ಬರೋಬ್ಬರಿ 10 ಗೋಲುಗಳು… ಫ್ರಾನ್ಸ್ ಪಡೆಯ ಪರಾಕ್ರಮ – Kannada News | France has officially qualified for the Round of 32

FIFA World Cup 2026: ಫಿಫಾ ವಿಶ್ವಕಪ್ 2026 ರಲ್ಲಿ ಫ್ರಾನ್ಸ್ ಪಡೆಯ ಪ್ರರಾಕ್ರಮ ಮುಂದುವರೆದಿದೆ. ಮೊದಲ ಪಂದ್ಯದಲ್ಲಿ ಇರಾಕ್ ವಿರುದ್ಧ 3-0 ಅಂತರದಿಂದ ಗೆದ್ದಿದ್ದ ಲೆ ಬ್ಲೂಸ್ ಇದೀಗ ಬಲಿಷ್ಠ ನಾರ್ವೆಯನ್ನು 4-1 ಅಂತರದಿಂದ ಮಣಿಸಿದೆ. ಈ ಭರ್ಜರಿ ಗೆಲುವಿನೊಂದಿಗೆ ಫ್ರಾನ್ಸ್ ತಂಡವು ನಾಕೌಟ್ ಹಂತಕ್ಕೇರಿದೆ. ಫ್ರಾನ್ಸ್​ ಐತಿಹಾಸಿಕ ಸಾಧನೆ: ಫ್ರಾನ್ಸ್ ತಂಡವು ಬರೋಬ್ಬರಿ 28 ವರ್ಷಗಳ ಬಳಿಕ ತನ್ನ ಗ್ರೂಪ್ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿದೆ. ಇದಕ್ಕೂ ಮುನ್ನ 1998 ರಲ್ಲಿ ಗ್ರೂಪ್ ಹಂತದ…

Read More

ಕಾನ್ ರೆಡ್ ಕಾರ್ಪೇಟ್​​ ಮೇಲೆ ತೆಲಂಗಾಣ ಕೈಮಗ್ಗದ ಉಡುಪು ಪ್ರದರ್ಶಿಸಿದ ಏಷ್ಯಾ ಸುಂದರಿ – Kannada News | Miss Asia Rashmi Thakur wears Ikat Weaver dress at Cannes 2026 red carpet

ಕಾನ್ ಚಿತ್ರೋತ್ಸವ (Cannes 2026) ಚಾಲ್ತಿಯಲ್ಲಿದ್ದು ಭಾರತದ ಹಲವಾರು ನಟ-ನಟಿಯರು, ಸೋಷಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಗಳು ಹಲವಾರು ಮಂದಿ ಭಾಗವಹಿಸಿದ್ದಾರೆ. ಒಬ್ಬರಿಗಿಂತಲೂ ಒಬ್ಬರು ಭಿನ್ನವಾಗಿ, ದುಬಾರಿಯಾದ ಮತ್ತು ಆಧುನಿಕವಾದ, ಗ್ಲಾಮರಸ್ ಆದ ಬಟ್ಟೆಗಳನ್ನು ತೊಟ್ಟು ರೆಡ್ ಕಾರ್ಪೆಟ್ ಮೇಲೆ ನಡೆಯುತ್ತಾ ಫೋಟೊಗಳಿಗೆ ಫೋಸು ನೀಡುತ್ತಿದ್ದಾರೆ. ಆದರೆ ಏಷ್ಯಾ ಸುಂದರಿ ಎನಿಸಿಕೊಂಡಿರುವ ಭಾರತದ ರಶ್ಮಿಕಾ ಠಾಕೂರ್ ಮಾತ್ರ ಭಾರತೀಯ ಸಂಸ್ಕೃತಿಗ ಉಡುಗೆಗಳ ಪ್ರಚಾರಕ್ಕೆ ವೇದಿಕೆಯಾಗಿ ಕಾನ್ ರೆಡ್ ಕಾರ್ಪೇಟ್ ಅನ್ನು ಬಳಸಿಕೊಂಡಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ತೆಲಂಗಾಣದ ಸಾಂಪ್ರದಾಯಿಕ…

Read More

ಕರ್ನಾಟಕದಲ್ಲಿ ವಿದ್ಯುತ್ ಖಾಸಗೀಕರಣ ವಿವಾದ: ಪ್ರಸ್ತಾವನೆಯನ್ನೇ ಹಿಂಪಡೆದ ಟಾಟಾ ಕಂಪನಿ – Kannada News | Karnataka Power Privatization: Tata Power Withdraws Its Proposal from KERC Amid Intense Protests

ಬೆಂಗಳೂರು, ಜುಲೈ 03: ಕರ್ನಾಟಕದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ತೀವ್ರ ವಿರೋಧದ ಬೆನ್ನಲ್ಲೇ ತಾನು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಟಾಟಾ ಕಂಪನಿ ಹಿಂಪಡೆದಿದೆ. ಕೆಇಆರ್‌ಸಿ ಆಕ್ಷೇಪಣೆ ವೇಳೆ ಸಂಸ್ಥೆ ಪ್ರಸ್ತಾವನೆ ವಾಪಸ್ ಪಡೆದುಕೊಂಡಿದೆ. ವಿದ್ಯುತ್ ಖಾಸಗೀಕರಣಕ್ಕೆ ರೈತರು, ಎಸ್ಕಾಂ ನೌಕರರು ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತಪಡಿಸಿದ್ದರು. ಈ ನಡುವಿನ ಬೆಳವಣಿಗೆಗಳ ಬಳಿಕ ಇಂದು ತನ್ನ ಪ್ರಸ್ತಾವನೆಯನ್ನು ಕಂಪನಿ ಹಿಂಪಡೆದಿದೆ. ಟಾಟಾ ಪವರ್ ಕಂಪನಿ ನಡೆಗೆ ಸ್ವಾಗತ ವಿದ್ಯುತ್ ಸರಬರಾಜು ಪರವಾನಿಗೆಗೆ ಸಲ್ಲಿಸಿದ್ದ ಅರ್ಜಿಯನ್ನು ಕಂಪನಿ ವಾಪಸ್ ಪಡೆದ ನಿರ್ಧಾರವನ್ನು ಕರ್ನಾಟಕ…

Read More

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ – Kannada News | Devanahalli land scam allegation: Officials Allocate Quarry Plots to Poor

ದೇವನಹಳ್ಳಿ, ಡಿಸೆಂಬರ್​ 19: ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವ ಗಾದೆ ಮಾತು ಒಂದಿದೆ. ಈ ಗಾದೆ ಮಾತು ಇದೀಗ ನಗರದ ಹೊರವಲಯದ ಗ್ರಾಮಸ್ಥರಿಗೆ ಅನ್ವಯವಾಗುತ್ತಿದೆ. ದಶಕಗಳ ಕನಸು ನನಸಾಯಿತು ಅಂತ ಖುಷಿ ಪಡುವಷ್ಟರಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು (Revenue Department officials) ಮಾಡಿರುವ ಅದೊಂದು ಎಡವಟ್ಟಿನಿಂದ ಇದೀಗ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಲ್ಲು ಕ್ವಾರಿಯಲ್ಲಿ ಜಮೀನು ಮಂಜೂರು ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಸರ್ಕಾರದಿಂದ…

Read More

ಜೂನ್‌ನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ – Kannada News | Karnataka to Recruit 51,000 Guest Teachers in June: Madhu Bangarappa

ಬೆಂಗಳೂರು, ಮೇ 23: 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲೇ ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಬಿಗ್ ಗಿಫ್ಟ್ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಶಾಲೆಗಳಲ್ಲಿನ ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ, ಬರೋಬ್ಬರಿ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಆಡಳಿತಾತ್ಮಕ ಅನುಮೋದನೆ…

Read More

ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ: ಅಡುಗೆ ಎಣ್ಣೆ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ! – Kannada News | Rice and Cooking Oil Prices Hike in Bengaluru: Common Man Hit by Double Blow of Price Rise

ಬೆಂಗಳೂರು, ಮೇ 14: ಬೆಂಗಳೂರಿನ (Bengaluru) ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ ವಾರವಷ್ಟೇ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿದ್ದು, ಅದರ ಬೆನ್ನಲ್ಲೇ ಈಗ ಅಕ್ಕಿ ದರವೂ (Rice Price) ಗಗನಕ್ಕೇರಲು ಸಜ್ಜಾಗಿದೆ. ಕಚ್ಚಾ ವಸ್ತುಗಳ ಕೊರತೆ ಹಾಗೂ ರಫ್ತು ಪ್ರಮಾಣದಲ್ಲಿನ ಏರಿಕೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಅಕ್ಕಿ ಬೆಲೆ ಏರಿಕೆಯಾಗಲಿದೆ ಎಂದು ವ್ಯಾಪಾರಿಗಳು ಮುನ್ಸೂಚನೆ ನೀಡಿದ್ದಾರೆ. ಇದರೊಂದಿಗೆ ಇಂಧನ, ಆಟೋ ಎಲ್​​ಪಿಜಿ, ಕಮರ್ಷಿಯಲ್ ಸಿಲಿಂಡರ್, ಅಡುಗೆ ಎಣ್ಣೆ ಸೇರಿ ಬಹುತೇಕ ಅಗತ್ಯ ವಸ್ತುಗಳು ತುಟ್ಟಿಯಾದಂತಾಗಿದೆ….

Read More

1ಕಿ.ಮೀ ಚಾಲೆಂಜ್ ಹಾಕಿ ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡ ಜಿಬಿಎ! – Kannada News

ಬೆಂಗಳೂರು, (ಜೂನ್ 02): ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ನಾಗರಿಕರಿಗೆ 1 ಕಿಲೋಮೀಟರ್ ಚಾಲೆಂಜ್ ನೀಡಿ, 1 ಕಿಲೋಮೀಟರ್ ವರೆಗಿನ ದೂರ ಕ್ರಮಿಸಲು ವಾಹನಗಳ ಬದಲು ಕಾಲ್ನಡಿಗೆಯನ್ನು ಆಯ್ಕೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿತ್ತು. ಫುಟ್‌ಪಾತ್‌ಗಳನ್ನು ಬಳಸಿಕೊಂಡು ಪರಿಸರ ಸ್ನೇಹಿಯಾಗಿ ನಡೆದುಕೊಳ್ಳಿ ಎಂಬ ಸಂದೇಶವನ್ನು ನೀಡಿದ್ದ GBA, ಈ ಅಭಿಯಾನದ ಮೂಲಕ ವಾಹನ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶ ಹೊಂದಿತ್ತು. ಆದರೆ ಈ…

Read More

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿಯ ಪತ್ನಿಯೂ ನಿಧನ – Kannada News | Ayatollah Khamenei’s Wife Mansoureh Khojasteh Killed In US Israel Attack

ಟೆಹ್ರಾನ್, ಮಾರ್ಚ್ 2: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಬಘರ್ಜಾದೆಹ್ ಅವರು ಟೆಹ್ರಾನ್‌ನಲ್ಲಿ ಅಮೆರಿಕ (ಯುಎಸ್) ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಈ ದಾಳಿ ಆರಂಭವಾದ ಮೊದಲ ದಿನವೇ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಇರಾನ್‌ನ ಮಶಾದ್‌ನಲ್ಲಿ ಜನಿಸಿದ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಬ್ರಾಡ್‌ಕಾಸ್ಟಿಂಗ್ (ಐಆರ್‌ಐಬಿ) ಮಾಜಿ ಉಪ ನಿರ್ದೇಶಕ ಹಸನ್ ಖೋಜಸ್ತೆ…

Read More

18 ವರ್ಷಗಳ ಇತಿಹಾಸವನ್ನೇ ಬದಲಿಸಿದ RCB ದಾಂಡಿಗರು

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ದಾಂಡಿಗರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಬರೆದಿದೆ. ಅದು ಕೂಡ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ವಿರುದ್ಧ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ.  ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಆರ್​ಸಿಬಿ ದಾಂಡಿಗರು…

Read More

Video: ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಗಂಟೆಗಳಿಂದ ಆಗಿದ್ದ ಟ್ರಾಫಿಕ್ ಜಾಮ್ ನಿಮಿಷಗಳಲ್ಲಿ ಕ್ಲಿಯರ್

ಲಕ್ನೋ, ಏಪ್ರಿಲ್ 05: ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಹೋದ ಘಟನೆ ಲಕ್ನೋದಲ್ಲಿ ನಡೆದಿದೆ. ಗಂಟೆಗಳಿಂದ ಇದ್ದ ಸಂಚಾರ ದಟ್ಟಣೆ ನಿಮಿಷಗಳಲ್ಲೇ ಕಡಿಮೆಯಾಗಿತ್ತು. ಇದೀಗ ವಿಡಿಯೋ ವೈರಲ್ ಆಗಿದೆ. ಸಹದತ್ ಗಂಜ್ ಪೊಲೀಸ್ ಠಾಣೆ ಪ್ರದೇಶದ ರಾಜಬ್ ಗಂಜ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಆ ವ್ಯಕ್ತಿ ಪಿಸ್ತೂಲ್ ಹಿಡಿದು ರಸ್ತೆಯಲ್ಲಿ ನಡೆಯುತ್ತಿರುವುದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಟ್ರಾಫಿಕ್ ತೆರವುಗೊಳಿಸಲು ಮತ್ತು ತನ್ನ ವಾಹನವನ್ನು ಮುಂದೆ ಸಾಗಿಸಲು ಪಿಸ್ತೂಲ್ ಬಳಸಿದ್ದಾರೆ….

Read More