ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಬಾಬರ್ ಆಝಂ – Kannada News | Babar Azam Creates New World Record with Few Dot Balls Century

ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ (Babar Azam) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಡಾಟ್ ಬಾಲ್ ಆಡಿ ಶತಕ ಪೂರೈಸಿದ ವಿಶ್ವ ದಾಖಲೆ ಬಾಬರ್ ಆಝಂ ಪಾಲಾಗಿದೆ.

ಪಾಕಿಸ್ತಾನ್ ಸೂಪರ್ ಲೀಗ್​ನ 29ನೇ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಹಾಗೂ ಕ್ವೆಟ್ಟಾ ಗ್ಲಾಡಿಯೇಟರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪೇಶಾವರ್ ಝಲ್ಮಿ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದರು.

ಮೊದಲ ಓವರ್​ನಿಂದಲೇ ರನ್​ ಗಳಿಸುತ್ತಾ ಸಾಗಿದ ಬಾಬರ್ ಆಝಂ ಒಂದೇ ಒಂದೇ ಒಂದು ಡಾಟ್ ಆಡದೇ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದ ಬಳಿಕ ಬಾಬರ್ ಆಡಿದ್ದ ಒಂದೇ ಡಾಟ್ ಬಾಲ್. ಅಂದರೆ ತಾನೆದುರಿಸಿದ 36ನೇ ಎಸೆತದಲ್ಲಿ ಯಾವುದೇ ರನ್​ಗಳಿಸಿರಲಿಲ್ಲ.

ಇದಾದ ಬಳಿಕ ಸತತವಾಗಿ ಕನಿಷ್ಠ ಒಂದು ರನ್​ಗಳಿಸುತ್ತಾ ಸಾಗಿದ ಬಾಬರ್ ಆಝಂ 52 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಒಂದು ಡಾಟ್ ಬಾಲ್ ಆಡುವ ಮೂಲಕ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಇಂತಹದೊಂದು ಭರ್ಜರಿ ದಾಖಲೆ ನ್ಯೂಝಿಲೆಂಡ್​ನ ಫಿನ್ ಅಲೆನ್ ಹೆಸರಿನಲ್ಲಿತ್ತು. ಟಿ20 ವಿಶ್ವಕಪ್​ 2026 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಅಲೆನ್ 33 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಈ ವೇಳೆ ಅವರು ಕೇವಲ 4 ಡಾಟ್​ ಬಾಲ್​ಗಳನ್ನು ಮಾತ್ರ ಆಡಿದ್ದರು. ಈ ಮೂಲಕ ಅತೀ ಕಡಿಮೆ ಡಾಟ್​ ಬಾಲ್​ಗಳೊಂದಿಗೆ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದೀಗ ಕೇವಲ 1 ಡಾಟ್ ಬಾಲ್​ನೊಂದಿಗೆ ಶತಕ ಪೂರೈಸುವ ಮೂಲಕ ಬಾಬರ್ ಆಝಂ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಡಾಟ್ ಬಾಲ್ ಆಡಿ ಶತಕ ಬಾರಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Published On – 7:42 am, Mon, 20 April 26

Source link

‘ಧುರಂಧರ್ 2’ ಯಶಸ್ಸಿನ ಓಟಕ್ಕೆ ಬ್ರೇಕ್ ಕೊಟ್ಟ ‘ಭೂತ್ ಬಂಗ್ಲ’; ವೀಕೆಂಡ್​​ನಲ್ಲಿ ಭರ್ಜರಿ ಕಲೆಕ್ಷನ್ – Kannada News | Akshay Kumar’s Bhoot Bangala Dethrones Ranveer Singh’s Dhuranthar 2 at Box Office

ರಣವೀರ್ ಸಿಂಗ್ (Ranveer Singh) ಅವರ ‘ಧುರಂಧರ್ 2’ ಸಿನಿಮಾ ಒಳ್ಳೆಯ ರೀತಿಯಲ್ಲಿ ಕಲೆಕ್ಷನ್ ಮಾಡುತ್ತಾ ಸಾಗುತ್ತಾ ಇತ್ತು. ಸಿನಿಮಾ ರಿಲೀಸ್ ಆಗಿ ಸರಿಯಾಗಿ ಒಂದು ತಿಂಗಳು ಕಳೆದಿದೆ. ಆದಾಗ್ಯೂ ಇದರ ಓಟ ನಿಂತಿರಲಿಲ್ಲ. ಆದರೆ, ಈ ವೇಗಕ್ಕೆ ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲ’ ಸಿನಿಮಾ ಬ್ರೇಕ್ ಹಾಕಿದೆ. ಅಕ್ಷಯ್ ಕುಮಾರ್ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಾ ಇದೆ. ಒಂದಾದ ಬಳಿಕ ಒಂದು ಗೆಲುವು ಸಿಗುತ್ತಿರುವುದಕ್ಕೆ ಬಾಲಿವುಡ್ ಮಂದಿ ಕೂಡ ಖುಷಿಯಾಗಿದ್ದಾರೆ.

ರಣವೀರ್ ಸಿಂಗ್ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಯಿತು. ಸಿನಿಮಾ ರಿಲೀಸ್ ಆಗಿ 30 ದಿನ ಆಗಿದೆ. ಈ ಸಿನಿಮಾ ವಿಶ್ವ ಮಟ್ಟದಲ್ಲಿ 1756 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದ ಗ್ರಾಸ್ ಕಲೆಕ್ಷನ್ 1,335 ಕೋಟಿ ರೂಪಾಯಿ ಆಗಿದೆ. ಭಾನುವಾರ ಈ ಚಿತ್ರ 4 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದಕ್ಕೂ ಹಿಂದಿನ ಭಾನುವಾರ (ಏಪ್ರಿಲ್ 12) ಸಿನಿಮಾ 17 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇದಕ್ಕೆ ಹೋಲಿಕೆ ಮಾಡಿದರೆ ಏಪ್ರಿಲ್ 19ರ ಗಳಿಕೆ ಬಹಳವೇ ಕಡಿಮೆ ಆಗಿದೆ. ಇದಕ್ಕೆ ಕಾರಣ ಆಗಿದ್ದು ಅಕ್ಷಯ್ ಕುಮಾರ್ ಅವರ ‘ಭೂತ್ ಬಂಗ್ಲ’ ಸಿನಿಮಾ.

‘ಧುರಂಧರ್ 2’ ಸಿನಿಮಾ ಅಬ್ಬರದ ಮಧ್ಯೆ ಸಿಕ್ಕಿ ಹಾಕಿಕೊಳ್ಳುವುದು ಬೇಡ ಎಂಬ ಕಾರಣಕ್ಕೆ ‘ಭೂತ್ ಬಂಗ್ಲ’ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿತ್ತು. ಏಪ್ರಿಲ್ 17ರಂದು ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಭಾನುವಾರ 23 ಕೋಟಿ ರೂಪಾಯಿ ಗಳಿಕೆ ಮಾಡಿದೆ. ‘ಧುರಂಧರ್ 2’ ಚಿತ್ರಕ್ಕೆ ನೀಡಲಾಗಿದ್ದ ಶೋಗಳ ಸಂಖ್ಯೆ ಕಡಿಮೆ ಮಾಡಲಾಗಿದೆ. ಇದನ್ನು ‘ಭೂತ್ ಬಂಗ್ಲ’ಗೆ ನೀಡಲಾಗಿದೆ.

ಇದನ್ನೂ ಓದಿ: ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್; 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್

ಅಕ್ಷಯ್ ಕುಮಾರ್, ರಾಜ್​ಪಾಲ್ ಯಾದವ್ ಸೇರಿದಂತೆ ಅನೇಕರು ‘ಭೂತ್ ಬಂಗ್ಲ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ವಿಶ್ವ ಮಟ್ಟದ ಗಳಿಕೆ 95 ಕೋಟಿ ರೂಪಾಯಿ ಆಗಿದೆ. ಇದು ‘ಧುರಂಧರ್ 2’ ಯಶಸ್ಸಿನ ಓಟಕ್ಕೆ ಸಣ್ಣ ಬ್ರೇಕ್ ಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೇಣುಬಿಗಿದ ಸ್ಥಿತಿಯಲ್ಲಿ ಪೋಕ್ಸೋ ಕೇಸ್​​ ಆರೋಪಿ ಶವ ಪತ್ತೆ: ಆತ್ಮಹತ್ಯೆಯೋ? ಕೊಲೆಯೋ? – Kannada News | Kalaburagi pocso case accused hanged police probe suicide or foul play

ಕಲಬುರಗಿ, ಏಪ್ರಿಲ್​​ 20: ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿ ಪೋಕ್ಸೋ ಕೇಸ್​​ ಎದುರಿಸುತ್ತಿದ್ದ ಯುವಕನೋರ್ವನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ನಡೆದಿದೆ. ರೇವಣಸಿದ್ದಪ್ಪ ತಳಕೇರಿ (26) ಮೃತನಾಗಿದ್ದು, ಶೌಚಕ್ಕೆ ಹೋಗಿ ಬರೋದಾಗಿ ಹೇಳಿ ಹೋರಹೋದವ ಊರಾಚೆಗಿನ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ರೇವಣಸಿದ್ದಪ್ಪ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ಟಂಟಂ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ರೇವಣಸಿದ್ದಪ್ಪ, ತನ್ನದೇ ಆಟೋದಲ್ಲಿ ನಿತ್ಯ ಓಡಾಡ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪ್ರೇಮಿಸಿದ್ದ. ಈ ನಡುವೆ ಇವರಿಬ್ಬರ ನಡುವಿನ ಪ್ರೇಮದ ವಿಚಾರ ಮನೆಯವರಿಗೂ ಗೊತ್ತಾಗಿದೆ. ಹೀಗಾಗಿ ಈತನ ಪೋಷಕರು ಮಗನನ್ನು ಊರು ಬಿಡಿಸಿ ಹೈದರಾಬಾದ್​​ಗೆ ಕರೆದುಕೊಂಡು ಹೋಗಿ ಕೆಲಸಕ್ಕೆ ಸೇರಿಸಿದ್ದರು. ಆದರೂ ಪ್ರಿತಿಸಿದ ಯುವತಿಯನ್ನು ತೊರೆಯಲು ಒಪ್ಪದ ಈತ ಆಕೆಯನ್ನು ಸಂಪರ್ಕಿಸಿ ಹೈದರಾಬಾದ್‌ಗೆ ಕರೆಸಿಕೊಂಡಿದ್ದ. ಸಾಲದ್ದಕ್ಕೆ ಆಕೆಯನನ್ನು ವಿವಾಹ ಕೂಡ ಆಗಿದ್ದ. ಈ ವಿಚಾರ ಬಾಲಕಿಯ ಮನೆಯವರಿಗೆ ಗೊತ್ತಾಗಿದ್ದೇ ತಡ ಪೊಲೀಸ್​​ ದೂರು ದಾಖಲಾಗಿದೆ.  ಪೋಕ್ಸೋ ಪ್ರಕರಣದ ಅಡಿ ರೇವಣಸಿದ್ದಪ್ಪನ ಬಂಧಿಸಿದ್ದ ಪೊಲೀಸರು, ಈತನನ್ನು ಜೈಲಿಗೆ ಕಳುಹಿಸಿದ್ದರು. ಕಳೆದ ಎರಡು ವಾರಗಳ ಹಿಂದೆ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ರೇವಣಸಿದ್ದಪ್ಪ, ಊರುಬಿಟ್ಟು ಹೋಗೋಣ ಎಂದು ತಾಯಿಗೆ ಹೇಳಿದ್ದ. ಆದರೆ ತಾಯಿ ಮಗನಿಗೆ ಇಲ್ಲೇ ಇರೋಣ ಎಂದು ಧೈರ್ಯ ಹೇಳಿದ್ದಳು. ಈ ನಡುವೆಯೇ ಯುವಕನ ದಾರುಣ ಅಂತ್ಯವಾಗಿದೆ.

ಇದನ್ನೂ ಓದಿ: ಪಬ್ಬಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ; ಮಹಡಿಯಿಂದ ಬಿದ್ದು ಯುವಕ ಸಾವು!

ಇನ್ನು ರೇವಣಸಿದ್ದಪ್ಪ ಅಪ್ರಾಪ್ತ ಬಾಲಕಿಯನ್ನ ಮದುವೆಯಾದ ಬಳಿಕ, ಬಾಲಕಿಯ ಪೋಷಕರು ಆಕೆಯನ್ನ ಕರೆದುಕೊಂಡು ಬಂದು ತಾಳಿ ಕಿತ್ತುಹಾಕಿದ್ದರು. ಅಲ್ಲದೆ, ಅದನ್ನು ರೇವಣಸಿದ್ದಪ್ಪನ ಮುಖದ ಮೇಲೆ ಬಿಸಾಕಿದ್ದರಂತೆ. ಹೀಗಾಗಿ ಅತ್ತ ತಾನು ಪ್ರೀತಿಸಿದ ಹುಡುಗಿಯೂ ಇಲ್ಲ‌, ಇತ್ತ ಪೋಕ್ಸೋ ಪ್ರಕರಣ ಬೇರೆ ಎಂದು ರೇವಣಸಿದ್ದಪ್ಪ ತೀವ್ರವಾಗಿ ನೊಂದಿದ್ದ. ಇನ್ಸ್ಟಾಗ್ರಾಂನಲ್ಲಿ ತನ್ನದೇ ಫೋಟೋಗೆ RIP ಎಂದು ಬರೆದು ಪೋಸ್ಟ್ ಕೂಡ ಮಾಡಿದ್ದ.ಪರಿಸ್ಥಿತಿ ವಿಕೋಪಕ್ಕೆ ಹೋಗ್ತಿರೊದನ್ನ ಮನಗಂಡ ಪೋಷಕರು, ರೇವಣಸಿದ್ದಪ್ಪನನ್ನ ತಮ್ಮ ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದರು. ಆದರೂ ತಮ್ಮ ಗ್ರಾಮಕ್ಕೆ ಈತ ಬಂದು ಹೋಗ್ತಿದ್ದ. ಇದರ ಮಧ್ಯೆ ಊರಲ್ಲಿ ರೇವಣಸಿದ್ದಪ್ಪನ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್ ಬಗ್ಗೆ ಜನ ಮಾತಾಡಿಕೊಳ್ಳತೊಡಗಿದ್ದರು. ಹೀಗಾಗಿ ಪ್ರಾಣಕಳೆದುಕೊಳ್ಳುವ ನಿರ್ಧಾರಕ್ಕೆ ಈತ ಬಂದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರೇವಣಸಿದ್ದಪ್ಪ ನಿಜಕ್ಕೂ ಆತ್ಮಹತ್ಯೆ ಮಾಡಿಕೊಂಡಿದ್ದಾನ ಅಥವಾ ಯಾರಾದರೂ ಕೊಲೆ ಮಾಡಿ ಶವವನ್ನ ಮರಕ್ಕೆ ನೇಣು ಹಾಕಿದ್ದಾರಾ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಇರಾನ್ ಶಾಂತಿ ಮಾತುಕತೆ ತಿರಸ್ಕರಿಸಿದ್ದೇಕೆ, ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ದ್ವಂದ್ವ ನೀತಿಗೆ ಇರಾನ್ ಗರಂ – Kannada News | Ceasefire Strain: Iran Declines Talks, Points to US Conditions

ಡೊನಾಲ್ಡ್ ಟ್ರಂಪ್ -ಖಮೇನಿ Image Credit source: Google Gemini

ಟೆಹ್ರಾನ್, ಏಪ್ರಿಲ್ 20: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್​ನಲ್ಲಿ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್(Iran) ನಡುವಿನ ಎರಡನೇ ಸುತ್ತಿನ ಮಹತ್ವದ ಮಾತುಕತೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ನೌಕಾ ದಿಗ್ಬಂಧನವೇ ಈ ಬಿಕ್ಕಟ್ಟಿಗೆ ಕಾರಣ ಎಂದು ಇರಾನ್ ದೂರಿದೆ.

ಇರಾನ್​ನ ಐಆರ್​ಎನ್​ಎ ಬಿತ್ತರಿಸಿದ್ದ ವರದಿ ಪ್ರಕಾರ, ಇಸ್ಲಾಮಾಬಾದ್‌ನಲ್ಲಿ ಮಾತುಕತೆ ನಡೆಯಲಿದೆ ಎಂಬ ವರದಿಗಳನ್ನು ಇರಾನ್ ಸಂಪೂರ್ಣವಾಗಿ ನಿರಾಕರಿಸಿದೆ. ಅಮೆರಿಕ ತನ್ನ ನಿರ್ಧಾರಗಳನ್ನು ಪದೇ ಪದೇ ಬದಲಿಸುತ್ತಿದೆ ಮತ್ತು ಕದನ ವಿರಾಮದ ನೀತಿಗಳನ್ನು ಉಲ್ಲಂಘಿಸಿ ನೌಕಾ ದಿಗ್ಬಂಧನದ ಮೂಲಕ ಬೆದರಿಕೆ ಹಾಕುತ್ತಿದೆ. ಇಂತಹ ವಾತಾವರಣದಲ್ಲಿ ರಚನಾತ್ಮಕ ಮಾತುಕತೆ ಸಾಧ್ಯವಿಲ್ಲ ಎಂದು ಇರಾನ್ ಕಟುವಾಗಿ ಹೇಳಿದೆ.

ಟ್ರಂಪ್ ಆಶಾವಾದ ಮತ್ತು ನಿಯೋಗದ ಸಿದ್ಧತೆ
ಮತ್ತೊಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಮಾತುಕತೆಯ ಬಗ್ಗೆ ಭಾರಿ ಆಶಾವಾದ ಹೊಂದಿದ್ದರು. ತಮ್ಮ ‘ಟ್ರೂತ್ ಸೋಶಿಯಲ್’ ಪೋಸ್ಟ್‌ನಲ್ಲಿ ಅವರು, ಒಪ್ಪಂದ ಸಿದ್ಧವಾಗಿದೆ, ನಮಗೆ ಉತ್ತಮ ಅವಕಾಶವಿದೆ ಎಂದು ಬರೆದುಕೊಂಡಿದ್ದರು. ಇದಕ್ಕಾಗಿ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಅಳಿಯ ಜೇರೆಡ್ ಕುಶ್ನರ್ ಅವರನ್ನೊಳಗೊಂಡ ಉನ್ನತ ಮಟ್ಟದ ನಿಯೋಗವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಸಿದ್ಧತೆ ನಡೆಸಿದ್ದರು.

ಶಾಂತಿ ಮಾತುಕತೆಗೆ ಅಡ್ಡಿಯಾಗಿರುವುದು ಅಮೆರಿಕ ವಿಧಿಸಿರುವ ನೌಕಾ ದಿಗ್ಬಂಧನ. ಇತ್ತೀಚೆಗೆ ಇರಾನ್‌ನ ಹಡಗೊಂದರ ಮೇಲೆ ಅಮೆರಿಕದ ವಿಧ್ವಂಸಕ ನೌಕೆ ಗುಂಡು ಹಾರಿಸಿ ಅದನ್ನು ವಶಪಡಿಸಿಕೊಂಡ ಘಟನೆ ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಿದೆ. “ದಿಗ್ಬಂಧನವನ್ನು ತೆಗೆದುಹಾಕದೆ ಯಾವುದೇ ಮಾತುಕತೆ ಇಲ್ಲ” ಎಂಬುದು ಇರಾನ್‌ನ ಪಟ್ಟು.

ಮತ್ತಷ್ಟು ಓದಿ: ಹಾರ್ಮುಜ್​ನಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ, ಇರಾನ್ ರಾಯಭಾರಿ ಬಳಿ ವಿವರಣೆ ಕೇಳಿದ ಭಾರತ

ಫೆಬ್ರವರಿ 28 ರಂದು ನಡೆದ ಅಚ್ಚರಿಯ ದಾಳಿಯ ನಂತರ ಜಾರಿಗೆ ಬಂದಿದ್ದ ಎರಡು ವಾರಗಳ ಕದನ ವಿರಾಮವು ಏಪ್ರಿಲ್ 22ಕ್ಕೆ ಮುಕ್ತಾಯಗೊಳ್ಳಲಿದೆ. ಟ್ರಂಪ್ ಅವರು ಇರಾನ್ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಆರೋಪಿಸುತ್ತಲೇ, ಮತ್ತೊಂದೆಡೆ ನ್ಯಾಯಯುತ ಒಪ್ಪಂದ ನೀಡುತ್ತಿರುವುದಾಗಿ ಹೇಳುತ್ತಿದ್ದಾರೆ. ಒಂದು ವೇಳೆ ಒಪ್ಪಂದವಾಗದಿದ್ದರೆ ಇರಾನ್‌ನ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ವಾಷಿಂಗ್ಟನ್ ತನ್ನ ಮೇಲೆ ಒತ್ತಡ ಹೇರಲು “ದೂಷಣೆಯ ಆಟ”ವಾಡುತ್ತಿದೆ ಮತ್ತು ಮಾತುಕತೆಯ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದೆ ಎಂದು ಟೆಹ್ರಾನ್ ಆರೋಪಿಸಿದೆ. ಇದರಿಂದಾಗಿ ಇಸ್ಲಾಮಾಬಾದ್ ಮಾತುಕತೆಗಳು ಆರಂಭವಾಗುವ ಮೊದಲೇ ವಿಫಲಗೊಂಡಂತಾಗಿವೆ.

ಇಸ್ಲಾಮಾಬಾದ್‌ನಲ್ಲಿ ನಡೆಯಬೇಕಿದ್ದ ಈ ಸಂಧಾನ ಪ್ರಕ್ರಿಯೆಯು ಮಧ್ಯಪ್ರಾಚ್ಯದ ಭವಿಷ್ಯವನ್ನು ನಿರ್ಧರಿಸಬೇಕಿತ್ತು. ಆದರೆ, ಇರಾನ್‌ನ ಕಠಿಣ ನಿಲುವು ಮತ್ತು ಅಮೆರಿಕದ ಬಿಗಿ ಹಿಡಿತದಿಂದಾಗಿ ಕದನ ವಿರಾಮದ ನಂತರ ಮತ್ತೆ ಭೀಕರ ಯುದ್ಧ ಸಂಭವಿಸುವ ಆತಂಕ ಎದುರಾಗಿದೆ. ಈ ಮಾತುಕತೆಗೆ ಪಾಕಿಸ್ತಾನವು ಆತಿಥ್ಯ ವಹಿಸಬೇಕಿತ್ತು ಮತ್ತು ಇತ್ತೀಚೆಗಷ್ಟೇ ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಅವರು ಇರಾನ್‌ಗೆ ಭೇಟಿ ನೀಡಿ ಮಾತುಕತೆಗೆ ವೇದಿಕೆ ಸಿದ್ಧಪಡಿಸಿದ್ದರು. ಆದರೆ ಈಗ ಇರಾನ್ ಹಿಂದೆ ಸರಿದಿರುವುದು ರಾಜತಾಂತ್ರಿಕ ಹಿನ್ನಡೆಯಾಗಿ ಕಂಡುಬರುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ದೀಪಿಕಾ-ರಣವೀರ್ ಮಧ್ಯೆ ಯಾವುದೂ ಸರಿ ಇಲ್ಲ ಎಂದವರಿಗೆಲ್ಲ ಬಿತ್ತು ಬಲವಾದ ಏಟು – Kannada News | Deepika Padukone and Ranveer Singh Expecting Second Child: Debunking Separation Rumors

‘ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಸಂಸಾರ ಸರಿ ಇಲ್ಲ’-ಹೀಗೊಂದು ವಿಷಯ ಇತ್ತೀಚೆಗೆ ಬಲವಾಗಿ ಚರ್ಚೆ ಆಗಿತ್ತು. ಇದಕ್ಕೆ ಕಾರಣವೂ ಇದೆ. ರಣವೀರ್ ಸಿಂಗ್ ಅವರು ‘ಧುರಂಧರ್ 2’ ಯಶಸ್ಸಿನ ಅಲೆಯಲ್ಲಿ ತೇಲಿದರೂ ದೀಪಿಕಾ ಪಡುಕೋಣೆ ಸೋಶಿಯಲ್ ಮೀಡಿಯಾದಲ್ಲಿ ಖುಷಿ ಹೊರಹಾಕಿರಲಿಲ್ಲ. ಇದು ಚರ್ಚೆಗೆ ಕಾರಣ ಆಗಿತ್ತು. ರಣವೀರ್-ದೀಪಿಕಾ ದೂರ ಆಗುತ್ತಾರೆ ಎಂದೆಲ್ಲ ಮಾತನಾಡಿಕೊಂಡಿದ್ದೇ ಬಂತು. ಆದರೆ, ಹಾಗಾಗಲೇ ಇಲ್ಲ. ದೀಪಿಕಾ (Deepika Padukone) ಎರಡನೇ ಬಾರಿಗೆ ತಾಯಿ ಆಗುತ್ತಿರುವುದಾಗಿ ಘೋಷಿಸಿದ್ದಾರೆ. ಇವರ ಸಂಬಂಧ ಸರಿ ಇಲ್ಲ ಎಂದವರಿಗೆಲ್ಲ ಭಾರೀ ಮುಖಭಂಗ ಆಗಿದೆ.

ದೀಪಿಕಾ ಎಡಪಂಕ್ತೀಯ ಸಿದ್ಧಾಂತಗಳನ್ನು ನಂಬುತ್ತಾರೆ. ಅದಕ್ಕೆ ಈ ಮೊದಲು ಅವರು ಜೆಎನ್​ಯು ಯುನಿವರ್ಸಿಟಿಗೆ ತೆರಳಿ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಬೆಂಬಲ ಕೊಟ್ಟಿದ್ದರು. ರಣವೀರ್ ಸಿಂಗ್ ಅವರು ಇತ್ತೀಚೆಗೆ ಆರ್​​ಎಸ್​ಎಸ್ ಕಚೇರಿಗೆ ತೆರಳಿದ್ದರು. ಈ ಘಟನೆಯಿಂದ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಅವರ ಸಿದ್ಧಾಂತ ಬೇರೆ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗಿದೆ. ಆದರೆ, ಇದು ಅವರ ಸಂಸಾರದ ಮೇಲೆ ಯಾವುದೇ ಪರಿಣಾಮ ಬಿರಿಲ್ಲ.

ದೀಪಿಕಾ ಹಾಗೂ ರಣವೀರ್ ಅವರನ್ನು ಇಷ್ಟಪಡದ ಕೆಲವರು ಇತ್ತೀಚೆಗೆ ಬಾಯಿಗೆ ಬಂದಂತೆ ಮಾತನಾಡಿದ್ದರು. ‘ರಣವೀರ್-ದೀಪಿಕಾ ಸಿದ್ಧಾಂತ, ಆಲೋಚನೆಗಳು ಹೊಂದಿಕೆ ಆಗುತ್ತಿಲ್ಲ. ಇವರು ಬೇರೆ ಆಗುತ್ತಾರೆ’ ಎಂದೆಲ್ಲ ಕೆಲವರು ವದಂತಿ ಹಬ್ಬಿಸಿದ್ದು ಇದೆ. ಆದರೆ, ಇದು ಸುಳ್ಳು ಎಂಬುದು ಈಗ ಸ್ಪಷ್ಟವಾಗಿದೆ. ಈ ರೀತಿಯ ಸುದ್ದಿ ಹಬ್ಬಿಸಿದವರಿಗೆ ದೀಪಿಕಾ ದೊಡ್ಡ ಏಟು ಕೊಟ್ಟಿದ್ದಾರೆ. ಎಲ್ಲಾ ಸೆಲೆಬ್ರಿಟಿಗಳು ಎಲ್ಲಾ ವಿಷಯವನ್ನೂ ಹೇಳಿಕೊಳ್ಳುವುದಿಲ್ಲ. ಹಾಗಂದ ಮಾತ್ರಕ್ಕೆ ಅವರ ಜೀವನ ಸರಿ ಇಲ್ಲ ಎಂದು ನಿರ್ಧರಿಸಬಾರದು. ರಣವೀರ್-ದೀಪಿಕಾ ಪ್ರಕರಣ ಇದಕ್ಕೆ ಒಳ್ಳೆಯ ಉದಾಹರಣೆ.

ಇದನ್ನೂ ಓದಿ: ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್; 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್

ದೀಪಿಕಾ ಹಾಗೂ ರಣವೀರ್ ಅವರು ಭಾನುವಾರ ಪ್ರೆಗ್ನೆನ್ಸಿ ಘೋಷಣೆ ಮಾಡಿದರು. ಮಗಳು ದುವಾ ಬಳಿ ಪ್ರೆಗ್ನೆನ್ಸಿ ಕಿಟ್ ಹಿಡಿಸಿ ಈ ವಿಷಯ ಅಭಿಮಾನಿಗಳಿಗೆ ತಿಳಿಸಿದರು.  ಈಗ ದೀಪಿಕಾ ಎರಡನೇ ಬಾರಿಗೆ ತಾಯಿ ಆಗುತ್ತಿದ್ದು ಎಲ್ಲರೂ ಶುಭ ಕೋರುತ್ತಿದ್ದಾರೆ. ಅವರು ಮೊದಲು ಒಪ್ಪಿಕೊಂಡ ಸಿನಿಮಾ ಕೆಲಸ ಪೂರ್ಣಗೊಳಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ನೋಡಿ! – Kannada News | Akshaya Tritiya: Auspicious Rituals, Significance and Puja Timings for Eternal Prosperity

ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ಎಂಬುದನ್ನು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಾವು ಹುಟ್ಟಿದ ಕ್ಷಣದಿಂದ ಸಾವಿನವರೆಗೂ ದೇವರ ಅನುಗ್ರಹ, ತಂದೆ-ತಾಯಿಗಳ ಆಶೀರ್ವಾದದ ಜೊತೆಗೆ, ಗುರುವಿನ ಅನುಗ್ರಹವು ಅತ್ಯಂತ ಮಹತ್ವದ್ದಾಗಿದೆ. “ಹರ ಮುನಿದರೂ ಗುರು ಕಾಯುವನು” ಎಂಬ ನುಡಿಯು ಗುರುವಿನ ಸರ್ವೋಚ್ಚ ಸ್ಥಾನವನ್ನು ಸಾರುತ್ತದೆ.

ಇತಿಹಾಸದ ಪ್ರಕಾರ, ಇದು ತ್ರೇತಾಯುಗ ಆರಂಭವಾದ ದಿನ, ಪಾಂಡವರಿಗೆ ಅಕ್ಷಯ ಪಾತ್ರೆ ದೊರೆತ ದಿನ, ಕುಬೇರನಿಗೆ ಮಹಾಲಕ್ಷ್ಮಿ ಒಲಿದ ದಿನ, ಪರಶುರಾಮ ಜಯಂತಿ ಮತ್ತು ಗಂಗೆ ಭೂಮಿಗೆ ಇಳಿದ ದಿನವಾಗಿದೆ. ಮಹಾಭಾರತದ ರಚನೆಯೂ ಇದೇ ದಿನ ಪ್ರಾರಂಭವಾಯಿತು. ಈ ದಿನ ಅನ್ನದಾನ, ವಸ್ತ್ರದಾನ, ಜಲದಾನಗಳು ಅತ್ಯಂತ ಶುಭಪ್ರದ. ಯಾವುದೇ ಹೊಸ ಕಾರ್ಯ, ಗೃಹಪ್ರವೇಶ ಅಥವಾ ವಿವಾಹಕ್ಕೆ ಈ ದಿನ ಶುಭಪ್ರದವಾಗಿದ್ದು, ಯಾವುದೇ ದೋಷವಿರುವುದಿಲ್ಲ. ಶುಭ ಮುಹೂರ್ತಗಳಲ್ಲಿ ಪೂಜೆ ಸಲ್ಲಿಸಿ, ಸಾಲ ಮಾಡದೆ ಶಕ್ತ್ಯಾನುಸಾರ ದಾನ ಕಾರ್ಯಗಳನ್ನು ಕೈಗೊಳ್ಳುವುದು ಉತ್ತಮ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

 

Source link

Horoscope Today: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 20, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಅಶ್ವಿನಿ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಕೌಲವ ಕರಣ ಒಳಗೊಂಡಿರುವ ವಿಶೇಷ ದಿನವಾಗಿದೆ. ಈ ದಿನವು ಅಕ್ಷಯ ತೃತೀಯ, ಬಸವ ಜಯಂತಿ ಮತ್ತು ಶಂಭೂರಿನಲ್ಲಿ ಸುಬ್ರಹ್ಮಣ್ಯ ಉತ್ಸವವನ್ನು ಆಚರಿಸುವ ಒಂದು ಮಹಾ ಪರ್ವ ದಿನವಾಗಿದೆ.

ಅಕ್ಷಯ ತೃತೀಯ ಎಂದರೆ “ಕ್ಷಯವಿಲ್ಲದೆ ಇರುವುದು” ಎಂದರ್ಥ. ಈ ದಿನ ಕೈಗೊಳ್ಳುವ ಯಾವುದೇ ಶುಭ ಕಾರ್ಯಗಳು ಕ್ಷಯವಾಗದೆ ಅಭಿವೃದ್ಧಿಯನ್ನು ಕಾಣುತ್ತವೆ. ತ್ರೇತಾಯುಗದ ಪ್ರಾರಂಭ, ಗಂಗೆಯ ಅವತಾರ, ವೇದವ್ಯಾಸರು ಮಹಾಭಾರತ ರಚಿಸಿದ ದಿನ, ಕುಚೇಲನಿಗೆ ಶ್ರೀಕೃಷ್ಣನ ಅನುಗ್ರಹ, ಪಾಂಡವರಿಗೆ ಅಕ್ಷಯ ಪಾತ್ರೆ ಪ್ರಾಪ್ತಿ, ಮತ್ತು ಕುಬೇರನಿಗೆ ಮಹಾಲಕ್ಷ್ಮಿಯ ವರ ಸಿದ್ಧಿಯಾದ ಮಹತ್ವದ ದಿನ ಇದಾಗಿದೆ ಎಂದು ಗುರೂಜಿ ಹೇಳಿದ್ದಾರೆ.

 

 

 

 

Source link

ತನ್ನದೇ ಕಾರಲ್ಲಿ ಶವವಾಗಿ ಪತ್ತೆಯಾದ 56 ವರ್ಷದ ವ್ಯಕ್ತಿ: ಸಾವಿಗೆ ಕಾರಣ ನಿಗೂಢ – Kannada News | Bengaluru: 56 Year Old Real Estate Businessman Found Dead in Car; Cause Mysterious

ಬೆಂಗಳೂರು, ಏಪ್ರಿಲ್​​ 20: ರಿಯಲ್​ ಎಸ್ಟೇಟ್​​ ಮತ್ತು ಸಣ್ಣ ಮಟ್ಟದ ಹಣಕಾಸು ವ್ಯವಹಾರ ನಡೆಸುತ್ತಿದ್ದ 56 ವರ್ಷದ ವ್ಯಕ್ತಿಯೋರ್ವರು ತಮ್ಮದೇ ಕಾರಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ (Bengaluru) ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ನಡೆದಿದೆ. ಮೃತರನ್ನು ಬಸಾಪುರ ನಿವಾಸಿ ನಾರಾಯಣಪ್ಪ ಎಂದು ಗುರುತಿಸಲಾಗಿದ್ದು, ಕಾರಿನೊಳಗೆ ಚಾಲಕನ ಪಕ್ಕದ ಸೀಟ್‌ನಲ್ಲಿ ಅಚಲವಾಗಿ ಕುಳಿತಿದ್ದ ನಾರಾಯಣಪ್ಪ ಅವರನ್ನು ಗಮನಿಸಿದ ಸಾರ್ವಜನಿಕರು ಈ ಬಗ್ಗೆ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಅವರು ಅದಾಗಲೇ ಮೃತಪಟ್ಟಿರೋದು ದೃಢಪಟ್ಟಿದೆ.

ಪೊಲೀಸ್ ಮಾಹಿತಿಯ ಪ್ರಕಾರ, ನಾರಾಯಣಪ್ಪ ತಮ್ಮ ಸ್ನೇಹಿತರಾದ ಮಂಜುನಾಥ ರೆಡ್ಡಿ ಮತ್ತು ಶಿವು ಜೊತೆ ಎಲೆಕ್ಟ್ರಾನಿಕ್ಸ್ ಸಿಟಿಯ ಬಾರ್‌ಗೆ ತೆರಳಿದ್ದರು. ತೀವ್ರವಾಗಿ ಮದ್ಯಪಾನ ಮಾಡಿದ್ದ ಅವರು ನಿಲ್ಲಲೂ ಕಷ್ಟಪಡುತ್ತಿದ್ದರು. ಹೀಗಾಗಿ ಮಂಜುನಾಥ ರೆಡ್ಡಿ ಮತ್ತು ಶಿವು ಅವರ ಕೈ ಹಿಡಿದು ಬಾರ್​​ನಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ನಂತರ ನಾರಾಯಣಪ್ಪ ಕಾರಿನ ಚಾಲಕನ ಪಕ್ಕದ ಸೀಟ್‌ನಲ್ಲಿ ಕುಳಿತಿದ್ದು, ಅವರದ್ದೇ ಕಾರನ್ನು ಮಂಜುನಾಥ ರೆಡ್ಡಿ ಚಲಾಯಿಸಿದ್ದಾರೆ. ಸ್ನೇಹಿತ ಶಿವು ಬಾರ್​​ನಿಂದ ಹೊರ ಬಂದ ಬಳಿಕ ಇವರಿಂದ ಬೇರೆಯಾಗಿ ತೆರಳಿದ್ದಾರೆ. ಈ ಎಲ್ಲ ಘಟನೆಗಳ ಸಂಪೂರ್ಣ ಚಿತ್ರಣ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಇನ್ನೇನು ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ; ಮಾನವೀಯತೆಗೆ ಸಾಕ್ಷಿಯಾದ ವಿಮಾನ

ಇನ್ನು ಕೆಲ ಕಿಲೋಮೀಟರ್ ಪ್ರಯಾಣಿಸಿದ ಬಳಿಕ ಮಂಜುನಾಥ ರೆಡ್ಡಿಗೆ ಕಾರು ಚಲಾಯಿಸಲು ಕಷ್ಟವಾಗಿದ್ದರಿಂದ ರಸ್ತೆಯ ಬದಿಯಲ್ಲಿ ಕಾರನ್ನು ನಿಲ್ಲಿಸಿ ಅವರು ಮನೆಗೆ ತೆರಳಿದ್ದಾರೆ. ಮರುದಿನ ಅದೇ ಸ್ಥಳದಲ್ಲಿ ಕಾರಿನೊಳಗೆ ನಾರಾಯಣಪ್ಪ ಅವರು ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಕುರಿತು ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದು, ಯಾವುದೇ ಅನುಮಾನಾಸ್ಪದ ಅಂಶ ಇಲ್ಲವೆಂದು ತಿಳಿಸಿದ್ದಾರೆ. ದೇಹದಲ್ಲಿ ಯಾವುದೇ ಗಾಯಗಳಿಲ್ಲ, ಮಂಜುನಾಥ ರೆಡ್ಡಿ ಮತ್ತು ನಾರಾಯಣಪ್ಪ ನಡುವೆ ಯಾವುದೇ ಜಗಳ ನಡೆದಿಲ್ಲ. ಹೀಗಾಗಿ ಸಾವಿಗೆ ನಿಖರ ಕಾರಣವನ್ನು ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಗೊತ್ತಾಗಲಿದೆ ಎಂದು ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದಿನ ಭವಿಷ್ಯ: ಬಸವ ಜಯಂತಿ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ – Kannada News | Horoscope April 20 Monday 2026: Know the fortune of each zodiac sign on Basava Jayanti

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪ್ರೀತಿ, ಕರಣ : ಕೌಲವ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:04 – 18:37, ಯಮಗಂಡ ಕಾಲ 12:24 – 13:57, ಗುಳಿಕ ಕಾಲ 15:31- 17:04

ಮೇಷ ರಾಶಿ: ಕರೆಯದೇ ಎಲ್ಲಿಗೂ ಹೋಗುವ ಇಚ್ಛೆ ತೋರಿಸಲಾರಿರಿ. ಅನಿರೀಕ್ಷಿತ ಆಮಂತ್ರಣದಿಂದ ಉತ್ಸಾಹ. ಸಂಗಾತಿಯಿಂದ ಪ್ರೀತಿಯ ಮೆಲುಕು. ಬೇರೆಯವರನ್ನು ಇರಿಯಲು ಹೊರಟ ಮಾತು ನಿಮ್ಮನ್ನೇ ಇರಿದೀತು. ನೀವು ಇಂದು ಮಕ್ಕಳಿಗಾಗಿ ಖರ್ಚು ಮಾಡುವುದು ಅಗತ್ಯವೂ ಅನಿವಾರ್ಯವೂ ಆದೀತು. ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳಬೇಕಾಗುವುದು. ದೊಡ್ಡ ಕನಸನ್ನಿಟ್ಟುಕೊಳ್ಳುವುದು ಸೂಕ್ತ.

ವೃಷಭ ರಾಶಿ: ದೈಹಿಕ ಅನಾರೋಗ್ಯದಿಂದ ಕೋಪ ಅಧಿಕವಾಗಲಿದೆ. ಕುತೂಹಲದ ನಿಮ್ಮ ಸ್ವಭಾವವು ಇಂದು ಜಗಜ್ಜಾಹಿರಾಗಲಿದೆ. ಇತರರ ಬಗ್ಗೆ ದ್ವೇಷ ಭಾವನೆ ಬೇಡ, ಅದು ನಿಮ್ಮ ಶಕ್ತಿಯನ್ನು ಕಡಿಮೆ ಮಾಡುತ್ತದೆ. ವ್ಯಾಪಾರದಲ್ಲಿ ಹಾನಿ ಸಾಧ್ಯತೆ, ಜಾಣತನದಿಂದ ಹಣ ವ್ಯಯಿಸಿ. ಖರ್ಚಿನಿಂದಾಗಿ ಬೇಸರವು ಅಧಿಕವಾಗಬಹುದು. ನೀವು ನೋಡುವ ದೃಷ್ಟಿಯಿಂದ ಎಲ್ಲವೂ ಹಾಗೆ ಕಾಣಿಸುವುದು. ಮನಸ್ಸಿನ ಭಾರವು ನಿಮ್ಮ ಕೆಲಸವನ್ನು ನಿಲ್ಲಿಸುವುದು.

ಮಿಥುನ ರಾಶಿ: ಸ್ನೇಹಿತ ಜೊತೆ ಪ್ರವಾಸದ ಯೋಜನೆ ಉತ್ಸಾಹವನ್ನು ತುಂಬುತ್ತದೆ. ಸಂಗಾತಿಯ ಜೊತೆ ಹಳೆಯ ನೆನಪನ್ನು ಹಂಚಿಕೊಳ್ಳುವಿರಿ. ಆಪದ್ಧನ ಇಂದು ತನ್ನ ಅಸ್ತಿತ್ವವನ್ನು ತೋರಿಸಲಿದೆ‌. ಇದರ ಜೊತೆ ವ್ಯಯದ ದುಃಖವು ನಿಮಗೆ ಆಗುತ್ತದೆ. ಪ್ರಣಯವನ್ನು ಪ್ರಕಟಿಸಲು ಹೋಗಬೇಡಿ. ಇಂದು ನಿಮಗೆ ಹಿರಿಯರ ಉಪದೇಶವು ಅಧಿಕವಾಗಿ ಇರುವುದು. ಇನ್ನೊಬ್ಬರ ಬಗ್ಗೆ ನಿಮಗೆ ಅನುಕಂಪ ಹೆಚ್ಚಾದೀತು. ನಿಮ್ಮ ಏಕಾಗ್ರತೆಗೆ ಭಂಗಬರಬಹುದು.

ಕರ್ಕಾಟಕ ರಾಶಿ: ನಿಮ್ಮ ಮನಸ್ಸಿಗೆ ತೃಪ್ತಿ ಕೊಡುವಂತಹ ಕೆಲಸವನ್ನು ಮಾಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿದ್ದರೂ ವ್ಯರ್ಥ ಖರ್ಚನ್ನು ನಿಯಂತ್ರಿಸಿ. ಕುಟುಂಬದಿಂದ ಬಲವಾದ ಬೆಂಬಲ ಸಿಗುತ್ತದೆ. ಸಂಗಾತಿಯಿಂದ ಅಲ್ಪಮಟ್ಟದ ನಿರಾಶೆ ಬರಬಹುದು. ದೈನಂದಿನ ಚಟುವಟಿಕೆಗಳಲ್ಲಿ ಆಸಕ್ತಿ ಕಡಿಮೆ. ನಿಮ್ಮ ಕುಟುಂಬದ ಆಲೋಚನೆಯು ಅಧಿಕವಾಗಿ ಇರುವುದು. ಆದಾಯ ನೋಡಿ ಕೃಷಿಯಲ್ಲಿ ಆಸಕ್ತಿ ಉಂಟಾಗಬಹುದು. ರಮಣೀಯ ಸ್ಥಳಕ್ಕೆ ಸಂಗಾತಿಯ ಜೊತೆ ಹೋಗಲಿದ್ದೀರಿ.

ಸಿಂಹ ರಾಶಿ: ಹಣವನ್ನು ಉಳಿಸಿ ಹೂಡಿಕೆ ಮಾಡುತ್ತೇನೆ ಎಂದರೆ ಆಗದು. ಮಕ್ಕಳ ಜೊತೆ ಸಮಯವನ್ನು ಸಂತೋಷದಿಂದ ಕಳೆಯಬಹುದು. ಒತ್ತಡದ ದಿನದವನ್ನು ಮರೆಯಲು ಸಂತೋಷಕೂಟ ಮಾಡುವಿರಿ. ಹಣದ ವ್ಯಯವನ್ನು ಸಾಧ್ಯವಾದಷ್ಟು ಮಿತಿಗೊಳಿಸಿ. ಕುಟುಂಬದ ಸಲಹೆ ಅನುಸರಿಸಿ. ಪ್ರಭಾವಿ ವ್ಯಕ್ತಿಗಳು ಬಂಧುಗಳಾಗಿದ್ದು ಅವರಿಂದ ಬೇಕಾದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ಸ್ಥಿರಾಸ್ತಿ ಮಾರಾಟದ ಬಗ್ಗೆ ಪೂರ್ಣವಾಗಿ ನಿಮಗೆ ಬೆಂಬಲ ಸಿಗದೇ ಹೋಗಬಹುದು.

ಕನ್ಯಾ ರಾಶಿ: ಸೃಜನಾತ್ಮಕ ಕೆಲಸದಲ್ಲಿ ತೊಡಗಿಸಿಕೊಂಡು ಮನಸ್ಸಿಗೆ ಹಿತ. ಭೂಮಿಯ ಹೂಡಿಕೆ ಲಾಭಪ್ರದ. ಸಂಬಂಧಿಕರಿಂದ ಸಂಜೆಯ ಆಮಂತ್ರಣ ಸಿಗಬಹುದು. ಪ್ರೀತಿಯಲ್ಲಿ ಬಲವಂತ ಬೇಡ. ಸಹೋದರರೊಂದಿಗೆ ಸಂತೋಷ ಸಮಯ ಮೀಸಲಾಗುತ್ತದೆ. ಸಂಗಾತಿಯ ವರ್ತನೆ ಒತ್ತಡ ತರಬಹುದು. ತೀರ್ಥಯಾತ್ರೆಗೆ ಹೋಗಲು ತಯಾರಾಗಿರಿ. ಪ್ರೇಮಿಸಿದವರು ತಮ್ಮ ಕುಟುಂಬಕ್ಕೆ ಅದನ್ನು ತಿಳಿಸಿ ಅವರಿಂದ ಒಪ್ಪಿಗೆ ಪಡೆಯುವರು.

ತುಲಾ ರಾಶಿ: ಹೊಸ ಒಪ್ಪಂದಗಳು ಲಾಭದಾಯಕವಾಗಿ ತೋರುತ್ತಿದ್ದರೂ ಆತುರಾತುರವಾಗಿ ನಿರ್ಧಾರ ತೆಗೆದುಕೊಳ್ಳಬೇಡಿ. ಯಾವುದೇ ವ್ಯಕ್ತಿ ನಿಮ್ಮ ಸಂಬಂಧದ ಮಧ್ಯೆ ಬರಬಹುದು. ನೆರೆಹೊರೆಯವರು ಸಂಬಂಧದಲ್ಲಿ ಗೊಂದಲ ಉಂಟುಮಾಡಲು ಯತ್ನಿಸಬಹುದು. ವಾಹನ ಚಾಲನೆಯಲ್ಲಿ ಎಚ್ಚರ ತಪ್ಪಬಹುದು. ಅಂಗಳವನ್ನೇ ಹಾರಲಾರದವನು ಆಕಾಶವನ್ನು ಹಾರಿಯಾನು ಎಂದು ನಿಮ್ಮನ್ನು ಲೇವಡಿ ಮಾಡಬಹುದು.

ವೃಶ್ಚಿಕ ರಾಶಿ: ನಿಮಗೆ ಮಕ್ಕಳಿಂದ ಸಂತೋಷದ ಸುದ್ದಿ ಬರಬಹುದು. ನಿಮ್ಮನ್ನು ಹೆಚ್ಚು ಪ್ರೀತಿಸುವ ವ್ಯಕ್ತಿಯನ್ನು ಭೇಟಿಯಾಗುವ ಸಾಧ್ಯತೆ ಇದೆ. ಹಳೆ ಸ್ನೇಹಿತರೊಂದಿಗೆ ಇಂದು ಭೇಟಿಯಾಗುವ ಅವಕಾಶವಿದೆ. ವೈವಾಹಿಕ ಜೀವನದ ಬಗ್ಗೆ ಹೊಸ ಹಿತವಚನಗಳು ನಿಮ್ಮ ಮನಸ್ಸನ್ನು ತಂಪು ಮಾಡಬಹುದು. ನೀವು ಶಿಸ್ತಿಗೆ ಒಳಪಟ್ಟಷ್ಟು ನಿಮ್ಮ ಕೆಲಸಗಳು ಸುಲಲಿತವಾಗುವುದು. ಕೆಲವು ಸಂದರ್ಭಗಳು ನಿಮ್ಮ ಪರೀಕ್ಷೆಗಾಗಿ ಬರಲಿದ್ದು ಅದನ್ನು ಎದುರಿಸುವುದು ನಿಮ್ಮ ಮೇಲಿದೆ.

ಧನು ರಾಶಿ: ಅತ್ಯಂತ ಪ್ರಭಾವಿ ಜನರ ಬೆಂಬಲದಿಂದ ನಿಮ್ಮ ನೈತಿಕ ಸ್ಥೆರ್ಯವನ್ನು ಹೆಚ್ಚಿಸುತ್ತದೆ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ. ಸಂಬಂಧಿಗಳು ಹೆಚ್ಚು ಸಮಯ ಕೇಳಿದರೂ ಸ್ವಲ್ಪ ಸಮಯವನ್ನು ನಿಮಗಾಗಿ ಇಡುವಿರಿ. ನೀವು ಕೆಟ್ಟ ಸಮಯದಲ್ಲಿರುವವರನ್ನು ದೂರವಿರಿಸುವಿರಿ. ವ್ಯವಹಾರದಲ್ಲಿ ನಿಮಗೆ ವಿಶ್ವಾಸವು ಸಾಲದು. ಯಾರ ಬಳಿಯೂ ಏನನ್ನೂ ಹೇಳಿಕೊಳ್ಳಲಾಗದ ಸ್ಥಿತಿಯಲ್ಲಿ ನೀವು ಇರುವಿರಿ. ನಿಮ್ಮ ಎಲ್ಲ ಶ್ರಮದಾಯಕ ಯೋಜನೆ ಅಂತಿಮವಾಗಿ ಫಲವನ್ನು ನೀಡಲಿದೆ.

ಮಕರ ರಾಶಿ: ಸೌಂದರ್ಯವು ನಿಮ್ಮ ಸ್ವಭಾವವನ್ನು ನುಂಗಿ ಹಾಕುವುದು. ವಿಶೇಷವಾಗಿ ಕೋಪವನ್ನು, ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಅಮೂಲ್ಯ ವಸ್ತುವನ್ನು ಖರೀದಿಸಬಹುದು. ನೀವು ಪ್ರಾಮುಖ್ಯತೆ ನೀಡುವ ಸಂಬಂಧಗಳಿಗೆ ಸಮತೋಲನ ಅಗತ್ಯ ಹಾಗೂ ಸಣ್ಣ ಬೆಳವಣಿಗೆಯೂ ಭವಿಷ್ಯದ ಬದಲಾವಣೆಗಳಿಗೆ ದಾರಿ. ಕಾರ್ಯವಿಧಾನದ ಬದಲಾವಣೆಯಿಂದ ನಿಮಗೆ ಸಂತೋಷವಾಗಲಿದೆ.

ಕುಂಭ ರಾಶಿ: ಪರರ ದುಃಖದಲ್ಲಿ ಭಾಗಿಯಾಗಿ ಮನಸ್ಸನ್ನು ಹಗುರಗೊಳಿಸುವಿರಿ. ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಿ. ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ತೆಗೆದುಕೊಳ್ಳುವ ನಿರ್ಧಾರವು ತಪ್ಪಾದೀತು ಎಂಬ ಆತಂಕ.. ರೋಗಬಾಧೆಯಿಂದ ನೀವು ಖಿನ್ನರಾಗುವಿರಿ. ಯಾವ ವಿಚಾರಕ್ಕೂ ಗೊಂದಲವಾಗುವಂತೆ ಇರುವುದು ಬೇಡ.

ಮೀನ ರಾಶಿ: ಕೆಲಸದಲ್ಲಿ ಮೇಲಧಿಕಾರಿಗಳಿಂದ ಒತ್ತಡ ಮತ್ತು ಮನೆಯಲ್ಲಿ ಬೇಜವಾಬ್ದಾರಿ. ಇದರಿಂದ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ವಾಹನವನ್ನು ಚೆನ್ನಾಗಿ ಚಲಾಯಿಸಲು ಬಯಸುತ್ತಿದ್ದರೆ, ಇಂದು ನೀವು ಹಣದ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೆಲಸದಲ್ಲಿ ಎಲ್ಲವೂ ನಿಮ್ಮ ಪರವಾಗಿ ಇದ್ದಂತೆ ತೋರುತ್ತದೆ. ದಾಂಪತ್ಯದಲ್ಲಿ ಪ್ರೀತಿಯು ಹೆಚ್ಚಾಗಬಹುದು. ನೀವು ಇನ್ನೊಬ್ಬರ ಅಹಂಕಾರವನ್ನು ಹೆಚ್ಚಿಸಲು ಹೋಗುವುದು ಬೇಡ. ಅತ್ಯಂತ ಮುಖ್ಯವೆಂದು ಪರಿಗಣಿಸುವ ವಿಷಯಗಳಲ್ಲಿ ನಿಮ್ಮ ಪ್ರಯತ್ನಗಳನ್ನು ಮುಂದುವರೆಸಿ.

ಲೋಹಿತ ಹೆಬ್ಬಾರ್ – 8762924271 (what’s app only)

Source link

PBKS vs LSG: ಪಂದ್ಯ ಸೋತರೂ ಪ್ರೇಕ್ಷಕರ ಮನ ಗೆದ್ದ ಪಂತ್ ಬಾರಿಸಿದ ಸಿಕ್ಸರ್ – Kannada News | IPL 2026: PBKS Dominates LSG by 54 Runs; Rishabh Pant’s Epic One Handed Six!

ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ದಾಖಲೆಯ 254 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಲಕ್ನೋ ತಂಡ 200 ರನ್ ಕಲೆಹಾಕಲಷ್ಟೇ ಶಕ್ತವಾಗಿ 54 ರನ್​​ಗಳಿಂದ ಪಂದ್ಯ ಸೋತಿತು. ಆದಾಗ್ಯೂ ಲಕ್ನೋ ತಂಡದ ಪರ ಏಕಾಂಗಿ ಹೋರಾಟ ನೀಡಿದ ನಾಯಕ ರಿಷಭ್ ಪಂತ್ 23 ಎಸೆತಗಳಲ್ಲಿ 4 ಸಿಕ್ಸರ್ ಸಹಿತ 43 ರನ್ ಬಾರಿಸಿ ಔಟಾದರು.

ಇನ್ನಿಂಗ್ಸ್​ನ 7ನೇ ಓವರ್​ನಲ್ಲಿ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್, ಮಾರ್ಕೋ ಯಾನ್ಸನ್ ಬೌಲ್ ಮಾಡಿದ ಈ ಓವರ್​ನ 4ನೇ ಎಸೆತವನ್ನು ಪಂತ್ ಸಿಕ್ಸರ್​ಗಟ್ಟಿದರು. ಆ ನಂತರದ ಅಂದರೆ ಐದನೇ ಎಸೆತವನ್ನು ಪಂತ್ ಲಾಂಗ್ ಆಫ್​​ನಲ್ಲಿ ಭರ್ಜರಿ ಸಿಕ್ಸರ್​ಗಟ್ಟಿದರು. ಪಂತ್ ಬಾರಿಸಿದ ಈ ಸಿಕ್ಸರ್​​ ಪ್ರೇಕ್ಷಕರು ಹುಚ್ಚೆದ್ದು ಕುಣಿಯುವಂತೆ ಮಾಡಿತು. ಏಕೆಂದರೆ ಪಂತ್ ಈ ಸಿಕ್ಸರ್​ ಅನ್ನು ಕೇವಲ ಒಂದು ಕೈನಿಂದ ಬಾರಿಸಿದರು.

Source link

Exit mobile version