DHFWS Mysuru Recruitment 2026: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ – Kannada News | DHFWS Mysuru Recruitment 2026: Apply for Medical and Nursing Officer Posts Online

ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದ್ದು, ವಿವಿಧ ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ವಿಶೇಷವಾಗಿ ಮೈಸೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳು ಜನವರಿ 27ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10, 12ನೇ ತರಗತಿ, ಡಿಪ್ಲೊಮಾ, GNM, ANM, MPW, DMLT, MLT, B.Sc, BDS, ಪದವಿ, D.Ch, DA, MBBS, MPH, DNB, MD ಸೇರಿದಂತೆ ಸಂಬಂಧಿತ ಶೈಕ್ಷಣಿಕ ಅರ್ಹತೆಗಳನ್ನು ಪೂರ್ಣಗೊಳಿಸಿರಬೇಕು. ಹುದ್ದೆಯ ಪ್ರಕಾರ ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಮಾನದಂಡಗಳು ವಿಭಿನ್ನವಾಗಿರುವುದರಿಂದ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಗಮನದಿಂದ ಪರಿಶೀಲಿಸುವುದು ಅಗತ್ಯವಾಗಿದೆ.

ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು DHFWS ಮೈಸೂರು ನೇಮಕಾತಿ ಅಧಿಸೂಚನೆ 2026 ಅನ್ನು ಸಂಪೂರ್ಣವಾಗಿ ಓದಿ, ತಮ್ಮ ಅರ್ಹತೆಗಳು ನಿಗದಿತ ಮಾನದಂಡಗಳಿಗೆ ಹೊಂದಿಕೆಯಾಗುತ್ತವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆನ್‌ಲೈನ್ ಅರ್ಜಿ ಪ್ರಕ್ರಿಯೆಗೆ ಮುನ್ನ ಮಾನ್ಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಜೊತೆಗೆ ಗುರುತಿನ ಚೀಟಿ, ವಯಸ್ಸಿನ ಪ್ರಮಾಣಪತ್ರ, ಶೈಕ್ಷಣಿಕ ದಾಖಲೆಗಳು, ರೆಸ್ಯೂಮ್ ಮತ್ತು ಅನುಭವ ಪ್ರಮಾಣಪತ್ರಗಳು (ಅನ್ವಯಿಸಿದಲ್ಲಿ) ಮುಂತಾದ ದಾಖಲೆಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸುವುದು ಒಳಿತು.

ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು

ಅರ್ಹ ಅಭ್ಯರ್ಥಿಗಳು DHFWS ಮೈಸೂರು ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ನೇಮಕಾತಿಗೆ ನೀಡಲಾಗಿರುವ ಅಧಿಕೃತ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ, ಅಗತ್ಯ ಪ್ರಮಾಣಪತ್ರಗಳ ಸ್ಕ್ಯಾನ್ ಪ್ರತಿಗಳನ್ನು ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಬೇಕು. ವರ್ಗದ ಪ್ರಕಾರ ಅರ್ಜಿ ಶುಲ್ಕ ಅನ್ವಯಿಸಿದಲ್ಲಿ ಅದನ್ನು ಪಾವತಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ, ಅಭ್ಯರ್ಥಿಗಳು ಸಲ್ಲಿಸು (Submit) ಬಟನ್ ಮೇಲೆ ಕ್ಲಿಕ್ ಮಾಡಬೇಕು. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯ ಪ್ರಿಂಟ್​ ಕಾಪಿ ತೆಗೆದಿಟ್ಟುಕೊಳ್ಳಿ. ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗಾಗಿ ಅಭ್ಯರ್ಥಿಗಳು DHFWS ಮೈಸೂರು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಅಧಿಸೂಚನೆಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಡುಪಿಯಲ್ಲಿ ರೋಬೋಸಾಫ್ಟ್ ಝಗಮಗಿಸುವ ಬ್ಯುಲ್ಡಿಂಗ್ ಕಟ್ಟಿದ್ದರ ಹಿಂದಿನ ರಸವತ್ತಾದ ಕಥೆ ಕೇಳಿ – Kannada News | Rohith Bhat of Robosoft explains how difficult it was to retain employees for his company

ಉಡುಪಿ, ಜನವರಿ 21: ಸಣ್ಣ ಪಟ್ಟಣಗಳಲ್ಲಿ ಓದಿದವರು ದೊಡ್ಡ ನಗರಗಳಲ್ಲಿ ಕೆಲಸ ಮಾಡುವ ಇಚ್ಛೆ ಹೊಂದಿರುತ್ತಾರೆ. ಅವರ ಮನೆಯವರೂ ಕೂಡ ತನ್ನ ಮಗ ಅಥವಾ ಮಗಳು ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಬ್ಯುಲ್ಡಿಂಗ್​ಗಳಲ್ಲಿ ಕೆಲಸಕ್ಕೆ ಹೋಗಲಿ ಎಂದು ಬಯಸುತ್ತಾರೆ. ಸಣ್ಣ ಪಟ್ಟಣಗಳಲ್ಲಿ ಒಳ್ಳೆಯ ಸಂಬಳ ಕೊಟ್ಟರೂ ಜನರು ಕೆಲಸಕ್ಕೆ ಹೋಗಲು ಹಿಂಜರಿಯುತ್ತಾರೆ. ರೋಬೋಸಾಫ್ಟ್ (Robosoft) ಎನ್ನುವ ಐಟಿ ಸರ್ವಿಸ್ ಕಂಪನಿಯ ಸಂಸ್ಥಾಪಕ ರೋಹಿತ್ ಭಟ್ (Rohith Bhat) ಅವರು ತಮ್ಮ ಒಂದು ಅನುಭವವನ್ನು ಹಂಚಿಕೊಂಡಿದ್ದಾರೆ. ವಸಂತ್ ಶೆಟ್ಟಿ ಅವರ ‘ಮುಂದೆ ಬನ್ನಿ’ ಪೋಡ್​ಕ್ಯಾಸ್ಟ್​ನಲ್ಲಿ ಮಾತನಾಡುತ್ತಿದ್ದ ರೋಹಿತ್ ಭಟ್ ಅವರು, ಉದ್ಯೋಗಿಗಳನ್ನು ತಮ್ಮ ಕಂಪನಿಯ ಕೆಲಸಕ್ಕೆ ಸೆಳೆಯಲು ಮಾಡಿದ ತಂತ್ರಗಳನ್ನು ವಿವರಿಸಿದ್ದಾರೆ.

ರೋಬೋಸಾಫ್ಟ್ ಕಂಪನಿ ಈಗ ಉಡುಪಿಯ ಹೆದ್ದಾರಿಯಲ್ಲೇ ಭವ್ಯವಾದ ಕಟ್ಟಡ ಹೊಂದಿದೆ. ಆರಂಭದಲ್ಲಿ ಸಣ್ಣ ಬ್ಯುಲ್ಡಿಂಗ್​ನಲ್ಲಿ ಕಚೇರಿ ಹೊಂದಿತ್ತು. ಕಂಪನಿಯಲ್ಲಿ ಉತ್ತಮ ಸಂಬಳ ಕೊಟ್ಟರೂ ಪ್ರತಿಭಾನ್ವಿತರೆನಿಸಿದ ಉದ್ಯೋಗಿಗಳು ಕೆಲಸ ಬಿಟ್ಟು ಹೋಗುತ್ತಿದ್ದರಂತೆ. ಅವರನ್ನು ರಿಟೆನ್ಷನ್ ಮಾಡುವುದು ಬಹಳ ಕಷ್ಟವಾಗಿತ್ತಂತೆ.

ಕಟ್ಟಡ ಎದ್ದುಕಾಣುತ್ತಿಲ್ಲ ಎನ್ನುವುದು ಸಮಸ್ಯೆ…

‘ಒಂದು ಹುಡುಗಿ ತಾನು ಕೆಲಸಕ್ಕೆ ಬರುವುದಿಲ್ಲ ಎಂದು ಒಂದು ದಿನ ಹೇಳಿತು. ಯಾಕೆ ಅಂತ ಕೇಳಿದೆ. ಮನೆಯವರಿಗೆ ಈ ಕೆಲಸದ ಸ್ಥಳ ಇಷ್ಟವಾಗಿಲ್ಲ. ಗ್ಲಾಸ್ ಬ್ಯುಲ್ಡಿಂಗ್ ಇಲ್ಲ. ಅಲ್ಲಿ ಮಾಡೋದು ಬೇಡ ಅಂತಾರೆ ಅಂತ ಆ ಹುಡುಗಿ ಹೇಳಿತು’ ಎಂದು ರೋಹಿತ್ ಭಟ್ ಹೇಳುತ್ತಾರೆ.

ಬಹಳ ಜನರು ಇದೇ ಕಾರಣಕ್ಕೆ ಕೆಲಸ ಬಿಟ್ಟು ಹೋಗುತ್ತಿದ್ದರಂತೆ. ರೋಹಿತ್ ಭಟ್ ಆಗಲೇ ಒಂದು ನಿರ್ಧಾರಕ್ಕೆ ಬಂದರಂತೆ. ಉಡುಪಿಯಲ್ಲಿ ಎದ್ದು ಕಾಣುವ ರೀತಿಯ ಬ್ಯುಲ್ಡಿಂಗ್ ಕಟ್ಟಲು ನಿರ್ಧರಿಸುತ್ತಾರೆ. ಹೆದ್ದಾರಿಯಲ್ಲೇ ಆಗಬೇಕು, ಒರೇಕಲ್ ರೀತಿಯ ಗ್ಲಾಸ್ ಬ್ಯುಲ್ಡಿಂಗೇ ಆಗಬೇಕು ಎಂದು ಹೇಳಿ ಪಕ್ಕಾ ಎಂಎನ್​ಸಿ ಐಟಿ ಕಂಪನಿಯ ಬ್ಯುಲ್ಡಿಂಗ್ ರೀತಿಯದ್ದೇ ಕಟ್ಟಡ ಕಟ್ಟಲಾಯಿತು.

ವಿದೇಶಗಳಿಗೆ ಪ್ರಾಜೆಕ್ಟ್ ಮೇಲೆ ಹೋದಾಗ ಜಾಹೀರಾತು…

ರೋಹಿತ್ ಭಟ್ ತಮ್ಮ ಕಂಪನಿಯ ಬ್ರ್ಯಾಂಡ್ ಬೆಳೆಸಲು ಬೇರೆ ರೀತಿಯ ಪ್ರಯೋಗಗಳನ್ನು ಮಾಡಿದರು. ತಮ್ಮಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಬೇರೆ ದೇಶಗಳಿಗೆ ಕೆಲಸದ ಮೇಲೆ ಹೋದಾಗ ಪತ್ರಿಕೆಗಳಲ್ಲಿ ಶುಭ ಹಾರೈಕೆಯ ಮೆಸೇಜ್​ಗಳನ್ನು ಹಾಕಿಸುವುದು ಇತ್ಯಾದಿ ಮಾಡಿದರು. ಆಗ ಜನರಿಗೆ ರೋಬೋಸಾಫ್ಟ್​ನಲ್ಲಿ ಕೆಲಸ ಮಾಡಿದರೆ ವಿದೇಶಕ್ಕೆ ಹೋಗಬಹುದು ಎನ್ನುವ ಇಮೇಜ್ ಮೂಡುತ್ತಿತ್ತು.

ಹೊಸ ಬ್ಯುಲ್ಡಿಂಗ್​ನಿಂದ ರೋಬೋಸಾಫ್ಟ್​ಗೆ ಹಲವು ಅನುಕೂಲಗಳು

ಗ್ಲಾಸ್ ಬ್ಯುಲ್ಡಿಂಗ್ ಕಟ್ಟಿದ್ದು ರೋಬೋಸಾಫ್ಟ್ ಕಂಪನಿಗೆ ಹಲವು ರೀತಿಯ ಪ್ರಯೋಜನಗಳಾಗಿವೆ. ಉದ್ಯೋಗಿಗಳನ್ನು ಸೆಳಯಲು ಸಾಧ್ಯವಾಗಿದೆ. ಕ್ಲೈಂಟ್​ಗಳನ್ನು ಆಕರ್ಷಿಸಲು ಸಾಧ್ಯವಾಗಿದೆ. ವಸಂತ್ ಶೆಟ್ಟಿ ಅವರ ಪೋಡ್​ಕ್ಯಾಸ್ಟ್​ನಲ್ಲಿ ಇಂಥ ಕೆಲ ವಿಚಾರಗಳನ್ನು ರೋಬೋಸಾಫ್ಟ್​ನ ರೋಹಿತ್ ಭಟ್ ಹಂಚಿಕೊಂಡಿದ್ದಾರೆ. ಈ ಸಣ್ಣ ತುಣುಕಿನ ವಿಡಿಯೋ ಲಿಂಕ್ ಈ ಕೆಳಕಂಡಂತಿದೆ.

ಪೋಡ್​ಕ್ಯಾಸ್ಟ್​ನ ಪೂರ್ಣ ವಿಡಿಯೋ ಇಲ್ಲಿದೆ:

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮದ್ವೆಗೂ ಮುಂಚೆ ಪ್ರಗ್ನೆಂಟ್, ಹುಟ್ಟಿದಾಕ್ಷಣ ಹಸುಗೂಸು ಸಾವು:ಸಾವಿನ ಸುತ್ತ ಅನುಮಾನದ ಹುತ್ತ – Kannada News | Staff nurse pregnant Before marriage, A Baby Suspected death after delivery at Hassan

ಚಿಕ್ಕಮಗಳೂರು, (ಜನವರಿ 21): ಮದುವೆಗೂ (Marriage)  ಮುನ್ನವೇ ಸ್ಟಾಫ್​​ ನರ್ಸ್​ವೊಬ್ಬರು (staff nurse) ತಾಯಿ ಆಗಿದ್ದಾರೆ. ಆದ್ರೆ, ಹರಿಗೆ ಆದ ಒಂದೇ ನಿಮಿಷದಲ್ಲಿ ಹಸುಗೂಸು ಸಾವನ್ನಪ್ಪಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಹೌದು… ಚಿಕ್ಕಮಗಳೂರಿನ (Chikkamagaluru) ತರೀಕೆರೆಯ ಬಾವಿಕೆರೆ ಗ್ರಾಮದ ಸ್ಟಾಫ್ ನರ್ಸ್ ಮದುವೆಗೂ ಮುನ್ನ ಮಗುವಿಗೆ ಜನ್ಮ ನೀಡಿದ್ದಾರೆ. ಆದ್ರೆ, ಮಗು ಮೃತಪಟ್ಟಿದ್ದು, ಸಮಾಜದ ಗೌರವಕ್ಕೆ ಅಂಜಿ ಕುಟುಂಬಸ್ಥರೇ ಹಸುಗೂಸನ್ನು ಕೊಲೆ ಮಾಡಿದ್ದಾರೆ ಎನ್ನುವ ಅನುಮಾನಗಳು ವ್ಯಕ್ತವಾಗಿವೆ. ಹೀಗಾಗಿ ಈ ಸಂಬಂಧ ಲಕ್ಕವಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡ ನರ್ಸ್

ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ, ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದು, ಕುಟುಂಬದ ಗೌರವದ ದೃಷ್ಟಿಯಿಂದ ಈ ವಿಷಯವನ್ನು ಗುಟ್ಟಾಗಿಡಲಾಗಿತ್ತು. ಆದ್ರೆ, ಕಳೆದ 15 ದಿನಗಳ ಹಿಂದೆ ಮನೆಯಲ್ಲೇ ಯುವತಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋದರೆ ವಿಷಯ ಜಗಜ್ಜಾಹೀರಾಗುತ್ತದೆ ಎಂಬ ಭಯಕ್ಕೆ ನರ್ಸ್ ಆಗಿದ್ದ ಯುವತಿ, ತನ್ನ ತಂದೆ-ತಾಯಿ ಮತ್ತು ಅಜ್ಜಿಯ ಸಹಾಯದಿಂದ ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡಿದ್ದಾಳೆ. ಆದ್ರೆ,  ಹುಟ್ಟಿದ ಒಂದೇ ನಿಮಿಷದಲ್ಲೇ ಮಗು ಸಾವನ್ನಪ್ಪಿದೆ. ಹೀಗಾಗಿ ಮರ್ಯಾದೆ ಹೆದರಿ ಮಗುವನ್ನು ಕುಟುಂಬಸ್ಥರೇ ಉಸಿರುಗಟ್ಟಿಸಿ ಕೊಂದಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿ: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ಮಗಳಿಗಾಗಿ ಕಣ್ಣೀರು ಹಾಕಿದ ಹೆತ್ತವರು

ಮಗುವಿನ ಸಾವು ಬಯಲಿಗೆ ಬಂದಿದ್ಹೇಗೆ?

ಇನ್ನು ಮಗು ಸಾವನ್ನಪ್ಪಿದ ಬಳಿಕ ಮೃತದೇವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಹೋಗಿ, ಜನವಸತಿ ಇಲ್ಲದ ತಿಪ್ಪೆಯ ಗುಂಡಿಯೊಂದರಲ್ಲಿ ಹೂತು ಬಂದಿದ್ದಾರೆ. ಆದ್ರೆ, ಇದನ್ನು ತಿಪ್ಪೆ ಗುಂಡಿಯ ಪಕ್ಕದ ಮನೆಯ ಯುವಕ ನೋಡಿದ್ದು, ಏನೋ ಹೂತು ಹಾಕಿರುವ ಬಗ್ಗೆ ಯುವಕನಿಗೆ ಅನುಮಾನ ಮೂಡಿದೆ. ಬಳಿಕ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಈ ಮಾಹಿತಿ ಮೇರೆಗೆ ಕೂಡಲೇ ಲಕ್ಕವಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ತಿಪ್ಪೆಯಲ್ಲಿ ಹೂತಿದ್ದ ಮಗುವಿನ ಮೃತದೇಹ ಪತ್ತೆಯಾಗಿದೆ.

ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿರುವ ಪೊಲೀಸರು

ಸದ್ಯ ಪೊಲೀಸರು ಹಸುಗೂಸಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು,ಮರಣೋತ್ತರ ಪರೀಕ್ಷೆ ವರದಿ ಬಳಿಕ ಮಗು ಸಹಜವಾಗಿಯೇ ಉಸಿರುಗಟ್ಟಿ ಸಾವನ್ನಪ್ಪಿದೆಯೋ ಅಥವಾ ಕುಟುಂಬಸ್ಥರೇ ಉಸಿರುಗಟ್ಟಿಸಿ ಕೊಂದಿದ್ದಾರೋ ಎನ್ನುವುದು ಗೊತ್ತಾಗಲಿದೆ. ಹೀಗಾಗಿ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಕಾಯುತ್ತಿದ್ದಾರೆ.

ಇನ್ನು ಅನುಮಾಸ್ಪದ ಸಾವು ಎಂದು ಪ್ರಕರಣ ದಾಖಲಸಿಕೊಂಡಿರುವ ಪೊಲೀಸರು, ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದಾರೆ. ಆದ್ರೆ, ಇದುವರೆಗೂ ಯಾರನ್ನೂ ಬಂಧನ ಮಾಡಿಲ್ಲ. ಒಂದು ವೇಳೆ ವರದಿಯಲ್ಲಿ ಮಗುವನ್ನು ಕೊಲೆ ಮಾಡಲಾಗಿದೆ ಎಂದು ದೃಢವಾದರೆ ಕುಟುಂಬಸ್ಥರನ್ನು ಬಂಧಿಸಲಿದ್ದಾರೆ.

ಒಟ್ಟಿನಲ್ಲಿ ಮದುವೆಗೂ ಮುನ್ನವೇ ನರ್ಸ್ ತಾಯಿ ಆಗಿದ್ದು, ಅನಾಯಾಸವಾಗಿ ಕಣ್ಣು ಬಿಟ್ಟು ಪ್ರಪಂಚವನ್ನು ನೋಡುವ ಮೊದಲೇ ಮಗು ಮೃತಪಟ್ಟಿದ್ದು ದುರಂತ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

“ನನಗೆ ಸಿದ್ಧರಾಮಯ್ಯ ಗೊತ್ತು, ಅವರ ಮಗ ಯತೀಂದ್ರ ಗೊತ್ತು”: ಕುಟುಂಬವೊಂದಕ್ಕೆ ಕೈ ಮುಖಂಡನಿಂದ ಜೀವ ಬೆದರಿಕೆ – Kannada News | Karnataka Congress Leaders: Officials, Citizens Face Intimidation in CM’s Area

ಕುಟುಂಬವೊಂದಕ್ಕೆ ಕೈ ಮುಖಂಡನಿಂದ ಜೀವ ಬೆದರಿಕೆ

ಮೈಸೂರು, ಜ.21: ಕಾಂಗ್ರೆಸ್​​ ಮುಖಂಡರು ದಬ್ಬಾಳಿಕೆ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ಗಾಗೆ ವೈರಲ್​ ಆಗುತ್ತಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣದಲ್ಲಿ ಮಹಿಳಾ ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಗಂಭೀರ ಪ್ರಕರಣವೊಂದು ನಡೆದಿತ್ತು. ಇದೀಗ ಮತ್ತೊಂದು ಪ್ರಕರಣ ಸಿಎಂ ಸಿದ್ಧರಾಮಯ್ಯ (Congress leader threats) ಕ್ಷೇತ್ರದಲ್ಲೇ ನಡೆದಿದೆ. ವರುಣ ಕ್ಷೇತ್ರದ ಕಾಂಗ್ರೆಸ್​ ಮುಖಂಡ ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆ ವರುಣ ವ್ಯಾಪ್ತಿಯ ಹೆಬ್ಯಾ ಗ್ರಾಮದ ಅಮಿತಾಬ್ ಎಂಬುವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಮುಖಂಡ ರಾಜು ಎಂಬುವವರು ಜಮೀನು ವಿಚಾರಕ್ಕೆ ಅಮಿತಾಬ್ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜು ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಮೀನು ವಿಚಾರಕ್ಕಾಗಿ ರಾಜು ಅಮಿತಾಬ್ ಅವರ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ. ಜತೆಗೆ ಹಲ್ಲೆ ನಡೆಸಲು ಕೂಡ ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ನಮಗೆ ಸಿದ್ದರಾಮಯ್ಯ ಗೊತ್ತು, ಯತೀಂದ್ರ ಗೊತ್ತು ಎಂದು ಧಮ್ಕಿ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಮನೆಯ ಮೇಲೆ ಕಲ್ಲು ತೋರಾಟ ಕೂಡ ಮಾಡಿದ್ದಾರೆ ಎಂದು ಅಮಿತಾಬ್ ಕುಟುಂಬ ದೂರಿನಲ್ಲಿ ಹೇಳಿದ್ದಾರೆ.

ನಾವು ಹೇಳಿದವರಿಗೆ ಜಾಗ ಕೊಡಬೇಕು , ಒಂದು ವೇಳೆ ಕೊಡಲಿ ಎಂದರೆ ಕಥೆ ಬೇರೆಯಾಗುತ್ತದೆ. ನಾನು ಯಾರು ಗೊತ್ತಾ?, ನನಗೆ ಸಿಎಂ ಸಿದ್ಧರಾಮಯ್ಯ ಕೂಡ ಗೊತ್ತು, ಅವರ ಮಗ ಯತೀಂದ್ರ ಸಹ ಗೊತ್ತು. ಮನೆಯೊಳಗೆ ಬಂದು ನಮ್ಮ ಮೇಲೆ ಕೈ ಮಾಡಿದ್ದಾರೆ. ರಾತ್ರಿ ಹೊತ್ತು ಜೀವ ಭಯದಲ್ಲೇ ಕಳೆಯುತ್ತಿದ್ದೇವೆ. ಮನೆಗೆ ಕಲ್ಲು ಕೂಡ ಹೊಡೆದಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಗಮನಕ್ಕೆ ತಂದರು ಯಾವುದೇ ಪ್ರಯೋಜನ ಆಗಿಲ್ಲ ಎಂದು ಅಮಿತಾಬ್ ಹೇಳಿದ್ದಾರೆ.

ಇದನ್ನೂ ಓದಿ: ‘ಇಲ್ಲೇ ನಿನ್ನ ಹೆಣ ಬೀಳತ್ತೆ!’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!

ಸಿಎಂ ಕ್ಷೇತ್ರದಲ್ಲಿ ಮಹಿಳಾ ಸರ್ಕಾರಿ ಅಧಿಕಾರಿ ಅವಾಚ್ಯ ಶಬ್ಧಗಳಿಂದ ನಿಂದನೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಇತ್ತೀಚೆಗೆ ಗ್ರಾಮ ಆಡಳಿತಾಧಿಕಾರಿ ಜಿ. ಭವ್ಯಾ ಅವರಿಗೆ ಜಿ.ಎಂ. ಪುಟ್ಟಸ್ವಾಮಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದರು. ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಗುರುತಿಸುವ ಮತ್ತು ಸ್ವಾಧೀನ ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ಬಂಡೀಪಾಳ್ಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಜಿ. ಭವ್ಯಾ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಸೇರಿ ಜಮೀನು ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಅಡಕೆ ತೋಟ ನಿರ್ಮಿಸಿಕೊಂಡಿದ್ದ ಜಿ.ಎಂ. ಪುಟ್ಟಸ್ವಾಮಿ ಅಧಿಕಾರಿಗಳ ಮೇಲೆ ಆಕ್ರೋಶಗೊಂಡು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅಶ್ಲಿಲ ಪದಗಳಿಂದ ನಿಂದಿಸಿ ಕಾಂಗ್ರೆಸ್ ಮುಖಂಡ

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಹಾಗೂ ಅಶ್ಲಿಲ ಪದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದರು. ನಡು ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಕೋಪಗೊಂಡು, ದೂರವಾಣಿ ಕರೆ ಮೂಲಕ ಅವ್ಯಾಚ್ಚ ಶಬ್ದಗಳನ್ನು ಬಳಸಿ ಬೆದರಿಕೆ ಹಾಕಿದ್ದರು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್​​ ಮುಖಂಡರು ಸರ್ಕಾರಿ ಅಧಿಕಾರಿಗಳ ಮೇಲೆ ಹಾಗೂ ಸಾಮಾನ್ಯರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಅಧಿಕಾರಿಗಳು ಕೂಡ ಭಯದ ವಾತಾವರಣದಲ್ಲೇ ಕೆಲಸ ಮಾಡಬೇಕಾದ ಸ್ಥಿತಿ ಬಂದಿದೆ ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:41 pm, Wed, 21 January 26

Source link

ಗಿಲ್ಲಿ ಬಡವನಾ ಶ್ರೀಮಂತನಾ? ಮುತ್ತಿನಂಥ ಮಾತು ಹೇಳಿದ ಸೂರಜ್ – Kannada News | Bigg Boss Kannada 12: Sooraj talks about criticism against Gilli

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಮುಗಿದಿದೆ. ಗಿಲ್ಲಿ ಶೋ ಗೆದ್ದು ವಿನ್ನರ್ ಎನಿಸಿಕೊಂಡಿದ್ದಾರೆ. ಆದರೆ ಗಿಲ್ಲಿ ಗೆದ್ದಿರುವುದು ಕೆಲವರಿಗೆ ಅರಗಿಸಿಕೊಳ್ಳಲಾಗಿಲ್ಲ. ಶೋ ಮುಗಿದ ಬಳಿಕ ಅಶ್ವಿನಿ ಅವರು ಗಿಲ್ಲಿಯ ಗೆಲುವನ್ನೇ ಪ್ರಶ್ನೆ ಮಾಡಿದ್ದಾರೆ. ಗಿಲ್ಲಿ ತಾನು ಬಡವನಂತೆ ನಾಟಕ ಮಾಡಿದ್ದಾನೆ, ಆದರೆ ಆತ ಬಡವ ಅಲ್ಲ ಎಂಬಿತ್ಯಾದಿ ಟೀಕೆಗಳನ್ನು ಮಾಡಿದ್ದಾರೆ. ಇದೀಗ ಅದೇ ಸೀಸನ್​​ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಹೋಗಿ ಚೆನ್ನಾಗಿಯೇ ಆಟ ಆಡಿದ ಸೂರಜ್ ಅವರು ಈ ವಿವಾದದ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಗಿಲ್ಲಿಯ ಬಗ್ಗೆ, ಆತನ ಹಿನ್ನೆಲೆ ಬಗ್ಗೆ ಬರುತ್ತಿರುವ ಟೀಕೆ, ಮೂದಲಿಕೆಗಳಿಗೆ ಸರಿಯಾದ ಉತ್ತರವನ್ನೇ ನೀಡಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ICC ODI Rankings: ವಾರದೊಳಗೆ ಅಗ್ರಸ್ಥಾನ ಕಳೆದುಕೊಂಡ ವಿರಾಟ್ ಕೊಹ್ಲಿ

Source link

IND vs SA: ದಕ್ಷಿಣ ಆಫ್ರಿಕಾಕ್ಕೆ ಹಾರಲಿದೆ ಟೀಂ ಇಂಡಿಯಾ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ – Kannada News | BCCI Unveils India Women’s SA Tour 2026: 5 Match T20 Series Details

2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್ (T20 World Cup 2026) ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಪಂದ್ಯಾವಳಿ ಫೆಬ್ರವರಿ 7 ರಂದು ಭಾರತ ಮತ್ತು ಶ್ರೀಲಂಕಾದಲ್ಲಿ ಪ್ರಾರಂಭವಾಗಲಿದೆ. ಹೀಗಾಗಿ ಎಲ್ಲರ ಕಣ್ಣುಗಳು ಪ್ರಸ್ತುತ ಈ ಟಿ20 ವಿಶ್ವಕಪ್ ಮೇಲಿವೆ. ಟೀಂ ಇಂಡಿಯಾ ಕೂಡ ಅದಕ್ಕಾಗಿ ತಯಾರಿ ನಡೆಸುತ್ತಿದೆ. ಆದಾಗ್ಯೂ, ಈ ವರ್ಷ ಮತ್ತೊಂದು ಟಿ20 ವಿಶ್ವಕಪ್ ನಿಗದಿಯಾಗಿದ್ದು, ಭಾರತ ತಂಡವು ಪ್ರಶಸ್ತಿ ಸ್ಪರ್ಧಿಯಾಗಿ ಆ ಪಂದ್ಯಾವಳಿಯನ್ನು ಪ್ರವೇಶಿಸಲಿದೆ. ಹರ್ಮನ್​ಪ್ರೀತ್ ಕೌರ್ (Harmanpreet Kaur) ನಾಯಕತ್ವದ ಭಾರತ ಮಹಿಳಾ ತಂಡವು ಶೀಘ್ರದಲ್ಲೇ 2026 ರ ಮಹಿಳಾ ಟಿ20 ವಿಶ್ವಕಪ್ ಸಿದ್ಧತೆಗಳನ್ನು ಪ್ರಾರಂಭಿಸಲಿದೆ. ಅದರ ಭಾಗವಾಗಿ ಭಾರತ ಮಹಿಳಾ ಪಡೆ ಏಪ್ರಿಲ್​ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ.

ಟಿ20 ವಿಶ್ವಕಪ್‌ಗೂ ಮುನ್ನ 3 ದೊಡ್ಡ ಸರಣಿಗಳು

ಭಾರತ ಮಹಿಳಾ ತಂಡವು ಏಪ್ರಿಲ್ 2026 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದ್ದು, ಇದೀಗ ಬಿಸಿಸಿಐ ಕೂಡ ಈ ಪ್ರವಾಸದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎರಡೂ ತಂಡಗಳು ಏಪ್ರಿಲ್ 17 ರಿಂದ ಪ್ರಾರಂಭವಾಗುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಕಳೆದ ವರ್ಷ ಏಕದಿನ ವಿಶ್ವಕಪ್ ಗೆದ್ದ ನಂತರ ಇದು ಭಾರತದ ಮೂರನೇ ಸರಣಿಯಾಗಿದೆ. ಟೀಂ ಇಂಡಿಯಾ ಡಿಸೆಂಬರ್ 2025 ರಲ್ಲಿ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಆಡಿತ್ತು. ಇದೀಗ ನಡೆಯುತ್ತಿರುವ ಡಬ್ಲ್ಯುಪಿಎಲ್ ಬಳಿಕ ಫೆಬ್ರವರಿ-ಮಾರ್ಚ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಮಾಡಲಿದ್ದು, ಅಲ್ಲಿ ಮೂರು ಸ್ವರೂಪಗಳ ಸರಣಿಯನ್ನು ಆಡಲಿದೆ.

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ

ಆಸ್ಟ್ರೇಲಿಯಾ ಪ್ರವಾಸದ ಬಳಿಕ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಕೈಗೊಳ್ಳಲಿದೆ. ಇದೀಗ ಈ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದ್ದು, ಅದರ ಪ್ರಕಾರ ಎಲ್ಲಾ ಐದು ಪಂದ್ಯಗಳು ದಕ್ಷಿಣ ಆಫ್ರಿಕಾದ ಮೂರು ವಿಭಿನ್ನ ಸ್ಥಳಗಳಲ್ಲಿ ನಡೆಯಲಿವೆ. ಎರಡು ಪಂದ್ಯಗಳು ಡರ್ಬನ್‌ನಲ್ಲಿ, ಎರಡು ಪಂದ್ಯಗಳು ಜೋಹಾನ್ಸ್‌ಬರ್ಗ್‌ನಲ್ಲಿ ಮತ್ತು ಒಂದು ಪಂದ್ಯ ಬೆನೋನಿಯಲ್ಲಿ ನಡೆಯಲಿದೆ. ಈ ಪ್ರವಾಸದ ನಂತರ, ಟೀಂ ಇಂಡಿಯಾ ಮೇ ಅಂತ್ಯದಲ್ಲಿ ಟಿ20 ವಿಶ್ವಕಪ್‌ಗೆ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿದೆ. ಆದಾಗ್ಯೂ, ವಿಶ್ವಕಪ್‌ಗೆ ಮೊದಲು ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ವಿಶ್ವಕಪ್ ಜೂನ್ 12 ರಂದು ಆರಂಭವಾಗಲಿದೆ.

ಆಫ್ರಿಕಾ ಪ್ರವಾಸದ ವೇಳಾಪಟ್ಟಿ

  1. ಏಪ್ರಿಲ್ 17 – ಮೊದಲ ಟಿ20, ಡರ್ಬನ್
  2. ಏಪ್ರಿಲ್ 19 – ಎರಡನೇ ಟಿ20, ಡರ್ಬನ್
  3. ಏಪ್ರಿಲ್ 22 – 3ನೇ ಟಿ20, ಜೋಹಾನ್ಸ್‌ಬರ್ಗ್
  4. ಏಪ್ರಿಲ್ 25 – 4ನೇ ಟಿ20, ಜೋಹಾನ್ಸ್‌ಬರ್ಗ್
  5. ಏಪ್ರಿಲ್ 27 – ಐದನೇ ಟಿ20, ಬೆನೋನಿ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:53 pm, Wed, 21 January 26

Source link

‘ಟಾಕ್ಸಿಕ್’ ಸಿನಿಮಾ ಟೀಸರ್​​ನಲ್ಲಿ ಅಶ್ಲೀಲತೆ: ಸಿಬಿಎಫ್​​ಸಿ ಮುಖ್ಯಸ್ಥ ಹೇಳಿದ್ದೇನು? – Kannada News | CBFC Chief talks about Toxic movie teaser and its controversy

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿ ಕೆಲ ವಾರಗಳಾಗಿವೆ. ಟೀಸರ್, ಈಗಾಗಲೇ ದಾಖಲೆ ಸಂಖ್ಯೆಯ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲಿಯೂ ಸಹ ಕೋಟ್ಯಂತರ ಮಂದಿ ‘ಟಾಕ್ಸಿಕ್’ ಸಿನಿಮಾದ ಟೀಸರ್ ನೋಡಿದ್ದಾರೆ. ಟೀಸರ್​​ನ ಗುಣಮಟ್ಟವನ್ನು ಬಹುವಾಗಿ ಕೊಂಡಾಡಿದ್ದಾರಾದರೂ ಕೆಲವರು, ಟೀಸರ್​​ನಲ್ಲಿ ಅನವಶ್ಯಕ ಅಶ್ಲೀಲತೆ ಇದೆ ಎಂದು ಮೂಗು ಮುರಿದಿದ್ದಾರೆ. ಕೆಲವರು ಈಗಾಗಲೇ ಮಕ್ಕಳ ಆಯೋಗ, ಮಹಿಳಾ ಆಯೋಗಕ್ಕೆ ಈ ಬಗ್ಗೆ ದೂರು ಸಹ ನೀಡಿದ್ದಾರೆ. ಸಿಬಿಎಫ್​​ಸಿಗೆ ಸಹ ಈ ಬಗ್ಗೆ ದೂರು ನೀಡಲಾಗಿದ್ದು, ‘ಟಾಕ್ಸಿಕ್’ ಸಿನಿಮಾಕ್ಕೆ ಪ್ರಮಾಣ ಪತ್ರವನ್ನೇ ನೀಡಬಾರದು ಎಂದು ಆಗ್ರಹಿಸಿದ್ದಾರೆ. ಇದೀಗ ಸ್ವತಃ ಸಿಬಿಎಫ್​​ಸಿಯ ಮುಖ್ಯಸ್ಥ ಪ್ರಸೂನ್ ಜೋಶಿ ‘ಟಾಕ್ಸಿಕ್’ ಸಿನಿಮಾ ಟೀಸರ್​ ಬಗ್ಗೆ ಮಾತನಾಡಿದ್ದಾರೆ.

‘ಸೆನ್ಸಾರ್ ಮಂಡಳಿಗೆ ಸಿನಿಮಾವನ್ನು ನೀಡದ ಹೊರತು ನಾನು ಆ ಬಗ್ಗೆ ಪ್ರತಿಕ್ರಿಯಿಸಲು ಹೋಗುವುದಿಲ್ಲ, ಆದರೆ ಕೆಲವೊಮ್ಮೆ, ಯೂಟ್ಯೂಬ್ ಮತ್ತು ಇತರೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನೀವು ನೋಡುವ ಬಹಳಷ್ಟು ವಿಷಯಗಳು ಸೆನ್ಸಾರ್ ಆಗಿರುವುದಿಲ್ಲ, ಆದರೆ ಜನರು ಅದು ಸೆನ್ಸಾರ್ ಮಂಡಳಿಯಿಂದ ಸೆನ್ಸಾರ್ ಆಗಿ ಬಂದಿದೆ ಎಂದು ಭಾವಿಸುತ್ತಾರೆ. ಆದರೆ ಅದು ಸೆನ್ಸಾರ್ ಆಗಿರುವುದಿಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ’ ಎಂದಿದ್ದಾರೆ. ಆ ಮೂಲಕ ‘ಟಾಕ್ಸಿಕ್’ ಟೀಸರ್​​​ನಲ್ಲಿ ಸೆನ್ಸಾರ್ ಆಗಬಹುದಾದ ಅಂಶಗಳು ಇವೆಯೆಂದು ಪರೋಕ್ಷವಾಗಿ ಹೇಳಿದ್ದಾರೆ.

ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಬಾರದು ಎಂಬ ಆಗ್ರಹ ಇದೆ ಎಂಬ ಪ್ರಶ್ನೆಗೆ ಉತ್ತರಿಸಿ, ‘ನಾನು ಈಗಲೇ ಏನನ್ನೂ ಖಡಾ ಖಂಡಿತವಾಗಿ ಹೇಳಲು ಬರುವುದಿಲ್ಲ. ಡಿಜಿಟಲ್ ಮಾಧ್ಯಮಗಳಲ್ಲಿ ಜನ ನೋಡುವ ಬಹಳಷ್ಟು ವಿಷಯಗಳು ಸೆನ್ಸಾರ್ ಪ್ರಕ್ರಿಯೆಯ ಮೂಲಕ ಹಾದು ಹೋಗಿರುವುದಿಲ್ಲ. ಆದರೆ ಜನ ಸೆನ್ಸಾರ್ ಮಂಡಳಿಯಿಂದ ಒಪ್ಪಿಗೆ ಪಡೆದಿವೆ ಎಂದುಕೊಂಡು ಒಟಿಟಿ, ಯೂಟ್ಯೂಬ್​​ಗಳಲ್ಲಿ ಸಿನಿಮಾಗಳನ್ನು ನೋಡುತ್ತಾರೆ, ಇದು ಸರಿಯಲ್ಲ, ಅನ್ಯಾಯ’ ಎಂದಿದ್ದಾರೆ ಆ ಮೂಲಕ ಒಟಿಟಿ ಮತ್ತು ಯೂಟ್ಯೂಬ್ ಕಂಟೆಂಟ್​​ಗಳೂ ಸಹ ಸೆನ್ಸಾರ್ ಪ್ರಕ್ರಿಯೆಗೆ ಒಳಗಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಸೂಸ್ ಜೋಶಿ ಅವರಿಗೆ ‘ಜನ ನಾಯಗನ್’ ಸಿನಿಮಾದ ಬಗ್ಗೆ ಕೇಳಲಾದ ಪ್ರಶ್ನೆಯ ಬಗ್ಗೆ ಉತ್ತರಿಸಲು ನಿರಾಕರಿಸಿದ ಪ್ರಸೂನ್ ಜೋಶಿ, ‘ಆ ಪ್ರಕರಣ ಪ್ರಸ್ತುತ ನ್ಯಾಯಾಲಯದಲ್ಲಿ ಹಾಗಾಗಿ ಆ ಬಗ್ಗೆ ಏನೂ ಹೇಳುವುದಿಲ್ಲ’ ಎಂದರು.

ಇದನ್ನೂ ಓದಿ:ನನ್ನ ಸಿನಿಮಾ ನೋಡಿ ಎಂದು ಪಾಂಪ್ಲೆಂಟ್ ಹಂಚಿದ್ದ ಯಶ್; ಅಪರೂಪದ ಫೋಟೋ ವೈರಲ್

‘ಟಾಕ್ಸಿಕ್’ ಸಿನಿಮಾದ ಟೀಸರ್ ಕುರಿತಾಗಿ ಕರ್ನಾಟಕ ಎಎಪಿ ಮಹಿಳಾ ಘಟಕದ ಸದಸ್ಯೆಯರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಅಲ್ಲದೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ಸಿಬಿಎಫ್​​ಸಿಗೆ ಕರೆ ಮಾಡಿದ್ದು, ‘ಟಾಕ್ಸಿಕ್’ ಸಿನಿಮಾನಲ್ಲಿ ಸಾಕಷ್ಟು ಅಶ್ಲೀಲ ದೃಶ್ಯಗಳಿದ್ದು, ಇದು ಮಕ್ಕಳು, ಯುವಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಹಾಗಾಗಿ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಬಾರದು ಎಂದು ಆಗ್ರಹಿಸಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಅನ್ನು ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದು, ಸಿನಿಮಾಕ್ಕೆ ಯಶ್ ಹಾಗೂ ಕೆವಿಎನ್​​ ಒಟ್ಟಾಗಿ ಬಂಡವಾಳ ತೊಡಗಿಸಿದ್ದಾರೆ. ಸಿನಿಮಾನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾಪಾಡಲಿಲ್ಲ ಮಹದೇಶ್ವರ: ಚಿರತೆ ದಾಳಿಗೆ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ – Kannada News | Male Mahadeshwara Pilgrim Killed by Leopard in Chamarajanagar

ಚಿರತೆ ದಾಳಿಗೆ ಬಲಿಯಾದ ಪ್ರವೀಣ್​​

ಚಾಮರಾಜನಗರ, ಜನವರಿ 21: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್​ ಮೃತ ದುರ್ದೈವಿಯಾಗಿದ್ದು, ತಡರಾತ್ರಿ ತಾಳ ಬೆಟ್ಟದ ಬಳಿ ಪೂಜೆ ಸಲ್ಲಿಸಿ ತೆರಳುವಾಗ ಚಿರತೆ ದಾಳಿ ನಡೆಸಿದೆ.  ಪಾದಯಾತ್ರೆ ಹೊರಟಿದ್ದ ಐವರು  ತೆರಳುವಾಗ ತಡೆಗೋಡೆ ಮೇಲೆ ಕುಳಿತಿದ್ದ ಚಿರತೆ ನೋಡಿ ಬೆಚ್ಚಿ ಬಿದ್ದಿದ್ದಿದ್ದಾರೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್ ನಾಪತ್ತೆಯಾಗಿದ್ದ. ತಡೆಗೋಡೆಯಿಂದ ಕೆಳಗೆ ಬಿದ್ನಾ, ಇಲ್ಲ ಚಿರತೆ ದಾಳಿ ಮಾಡಿದೆಯಾ? ಎಂಬ ಅನುಮಾನ ಆರಂಭದಲ್ಲಿ ಮೂಡಿತ್ತು. ಆದರೆ ಅಂತಿಮವಾಗಿ ಚಿರತೆ ದಾಳಿಗೆ ಆತ ಬಲಿಯಾಗಿರೋದು ದೃಢಪಟ್ಟಿದೆ.

ಶವದ ಪಕ್ಕವೇ ಕುಳಿತಿದ್ದ ನರಭಕ್ಷಕ ಚಿರತೆ

ತಾಳಬೆಟ್ಟದ ಕಂದಕದಲ್ಲಿ ಪ್ರವೀಣ್ ಶವ ಪತ್ತೆಯಾಗಿದ್ದು, ಮಾದಪ್ಪನ ಭಕ್ತನ ಕೊಂದ ನರಭಕ್ಷಕ ಚಿರತೆ ಆತನ ರಕ್ತ ಹೀರಿದೆ. ಸುಮಾರು 1 ಕಿ.ಮೀ. ಕಾಡಿನೊಳಗೆ ಚಿರತೆ ಶವ ಎಳೆದುಕೊಂಡು ಹೋಗಿದ್ದು, ಶವ ಪತ್ತೆ ವೇಳೆಯೂ ಪ್ರವೀಣ್ ಮೃತದೇಹದ ಪಕ್ಕದಲ್ಲೇ ಕುಳಿತಿತ್ತು. ಹೀಗಾಗಿ ಶವ ಹೊರತೆಗೆಯಲು ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಅಂತಿಮವಾಗಿ ಪಟಾಕಿ ಸಿಡಿಸಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಓಡಿಸಿದ್ದು, ಸದ್ಯ ಮರಣೋತ್ತರ ಪರೀಕ್ಷೆಗಾಗಿ ಹನೂರು ಆಸ್ಪತ್ರೆಗೆ ಶವ ರವಾನೆ ಮಾಡಲಾಗಿದೆ. ಬೆಳಗಿನ ಜಾವ 5.30ಕ್ಕೆ ತೆರಳುವಂತೆ ನಮಗೆ ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದರು. ನಾವು 6 ಗಂಟೆ ವೇಳೆಗೆ ಹೋಗುತ್ತಿದ್ದ ವೇಳೆ ಚಿರತೆ ಕಾಣಿಸಿದ್ದು, ಸ್ಥಳದಿಂದ ಓಡಲು ಆರಂಭಿಸಿದ್ದೆವು. ಚಿರತೆ ಚಿರತೆ ಎಂದು ಕಿರುಚಾಡಿದ್ದೆವು ಎಂದು ಪ್ರತ್ಯಕ್ಷದರ್ಶಿಯೋರ್ವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಮೇಲೆ ‌ದಾಳಿ ಮಾಡಿದ್ದ ಚಿರತೆ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಬಲಿ 

ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಭಕ್ತ ಪ್ರವೀಣ್ ಬಲಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ 4 ದಿನಗಳ ಕಾಲ ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಅರಣ್ಯಾಧಿಕಾರಿಗಳು ಆದೇಶಿಸಿದ್ದಾರೆ. ಚಿರತೆ ಹಿಡಿಯುವವರೆಗೆ 4 ದಿನಗಳ ಕಾಲ ಪಾದಯಾತ್ರೆ ನಿರ್ಬಂಧ ಇರಲಿದೆ ಎಂದು ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ. ತಾಳಬೆಟ್ಟ ಪ್ರದೇಶದಲ್ಲಿ ಚಿರತೆ ಕೆಲ ದಿನಗಳ ಹಿಂದೆಯೂ ಕಾಣಿಸಿಕೊಂಡಿತ್ತು. ರಸ್ತೆಯ ಬದಿಯಲ್ಲೇ ಇರುವ ಸೇತುವೆ ಮೇಲೆ ಚಿರತೆ ಗಂಟೆಗಟ್ಟಲೆ ಕುಳಿತ ದೃಶ್ಯವನ್ನು ಭಕ್ತರು ಮೊಬೈಲ್​​ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲೇ ಆಗಮಿಸುವುದರಿಂದ ಚಿರತೆಯನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಗೆ ಮನವಿಯನ್ನೂ ಸಲ್ಲಿಸಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಳಗಾವಿ: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ಮಗಳಿಗಾಗಿ ಕಣ್ಣೀರು ಹಾಕಿದ ಹೆತ್ತವರು – Kannada News | Belagavi Shocker: Athani Student Vanishes with Lecturer; Parents Claim Kidnapping

ಚಿಕ್ಕೋಡಿ, ಜ.21: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿರುವ (Athani student missing) ಘಟನೆ ಬೆಳಗಾವಿಯ ಅಥಣಿ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ವಿದ್ಯಾರ್ಥಿನಿಯ ಮನೆಯವರು ಉಪನ್ಯಾಸಕ ನಮ್ಮ ಮಗಳನ್ನು ಕಿಡ್ನಾಪ್​​ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೂಡ ದೂರ ದಾಖಲಿಸಿಕೊಂಡಿದ್ದಾರೆ. ಬೆಳಗಾವಿಯ ಅಥಣಿ ಪಟ್ಟಣದ ಕಾಲೇಜ್​​​​ವೊಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯು ಸ್ಥಳೀಯವಾಗಿ ಸಾಕಷ್ಟು ಸಂಚಲನ ಮೂಡಿಸಿದೆ. ಹಾಗೂ ಸಾರ್ವಜನಿಕರಲ್ಲೂ ಕೂಡ ಆತಂಕ ವಾತಾವರಣ ಸೃಷ್ಟಿಸಿದೆ. ಕಾಲೇಜಿನಂತಹ ಪವಿತ್ರ ಸ್ಥಳದಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿಯ ನಡುವೆ ಇಂತಹ ಸಂಬಂಧ ಇರಬಾರದು. ಈ ಬಗ್ಗೆ ತಕ್ಷಣ ಕಾಲೇಜಿ ಸರಿಯಾದ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಹೇಳಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಆರೋಪ ಹೊತ್ತಿರುವ ಉಪನ್ಯಾಸಕ ಕೂಡ ಅದೇ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದು, ಜನವರಿ 8ರಂದು ವಿದ್ಯಾರ್ಥಿನಿ ನಾಪತ್ತೆಯಾಗಿದ್ದಾಳೆ ಎಂದು ಪೋಷಕರು ಹೇಳಿದ್ದಾರೆ. ಮಗಳು ಕಾಣೆಯಾದ ಮರುದಿನವೇ (ಜ.9) ವಿದ್ಯಾರ್ಥಿನಿ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರ ನೀಡಿ 11 ದಿನವಾದರೂ ವಿದ್ಯಾರ್ಥಿನಿ ಹಾಗೂ ಉಪನ್ಯಾಸಕರು ಪತ್ತೆಯಾಗಿಲ್ಲ. ನಮ್ಮ ಮಗಳನ್ನು ಕಿಡ್ನಾಪ್​​ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಉಪನ್ಯಾಸಕ ಮದುವೆಯ ಆಮಿಷವೊಡ್ಡಿ ಅಥವಾ ಮಗಳಿಗೆ ದಾರಿ ತಪ್ಪಿಸಿ ಕರೆದೊಯ್ದಿರುವ ಸಾಧ್ಯತೆ ಎಂದು ಮನೆಯವರು ಹೇಳಿದ್ದಾರೆ.

ಇದನ್ನೂ ಓದಿ: ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್​?

ವಿದ್ಯಾರ್ಥಿನಿಯ ಮನೆಯವರು ಇದೀಗ ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ಮಗಳು ಕಾಣೆಯಾಗಿದರೂ ನಮಗೆ ವಿಷಯವನ್ನೇ ಹೇಳಿಲ್ಲ. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಕಾರಣ ಎಂದು ಹೇಳಿದ್ದಾರೆ. ಜತೆಗೆ ಕಾಲೇಜಿನ ಮುಂದೆ ಬಂದು ಕುಟುಂಬಸ್ಥರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಹೊರ ಕಳುಹಿಸಿ ಕಾಲೇಜು ಮುಚ್ಚಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಡ ಕೂಗಿದ್ದಾರೆ, ನಮ್ಮ ಮಗಳನ್ನು ಹುಡುಕಿಕೊಡಿ ಎಂದು ಮಗಳಿಗಾಗಿ ಪೋಷಕರು ಕಣ್ಣೀರು ಹಾಕಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ. ಪೊಲೀಸರು ವಿದ್ಯಾರ್ಥಿನಿ ಮತ್ತು ಉಪನ್ಯಾಸಕನ ಮೊಬೈಲ್ ಫೋನ್ ಲೊಕೇಶನ್ ಆಧಾರದ ಮೇಲೆ ಪತ್ತೆ ಹಚ್ಚಲು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:54 pm, Wed, 21 January 26

Source link

Exit mobile version