SC, ST ಮೇಲಿನ ದೌರ್ಜನ್ಯ ತನಿಖೆ ಮಾಡುವ DCREಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ! – Kannada News | Dcre inspector alleges harassment by senior officers files complaint with dg

ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ
Image Credit source: Tv9 Kannada

ಬೆಂಗಳೂರು, ಏಪ್ರಿಲ್​​ 20: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೇಲಿನ ದೌರ್ಜನ್ಯ ಕೇಸ್ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿಯೇ (DCRE) ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ ಕೇಳಿಬಂದಿದೆ. DCRE ಕೇಂದ್ರ ಕಚೇರಿ SP ಕರಿಬಸನಗೌಡ ಹಾಗೂ DySP ಮಹೇಶ್ವರಗೌಡ ಮೇಲೆ ಆರೋಪ ಮಾಡಲಾಗಿದ್ದು, ಈ ಬಗ್ಗೆ ಪಶ್ಚಿಮ ವಲಯ DCRE ಪೊಲೀಸ್ ಇನ್ಸ್ಪೆಕ್ಟರ್ ಶ್ರೀನಿವಾಸ್ ನೇರವಾಗಿ DCRE ಡಿಜಿ ಉಮೇಶ್ ಕುಮಾರ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಅಷ್ಟಲ್ಲದೆ ಈ ಬಗ್ಗೆ ಶ್ರೀನಿವಾಸ್ ವೀಡಿಯೋ ಕೂಡ ಮಾಡಿದ್ದು,ಮೇಲ್ವರ್ಗದ ಆರೋಪಿಗಳ ಪರವಾಗಿ ಕೆಲಸ ಮಾಡುವಂತೆ ಕಿರುಕುಳ ನೀಡಲಾಗ್ತಿದೆ. SP ಕರಿಬಸನಗೌಡ ನಿರ್ದೇಶನದಂತೆ ಕೆಲ ಕೇಸ್​​ಗಳಲ್ಲಿ ಮೇಲ್ಜಾತಿ ಆರೋಪಿಗಳ ಪರ ಅಂತಿಮ ವರದಿ ಸಲ್ಲಿಸಲು DySP ಒತ್ತಡ ಹಾಕುತ್ತಿದ್ದರು. ಆ ವೇಳೆ ವಲಯ SP ಅವರಿಂದ ನಿರ್ದೇಶನ ಕೊಡಿಸುವಂತೆ ಹೇಳಿದ್ದ ಕಾರಣ ಅಂದಿನಿಂದ Dysp ಮತ್ತು SP ಕರಿಬಸನಗೌಡ ಕಿರುಕುಳ ನೀಡುತ್ತಿದ್ದಾರೆ. ದೂರುದಾರರಿಂದ ತನ್ನ ವಿರುದ್ಧ ಸುಳ್ಳು ಪಿಟಿಷನ್ ಪಡೆದು ತನಿಖೆ ಹೆಸರಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನು ಕಳೆದ ತಿಂಗಳು ಶ್ರೀನಿವಾಸ್​​ರನ್ನ ವರ್ಗಾವಣೆ ಮಾಡಲಾಗಿತ್ತು. ಆದರೆ KATನಲ್ಲಿ ಅದಕ್ಕೆ ಅವರು ಸ್ಟೇ ತಂದಿದ್ದರು. ಆದರೂ ನಕಲಿ ದಾಖಲೆ ಸೃಷ್ಟಿಸಿ ಷಡ್ಯಂತ್ರ ಮಾಡಿ ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆಂದು ಆರೋಪಿಸಲಾಗಿದೆ. ಈ ರೀತಿ ಕಿರುಕುಳ ನಿಲ್ಲದಿದ್ರೆ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆಯೂ ಅವರಿಂದ ವ್ಯಕ್ತವಾಗಿದೆ.

ಇದನ್ನೂ ಓದಿ: ಒಳಚರಂಡಿ ತ್ಯಾಜ್ಯದಿಂದ ಕೋಟಿ ಕೋಟಿ ಆದಾಯ! ಬೆಂಗಳೂರಿನಲ್ಲಿ ದೇಶದಲ್ಲೇ ಅತಿ ದೊಡ್ಡ ವೇಸ್ಟ್ ಟು ವೆಲ್ತ್ ಯೋಜನೆಗೆ ಜಲಮಂಡಳಿ ಸಿದ್ಧತೆ

ಆದರೆ ಇನ್ಸ್ಪೆಕ್ಟರ್ ಶ್ರೀನಿವಾಸ್ ಮಾಡಿರುವ ಆರೋಪಗಳನ್ನು SP ಕರಿಬಸನಗೌಡ ನಿರಾಕರಿಸಿದ್ದಾರೆ. ಶ್ರೀನಿವಾಸ್ ಆಪಾದನೆಗಳಿಗೂ ನನಗೂ ಯಾವುದೇ ಸಂಬಂಧ ಇಲ್ಲ . ಆರೋಪಗಳು ಕಪೋಲ ಕಲ್ಪಿತಗಳಾಗಿರುತ್ತವೆ ಅಥವಾ ಬೇರೆಯವರು ಹೇಳಿಕೊಟ್ಟಿರುವಂತದ್ದು. ಮಹೇಶ್ವರಗೌಡರನ್ನ ಎರಡ್ಮೂರು ಸಲ ಅಷ್ಟೇ ಭೇಟಿ ಆಗಿರೋದು. ಅಂತಿಮ ವರದಿಗಳಲ್ಲಿ ಕೇಂದ್ರ ಸ್ಥಾನದ ಪಾತ್ರ ಇರುವುದಿಲ್ಲ. ಅಲ್ಲದೆ ಶ್ರೀನಿವಾಸ್ ವಿರುದ್ಧದ ಯಾವುದೇ ಅರ್ಜಿಗಳನ್ನು ನಾನು ವಿಚಾರಣೆ ಮಾಡುತ್ತಿಲ್ಲ. ನನ್ನ ವಿರುದ್ಧ ಆರೋಪ ಇದ್ದಲ್ಲಿ KATನಲ್ಲಿ ಪಾರ್ಟಿ ಮಾಡಬೇಕಾಗಿತ್ತು. ಹೀಗಾಗಿ ಶ್ರೀನಿವಾಸ್ ಆರೋಪಗಳು ಸುಳ್ಳು ಎಂದು ಕರಿಬಸನಗೌಡ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕಾಂಗ್ರೆಸ್ ಶಾಸಕ ಹ್ಯಾರಿಸ್, ಪುತ್ರ ನಲಪಾಡ್ ಮನೆ ಮೇಲೆ ಇ.ಡಿ ದಾಳಿ – Kannada News | ED Raids Congress MLA NA Haris and Son Mohammed Nalapad’s Residences in Bengaluru Over Bitcoin Scam Links

ಬೆಂಗಳೂರು, ಏಪ್ರಿಲ್ 20: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ. ಬೆಂಗಳೂರಿನ ಅಶೋಕನಗರದಲ್ಲಿರುವ ಹ್ಯಾರಿಸ್ ನಿವಾಸ ಹಾಗೂ ಮೊಹಮ್ಮದ್ ನಲಪಾಡ್ ಮನೆಯ ಮೇಲೆ ದಾಳಿ ನಡೆದಿದೆ. ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಇ.ಡಿ. ಅಧಿಕಾರಿಗಳು ಬೆಂಗಳೂರು ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೊಹಮ್ಮದ್ ನಲಪಾಡ್ ಹ್ಯಾಕರ್ ಶ್ರೀಕಿ ಜೊತೆ ನಂಟು ಹೊಂದಿದ್ದ ಆರೋಪಗಳು ಈ ಹಿಂದೆ ಕೇಳಿಬಂದಿದ್ದವು. ಈ ನಂಟಿನ ಹಿನ್ನೆಲೆಯಲ್ಲೇ ಇ.ಡಿ. ದಾಳಿ ನಡೆಸಿದೆ ಎನ್ನಲಾಗಿದೆ. ಶ್ರೀಕಿ ಮತ್ತು ನಲಪಾಡ್ ನಡುವೆ 4.5 ಕೋಟಿ ರೂಪಾಯಿಗಳ ಅಕ್ರಮ ವ್ಯವಹಾರ ನಡೆದಿದೆ ಎಂದು ಇಡಿ ಈಗಾಗಲೇ ಆರೋಪಿಸಿದೆ. ಈ ಹಿಂದೆ ರಾಜ್ಯ ಸಿಐಡಿ ಕೂಡ ಬಿಟ್‌ಕಾಯಿನ್ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಅವರನ್ನು ವಿಚಾರಣೆ ನಡೆಸಿತ್ತು. ಸದ್ಯ, ಇ.ಡಿ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್ ವಿನ್ನರ್ ಘೋಷಣೆ ಮಾಡಿದ ನಟ ರಿತೇಶ್ ದೇಶ್​​ಮುಖ್ – Kannada News | Bigg Boss Marathi 6 Winner: Tanvi Kolte Bags Trophy and 15 Lakh Prize

‘ಬಿಗ್ ಬಾಸ್’ ಶೋ ವಿವಿಧ ಭಾಷೆಯಲ್ಲಿ ಪ್ರಸಾರ ಕಾಣುತ್ತಿದೆ. ಅದೇ ರೀತಿ ಮರಾಠಿಯಲ್ಲಿ ‘ಬಿಗ್ ಬಾಸ್ 6′ ಸೀಸನ್ ಪೂರ್ಣಗೊಂಡಿದೆ. ಮೂರು ತಿಂಗಳ ಹಿಂದೆ ಕಲರ್ಸ್ ಮರಾಠಿ ಚಾನೆಲ್‌ನಲ್ಲಿ ಈ ಶೋ ಪ್ರಾರಂಭವಾಯಿತು. ಬಿಗ್ ಬಾಸ್ ಮರಾಠಿಯ ಈ ಸೀಸನ್‌ನಲ್ಲಿ, ಒಟ್ಟು 17 ಸದಸ್ಯರು 100 ದಿನಗಳ ಕಾಲ ಇದ್ದರು. ಈ ಪ್ರಯಾಣವು ಏಪ್ರಿಲ್ 19ರಂದು ಕೊನೆಗೊಂಡಿತು. ‘ಬಿಗ್ ಬಾಸ್ ಮರಾಠಿ ಸೀಸನ್ 6’ ರ ಗ್ರ್ಯಾಂಡ್ ಫಿನಾಲೆಯಲ್ಲಿ ತನ್ವಿ ಕೋಲ್ಟೆ ಪ್ರಶಸ್ತಿಯನ್ನು ಗೆದ್ದರು.

ಕೊನೆಯವರೆಗೂ ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಇತ್ತು. ತನ್ವಿ ಗೆಲುವಿನ ನಗೆ ಬೀರಿದರು. ವಿಜೇತರಿಗೆ ಕಲರ್ಸ್ ಮರಾಠಿಯಿಂದ 15 ಲಕ್ಷ ರೂ. ನಗದು ಬಹುಮಾನ ಮತ್ತು ಟ್ರೋಫಿಯನ್ನು ನೀಡಲಾಯಿತು . ವಜ್ರದ ಆಭರಣಗಳನ್ನು ಖರೀದಿಸಲು 10 ಲಕ್ಷ ರೂ.ಗಳ ವೋಚರ್ ಅನ್ನು ನೀಡಲಾಯಿತು. ವಿಜೇತರಿಗೆ ಇ-ಬೈಕ್ ಅನ್ನು ಸಹ ನೀಡಲಾಗಿದೆ. ರಿತೇಶ್ ದೇಶ್​​ಮುಖ್ ಈ ಘೋಷಣೆ ಮಾಡಿದರು.

ಆ ಬಳಿಕ ಮಾತನಾಡಿದ ತನ್ವಿ, ‘ಈ ಪ್ರಯಾಣ ನನಗೆ ತುಂಬಾ ವಿಶೇಷವಾಗಿದೆ. ಈ ಮನೆ ನನ್ನನ್ನು ನಾನು ತಿಳಿದುಕೊಳ್ಳಲು, ಪ್ರತಿಯೊಂದು ಸನ್ನಿವೇಶದಲ್ಲೂ ಬಲವಾಗಿರಲು ನನಗೆ ಕಲಿಸಿದೆ. ಪ್ರೇಕ್ಷಕರು ನೀಡಿದ ಪ್ರೀತಿ ಮತ್ತು ಬೆಂಬಲವೇ ನನ್ನ ನಿಜವಾದ ಶಕ್ತಿ. ನಾನು ಈ ಗೆಲುವನ್ನು ನನ್ನ ಕುಟುಂಬ ಮತ್ತು ನನ್ನಲ್ಲಿ ನಂಬಿಕೆ ಇಡುವ ಎಲ್ಲರಿಗೂ ಅರ್ಪಿಸುತ್ತೇನೆ’ ಎಂದರು.

ಇದನ್ನೂ ಓದಿ: ‘ನಷ್ಟ ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ

‘ಮನೆಯಲ್ಲಿ ಎಲ್ಲರೂ ನನ್ನೊಂದಿಗೆ ಮಾತನಾಡುತ್ತಿದ್ದರು. ನಾನು ಏನು ಕೆಲಸ ಮಾಡಿದ್ದೇನೆ. ನಾನು ಯಾರು ಎಂದು ಅನೇಕರು ಕೇಳುತ್ತಿದ್ದರು. ಆಗ ನನಗೆ ಕೆಟ್ಟ ಭಾವನೆ ಬಂತು. ಆದರೆ ನಾನು ಈ ಮನೆಯಿಂದ ಹೊರಬಂದಾಗ, ನನ್ನ ಹೆಸರು ಎಲ್ಲರ ಬಾಯಲ್ಲೂ ಇರುತ್ತದೆ ಎಂದು ನಾನು ನಿರ್ಧರಿಸಿದ್ದೆ. ಬಿಗ್ ಬಾಸ್ ಮರಾಠಿ ನನ್ನ ಹೆಸರನ್ನು ದೊಡ್ಡದಾಗಿಸಿದೆ. ನಾನು ತನ್ವಿ ಕೋಲ್ಟೆಯಾಗಿ ಬಂದಿದ್ದೇನೆ ಮತ್ತು ಈಗ ತನ್ವಿ ಕೋಲ್ಟೆ ಒಂದು ಬ್ರಾಂಡ್ ಆಗಿದೆ’ ಎಂದು ಹೆಮ್ಮೆ ಹೊರಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯುವತಿ 20ನೇ ಮಹಡಿಯಿಂದ ಹಾರಬೇಕೆನ್ನುವಷ್ಟರಲ್ಲಿ ಬಂದು ಪ್ರಾಣ ಉಳಿಸಿದ ಆಪದ್ಬಾಂಧವ – Kannada News | Edge Rescue: Man Pulls Woman Back from 20th Floor Ledge in Seoul

ಸಿಯೋಲ್, ಏಪ್ರಿಲ್ 20: ಇಪ್ಪತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವತಿಯನ್ನು ರಕ್ಷಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ದಕ್ಷಿಣ ಕೊರಿಯಾದ ಸಿಯೋಲ್​ನಲ್ಲಿ ನಡೆದಿದೆ. ಯುವತಿಯೊಬ್ಬಳು ಕಟ್ಟಡದ 20ನೇ ಮಹಡಿಯ ಅತ್ಯಂತ ಕಿರಿದಾದ ಅಂಚಿನಲ್ಲಿ ನೇತಾಡುತ್ತಿದ್ದಳು. ಆಕೆ ಜಿಗಿಯಲು ಸಿದ್ಧವಾದ ಕ್ಷಣದಲ್ಲೇ, ಪಕ್ಕದಲ್ಲಿದ್ದ ವ್ಯಕ್ತಿಯೊಬ್ಬರು ಮಿಂಚಿನ ವೇಗದಲ್ಲಿ ಆಕೆಯ ಕೂದಲು ಹಿಡಿದಿದ್ದಾರೆ. ಆಕೆ ಜಾರಿ ಕೆಳಕ್ಕೆ ಬೀಳುತ್ತಿದ್ದಂತೆ ಆ ವ್ಯಕ್ತಿ ಆಕೆಯ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡರು. ಬಳಿಕ ಮತ್ತೋರ್ವ ವ್ಯಕ್ತಿ ಬಂದು ಆಕೆಯನ್ನು ಮೇಲಕ್ಕೆ ಎಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಥಳಕ್ಕೆ ಬರೋಬ್ಬರಿ 71 ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು 19 ತುರ್ತು ವಾಹನಗಳು ಧಾವಿಸಿದವು. ಅಕಸ್ಮಾತ್ ಆಕೆ ಮೇಲಿಂದ ಬಿದ್ದರೆ ಪ್ರಾಣ ಉಳಿಸಲು ಕಟ್ಟಡದ ಕೆಳಗೆ ಬೃಹತ್ ‘ಗಾಳಿ ಹಾಸಿಗೆ’ಯನ್ನು (Air Mattress) ಅಳವಡಿಸಲಾಗಿತ್ತು. ಇಡೀ ಪ್ರದೇಶವು ಒಂದು ರೀತಿಯ ಯುದ್ಧಭೂಮಿಯಂತೆ ಮಾರ್ಪಟ್ಟಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

‘ಅದು ಕೊನೆಯ ಸಂದೇಶ’: ವಿಮಾನದೊಳಗೆ ನಡೆದಿದ್ದೇನು? ಸ್ಫೋಟಕ ಹೇಳಿಕೆ ನೀಡಿದ ಪ್ರಯಾಣಿಕ – Kannada News | FLY91 Flight Chaos: Passenger Recounts Hubli Landing Abort, Diversion to Bengaluru and Shocking Staff Behaviour

ಬೆಂಗಳೂರು, ಏ.20: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ FLY91 ವಿಮಾನದಲ್ಲಿ ಪ್ರಯಾಣಿಕರು ಕಂಡ ಆತಂಕದ ಕ್ಷಣಗಳು ಮತ್ತು ನಂತರದ ಕಹಿ ಅನುಭವವು ಇದೀಗ ಚರ್ಚೆಯ ವಿಷಯವಾಗಿದೆ. ನಿನ್ನೆ ಮಧ್ಯಾಹ್ನ ಸುಮಾರು 3 ಗಂಟೆಗೆ ಹೈದರಾಬಾದ್‌ನಿಂದ ಹೊರಟ FLY91 ವಿಮಾನದಲ್ಲಿ ಸುಮಾರು 15ರಿಂದ 20 ಪ್ರಯಾಣಿಕರಿದ್ದರು. ಹುಬ್ಬಳ್ಳಿಗೆ ಸಮೀಪಿಸುತ್ತಿದ್ದಂತೆ ವಿಮಾನವು ತೀವ್ರ ಟರ್ಬುಲೆನ್ಸ್‌ಗೆ ಒಳಗಾಯಿತು. ಈ ಘಟನೆ ಸುಮಾರು 15 ನಿಮಿಷಗಳ ಕಾಲ ನಡೆದಿತ್ತು ಎಂದು ಪ್ರಯಾಣಿಕರೊಬ್ಬರು ವಿವರಿಸಿದ್ದಾರೆ. ಟರ್ಬುಲೆನ್ಸ್‌ನ ತೀವ್ರತೆ ಎಷ್ಟಿತ್ತೆಂದರೆ, ಪ್ರಯಾಣಿಕರು ತಾವು ಬದುಕುಳಿಯುತ್ತೇವೋ ಇಲ್ಲವೋ ಎಂಬ ಭಯಕ್ಕೆ ಒಳಗಾಗಿದ್ದರು. ಕೆಲವು ಪ್ರಯಾಣಿಕರು ತಮ್ಮ ಕುಟುಂಬಸ್ಥರಿಗೆ ‘ಕೊನೆಯ ಸಂದೇಶ’ ಕಳುಹಿಸಲು ವಿಡಿಯೊಗಳನ್ನು ಮಾಡಲು ಪ್ರಾರಂಭಿಸಿದರು. ಒಂದು ಕುಟುಂಬದ ಮಗುವೊಂದು ತೀವ್ರ ಅಲುಗಾಟದಿಂದಾಗಿ ಕೈಯಿಂದ ಕೆಳಗೆ ಬಿದ್ದ ಘಟನೆಯೂ ನಡೆದಿದೆ. ಈ ಸಂದರ್ಭದಲ್ಲಿ ಪೈಲಟ್ ಬಹಳ ಸಂಯಮದಿಂದ ವಿಮಾನವನ್ನು ನಿರ್ವಹಿಸಿ, ಹುಬ್ಬಳ್ಳಿಯಲ್ಲಿ ಲ್ಯಾಂಡ್ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ನಂತರ ವಿಮಾನವನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ವಿಮಾನವು ಸುಮಾರು ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿ, ರಾತ್ರಿ 7 ಗಂಟೆಯ ಸುಮಾರಿಗೆ ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಯಿತು.

ವಿಮಾನ ಸುರಕ್ಷಿತವಾಗಿ ಇಳಿದ ಕೂಡಲೇ ಪ್ರಯಾಣಿಕರು ಭಯದಿಂದ ನಿಟ್ಟುಸಿರು ಬಿಟ್ಟು ಚಪ್ಪಾಳೆ ತಟ್ಟಿದರು. ವಿಮಾನದಲ್ಲಿದ್ದ ಇಬ್ಬರು ಮಹಿಳಾ ಕ್ಯಾಬಿನ್ ಸಿಬ್ಬಂದಿ ಸಹ ಅಕ್ಷರಶಃ ಅಳುತ್ತಿದ್ದರು ಎಂದು ಪ್ರಯಾಣಿಕರು ಹೇಳಿದ್ದಾರೆ. ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ ಪೈಲಟ್‌ಗೆ ಪ್ರಯಾಣಿಕರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಪೈಲಟ್ ಯಾವುದೇ ತಾಂತ್ರಿಕ ದೋಷವಿಲ್ಲ, ಕೇವಲ ಟರ್ಬುಲೆನ್ಸ್‌ನಿಂದ ಹೀಗಾಯಿತು ಎಂದು ಸ್ಪಷ್ಟಪಡಿಸಿದರು. ಆದರೆ, ವಿಮಾನ ಇಳಿದ ನಂತರ FLY91 ಏರ್‌ಲೈನ್ಸ್‌ನ ನಿಲ್ದಾಣದ ಸಿಬ್ಬಂದಿಯ ವರ್ತನೆ ಪ್ರಯಾಣಿಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಇಳಿಯುತ್ತಿದ್ದಂತೆ, ಇಬ್ಬರಿಂದ ಮೂವರು FLY91 ಸಿಬ್ಬಂದಿ (ಇಂಡಿಗೋ ಅಲ್ಲ, FLY91 ಸಿಬ್ಬಂದಿ ಎಂದು ಪ್ರಯಾಣಿಕರು ಸ್ಪಷ್ಟಪಡಿಸಿದ್ದಾರೆ) ವಾಕಿಟಾಕಿ ಹಿಡಿದುಕೊಂಡು, “ನೀವು ಇಲ್ಲೇ ಕುಳಿತಿರಿ, ಈ ವಿಮಾನ ಮುಂದಿನ ಹುಬ್ಬಳ್ಳಿಗೆ ಹೋಗುತ್ತದೆ, ಹತ್ತಬೇಕಿದ್ದರೆ ಹತ್ತಿ ಇಲ್ಲದಿದ್ದರೆ ಇಳಿದು ಹೋಗಿ” ಎಂಬ ಅಸಭ್ಯ ಧಾಟಿಯಲ್ಲಿ ಮಾತನಾಡಿದರು. ಜೀವ ಉಳಿಸಿಕೊಂಡು ಬಂದ ಪ್ರಯಾಣಿಕರಿಗೆ ಯಾವುದೇ ಸೌಜನ್ಯ ಅಥವಾ ಮಾನವೀಯತೆ ಇಲ್ಲದೆ ಸಿಬ್ಬಂದಿ ವರ್ತಿಸಿದರು ಎಂದು ಪ್ರಯಾಣಿಕರೊಬ್ಬರು ದೂರಿದ್ದಾರೆ.

“ನಾನು ಮತ್ತೆ ಯಾವ ಧೈರ್ಯದ ಮೇಲೆ ಈ ವಿಮಾನವನ್ನು ಹತ್ತಲಿ?” ಎಂದು ಪ್ರಶ್ನಿಸಿದ ಪ್ರಯಾಣಿಕರು, ಇತರ ಏರ್‌ಲೈನ್ಸ್‌ಗಳಿಗಿಂತ FLY91 ಸಿಬ್ಬಂದಿಯ ವರ್ತನೆ ಕೀಳುಮಟ್ಟದ್ದಾಗಿತ್ತು ಎಂದು ಆಪಾದಿಸಿದ್ದಾರೆ. ಇಂತಹ ಘಟನೆಗಳ ನಂತರ ಪ್ರಯಾಣಿಕರಿಗೆ ಸಮಾಧಾನ ಹೇಳಿ, ಅವರಿಗೆ ಧೈರ್ಯ ತುಂಬಬೇಕಾದ ಸಿಬ್ಬಂದಿ ಅಹಂಕಾರದಿಂದ ವರ್ತಿಸಿದ್ದು, ದೇಶದಲ್ಲಿ ಇಷ್ಟೆಲ್ಲ ದೊಡ್ಡ ದುರಂತಗಳು ನಡೆಯುತ್ತಿದ್ದರೂ ಒಂದು ಮಾನವೀಯತೆ ಇಲ್ಲ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಸವಣ್ಣನವರೇ ಮಹಿಳಾ ಮೀಸಲಾತಿಯ ಆದ್ಯ ಪ್ರವರ್ತಕ, ಮಹಿಳಾ ಮೀಸಲಾತಿಗೆ ಎಲ್ಲಾ ಪಕ್ಷಗಳು ಕೈಜೋಡಿಸಬೇಕು: ಜಯಮೃತ್ಯುಂಜಯ ಶ್ರೀ – Kannada News | Jayamrutyunjaya Swamiji Backs Women’s Reservation Bill; Claims Harassment Charges are a Conspiracy gainst him

ನವದೆಹಲಿ, ಏಪ್ರಿಲ್ 20: 12ನೇ ಶತಮಾನದಲ್ಲೇ ಬಸವಣ್ಣನವರು ಅನುಭವ ಮಂಟಪದ ಮೂಲಕ ಮಹಿಳೆಯರಿಗೆ ಮೀಸಲಾತಿ ಮತ್ತು ಸಮಾನ ಅವಕಾಶ ನೀಡಿದ ಮೊದಲಿಗರು. ಅವರ ಆಶಯದಂತೆ ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ಮಸೂದೆಗೆ ಎಲ್ಲಾ ರಾಜಕೀಯ ಪಕ್ಷಗಳು ಒಮ್ಮತದ ಬೆಂಬಲ ನೀಡಬೇಕು ಎಂದು ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಬಸವ ಜಯಂತಿಯ ಸಂದರ್ಭದಲ್ಲಿ ದೆಹಲಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ರಾಜಕೀಯ ಮತ್ತು ಸಾಮಾಜಿಕ ಮೀಸಲಾತಿ ಕಲ್ಪಿಸುವ ಭಾರತ ಸರ್ಕಾರದ ಪ್ರಯತ್ನಕ್ಕೆ ಕನ್ನಡಿಗರ ಸಂಪೂರ್ಣ ಬೆಂಬಲವಿದೆ. ಬಸವಣ್ಣನವರ ಹೋರಾಟಕ್ಕೆ ಗೌರವ ಸಲ್ಲಿಸಲು ಇದು ಸೂಕ್ತ ಸಮಯ ಎಂದು ತಿಳಿಸಿದರು.

ಇದೇ ವೇಳೆ, ತಮ್ಮ ಮೇಲೆ ಕೇಳಿಬಂದಿರುವ ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, ಪ್ರಕರಣ ಈಗ ತನಿಖೆಯ ಹಂತದಲ್ಲಿದೆ, ಹಾಗಾಗಿ ಆ ಬಗ್ಗೆ ಹೆಚ್ಚು ಮಾತನಾಡಲ್ಲ. ಈಗಾಗಲೇ ಪೊಲೀಸರಿಗೆ ಈ ಬಗ್ಗೆ ದೂರು ನೀಡಲಾಗಿದೆ. ಪಂಚಮಸಾಲಿ ಮೀಸಲಾತಿ ಹೋರಾಟ ಆರಂಭಿಸಿದ ನಂತರ ನನ್ನನ್ನು ಹತ್ತಿಕ್ಕಲು ಇಂತಹ ಪಿತೂರಿಗಳು ಮತ್ತು ಬೆದರಿಕೆಗಳು ನಿರಂತರವಾಗಿ ಬರುತ್ತಿವೆ ಎಂದು ಆರೋಪಿಸಿದರು.

ಸತ್ಯದ ಹಾದಿಯಲ್ಲಿ ನಡೆಯುವಾಗ ಇಂತಹ ಅಡೆತಡೆಗಳು ಸಹಜ. 12ನೇ ಶತಮಾನದಿಂದಲೂ ಸಮಾಜ ಸುಧಾರಕರ ವಿರುದ್ಧ ಇಂತಹ ಪಿತೂರಿಗಳು ನಡೆಯುತ್ತಲೇ ಬಂದಿವೆ. ಸದ್ಯ ಉತ್ತರ ಭಾರತದ ಧಾರ್ಮಿಕ ಪ್ರವಾಸದಲ್ಲಿರುವ ನಾನು, ಇಂತಹ ಬೆದರಿಕೆಗಳಿಗೆ ಮಣಿಯುವುದಿಲ್ಲ. ಪ್ರಕರಣದ ತನಿಖೆ ನಡೆಯಲಿ, ಸತ್ಯ ಹೊರಬರಲಿದೆ. ನನ್ನ ಮೀಸಲಾತಿ ಹೋರಾಟ ಮಾತ್ರ ಎಂದಿನಂತೆ ಮುಂದುವರಿಯಲಿದೆ ಎಂದು ಸ್ವಾಮೀಜಿ ದೆಹಲಿಯಲ್ಲಿ ದೃಢವಾಗಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rates: ಚಿನ್ನದ ಬೆಲೆ ಗ್ರಾಮ್​ಗೆ 45 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 20th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 20: ಚಿನ್ನದ ಬೆಲೆ ಈ ವಾರವನ್ನು ಇಳಿಕೆಯೊಂದಿಗೆ ಆರಂಭಿಸಿದೆ. ಇಂದು ಸೋಮವಾರ ಬಂಗಾರದ ಬೆಲೆ (Gold Rates) ಗ್ರಾಮ್​ಗೆ 45 ರೂನಷ್ಟು ಅಲ್ಪ ಕುಸಿತ ಕಂಡಿದೆ. ಉಳಿದಂತೆ ಅಂತಾರಾಷ್ಟ್ರೀಯವಾಗಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಬೆಳ್ಳಿ ಬೆಲೆಯ ಯಥಾಸ್ಥಿತಿಯೂ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 20ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,529 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,235 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,647 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,529 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,235 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,235 ರೂ
  • ಚೆನ್ನೈ: 14,300 ರೂ
  • ಮುಂಬೈ: 14,235 ರೂ
  • ದೆಹಲಿ: 14,250 ರೂ
  • ಕೋಲ್ಕತಾ: 14,235 ರೂ
  • ಕೇರಳ: 14,235 ರೂ
  • ಅಹ್ಮದಾಬಾದ್: 14,240 ರೂ
  • ಜೈಪುರ್: 14,250 ರೂ
  • ಲಕ್ನೋ: 14,250 ರೂ
  • ಭುವನೇಶ್ವರ್: 14,235 ರೂ

ಇದನ್ನೂ ಓದಿ: ಮೆಷಿನ್​ಗಳು ಮನುಷ್ಯನ ಮಟ್ಟದ ಬುದ್ಧಿವಂತಿಕೆ ಹೊಂದಲು ಇನ್ನೆಷ್ಟು ವರ್ಷ ಬೇಕು? ಎಜಿಐ ಪಿತಾಮಹ ಬೆನ್ ಗರ್ಟ್ಜೆಲ್ ಹೇಳೋದಿದು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 588 ರಿಂಗಿಟ್ (13,790 ರುಪಾಯಿ)
  • ದುಬೈ: 539 ಡಿರಾಮ್ (13,613 ರುಪಾಯಿ)
  • ಅಮೆರಿಕ: 150.50 ಡಾಲರ್ (13,963 ರುಪಾಯಿ)
  • ಸಿಂಗಾಪುರ: 190.70 ಸಿಂಗಾಪುರ್ ಡಾಲರ್ (13,848 ರುಪಾಯಿ)
  • ಕತಾರ್: 535.50 ಕತಾರಿ ರಿಯಾಲ್ (13,625 ರೂ)
  • ಸೌದಿ ಅರೇಬಿಯಾ: 548 ಸೌದಿ ರಿಯಾಲ್ (13,552 ರುಪಾಯಿ)
  • ಓಮನ್: 57.15 ಒಮಾನಿ ರಿಯಾಲ್ (13,771 ರುಪಾಯಿ)
  • ಕುವೇತ್: 44.65 ಕುವೇತಿ ದಿನಾರ್ (13,520 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 280 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 280 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವರದಕ್ಷಿಣೆ ಕಿರುಕುಳಕ್ಕೆ ಎರಡು ಮಕ್ಕಳ ತಾಯಿ ಬಲಿ: ಕಿಟಕಿಯ ಗ್ರಿಲ್​​ಗೆ ವೇಲ್​​ ಬಿಗಿದುಕೊಂಡು ಆತ್ಮಹತ್ಯೆ – Kannada News | Belagavi Dowry Harassment: Mother of Two Dies Amid Domestic Abuse

ಬೆಳಗಾವಿ, ಏಪ್ರಿಲ್​​ 20: ಕೌಟುಂಬಿಕ ಕಲಹ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ನಾವಿ (28) ಮೃತ ಗೃಹಿಣಿಯಾಗಿದ್ದು, ಮನೆಯ ಕಿಟಕಿಯ ಗ್ರಿಲ್​​ಗೆ ವೇಲ್​​ ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿದ್ದು, ಪ್ರಕರಣ ಸಂಬಂಧ ಮಹಿಳೆಯ ಪತಿ ಸಂತೋಷ್​​ನನ್ನು ಪೊಲೀಸರು ಬಂಧಿಸಿದ್ದಾರೆ.

2021ರಲ್ಲಿ ಶ್ರೀನಿಧಿ ಮತ್ತು ಸಂತೋಷ್​​ ವಿವಾಹ ನಡೆದಿತ್ತು. ‌ಆರಂಭದಲ್ಲಿ ಸಂಸಾರ ಚೆನ್ನಾಗಿಯೇ ಇದ್ದು, ಇದಕ್ಕೆ ಸಾಕ್ಷಿ ಎಂಬಂತೆ ದಂಪತಿಗೆ ಇಬ್ಬರು ಮಕ್ಕಳೂ ಇದ್ದಾರೆ. ಆದರೆ ಇತ್ತೀಚೆಗೆ ಕೌಟುಂಬಿಕ ಕಲಹ ಆರಂಭವಾಗಿದ್ದು, ತವರು ಮನೆಯವರೊಂದಿಗೆ ಮಾತಾಡದಂತೆ ಪತಿ ಸಂತೋಷ ಶ್ರೀನಿಧಿ ಬಳಿಯಿದ್ದ ಮೊಬೈಲ್ ಪೋನ್ ಕಿತ್ತುಕೊಂಡಿದ್ದ ಎನ್ನಲಾಗಿದೆ. ಶ್ರೀನಿಧಿ ಆತ್ಮಹತ್ಯೆ ಸಂಬಂಧ ಆಕೆಯ ಗಂಡ, ಅತ್ತೆ, ಮತ್ತು ಇನ್ನಿಬ್ಬರು ಸಂಬಂಧಿಕರ ವಿರುದ್ಧ ಕುಟುಂಬಸ್ಥರು ದೂರು ನೀಡಿದ್ದು, ಆಕೆಯದ್ದು ಆತ್ಮಹತ್ಯೆ ಅಲ್ಲ. ಬದಲಾಗಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಮರ್ಯಾದಾ ಹತ್ಯೆ; ಪ್ರೀತಿಸಿದವನ ಜೊತೆ ಹೋಗಿದ್ದಕ್ಕೆ ವಿಷ ಹಾಕಿದ ಅಣ್ಣ!

ಯುವಕ‌ ಆತ್ಮಹತ್ಯೆ

ಊರಿಗೆ ಹೋಗಲು ಬಿಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಬಿಹಾರ ಮೂಲದಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ‌ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಗೋವಿಂದ ಯಾದವ್ ಮೃತಪಟ್ಟಿದ್ದು, ಕಳೆದ ಆರು‌ ತಿಂಗಳ ಹಿಂದೆ ಸಹೋದರನ ಜೊತೆ‌ ಸೆಂಟ್ರಿಂಗ್ ಕೆಲಸಕ್ಕೆಂದು ಈತ ಬಂದಿದ್ದ. ಆದ್ರೆ ಕಳೆದ‌‌‌‌ ಕೆಲ ತಿಂಗಳುಗಳಿಂದ ಕೆಲಸ‌ ಬೇಡ ಊರಿಗೆ ಹೋಗಬೇಕು ಎಂದು ಗೋವಿಂದ ಹೇಳುತ್ತಿದ್ದರೂ, ಇನ್ನು ಎರಡು ತಿಂಗಳು‌ ಬೇಡ ಎಂದು ಆತನನ್ನು ಊರಿಗೆ ಹೋಗದಂತೆ ಸಹೋದರ ತಡೆದಿದ್ದ. ಇದೇ ವಿಚಾರಕ್ಕೆ ಆತ ತೀವ್ರ ನೊಂದಿದ್ದ ಎನ್ನಲಾಗಿದ್ದು, ಪ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಒಳಚರಂಡಿ ತ್ಯಾಜ್ಯದಿಂದ ಕೋಟಿ ಕೋಟಿ ಆದಾಯ! ಬೆಂಗಳೂರಿನಲ್ಲಿ ದೇಶದಲ್ಲೇ ಅತಿ ದೊಡ್ಡ ವೇಸ್ಟ್ ಟು ವೆಲ್ತ್ ಯೋಜನೆಗೆ ಜಲಮಂಡಳಿ ಸಿದ್ಧತೆ – Kannada News | BWSSB to Generate Rs 120 Crore from Sewage Biogas; Bengaluru Hotels Adopt Waste to Gas Model to Tackle LPG Scarcity

ಬೆಂಗಳೂರು, ಏಪ್ರಿಲ್ 20: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ತ್ಯಾಜ್ಯ ನೀರು ಇನ್ನು ಮುಂದೆ ಕೇವಲ ಕೊಳಚೆಯಾಗಿ ಉಳಿಯುವುದಿಲ್ಲ, ಬದಲಿಗೆ ಜಲಮಂಡಳಿಯ ಪಾಲಿಗೆ ಆದಾಯದ ಮೂಲವಾಗಲಿದೆ. ಬೆಂಗಳೂರು ಜಲಮಂಡಳಿಯು (BWSSB) ತನ್ನ ಐದು ಬೃಹತ್ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಿಂದ (STP) ಹೊರಬರುವ ಜೈವಿಕ ಅನಿಲವನ್ನು (Biogas) ಕಂಪ್ರೆಸ್ಡ್ ಬಯೋಗ್ಯಾಸ್ (CBG) ಆಗಿ ಪರಿವರ್ತಿಸಿ ಮಾರಾಟ ಮಾಡಲು ಮುಂದಾಗಿದೆ. ಈ ಮೂಲಕ ಮುಂದಿನ 20 ವರ್ಷಗಳಲ್ಲಿ ಬರೋಬ್ಬರಿ 120 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಗಳಿಸುವ ಗುರಿ ಹೊಂದಿದೆ.

ದೇಶದಲ್ಲೇ ಅತಿ ದೊಡ್ಡ ಯೋಜನೆ

ಈ ಮಹತ್ವಾಕಾಂಕ್ಷೆಯ ಯೋಜನೆಗೆ ರಾಜ್ಯ ಸಚಿವ ಸಂಪುಟ ಈಗಾಗಲೇ ಅನುಮೋದನೆ ನೀಡಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (PPP) ಮಾದರಿಯಲ್ಲಿ ಈ ಯೋಜನೆ ಜಾರಿಯಾಗಲಿದ್ದು, ಖಾಸಗಿ ಸಂಸ್ಥೆಯು 85 ಕೋಟಿ ರೂ. ವೆಚ್ಚ ಮಾಡಲಿದೆ. ಸೂರತ್‌ನಂತಹ ನಗರಗಳಲ್ಲಿ ಇಂತಹ ಪ್ರಯತ್ನಗಳು ನಡೆದಿದ್ದರೂ, ಬೆಂಗಳೂರಿನ ಯೋಜನೆ ಅತ್ಯಂತ ದೊಡ್ಡದಾಗಿದೆ. ಇಲ್ಲಿ ಭವಿಷ್ಯದಲ್ಲಿ ಪ್ರತಿದಿನ 550 ಎಂಎಲ್‌ಡಿ (MLD) ತ್ಯಾಜ್ಯ ನೀರನ್ನು ಬಳಸಿಕೊಂಡು ಇಂಧನ ತಯಾರಿಸಲಾಗುತ್ತದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ‘ತ್ಯಾಜ್ಯದಿಂದ ಸಂಪತ್ತು’ ಎಂಬ ಆಶಯದಡಿ ಈ ಯೋಜನೆ ರೂಪಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಇಲ್ಲಿ ತಯಾರಾಗುವ ಗ್ಯಾಸ್ ಅನ್ನು ಸಾರಿಗೆ ಇಂಧನವಾಗಿ ಅಥವಾ ಗ್ಯಾಸ್ ವಿತರಣಾ ಜಾಲಕ್ಕೆ ನೀಡಲಾಗುವುದು ಎಂದು ಅವರು ಹೇಳೀದ್ದಾರೆ.

ಎಲ್‌ಪಿಜಿ ಕೊರತೆ ಮತ್ತು ಹೋಟೆಲ್ ಉದ್ಯಮದ ಹೊಸ ಹಾದಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಮತ್ತು ಬೆಲೆ ಏರಿಕೆ ಹೋಟೆಲ್ ಉದ್ಯಮಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಗ್ಯಾಸ್ ದರ ಏರಿಕೆಯಿಂದಾಗಿ ಹೋಟೆಲ್ ಮಾಲೀಕರು ಗ್ರಾಹಕರ ಮೇಲೆ ಆರ್ಥಿಕ ಹೊರೆ ಹೇರಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಸಮಸ್ಯೆಗೆ ಸೆಡ್ಡು ಹೊಡೆಯಲು ಬೆಂಗಳೂರಿನ ಹೋಟೆಲ್ ಮಾಲೀಕರು ವಿಭಿನ್ನ ಹಾದಿ ಹಿಡಿದಿರುವ ಬಗ್ಗೆ ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಹೋಟೆಲ್‌ಗಳಲ್ಲಿ ಉತ್ಪತ್ತಿಯಾಗುವ ಆಹಾರದ ತ್ಯಾಜ್ಯ ಮತ್ತು ಕಸವನ್ನು ನೀಡಿ, ಬದಲಿಗೆ ಅಡುಗೆಗೆ ಬಳಸಬಹುದಾದ ಬಯೋಗ್ಯಾಸ್ ಪಡೆಯುವ ನವೀನ ಮಾದರಿಯನ್ನು ಹೋಟೆಲ್‌ಗಳು ಅಳವಡಿಸಿಕೊಳ್ಳುತ್ತಿ ಎಂದು ಮೂಲಗಳು ತಿಳಿಸಿದ್ದವು.

ಇದನ್ನೂ ಓದಿ: ಎಲ್‌ಪಿಜಿ ಕೊರತೆ, ದರ ಏರಿಕೆಗೆ ಸೆಡ್ಡು: ಹೋಟೆಲ್ ಕಸ ನೀಡಿ ಬಯೋಗ್ಯಾಸ್ ಪಡೆಯಲು ಮುಂದಾದ ಬೆಂಗಳೂರಿನ ಹೋಟೆಲ್‌ಗಳು!

ಇದೀಗ ಜಲಮಂಡಳಿ ಕೂಡ ಒಳಚರಂಡಿ ತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದನೆಗೆ ಹೊರಟಿರುವುದು ಇಂಧನ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಬೆಂಗಳೂರಿಗೆ ಹಾಗೂ ರಾಜ್ಯಕ್ಕೆ ಮಹತ್ವದ ಕೊಡುಗೆ ನೀಡಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದಲ್ಲಿ ಹೀಟ್​ ಸ್ಟ್ರೋಕ್​ಗೆ ಮೊದಲ ಬಲಿ! ಬೀದರ್​ನಲ್ಲಿ ಬಿಸಿಲ ಝಳ ತಾಳಲಾರದೆ ಕುಸಿದು ಬಿದ್ದ ಯುವಕ ಸ್ಥಳದಲ್ಲೇ ಸಾವು – Kannada News | Bidar Heatstroke Death: Youth collapses Amidst Extreme Karnataka Heatwave

ಬೀದರ್​ನ ಕಡುಬಿಸಿಲಿಗೆ ಹದಿಹರೆಯದ ಯುವಕ ಬಲಿ!Image Credit source: google Gemini

ಬೀದರ್, ಏಪ್ರಿಲ್ 20: ಬೇಸಿಗೆ ಶುರುವಾದಾಗಲಿಂದಲೂ ರಾಜ್ಯದ ಹಲವೆಡೆ ವಿಪರೀತ ಬಿಸಿಲು (Heat wave) ಕಂಡು ಬಂದಿದೆ. ಕರಾವಳಿ, ಉತ್ತರ ಕರ್ನಾಟಕದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ವರೆಗೂ ಹೋಗುವ ಹಂತಕ್ಕೆ ತಪುಪಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಈ ನಡುವೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶ ಮೂಲದ ಯುವಕ

ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಲಯಿಕ್ ಅಹ್ಮದ್ (20) ಎಂದು ಗುರುತಿಸಲಾಗಿದೆ. ಆತ ಕಮಲನಗರದಲ್ಲಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಹೊರಗಡೆ ಸಂಚರಿಸುವುದು ಕಷ್ಟವಾಗುವಷ್ಟು ಬಿಸಿಲಿನ ತೀವ್ರತೆ ಹೆಚ್ಚಾಗಿತ್ತು. ಘಟನೆಯ ದಿನ ಸಮೀರ್ ತಾಪಮಾನ ಹೆಚ್ಚಿದ ಪರಿಣಾಮ ತಲೆ ಸುತ್ತು ಕಾಣಿಸಿಕೊಂಡಿದೆ ಎಂದು ಹೇಳಿಕೊಂಡಿದ್ದ. ಸ್ಥಳೀಯ ಮೆಕ್ಯಾನಿಕ್ ಅಂಗಡಿ ಬಳಿ ನೀರು ಕುಡಿದು ಸ್ವಲ್ಪ ಸಮಯ ವಿಶ್ರಾಂತಿಯನ್ನೂ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ ಕರ್ನಾಟಕ ಹವಾಮಾನ ವರದಿ: ಇಂದು ಹೀಟ್ ವೇವ್ ಜೊತೆಗೆ ಕರಾವಳಿಯಲ್ಲಿ ವರುಣಾರ್ಭಟ!

ಬಿಸಿಲಿನಲ್ಲಿ ಹೊರಗೆ ಹೋಗದಂತೆ ಅಧಿಕಾರಿಗಳಿಂದ ಎಚ್ಚರಿಕೆ

ಬಳಿಕ ಡಿಗ್ಗಿ ಗ್ರಾಮದ ಕಡೆಗೆ ರಾಷ್ಟ್ರೀಯ ಹೆದ್ದಾರಿ-50 ಮಾರ್ಗವಾಗಿ ತೆರಳುತ್ತಿದ್ದಾಗ ಯುವಕ ಏಕಾಏಕಿ ಕುಸಿದು ಬಿದ್ದಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದರೂ, ಹೀಟ್ ಸ್ಟ್ರೋಕ್​ನಿಂದಾಗಿ ಸ್ಥಳದಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಆದರೆ ಮರಣೋತ್ತರ ಪರೀಕ್ಷೆಯ ವರದಿ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಕಮಲನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ. ಜನರು ಅಗತ್ಯವಿಲ್ಲದೆ ಬಿಸಿಲಿನಲ್ಲಿ ಹೊರಗೆ ತೆರಳದಂತೆ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:15 am, Mon, 20 April 26

Source link

Exit mobile version