‘ನೀವು ಯಾರಿಗೆ ಹೇಳ್ತೀರೋ ಅವರಿಗೇ ವೋಟ್ ಹಾಕ್ತೀನಿ’: ಆರ್. ಅಶೋಕ್ಗೆ ಶಾಸಕ ಯತ್ನಾಳ್ ಭರವಸೆ
ವಿಧಾನ ಪರಿಷತ್ ಚುನಾವಣೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಬಿಜೆಪಿಯ ಮತದಾನದ ಕಾರ್ಯತಂತ್ರದ ಬಗ್ಗೆ ವಿವರ ನೀಡಿದರು. ಬಿಜೆಪಿಯ ಅಭ್ಯರ್ಥಿ ಗೆಲ್ಲಲು ಅಗತ್ಯವಿರುವಷ್ಟು ಮತಗಳನ್ನು ಪಕ್ಷ ಪಡೆದುಕೊಂಡಿದ್ದು, ಹೆಚ್ಚುವರಿ ಮತಗಳನ್ನು ಜೆಡಿಎಸ್ಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದರು. ಜೆಡಿಎಸ್ ಗೆಲ್ಲಬೇಕು ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಶೋಕ್ ಸ್ಪಷ್ಟಪಡಿಸಿದರು. ಜೆಡಿಎಸ್ಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಲಾಗಿದೆ ಎಂದು ಅಶೋಕ್ ಖಚಿತಪಡಿಸಿದರು. ಬಿಜೆಪಿ ಅಭ್ಯರ್ಥಿಯ ಎರಡನೇ ಪ್ರಾಶಸ್ತ್ಯದ…