. ಅವರ ಪಕ್ಷವೆಂದೂ ಸಮಾನತೆ ಮತ್ತು ನ್ಯಾಯವನ್ನು ನಂಬುವುದಿಲ್ಲ. ಅಂತಹ ಬಿಜೆಪಿಯೊಂದಿಗೆ ಎಐಎಡಿಎಂಕೆ ಸೇರುತ್ತಿದೆ. ಅಂದರೆ ಅವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದರ್ಥ” ಎಂದು ಖರ್ಗೆ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಇನ್ನೆಷ್ಟು ದಿನ ಜನರ ದಾರಿ ತಪ್ಪಿಸುತ್ತೀರಿ? ಖರ್ಗೆ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ

ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾದ ಕೂಡಲೆ ಪ್ರತಿಕ್ರಿಯೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ, “ಪ್ರಧಾನಿ ಮೋದಿ ಯಾವಾಗಲೂ ನಮಗೆ ಬೆದರಿಕೆ ಹಾಕುತ್ತಾರೆ ಎಂದು ನಾನು ಹೇಳಿದ್ದೇನೆ. ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಇತರ ಸಂಸ್ಥೆಗಳು ಅವರ ಕೈಯಲ್ಲಿವೆ ಎಂದು ನಾನು ಹೇಳಿದ್ದೆ. ಅವರು ಭಯೋತ್ಪಾದಕ ಎಂದು ನಾನು ಖಂಡಿತವಾಗಿಯೂ ಹೇಳಲಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version