Headlines

ಸೆಮಿಫೈನಲ್​ಗೂ ಮುನ್ನ ಭಾರತಕ್ಕೆ ‘ಫೈನಲ್’ ಮ್ಯಾಚ್ – Kannada News | India vs West indies Must Win Game in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್​ಗೇರಿದರೆ, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಎಲಿಮಿನೇಟ್ ಆಗಿದೆ. ಇನ್ನು ಭಾರತ, ಪಾಕಿಸ್ತಾನ್, ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ ರೇಸ್​ನಲ್ಲಿದೆ. ಆದರೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ‘ಫೈನಲ್’ ಮ್ಯಾಚ್ ಈ ಎರಡು ಪಂದ್ಯಗಳಲ್ಲಿ 4 ತಂಡಗಳ ಸೆಮಿಫೈನಲ್ ಭವಿಷ್ಯ ನಿರ್ಧಾರವಾಗಲಿದೆ. ಅದರಲ್ಲೂ ಮಾರ್ಚ್ 1…

Read More

ಊಟ ಮಾಡಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಎಷ್ಟು ಡೇಂಜರ್‌ ನೋಡಿ – Kannada News | What are the problems of drinking water immediately after a meal?

ನಮ್ಮ ದೇಹಕ್ಕೆ ನೀರು (water) ಬಹಳ ಮುಖ್ಯ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮತ್ತು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದು ಸಹ ತುಂಬಾನೇ ಮುಖ್ಯ. ಸಾಮಾನ್ಯವಾಗಿ ಬಾಯಾರಿದಾಗ ನೀರನ್ನು ಕುಡಿಯುತ್ತೇವೆ. ಇದಲ್ಲದೆ ಇನ್ನೂ ಹೆಚ್ಚಿನವರು ಊಟವಾದ ತಕ್ಷಣವೇ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆರೋಗ್ಯ ತಜ್ಞರ ಪ್ರಕಾರ ಆರೋಗ್ಯದ ದೃಷ್ಟಿಯಿಂದ ಈ ಅಭ್ಯಾಸ ಒಳ್ಳೆಯದಲ್ಲ. ಈ ಅಭ್ಯಾಸವು ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಅನೇಕ ರೋಗಗಳಿಗೆ ಕಾರಣವಾಗಬಹುದು. ಹಾಗಿದ್ರೆ ಊಟ ಮಾಡಿದ ಎಷ್ಟು ಸಮಯದ ಬಳಿಕ ನೀರನ್ನು…

Read More

ಪ್ರೇಯಸಿಯನ್ನ ಅಜ್ಜನ ಮನೆಗೆ ಕರೆದೊಯ್ದು ಪ್ರಿಯಕರ: ಮುಂದಾಗಿದ್ದು ಘನಘೋರ!

ಚಾಮರಾಜನಗರ, (ಏಪ್ರಿಲ್ 02): ತಮ್ಮ ಮದುವೆಗೆ (marriage) ಪೋಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು (Lovers) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ನದಿಯಾ(19), ನಾಗೇಂದ್ರ(21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮನೆಬಿಟ್ಟು ಹೋಗಿತ್ತು. ಹೀಗಾಗಿ ಇತ್ತ ಯುವತಿ ಕಡೆಯವರು ಮಿಸ್ಸಿಂಗ್ ದೂರು ನೀಡಿದ್ದಾರೆ. ಇದರಿದ ಹೆದರಿ ಪ್ರೇಮಿಗಳು ಜತೆಯಲ್ಲೇ ಸಾಯುಲು ನಿರ್ಧರಿಸಿ ನೇಣಿಗೆ ಶರಣಾಗಿದ್ದಾರೆ. ನಾಗೇಂದ್ರ ಹಾಗೂ ಪಾಲಾರ್ ಗ್ರಾಮದ ನದಿಯಾ…

Read More

IPL 2026: ಡಬಲ್ ಧಮಾಕಾ… 4 ದಿನಗಳಲ್ಲಿ 8 ಪಂದ್ಯಗಳು

IPL 2026: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ.  ಈ ಇಪ್ಪತ್ತು ಪಂದ್ಯಗಳಲ್ಲಿ 4 ಡಬಲ್ ಹೆಡ್ಡರ್ ಮ್ಯಾಚ್​ಗಳಿವೆ. ಅಂದರೆ 4 ದಿನಗಳಲ್ಲಿ ಒಟ್ಟು 8 ಮ್ಯಾಚ್​ಗಳು ನಡೆಯಲಿವೆ. ಇಲ್ಲಿ ಮೊದಲ ಮ್ಯಾಚ್ 3.30 ಕ್ಕೆ ಶುರುವಾದರೆ, ದ್ವಿತೀಯ ಪಂದ್ಯ 7.30 ಕ್ಕೆ ಆರಂಭವಾಗಲಿದೆ. ಅದರಂತೆ ಐಪಿಎಲ್​ನ ವೇಳಾಪಟ್ಟಿ ಈ ಕೆಳಗಿನಂತಿದೆ… ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು…

Read More

ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ – Kannada News | SSLC Results 2026: Number of students failing in third language Hindi has decreased

ಬೆಂಗಳೂರು, (ಏಪ್ರಿಲ್ 23): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ (Karnataka School Examination and Assessment Board) 2025–26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ದಾಖಲೆಯ ಮಟ್ಟದ ಸಾಧನೆ ಕಂಡುಬಂದಿದೆ. ಒಟ್ಟಾರೆ ಉತ್ತೀರ್ಣ ಪ್ರಮಾಣವು ಶೇಕಡಾ 94.10 ಆಗಿದ್ದು, ಕಳೆದ ವರ್ಷಗಳಿಗಿಂತ ಗಮನಾರ್ಹ ಏರಿಕೆಯಾಗಿದೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ಹಿಂದಿ ಬಗ್ಗೆ ಭಾರೀ ಗೊಂದಲಗಳು ಉದ್ಭವಿಸಿದ್ದವು. ಪರೀಕ್ಷೆ ಸಮಯದಲ್ಲೇ ಅಂಕ ಇಲ್ಲ…

Read More

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗೆ 50,000 ರೂ. ಬಾಡಿಗೆ, ಆದರೆ ಅಲ್ಲಿನ ಸೌಲಭ್ಯಗಳನ್ನು ಬಳಸಲು ಸಮಯವಿಲ್ಲ – Kannada News | High Rent, No Time: Bangalore IT Pro’s Viral Work Life Balance Dilemma

ಬೆಂಗಳೂರು, ಫೆ.6: ಬೆಂಗಳೂರಿನಲ್ಲಿ ಮನೆಗಳು ದುಬಾರಿ. ಐಟಿ, ಬಿಟಿ ಕಂಪನಿಗಳಲ್ಲಿ ವರ್ಕ್​ ಮಾಡುವವರಿಗೆ ಇಲ್ಲಿ ಈ ದುಬಾರಿ ಮನೆಗಳು ವಾಸಿಸಲು ಸೂಕ್ತ. ಅದಕ್ಕಾಗಿ ಇವರು ಲಕ್ಷ ಲಕ್ಷ ಹಣವನ್ನು ಇದಕ್ಕಾಗಿ ವ್ಯಯ ಮಾಡುತ್ತಾರೆ. ಆದರೆ ಈ ದುಬಾರಿ ಮನೆಗಳಲ್ಲಿರುವ ಎಲ್ಲ ಸೌಕರ್ಯಗಳನ್ನು (Bangalore techie rent) ಸರಿಯಾಗಿ ಉಪಯೋಗ ಮಾಡುವುದಿಲ್ಲ. ಇದೀಗ ಇಂತಹದೇ ವಿಚಾರದ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 50,000 ರೂಪಾಯಿ ಬಾಡಿಗೆ ಪಾವತಿಸುತ್ತಿರುವ ವ್ಯಕ್ತಿಯೊಬ್ಬರು, ತಮಗೆ ಅಪಾರ್ಟ್‌ಮೆಂಟ್‌ನಲ್ಲಿರುವ ಯಾವುದೇ ಸೌಲಭ್ಯಗಳನ್ನು ಬಳಸಲು…

Read More

ಮುಂದಿನ 7 ದಿನ ಕರ್ನಾಟಕ ಕೂಲ್​ ಕೂಲ್: ಈ ಜಿಲ್ಲೆಗಳಿಗೆ ಬರಲಿದ್ದಾನೆ ವರುಣ; ಬಿಸಿಲ ಧಗೆಯಿಂದ ಸಿಗಲಿದೆ ಮುಕ್ತಿ! – Kannada News | Bengaluru Weather Update: Rain Expected in Parts of Karnataka Amidst High Heat

ಬೆಂಗಳೂರು, ಏ.22: ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲ ಧಗೆ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 22 ಮತ್ತು 23 ರಂದು ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಏಪ್ರಿಲ್ 25ರವರೆಗೆ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಯಿದೆ. ಮುಂದಿನ 7 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು…

Read More

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್​ಗೆ ಭಾರಿ ಬೇಡಿಕೆ! ಬೆಂಗಳೂರಿನಲ್ಲಿ ಸ್ಟಾಕ್ ಕೊರತೆ – Kannada News | Bengaluru Heatwave: Beer Sales Surge by 50 percent as Drinkers Ditch Hard Liquor; Supply Shortage Hits City

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ ಹೆಚ್ಚುತ್ತಿದ್ದು, ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದಾರೆ. ಈ ಬೇಸಿಗೆಯ ಹೊಡೆತಕ್ಕೆ ಮದ್ಯಪ್ರಿಯರು ಆಯ್ಕೆಯನ್ನು ಬದಲಿಸಿಕೊಂಡಿದ್ದು, ಹಾರ್ಡ್ ಡ್ರಿಂಕ್ಸ್ ಅಥವಾ ಮದ್ಯ (Liquor) ಬದಿಗಿಟ್ಟು ಚಿಲ್ಡ್ ಬಿಯರ್ (Chilled Beer) ಮೊರೆ ಹೋಗಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ (Beer Sales) ಶೇ 50 ರಷ್ಟು ಭಾರಿ ಏರಿಕೆ ಕಂಡುಬಂದಿದೆ. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಕೆ…

Read More

ಭಾರತ-ಅಮೆರಿಕದ್ದು ಐತಿಹಾಸಿಕ ಬಂಧ; 77ನೇ ಗಣರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಟ್ರಂಪ್ – Kannada News | Donald Trump extends greetings on 77th Republic day says US and India Share Historic Bond

ನವದೆಹಲಿ, ಜನವರಿ 26: ಭಾರತದ 77ನೇ ಗಣರಾಜ್ಯೋತ್ಸವಕ್ಕೆ (Republic Day) ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತದಾದ್ಯಂತ ಗಣರಾಜ್ಯೋತ್ಸವದ ಆಚರಣೆಗಳು ನಡೆಯುತ್ತಿದ್ದಂತೆ ನವದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಈ ಸಂದೇಶವನ್ನು ಹಂಚಿಕೊಂಡಿದೆ. ಎರಡೂ ದೇಶಗಳ ನಡುವಿನ ಸಾಮಾನ್ಯ ನೆಲೆಯನ್ನು ಎತ್ತಿ ತೋರಿಸುತ್ತಾ, ಭಾರತ ಮತ್ತು ಅಮೆರಿಕ ತಮ್ಮ ಪ್ರಜಾಪ್ರಭುತ್ವ ಸಂಪ್ರದಾಯಗಳಿಂದ ಒಂದಾಗಿವೆ ಮತ್ತು ಹಲವು ದಶಕಗಳಿಂದ ಬಂಧವನ್ನು ಹೊಂದಿವೆ ಎಂದು ಟ್ರಂಪ್ ಒತ್ತಿ ಹೇಳಿದ್ದಾರೆ. “ಯುನೈಟೆಡ್ ಸ್ಟೇಟ್ಸ್ ಜನರ ಪರವಾಗಿ ಭಾರತದ…

Read More

ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ?

ಗದಗ, ಮಾರ್ಚ್​​ 29: ಸುಟ್ಟ ಸ್ಥಿತಿಯಲ್ಲಿ ಯುವಕನೊರ್ವನ ಶವ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಚಂದ್ರು ಕುರಿ (27) ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಮನೆಯಿಂದ ಹೊರ ಹೋದ ಚಂದ್ರು ಮೃತದೇಹ ಸೇತುವೆಯೊಂದರ ಕೆಳಭಾಗ ಕಂಡುಬಂದಿದೆ. ಕೊಲೆ ಅನುಮಾನ ವ್ಯಕ್ತವಾಗಿದ್ದು, ಮಗನನ್ನು ಸಾಯಿಸಿ ಬಳಿಕ ದೇಹವನ್ನು ಸುಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮನೆಯ ಹೆಣ್ಣು ಮಕ್ಕಳನ್ನು ನೋಡ್ತಾನೆ ಎಂದು ಆರೋಪಿಸಿ ಎದುರಿನ ಮನೆ ಕುಟುಂಬಸ್ಥರು ಹಲವು ಬಾರಿ ಜಗಳ ತೆಗೆದಿದ್ದರು. ಮೈ ಮೇಲೆ…

Read More