Headlines

ಬಾಂಗ್ಲಾದೇಶ್ ಆಟಗಾರನಿಗೆ ಬೈಕ್ ಗಿಫ್ಟ್ ನೀಡಿದ ಕೂಪರ್ ಕೊನೊಲಿ! – Kannada News | Cooper Connolly Gifts Award E Bike to Cramped Litton Das

ಕ್ರಿಕೆಟ್ ಮೈದಾನದಲ್ಲಿ ಕೇವಲ ರನ್‌ಗಳು ಮತ್ತು ವಿಕೆಟ್‌ಗಳು ಮಾತ್ರವಲ್ಲ, ಅದರಾಚೆಗಿನ ಮಾನವೀಯತೆ ಮತ್ತು ಕ್ರೀಡಾ ಸ್ಫೂರ್ತಿಯೂ ಅಭಿಮಾನಿಗಳ ಹೃದಯ ಗೆಲ್ಲುತ್ತದೆ. ಇದಕ್ಕೆ ಸಾಕ್ಷಿ ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ. ಏಕೆಂದರೆ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಕೂಪರ್ ಕೊನೊಲಿ ತಮ್ಮ ಅದ್ಭುತ ಆಟ ಹಾಗೂ ಅದಕ್ಕಿಂತ ಮಿಗಿಲಾದ ಔದಾರ್ಯದ ಮೂಲಕ ಇಡೀ ಕ್ರಿಕೆಟ್ ಲೋಕದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೂಪರ್ ಕೊನೊಲಿ: ಮೀರ್‌ಪುರದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ…

Read More

ತಾನೊಂದು ಬಗೆದರೆ, ದೈವವೊಂದು ಬಗೆಯಿತು: ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಯುವಕ – Kannada News | Kumta Beach Tragedy: Youth Drowns at Kadle Beach While Filming Reel

ಕಾರವಾರ, ಜೂನ್​ 15: ರೀಲ್ಸ್ (Reels) ಮಾಡಲು ಹೋಗಿ ಓರ್ವ ಯುವಕ ಸಮುದ್ರಪಾಲಾಗಿರುವಂತಹ (death) ಘಟನೆ ಉತ್ತರ ಕನ್ನಡ ಜಿಲ್ಲೆಯ (uttara kannada) ಕುಮಟಾ ತಾಲೂಕಿನ ಕಡ್ಲೆ ಕಡಲ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಜೀವನ್ ಭಟ್ಟರಾಯಿ(26) ನೀರುಪಾಲಾದ ಯುವಕ. ಕರಾವಳಿ ಕಾವಲುಪಡೆ ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಸದ್ಯ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಕಡ್ಲೆ ಬೀಚ್‌ನಲ್ಲಿ ರೀಲ್ಸ್ ವಿಡಿಯೋ ಮಾಡುವಾಗ ಯುವಕ ಸಮುದ್ರಪಾಲು ಕರಾವಳಿ ಕಾವಲುಪಡೆ, ಅಗ್ನಿಶಾಮಕ…

Read More

Video: ಫ್ರಿಡ್ಜ್‌ನಲ್ಲಿದ್ದ ಮೊಸರನ್ನು ಕದ್ದು ತಿಂದ ಪುಟಾಣಿ, ವೈರಲ್‌ ಆಯ್ತು ದೃಶ್ಯ – Kannada News | A little girl put her mouth on a packet of yogurt in the fridge

ಈಗಿನ ಕಾಲದ ಮಕ್ಕಳು ಪುಟಾಣಿಗಳು (little kids) ತುಂಬಾನೇ ಜಾಣರು. ಅಷ್ಟೇ ತುಂಟರು ಕೂಡ. ಅಷ್ಟೇ ಅಲ್ಲ, ಹೆತ್ತವರ ಮಾತನ್ನು ಕೇಳುವುದೇ ಇಲ್ಲ, ಮಕ್ಕಳ ಮುಂದೆ ಏನಾದರೂ ಹೇಳಿದರೆ ಸಾಕು, ಪ್ರಶ್ನೆಯ ಮೇಲೆ ಪ್ರಶ್ನೆ ಕೇಳುತ್ತಾರೆ. ಎಲ್ಲರನ್ನು ಯಾಮಾರಿಸಿ ಬಿಡುತ್ತಾರೆ. ಇದೀಗ ಪುಟಾಣಿಯೊಂದು ಹೀಗೆಯೇ ಮಾಡಿದೆ. ಫ್ರಿಡ್ಜ್ ನಲ್ಲಿಟ್ಟಿದ್ದ ಮೊಸರಿನ ಪ್ಯಾಕೆಟ್ ಗೆ ಬಾಯಿ ಹಾಕಿದೆ. ಆ ಬಳಿಕ ಮುಗ್ಧತೆಯ ನೋಟ ಬೀರಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಅಮೇಜಿಂಗ್ ಆರ್ಟ್ (Amazing_art)…

Read More

5 ತಿಂಗಳಲ್ಲಿ 3 ಮದುವೆಯಾಗಿ ವಂಚಿಸಿದ ಕಿಲಾಡಿ ಮಹಿಳೆ, ದೇವಸ್ಥಾನಕ್ಕೆ ಹೋದ್ರೆ ವಾಪಸ್ ಬರ್ತಿರ್ಲಿಲ್ಲ – Kannada News | Himachal Marriage Fraud: Woman Cheats 3 Men in 5 Months, Police Issue Warning

ಹಮೀರ್​ಪುರ, ಜೂನ್ 15: ಐದು ತಿಂಗಳಲ್ಲಿ ಮೂರು ಮದುವೆ(Marriage)ಯಾಗಿ ಮಹಿಳೆಯೊಬ್ಬಳು ಪರಾರಿಯಾಗಿರುವ ಘಟನೆ ಹಿಮಾಚಲ ಪ್ರದೇಶದ ಹಮೀರ್​ಪುರದಲ್ಲಿ ನಡೆದಿದೆ. ಶೀತಲ್ ಎಂಬ ಮಹಿಳೆ ಕೇವಲ ಐದು ತಿಂಗಳೊಳಗೆ ಮೂವರು ವ್ಯಕ್ತಿಗಳನ್ನು ಮದುವೆಯಾಗಿ, ಸುಳ್ಳು ನೆಪಗಳನ್ನು ಹೇಳಿ ಪರಾರಿಯಾಗಿದ್ದಾಳೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸರು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಸಂತ್ರಸ್ತ ಕುಟುಂಬಗಳು ನೀಡಿದ ಅಧಿಕೃತ ದೂರಿನ ಮೇರೆಗೆ ಸಂಬಂಧಿತ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ಇಡೀ ಜಾಲವನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ…

Read More

IND A vs SL A: ಶ್ರೀಲಂಕಾ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಮ್ ಇಂಡಿಯಾ – Kannada News | Sri Lanka A vs India A: Team India All Out For 265 Runs

ಭಾರತ, ಶ್ರೀಲಂಕಾ, ಅಫ್ಘಾನಿಸ್ತಾನ್ ಎ ತಂಡಗಳ ನಡುವಣ ತ್ರಿಕೋನ ಸರಣಿಯ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು 265 ರನ್​​ಗಳಿಸಿದೆ.  ದಂಬುಲ್ಲಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಎ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಆರಂಭಿಕರಾದ ವೈಭವ್ ಸೂರ್ಯವಂಶಿ (21) ಹಾಗೂ ಪ್ರಭ್​ಸಿಮ್ರಾನ್ ಸಿಂಗ್ (11) ಬೇಗನೆ ಔಟಾಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ರುತುರಾಜ್…

Read More

ಆತ್ಮಹತ್ಯೆ ಮಾಡಿಕೊಂಡ ಸಂಚಿತಾ ಉಗಾಲೆ; ಸಾವಿಗೂ ಮುನ್ನ ರೀಲ್ಸ್ ಮಾಡಿದ್ದ ಕಿರುತೆರೆ ನಟಿ – Kannada News | Sanchita Ugale, ‘Kumkum Bhagya’ Actress, ends her life at the age of 30; Hindi TV Serial Industry Shocked

ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಖ್ಯಾತಿಯ ಯುವ ನಟಿ ಸಂಚಿತಾ ಉಗಾಳೆ ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಕೇವಲ 30 ವರ್ಷ ವಯಸ್ಸಾಗಿತ್ತು. ಭಾನುವಾರ (ಜೂನ್ 14) ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿ ಅವರು ತಮ್ಮ ಜೀವ ಕೊನೆ ಮಾಡಿಕೊಂಡಿದ್ದು, ಬೆಡ್‌ರೂಮ್‌ನಲ್ಲಿ ಅವರ ಶವ ಸಿಕ್ಕಿದೆ. ಸೋಮವಾರ ಈ ವಿಷಯ ಅಧಿಕೃತವಾಗಿ ಬೆಳಕಿಗೆ ಬಂದಿದೆ. ಈ ಸುದ್ದಿ ಕಿರುತೆರೆ ಲೋಕಕ್ಕೆ ಭಾರಿ ಆಘಾತವನ್ನು ನೀಡಿದೆ. ಪೊಲೀಸ್ ಮೂಲಗಳ ಪ್ರಕಾರ, ಘಟನೆ ನಡೆದ…

Read More

ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಕಬ್ಬು, ಬಾಳೆಹಣ್ಣು ನೀಡಿದ ಗ್ರಾಮಸ್ಥರು!

ಬೆಂಗಳೂರು, ಜೂನ್ 15: ತಾಯಿಯಿಂದ ಬೇರ್ಪಟ್ಟ ಮರಿಯಾನೆಯೊಂದು ಆಹಾರ ಅರಸಿಕೊಂಡು ಕರ್ನಾಟಕ-ತಮಿಳುನಾಡು ಗಡಿಭಾಗದ ಡೊಂಕರೆಕೋಟೆ ಸಮೀಪದ ಗ್ರಾಮವೊಂದಕ್ಕೆ ಬಂದಿದೆ. ಇದನ್ನು ಗಮನಿಸಿದ ಸ್ಥಳೀಯ ಗ್ರಾಮಸ್ಥರು, ಅದರ ಹಸಿವನ್ನು ನೀಗಿಸಲು ಮುಂದಾಗಿದ್ದಾರೆ. ಮಾನವೀಯತೆ ಮೆರೆದ ಗ್ರಾಮಸ್ಥರು ಮರಿಯಾನೆಗೆ ಕಬ್ಬು ಮತ್ತು ಬಾಳೆಹಣ್ಣು ನೀಡಿ ಉಪಚರಿಸಿದ್ದಾರೆ. ಗ್ರಾಮಸ್ಥರ ಆರೈಕೆಯಿಂದ ಹಸಿವು ನೀಗಿಸಿಕೊಂಡ ಮರಿಯಾನೆ ಸ್ವಲ್ಪ ಸಮಯದ ನಂತರ ಆ ಪ್ರದೇಶದಲ್ಲಿಯೇ ಉಳಿದುಕೊಂಡಿತ್ತು. ಈ ಬಗ್ಗೆ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ದಾವಿಸಿದ್ದಾರೆ. ಮರಿಯಾನೆ ಸದ್ಯ ಸುರಕ್ಷಿತವಾಗಿದ್ದು,…

Read More

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – Kannada News | Tamil Nadu CM Vijay wife Sangeetha Sornalingam Divorce case hearing Adjourned to August 7

ತಮಿಳುನಾಡು ಮುಖ್ಯಮಂತ್ರಿ, ಖ್ಯಾತ ನಟ ದಳಪತಿ ವಿಜಯ್ (Tamil Nadu CM Vijay) ಮತ್ತು ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ನಡುವಿನ ವಿಚ್ಛೇದನ (Divorce) ಪ್ರಕರಣದ ವಿಚಾರಣೆಯನ್ನು ಚೆಂಗಲ್ಪಟ್ಟು ಮಹಿಳಾ ನ್ಯಾಯಾಲಯವು ಆಗಸ್ಟ್ 7ಕ್ಕೆ ಮುಂದೂಡಿದೆ. ಜೂನ್ 15ರ ಸೋಮವಾರದಂದು ನಡೆದ ವಿಚಾರಣೆಗೆ ಕೋರ್ಟ್ ಸೂಚನೆಯಂತೆ ವಿಜಯ್ ಮತ್ತು ಸಂಗೀತಾ (Sangeetha Sornalingam) ಖುದ್ದಾಗಿ ಹಾಜರಾಗಿದ್ದರು. ಬೆಳಿಗ್ಗೆ 10.30ರ ಸುಮಾರಿಗೆ ಆರಂಭವಾದ ವಿಚಾರಣೆಯಲ್ಲಿ ದಂಪತಿ ಉಪಸ್ಥಿತರಿದ್ದರಾದರೂ, ಯಾವುದೇ ಪ್ರಮುಖ ನಿರ್ಧಾರ ಅಥವಾ ಸಂಧಾನ ಸೂತ್ರಗಳು ಮೂಡಿಬರದೆ ಸೆಷನ್…

Read More

ಹಳೆಯ ಕಾರಿಗೆ ಇ20 ಪೆಟ್ರೋಲ್ ಹಾಕಿಸಿದ್ರೆ ಇನ್ಷೂರೆನ್ಸ್ ಸಿಗಲ್ಲವಾ? ವಿಮಾ ಕಂಪನಿ ಹೇಳಿದ್ದಿದು – Kannada News | E20 Fuel in Old Cars: Risk Your Insurance Claim & Engine Damage Warning for Non Compatible Vehicles

ನವದೆಹಲಿ, ಜೂನ್ 15: ಹಳೆಯ ಕಾರುಗಳಲ್ಲಿ E20 ಇಂಧನವನ್ನು (80% ಪೆಟ್ರೋಲ್ ಮತ್ತು 20% ಎಥೆನಾಲ್ ಮಿಶ್ರಣ) ಬಳಸುವುದು ನಿಮ್ಮ ವಾಹನ ವಿಮಾ ಕ್ಲೈಮ್‌ (Insurance Claim) ತಿರಸ್ಕೃತವಾಗಲು ಕಾರಣವಾಗಬಹುದು ಎಂದು ಇನ್ಷೂರೆನ್ಸ್ ಕಂಪನಿಯಾದ ಐಸಿಐಸಿಐ ಲೊಂಬಾರ್ಡ್ (ICICI Lombard) ಎಚ್ಚರಿಸಿದೆ. ಏಪ್ರಿಲ್ 2023ಕ್ಕಿಂತ ಮುಂಚೆ ತಯಾರಾದ ಮತ್ತು E20 ಇಂಧನಕ್ಕೆ ಹೊಂದಿಕೆಯಾಗದ (non-compatible) ವಾಹನಗಳಲ್ಲಿ ಈ ಇಂಧನವನ್ನು ಬಳಸಿದರೆ, ವಿಮಾ ಕಂಪನಿಗಳು ಇಂಜಿನ್ ಹಾನಿಗೆ ಸಂಬಂಧಿಸಿದ ಕ್ಲೈಮ್‌ಗಳನ್ನು ತಿರಸ್ಕರಿಸಬಹುದು ಎಂದು ಈ ಸಂಸ್ಥೆ ತಿಳಿಸಿದೆ. ವಾಹನ…

Read More

420ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿ ಪಂದ್ಯ ಗೆಲ್ಲಿಸಿದ ಜೇಸನ್ ಹೋಲ್ಡರ್ – Kannada News | Jason Holder’s Blazing 420 Strike Rate Powers Thrilling Run Chase Victory

ವೆಸ್ಟ್ ಇಂಡೀಸ್ ತಂಡವು ಕೊನೆಗೂ ಟಿ20 ಸರಣಿ ಗೆದ್ದುಕೊಂಡಿದೆ. ಅದು ಸಹ ಒಂದು ವರ್ಷಗಳ ಬಳಿಕ. ಅಂದರೆ ಕಳೆದುಕೊಂದು ವರ್ಷದಿಂದ ವಿಂಡೀಸ್ ಪಾಲಿಗೆ ಮರೀಚಿಕೆಯಾಗಿದ್ದ ಟಿ20 ಸರಣಿ ಗೆಲುವು ಕೊನೆಗೂ 2-1 ಅಂತರದಿಂದ ದಕ್ಕಿದೆ. ಜಮೈಕಾದ ಸೆಬೀನಾ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 20 ಓವರ್​ಗಳಲ್ಲಿ 169…

Read More